Na.Ra Bharat Reddy : ಬಳ್ಳಾರಿ ಶಾಸಕ ನಾರಾ ಭರತ್‌ ರೆಡ್ಡಿ ಮೇಲೆ ಇ.ಡಿ ದಾಳಿ, ಬಂಧುಗಳ ಮನೆಗೂ ರೇಡ್‌ - Vistara News

ಬಳ್ಳಾರಿ

Na.Ra Bharat Reddy : ಬಳ್ಳಾರಿ ಶಾಸಕ ನಾರಾ ಭರತ್‌ ರೆಡ್ಡಿ ಮೇಲೆ ಇ.ಡಿ ದಾಳಿ, ಬಂಧುಗಳ ಮನೆಗೂ ರೇಡ್‌

Na.Ra Bharat Reddy : ಬಳ್ಳಾರಿಯ ಕಾಂಗ್ರೆಸ್‌ ಶಾಸಕ ನಾ.ರಾ. ಭರತ್‌ ರೆಡ್ಡಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆದಿದೆ. ಬಳ್ಳಾರಿ ಹಾಗೂ ಬೆಂಗಳೂರಿನ ಅವರ ಮನೆಗಳು, ಕುಟುಂಬ ಮತ್ತು ಆಪ್ತರ ಮನೆಗಳಿಗೂ ದಾಳಿ ನಡೆದಿದೆ.

VISTARANEWS.COM


on

Nara bharath reddy ED Raid1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ : ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ (Ballary City Congress MLA) ನಾರಾ ಭರತ್‌ ರೆಡ್ಡಿ (Na.Ra Bharat Reddy) ಮತ್ತು ಅವರ ಬಂಧುಗಳ ಮನೆಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (Enforcement directorate) ಶನಿವಾರ ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಬಂದಿರುವ ಇ.ಡಿ ಅಧಿಕಾರಿಗಳ ತಂಡ (E.D team raid) ಏಕಕಾಲದಲ್ಲಿ ಆರು ಕಡೆ ದಾಳಿ ಮಾಡಿ ಪರಿಶೀಲನೆ ಆರಂಭಿಸಿದೆ. ಬೆಂಗಳೂರಿನ ಮನೆಗೂ ದಾಳಿ ನಡೆದಿದೆ.

ಶಾಸಕ ನಾರಾ ಭರತ್‌ ರೆಡ್ಡಿ ಮನೆ ಮತ್ತು ಕಚೇರಿ, ಭರತ್‌ ರೆಡ್ಡಿ ಅವರ ತಂದೆ ಸೂರ್ಯ ನಾರಾಯಣ ರೆಡ್ಡಿ ಮನೆ ಹಾಗೂ ಶಾಸಕರ ಚಿಕ್ಕಪ್ಪ ಪ್ರತಾಪರೆಡ್ಡಿ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆದಿದೆ. ಭರತ್‌ ರೆಡ್ಡಿ ಅವರ ಸಹೋದರ ಸಂಬಂಧಿ ಅನಿಲ್‌ ರೆಡ್ಡಿ, ಆಪ್ತರಾದ ರತ್ನಬಾಬು ಅವರ ಮನೆ ಮೇಲೂ ದಾಳಿ ನಡೆದಿದೆ. ಶನಿವಾರ ಬೆಳಗ್ಗೆ 6.30ರ ಹೊತ್ತಿಗೆ ಏಕಕಾಲದಲ್ಲಿ ಅಧಿಕಾರಿಗಳ ತಂಡ ಮನೆ ಮತ್ತು ಕಚೇರಿಗಳಿಗೆ ಲಗ್ಗೆ ಇಟ್ಟು ಪರಿಶೀಲನೆ ಮಾಡಿದೆ.

Nara bharath reddy ED Raid೨
Nara bharath reddy ED Raid

ನಗರದ ನೆಹರು ಕಾಲೋನಿಯಲ್ಲಿರುವ ಶಾಸಕ ಭರತ್ ರೆಡ್ಡಿ ಮತ್ತು ಅವರ ಚಿಕ್ಕಪ್ಪ ಪ್ರತಾಪರೆಡ್ಡಿ ಅವರ ಮನೆ ಮೇಲೆ, ಗಾಂಧಿ ನಗರದಲ್ಲಿರುವ ಶಾಸಕರ ತಂದೆ‌ ಸೂರ್ಯನಾರಾಯಣ ರೆಡ್ಡಿ ಕಚೇರಿ, ಶಾಸಕರ ಆಪ್ತ ರತ್ನಬಾಬು, ಸೋದರ ಸಂಬಂಧಿ ಅನಿಲ್ ಮನೆ ಮೇಲೆ ಈ ದಾಳಿ ನಡೆದಿದೆ.

ಬೆಂಗಳೂರಿನಿಂದ 7 ವಾಹನಗಳಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಸಿಆರ್ ಪಿಎಫ್ ಭದ್ರತಾ ಸಿಬ್ಬಂದಿಗಳೊಂದಿಗೆ ಆಗಮಿಸಿ ದಾಳಿ ಮಾಡಿದ್ದಾರೆ. ಶಾಸಕ ಕಚೇರಿಯಲ್ಲಿ ನಿಲ್ಲಿಸಿರುವ ಸ್ಕಾರ್ಫಿಯೋ ವಾಹನದಲ್ಲಿನ ವಸ್ತುಗಳನ್ನು ಪರಿಶೀಲಿಸಿದ್ದಾರೆ. ದಾಳಿಯ ಸಂದರ್ಭದಲ್ಲಿ‌ ಶಾಸಕರು ಬಳ್ಳಾರಿ ನಗರದಲ್ಲಿಯೇ ಇದ್ದಾರೆ ಎಂದು ಹೇಳಲಾಗುತ್ತಿದೆ.

