Ballari News: ಬಳ್ಳಾರಿಯಲ್ಲಿ ಉಚಿತ ಮೊಣಕಾಲಿನ ಕೀಲು ನೋವು ಚಿಕಿತ್ಸಾ ಶಿಬಿರ - Vistara News

ಬಳ್ಳಾರಿ

Ballari News: ಬಳ್ಳಾರಿಯಲ್ಲಿ ಉಚಿತ ಮೊಣಕಾಲಿನ ಕೀಲು ನೋವು ಚಿಕಿತ್ಸಾ ಶಿಬಿರ

Ballari News: ಬಳ್ಳಾರಿಯ ಶ್ರೀ ಗುರು ಪುಷ್ಕರ ಸೇವಾ ಸಮಿತಿಯ ವತಿಯಿಂದ ಬಳ್ಳಾರಿ ನಗರದಲ್ಲಿ ಉಚಿತ ಮೊಣಕಾಲಿನ ಕೀಲು ನೋವು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಈ ಶಿಬಿರದಲ್ಲಿ ಮೊಣಕಾಲು ಕೀಲು ಮತ್ತು ಇತರೆ ಕಾಯಿಲೆಗಳನ್ನು ಪರೀಕ್ಷಿಸಲಾಯಿತು.

VISTARANEWS.COM


on

Ballari News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಬಳ್ಳಾರಿಯ ಶ್ರೀ ಗುರು ಪುಷ್ಕರ ಸೇವಾ ಸಮಿತಿಯ ವತಿಯಿಂದ ಬಳ್ಳಾರಿ ನಗರದಲ್ಲಿ ಉಚಿತ ಮೊಣಕಾಲಿನ ಕೀಲು ನೋವು ಚಿಕಿತ್ಸಾ ಶಿಬಿರವನ್ನು (Ballari News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Golden Star Ganesh: ಗಣೇಶ್​​ಗೆ ಶುರುವಾಗಿದೆ ಗೋಲ್ಡನ್ ಟೈಮ್:  ಫ್ಯಾನ್ಸ್ ಶೋ ಹೌಸ್ ಫುಲ್!

ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಈ ಶಿಬಿರದಲ್ಲಿ ಮೊಣಕಾಲಿನ ಕೀಲು ನೋವು ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು.

ಶಿಬಿರದಲ್ಲಿ 350ಕ್ಕೂ ಹೆಚ್ಚು ರೋಗಿಗಳಿಗೆ ತಪಾಸಣೆ ನಡೆಸಲಾಯಿತು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

ಈ ಸಂದರ್ಭದಲ್ಲಿ ತಾರಾನಾಥ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ರಾಜಶೇಖರ ಗಿಣಗೇರ, ಡಾ.ಕೊಟ್ರೇಶ್‌, ಡಾ. ತಮೀಮ್, ಡಾ. ರಾಮಲಿಂಗ ಹೂಗಾರ, ಡಾ.ತಾಟ್ಲೆ, ಡಾ. ಲಲಿತಾ, ಡಾ. ಸುಷ್ಮಿತಾ ಹಾಗೂ ಎಸ್.ಎಸ್. ಕೇವಲ್ಚಂದ್‌ ವಿನಾಕಿಯಾ, ಶ್ರೀ ಗುರು ಪುಷ್ಕರ ಸೇವಾ ಸಮಿತಿಯ ಅಧ್ಯಕ್ಷ ಅಶೋಕ್‌ ಭಂಡಾರಿ, ದೀಪೇಶ್ ಪರಾಖ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯದ ಹಲವೆಡೆ ಅಬ್ಬರಿಸಲಿದೆ ಗುಡುಗು ಸಹಿತ ಮಳೆ

Rain News : ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಸುತ್ತಮುತ್ತಲೂ ಮಧ್ಯಮ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಾಧಾರಣದೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕೆಲವೊಮ್ಮೆ ಬಿಸಿಲ ಧಗೆಯು ಹೆಚ್ಚಿರಲಿದೆ.

ಇದನ್ನೂ ಓದಿ: Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

ಹುಡುಗಿಯರ ಮಾನ್ಸೂನ್‌ ಡ್ರೆಸ್‌ ಹೇಗಿರಬೇಕು? ಹೇಗಿರಬಾರದು?

