Forced Conversion : ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್‌ ವಾಶ್‌; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್‌ - Vistara News

ಬಳ್ಳಾರಿ

Forced Conversion : ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್‌ ವಾಶ್‌; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್‌

Forced Conversion : ಕೇಸರಿ ಧ್ವಜ ಹಿಡಿದು ಮಂತ್ರಾಲಯಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತರಿಗೆ ಇಬ್ಬರು ವ್ಯಕ್ತಿಗಳು ಬ್ರೈನ್‌ ವಾಶ್‌ ಮಾಡಿ ಮತಾಂತರಕ್ಕೆ ಯತ್ನಿಸಿದ್ದಾರೆ. ಮತಾಂತರಕ್ಕೆ ಯತ್ನಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Forced Conversion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರ (Forced Conversion) ಆಗುವಂತೆ ಒತ್ತಾಯಿಸಲಾಗಿದೆ. ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಳ್ಳಾರಿಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಕಳೆದ ಜುಲೈ 18 ರಂದು ಘಟನೆ ನಡೆದಿದೆ.

ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44) ಹಾಗೂ ಸಾಯಿ ಬಾಬಾ (24) ಎಂಬುವವರು ಮತಾಂತರಕ್ಕೆ ಯತ್ನಿಸಿದ್ದರು ಎಂಬ ಆರೋಪವಿದೆ.

ಕೇಸರಿ ಧ್ವಜ ಹಿಡಿದುಕೊಂಡು ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದ ಭಕ್ತರನ್ನು ನಿಲ್ಲಿಸಿ, ಕುರಾನ್ ಹಾಗೂ ಮುಸ್ಲಿಂ ಧರ್ಮ ಶ್ರೇಷ್ಠ ಎನ್ನುವಂತೆ ಹೇಳಿ ಮತಾಂತರಕ್ಕೆ ಯತ್ನಿಸಿದ್ದಾರೆ. ಸದ್ಯ ಗಾದಿಲಿಂಗಪ್ಪ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತಾಂತರ ಮಾಡಲು ಪ್ರಯತ್ನ ಮಾಡಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ತೆಕ್ಕಲಕೋಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ತೆಕ್ಕಲಕೋಟೆ ಠಾಣೆಯಲ್ಲಿ ವಿಡಿಯೋ ದಾಖಲೆ ಆಧಾರದ ಮೇಲೆ ಮತಾಂತರ ಯತ್ನದ ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ. ಆದರೆ ಯಾತ್ರಾತ್ರಿಗಳು ಯಾರೆಂದು ತಿಳಿದು ಬಂದಿಲ್ಲ.

ಇದನ್ನೂ ಓದಿ: Fraud Case : ಮಸಾಜ್‌ ಥೆರಪಿಸ್ಟ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿ ಲಕ್ಷ ಲೂಟಿ ಮಾಡಿದ ನಕಲಿ ಪೊಲೀಸ್‌

ರಿಮಾಂಡ್‌ ಹೋಮ್‌ನಿಂದಲೇ ಮಧ್ಯರಾತ್ರಿ 17 ವರ್ಷದ ಬಾಲಕಿಯ ಅಪಹರಣ! ವಿಡಿಯೊದಲ್ಲಿ ಕೃತ್ಯ ಸೆರೆ

ಬಾಲಕಿಯರ ಅಪಹರಣ, ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ದಿನೇದಿನೇ ಹೆಚ್ಚಾಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಯುವತಿ ಅಥವಾ ಬಾಲಕಿ ಇಂತಹ ಪ್ರಕರಣಗಳಿಗೆ ಒಳಗಾಗುತ್ತಿದ್ದಾರೆ. ಇದೀಗ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಆಘಾತಕಾರಿ ಅಪಹರಣ ಘಟನೆಯೊಂದು ನಡೆದಿದ್ದು, 6 ಮುಸುಕುಧಾರಿಗಳು 17 ವರ್ಷದ ಬಾಲಕಿಯನ್ನು ಆಕೆಯನ್ನು ಇರಿಸಿದ್ದ ರಿಮಾಂಡ್‌ ಹೋಮ್‌ನಿಂದ ಮಧ್ಯರಾತ್ರಿಯ ವೇಳೆ ಅಪಹರಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸಿಸಿಟಿವಿ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ (Girl Kidnapped) ಸೆರೆಯಾಗಿದೆ.

