Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ - Vistara News

ಬಳ್ಳಾರಿ

Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಜಿಲ್ಲೆಯ ಕುಡುತಿನಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಮತಯಾಚನೆ ನಡೆಸಿದರು. ಮನೆ ಮಗನಾಗಿ, ಸಹೋದರನಾಗಿ ಈವರೆಗೆ ಕೆಲಸ ಮಾಡುತ್ತಾ ಬಂದಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಗೆ ಆಶೀರ್ವದಿಸಿ ಗೆಲ್ಲಿಸುವಂತೆ ಮತದಾರರದಲ್ಲಿ ಮನವಿ ಮಾಡಿದರು.

VISTARANEWS.COM


on

Ballari Lok Sabha constituency Congress candidate E Tukaram election campaign in Kuduthini
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕುಡುತಿನಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಜಿಲ್ಲೆಯ ಕುಡುತಿನಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಮತಯಾಚನೆ (Lok Sabha Election 2024) ನಡೆಸಿದರು. ಮನೆ ಮಗನಾಗಿ, ಸಹೋದರನಾಗಿ ಈವರೆಗೆ ಕೆಲಸ ಮಾಡುತ್ತಾ ಬಂದಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಗೆ ಆಶೀರ್ವದಿಸಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಪಟ್ಟಣದ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂದು ಮತಯಾಚನೆ ನಡೆಸಿ, ಮಾತನಾಡಿದ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಕುಡುತಿನಿ ಭಾಗದಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಸ್ತದ ಗುರುತಿಗೆ ಮತ ನೀಡಿ, ತಮ್ಮನ್ನು ಗೆಲ್ಲಿಸುವಂತೆ ಮತದಾರರಲ್ಲಿ ಅಭ್ಯರ್ಥಿ ಈ. ತುಕಾರಾಂ ಮನವಿ ಮಾಡಿದರು.

ಇದನ್ನೂ ಓದಿ: T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಆಂಜನೇಯಲು , ಕುಡುತಿನಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಮತ್ತು ಇತರರು ಉಪಸ್ಥಿತರಿದ್ದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ ಮಾಡಲಾಯಿತು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ, ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಕಾಂಗ್ರೆಸ್‌ ಮುಖಂಡ ನಿಕೇತ್‌ ರಾಜ್‌ ಮೌರ್ಯ ಮಾತನಾಡಿ, ಕರ್ನಾಟಕ ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಇಡೀ ದೇಶದ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದ್ದು, 5 ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸಿದೆ. ಆದರೆ ಗ್ಯಾರಂಟಿ ನೋಡಿ ಸಹಿಸಲು ಸಾಧ್ಯವಾಗದೇ ಬಿಜೆಪಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಗೆದ್ದೇ ಗೆಲ್ಲುತ್ತಾರೆ. ಸಂಸದರಾಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮಾತನಾಡಿದರು.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

ಸಮಾವೇಶದಲ್ಲಿ ಸಚಿವರಾದ ಕೆ.ಎನ್‌. ರಾಜಣ್ಣ, ಶಿವಾನಂದ ಪಾಟೀಲ್‌, ಶಾಸಕರಾದ ವಿಜಯಾನಂದ ಕಾಶಪ್ಪನವರ್‌, ಭೀಮಸೇನ್‌ ಚಿಮ್ಮನಕಟ್ಟಿ, ಎಚ್‌.ವೈ. ಮೇಟಿ, ಪ್ರದೀಪ್‌ ಈಶ್ವರ್‌, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಆನಂದ ನ್ಯಾಮಗೌಡ, ಅಜಯ್‌ ಕುಮಾರ್‌ ಸರ್‌ ನಾಯಕ್‌, ಪಕ್ಷದ ಮುಖಂಡರಾದ ಬಿ.ಆರ್‌. ಯಾವಗಲ್‌, ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಇಂದು ಭಾರಿ ಮಳೆ ಎಚ್ಚರಿಕೆ