ಮಾನ್ಸೂನ್‌ನಲ್ಲಿ ಹುಡುಗಿಯರು ಧರಿಸುವ (Monsoon Fashion do’s & don’ts) ಉಡುಪುಗಳು ನೋಡಲು ಆಕರ್ಷಕವಾಗಿದ್ದರಷ್ಟೇ ಸಾಲದು, ಧರಿಸಿದಾಗ ಕಂಫರ್ಟಬಲ್‌ ಆಗಿರಬೇಕು, ಎಲ್ಲದಕ್ಕಿಂತ ಹೆಚ್ಚಾಗಿ ಸೀಸನ್‌ಗೆ ತಕ್ಕಂತಿರಬೇಕು ಎನ್ನುತ್ತಾರೆ ಫ್ಯಾಷನಿಸ್ಟ್‌ಗಳು. ಸಮೀಕ್ಷೆಯೊಂದರ ಪ್ರಕಾರ, ಸಾಕಷ್ಟು ಹುಡುಗಿಯರು ಸ್ಟೈಲಿಶ್‌ ಆಗಿ ಕಾಣಿಸಲು ಮಾನ್ಸೂನ್‌ನಲ್ಲೂ ಸಮ್ಮರ್‌ ಫ್ಯಾಷನ್‌ವೇರ್‌ಗಳನ್ನು ಧರಿಸುತ್ತಾರಂತೆ. ಇನ್ನು, ಕೆಲವು ಯುವತಿಯರು ಮಾನ್ಸೂನ್‌ ಸೀಸನ್‌ನಲ್ಲಿ ಹೊದ್ದುಕೊಂಡಂತಿರುವ ಉಡುಪುಗಳನ್ನು ಧರಿಸುತ್ತಾರಂತೆ. ಆದರೆ, ಫ್ಯಾಷನಿಸ್ಟ್‌ಗಳ ಪ್ರಕಾರ, ಆಯಾ ವರ್ಗದ ಅನುಗುಣವಾಗಿ ಹುಡುಗಿಯರು ಧರಿಸುವ ಉಡುಪುಗಳು ಬದಲಾಗುತ್ತವಂತೆ. ಅದರಲ್ಲೂ, ಜೆನ್‌ ಜಿ ಹುಡುಗಿಯರು, ಯಾವುದೇ ಸೀಸನ್‌ ಟ್ರೆಂಡ್‌ ಫಾಲೋ ಮಾಡುವುದಿಲ್ಲ, ಬದಲಾಗಿ ತಮ್ಮದೇ ಆದ ಸ್ಟೈಲಿಶ್‌ ಮಾರ್ಗವನ್ನು ಹಿಡಿಯುತ್ತಾರಂತೆ. ಅಂದ ಹಾಗೆ, ಇದೆಲ್ಲಾ ಓಕೆ, ಹಾಗೆಂದು ಸೀಸನ್‌ಗೆ ವಿರುದ್ಧವಾಗಿ ಕಾಣಿಸುವುದು ದಿನಚರಿಯಾಗಬಾರದು! ಇದು ಆರೋಗ್ಯಕ್ಕೂ ಮಾರಕ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಹಾಗಾದಲ್ಲಿ, ಈ ಸೀಸನ್‌ನಲ್ಲಿ ಯಾವ ರೀತಿಯ ಡ್ರೆಸ್‌ಗಳು ಬೆಸ್ಟ್? ಯಾವುದು ನಾಟ್‌ ಓಕೆ ! ಎಂಬುದನ್ನು ಫ್ಯಾಷನಿಸ್ಟ್‌ಗಳು ಸಿಂಪಲ್ಲಾಗಿ ತಿಳಿಸಿದ್ದಾರೆ.