ಈ ಘಟನೆಯಲ್ಲಿ ಆಘಾತಕಾರಿ ವಿಚಾರವೇನೆಂದರೆ ಮಹಿಳಾ ಗಾರ್ಡ್, ಇತರ ಮೂವರು ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿ ಇರುವಾಗಲೇ ಇಡೀ ಅಪಹರಣವನ್ನು ಕೇವಲ 20 ನಿಮಿಷಗಳಲ್ಲಿ ನಡೆಸಲಾಗಿದೆ. ಈ ವೇಳೆ ಸಿಬ್ಬಂದಿ ಮಲಗಿದ್ದರು ಎನ್ನಲಾಗಿದೆ. ಮಾಹಿತಿಯ ಪ್ರಕಾರ, ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮುಸುಕುಧಾರಿಗಳು ಕ್ಯಾಂಪಸ್‍ನ ಹಿಂಭಾಗದಲ್ಲಿರುವ 4 ಅಡಿ ಎತ್ತರದ ಗೋಡೆಯನ್ನು ಜಿಗಿದು, ಕೋಲನ್ನು ಬಳಸಿ ಕಿಟಕಿಯ ಮೂಲಕ ಗಾರ್ಡ್ ರೂಮ್‌ನಿಂದ ಕೀಗಳನ್ನು ತೆಗೆದುಕೊಂಡು ಬಾಗಿಲು ತೆರೆದಿದ್ದಾರೆ. ಅಲ್ಲದೆ, ಅವರು ಹುಡುಗಿಯನ್ನು ಕರೆದು, ಅವಳನ್ನು ಎಬ್ಬಿಸಿ ನಂತರ ತಮ್ಮೊಂದಿಗೆ ಕರೆದೊಯ್ದರು. ಇಡೀ ಭದ್ರತಾ ವ್ಯವಸ್ಥೆಗೆ ತಿಳಿಯದಂತೆ ಈ ಕೃತ್ಯ ಎಸಗಲಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೊದಲ್ಲಿ, ಹುಡುಗಿ ಹೊರಗೆ ಹೋಗುವಾಗ ಮುಖವಾಡ ಧರಿಸಿದ ಪುರುಷರಲ್ಲಿ ಒಬ್ಬರೊಂದಿಗೆ ಕೈ ಹಿಡಿದಿರುವುದನ್ನು ಕಾಣಬಹುದು. ಈ ಸಮಯದಲ್ಲಿ, ಕರ್ತವ್ಯದಲ್ಲಿದ್ದ ಮಹಿಳಾ ಗಾರ್ಡ್ ನಿದ್ರೆಯಲ್ಲಿದ್ದರು. ಮುಖ್ಯ ದ್ವಾರದಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪೊಲೀಸ್ ಅಧಿಕಾರಿ ಸೇರಿದಂತೆ ಒಟ್ಟು ಮೂವರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು, ಆದರೆ ಒಳಗೆ ನಡೆಯುತ್ತಿರುವ ಘಟನೆಯ ಬಗ್ಗೆ ಇವರಿಗೆ ಗೊತ್ತೇ ಆಗಲಿಲ್ಲ.

ಹಾಗೇ ಈ ಘಟನೆಯಲ್ಲಿ ಹುಡುಗಿಯ ಗೆಳೆಯ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅಪಹರಣಕಾರರಿಗೆ ಸ್ಥಳದ ಬಗ್ಗೆ ಪ್ರತಿಯೊಂದು ವಿವರವೂ ತಿಳಿದಿರುವಂತೆ ತೋರಿದ್ದರಿಂದ ಇಡೀ ಘಟನೆಯನ್ನು ಪ್ಲ್ಯಾನ್ ಮಾಡಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಈ ಹಿಂದೆ ಎರಡು ಬಾರಿ ಓಡಿಹೋಗಲು ಪ್ರಯತ್ನಿಸಿದ್ದಳು. ಆಕೆ ಈ ಹಿಂದೆ, ತಾಟಿಪುರ ಪ್ರದೇಶದಿಂದ ಕಾಣೆಯಾಗಿದ್ದಳು ಮತ್ತು ಈ ಬಗ್ಗೆ ಅವಳ ಗೆಳೆಯನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು.

ನಂತರ ಬಾಲಕಿಯನ್ನು ಪೊಲೀಸರು ಹುಡುಕಿ ಜೂನ್ 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಅವಳು ತನ್ನ ಹೆತ್ತವರೊಂದಿಗೆ ಹೋಗಲು ನಿರಾಕರಿಸಿದಕ್ಕೆ, ನಂತರ ನ್ಯಾಯಾಲಯವು ಅವಳನ್ನು ಬಾಲಕಿಯರ ಆಶ್ರಮಕ್ಕೆ ಕಳುಹಿಸಿತ್ತು. ಅವಳು ಈ ಹಿಂದೆ ಮನೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಳು. ಆದ್ದರಿಂದ ಅವಳನ್ನು ಮನೆಯವರು ಕೋಣೆಯಲ್ಲಿ ಕೂಡಿಹಾಕಿದ್ದರು ಎಂಬುದಾಗಿ ತಿಳಿದುಬಂದಿದೆ. ಈಗ, ಬಾಲಕಿಯ ಆಶ್ರಮದಲ್ಲಿ ಯಾರಾದರೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

Karnataka Rain : ಸತತವಾಗಿ ಸುರಿದ ಮಳೆಗೆ ಹಲವೆಡೆ ಗೋಡೆ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮೈಸೂರಿನಲ್ಲಿ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿದು ನಾಲ್ವರು ಗಾಯಗೊಂಡಿದ್ದಾರೆ. ಹೆದ್ದಾರಿಗೆ ಬೃಹತ್‌ ಮರ ಬಿದ್ದಿದ್ದು, ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದೆ.

VISTARANEWS.COM


on

By

karnataka rain
Koo

ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು (Karnataka Rain) ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್‌ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೆದ್ದಾರಿಗೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಗೆ ಬೃಹತ್ ಮರವೊಂದು ಬಿದ್ದಿದೆ. ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದ್ದು, ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅರಣ್ಯ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಪೊಲೀಸ್ ಇಲಾಖೆಯಿಂದ ತೆರವು ಕಾರ್ಯಾಚರಣೆ ನಡೆದಿದೆ.