Karnataka Weather Forecast : ಮುಕ್ಕಾಲು ಕರ್ನಾಟಕಕ್ಕೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಇದರ ಪ್ರಭಾವದಿಂದಾಗಿ ಇಂದು ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain news) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

karnataka weather Forecast
karnataka weather Forecast

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

karnataka weather Forecast
karnataka weather Forecast

ಆರೆಂಜ್ ಅಲರ್ಟ್‌

ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

Karnataka Weather Forecast : ಬೆಂಗಳೂರು, ದೊಡ್ಡಬಳ್ಳಾಪುರದಲ್ಲಿ ಸುರಿದ ಮಳೆಗೆ (Rain News) ರಸ್ತೆಗಳು ಜಲಾವೃತಗೊಂಡು ಅವಾಂತರವೇ ಸೃಷ್ಟಿಯಾಗಿದೆ. ಆಗಸ್ಟ್‌ 23ರವರೆಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಸೋಮವಾರ ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ (Bengaluru rain) ಸುರಿದಿದೆ. ಕೇವಲ10-15 ನಿಮಿಷ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದ್ದವು. ಹೆಬ್ಬಾಳದ ರಸ್ತೆಗಳು ಕೆರೆಯಂತಾಗಿ ಸವಾರರು, ಸಾರ್ವಜನಿಕರು ಹೈರಣಾದರು. ಇತ್ತ ಮಳೆ ಕಡಿಮೆಯಾಗುತ್ತಿದ್ದಂತೆ ಸವಾರರು ಟ್ರಾಫಿಕ್‌ನಲ್ಲಿ (Karnataka Weather Forecast) ಸಿಲುಕಿದ್ದರು.

ಯಶವಂತಪುರ, ಹೆಬ್ಬಾಳ ಅಂಡರ್ ಪಾಸ್‌ನಲ್ಲಿ ವಾಹನಗಳು ನಿಂತಲ್ಲೇ ನಿಲ್ಲುವಂತಾಯಿತು. ಟ್ರಾಫಿಕ್ ಕ್ಲಿಯರ್ ಮಾಡಲು ಸಂಚಾರಿ ಪೊಲೀಸರು ಹರಸಾಹಸ ಪಟ್ಟರು. ಹೆಬ್ಬಾಳ ಸಂಪರ್ಕ ಕಲ್ಪಿಸುವ ಅಕ್ಕಪಕ್ಕದ ರಸ್ತೆಗಳು, ವಸಂತನಗರ, ರೈಲ್ವೆ ಪ್ಯಾರಲಲ್ ರಸ್ತೆ, ಪ್ಯಾಲೇಸ್ ಗುಟ್ಟಳ್ಳಿ ಸೇರಿದಂತೆ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಮರವೊಂದ ಧರೆಗುರುಳಿದೆ. ಸಂಜಯ್ ನಗರದಲ್ಲಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಮರ ಉರುಳಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇತ್ತ ದೊಡ್ಡಬಳ್ಳಾಪುರದಲ್ಲೂ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ರಸ್ತೆಯ ಮೇಲೆ ನೀರು ತುಂಬಿ ಹರಿದಿತ್ತು. ದೊಡ್ಡಬಳ್ಳಾಪುರದ ತಾಲೂಕು ಕಚೇರಿ, ತೇರಿನ ಬೀದಿ ಸರ್ಕಲ್ ಬಳಿ ವಾಹನ ಸವಾರರು ಪರದಾಡಿದರು. ಒಂದು ಅಡಿಗೂ‌ ಹೆಚ್ಚು ನೀರು ನಿಂತು, ಜತೆಗೆ ಚರಂಡಿ ನೀರೆಲ್ಲಾ ತುಂಬಿ ರಸ್ತೆಯ ಮೇಲೆ ಹರಿದಿತ್ತು. ತಾಲೂಕು ಕಚೇರಿಯ ಮುಂದೆಯೇ ರಸ್ತೆ ಅವ್ಯವಸ್ಥೆಗೊಂಡಿತ್ತು. ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ರಸ್ತೆಗಳು ನದಿಯಂತಾಗಿತ್ತು. ಬಾಳೆಹೊನ್ನೂರು-ಕಳಸ- ಕೊಟ್ಟಿಗೆಹಾರ ಸಂಪರ್ಕ ಕಡಿತಗೊಂಡಿತ್ತು. ಎನ್ ಆರ್ ಪುರ ತಾಲೂಕಿನ ಬನ್ನೂರು ಬಳಿ ರಸ್ತೆ ಮುಳುಗಡೆಯಾಗಿದೆ. ರಸ್ತೆಯ ಮೇಲೆ ರಭಸವಾಗಿ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿವೆ.ವಿಜಯಪುರದ ನಾಲತವಾಡನಲ್ಲಿ ಭಾರಿ ಮಳೆಗೆ ಸಾರ್ವಜನಿಕರು, ಗ್ರಾಹಕರು ಪರದಾಡಿದರು. ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮಾರ್ಕೆಟ್‌ಗೆ ಚರಂಡಿ ನೀರು ನುಗ್ಗಿತ್ತು.

