Site icon Vistara News

Bike Accident | ಮೂರು ಪ್ರತ್ಯೇಕ ಅಪಘಾತ; ಮೂವರು ಸ್ಥಳದಲ್ಲೇ ಸಾವು

accident

ಬಳ್ಳಾರಿ: ಜಿಲ್ಲೆಯಲ್ಲಿ ಭಾನುವಾರ ಮಧ್ಯರಾತ್ರಿ ಸಂಡೂರು ತಾಲೂಕಿನ ತಾರಾ ನಗರದಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಪಾದಚಾರಿ ಹಾಗೂ ಓರ್ವ ಬೈಕ್ [Bike Accident] ಸವಾರ ಮೃತಪಟ್ಟಿದ್ದಾರೆ.

ಪಾದಚಾರಿಗೆ ಬೈಕ್-ಡಿಕ್ಕಿ ಸಾವು:

ಪಾದಚಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ತಾರಾ ನಗರ ನಿವಾಸಿ ಕುಮಾರಸ್ವಾಮಿ(26) ಎಂಬುವರು ಮೃತಪಟ್ಟಿದ್ದಾರೆ. ಎಲೆಕ್ಟ್ರಿಕಲ್ ಆಟೋ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಕುಮಾರಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ವಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಮೃತಪಟ್ಡಿದ್ದಾರೆ.

ಇದನ್ನೂ ಓದಿ | ಆಂಧ್ರದ ಚಿತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ : ಸಾಧನೆಯ ಮನೆಯಲ್ಲಿ ಸಾವಿನ ಸೂತಕ

ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿಯಲ್ಲಿ ಪಾದಚಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಕಾಳಿಂಗಪ್ಪ (36) ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದರಿಂದ ಅವರನ್ನು ವಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಎರಡು ಬೈಕ್ ಮಧ್ಯೆ ಡಿಕ್ಕಿ:
ಬಳ್ಳಾರಿ ತಾಲೂಕಿನ ಅಮರಾಪುರ ಗ್ರಾಮದಲ್ಲಿ ಎರಡು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಜೋಳದರಾಶಿ ಗ್ರಾಮದ ವಿಜಯ ಮೋಹನ ರೆಡ್ಡಿ (47) ಎಂದು ಗುರುತಿಸಲಾಗಿದೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident |ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ

Exit mobile version