ಭಾರಿ ಮಳೆಗೆ ಸೋರುತ್ತಿರುವ ಗ್ರಂಥಾಲಯ

ಭಾರಿ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಸಕಲೇಶಪುರ ಪಟ್ಟಣದ ಐಬಿ ರಸ್ತೆಯಲ್ಲಿರುವ ಸ್ಕೌಟ್ ಅಂಡ್ ಗೈಡ್ ಕಟ್ಟಡದಲ್ಲಿರುವ ಗ್ರಂಥಾಲಯ ಸೋರುತಿದ್ದು, ಪುಸ್ತಕಗಳು ನೀರುಪಾಲಾಗಿವೆ. ಗ್ರಂಥಾಲಯದ ಹೆಂಚುಗಳು ಹೊಡೆದು ಹೋಗಿದ್ದು, ಯಾವ ಕ್ಷಣದಲ್ಲಾದರೂ ಲೈಬ್ರರಿ ಬೀಳುವ ಸಾಧ್ಯತೆ ಇದೆ. ಸೋರುತ್ತಿರುವ ಮಳೆ ನೀರಿನಿಂದ ಲಕ್ಷಾಂತರ ರೂ ಮೌಲ್ಯದ ಅಮೂಲ್ಯ ಪುಸ್ತಕಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆ-ಗಾಳಿಗೆ ಯುವಕನ ತಲೆ ಮೇಲೆ ಮುರಿದು ಬಿದ್ದ ವಿದ್ಯುತ್‌ ಕಂಬ

ಊರ ಬಾಗಿಲಿಗೆ ಬಂದು‌ನಿಂತ ಘಟಪ್ರಭಾ ನದಿ ನೀರು

ಬೆಳಗಾವಿಯಲ್ಲಿ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದ್ದು, ಊರ ಬಾಗಿಲಿಗೆ ಬಂದು‌ನಿಂತಿದೆ. ಮುಸಗುಪ್ಪಿ ಗ್ರಾಮಕ್ಕೆ ಪ್ರವಾಹದ ಆತಂಕ ಶುರುವಾಗಿದೆ. ನದಿ ಪಕ್ಕದ ಕಬ್ಬು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿದೆ. ಇನ್ನೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಕೃಷ್ಣೆಯ ಜತೆಗೆ ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದ್ದು, ಈಗಾಗಲೇ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 7 ಸೇತುವೆಗಳು ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ‌ ಗ್ರಾಮದವರಿಗೂ ನದಿ ತೀರಕ್ಕೆ ಹೋಗದಂತೆ ಜಿಲ್ಲಾಡಳಿತದಿಂದ ಕಟ್ಟು ನಿಟ್ಟಿನ ಎಚ್ಚರಿಕೆವಹಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಧರ್ಮಾ ನದಿ ಉಕ್ಕಿ ಹರಿಯುತ್ತಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಹರಿದಿರುವ ಧರ್ಮಾ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹಾನಗಲ್ ತಾಲೂಕಿನ ಕಂಚಿನೆಗಳೂರು ಬಳಿ ಜಲಪಾತ ಸೃಷ್ಟಿಯಾಗಿದೆ. ವರದಾನದಿಯ ಅಬ್ಬರಕ್ಕೆ ಹಾವೇರಿಯ ಹೊಸರಿತ್ತಿಯಲ್ಲಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮೂಲ ಸಂಸ್ಥಾನ ಮಟ ಜಲಾವೃತಗೊಂಡಿದೆ. ಮಠದ ಒಳಗೆ ನೀರು ನುಗ್ಗುವ ಆತಂಕಇದ್ದು, ನೂರಾರು ಎಕರೆ ಬೆಳೆ ಮುಳುಗಡೆಯಾಗಿದೆ.

ಕೆಆರ್‌ಎಸ್‌ ಬೋಟಿಂಗ್‌ ಪಾಯಿಂಟ್‌ಗೆ ನಿಷೇಧ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ನ ಬೋಟಿಂಗ್ ಪಾಯಿಂಟ್‌ಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಜನರು ಓಡಾಡುವ ಸ್ಥಳದಲ್ಲೂ ನೀರು ತುಂಬಿದೆ. ನೀರಿನ ಪ್ರಮಾಣ ಕಡಿಮೆ ಆಗುವವರೆಗೂ ಬೋಟಿಂಗ್ ಸ್ಥಗಿತ ಮಾಡಲಾಗಿದೆ.

ತುಮಕೂರಿನಲ್ಲಿ ಕೆಸರು ಗದ್ದೆಯಂತಾದ ರಸ್ತೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಮಕೂರಿನ ಹಿರೇಹಳ್ಳಿಯಲ್ಲಿ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರೇಹಳ್ಳಿ ಇಂಡಸ್ಟ್ರಿಯಲ್ ಏರಿಯಾಗೆ ಕೆಲಸಕ್ಕೆ ಹೋಗಲು ಪ್ರತಿನಿತ್ಯ ನೂರಾರು ವಾಹನಗಳು ಓಡಾಟ ನಡೆಸುತ್ತವೆ. ರಸ್ತೆಯಲ್ಲಿ ಎರಡು ಮೂರು ಅಡಿಗಳಷ್ಟು ಗುಂಡಿ ಬಿದ್ದರು ರಸ್ತೆ ಸರಿಪಡಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.