ಇದನ್ನೂ ಓದಿ: Namma Metro : ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

ಬಾಗಲಕೋಟೆಯಲ್ಲಿ ಅಬ್ಬರಿಸಿದ ಮಳೆ

ತಡರಾತ್ರಿ ಬಾಗಲಕೋಟೆಯ ರಬಕವಿ ಬನಹಟ್ಟಿ ನಗರದಲ್ಲಿ ಮಳೆಯು ಅಬ್ಬರಿಸಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು, ಇಡೀ ಬನಹಟ್ಟಿ ನಗರ ನದಿಯಂತೆ ಕಂಡು ಬಂತು. ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ನಿದ್ದೆಗೆಟ್ಟು ಬಕೆಟ್ ಮೂಲಕ ನೀರು ಹೊರ ಹಾಕಿದರು. ಬ್ಯಾರೆಲ್, ಮನೆ ಮುಂಭಾಗದ ಬೈಕ್‌ಗಳು ಜಲಾವೃತಗೊಂಡಿದ್ದವು. 1 ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಬನಹಟ್ಟಿ ಜನರು ತತ್ತರಿಸಿ ಹೋಗಿದ್ದರು.

ಚಿಕ್ಕಮಗಳೂರಿನಲ್ಲಿ ನಿಲ್ಲದ ಮಳೆ ಅವಾಂತರ

ರಾತ್ರಿ ಸುರಿದ ಮಳೆಗೆ ಕೆರೆಯ ಏರಿ ಒಡೆದು ಜಮೀನಿಗೆ ನೀರು ನುಗ್ಗಿದ್ದರಿಂದ ಸುಮಾರು 30 ಎಕರೆ ಬೆಳೆ ನಾಶವಾಗಿದೆ. ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಳ, ರಾಗಿ ಸೇರಿದಂತೆ ಹಲವು ಬೆಳೆಗಳು ಕೊಚ್ಚಿ ಹೋಗಿವೆ. ಕೂಡಲೇ ಏರಿ ದುರಸ್ತಿ ಮಾಡಿ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇತ್ತ ಚಿಕ್ಕಮಗಳೂರು ನಗರದ ಕಲ್ಲು ದೊಡ್ಡಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿ ಪರದಾಟ ಅನುಭವಿಸಿದರು. ರಸ್ತೆ ನೀರು ಹಳ್ಳದಂತೆ ಮನೆಗೆ ನುಗ್ಗಿತ್ತು. ನೀರು ಹೊರ ಹಾಕಲಾಗದೆ ಜನರು ಪರದಾಡಿದರು. ಮನೆಯಲ್ಲಿದ್ದ ಆಹಾರ ಪದಾರ್ಥ ಹಾಗೂ ವಸ್ತುಗಳು ಹಾನಿಯಾಗಿದ್ದವು. ನಗರ ಸಭೆ ವಿರುದ್ಧ ಸ್ಥಳೀಯ ನಾಗರಿಕರು ಇಡಿ ಶಾಪ ಹಾಕಿದ್ದರು.

ಆಗಸ್ಟ್‌ 23ರವರಗೆ ಭಾರಿ ಮಳೆ ಎಚ್ಚರ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ (ಆ.19) ಆಗಸ್ಟ್ 23ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಹೀಗಾಗಿ ಆಗಸ್ಟ್ 19 ರಿಂದ 23 ರ ವರೆಗೆ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಆಗಸ್ಟ್ 19 ಮತ್ತು 20 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23 ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಕೋಲಾರ್, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

Karnataka Weather Forecast
Karnataka Weather Forecast

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಗುಡುಗು ಸಹಿತ ಮಳೆ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

Karnataka Weather Forecast : ಶನಿವಾರ ರಾತ್ರಿ ಸುರಿದ ಮಳೆಯು ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ (Rain News) ಬೆಳೆಗಳು ಜಲಾವೃತಗೊಂಡು ರೈತರು ಕಂಗಲಾಗಿದ್ದಾರೆ.