Nara bharath reddy ED Raid೩
Nara bharath reddy ED Raid

ಶಾಸಕ ನಾರಾ ಭರತ್‌ ರೆಡ್ಡಿ ಅವರದು ಶ್ರೀಮಂತ ಕುಟುಂಬವಾಗಿದ್ದು, ಸಾಕಷ್ಟು ಆಸ್ತಿಪಾಸ್ತಿಯನ್ನು ಹೊಂದಿದೆ. ನಾರಾ ಭರತ್‌ ರೆಡ್ಡಿ ಅವರು ಕಳೆದ ಚುನಾವಣೆಯ ಸಂದರ್ಭದಲ್ಲಿ 90 ಕೋಟಿ ಮೌಲ್ಯದ ಆಸ್ತಿ ಘೋಷಣೆ ಮಾಡಿದ್ದರು. ನಾರಾ ಭರತ ರೆಡ್ಡಿ ಅವರ ಅಪ್ಪ, ಚಿಕ್ಕಪ್ಪ ಅವರು ಕೂಡಾ ದೊಡ್ಡ ಮಟ್ಟದ ಶಕ್ತಿವಂತರಾಗಿದ್ದಾರೆ. ಹೀಗಾಗಿ ಅವರ ಮೇಲೂ ಇ.ಡಿ ಕಣ್ಣು ಹಾಕಿದೆ ಎನ್ನಲಾಗಿದೆ. ಶಾಸಕ ನಾ.ರಾ ಭರತ ರೆಡ್ಡಿ ಅವರ ಆಪ್ತ ರತ್ನಬಾಬು ಮತ್ತು ಶಾಸಕರ‌ ಸೋದರ ಸಂಬಂಧಿ‌ ಅನಿಲ್ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು ಕೂಡಾ ಇದೇ ಕಾರಣಕ್ಕೆ.

Nara bharath reddy ED Raid
ನಾ.ರಾ. ಭರತ್‌ ರೆಡ್ಡಿ ಅವರ ಸ್ಕಾರ್ಪಿಯೊ ಪರಿಶೀಲನೆ

ಶಾಸಕರ ಕುಟುಂಬದ ವ್ಯವಹಾರ ಮತ್ತು ರಾಜಕೀಯ

ಶಾಸಕರ ಕುಟುಂಬಕ್ಕೆ ಸಂಬಂಧಿಸಿದಂತೆ ಗ್ರಾನೈಟ್ ವ್ಯವಹಾರ ಇದೆ, ಒಂದು ವರ್ಷದ ಹಿಂದೆ ಶಾಸಕರ ತಂದೆ ಸೂರ್ಯನಾರಾಯಣ ರೆಡ್ಡಿ ಅವರ ಕಚೇರಿಯ ಮೇಲೆ ಆದಾಯ ತೆರಿಗೆ‌ ಅಧಿಕಾರಿಗಳು‌ ದಾಳಿ ಮಾಡಿದ್ದರು. ಶಾಸಕ ಭರತ ರೆಡ್ಡಿ ಅವರು ಕೆಲ ತಿಂಗಳುಗಳ ಹಿಂದೆ ಚುನಾವಣೆಯ ಪೂರ್ವದಲ್ಲಿ ಹುಟ್ಟು ಹಬ್ಬಕ್ಕೆ‌ ಬಳ್ಳಾರಿ ನಗರದ ಜನರಿಗೆ ಕುಕ್ಕರ್ ಹಂಚಿಕೆ ಮಾಡಿದ್ದರು.

ಶಾಸಕ ಚಿಕ್ಕಪ್ಪ ನಾರಾ ಪ್ರತಾಪ ರೆಡ್ಡಿ ಅವರು ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಲು ಸಿದ್ಧತೆಯಲ್ಲಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ಅವರಿಗೆ ಟಿಕೆಟ್ ನೀಡದಿದ್ದರಿಂದ ಪಕ್ಷೇತರರಾಗಿ‌ ಸ್ಪರ್ಧಿಸುತ್ತಿದ್ದಾರೆ‌. ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋತಿದ್ದರು.

ಇದನ್ನೂ ಓದಿ: ED raid : ಮಾಲೂರು ಶಾಸಕ ನಂಜೇಗೌಡ, ಸಚಿವರ ಆಪ್ತರಿಗೆ ಇ.ಡಿ ಶಾಕ್‌; ಮುಳ್ಳಾಯ್ತೇ ಕೋಚಿಮುಲ್‌ ಹಗರಣ

ಬೆಂಗಳೂರಿನಲ್ಲೂ ಭರತ್‌ ರೆಡ್ಡಿ ನಿವಾಸಗಳ ಮೇಲೆ ಇ.ಡಿ ದಾಳಿ

ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮೇಲೆ ಬೆಂಗಳೂರಿನಲ್ಲೂ ಇ.ಡಿ ದಾಳಿ ನಡೆದಿದೆ. ಬೆಂಗಳೂರಿನ ಇಂದಿರಾ ನಗರ ಬಿಡಿಎ ಕಾಂಪ್ಲೆಕ್ಸ್ ಬಳಿಯಿರುವ ಮನೆಗೆ ಎರಡು ಇನ್ನೋವಾ ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

14 ಅಧಿಕಾರಿಗಳು ಮನೆಗೆ ಲಗ್ಗೆ ಇಟ್ಟಿದ್ದು, ಭದ್ರತೆಗಾಗಿ ಸಿಆರ್ ಪಿ ಎಫ್ ಸಿಬ್ಬಂದಿಯನ್ನು ಕರೆ ತಂದಿದ್ದಾರೆ. ಬೆಳಗ್ಗೆ ಐದು ಗಂಟೆಗೆ ಮನೆ ಬಳಿ ಬಂದಿರುವ ಅಧಿಕಾರಿಗಳು ಆರು ಗಂಟೆಗೆ ಮನೆ ಒಳಗೆ ಹೋಗಿ ಪರಿಶೀಲನೆ ಶುರು ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲಾಗಿದ್ದಾರೆ. ನಾಳೆ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Rain
Koo

ಬೆಂಗಳೂರು: ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ನಿರಂತರ ಮಳೆಗೆ (Karnataka Rain) ಜನರು ಕಂಗಲಾಗಿದ್ದಾರೆ. ಹೀಗಾಗಿ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ (School Holidays) ನಾಳೆ (ಬುಧವಾರ) ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಡಿಸಿ ಜಗದೀಶ್ ಮಾಹಿತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ಒಂದು ದಿನ ರಜೆ ನೀಡಲು ನಿರ್ಧಾರ ಮಾಡಲಾಗಿದೆ. ಮಳೆಯ ಸ್ಥಿತಿಗತಿ ನೋಡಿಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಎರಡೂ ಶಾಲಾ ಕಾಲೇಜಿಗೆ ರಜೆ ನೀಡಲು ನಿರ್ಧಾರ ಮಾಡಲಾಗಿದೆ.

ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ. ವೈಟ್ ಫೀಲ್ಡ್‌, ಮಾರತಹಳ್ಳಿ, ಸರ್ಜಾಪುರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ಡ್ರೈನೇಜ್ ಪೈಪ್ ಹೊಡೆದು ರಸ್ತೆ ಮಧ್ಯೆ ಮೋರಿ ನೀರು ಹಾರಿಯುತ್ತಿದೆ. ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಇತ್ತ ಹಲಸೂರು ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಗುಪ್ತ ಲೇಔಟ್‌ನಲ್ಲಿ ಮ್ಯಾನ್ ಹೋಲ್ ಉಕ್ಕಿ ಹರಿದಿದೆ. ಭಾರಿ ಮಳೆಗೆ ಬನಶಂಕರಿ ಸಿಂಡಿಕೇಟ್ ಕಾಲೋನಿ ಸಮೀಪ ಮರವೊಂದು ನೆಲಕ್ಕೆ ಉರುಳಿದೆ. ಅದೃಷ್ಟವಶಾತ್‌ ಮಳೆ ಕಾರಣಕ್ಕೆ ಜನರ ಓಡಾಟ ಇರಲಿಲ್ಲ ಹೀಗಾಗಿ ಅನಾಹುತ ಸಂಭವಿಸಿಲ್ಲ.

ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ

ಹಂಪಿ ನಗರ 26 ಮಿ.ಮೀ, ಕೆಂಗೇರಿ 25.5 ಮಿ.ಮೀ, ಮಾರುತಿ ಮಂದಿರ 25 ಮಿ.ಮೀ, ದೊರೆಸಾನಿಪಾಳ್ಯ 21.5 ಮಿ.ಮೀ, ರಾಜರಾಜೇಶ್ವರಿ ನಗರ 19.5 ಮಿ.ಮೀ, ನಾಯಂಡಹಳ್ಳಿ 17 ಮಿ.ಮೀ, ನಂದಿನಿ ಲೇಔಟ್​​ 16.5 ಮಿ.ಮೀ, ಬಿಟಿಎಂ ಲೇಔಟ್​​ 16.5 ಮಿ.ಮೀ ಮಳೆಯಾಗಿದೆ.

ಡಿಸಿ ಕಚೇರಿ ಆವರಣದಲ್ಲಿರುವ ಹೋಟೆಲ್‌ಗೆ ಮಳೆ ನೀರು ನುಗ್ಗಿದ್ದರೆ, ಗುಟ್ಟಹಳ್ಳಿ ಸರ್ಕಲ್ ಬಳಿ ಚರಂಡಿ ನೀರು ತುಂಬಿ ರಸ್ತೆ ಮೇಲೆ ಹರಿಯುತ್ತಿದೆ. ಮಾನ್ಯತಾ ಟೆಕ್ ಪಾರ್ಕ್‌ನ ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ಹರಿಯುತ್ತಿದೆ. ಟೆಕ್ ಪಾರ್ಕ್‌ನ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ಕೋಟಿ ಕೋಟಿ ಬೆಲೆ ಬಾಳುವ ಕಾರುಗಳು ನೀರಿನಲ್ಲಿ ಮುಳುಗಡೆಯಾಗಿದೆ.

ಬೆಳ್ಳಂದೂರು ಲೇಕ್ ರಸ್ತೆಯಲ್ಲಿ ಕೆಸರು ಮಯವಾಗಿತ್ತು. ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗಿದ್ದು, ಕೆಸರಿನ ರಸ್ತೆಯಲ್ಲಿ ಸಂಚಾರಿಸಲು ವಾಹನ ಸವಾರರು ಪರದಾಡಿದರು. ಸುತ್ತ 2 ಕಿಲೋ ಮೀಟರ್ ಸಂಚಾರ ಸಾಧ್ಯ ಆಗದೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಳಿಗ್ಗೆಯಿಂದ ಹಲವು ವಾಹನಗಳು ಕೆಟ್ಟು ನಿಂತು ಫಜೀತಿ ಉಂಟಾಗಿತ್ತು. ಆಳವಾದ ಗುಂಡಿ ಭಾಗಕ್ಕೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ರಸ್ತೆಯಲ್ಲಿ 4 ಅಡಿಯಷ್ಟು ನೀರು ನಿಂತಿತ್ತು. ಕೆ.ಆರ್ ವಿಧಾನಸಭಾ ಕ್ಷೇತ್ರದ ವಡ್ಡರಪಾಳ್ಯದ ಸಾಯಿ ಲೇಔಟ್‌ಗೆ ಮಳೆ ನೀರು ನುಗ್ಗಿದೆ. ಮಳೆ ನೀರಿನಿಂದ ಮನೆಗಳು ಜಲಾವೃತಗೊಂಡಿದ್ದವು.