ಇದನ್ನೂ ಓದಿ: Forced Conversion : ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್‌ ವಾಶ್‌; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್‌

ನಿರಂತರ ಜಡಿ ಮಳೆ ಎಫೆಕ್ಟ್‌; ಅಡಿಕೆ ಕೊಯ್ಲಿಗೆ ತೊಂದರೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ರಾಜ್ಯದಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವ ತಾಲೂಕಾಗಿದೆ. 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಅಡಿಕೆ ಬೆಳೆ ಕೊಯ್ಲಿಗೆ ಬಂದಿದೆ. ಆದರೆ ನಿರಂತರ ಜಡಿ ಮಳೆಯಿಂದಾಗಿ ಕೊಯ್ಲಿಗೆ ತೊಂದರೆ ಆಗುತ್ತಿದೆ. ರೈತರು ಕಳೆದ ವರ್ಷ ಮಳೆಯಿಲ್ಲದೇ ಟ್ಯಾಂಕರ್ ಮೂಲಕ ನೀರು ಪೂರೈಸಿ ಅಡಿಕೆ ತೋಟ ಉಳಿಸಿಕೊಂಡಿದ್ದರು. ಈ ವರ್ಷ ಉತ್ತಮ‌ ಮಳೆಯಾಗುತ್ತಿದ್ದು, ನಿರಂತರ ಜಡಿ ಮಳೆಯಾಗುತ್ತಿರುವ ಹಿನ್ನೆಲೆ ಅಡಿಕೆ ತೋಟಗಳಲ್ಲಿ ಹೆಜ್ಜೆ ಇಡದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ ಕೊಯ್ಲಿ ಮಾಡದಿದ್ದರೇ ಅಡಿಕೆ ಗೋಟು ಆಗುವ ಭಯವಿದೆ. ಅಡಿಕೆ ಗೋಟು ಆದರೆ ಮಾರುಕಟ್ಟೆಯಲ್ಲಿ ದರ ಕಡಿಮೆಯಾಗಲಿದೆ.

ಬಿರುಗಾಳಿಗೆ ಮುರಿದು ಬಿದ್ದ ವಿದ್ಯುತ್‌ ಕಂಬ

ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ತಗ್ಗಿದ್ದರೂ ಗಾಳಿ ವೇಗ ತಗ್ಗುತ್ತಿಲ್ಲ. ಭಾರಿ ಗಾಳಿಗೆ ಬೃಹತ್ ವಿದ್ಯುತ್ ಕಂಬ ಮುರಿದು ಬಿದ್ದಿದೆ. 66 ಕೆ.ವಿ. ವಿದ್ಯುತ್ ಟವರ್ ಅರ್ಧಕ್ಕೆ ಮುರಿದು ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಸಮೀಪದ ಆಮೆಕಟ್ಟೆ ಬಳಿ ಘಟನೆ ನಡೆದಿದೆ. ಆಲ್ದೂರು ಹೋಬಳಿಯ ಹತ್ತಾರು ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಬಂದ್ ಆಗಿದೆ. ಇನ್ನು ಎರಡು ದಿನ ಕತ್ತಲಲ್ಲಿ ಕಳೆಯುವಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ; ಕರಾವಳಿ, ಮಲೆನಾಡಿಗೂ ಎಚ್ಚರಿಕೆ

Karnataka Weather Forecast: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ( rain news) ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಜಿಲ್ಲೆಗಳಿಗೂ ಅಲರ್ಟ್‌ ನೀಡಲಾಗಿದೆ. ಎಲ್ಲೆಲ್ಲಿ ಮಳೆಯ ಅಬ್ಬರ ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka Weather Forecast) ಮುಂದುವರಿಯಲಿದೆ. ಜು.22ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಾವಣಗೆರೆ, ಬೆಳಗಾವಿಯಲ್ಲಿ ಅಬ್ಬರಿಸುವ ಮಳೆ

ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ , ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಂಗಳೂರಲ್ಲಿ ಗಾಳಿ ಜತೆಗೆ ಮಳೆ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನೂ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಆರೆಂಜ್‌ ಅಲರ್ಟ್‌ ಘೋಷಣೆ

ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬೆಳಗಾವಿ, ಬೀದರ್, ಕಲಬುರಗಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಟ (Rain News) ಮುಂದುವರಿದಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಳೆಗೆ ಮನೆಯಿಂದ ಹೊರಬರಲು ಆಗದೆ ಒಳಗೆ ಕೂರಲು ಆಗದೆ ಚಡಪಡಿಸುವಂತಾಗಿದೆ. ಸದ್ಯ ಮುಂದಿನ ಐದು ದಿನಗಳಿಗೆ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ವಿಜಯನಗರ: ಭಾನುವಾರ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಧ್ಯಾಹ್ನದಿಂದ ಜಿಟಿಜಿಟಿ ಮಳೆಯಾಗಿತ್ತು. ಥಂಡಿ ಮಿಶ್ರಿತ ಗಾಳಿ ಜತೆಗೆ ಜಿಟಿ ಜಿಟಿ ಮಳೆಗೆ (Rain news) ಜನರು ಹೈರಾಣಾದರು. ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿಯೂ ಇದೇ ರೀತಿಯ ವಾತಾವರಣ ಇತ್ತು.