VISTARANEWS.COM


on

By

Karnataka weather Forecast
Koo

ಯಾದಗಿರಿ ಜಿಲ್ಲೆಯಾದ್ಯಂತ ನಿನ್ನೆ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ (Rain News) ಬೂದನೂರಿನ ಹಿರೇಹಳ್ಳ ತುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ 20ಕ್ಕೂ ಹೆಚ್ಚು ಕುರಿಗಳು ಕೊಚ್ಚಿ ಹೋಗಿವೆ. ಇತ್ತ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ 50 ಕುರಿಗಳ ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬೂದನೂರಿನ ಹಿರೇಹಳ್ಳದಲ್ಲಿ ಘಟನೆ (Karnataka Weather Forecast) ನಡೆದಿದೆ. ಬೂದನೂರ ಗ್ರಾಮದ ಸಾಮಯ್ಯ ಎಂಬ ಕುರುಗಾಯಿಗೆ ಸೇರಿದ್ದ ಕುರಿಗಳನ್ನು ಸಂಜೆ ಎಂದಿನಂತೆ ಹಳ್ಳ ದಾಟಿ ಬರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಗ್ರಾಮಸ್ಥರ ಸಹಾಯದಿಂದ 50 ಕ್ಕೂ ಹೆಚ್ಚು ಕುರಿಗಳ ರಕ್ಷಣೆ ಮಾಡಲಾಗಿದೆ. 20 ಕ್ಕೂ ಹೆಚ್ಚು ಕುರಿಗಳು ಹಿರೇಹಳ್ಳದ ನೀರು ಪಾಲಾಗಿವೆ.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಭಾನುವಾರ ಅರ್ಧ ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆಯಾಗಿದೆ. ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಮಳೆ ಆರ್ಭಟ ಜೋರಾಗಿತ್ತು. ಮಳೆಗೆ ರಸ್ತೆ ಹಾಗೂ ಚರಂಡಿಗಳ ಮೇಲೆ ನೀರು ಹರಿದು ಮನೆಗಳತ್ತ ತೆರಳಲು ಜನರು ಪರದಾಡಿದ್ದರು. ರಾಜಧಾನಿ ಬೆಂಗಳೂರಿನ ಸುತ್ತಮುತ್ತಲೂ ಮಳೆಯಾಗಿದೆ.

ಚಿಕ್ಕಬಳ್ಳಾಪುರದಲಿ ಬಾಳೆ ತೋಟ ನಾಶ

ಇಡೀ ರಾತ್ರಿ ಸುರಿದ ಭಾರಿ ಮಳೆಗೆ ಬಾಳೆ ತೋಟ ನಾಶವಾಗಿದೆ. ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಹತ್ತು ಲಕ್ಷ ಬೆಲೆ ಬಾಳುವ 2500 ಬಾಳೆ ಗಿಡಗಳು ನಾಶವಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಬೀಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬ ರೈತನಿಗೆ ಸೇರಿದ ಬಾಳೆ ತೋಟ ಫಸಲಿಗೆ ಬಂದಿದ್ದ ಬೆಳೆ ನೆಲಕಚ್ಚಿದೆ. ಇತ್ತ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮೇಲೂರು ಗ್ರಾಮ ದೇವತೆ ಗಂಗಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಮನೆಗಳಿಗೆ ಹಾಗೂ ದೇವಸ್ಥಾನಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಅಧಿಕಾರಿಗಳಿಗೆ ಜನರು ಹಿಡಿಶಾಪ ಹಾಕಿದ್ದಾರೆ.

ತುಮಕೂರಿನಲ್ಲಿ ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

ತುಮಕೂರು ಜಿಲ್ಲೆಯ ಹಲವೆಡೆ ತಡರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ರಸ್ತೆಗಳು ಜಲಾವೃತಗೊಂಡಿದೆ. ತುಮಕೂರು ನಗರ, ಗುಬ್ಬಿ, ಕುಣಿಗಲ್ ತಾಲೂಕಿನಲ್ಲಿ ಮಳೆಯಾಗಿದೆ. ತುಮಕೂರು ನಗರದ ಬನಶಂಕರಿಯಲ್ಲಿ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಟಬೇಕಾಯಿತು. ಹಲವಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ವಿಜಯಪುರದಲ್ಲಿ ಜಮೀನು ಜಲಾವೃತ

ಕಾಲುವೆಗೆ ನೀರು ಬಿಟ್ಟಿದ್ದರಿಂದ ಭೂಮಿಯ ಬದು ಒಡೆದು ಜಮೀನಿಗೆ ನೀರು ನುಗ್ಗಿದೆ. ಕಾಲುವೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತರು ಬೆಳೆದ ಮುಂಗಾರು ಬೆಳೆಗಳಾದ ತೊಗರಿ, ಮೆಕ್ಕೆಜೋಳ ಸಂಪೂರ್ಣ ಜಲಾವೃತಗೊಂಡಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ ಗ್ರಾಮದ ರೈತರ ಗೋಳು ಕೇಳುವವರು ಇಲ್ಲದಂತಾಗಿದೆ. ನೂರಾರು ಎಕರೆದಲ್ಲಿ ಬೆಳೆದ ಬೆಳೆ ಸಂಪೂರ್ಣಹಾನಿಯಾಗಿದೆ. ಕೂಡಲೇ ಕಾಲುವೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಜತೆಗೆ ನಾಶವಾದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಮಳೆಗೆ ಧರೆಗುರುಳಿದ ಮರಗಳು