karnataka Rain
karnataka Rain

ಬೆಂಗಳೂರಿನ ಶಿವಾಜಿನಗರದ, ಬ್ರಹ್ಮಕುಮಾರಿ ವೃತ್ತ , ಸೆಪ್ಪಿಂಗ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ರಸ್ತೆಯಲ್ಲಿ ಮೊಣಕಾಲುದ್ದ ನೀರು ತುಂಬಿದ್ದು, ಅಂಗಡಿ ಮುಂಗಟ್ಟುಗಳಿಗೆ ದೇವಸ್ಥಾನಗಳಿಗೆ ನೀರು ನುಗ್ಗಿದೆ. ವಾಹನಗಳ ಇಂಜಿನ್‌ಗೆ ನೀರು ನುಗ್ಗಿ ವಾಹನಗಳು ಕೆಟ್ಟೋ ರಸ್ತೆಯಲ್ಲೇ ನಿಂತು ಹೋಗುತ್ತಿವೆ. ಪಾಟರಿ ಟೌನ್ ಬಳಿಯ ಗಾಂಧಿ ಗ್ರಾಮದ ರಸ್ತೆಯಿಂದ ಟ್ಯಾನಿರೋಡ್‌ಗೆ ಸಂಪರ್ಕಿಸುವ ರಸ್ತೆ ಕರೆಯಂತಾಗಿದೆ. ಯಲಹಂಕದಲ್ಲಿರುವ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್ ಮತ್ತೆ ಜಲಾವೃತಗೊಂಡಿದೆ.

Continue Reading

ಬೆಂಗಳೂರು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ರ ಬೇಲ್‌ ಕನಸು ನಚ್ಚು ನೂರಾಗಿದೆ. ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ 9 ಕಾರಣಗಳನ್ನು ಕೊಟ್ಟಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌ ಆಗಿರುವ ನಟ ದರ್ಶನ್‌‌ (Actor Darshan) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನುನಿನ್ನೆ ಸೋಮವಾರ ಕೋರ್ಟ್‌ ವಜಾಗೊಳಿಸಿತು. ದರ್ಶನ್‌ಗೆ ಜಾಮೀನು ನೀಡಲು ನಿರಾಕರಿಸಿದ್ದಕ್ಕೆ ಕೋರ್ಟ್‌ 9 ಕಾರಣಗಳನ್ನು ನೀಡಿದೆ.

ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಲು ಪ್ರಮುಖ ಕಾರಣಗಳು!

  • -ಐ ವಿಟ್ನೆಸ್ ಹೇಳಿಕೆಗಳು ಕಾನೂನು ಪ್ರಕಾರವಾಗಿವೆ
  • -ರೇಣುಕಾಸ್ವಾಮಿ ಮೃತದೇಹದ ಗುರುತು ಪತ್ತೆ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ತಡವಾಗಿಲ್ಲ.
  • -ದರ್ಶನ್ ಟ್ರಯಲ್ ಆರಂಭವಾದ ಬಳಿಕ ಆರೋಪಿಗಳ ಹೇಳಿಕೆಯ ಬಗ್ಗೆ ತಿಳಿಯುತ್ತದೆ.
  • -ದರ್ಶನ್ ಕ್ರಾಸ್ ಎಕ್ಸಾಮಿನ್ ಮಾಡಿದಾಗ ರಿಕವರಿಯ ಅಂಶಗಳ ಬಗ್ಗೆ ತಿಳಿಯುತ್ತದೆ
  • -ಸಿಡಿಆರ್ ನಲ್ಲಿ ಎ೨ ಆರೋಪಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿರೋದು ಸ್ಪಷ್ಟವಾಗಿದೆ
  • -ಈ ಹಂತದಲ್ಲಿ ಸಾಕ್ಷಿಗಳ ಹೇಳಿಕೆ ತಡವಾಗಿದೆ ಅನ್ನೋದಕ್ಕೆ ಪುರಾವೆಗಳಿಲ್ಲ
  • -ಡಿ ಎನ್ ಎ ಟೆಸ್ಟ್‌ ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿ ಇದ್ದ ಬಗ್ಗೆ ಸ್ಪಷ್ಟಪಡಿಸಿದೆ
  • -ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿ ರೇಣುಕಾಸ್ವಾಮಿ ಯ ಕೊಲೆಯ ಕ್ರೂರತೆ ಬಗ್ಗೆ ತಿಳಿಸಿದೆ
  • -ಸಮಾಜದಲ್ಲಿ ದರ್ಶನ್ ರೋಲ್ ಮಾಡೆಲ್ ಆಗಿದ್ದು, ಸಾಕಷ್ಟು ಜನ್ರು ಪ್ರಭಾವಿತರಾಗಿರ್ತಾರೆ

ಹತ್ಯೆ ಕೇಸ್‌ ಆರೋಪಿ ದರ್ಶನ್‌ಗೆ ಮತ್ತಷ್ಟು ದಿನ ಜೈಲುವಾಸವೇ ಫಿಕ್ಸ್ ಆಗಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ಆರೋಪಿ ದರ್ಶನ್‌ಗೆ ನ್ಯಾಯಾಲಯ ಬಿಗ್‌ ಶಾಕ್‌ ನೀಡಿದೆ. ಸ್ಯಾಂಡಲ್‌‌ವುಡ್ ಜಗ್ಗುದಾದಾನ ಬೇಲ್‌ ಅರ್ಜಿ ವಜಾಗೊಳಿಸಿರುವ ಕೋರ್ಟ್‌, ಜಾಮೀನು ನಿರಾಕರಣೆಗೆ ಹಲವು ಕಾರಣ ನೀಡಿದೆ. ವಿಸ್ತಾರ ನ್ಯೂಸ್‌ಗೆ ಬೇಲ್‌ ರಿಜೆಕ್ಟ್‌‌ ಬಗ್ಗೆ ಕೋರ್ಟ್‌ ಉಲ್ಲೇಖಿಸಿದ ಅಂಶಗಳ ಪಿನ್‌ ಟು ಪಿನ್‌ ಮಾಹಿತಿ ಲಭ್ಯವಾಗಿದೆ. ಸದ್ಯ ಜೈಲಲ್ಲಿರುವ ದರ್ಶನ್‌ಗೆ ಜಾಮೀನು ಅನ್ನೋದು ಮರೀಚಿಕೆ ಆಗಿದೆ. ನ್ಯಾಯಾಲಯ ಉಲ್ಲೇಖಿಸಿದ ಅಂಶಗಳ ನೋಡಾದಾದರೆ, ಕೊಲೆ ಕೇಸಲ್ಲಿ ಐ ವಿಟ್ನೆಸ್ ಹೇಳಿಕೆಗಳು ಕಾನೂನು ಪ್ರಕಾರವಾಗಿವೆ ಅಂತಾ ಆದೇಶದಲ್ಲಿ ತಿಳಿಸಲಾಗಿದೆ.