ಇನ್ನೂ ಜು.22ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಜತೆಗೆ ಗಾಳಿಯು ಸಾಥ್‌ ನೀಡಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಥಂಡಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Guru Purnima 2024 : ವಿವಿಧೆಡೆ ಅದ್ಧೂರಿಯಾಗಿ ನೆರವೇರಿದ ಗುರುಪೂರ್ಣಿಮಾ ಮಹೋತ್ಸವ

Guru Purnima 2024 : ಗುರುಪೂರ್ಣಿಮಾ ಹಿನ್ನೆಲೆಯಲ್ಲಿ ನಗರ ವಿವಿಧೆಡೆ ಅದ್ಧೂರಿಯಾಗಿ ಮಹೋತ್ಸವ ನಡೆದಿದೆ. ಸಾಯಿಬಾಬಾ ಮಂದಿರಗಳಲ್ಲಿ ಭಕ್ತರಿಂದ ತುಂಬಿಹೋಗಿತ್ತು. ವ್ಯಾಸ ಪೂರ್ಣಿಮೆಯಂದು ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಕೈಗೊಳ್ಳಲಾಗಿದೆ.

VISTARANEWS.COM


on

By

Guru Purnima 2024 mahotsava celebrated in different parts of the country
Koo

ದೇವನಹಳ್ಳಿ/ಬಳ್ಳಾರಿ: ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಗುರುಪೂರ್ಣಿಮಾ (Guru Purnima 2024) ಮಹೋತ್ಸವ ಜತೆಗೆ ಸಾಯಿಬಾಬಾ ಮಂದಿರಗಳಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿರುವ ಶ್ರೀ ಸಾಯಿಬಾಬಾ ಸೇವಾ ಕೇಂದ್ರದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

ಸಾಯಿಬಾಬಾರ ಮೂರ್ತಿಗೆ ಬಿಳಿ ಗುಲಾಬಿ ಹಾಗೂ ಮುಸುಕಿನ ಜೋಳದಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಸುಮಾರು 10 ಸಾವಿರಕ್ಕೂ ಅಧಿಕ ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಂದ ಭಕ್ತಾರು ಆಗಮಿಸಿದ್ದರು. ಭಾನುವಾರ ಆಗಿದ್ದರಿಂದ ಮುಂಜಾನೆಯಿಂದಲೇ ಭಕ್ತರ ದಂಡು ಹರಿದು ಬಂದಿತ್ತು. ಬಂದಿದ್ದ ಎಲ್ಲಾ ಭಕ್ತಾಧಿಗಳಿಗೆ‌ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ಭಕ್ತಾಧಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

Guru Purnima 2024 mahotsava celebrated in different parts of the country

ಇನ್ನೂ ಬಳ್ಳಾರಿಯ ಬಾಲಾಂಜನೇಯ ಸ್ವಾಮಿ ಮಠದಲ್ಲಿ ಹರಿಹರಪುರದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾ ಸ್ವಾಮೀಜಿ ವ್ಯಾಸ ಪೂರ್ಣಿಮೆಯಂದು ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಕೈಗೊಂಡರು. ಇತ್ತ ಆಷಾಢ ಹುಣ್ಣಿಮೆ ಹಿನ್ನೆಲೆಯಲ್ಲಿ ಕೊಪ್ಪಳದ ಹುಲಗಿ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಹರಿದು ಬಂದಿದ್ದರು. ತುಂತುರು ಮಳೆಯ ಮಧ್ಯೆಯು ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀಹುಲಿಗೆಮ್ಮದೇವಿಯ ದರ್ಶನ ಪಡೆದರು.

ಇದನ್ನೂ ಓದಿ: Kiccha Sudeep: ಕನ್ನಡಿಗರ ಸ್ವಾಭಿಮಾನವೇ ಮುಖ್ಯ; ಫೋನ್ ಪೇ ಬ್ರ್ಯಾಂಡ್‌ ಅಂಬಾಸಿಡರ್ ಸ್ಥಾನ ತ್ಯಜಿಸುತ್ತಾರಾ ಕಿಚ್ಚ ಸುದೀಪ್?

ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

ಬೆಂಗಳೂರು: ಗುರು ಪೂರ್ಣಿಮೆ(Guru Purnima 2024) ಅಂಗವಾಗಿ ಇಂದು ಬಹುತೇಕರು ತಮ್ಮ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಗುರುಗಳ ಸೇವೆಯನ್ನು ಸ್ಮರಿಸುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ಪ್ರಮುಖ ಗುರುಗಳ ಕುರಿತ ಕಿರು ಪರಿಚಯವೊಂದು ಇಂತಿದೆ.

ರಮಾಕಾಂತ್‌ ಅಚ್ರೇಕರ್(ಸಚಿನ್ ತೆಂಡೂಲ್ಕರ್​ ಗುರು)


