ಈಜಲು ಹೋದ ಬಾಲಕ ಸಾವು: ಬದುಕಿ ಬರುತ್ತಾನೆ ಎಂಬ ನಂಬಿಕೆಯಲ್ಲಿ 4 ತಾಸು ಉಪ್ಪಿನಲ್ಲಿ ಮಲಗಿಸಿದ ಪೋಷಕರು Vistara News
Connect with us

ಕ್ರೈಂ

ಈಜಲು ಹೋದ ಬಾಲಕ ಸಾವು: ಬದುಕಿ ಬರುತ್ತಾನೆ ಎಂಬ ನಂಬಿಕೆಯಲ್ಲಿ 4 ತಾಸು ಉಪ್ಪಿನಲ್ಲಿ ಮಲಗಿಸಿದ ಪೋಷಕರು

ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮಗ ಬದುಕಿ ಬರುತ್ತಾನೆ ಎಂಬ ಆಸೆಯಲ್ಲಿ ಹೆತ್ತವರು ಆತನ ಮೃತದೇಹವನ್ನು ನಾಲ್ಕು ಗಂಟೆ ಕಾಲ ಉಪ್ಪಿನಲ್ಲಿ ಇಟ್ಟಿದ್ದಾರೆ.

VISTARANEWS.COM


on

boy in salt
Koo

ಬಳ್ಳಾರಿ: ಈಜಲು ಹೋದ ಮಗು ನೀರಿನ ಹೊಂಡದಲ್ಲಿ ಬಿದ್ದು ಮೃತ ಪಟ್ಟಿದ್ದಾನೆ. ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಪೋಷಕರು ನಾಲ್ಕು ತಾಸು ಮಗುವಿನ ಮೃತ ದೇಹವನ್ನು ಉಪ್ಪಿನಲ್ಲಿ ಮಲಗಿಸಿದ ಘಟನೆ ಬಳ್ಳಾರಿ ತಾಲೂಕಿನ ಸಿರವಾರ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕ ಸಿರವಾರ ಗ್ರಾಮದ ಸುರೇಶ್(10). ಈತನು ತಮ್ಮ ಸ್ನೇಹಿತರೊಂದಿಗೆ ನೀರಿನ ಹೊಂಡದಲ್ಲಿ ಈಜಲು ಹೋಗಿದ್ದಾನೆ. ಈಜು ಬಾರದ ಹಿನ್ನಲೆಯಲ್ಲಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾನೆ.

ಕೂಡಲೇ ಸ್ಥಳಕ್ಕೆ ದಾವಿಸಿದ ಪೋಷಕರು ಈ ರೀತಿ ಮೃತರಾದವರನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂದು ಸಾಮಾಜಿಕ ಜಾಲತಾಣದಲ್ಲಿ ಯಾರೋ ಓದಿದ್ದಾರಂತೆ, ಕೂಡಲೇ ನಾಲ್ಕೈದು ಚೀಲದಲ್ಲಿ ಉಪ್ಪು ತಂದು ಮೃತ ದೇಹವನ್ನು ಶಿರವನ್ನು ಬಿಟ್ಟಂತೆ ಉಪ್ಪಿನಲ್ಲಿ ಮಲಗಿಸಿದ್ದಾರೆ.

ನಾಲ್ಕು ತಾಸು ಉಪ್ಪಿನಲ್ಲಿ ಹೆಣವನ್ನು ಮಲಗಿಸಿದರೂ ಬದುಕದ ಹಿನ್ನಲೆಯಲ್ಲಿ ತಮ್ಮ ಮೌಢ್ಯತೆ ಅರಿತ ಪೋಷಕರು ದೇಹವನ್ನು ಅಂತ್ಯ ಸಂಸ್ಕಾರ ಮಾಡಿದ್ದಾರೆ. ಆದರೆ ವಿಷಯ ತಿಳಿಯದ ಕೆಲವರು, ವಾಸ್ತವತೆ ತಿಳಿಯದೆ, ಸಿರವಾರದಲ್ಲಿ ಮಗುವಿನ ಮೇಲೆ ಮೋಡಿ ನಡೆದಿದೆ ಎಂಬ ಅಪಪ್ರಚಾರಕ್ಕೂ ಕಾರಣವಾಗಿದೆ.
ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ, ಆದರೆ ಉಪ್ಪಿನಲ್ಲಿ ಮೃತ ದೇಹವನ್ನು ಮಲಗಿಸಿದ ಫೋಟೋಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿವೆ.

