Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ - Vistara News

ಬಳ್ಳಾರಿ

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಸಂಡೂರು ತಾಲೂಕಿನ ದೊಡ್ಡ ಅಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಕೈಗೊಂಡು ಮತಯಾಚಿಸಿದರು.

VISTARANEWS.COM


on

Ballari Lok Sabha constituency Congress candidate e Tukaram Election campaign
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಂಡೂರು: ಬಡವರ ಬಾಳು ಬಂಗಾರ ಮಾಡಿದ ಸರ್ಕಾರ ಅದು ಕಾಂಗ್ರೆಸ್‌ ಸರ್ಕಾರ (Congress Government). ಆರ್ಟಿಕಲ್‌ 371 (ಜೆ) ನಿಂದಾಗಿ ಬಡವರ ಮಕ್ಕಳು ಓದುವಂತಾಗಿದೆ. ಉದ್ಯೋಗ ಪಡೆಯುವಂತಾಗಿದೆ, ಇದನ್ನು ಜಾರಿ ಮಾಡಿದ್ದು ಕಾಂಗ್ರೆಸ್‌ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ (Lok Sabha Election 2024) ತಿಳಿಸಿದರು.

ಸಂಡೂರು ತಾಲೂಕಿನ ದೊಡ್ಡ ಅಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

ಅಂತಾಪುರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಅನುದಾನ ನೀಡಲಾಗಿದೆ. ನೀರು, ವಿದ್ಯುತ್‌, ರಸ್ತೆ ಹೀಗೆ ಬೇಕಾದ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ. ಅಭಿವೃದ್ಧಿ ನಿರಂತರವಾಗಿದೆ ಎಂದ ಅವರು, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ, ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ಎಲ್. ಸ್ವಾಮಿ, ಮುಖಂಡರಾದ ಏಕಾಂಬರಪ್ಪ, ಲಕ್ಷ್ಮಣ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

AC Blast: ಜ್ಯುವೆಲ್ಲರಿಯಲ್ಲಿರುವ ಎಸಿ ವ್ಯವಸ್ಥೆಗೆ ಗ್ಯಾಸ್ ಮರುಪೂರಣ ಮಾಡಲು ಹೋದಾಗ ಘಟನೆ ಸಂಭವಿಸಿದೆ. ಈ ವೇಳೆ ಶಾರ್ಟ್​ ಸರ್ಕೀಟ್​ ಉಂಟಾಗಿದ್ದು ಏಕಾಏಕಿ ಬ್ಲಾಸ್ಟ್ ಎಸಿ ಬ್ಲಾಸ್ಟ್​ ಆಗಿ ಕಿಟಕಿ ಗಾಜುಗಳು ಎಲ್ಲೆಡೆ ಸಿಡಿದು ಬಿದ್ದಿವೆ. ಈ ಕೆಲಸಕ್ಕಾಗಿ ಬಂದಿದ್ದ ಮೂವರು ಕಾರ್ಮಿಕರಿಗೆ ಗಾಯವಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭಿರವಾಗಿ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

AC Blast
Koo

ಬಳ್ಳಾರಿ: ಶಾರ್ಟ್ ಸರ್ಕ್ಯೂಟ್​ನಿಂದಾಗಿ ಏರ್​ ಕಂಡೀಷನರ್​ ಯಂತ್ರ (AC Blast) ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡಿದೆ. ಬಳ್ಳಾರಿಯ ಕಲ್ಯಾಣ್ ಜುವೆಲರ್ಸ್ ನಲ್ಲಿ ಘಟನೆ ನಡೆದಿದೆ. ಬಳ್ಳಾರಿಯ ತೇರು ಬೀದಿಯ ರಸ್ತೆಯಲ್ಲಿ ಇರುವ ಕಲ್ಯಾಣ ಜ್ಯುವೆಲರ್ಸ್​ನಲ್ಲಿ ಶಾ್ಟ್​ ಸರ್ಕೀಟ್​ನಿಂದಾಗಿ ಎಸಿ ಸ್ಫೋಟಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜ್ಯುವೆಲ್ಲರಿಯಲ್ಲಿರುವ ಎಸಿ ವ್ಯವಸ್ಥೆಗೆ ಗ್ಯಾಸ್ ಮರುಪೂರಣ ಮಾಡಲು ಹೋದಾಗ ಘಟನೆ ಸಂಭವಿಸಿದೆ. ಈ ವೇಳೆ ಶಾರ್ಟ್​ ಸರ್ಕೀಟ್​ ಉಂಟಾಗಿದ್ದು ಏಕಾಏಕಿ ಬ್ಲಾಸ್ಟ್ ಎಸಿ ಬ್ಲಾಸ್ಟ್​ ಆಗಿ ಕಿಟಕಿ ಗಾಜುಗಳು ಎಲ್ಲೆಡೆ ಸಿಡಿದು ಬಿದ್ದಿವೆ. ಈ ಕೆಲಸಕ್ಕಾಗಿ ಬಂದಿದ್ದ ಮೂವರು ಕಾರ್ಮಿಕರಿಗೆ ಗಾಯವಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭಿರವಾಗಿ ಎಂದು ಮೂಲಗಳು ತಿಳಿಸಿವೆ.

ಗಾಯಗಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಎಸಿ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಶಾಪ್ ನಲ್ಲಿ ದಟ್ಟ ಹೊಗೆ ಆವರಿಸಿತ್ತು.

ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

ಬೆಂಗಳೂರು: ಪೊಲೀಸ್ ಠಾಣಾ ಆವರಣದಲ್ಲೇ ಮಹಿಳೆಯೊಬ್ಬಳು ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ (Assault Case) ಮಾಡಿದ್ದಾಳೆ. ಸೈಟು ವಿಚಾರಕ್ಕೆ (Site Dispute) ಎರಡು ಗುಂಪುಗಳ ಮಧ್ಯೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಜ್ಞಾನಭಾರತಿ ಠಾಣೆಗೆ ಬಂದಿದ್ದರು. ಈ ವೇಳೆ ಎರಡು ಗುಂಪುಗಳ ಸದಸ್ಯರು ಮಾತಿಗೆ ಮಾತು ಬೆಳೆಸಿ ಕಿತ್ತಾಡಲು ಮುಂದಾಗಿದ್ದರು. ಹೀಗಾಗಿ ಮಧ್ಯಪ್ರವೇಶಿಸಿ ಗಲಾಟೆ ಮಾಡದಂತೆ ಎಚ್ಚರಿಸಲು ಹೋದ ಇನ್‌ಸ್ಪೆಕ್ಟರ್‌ಗೆ ಮಹಿಳೆಯೊಬ್ಬಳು ಕಪಾಳಕ್ಕೆ ಹೊಡೆದಿದ್ದಾಳೆ.

ಇದನ್ನೂ ಓದಿ: Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

ನಿನ್ನೆ ಬುಧವಾರ ಸಂಜೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟರ್‌ ರವಿ ಅವರಿಗೆ ಫೌಜೀಯಾ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ಫೌಜೀಯಾ ಹಾಗೂ ಇನ್ನೊಂದು ಗುಂಪು ಸೈಟು ವಿಚಾರಕ್ಕೆ ಜ್ಞಾನಭಾರತಿ ಠಾಣೆ ಮೆಟ್ಟಿಲೇರಿದ್ದರು. ಈ ವೇಳೆ ಠಾಣೆ ಆವರಣದಲ್ಲಿ ಎರಡು ಗುಂಪುಗಳು ಏರು ಧ್ವನಿಯಲ್ಲಿ ಕೂಗಾಡುತ್ತಾ ಮಾತನಾಡುತ್ತಿದ್ದರು.

ಕರ್ತವ್ಯದಲ್ಲಿದ್ದ ಇನ್‌ಸ್ಪೆಕ್ಟರ್‌ ರವಿ ಎರಡು ಗುಂಪುಗಳಿಗೆ ಗಲಾಟೆ ಮಾಡದಂತೆ ವಾರ್ನಿಂಗ್‌ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಫೌಜೀಯ ಏಕಾಏಕಿ ಇನ್‌ಸ್ಪೆಕ್ಟರ್‌ ರವಿ ಅವರ ಕಪಾಳಕ್ಕೆ ಹೊಡೆದಿದ್ದಾಳೆ. ಮಾನವ ಹಕ್ಕುಗಳ ಸಂಘಟನೆಯಲ್ಲಿರುವ ಫೌಜೀಯಾ ಹಾಗೂ ಮತ್ತಿಬ್ಬರು ಮಹಿಳೆಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ರಾತ್ರಿಯೇ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading

ಬಳ್ಳಾರಿ

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Dr Vinayaka Prasanna: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ(50) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

VISTARANEWS.COM


on

Dr Vinayaka Prasanna passed away
Koo

ಬಳ್ಳಾರಿ: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ (50) (Dr Vinayaka Prasanna) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ತಾಯಿ ಶಕುಂತಲ, ಪತ್ನಿ ಡಾ‌. ವನಜ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಯಿತು. ಬಳಿಕ ನಗರದ ಸಿರುಗುಪ್ಪ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಅಂತ್ಯಕ್ರಿಯೆಯು ಶುಕ್ರವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರೊ. ಡಾ.ವಿನಾಯಕ ಪ್ರಸನ್ನ ಅವರ ನಿಧನಕ್ಕೆ ವಿಮ್ಸ್ ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

Continue Reading

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಹಾಗೂ ಹೀಟ್‌ ವೇವ್‌ (Heat wave) ಪರಿಸ್ಥಿತಿಗಳು ಮೇಲುಗೈ ಸಾಧಿಸಿವೆ. ಈ ವಾರವೆಲ್ಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಒಣ ಹವೆ (Dry Weather) ಮುಂದುವರಿಯಲಿದ್ದು, ತಾಪಮಾನ ಏರಿಕೆ ಆಗಲಿದೆ. ಶಾಖದ ಹೊಡೆತಕ್ಕೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ. ಇದರೊಟ್ಟಿಗೆ ಆರೋಗ್ಯ ಕಾಳಜಿ ವಹಿಸುವಂತೆ ಜನರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ಬಿಸಿಗಾಳಿ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ರೆಡ್ ಮತ್ತು ಆರೆಂಜ್‌, ಯೆಲ್ಲೋ ಅಲರ್ಟ್ ಇರುವ ಪ್ರದೇಶಗಳಿವು

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಬೆಂಗಳೂರಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ. ತಾಪಮಾನ ಏರಿಕೆಯು ಜನರನ್ನು ಕಂಗಾಲು ಮಾಡಿದೆ. ಇದೇ ವಾತಾವರಣವು ಈ ಪೂರ್ತಿ ಮುಂದುವರಿಯಲಿದೆ.

ಕೋಲಾರದಲ್ಲಿ ಮಳೆಯ ಸಿಂಚನ

ಕೋಲಾರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಗುರುವಾರ ಸತತ ಒಂದು ಗಂಟೆಯಿಂದ ಮಳೆ ಸುರಿಯುತ್ತಿದೆ. ಮೂರ್ನಾಲ್ಕು ತಿಂಗಳಿಂದ ಬೇಸಿಗೆ ಬಿಸಿಯಿಂದ ಬಸವಳಿದ ಜನರಿಗೆ ಮಳೆಯು ತಂಪೆರೆದಿದೆ. ಭರಣಿ ನಕ್ಷತ್ರದ ಮೊದಲ ಮಳೆ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಸುರಿಯುತ್ತಿದೆ. ಬಿಸಿಲಿನ ತಾಪ, ಬಿಸಿ ಗಾಳಿಗೆ, ಪರದಾಡುತ್ತಿದ್ದ ಜನರಿಗೆ ಮಳೆಯ ಸಿಂಚನದಿಂದ ಬಿಸಿಯಿಂದ ಮುಕ್ತರಾಗಿದ್ದಾರೆ

ಇದನ್ನೂ ಓದಿ: Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Karnataka Weather Forecast : ಹಗಲು ಹೊತ್ತು ಬಿಸಿ ಗಾಳಿ ಬೀಸಿದರೆ, ಮಧ್ಯಾಹ್ನದಂದು ಉರಿ ಬಿಸಿಲು ನೆತ್ತಿ ಸುಡುಲಿದೆ. ರಾತ್ರಿಯಾದರೆ ವಾತಾವರಣವು ಬೆಚ್ಚಗೆ ಇರಲಿದೆ. ಈ ಮಧ್ಯೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Dry Weather) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇದ್ದರೂ, ಕೆಲವೆಡೆ ಮಳೆಯ (Rain News) ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಏ.2ರಂದು ಮಲೆನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮುಖ್ಯವಾಗಿ ಶುಭ್ರ ಆಕಾಶವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರೆಡ್ ಅಲರ್ಟ್

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಮೇ 5ರವರೆಗೆ ಈ ಜಿಲ್ಲೆಗಳಲ್ಲಿ ತಾಪಮಾನ ವಿಪರೀತವಾಗಿ ಇರಲಿದೆ. ಉರಿ ಸೆಕೆಯ ವಾತಾವರಣ ಇರಲಿದೆ.