ಕ್ರಿಕೆಟ್‌ ದೇವರು ಎಂದು ಕರೆಯಲ್ಪಡುವ ಸಚಿನ್​ ತೆಂಡೂಲ್ಕರ್(Sachin Tendulkar)​ ವಿಶ್ವ ಕ್ರಿಕೆಟ್​ನಲ್ಲಿ ಹಲವು ಸಾಧನೆ ಮಾಡಲು ಕಾರಣ ಅವರ ಗುರು ರಮಾಕಾಂತ್‌ ಅಚ್ರೇಕರ್(Ramakant Achrekar). ಬಾಲ್ಯದಿಂದಲೇ ಅಚ್ರೇಕರ್ ಗರಡಿಯಲ್ಲಿ ಪಳಗಿದ ಸಚಿನ್​ ಇಂದು ವಿಶ್ವ ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುವಂತಾಗಿದೆ. 1932ರಲ್ಲಿ ಜನಿಸಿದ ಅಚ್ರೇಕರ್ ಮುಂಬೈ ಸ್ಥಳೀಯ ಕ್ರಿಕೆಟ್‍ನಲ್ಲಿ ಉತ್ತಮ ಆಟಗಾರರಾಗಿ ಹೆಸರು ಗಳಿಸಿದವರಾಗಿದ್ದರು. ಸಚಿನ್ ತೆಂಡೂಲ್ಕರ್ ಸೇರಿದಂತೆ ವಿನೋದ್ ಕಾಂಬ್ಳಿ, ಅಜಿತ್ ಆಗರ್ಕರ್, ಪ್ರವೀಣ್‌ ಆಮ್ರೆ, ಸಮೀರ್‌ ದಿಘೆ, ಬಲ್ವಿಂದರ್‌ ಸಿಂಗ್‌ ಸಂಧು ಸೇರಿದಂತೆ ಹಲವಾರು ಕ್ರಿಕೆಟಿಗರನ್ನು ದೇಶಕ್ಕೆ ಪರಿಚಯಿಸಿದ ಹೆಗ್ಗಳಿಕೆ ಅಚ್ರೇಕರ್ ಅವರದ್ದು.

Guru Purnima 2024


1990ರಲ್ಲಿ ಭಾರತ ಸರ್ಕಾರ ಅಚ್ರೇಕರ್ ಅವರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು.2010ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಇವರು ಭಾಜನರಾಗಿದ್ದರು. ಸಚಿನ್​ ಎಷ್ಟೇ ದೊಡ್ಡ ಖ್ಯಾತಿ ಗಳಿಸಿದರೂ ಕೂಡ ತಮ್ಮ ಗುರುವಿನ ತ್ಯಾಗವನ್ನು ಸದಾ ನೆನಪಿಸಿಕೊಳ್ಳುತ್ತಿರುತ್ತಾರೆ. ಅಚ್ರೇಕರ್ ಅಂತಿಮ ಸಂಸ್ಕಾರಕ್ಕೆ ಶವವನ್ನು ತೆಗೆದುಕೊಂಡು ಹೋಗುವ ವೇಳೆ ಪಾರ್ಥೀವ ಶರೀರಕ್ಕೆ ಸಚಿನ್‌ ತೆಂಡುಲ್ಕರ್‌ ಕೂಡ ಹೆಗಲು ಕೊಡುವ ಮೂಲಕ ಗುರುವಿನ ಮೇಲಿನ ಪ್ರೀತಿಯನ್ನು ಮೆರೆದಿದ್ದರು. ಅಚ್ರೇಕರ್ 2019ರಲ್ಲಿ ನಿಧನ ಹೊಂದಿದ್ದರು.

ಎಸ್. ಎಂ ಆರಿಫ್(ಗೋಪಿಚಂದ್‌ ಗುರು)


ಭಾರತ ಕಂಡ ಶ್ರೇಷ್ಠ ಬ್ಯಾಡ್ಮಿಂಟನ್‌ ಆಟಗಾರರಲ್ಲಿ ಪಿ.ಗೋಪಿಚಂದ್‌(Pullela Gopichand) ಕೂಡ ಒಬ್ಬರು. ಇವರನ್ನು ಈ ಮಟ್ಟಕ್ಕೆ ಬೆಳೆಸಿದ್ದ ಇವರ ಗುರುಗಳಾದ ಎಸ್. ಎಂ ಆರಿಫ್(coach SM Arif.). ಇವರ ಕೋಚಿಂಗ್ ಮಾರ್ಗದರ್ಶನದಲ್ಲೇ ಗೋಪಿಚಂದ್ 2001 ರಲ್ಲಿ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಓಪನ್ ಚಾಂಪಿಯನ್‌ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದು. 11 ವಯಸ್ಸಿನಲ್ಲಿಯೇ ಬ್ಯಾಡ್ಮಿಂಟನ್ ಗೀಳಿಗೆ ಬಿದಿದ್ದ ಗೋಪಿಚಂದ್‌ ಅವರನ್ನು ಶ್ರೇಷ್ಠ ಬ್ಯಾಡ್ಮಿಂಟನ್​ ಆಟಗಾರನಾಗಿ ಮಾಡಿದ್ದು ಅವರ ಕೋಚ್​ ಆರಿಫ್. ಇವರ ಮಾರ್ಗದಶದಲ್ಲಿ ಗೋಪಿಚಂದ್‌ ಕೇವಲ 18 ವರ್ಷ ವಯಸ್ಸಿರುವಾಗ ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಆಗಿ ಹೊಮ್ಮಿದ್ದರು. ಮೂರು ವರ್ಷದ ನಂತರ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಗೆದ್ದು ಬೀಗಿದ್ದರು. ಸತತವಾಗಿ ಐದು ವರ್ಷ ಅವರು ಆ ಪಟ್ಟವನ್ನು ಬೇರೆ ಯಾರಿಗೂ ಬಿಟ್ಟುಕೊಟ್ಟಿರಲಿಲ್ಲ.