ಕರ್ನಾಟಕ

Murder Case: ಕಾವೇರಿಪಟ್ಟಣಂ ಬಳಿ ಹಾಡಹಗಲೇ ತಲ್ವಾರ್‌ನಿಂದ ಕೊಚ್ಚಿ ಯುವಕನ ಕೊಲೆ

Murder Case: ತಮಿಳುನಾಡಿನ ಕಾವೇರಿಪಟ್ಟಣಂ ಬಳಿ ನಡು ರಸ್ತೆಯಲ್ಲಿ ದುಷ್ಕರ್ಮಿಗಳ ತಂಡ ಯುವಕನನ್ನು ಅಟ್ಟಾಡಿಸಿ ತಲ್ವಾರ್‌ನಿಂದ ಕೊಚ್ಚಿ ಕೊಲೆ ಮಾಡಿದೆ.

VISTARANEWS.COM


on

Edited by

Man killed in attack with deadly weapons near Kaveripatnam
Koo

ಬೆಂಗಳೂರು ಗ್ರಾಮಾಂತರ: ಹಾಡಹಗಲೇ ತಲ್ವಾರ್‌ನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಾವೇರಿಪಟ್ಟಣಂ ಬಳಿಯ ಕೃಷ್ಣಗಿರಿ ಡ್ಯಾಂ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ದುಷ್ಕರ್ಮಿಗಳ ತಂಡ ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಕೊಲೆ (Murder Case) ಮಾಡಿದೆ.

ಪ್ರೇಮ ಪ್ರಕರಣದಲ್ಲಿ ಯುವಕನ್ನು ಮೂವರು ಯುವಕರ ತಂಡ ಕೊಲೆ ಮಾಡಿದೆ. ಇತ್ತೀಚೆಗೆ ಯುವತಿಯನ್ನು ಪ್ರೀತಿಸಿ ಮೃತ ಯುವಕ ಮದುವೆಯಾಗಿದ್ದ. ಹೀಗಾಗಿ ಯುವತಿ ಕಡೆಯವರಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೃಷ್ಣಗಿರಿ ಡ್ಯಾಂ ಸರ್ವಿಸ್ ರಸ್ತೆಯಲ್ಲಿ ಯುವಕ ಹೋಗುತ್ತಿದ್ದಾಗ ಅಡ್ಡಗಟ್ಟಿರುವ ಆರೋಪಿಗಳು, ತಲ್ವಾರ್‌ನಿಂದ ಹಲ್ಲೆ ನಡೆಸಿದ್ದರಿಂದ ತಲೆ ಹಾಗೂ ಎದೆಯ ಭಾಗದಲ್ಲಿ ಗಂಭೀರ ಗಾಯಗಳಾಗಿ ಯುವಕ ಮೃತಪಟ್ಟಿದ್ದಾನೆ. ಕೊಲೆಯ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರ ಸಿದ್ಧತೆ

ಬೆಂಗಳೂರು: ಕಳೆದ ಜನವರಿ 10 ರಂದು ನಾಗವಾರ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಮೃತಪಟ್ಟಿದ್ದ ಪ್ರಕರಣ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

ಲೋಹಿತ್ ಎಂಬುವವರು ತಮ್ಮ ಬೈಕ್‌ನಲ್ಲಿ ಪತ್ನಿ ತೇಜಸ್ವಿನಿ ಹಾಗೂ ಮಗ ವಿಹಾನ್ ಜತೆ ಬೈಕ್‌ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ನಾಗವಾರ ಬಳಿ ಮೆಟ್ರೊ ಪಿಲ್ಲರ್ ಬೈಕ್ ಮೇಲೆ ಬಿದ್ದು ತಾಯಿ ತೇಜಸ್ವಿನಿ ಹಾಗೂ ಮಗ ವಿಹಾನ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಮೃತ ತೇಜಸ್ವಿನಿ ಪತಿ ಲೋಹಿತ್ ಗೋವಿಂದಪುರ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ | Road accident : ಬೈಕ್‌- ಲಾರಿ ಮಧ್ಯೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು

ಲೋಹಿತ್ ನೀಡಿದ ದೂರಿನನ್ವಯ ಸೈಟ್ ಎಂಜಿನಿಯರ್, ಮೆಟ್ರೊ ಕಂಟ್ರಾಕ್ಟರ್, ಸೈಟ್ ಇಂಚಾರ್ಜ್, ಬಿಎಂಆರ್‌ಸಿಎಲ್ ಅಧಿಕಾರಿಗಳು ಸೇರಿ 8 ಮಂದಿ ವಿರುದ್ಧ ಕೇಸ್ ದಾಖಲಾಗಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಗೋವಿಂದಪುರ ಪೊಲೀಸರು ಪೂರ್ಣಗೊಳಿಸಿದ್ದಾರೆ. ಕೇಸ್ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಗೋವಿಂದಪುರ ಪೊಲೀಸರ ವರದಿಯನ್ನು ಖುದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಮುಖ ಅಂಶಗಳನ್ನು ಪರಿಶೀಲನೆ ಮಾಡಲಿದ್ದಾರೆ. ಪೊಲೀಸರು ಪ್ರಮುಖವಾಗಿ ಎರಡು ಅಂಶಗಳ ಮೇಲೆ ಒತ್ತು ಕೊಟ್ಟು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

ಮೆಟ್ರೋ ಪಿಲ್ಲರ್ ದುರಂತದಲ್ಲಿ ಮೊದಲಿಗೆ ಮೆಟ್ರೋ ಪಿಲ್ಲರ್‌ನ ಪ್ಲಾನ್ ಹಾಗೂ ಎಕ್ಸಿಕ್ಯೂಟಿಂಗ್. ಪಿಲ್ಲರ್ ಬಳಿ ಕೈಗೊಂಡಿದ್ದ ಸುರಕ್ಷತಾ ಕ್ರಮಗಳು. ಸುರಕ್ಷತೆ ಕೈಗೊಳ್ಳಲು ನಿರ್ಲಕ್ಷ್ಯ ಕೈಗೊಂಡಿರುವುದು ಬೆಳಕಿಗೆ ಬಂದಿದೆ. ಸುರಕ್ಷತಾ ಕ್ರಮ ಕೈಗೊಳ್ಳುವ ಅಧಿಕಾರ ಪ್ರಾಜೆಕ್ಟ್ ಮ್ಯಾನೇಜರ್‌ಗೆ ಇದ್ದು ಪ್ರಾಜೆಕ್ಟ್ ಹೆಡ್‌ಗೆ ಎಲ್ಲರನ್ನೂ ನಿರ್ಧರಿಸುವ ಅಧಿಕಾರವಿದೆ. ಆದರೆ, ಸುರಕ್ಷತಾ ಮುತುವರ್ಜಿ ವಹಿಸದೇ ದುರ್ಘಟನೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಎದ್ದು ಕಾಣುತ್ತಿದೆ. ಹೀಗೆ ಸುಮಾರು 9 ಮಂದಿ ಅಧಿಕಾರಿಗಳನ್ನು ಹೊಣೆಯಾಗಿಸಿ ತನಿಖೆ ನಡೆಸಿದ್ದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

Continue Reading

ಕರ್ನಾಟಕ

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

ಬೆಳಗಾವಿಯ ಸವದತ್ತಿ ಪಟ್ಟಣದಲ್ಲಿ ಮಂಗಳವಾರ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಲಾರಿಯೊಂದು ಬೈಕ್‌, ಕಾರು ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.

VISTARANEWS.COM


on

Edited by

savadatti accident
Koo

ಬೆಳಗಾವಿ: ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದ ಎದುರು ಲಾರಿ, ಬೈಕ್, ಕಾರು, ಆಟೋ ಮಧ್ಯೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ ಈ ಅವಘಡ ಸಂಭವಿಸಿದೆ.