ಆರೆಂಜ್ ಅಲರ್ಟ್

ಇನ್ನೂ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ 5 ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 5 ರವರೆಗೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ನಿಮಗಾಗದಿದ್ದರೆ ನಮಗೆ ಅಧಿಕಾರ ಕೊಡಿ, 24 ಗಂಟೆಯಲ್ಲಿ ಹಿಡಿಯುತ್ತೇವೆ: ಅಶೋಕ್

Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದಲ್ಲ, ಇನ್ನೂ ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಈ ಘೋರ ಬಿಸಿಲಿನಲ್ಲಿ ಸ್ಮೃತಿ ತಪ್ಪಿದವರ ಸುದ್ದಿಗಳು ಅಲ್ಲಲ್ಲಿ ಕೇಳುತ್ತಿವೆ. ಬಿಸಿಲಾಘಾತಕ್ಕೆ ಜೀವ ತೆತ್ತವರ ವಿಷಯಗಳೂ ಕೇಳಿಬರುತ್ತಿವೆ. ಛತ್ರಿ ಹಿಡಿದೇ ಹೋಗುತ್ತೇವೆ ಹೊರಗೆ, ಚೆನ್ನಾಗಿ ನೀರು ಕುಡಿಯುತ್ತೇವೆ ನಾವು. ನಮಗೇನು ಬಿಸಿಲಿನ ಭಯವಿಲ್ಲ ಎನ್ನುವವರಿದ್ದಾರೆ. ವಿಷಯ ಹಾಗಲ್ಲ, ಬಿಸಿಲ ದಿನಗಳಲ್ಲಿ ಆರೋಗ್ಯದ ಕಾಳಜಿಯನ್ನು ಎಷ್ಟು ಮಾಡಿದರೂ ಸಾಲದು. ಒಮ್ಮೆ ಶಾಖದ ಆಘಾತಕ್ಕೆ ಅಥವಾ ನಿರ್ಜಲೀಕರಣಕ್ಕೆ ತುತ್ತಾದರೆ, ಚೇತರಿಸಿಕೊಳ್ಳಲು ನಾಲ್ಕಾರು ದಿನಗಳಾದರೂ ಬೇಕಾಗುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ, ಜೀವಕ್ಕೆ ಅಪಾಯ ತಪ್ಪಿದ್ದಲ್ಲ. ಹಾಗಾದರೆ ಇವುಗಳಿಂದ (Summer Tips) ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲವೇ?

Dry weather Summer Heat

ಏಕೆ ಹೀಗಾಗುತ್ತದೆ?

ಮೊದಲಿಗೆ, ಬಿಸಿಲಿಗೆ ಎಚ್ಚರ ತಪ್ಪುವುದೇಕೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಹೊರಗಿನ ವಾತಾವರಣದ ಉಷ್ಣತೆಯನ್ನು ಆಧರಿಸಿ, ನಮ್ಮ ದೇಹ ತನ್ನ ಉಷ್ಣತೆಯನ್ನು ಮಾರ್ಪಾಡು ಮಾಡಿಕೊಳ್ಳುತ್ತದೆ. ಹೊರಗಿನ ತಾಪಮಾನ ತೀವ್ರವಾಗಿ ಏರಿಕೆಯಾದಾಗ, ದೇಹದೊಳಗಿನ ಉಷ್ಣತೆಯನ್ನು ತಗ್ಗಿಸುವುದಕ್ಕೆ ಶರೀರ ಬೆವರಲು ಪ್ರಾರಂಭಿಸುತ್ತದೆ. ಇದರಿಂದಲೇ ದೇಹ ತಣ್ಣಗಾಗಬೇಕು, ಆಂತರಿಕ ಉಷ್ಣತೆ ನಿಯಂತ್ರಣದಲ್ಲಿ ಇರಬೇಕು. ಆದರೆ ಈ ಎಲ್ಲ ತಂತ್ರಗಳು ಕೈಕೊಟ್ಟಾಗ, ಸಾಕಾಗದೆ ಇದ್ದಾಗ ಅಥವಾ ಅತಿಯಾಗಿ ಬೆವರಿ ದೇಹದಲ್ಲಿ ನೀರಿನಂಶ ಕಡಿಮೆ ಆದಾಗ, ಎಚ್ಚರ ತಪ್ಪುತ್ತದೆ. ಇದರಿಂದ ಮೆದುಳಿಗೆ ಅಗತ್ಯವಾದಷ್ಟು ರಕ್ತಸಂಚಾರ ಆಗದಿದ್ದರೆ, ಪಾರ್ಶ್ವವಾಯು ಸಂಭವಿಸಿ ಜೀವಹಾನಿಯೂ ಆಗಬಹುದು.