ಚಾಂಪಿಯನ್ನರ ಗುರು ಗೋಪಿಚಂದ್‌


ಭಾರತ ಕಂಡ ಶ್ರೇಷ್ಠ ಬ್ಯಾಡ್ಮಿಂಟನ್‌ ಆಟಗಾರರಲ್ಲಿ ಪಿ.ಗೋಪಿಚಂದ್‌ ಕೂಡ ಒಬ್ಬರು. ಅವರು ಆಟಗಾರರಾಗಿ ಮಿಂಚಿದ್ದಕ್ಕಿಂತ ತರಬೇತುದಾರರಾಗಿ ಮೆರೆದಿದ್ದೇ ಹೆಚ್ಚು. ಅವರ ಗರಡಿಯಲ್ಲಿ ಸೈನಾ ನೆಹ್ವಾಲ್‌(Saina Nehwal) ಪಿ.ವಿ.ಸಿಂಧು(PV Sindhu), ಕೆ.ಶ್ರೀಕಾಂತ್‌, ಎಚ್‌.ಎಸ್‌.ಪ್ರಣಯ್‌, ಸಾಯಿ ಪ್ರಣೀತ್‌ರಂತಹ ಖ್ಯಾತ ಆಟಗಾರರು ಬೆಳಕಿಗೆ ಬಂದಿದ್ದು. ಇದರಲ್ಲಿ ಸೈನಾ ಮತ್ತು ಪಿವಿ ಸಿಂಧು ಪ್ರತಿಷ್ಠಿತ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ವಿಶ್ವಮಟ್ಟದಲ್ಲಿ ಭಾರತದ ಹೆಸರು ಬೆಳಗಿದ್ದೇ ಈ ತಾರೆಯರಿಂದ. ಭಾರತೀಯರು ಬ್ಯಾಡ್ಮಿಂಟನ್‌ನಲ್ಲಿ ಏನೆಲ್ಲ ಸಾಧಿಸಬಹುದೋ, ಅಷ್ಟೆಲ್ಲ ಸಾಧಿಸಿದ್ದಾರೆ. ಅದರ ಹಿಂದಿರುವುದು ಹೈದರಾಬಾದ್‌ನಲ್ಲಿರುವ ಗೋಪಿಚಂದ್‌ ಅಕಾಡೆಮಿ. ತರಬೇತುದಾರರಾಗಿ ಅಸಾಮಾನ್ಯ ಸಾಧನೆಯನ್ನೇ ಮಾಡಿದ ಕೀರ್ತಿ ಇವರದ್ದು.


ಸತ್ಪಾಲ್‌ ಸಿಂಗ್‌

ಒಲಿಂಪಿಕ್ಸ್‌ನಲ್ಲಿ ಎರಡು ಚಿನ್ನ ಗೆದ್ದಿರುವ ಸುಶೀಲ್‌ ಕುಮಾರ್(Sushil Kumar) ಮತ್ತು ಯೋಗೇಶ್ವರ ದತ್‌(Yogeshwar Dutt,) ಅವರನ್ನು ಭಾರತೀಯ ಕುಸ್ತಿಗೆ ಪರಿಚಯಿಸಿದ ಕೀರ್ತಿ ಮಾಜಿ ಕುಸ್ತಿಪಟು ಮತ್ತು ತರಬೇತುದಾರ ಸತ್ಪಾಲ್‌ ಸಿಂಗ್‌(Satpal Singh) ಅವರಿಗೆ ಸಲ್ಲುತ್ತದೆ. ಕುಸ್ತಿಪಟುವಾಗಿದ್ದ ಸತ್ಪಾಲ್‌ ಸಿಂಗ್‌, 1982 ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನ ಗೆದ್ದಿದ್ದರು. ಇದಕ್ಕೂ ಮುನ್ನ 1974ರ ಕೂಟದಲ್ಲಿ ಕಂಚು ಜಯಿಸಿದ್ದರು. ಭಾರತೀಯ ಕುಸ್ತಿಗೆ ನೀಡಿದ ಮಹೋನ್ನತ ಕೊಡುಗೆಗಾಗಿ ಅವರಿಗೆ 1983ರಲ್ಲಿ ‘ಪದ್ಮ ಶ್ರೀ’ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. 2009ರಲ್ಲಿ ‘ದ್ರೋಣಾಚಾರ್ಯ’ ಪ್ರಶಸ್ತಿಯೂ ಅವರಿಗೆ ಅರಸಿ ಬಂದಿತ್ತು.

Guru Purnima 2024


ಜಗದೀಶ್ ಸಿಂಗ್(ವಿಜೇಂದರ್ ಸಿಂಗ್ ಕೋಚ್​)


2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಅವರ ಕೋಚ್​ ಜಗದೀಶ್ ಸಿಂಗ್. ಕ್ರೀಡಾಪಟುವಾಗಿದ್ದ ಜಗದೀಶ್ ಸಿಂಗ್ ದೇಶಕ್ಕೆ ಶ್ರೇಷ್ಠ ಬಾಕ್ಸರ್​ಗಳನ್ನು ನೀಡಬೇಕು ಎನ್ನುವ ಉದ್ದೇಶದಿಂದ ತಮ್ಮ ಮನೆ ಮತ್ತು ಜಮೀನನ್ನು ಅಡಮಾನವಿಟ್ಟು ಗ್ರಾಮೀಣ ಬ್ಯಾಂಕ್‌ನಿಂದ ನಾಲ್ಕು ಲಕ್ಷ ಸಾಲ ಪಡೆದು ಬಾಕ್ಸಿಂಗ್​ ಕ್ಲಬ್ ಆರಂಭಿಸಿದ್ದರು. ಇದೇ ಕ್ಲಬ್​ನಲ್ಲಿ ಪಳಗಿದ ವಿಜೇಂದರ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದು ಸಂಭ್ರಮಿಸಿದ್ದರು. 2007 ರಲ್ಲಿ, ಭಾರತ ಸರ್ಕಾರವು ಜಗದೀಶ್​ ಸಿಂಗ್ ಅವರಿಗೆ ಪ್ರತಿಷ್ಠಿತ ದ್ರೋಣಾಚಾರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಇದನ್ನೂ ಓದಿ ರಾಜ ಮಾರ್ಗ ಅಂಕಣ : ಅಪವಾದ ಎಲ್ಲರ ಬದುಕಿನಲ್ಲಿಯೂ ಬರುತ್ತವೆ, ಅದನ್ನು ಮೀರಿ ನಿಲ್ಲುವುದು ಹೇಗೆ?