ಬೈಕ್ ಸವಾರ, ಸವದತ್ತಿ ತಾಲೂಕಿನ ಕುರವಿನಕೊಪ್ಪ ಗ್ರಾಮದ ಸೋಮಲಿಂಗ ಹೂಗಾರ (33) ಮತ್ತು ಸವದತ್ತಿ ತಾಲೂಕಿನ ಮದಿಗೇರಿ ಗ್ರಾಮದ ಕಾರ್ತಿಕ್ ಕುರಬಗಟ್ಟಿ (9) ಮೃತಪಟ್ಟ ದುರ್ದೈವಿಗಳು. ಬೈಕ್ ಮೇಲಿದ್ದ ಇನ್ನಿಬ್ಬರಾದ ಮಂಜುಳಾ ಕುರಬಗಟ್ಟಿ (36), ಮಲ್ಲವ್ವ ಕುರಬಗಟ್ಟಿ (11) ಅವರಿಗೆ ಗಂಭೀರ ಗಾಯಗಳಾಗಿವೆ.

ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಬ್ರೇಕ್‌ ಫೇಲ್‌ ಆದ ಲಾರಿ ಮೊದಲು ಸವದತ್ತಿ ಪಟ್ಟಣದ ಕಡೆಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಪಕ್ಕ‌ ನಿಂತಿದ್ದ ಕಾರು ಮತ್ತು ಆಟೋ ರಿಕ್ಷಾಗೂ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆ ಎಷ್ಟಿತ್ತು ಎಂದರೆ ಬೈಕ್ ಸವಾರನ ಮೃತದೇಹ ಲಾರಿ ಚಕ್ರದ ಕೆಳಗೆ ಸಿಲುಕಿತ್ತು. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿದರು. ಸ್ಥಳಕ್ಕೆ ಸವದತ್ತಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ಕರ್ನಾಟಕ

Road accident : ಬೈಕ್‌- ಲಾರಿ ಮಧ್ಯೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು

ರೊಟ್ಟಿ ಕೊಟ್ಟು ಬರಲು ಹೋಗುತ್ತಿದ್ದ ಪುಟ್ಟ ಉದ್ಯಮಿಯ ಬೈಕ್‌ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಉದ್ಯಮಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

VISTARANEWS.COM


on

Edited by

Gadaga accident
Koo

ಗದಗ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ (Road accident) ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಕನಕಾಪೂರ ದ್ಯಾಮವ್ವ ದೇವಿ ದೇವಸ್ಥಾನದ ಬಳಿ ನಡೆದಿದೆ. ಶಿಗ್ಲಿ ಗ್ರಾಮದ ರಾಜು‌ ಬಸರಿ(41) ಮೃತ ದುರ್ದೈವಿ.

ಡಾಬಾ ಹಾಗೂ ಹೋಟೆಲ್ ಗಳಿಗೆ ರೊಟ್ಟಿ ಪೂರೈಕೆ ಮಾಡುತ್ತಿದ್ದ ರಾಜು ಅವರು ತಮ್ಮ ಬೈಕ್‌ನಲ್ಲಿ ಶಿಗ್ಲಿ ಗ್ರಾಮದಿಂದ ಲಕ್ಷ್ಮೇಶ್ವರ ಪಟ್ಟಣದತ್ತ ತೆರಳುತ್ತಿದ್ದರು. ಈ ವೇಳೆ‌ ಲಕ್ಷ್ಮೇಶ್ವರ ಪಟ್ಟಣದಿಂದ ಶಿಗ್ಲಿ ಗ್ರಾಮದತ್ತ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಅಪಘಾತದ ಹೊಡೆತಕ್ಕೆ ಲಾರಿ ಕೂಡಾ ನಿಯಂತ್ರಣ ಕಳೆದುಕೊಂಡ ರಸ್ತೆ ಪಕ್ಕದ ಗುಂಡಿಗೆ ಇಳಿದು ನಿಂತಿದೆ. ಲಾರಿ ಚಾಲಕನಿಗೂ ಗಾಯಗಳಾಗಿವೆ.