ಮಾನವ ಶರೀರ ತನ್ನಷ್ಟಕ್ಕೆ ತಡೆದುಕೊಳ್ಳಲು ಸಾಧ್ಯವಾಗುವ ಗರಿಷ್ಟ ಉಷ್ಣತೆಯೆಂದರೆ ೪೨.೩ ಡಿಗ್ರಿ ಸೆ. ಇದಿಷ್ಟು ತಡೆಯುವುದೂ ಸುಲಭವಿಲ್ಲ. ಇನ್ನು ಇದಕ್ಕಿಂತಲೂ ಹೆಚ್ಚಿನ ತಾಪಮಾನವನ್ನು ಸಹಿಸಿಕೊಳ್ಳಲು ಏನೆಲ್ಲ ಉಪಚಾರ ಸಾಧ್ಯವೋ ಅದನ್ನು ನಮಗೆ ನಾವೇ ಮಾಡಿಕೊಳ್ಳಬೇಕು. ಸಿಕ್ಕಾಪಟ್ಟೆ ನೀರು ಕುಡಿಯುವುದು, ಎಲೆಕ್ಟ್ರೋಲೈಟ್‌ ಮರುಪೂರಣ ಮಾಡುವುದು, ಚೆನ್ನಾಗಿ ಗಾಳಿಯಾಡುವ ವಾತಾವರಣದಲ್ಲಿರುವುದು- ಇಂಥವೆಲ್ಲ ನಾವು ಅಗತ್ಯವಾಗಿ ಮಾಡಬೇಕಾದ ಕೆಲಸಗಳು.

ಉಷ್ಣತೆಗೆ ಮಾತ್ರವಲ್ಲ

ತೀವ್ರ ತಾಪಮಾನಗಳಿಗೆ ಎಚ್ಚರ ತಪ್ಪುವುದು ಬಿಸಿ ಹೆಚ್ಚಾದಾಗ ಮಾತ್ರವಲ್ಲ, ತೀವ್ರ ಚಳಿಯಲ್ಲೂ ಆಗುತ್ತದೆ. ಈ ಎರಡೂ ಅತಿರೇಕದ ತಾಪಮಾನಗಳಲ್ಲಿ ದೇಹದ ಉಷ್ಣತಾ-ನಿಯಂತ್ರಕ ವ್ಯವಸ್ಥೆ ಕೈಕೊಡಬಹುದು. ಬಿಸಿ ಹೆಚ್ಚಾದಾಗ ಮೆದುಳಿಗೆ ರಕ್ತಸಂಚಾರ ಸರಾಗ ಆಗದಿರುವ ಸಂಭವ ಇರುವದಂತೆಯೇ, ಚಳಿ ಹೆಚ್ಚಾದಾಗಲೂ ಆಗುತ್ತದೆ. ಹೊರಗಿನ ಚಳಿ ತೀವ್ರವಾಗಿ ಹೆಚ್ಚಾದರೆ, ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುವುದಕ್ಕೆ ರಕ್ತ ನಾಳಗಳು ಸಂಕೋಚಗೊಳ್ಳುತ್ತವೆ. ಹೀಗೆ ಸಂಕೋಚಗೊಳ್ಳುವುದು ಅತಿಯಾದರೆ ಆಗಲೂ ಮೆದುಳಿಗೆ ಬೇಕಾದಷ್ಟು ರಕ್ತಸಂಚಾರ ಆಗದೆ ಜ್ಞಾನ ತಪ್ಪಬಹುದು.

Summer Fashion

ತಪ್ಪಿಸಿಕೊಳ್ಳಲಾಗದೆ?