ನಿನ್ನೆ ಶನಿವಾರ ಸುರಿದ ಗಾಳಿ ಮಳೆಗೆ ಅಡಿಕೆ ಹಾಗೂ ತೆಂಗಿನ ಮರಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಾಸಡಿ ಗ್ರಾಮ ಒಂದರಲ್ಲೇ 3 ಸಾವಿರಕ್ಕೂ ಅಧಿಕ ಅಡಿಕೆ ಮರ 200ಕ್ಕೂ ಅಧಿಕ ತೆಂಗಿನ ಮರಗಳು ಉರುಳಿ ಬಿದ್ದಿವೆ. ಫಲಕ್ಕೆ ಬಂದ ಅಡಿಕೆ ಮರ ಕಳೆದುಕೊಂಡ ರೈತರು ಗೋಳಾಡುತ್ತಿದ್ದಾರೆ. 16 ವರ್ಷಗಳ ಕಾಲ ಮಕ್ಕಳಂತೆ ಸಾಕಿದ್ದ ಅಡಿಕೆ ಮರ ಧರೆಗುರುಳಿದ್ದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತರೂಂದಿಗೆ ಮಾಜಿ ಸಚಿವ ರೇಣುಕಾಚಾರ್ಯ ಬೆಳೆ ಹಾನಿ ತೋಟಗಳಿಗೆ ಭೇಟಿ ನೀಡಿದರು. ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು. ಬೆಳೆ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ: POCSO Case: ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ

ನಾಳೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಆ.19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನೂ ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kolkata Doctor murder case
ದೇಶ3 mins ago

Kolkata Doctor murder case: ಕೋಲ್ಕತ್ತಾ ಟ್ರೈನಿ ವೈದ್ಯೆಯ ಕೊಲೆ ಪ್ರಕರಣ- ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

Tungabhadra dam
ಪ್ರಮುಖ ಸುದ್ದಿ7 mins ago

Tungabhadra Dam : ತುಂಗಭದ್ರಾ ಜಲಾಶಯದ ಬಳಿ ವಿಧಿಸಿದ್ದ ಸೆಕ್ಷನ್‌ 144 ವಾಪಸ್‌‌

Paneer test
ಆರೋಗ್ಯ40 mins ago

Use Of Paneer Water: ಪನೀರ್‌ ಮಾಡುವಾಗ ಉಳಿದ ನೀರನ್ನು ಚೆಲ್ಲಬೇಡಿ; ಹೀಗೆ ಬಳಸಿ ಪೋಷಕಾಂಶ ಪಡೆಯಿರಿ!

Raichur News
ಪ್ರಮುಖ ಸುದ್ದಿ48 mins ago

Raichur News : ಉಸಿರಾಡುತ್ತಿವೆ ಮುಸ್ಲಿಂ ಧರ್ಮಗುರುಗಳ ಗೋರಿಗಳು, ಪವಾಡ ಎಂದ ಭಕ್ತರು

Vastu Tips
ಧಾರ್ಮಿಕ2 hours ago

Vastu Tips: ಸ್ನಾನಗೃಹದಲ್ಲಿ ಯಾವ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

Karnataka Weather Forecast
ಮಳೆ2 hours ago

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಇಂದು ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya : ಹೊಸ ಒಪ್ಪಂದ ಮಾಡ್ಬೇಡಿ; ಆತುರದಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಬೇಡಿ

Justice KS Hegde
ಕರ್ನಾಟಕ8 hours ago

Justice KS Hegde: ಜಸ್ಟೀಸ್‌ ಕೆ.ಎಸ್.ಹೆಗ್ಡೆ ಜೀವನ, ಕೊಡುಗೆ ಕುರಿತು ಚಂದನ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮ

Paris Olympics 2024
ಪ್ರಮುಖ ಸುದ್ದಿ9 hours ago

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಚೀನಾದ ಅಥ್ಲೀಟ್​ ಈಗ ರೆಸ್ಟೋರೆಂಟ್​​ನಲ್ಲಿ ವೇಟರ್​!

Sudha Murthy'
ಪ್ರಮುಖ ಸುದ್ದಿ9 hours ago

Sudha Murthy : ವಿವಾದ ಸೃಷ್ಟಿಸಿದ ಸುಧಾ ಮೂರ್ತಿಯವರ ‘ರಕ್ಷಾ ಬಂಧನ’ದ ಕತೆ; ಸ್ಪಷ್ಟನೆ ನೀಡಿದ ಸಂಸದೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