ಫೋನ್‌ ಕಾಲ್‌ ರಿಸೀವ್‌ ಮಾಡಿಲ್ಲವೆಂದು ಚಾಲಕನಿಗೆ ಥಳಿಸಿದ ಕಾರು ಮಾಲೀಕ

ಬೆಂಗಳೂರು ಗ್ರಾಮಾಂತರ: ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೊನಪ್ಪನ ಅಗ್ರಹಾರ ಹೋಟೆಲ್ ಬಳಿ ಕ್ಯಾಬ್‌ ಚಾಲಕನೊಬ್ಬ ಫೋನ್‌ ಕಾಲ್‌ ರಿಸೀವ್‌ ಮಾಡಿಲ್ಲವೆಂದು ಕಾರು ಮಾಲೀಕರು ಹಿಡಿದು (Assault Case) ಥಳಿಸಿದ್ದಾರೆ. ಬೀದರ್ ಮೂಲದ ಕ್ಯಾಬ್ ಚಾಲಕ ಕ್ರಿಸ್ ವಿಲಿಯಂ ಹಲ್ಲೆಗೊಳಾದವರು. ರಾಜೀವ್ ರಂಜನ್, ರೆಹಾನ್ ಮಲ್ಲಿಕ್ ಎಂಬುವವರು ಹಲ್ಲೆ ನಡೆಸಿದ್ದಾರೆ.

ರಾಜೀವ್ ರಂಜನ್, ರೆಹಾನ್ ಮಲ್ಲಿಕ್ ಎಂಬುವವರು ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಸಮೀಪ ಇರುವ Vio fleet ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಈ ಸಂಸ್ಥೆಯವರು ಸುಮಾರು 20ಕ್ಕೂ ಅಧಿಕ ಕಾರುಗಳನ್ನು ಹೊಂದಿದ್ದಾರೆ. ಈ ಸಂಸ್ಥೆಯು ಉಬರ್ ಮೂಲಕ ಕಾರುಗಳನ್ನು ಬಾಡಿಗೆ ಕೊಡುತ್ತದೆ.

ಇತ್ತೀಚೆಗೆ ಚಾಲಕ ವಿಲಿಯಂ Workindia.in ಮೂಲಕ ಕೆಲಸಕ್ಕೆ ಹುಡುಕಾಟ ನಡೆಸಿದಾಗ Vio fleet ಸಂಸ್ಥೆಯ ಮಾಲೀಕ ರಾಜೀವ್ ರಂಜನ್ ಕೆಲಸಕ್ಕೆ ಆಫರ್ ನೀಡಿದ್ದರು. ಕೆಲಸಕ್ಕೆ ಸೇರಿದ್ದ ವಿಲಿಯಂ ಮೂರು ದಿನಗಳ ಕಾಲ ನೈಟ್ ಶಿಫ್ಟ್ ಮಾಡಿದ್ದ. ಆದರೆ, ಮೂರೇ ದಿನಕ್ಕೆ ಮಾಲೀಕನ ಕಿರುಕುಳಕ್ಕೆ ಬೇಸತ್ತು ಕೆಲಸ ಬಿಡಲು ನಿರ್ಧಾರ ಮಾಡಿದ್ದ ಎಂದು ತಿಳಿದು ಬಂದಿದೆ.

ಕೊನಪ್ಪನ ಅಗ್ರಹಾರ ಫಾರ್ಚುನ್ ಸೂಟ್ಸ್ ಹೋಟೆಲ್‌ನಲ್ಲಿ ಚಾಲಕ ವಿಲಿಯಮ್ ರೂಮ್ ಮಾಡಿಕೊಂಡಿದ್ದರು. ಹೀಗಿದ್ದಾಗ ಕಳೆದ 17ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೋಟೆಲ್‌ ಬಳಿ ಕಾರು ನಿಲ್ಲಿಸಿಕೊಂಡಿದ್ದಾಗ, ಅಲ್ಲಿಗೆ ಬಂದಿದ್ದ ರಾಜೀವ್ ರಂಜನ್, ರೆಹಾನ್ ಮಲ್ಲಿಕ್ ಏಕಾಏಕಿ ವಿಲಿಯಮ್‌ ಮೇಲೆ ಹಲ್ಲೆ ಮಾಡಿದ್ದಾರೆ. ಫೋನ್ ಸ್ವಿಚ್ಡ್‌ ಆಫ್ ಮಾಡಿಕೊಂಡಿದ್ದಕ್ಕೆ ಥಳಿಸಿದ್ದಾರೆ.