ದರ್ಶನ್‌ ಪರ ವಕೀಲರ ಆರೋಪದಂತೆ ರೇಣುಕಾಸ್ವಾಮಿ ಮೃತದೇಹ ಗುರುತಿನ ಬಳಿಕ ಮರಣೋತ್ತರ ಪರೀಕ್ಷೆ ತಡವಾಗಿಲ್ಲ, ದರ್ಶನ್ ಟ್ರಯಲ್ ಆರಂಭ ಬಳಿಕ ಆರೋಪಿಗಳ ಹೇಳಿಕೆ ತಿಳಿಯುತ್ತದೆ. ದರ್ಶನ್ ಕ್ರಾಸ್ ಎಕ್ಸಾಮ್‌‌‌‌‌‌ ಮಾಡಿದಾಗ ರಿಕವರಿ ಅಂಶ ತಿಳಿಯುತ್ತದೆ. ಸಿಡಿಆರ್‌ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿರೋದು ಸ್ಪಷ್ಟವಾಗಿದೆ ಅಂತಾ ಬೇಲ್‌ ಅರ್ಜಿ ವಜಾಗೊಳಿಸಿದೆ. ಮಾತ್ರವಲ್ಲ ಕೊಲೆ ಕೇಸಲ್ಲಿ ಸಾಕ್ಷಿಗಳ ಹೇಳಿಕೆ ತಡವಾಗಿದೆ ಅನ್ನೋದಕ್ಕೆ ಪುರಾವೆಗಳಿಲ್ಲ, DNA ಟೆಸ್ಟ್‌‌ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿ ಇದ್ದ ಬಗ್ಗೆ ಸ್ಪಷ್ಟಪಡಿಸಿದೆ. ಪೋಸ್ಟ್‌‌ಮಾರ್ಟಂ ವರದಿ ರೇಣುಕಾಸ್ವಾಮಿ ಕೊಲೆಯ ಕ್ರೂರತೆ ತಿಳಿಸಿದೆ ಎಂದಿರುವ ಕೋರ್ಟ್‌, ದರ್ಶನ್‌ಗೆ ಜಾಮೀನು ನೀಡಲು ನಿರಾಕರಿಸಿದ್ದು, ಬೇಲ್ ಅರ್ಜಿ ವಜಾಗೊಳಿಸಿದೆ.

ಹೈಕೋರ್ಟ್‌ನತ್ತ ದಚ್ಚು-ಪವಿ ಬೇಲ್‌ ಅರ್ಜಿ?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದರ್ಶನ್‌, ಜಾಮೀನು ಪಡೆದು ಹೊರಬರುವ ದಿನಕ್ಕಾಗಿ ಕಾಯುತ್ತಾ ಇದ್ದರು. ಆದರೆ ಸ್ಯಾಂಡಲ್‌ವುಡ್ ಕಾಟೇರನ ಬೇಲ್‌‌ ಕನಸು ನುಚ್ಚು ನೂರಾಯಿತು. ಕಳೆದ ವಾರ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್‌ ಕೋರ್ಟ್‌ ಪೂರ್ಣಗೊಳಿಸಿತ್ತು. ನಿನ್ನೆ ಬೇಲ್ ಆದೇಶ ಹೊರಬಿದ್ದಿದ್ದು, ದರ್ಶನ್​ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರ ತಂಡ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಜ್ಜಾಗಿದ್ದಾರೆ.

ಸೆಷನ್‌ ಕೋರ್ಟ್‌ನ ಆದೇಶ ಪ್ರತಿ ಸೇರಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲು ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. ಮತ್ತೊಂದೆಡೆ ಸದ್ಯಕ್ಕೆ ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ, ದರ್ಶನ್ ಬೆಂಗಳೂರಿಗೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಈಗಾಗಲೇ ದರ್ಶನ್ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಲು ಪ್ಲ್ಯಾನ್​ ನಡೆದಿದೆ.