Monsoon Fashion

ಮಾನ್ಸೂನ್‌ ಡ್ರೆಸ್‌ಗಳು

ಮಳೆಗಾಲದಲ್ಲಿ ಟ್ರೆಂಡಿಯಾಗುವ ಜಾಕೆಟ್‌ ಡ್ರೆಸ್‌, ಕೋಟ್‌ ಡ್ರೆಸ್‌-ಫ್ರಾಕ್ಸ್, ಸ್ಕೆಟರ್‌ ಡ್ರೆಸ್, ಮಿಡಿ ಡ್ರೆಸ್‌, ಹೈ ವೇಸ್ಟ್ ಶಾಟ್ಸ್ ಆಯ್ಕೆ ಮಾಡಬಹುದು. ಇವು ಸ್ಟೈಲಿಶ್‌ ಆಗಿ ಕಾಣಿಸುವುದರ ಜೊತೆಗೆ ಟ್ರೆಂಡಿಯಾಗಿಯೂ ಬಿಂಬಿಸುತ್ತವೆ.

Monsoon Fashion

ಗಿಡ್ಡ ಪ್ಯಾಂಟ್‌ಗೆ ಓಕೆ ಹೇಳಿ

ಆಂಕೆಲ್‌ ಲೆಂಥ್‌, ಕ್ರಾಪ್ಡ್ ಪ್ಯಾಂಟ್‌, ಲೆಗ್ಗಿಂಗ್ಸ್, ಜೆಗ್ಗಿಂಗ್ಸ್, ಪುಶ್‌ ಬ್ಯಾಕ್‌ನಂತಹ ಪ್ಯಾಂಟ್‌ಗಳನ್ನು ಧರಿಸಬಹುದು. ಆದರೆ, ಯಾವುದೇ ಕಾರಣಕ್ಕೂ ಪಲ್ಹಾಜೋ, ಪ್ಯಾರಲಲ್‌, ಬೂಟ್‌ ಕಟ್‌, ಶರರಾ, ಘರಾರದಂತಹ ಅಗಲವಾದ ನೆಲಹಾಸುವಂತಹ ಪ್ಯಾಂಟ್‌ಗಳನ್ನು ಧರಿಸಬೇಡಿ.

Monsoon Fashion

ನೆಲ ಮುಟ್ಟುವ ಗೌನ್‌ಗಳನ್ನು ದೂರವಿಡಿ

ನಡೆಯುವಾಗ ನೆಲವನ್ನು ಮುಟ್ಟುವಂತಹ ಉದ್ದುದ್ದ ಮ್ಯಾಕ್ಸಿ, ಗೌನ್‌ಗಳಿಗೆ ಸದ್ಯಕ್ಕೆ ಬೈ ಹೇಳಿ. ಇವು ನೋಡಲು ಮಾತ್ರ ಆಕರ್ಷಕವಾಗಿ ಕಾಣಿಸುತ್ತವೆ. ಇವನ್ನು ನಿರ್ವಹಣೆ ಮಾಡುವುದು ಕಷ್ಟ.

Monsoon Fashion

ಭಾರವಿಲ್ಲದ ಲೈಟ್‌ವೈಟ್‌ ಉಡುಗೆ ಧರಿಸಿ

ಲೇಯರಿಂಗ್‌ ಹೆಸರಲ್ಲಿ ದಪ್ಪನೆಯ ಫ್ಯಾಬ್ರಿಕ್‌ನ ಉಡುಗೆಗಳು ಉಸಿರುಕಟ್ಟಿಸಬಹುದು. ಮಳೆಯಲ್ಲಿ ಒದ್ದೆಯಾದರಂತೂ ಕಿರಿಕಿರಿ ಎನಿಸಬಹುದು. ಇದನ್ನು ಅವಾಯ್ಡ್ ಮಾಡಲು, ಬೇಗನೇ ಒಣಗುವ ಲೈಟ್‌ವೈಟ್‌ ಡ್ರೆಸ್‌ಗಳಿಗೆ ಸೈ ಎನ್ನಿ.

ಹೆವಿ ಎಥ್ನಿಕ್‌ ಡಿಸೈನರ್‌ವೇರ್‌ ಅವಾಯ್ಡ್ ಮಾಡಿ

ಹೆವಿ ಎಥ್ನಿಕ್‌ವೇರ್‌ಗಳನ್ನು ಆವಾಯ್ಡ್ ಮಾಡಿ. ಎಥ್ನಿಕ್‌ವೇರ್‌ ಧರಿಸಲೇ ಬೇಕಿದ್ದಲ್ಲಿ ಆದಷ್ಟೂ ಆಂಕೆಲ್‌ ಲೆಂಥ್‌ ಡಿಸೈನರ್‌ವೇರ್ಸ್ ಸೆಲೆಕ್ಟ್ ಮಾಡಿ ಶಾರ್ಟ್ ಕುರ್ತಾ, ಆಂಕೆಲ್‌ ಲೆಂಥ್‌ ಚೂಡಿದಾರ್‌, ಸಲ್ವಾರ್‌ಗಳನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ ಮಳೆರಾಯ