ಇದನ್ನೂ ಓದಿ : Drugs Mafia : ಸಾಗರದಲ್ಲಿ ಡ್ರಗ್ಸ್‌ ಮಾರಾಟ ಯತ್ನ: ಲಾಂಗ್‌ ಸಹಿತ ಇಬ್ಬರ ಅರೆಸ್ಟ್‌, ಕೊಲೆ ಸಂಚೂ ಬಯಲು

Continue Reading

ಕರ್ನಾಟಕ

Lokayukta Raid: ರಾಣೆಬೆನ್ನೂರು ಪಿಎಸ್‌ಐ, ವಾಹನ ಚಾಲಕ ಲೋಕಾಯುಕ್ತ ಬಲೆಗೆ; 40 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದರು

Haveri News: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ಐ ಮತ್ತು ವಾಹನ ಚಾಲಕನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಮನೆ ಬಾಡಿಗೆ ವಸೂಲಿ ಮಾಡಿಕೊಡುವ ಸಂಬಂಧ ಲಂಚ ಸ್ವೀಕಾರ ಮಾಡುವಾಗ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

Edited by

Lokayukta officials arrest PSI driver while accepting bribe in ranebennur
Koo

ಹಾವೇರಿ: 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಮಯದಲ್ಲಿ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ಐ ಮತ್ತು ವಾಹನ ಚಾಲಕ ಲೋಕಾಯುಕ್ತ (Lokayukta Raid) ಬಲೆಗೆ ಬಿದ್ದಿದ್ದಾರೆ. ಪಿಎಸ್ಐ ಸುನೀಲ್‌ ತೇಲಿ ಮತ್ತು ವಾಹನ ಚಾಲಕ ಸಚಿನ್‌ ಎಂಬುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಫಿರೋಜ್ ಎಂಬುವವರ ಮನೆ ಬಾಡಿಗೆ ವಸೂಲಿ‌ ಮಾಡಿಸಿಕೊಡುವ ವಿಚಾರಕ್ಕೆ ಪಿಎಸ್‌ಐ 50 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು. ಅದರಲ್ಲಿ 40 ಸಾವಿರ ರೂಪಾಯಿ ಪಡೆಯುತ್ತಿದ್ದ ಸಮಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣದಲ್ಲಿ ಪಿಎಸ್‌ಐಗೆ ಸಹಕರಿಸಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Brave daughter : ಹಾವು ಕಡಿತಕ್ಕೆ ಒಳಗಾದ ತಾಯಿಯನ್ನು ಬಾಯಿಯಿಂದ ವಿಷ ಹೊರಗೆಳೆದು ರಕ್ಷಿಸಿದ ಮಗಳು

ಬಳ್ಳಾರಿ ಕೇಂದ್ರ ಕಾರಾಗೃಹದ ಮೇಲೆ ಎಸ್‌ಪಿ ತಂಡ ದಾಳಿ: ಒಂದು ಮೊಬೈಲ್, ಮೂರು ಸಿಮ್ ವಶ

ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ (Bellary Central Jail) ನಿಷೇಧಿತ ವಸ್ತುಗಳನ್ನು ಬಳಸುತ್ತಿರುವ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರ ನೇತೃತ್ವದ ಸುಮಾರು‌ 100ಕ್ಕೂ ಹೆಚ್ಚು ಸಿಬ್ಬಂದಿ‌‌‌ ಅಧಿಕಾರಿಗಳ ತಂಡ ದಾಳಿ ಮಾಡಿ ಒಂದು ಮೊಬೈಲ್ ಮತ್ತು ಮೂರು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆ ಹತ್ತಿರವಾಗುತ್ತಿರುವ ಹೊತ್ತಿನಲ್ಲೇ ಈ ದಾಳಿ ನಡೆಸಿದೆ. ಈ ಹಿಂದೆ ಎಸ್‌ಪಿ ನೇತೃತ್ವದಲ್ಲಿ ಹಲವು ಬಾರಿ ದಾಳಿ ನಡೆಸಿದ‌ ಉದಾಹರಣೆಗಳು ಇವೆ.

ಮಂಗಳವಾರ ಬೆಳಗ್ಗೆ 6.30ಕ್ಕೆ ದಾಳಿ ಮಾಡಿದ ಅಧಿಕಾರಿಗಳು ಕಾರಾಗೃಹದ ಎಲ್ಲ ಕೋಣೆಗಳನ್ನು ಶೋಧನೆ ಮಾಡಿದ್ದು, ಶೋಧನೆ ವೇಳೆಯಲ್ಲಿ ಒಂದು ಸಿಮ್ ಇರುವ ಮೊಬೈಲ್ ಹಾಗೂ 3 ಸಿಮ್‌ ಕಾರ್ಡ್‌ಗಳು ಸಿಕ್ಕಿವೆ. ಸುಮಾರು 2 ತಾಸುಗಳ‌ ಕಾಲ ಶೋಧನಾ ಕಾರ್ಯ ಮಾಡಿದರು.