ಖಂಡಿತ ಸಾಧ್ಯವಿದೆ. ಮೊದಲಿಗೆ, 40 ಡಿ.ಸೆ. ಉಷ್ಣತೆಯನ್ನು ತಲುಪಿದಾಗ ಮನೆಯಿಂದ ಹೊರಗೆ ಹೋಗಬೇಡಿ. ಹೋಗುವುದು ಅನಿವಾರ್ಯವಾದರೆ, ಸಡಿಲವಾದ ಬಿಳಿ ಅಥವಾ ತಿಳಿ ಬಣ್ಣದ ಹತ್ತಿಯ ಬಟ್ಟೆಗಳನ್ನೇ ಧರಿಸಿ. ತಲೆಗೆ ಟೋಪಿ, ಛತ್ರಿಗಳಂಥವು ಇದ್ದರೆ ಒಳ್ಳೆಯದು. ನಿಲ್ಲಿಸಿದ ಕಾರಿನೊಳಗೆ ಯಾರನ್ನೂ ಬಿಡಬೇಡಿ. ಈ ಸೆಕೆಯಲ್ಲಿ ದಿನಕ್ಕೆ ಐದು ಲೀಟರ್‌ ನೀರು ಅಥವಾ ಪೇಯಗಳನ್ನು ಕುಡಿಯುವ ಗುರಿ ಇರಿಸಿಕೊಳ್ಳಿ. ಆಲ್ಕೋಹಾಲ್‌ ಮತ್ತು ಕೆಫೇನ್‌ ಸೇವನೆಯ ಮೇಲೆ ಕಡಿವಾಣ ಅಗತ್ಯ. ಇಲ್ಲದಿದ್ದರೆ ದೇಹ ಬೇಗನೇ ನಿರ್ಜಲೀಕರಣಕ್ಕೆ ತುತ್ತಾಗುತ್ತದೆ. ಜೊತೆಗೆ, ಸೆಕೆಯಲ್ಲಿ ದೇಹವನ್ನು ತಂಪಾಗಿಸುವ ಶಾರೀರಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ತಲೆನೋವು, ಅತಿಯಾಗಿ ಬೆವರುವುದು, ಬಾಯಿ ಒಣಗುವುದು, ತೀರದ ದಾಹ, ಮೈಯೆಲ್ಲ ಬಿಸಿಯಾದ ಅನುಭವಗಳು ಆದರೆ ಜಾಗ್ರತೆ ಮಾಡಿ. ತಕ್ಷಣವೇ ದೇಹವನ್ನು ತಂಪಾಗಿಸುವ ಬಗ್ಗೆ ಕ್ರಮ ಕೈಗೊಳ್ಳಿ. ತಂಪಾದ ಬಟ್ಟೆಯಿಂದ ಇಡೀ ದೇಹವನ್ನು ಒರೆಸಬಹುದು. ಒಆರೆಸ್‌, ಎಳನೀರು ಮುಂತಾದ ಎಲೆಕ್ಟ್ರೋಲೈಟಿಕ್‌ ಪೇಯಗಳು ಬೇಕಾಗುತ್ತವೆ. ಕೂಲರ್‌, ಎಸಿಯಂಥ ಉಪಕರಣಗಳ ಮೂಲಕ ಮನೆಯ ವಾತಾವರಣವನ್ನು ತಂಪಾಗಿಸಲು ಪ್ರಯತ್ನಿಸಿ. ಈ ಹೊತ್ತಿನಲ್ಲಿ ಮನೆಯಿಂದ ಹೊರಗಿದ್ದರೆ, ತಂಪಾದ ನೆರಳಿನಂಥ ಜಾಗಕ್ಕೆ ಹೋಗಿ. ಬಿಸಿಲಿನ ಆಘಾತ ತಾಗಿದಾಗ ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ಜೀವಕ್ಕೇ ಎರವಾಗುತ್ತದೆ, ನೆನಪಿರಲಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IPL 2024
ಪ್ರಮುಖ ಸುದ್ದಿ2 mins ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ24 mins ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ25 mins ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ36 mins ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ54 mins ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ56 mins ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ1 hour ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ1 hour ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

AC Blast
ಪ್ರಮುಖ ಸುದ್ದಿ2 hours ago

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

Tax Returns
ಪ್ರಮುಖ ಸುದ್ದಿ3 hours ago

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ5 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ19 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