Karnataka Weather Forecast : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ (Rain News) ರೈತರು ಕಂಗಲಾಗಿದ್ದಾರೆ. ಮಳೆಯ ಆರ್ಭಟಕ್ಕೆ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು ಜಮೀನುಗಳು ನೀರುಪಾಲಾಗಿವೆ.

VISTARANEWS.COM


on

By

karnataka Weather Forecast
Koo

ಹಾಸನ: ಮಳೆರಾಯ ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ್ದಾನೆ. ಮುಂದಿನ ಒಂದು ವಾರದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಹಾಸನದ ವಿವಿಧೆಡೆ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿದಿದೆ. ಭಾರಿ ಮಳೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಹಾಸನದ ಆಲೂರು ತಾಲೂಕಿನ ಬೆಂಬಳೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿದಿದೆ. ಭತ್ತದ ಗದ್ದೆಗಳಿಗೆ ಬಾರಿ ಪ್ರಮಾಣದ ನೀರು ನುಗ್ಗಿದೆ.

ನೀರಿನ‌ ರಭಸಕ್ಕೆ ಗದ್ದೆಯ ಬದುಗಳು ಕೊಚ್ಚಿ ಹೋಗಿವೆ. ನಾಟಿ ಮಾಡಲು ಸಿದ್ಧತೆ ನಡೆಸಿದ್ದ ರೈತರ ಆಸೆಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಐವತ್ತಕ್ಕೂ ಹೆಚ್ಚು ಎಕರೆ ಪ್ರದೇಶದ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ. ಧಾರಾಕಾರ ಮಳೆಯಿಂದ ಕಂಗಾಲಾದ ರೈತರು ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: CM Siddaramaiah: ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ, ರೈತರಿಗೆ ತೊಂದರೆಯಾಗದಂತೆ ಕ್ರಮ: ಸಿಎಂ

ಸರ್ಕಾರಿ ಶಾಲೆ ಜಲಾವೃತ, ರಸ್ತೆಗಳೆಲ್ಲವೂ ಗುಂಡಿ ಮಯ

ನಿನ್ನೆ ಸುರಿದ ಮಳೆಗೆ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದೆ. ಬೆಂಗಳೂರಿನ ವರ್ತೂರಿನ ಸಿದ್ದಾಪುರ ಸರ್ಕಾರಿ ಶಾಲೆಯ ಆವರಣದ ಸುತ್ತಲೂ ಮಳೆ ನೀರು ನಿಂತಿತ್ತು. ಬೆಳಗ್ಗೆ ಶಾಲೆಗೆ ಬಂದ ಮಕ್ಕಳು, ಎರಡು ಗಂಟೆಗಳ‌ ಕಾಲ ಶಾಲಾ ಕೊಠಡಿಗಳು ಸ್ವಚ್ಚತೆ ಮಾಡಿದರು.

ಇತ್ತ ಮಳೆ ನಿಂತು ಹೋದಮೇಲೆ ಗುಂಡಿಗಳು ಬಿದ್ದಿವೆ. ಎರಡು ದಿನದಿಂದ ಸುರಿದ ಮಳೆಗೆ ಬೆಂಗಳೂರಿನ ಟೌನ್ ಹಾಲ್ ಎದುರೇ 50ಕ್ಕೂ ಹೆಚ್ಚು ರಸ್ತೆ ಗುಂಡಿ ಬಿದ್ದಿವೆ. ಬಿಬಿಎಂಪಿಯಿಂದ 500 ಮೀಟರ್ ದೂರದಲ್ಲಿರುವ ಟೌನ್ ಹಾಲ್‌ ಸುತ್ತಮುತ್ತ ಇರುವ ಗುಂಡಿಗಳು ಬೈಕ್ ಸವಾರರ ಪಾಲಿಗೆ ಮೃತ್ಯುಕೂಪವಾಗಿದೆ.