ಇದನ್ನೂ ಓದಿ: Karnataka Election: ಯುಗಾದಿಗೆ ಕಾಂಗ್ರೆಸ್‌ ರಣಕಹಳೆ: ಮೊದಲ ಪಟ್ಟಿ ಬುಧವಾರ ಬಿಡುಗಡೆ ಎಂದ ಕೆ.ಜೆ. ಜಾರ್ಜ್‌

ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಡಿವೈಎಸ್‌ಪಿ ಬಸವರಾಜ್ ಕೆ., ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಶ್ರೀನಿವಾಸ ಮೇಟಿ, ಸಿದ್ದರಾಮೇಶ್ವರ, ಎಂ. ಎನ್. ಸಿಂಧೂರು, ವಾಸು ಕುಮಾರ್, ಬಸವರಾಜ ಪಾಟೀಲ್, ಗುಂಡೂರಾವ್, ಅಂಬರೇಶ್ ಹುಬ್ಬಳ್ಳಿ, ಅಮೋಫ್, ಗೋವಿಂದ ಸುಮಾರು 100 ಸಿಬ್ಬಂದಿ ಭಾಗಿಯಾಗಿದ್ದರು. ಈ‌ ಸಂದರ್ಭದಲ್ಲಿ ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಲತಾ, ಉಪಾಧೀಕ್ಷಕ ಅಂಬರೀಶ್ ಸೇರಿದಂತೆ ಇತರರು ಇದ್ದರು.

Continue Reading
Advertisement
Donald Trump failed to disclose 17 gifts from India, including Narendra Modi Gift
ದೇಶ4 mins ago

Donald Trump Gifts: ಮೋದಿ ಕೊಟ್ಟಿದ್ದು ಸೇರಿ 2 ಕೋಟಿ ರೂ. ಮೌಲ್ಯದ ಉಡುಗೊರೆಗಳ ಮಾಹಿತಿ ನೀಡದ ಟ್ರಂಪ್‌

Actress Haripriya gave good news at last; Didn't say the name though!
ಸಿನಿಮಾ8 mins ago

Sandalwood Actor : ಕೊನೆಗೂ ಗುಡ್​ ನ್ಯೂಸ್ ಕೊಟ್ಟ ನಟಿ ಹರಿಪ್ರಿಯಾ; ಆದರೂ ಹೆಸರು ಹೇಳಲಿಲ್ಲ!

Man killed in attack with deadly weapons near Kaveripatnam
ಕರ್ನಾಟಕ20 mins ago

Murder Case: ಕಾವೇರಿಪಟ್ಟಣಂ ಬಳಿ ಹಾಡಹಗಲೇ ತಲ್ವಾರ್‌ನಿಂದ ಕೊಚ್ಚಿ ಯುವಕನ ಕೊಲೆ

smartphone
ವಾಣಿಜ್ಯ27 mins ago

Smartphone Export : ಭಾರತದಿಂದ 2 ತಿಂಗಳಲ್ಲಿ ದಾಖಲೆಯ 16,500 ಕೋಟಿ ರೂ. ಮೌಲ್ಯದ ಸ್ಮಾರ್ಟ್‌ಫೋನ್‌ ರಫ್ತು

vistara-top-10-news-siddaramaiah-constituency-confusion-continues-to-congress-first-list-on-wednesday-and-more-news
ಕರ್ನಾಟಕ32 mins ago

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

Jio True 5G service launched in 41 cities including KGF's robertsonpet
ಕರ್ನಾಟಕ40 mins ago

ಕೆಜಿಎಫ್‌ನ ರಾಬರ್ಟಸನ್ ಪೇಟೆ ಸೇರಿ 41 ನಗರಗಳಲ್ಲಿ Jio True 5G ಸೇವೆ ಶುರು

Had Kohli not appealed, he would not have applied for the post of head coach
ಕ್ರಿಕೆಟ್54 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ1 hour ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ1 hour ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ1 hour ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ16 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ8 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!