Site icon Vistara News

Accident | ಬೈಕ್‌ಗಳ ಮುಖಾಮುಖಿ ಡಿಕ್ಕಿ; ಬೈಕ್ ಸವಾರರಿಬ್ಬರು ಸಾವು

accident

ಬಳ್ಳಾರಿ: ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಉಪ್ಪಾರ ಹೊಸಹಳ್ಳಿ ಮಾರ್ಗದಲ್ಲಿ ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ (Accident) ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ತೆಕ್ಕಲಕೋಟೆ ಗ್ರಾಮದ ವೀರೇಶ್ (19), ಬಲಕುಂದಿ ಗ್ರಾಮದ ವೀರೇಶ್ (23) ಮೃತರು. ವೀರೇಶ್ ಬಲಕುಂದಿಯಿಂದ ತೆಕ್ಕಲಕೋಟೆಗೆ ಬೈಕ್‌ನಲ್ಲಿ ಶನಿವಾರ ಹೋಗುತ್ತಿದ್ದಾಗ ಮತ್ತೊಬ್ಬ ವೀರೇಶ್ ತೆಕ್ಕಲಕೋಟೆಯಿಂದ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಎರಡೂ ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರ ತಲೆಗೆ ಗಂಭೀರ ಗಾಯವಾಗಿದ್ದರಿಂದ ವಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಹೆಲ್ಮೆಟ್ ಹಾಕಿದ್ದರೆ ಜೀವ ಉಳಿಸಿಕೊಳ್ಳಬಹುದಾಗಿತ್ತು ಎಂಬ ಮಾತುಗಳು ಸ್ಥಳೀಯರಿಂದ ಕೇಳಿಬಂದಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಯುವತಿಯಂತೆ ಮಾತಾಡಿ ಯಾಮಾರಿಸಿದ 2 ಮಕ್ಕಳ ತಾಯಿ, 40 ಲಕ್ಷ ಕಳೆದುಕೊಂಡ ಟೆಕ್ಕಿ!

Exit mobile version