ಕ್ಯಾರೆ ಎನ್ನದ ಬಿಬಿಎಂಪಿ

ಗುಂಡಿ ಫೋಟೋ ತೆಗೆದು ಕಳಿಸಿ ಅಂದರೆ ಬಿಬಿಎಂಪಿ ಕೆಲಸ ಮುಗಿತಾ? ಕೇವಲ ಆ್ಯಪ್ ಮಾಡಿ ಕೈತೊಳೆದು ಕೊಳ್ಳುತ್ತಿದೆ. ಮೊಣಕಾಲು ಉದ್ದ ಗುಂಡಿ ಇದ್ದರೂ ಬಿಬಿಎಂಪಿ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬೆಂಗಳೂರಿನ ಸಿಂಗಯ್ಯನಪಾಳ್ಯ ರಸ್ತೆಯ ಮಧ್ಯದಲ್ಲಿ ಯಮ ಸ್ವರೂಪಿ ಗುಂಡಿ ಬಿದ್ದಿದೆ. ಸ್ವಲ್ಪ ಎಚ್ಚರ ತಪ್ಪಿದ್ದರೂ, ಜೀವಕ್ಕೆ ಅಪಾಯ ಗ್ಯಾರಂಟಿ. ಇನ್‌ಸ್ಟಾಗ್ರಾಂ‌ಮ್‌ನಲ್ಲಿ ಪೋಸ್ಟ್ ಹಾಕಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

ನಾಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇತ್ತ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಸಾಥ್‌ ನೀಡಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಈ ನಾಲ್ಕು ಜಿಲ್ಲೆಗಳಿಗೆ ಎಚ್ಚರಿಕೆ

Rain News: ಕರಾವಳಿ, ಮಲೆನಾಡು ಭಾಗದಲ್ಲಿ ವರುಣ ಸೈಲೆಂಟ್‌ ಆಗಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯು ವೈಲೆಂಟ್‌ ಆಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದ್ದು, ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾದರೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಮಧ್ಯಮದಿಂದ ಕೂಡಿದ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನಲ್ಲಿ ರಾಯಚೂರು, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಬೆಂಗಳೂರಲ್ಲಿ ವ್ಯಾಪಕ ಮಳೆ ಎಚ್ಚರಿಕೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾಗಲೇ ಬಡಿದ ಸಿಡಿಲು; 15 ಮಂದಿ ಆಸ್ಪತ್ರೆ ಪಾಲು

Karnataka Weather Forecast : ಹಲವು ದಿನದಿಂದ ಬಿಡುವು ಕೊಟ್ಟಿದ್ದ ವರುಣ ಮತ್ತೆ (Rain News) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಹಾಸನದಲ್ಲಿ ಸಿಡಿಲು ಬಡಿದು 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Karnataka weather forecast
Koo

ಚಿಕ್ಕಬಳ್ಳಾಪುರ/ಹಾಸನ: ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಮಳೆ (Karnataka Weather Forecast) ಜತೆಗೆ ಸಿಡಿಲು ಬಡಿದು ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸುಮಾರು ಹದಿನೈದು ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಕೋರ್ಲಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ.

ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿತ್ತು. ಭತ್ತದ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ವೇಳೆಯೇ ಸಿಡಿಲಾಘಾತಕ್ಕೆ ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.

ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಸಿಡಿಲು ಬಡಿದಿದೆ. ಎಲ್ಲರಿಗೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಿಂಗಳ ಬಳಿಕ ಚಿಕ್ಕಬಳ್ಳಾಪುರದಲ್ಲಿ ವರುಣ ಪ್ರತ್ಯಕ್ಷ

ಇಷ್ಟು ದಿನ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನ ಸುತ್ತಮುತ್ತ ಮಳೆಯು ಅಬ್ಬರಿಸಿತ್ತು. ದಕ್ಷಿಣ ಒಳನಾಡಿನಲ್ಲಿ ಕಣ್ಮರೆಯಾಗಿದ್ದ ಮಳೆಯು ಇದೀಗ ಕಳೆದೆರಡು ದಿನಗಳಿಂದ‌ ವ್ಯಾಪಿಸಿದೆ. ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮಳೆರಾಯ ಮುಖ ಮಾಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಬಿಡುವು ಕೊಟ್ಟಿದ್ದ ಮಳೆಯು ಭಾನುವಾರ ರಾತ್ರಿ ಇಡೀ ಗುಡುಗು, ಮಿಂಚು ಸಮೇತ ಸುರಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರು ಸಂತಸಗೊಂಡಿದ್ದರು.