ದರ್ಶನ್ ಕಳೆದ ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ನಡೆಯಲು ಕೂಡ ದರ್ಶನ್‌ಗೆ ಕಷ್ಟ ಆಗುತ್ತಿದೆ ಎನ್ನಲಾಗಿದೆ. ಅನಾರೋಗ್ಯದ ನೆಪದಲ್ಲಾದರೂ ಚಾಲೆಂಜಿಂಗ್‌ ಸ್ಟಾರ್‌, ಬೆಂಗಳೂರು ಜೈಲು ಸೇರುವ ಯತ್ನ ನಡೆಸ್ತಿದ್ದಾರೆ ಎನ್ನಲಾಗ್ತಿದೆ. ಈ ಮಧ್ಯೆ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ಮತ್ತೊಂದೆಡೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡಗೂ ಬೇಲ್‌ ಸಿಕ್ಕಿಲ್ಲ. ಹೀಗಾಗಿ ಜೈಲುಹಕ್ಕಿ, ದರ್ಶನ್ ಗೆಳತಿ ಪವಿತ್ರಾ ಕೂಡ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದ್ದಾರೆ. ಪವಿತ್ರಾ ಗೌಡ ಪರ ವಕೀಲರ ತಂಡ, ಬೇಲ್‌‌ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಈವರೆಗೆ ಐವರಿಗೆ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳಿಗೆ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಹತ್ಯೆ ಕೇಸ್‌ನ ಎ8 ರವಿಶಂಕರ್ ಹಾಗೂ ಎ13 ದೀಪಕ್‌ಗೆ ಬೇಲ್ ನೀಡಿದ ಕೋರ್ಟ್‌ ಆದೇಶಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ ಐವರಿಗೆ ಜಾಮೀನು ಸಿಕ್ಕಿದ್ದು, ಇದೀಗ ಮತ್ತಿಬ್ಬರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮರ್ಡರ್‌ ಕೇಸ್‌ನ ಎ8 ಆಗಿರುವ ರವಿಶಂಕರ್ ಕ್ಯಾಬ್‌ವೊಂದರ ಚಾಲಕನಾಗಿರುವ ಹಿನ್ನೆಲೆ ಚಿತ್ರದುರ್ಗದಿಂದ ಬೆಂಗಳೂರಿಗೆ ಸ್ವಾಮಿಯನ್ನು ಕರೆತಂದಿದ್ದ ಅಷ್ಟೇ ಎಂದು ವಕೀಲರು ವಾದ ಮಾಡಿದ್ದು, ಹತ್ಯೆ ಕೇಸಲ್ಲಿ ರವಿಶಂಕರ್ ಒಳಸಂಚು ಮೇಲ್ನೋಟಕ್ಕೆ ಕಾಣದ ಹಿನ್ನೆಲೆ ಬೇಲ್ ನೀಡುವಂತ ಮನವಿ ಕೂಡ ಮಾಡಲಾಗಿತ್ತು.

ಮತ್ತೊಂದೆಡೆ ಎ13 ದೀಪಕ್ ವಿರುದ್ಧ ಸಾಕ್ಷ್ಯ ನಾಶ ಮಾಡಿರುವ ಆರೋಪ ಕೇಳಿ ಬಂದಿತ್ತು. ಆದರೆ ದೀಪಕ್‌‌ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದಿರುವ ವಕೀಲರು, ಜಾಮೀನು ಕೋರಿ ಮನವಿ ಮಾಡಿದ್ದು, ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಕೂಡ ಆಕ್ಷೇಪ ವ್ಯಕ್ತಪಡಿಸದ ಹಿನ್ನೆಲೆ ಜಾಮೀನು ಸಿಕ್ಕಿದ್ದು, ಇಬ್ಬರಿಗೂ ರಿಲೀಫ್ ಸಿಕ್ಕಿದೆ. ಇಬ್ಬರು ಆರೋಪಿಗಳ ವಿರುದ್ಧವೂ ಜಾಮೀನು ನೀಡಬಹುದಾದ ಪ್ರಕರಣ ಹಿನ್ನೆಲೆ ನ್ಯಾಯಾಲಯ ಬೇಲ್ ನೀಡಿದೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಇಬ್ಬರೂ ರಿಲೀಸ್ ಆಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೃಹತ್‌ ಮರ ಧರೆಗುರುಳಿದ್ದು, ಕಾರು ಜಖಂಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ (Karnataka Rain) ಸುರಿಯುತ್ತಿರುವ ಕಾರಣ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ವರುಣ ಅಡ್ಡಿಯಾಗಿದ್ದಾನೆ. ಶೇಷಾದ್ರಿಪುರಂ, ಆರ್ ಆರ್ ನಗರ, ರಾಜಾಜಿನಗರ, ಗಾಂಧಿನಗರ, ಶಾಂತಿ ನಗರ, ಮೆಜೆಸ್ಟಿಕ್‌, ಕೆ.ಆರ್‌ ಮಾರುಕಟ್ಟೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ.

Karnataka Rain
karnataka Rain

ಕೆಲಸ- ಕಾಲೇಜುಗಳಿಗೆ ಹೋಗುವವರಿಗೆ ಮಳೆರಾಯ ಶಾಕ್‌ ಕೊಟ್ಟಿದ್ದ. ಆಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನು ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Rain
karnataka Rain

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಹಾಗೂ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಸೇರಿದಂತೆ ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮೇಲಿನ ಜಿಲ್ಲೆಗಳಿಗೆ ಮಂಗಳವಾರ ಹಾಗೂ ಬುಧವಾರ ಯೆಲ್ಲೋ ಅಲರ್ಟ್ ಹಾಗೂ ಅಕ್ಟೋಬರ್ 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

karnataka Rain
karnataka Rain

ಮಳೆಗೆ ಧರೆಗುರುಳಿದ ಮರ, ಅಂಡರ್‌ಪಾಸ್‌ ಜಲಾವೃತ

ರಾತ್ರಿ ಶುರುವಾದ ಮಳೆಯು ಬೆಳಗಾದರೂ ಬಿಟ್ಟಿಲ್ಲ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮೆಜೆಸ್ಟಿಕ್ ರೈಲ್ವೆ ಅಂಡರ್ ಪಾಸ್‌ ಜಲಾವೃತಗೊಂಡಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಿದರು. ಬೆಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಎಚ್‌ಎಂಟಿ (HMT)ಲೇಔಟ್ ನಲ್ಲಿ ಬೃಹದಾಕಾರದ ಮರ ಧರೆಗುರುಳಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಮರ ಬಿದ್ದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. 3 ತಿಂಗಳ ಹಿಂದೆ ಮರ ತೆರವು ಮಾಡುವಂತೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಆನೇಕಲ್, ಬನ್ನೇರುಘಟ್ಟ, ಅತ್ತಿಬೆಲೆ, ಹೊಸೂರು ಸೇರಿದಂತೆ ಹಲವೆಡೆ ಮಳೆಯಾಗಿದ್ದು, ರಸ್ತೆಯಲ್ಲಿ ಜನರು ಛತ್ರಿ ಹಿಡಿದು ಓಡಾಡುತ್ತಿರುವ ದೃಶ್ಯ ಕಂಡು ಬಂತು. ತಗ್ಗು ಪ್ರದೇಶ ಮತ್ತು ರಸ್ತೆಗಳಲ್ಲಿ ಮಳೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು.

ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಬೆಳಗ್ಗೆಯಿಂದ ಸುರಿದ ಮಹಾ ಮಳೆಗೆ ಫ್ರೇಜರ್ ಟೌನ್ ಬಳಿ ಇರುವ ಎನ್ ಸಿ ಕಾಲೋನಿಯಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಎನ್ ಸಿ ಕಾಲೋನಿ ಸಂಪೂರ್ಣ ಜಲಾವೃತಗೊಂಡಿದೆ. ರಾಜಕಾಲುವೆ ಉಕ್ಕಿ ಹರಿದು ಎನ್ ಸಿ ಕಾಲೋನಿಗೆ ಕೊಚ್ಚೆ ನೀರು ನುಗ್ಗಿದೆ. ನೀರು ತೆರವು ಮಾಡಲು ಸ್ಥಳೀಯ ನಿವಾಸಿಗಳ ಪರದಾಟ ಅನುಭವಿಸುತ್ತಿದ್ದಾರೆ. ರಾಜಕಾಲುವೆಗೆ ಅಂಟಿಕೊಂಡೇ ಇರುವ ಎನ್ ಸಿ ಕಾಲೋನಿ ಬಡಾವಣೆ ಇದಾಗಿದೆ. ಇನ್ನೂ ಪಣತ್ತೂರು ಅಂಡರ್ ಪಾಸ್ ನೀರು ನಿಂತಿದ್ದರಿಂದ ಸವಾರರು, ಚಾಲಕರು ಸರ್ಕಸ್‌ ಮಾಡಬೇಕಾಯಿತು

ತುಮಕೂರು, ಶಿವಮೊಗ್ಗದಲ್ಲೂ ಮಳೆ ಅಬ್ಬರ

ಕಲ್ಪತರು ನಾಡು ತುಮಕೂರಿನಲ್ಲೂ ವರುಣನ ಅಬ್ಬರ ಜೋರಾಗಿದೆ. ರಾತ್ರಿಯಿಂದಲೂ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೈನಂದಿನ ಕೆಲಸಕ್ಕೆ ಹೋಗುವವರ ಪರದಾಡಿದರು. ಈಗಾಗಲೇ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಲೆನಾಡು ಶಿವಮೊಗ್ಗದಲ್ಲೂ ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರದಿಂದ ಮತ್ತೆ ನದಿ, ಹಳ್ಳಕೊಳ್ಳಗಳು ಜೀವಕಳೆ ಪಡೆದುಕೊಂಡಿವೆ.

ಬಿರುಗಾಳಿ ಸಹಿತ ಭಾರಿ ಮಳೆಗೆ ನೆಲಕ್ಕುರುಳಿದ ಟೆಂಟ್‌

ಬಿರುಗಾಳಿ ಸಹಿತ ಭಾರೀ ಮಳೆಗೆ ಡ್ರಾಮಾ ಟೆಂಟ್ ನೆಲಕ್ಕುರುಳಿದೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಘಟನೆ ನಡೆದಿದೆ. ಚಿತ್ತರಗಿಯ ಶ್ರೀಕುಮಾರ ವಿಜಯ ನಾಟಕ ಸಂಘದ ಬೃಹತ್ ಗಾತ್ರದ ಟೆಂಟ್‌ಗೆ ಹಾನಿಯಾಗಿದೆ. ಪಟ್ಟಣದ‌ ಅನ್ನದಾನೀಶ್ವರ ಮಠದ ಜಾಗೆಯಲ್ಲಿ ಹಾಕಲಾಗಿದ್ದ ನಾಟಕದ ಬೃಹತ್ ರಂಗಮಂದಿರ‌‌ ಸಜ್ಜಿಕೆ, ಬಿರುಗಾಳಿ ಸಹಿತ ಮಳೆ ಬಂದ ಹಿನ್ನೆಲೆಯಲ್ಲಿ ರಂಗಮಂದಿರ ಧರೆಗುರುಳಿದೆ. ಅದೃಷ್ಟವಶಾತ್ ಯಾವುದೇ‌ ಪ್ರಾಣಹಾನಿ ಇಲ್ಲ. ಕಲೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಕಲಾವಿದರ ಬದುಕು ಬೀದಿಗೆ ಬಿದ್ದಿದೆ. ನಾಟಕದ ಬ್ಯಾಗ್ರೌಂಡ್‌ ಸೀನ್ರಿ, ಸೌಂಡ್ ಸಿಸ್ಟಮ್, ಲೈಟಿಂಗ್, ಕುರ್ಚಿ ಸೇರಿದಂತೆ 12 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ. ಒಂದು ಕಾರು, ಎರಡು ಬೈಕ್‌ಗಳು ಜಖಂಗೊಂಡಿದೆ. ಸಹಾಯಹಸ್ತದ ನೀರಿಕ್ಷೆಯಲ್ಲಿ ರಂಗ ಕಲಾವಿದರು ಇದ್ದಾರೆ.

