Site icon Vistara News

Lok Sabha Election 2024: ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ: ಈ. ತುಕಾರಾಂ

Ballari Lok Sabha Congress candidate e Tukaram election campaign in chilakanahatti Village

ಹಗರಿಬೊಮ್ಮನಹಳ್ಳಿ: ದೇಶಕ್ಕೆ ಕಾಂಗ್ರೆಸ್ ಪಕ್ಷವು (Congress Party) ನೀಡಿದ ಕೊಡುಗೆ ಅಪಾರ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ (Lok Sabha Election 2024) ತಿಳಿಸಿದರು.

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚಿಲಕನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮತಯಾಚನೆ ನಡೆಸಿ, ಮಾತನಾಡಿದ ಅವರು, ದೇಶಕ್ಕೆ ಕಾಂಗ್ರೆಸ್ ಪಕ್ಷವು ನೀಡಿದ ಕೊಡುಗೆ ಅಪಾರ. ಹಸಿರು ಕ್ರಾಂತಿ, ಬ್ಯಾಂಕುಗಳ ರಾಷ್ಟ್ರೀಕರಣ, ಮೀಸಲಾತಿ, ಪಂಚಾಯತ್ ರಾಜ್ ವ್ಯವಸ್ಥೆ, ಆಹಾರ ಭದ್ರತಾ ಯೋಜನೆ, ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿ ಮಾಡಿದ್ದು ಕಾಂಗ್ರೆಸ್‌ ಎಂದು ವಿವರಿಸಿದರು.

ಇದನ್ನೂ ಓದಿ: Lok Sabha Election 2024: ದೇಶದಲ್ಲಿ ಅಭಿವೃದ್ಧಿ ಕ್ರಾಂತಿ ಮಾಡಿದ್ದು ಕಾಂಗ್ರೆಸ್‌ ಪಕ್ಷ: ಈ. ತುಕಾರಾಂ

ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ ಗೃಹಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ, ಶಕ್ತಿ, ಕ್ಷೀರಭಾಗ್ಯ ಸೇರಿದಂತೆ ಇನ್ನೂ ಮುಂತಾದ ಜನಪ್ರಿಯ ಯೋಜನೆಗಳಿಂದಲೂ ಕೋಟ್ಯಾಂತರ ಬಡವರಿಗೆ ಸಹಾಯವಾಗಿದೆ. ಇಂತಹ ಪಕ್ಷವನ್ನು ಅಧಿಕಾರಕ್ಕೆ ತರಲು ಹಸ್ತದ ಗುರುತಿಗೆ ಮತ ನೀಡಿ ಎಂದು ಅವರು ಮನವಿ ಮಾಡಿದರು.

ಇದನ್ನೂ ಓದಿ: IPL 2024: ಟಿ20 ಕ್ರಿಕೆಟ್​ನಲ್ಲೇ ನೂತನ ದಾಖಲೆ ಬರೆದ ಸನ್​ರೈರ್ಸ್​ ಹೈದರಾಬಾದ್

ಈ ಸಂದರ್ಭದಲ್ಲಿ ಮಾಜಿ ಸಚಿವ ನಬೀಸಾಬ್, ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಕಿಶೋರಿ ಬುದನೂರು, ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ, ಮುಖಂಡರಾದ ಕುರಿ ಶಿವಮೂರ್ತಿ, ಪತ್ರೆಶ್ ಹಿರೇಮಠ್, ಬಾನಮ್ಮ, ಪರಶುರಾಮ್, ರಫಿಕ್, ಮೊಹಮ್ಮದ್, ಕೋರಿ ಗೋಣಿಬಸಪ್ಪ, ವಿದ್ಯಾ ಹಿರೇಮಠ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Exit mobile version