ಇದನ್ನೂ ಓದಿ: Bengaluru Rains : ಬೃಹತ್‌ ಗಾತ್ರದ ಮರದ ಕೊಂಬೆಗಳು ಬಿದ್ದು 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

ನಾಳೆ ಚಾಮರಾಜನಗರ, ರಾಮನಗರದಲ್ಲಿ ಭಾರಿ ಮಳೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ. ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Multivitamins
ಆರೋಗ್ಯ5 mins ago

Multivitamins: ನಮಗೆ ವಿಟಮಿನ್‌ ಪೂರಕಗಳು ಅಗತ್ಯವೆಂದು ತಿಳಿಯುವುದು ಹೇಗೆ?

Varamahalakshmi Festival 2024
ಧಾರ್ಮಿಕ6 mins ago

Varamahalakshmi Festival 2024: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಏನು? ಹೆಚ್ಚಿನ ಫಲ ಪಡೆಯಲು ಪೂಜೆ ಹೇಗೆ ಮಾಡಬೇಕು?

Droupadi Murmu
ದೇಶ32 mins ago

Droupadi Murmu: ಹೊಸ ಕ್ರಿಮಿನಲ್‌ ಕಾನೂನು ಸ್ವಾತಂತ್ರ್ಯ ಹೋರಾಟಗಾರರಿಗೆ ಸಂದ ಗೌರವ; ರಾಷ್ಟ್ರಪತಿ ಮುರ್ಮು

Tea vs Coffee
ಆರೋಗ್ಯ49 mins ago

Health Tips: ಬಿಸಿ ಕಾಫಿಗೆ ಬಾಯಿ ಸುಟ್ಟಿತೇ? ಇಲ್ಲಿದೆ ಉಪಶಮನ!

Cooker Blast
ಕರ್ನಾಟಕ49 mins ago

Cooker Blast: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟವಾಗಿ ಯುವಕ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

Rahul Navin
ದೇಶ1 hour ago

Director of ED: ಜಾರಿ ನಿರ್ದೇಶನಾಲಯ ಪೂರ್ಣಾವಧಿ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ

Varamahalakshmi Festival 2024
ಫ್ಯಾಷನ್2 hours ago

Varamahalakshmi Festival 2024: ಹಬ್ಬಕ್ಕೆ ಸೀರೆಯನ್ನು ದಾವಣಿಯಂತೆ ಉಡುವುದು ಹೇಗೆ? ಇಲ್ಲಿದೆ ಸಿಂಪಲ್‌ ಐಡಿಯಾ

Terror Attack
ದೇಶ2 hours ago

Terror Attack: ಕ್ಯಾಪ್ಟನ್‌ ಹುತಾತ್ಮರಾಗಿರುವ ಬೆನ್ನಲ್ಲೇ ಉಗ್ರನನ್ನು ಹೊಡೆದುರುಳಿಸಿದ ಸೇನೆ; ಮುಂದುವರಿದ ಕಾರ್ಯಾಚರಣೆ

Viral Video
Latest2 hours ago

Viral Video: ಶಾಲೆಯಲ್ಲಿ ಶಿಕ್ಷಕಿ, ಶಿಕ್ಷಕನ ನಡುವೆ ಭೀಕರ ಮಾರಾಮಾರಿ! ವಿಡಿಯೊ ನೋಡಿದವರಿಗೆ ಗಾಬರಿ!

Sexual Abuse
Latest3 hours ago

Sexual Abuse: ದಲಿತ ಬಾಲಕಿಯನ್ನು ಅಪಹರಿಸಿ ಇಸ್ಲಾಂಗೆ ಮತಾಂತರ; ಮುಸ್ಲಿಂ ಧರ್ಮಗುರು ಬಂಧನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