ದಾವಣಗೆರೆಯಲ್ಲಿ ಮಲೆನಾಡು ವಾತಾವರಣ

ದಾವಣಗೆರೆ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆಯಿಂದಾಗಿ ಕಳೆದ ಒಂದು ವಾರದಿಂದ ಜಿಲ್ಲೆಯ ಬಹುತೇಕ ಕಡೆ ಮಲೆನಾಡ ವಾತಾವರಣ ನಿರ್ಮಾಣವಾಗಿದೆ. ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನರು ಮನೆ ಬಿಟ್ಟು ಹೊರಗೆ ಬಾರದಂತಾಗಿದೆ.ದಾವಣಗೆರೆ ತಾಲೂಕಿನ ಅಣ್ಣಾಪುರ, ನರಗನಹಳ್ಳಿ, ಹೊನ್ನಾಯಕನಹಳ್ಳಿ , ಸುಲ್ತಾನಿಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ನಿರಂತರ ಮಳೆಯಾಗಿದೆ. ಮಳೆಯಿಂದ ಅಡಿಕೆ ತೆಂಗಿನ ತೋಟಗಳ ರೈತರಲ್ಲಿ ಸಂತಸ ಮೂಡಿದೆ. ಜಿಲ್ಲೆಯ ಬಹುತೇಕ ನಡೆ ಕೆರೆ ಕಟ್ಟೆಗಳು ಭರ್ತಿಯಾಗಿದೆ. ಜಿಟಿ ಜಿಟಿ ಮಳೆಗೆ ದಿನ ನಿತ್ಯ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಿದೆ. ಕಲಬುರಗಿಯಲ್ಲಿ ಮತ್ತೆ ವರುಣನ ಆಗಮನವಾಗಿದ್ದು, ಒಂದು ಗಂಟೆಯಿಂದ ಸುರಿಯುತ್ತಿದೆ. ಭಾರಿ ಗುಡುಗು ಸಮೇತ ಧಾರಾಕಾರ ಮಳೆಯಾಗುತ್ತಿದೆ. ಎರಡು ದಿನದಿಂದ ಬಿಸಿಲಿಗೆ ಬೆಂದಿದ್ದ ಕಲಬುರಗಿ ಜನತೆಗೆ ವರುಣ ತಂಪೆರದಿದ್ದಾನೆ.

ಸತತ ಮಳೆಗೆ ಬತ್ತಿದ ಕೊಳವೆಗಳಲ್ಲಿ ಚಿಮ್ಮುತ್ತಿರುವ ನೀರಿನ ಸೆಲೆ

ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾವೇರಿ ಜಿಲ್ಲೆಯ ಹಲವೆಡೆ ಬತ್ತಿದ ಕೊಳವೆಗಳಲ್ಲಿ ನೀರಿನ ಸೆಲೆ ಚಿಮ್ಮುತ್ತಿದೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರ ಗ್ರಾಮದಲ್ಲಿ ಬೊರ್ ವೆಲ್ನಿಂದ ನೀರು ಚಿಮ್ಮುತ್ತಿದೆ. ಚೌಡಯ್ಯಧಾನಪುರ ಗ್ರಾಮದ ಸಿದ್ದಪ್ಪ ದೀಪಾವಳಿ ಎಂಬುವ ರೈತರಿಗೆ ಸೇರಿದ ಬೋರ ವೆಲ್ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಜಿಟಿ ಜಿಟಿ ಮಳೆಗೆ ಬೆಂಗಳೂರು ಕೂಲ್‌ ಕೂಲ್‌; ಮುಂದಿನ 4 ದಿನಗಳು ವರ್ಷಧಾರೆ

Karnataka Rain : ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯ ಸಿಂಚನವಾಗಲಿದೆ. ಸೋಮವಾರ ಬೆಳಗಿನಂದಲೇ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ವಾತಾವರಣ ಕೂಲ್‌ ಆಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದ್ದು, ವಾತಾವರಣ ಕೂಲ್‌ ಆಗಿದೆ. ಮಲ್ಲೇಶ್ವರಂ, ಶಾಂತಿನಗರ, ಶಿವಾಜಿನಗರ, ಹೆಬ್ಬಾಳ, ಜಯನಗರ ಸೇರಿದಂತೆ ನಸುಕಿನ ಜಾವದಿಂದ ಮಳೆ ಶುರುವಾಗಿದೆ. ಹಲವೆಡೆ ಮಂಜಿ ಹೊದಿಕೆ ಇದ್ದು, ದಿನವಿಡಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಮುಂದಿನ ನಾಲ್ಕು ದಿನ ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

Road Accident in chikkmagaluru
Road Accident in chikkmagaluru

ಮಳೆಗೆ ರಸ್ತೆ ತಿರುವಿನಲ್ಲಿ ಟಿಟಿ ವಾಹನ ಪಲ್ಟಿ

ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಘಟನೆ ನಡೆದಿದೆ. ಟಿಟಿ ವಾಹನದಲ್ಲಿ ಬೆಂಗಳೂರಿನಿಂದ ಹೊರನಾಡಿಗೆ ಬಂದಿದ್ದರು. ಅನ್ನಪೂರ್ಣೇಶ್ವರಿ ದರ್ಶನ ಮುಗಿಸಿ ಹೊರಟಾಗ ಅವಘಡ ಸಂಭವಿಸಿದೆ. 15 ಜನ ಪ್ರಯಾಣಿಕರಲ್ಲಿ 9 ಜನರಿಗೆ ಗಾಯವಾಗಿದ್ದು ಕಳಸ, ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಳೆ ಹಾಗೂ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರದಲ್ಲೂ ಮಳೆಯಾಟ

ಬಂಗಾಳ ಕೊಲ್ಲಿ ಸೈಕ್ಲೋನ್ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ. ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ, ಆಂಧ್ರಪ್ರದೇಶದ ಗಡಿಗೆ ಹೊಂದಿರುವ ಕೋಲಾರದಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು, ಮಳೆ ಹೆಚ್ಚಾದರೆ ತೋಟಗಾರಿಕ ಬೆಳೆಗಳಾದ ಹೂ , ಬಿನ್ಸ್ ,ಟೊಮ್ಯಾಟೊ, ಜೋಳಕ್ಕೆ ಹಾನಿಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gosavi samaj lathicharged Sri Ram Sene calls for bandh in Lakshmeshwara town on October 19
ಗದಗ9 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು12 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ12 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು14 ಗಂಟೆಗಳು ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ15 ಗಂಟೆಗಳು ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ15 ಗಂಟೆಗಳು ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ2 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು2 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Karnataka Rain
ಮಳೆ3 ದಿನಗಳು ago

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