ರಾಹುಲ್ ದ್ರಾವಿಡ್​


ಆಟಗಾರನಾಗಿ ಮತ್ತು ಮಾರ್ಗದರ್ಶಕರಾಗಿ ಭಾರತದ ಕ್ರಿಕೆಟ್​ಗೆ ಅಪಾರ ಸೇವೆ ಸಲ್ಲಿಸಿದ್ದ ಕೀರ್ತಿ ರಾಹುಲ್​ ದ್ರಾವಿಡ್(Rahul Dravid)​ಗೆ ಸಲ್ಲುತ್ತದೆ. ಇವರು ಕರ್ನಾಟಕದವರು ಎಂಬುದು ಕನ್ನಡಿಗರ ಹೆಮ್ಮೆ. ಅಂಡರ್​-19 ಕೋಚ್​ ಆಗಿ, ಆ ಬಳಿಕ ಸೀನಿಯರ್​ ತಂಡದ ಕೋಚ್​ ಆಗಿ ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಹೆಗ್ಗಳಿಕೆ ದ್ರಾವಿಡ್​ ಅವರದ್ದಾಗಿದೆ. ಇಂದು ಭಾರತ ತಂಡದಲ್ಲಿ ಮಿಂಚುತ್ತಿರುವ ಹಲವು ಕ್ರಿಕೆಟ್​ ಆಟಗಾರರು ದ್ರಾವಿಡ್​ ಗರಡಿಯಲ್ಲೇ ಪಳಗಿದ ಆಟಗಾರರಾಗಿದ್ದಾರೆ. ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಸಾಧನೆಯ ಹಿಂದೆ ದ್ರಾವಿಡ್​ ಅವರ ಮಾರ್ಗದರ್ಶನ ಮುಖ್ಯವಾಗಿತ್ತು. ತಂಡ ಒಂದೇ ಒಂದು ಪಂದ್ಯ ಸೋಲದೆ ಕಪ್​ ಗೆದ್ದು ಇತಿಹಾಸ ನಿರ್ಮಿಸಿತ್ತು. ಒಬ್ಬ ಜಂಟಲ್ ಮ್ಯಾನ್ ಕ್ರಿಕೆಟರ್ ಆಗಿ, ಕ್ಯಾಪ್ಟನ್ ಆಗಿ, ಕೋಚ್ ಆಗಿ ಭಾರತೀಯ ಕ್ರಿಕೆಟನ್ನು ಶ್ರೀಮಂತಗೊಳಿಸಿದ ಅವರಿಗೆ ಭಾರತರತ್ನ ಪ್ರಶಸ್ತಿ(bharatha ratna award) ನೀಡಬೇಕು ಎನ್ನುವುದು ಹಲವು ಮಾಜಿ ಕ್ರಿಕೆಟಿಗರ ಆಗ್ರಹವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Damage to furniture learning material by miscreants in government model school
ಉತ್ತರ ಕನ್ನಡ4 mins ago

Banavasi News: ಬನವಾಸಿಯ ಸರ್ಕಾರಿ ಮಾದರಿ ಶಾಲೆಯಲ್ಲಿ ಕಿಡಿಗೇಡಿಗಳಿಂದ ಕಲಿಕಾ ಸಾಮಗ್ರಿ ಹಾನಿ

Contact Lens Awareness
ಫ್ಯಾಷನ್5 mins ago

Contact Lens Awareness: ಶೋಕಿಗಾಗಿ ಕಾಂಟ್ಯಾಕ್ಟ್‌ ಲೆನ್ಸ್ ಧರಿಸುವವರೇ ಎಚ್ಚರ! ಈ 5 ಸಂಗತಿ ಗಮನದಲ್ಲಿರಲಿ

Viral News
Latest6 mins ago

Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

Suraj Revanna Case
ಕರ್ನಾಟಕ29 mins ago

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Gautam Gambhir
ಕ್ರೀಡೆ38 mins ago

Gautam Gambhir : ನನ್ನ ಮತ್ತು ಕೊಹ್ಲಿಯ ನಡುವೆ ಗೌರವಯುತ ಸಂಬಂಧವಿದೆ; ಗೌತಮ್ ಗಂಭೀರ್​

Nipah Virus
ಆರೋಗ್ಯ39 mins ago

Nipah Virus: ಡೇಂಜರಸ್‌ ನಿಫಾ ವೈರಸ್‌; ಇದರ ಲಕ್ಷಣಗಳೇನು? ನಮಗೆ ಅಪಾಯ ಇದೆಯೆ?

Nitish Kumar
ದೇಶ40 mins ago

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Shoe Theft
ಕ್ರೈಂ45 mins ago

Shoe Theft: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

Actor Darshan
ಕರ್ನಾಟಕ53 mins ago

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Beautician and Basic Fashion Designing Training Programme inauguration in Yallapura
ಉತ್ತರ ಕನ್ನಡ55 mins ago

Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