MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು - Vistara News

ಬಳ್ಳಾರಿ

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು

MLC Election: ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. 91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ, 94-ಬಳ್ಳಾರಿ ನಗರ, 95-ಸಂಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ 14,981 ಪುರುಷರು, 9,198 ಮಹಿಳೆಯರು ಮತ್ತು 4 ಜನ ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ.

VISTARANEWS.COM


on

MLC Election North East Graduate Constituency Election 2024 total 24 183 graduate voters in the district
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ (MLC Election) ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಕ್ಷೇತ್ರವಾರು ಮತದಾರರ ವಿವರ

91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ, 94-ಬಳ್ಳಾರಿ ನಗರ, 95-ಸಂಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ 14,981 ಪುರುಷರು, 9,198 ಮಹಿಳೆಯರು ಮತ್ತು 4 ಜನ ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ.

ಇದನ್ನೂ ಓದಿ: Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

ಕಂಪ್ಲಿ ಕ್ಷೇತ್ರದಲ್ಲಿ 2,568 ಪುರುಷರು, 1,170 ಮಹಿಳೆಯರು ಸೇರಿ ಒಟ್ಟು 3,738 ಪದವೀಧರ ಮತದಾರರು. ಸಿರುಗುಪ್ಪ ಕ್ಷೇತ್ರದಲ್ಲಿ 2,522 ಪುರುಷರು, 921 ಮಹಿಳೆಯರು ಸೇರಿ ಒಟ್ಟು 3,443 ಪದವೀಧರ ಮತದಾರರು. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 3,098 ಪುರುಷರು, 2,030 ಮಹಿಳೆಯರು ಮತ್ತು 01 ಇತರೆ ಸೇರಿ ಒಟ್ಟು 5,129 ಪದವೀಧರ ಮತದಾರರಿದ್ದಾರೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ 4,552 ಪುರುಷರು, 3,681 ಮಹಿಳೆಯರು ಮತ್ತು 02 ಇತರೆ ಸೇರಿ ಒಟ್ಟು 8,235 ಪದವೀಧರ ಮತದಾರರು. ಸಂಡೂರು ಕ್ಷೇತ್ರದಲ್ಲಿ 2,241 ಪುರುಷರು, 1,396 ಮಹಿಳೆಯರು ಮತ್ತು 01 ಇತರೆ ಸೇರಿ ಒಟ್ಟು 3,638 ಪದವೀಧರ ಮತದಾರರಿದ್ದಾರೆ.

24 ಮತಗಟ್ಟೆ ಕೇಂದ್ರಗಳು

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಒಟ್ಟು 24 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಕಂಪ್ಲಿ ಕ್ಷೇತ್ರ
ಕಂಪ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕಂಪ್ಲಿ ಪಟ್ಟಣದ ಪುರಸಭೆ ಕಚೇರಿಯಲ್ಲಿ 02 ಮತಗಟ್ಟೆ ಕೇಂದ್ರಗಳು, ಕುರುಗೋಡು ಪಟ್ಟಣದ ಅಂಗನವಾಡಿ ಕೇಂದ್ರ ಮತ್ತು ಕೋಳೂರು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಸೇರಿ ಒಟ್ಟು 04 ಮತಗಟ್ಟೆ ಕೇಂದ್ರಗಳು.

ಸಿರುಗುಪ್ಪ ಕ್ಷೇತ್ರ
ಸಿರುಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಹಚ್ಚೋಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ, ಸಿರುಗುಪ್ಪ ಪಟ್ಟಣದ ಸರ್ಕಾರಿ ಪ್ರೌಢಶಾಲೆ, ತೆಕ್ಕಲಕೋಟೆಯ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಕರೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಸೇರಿ 04 ಮತಗಟ್ಟೆ ಕೇಂದ್ರಗಳು.

ಬಳ್ಳಾರಿ ಗ್ರಾಮೀಣ ಕ್ಷೇತ್ರ
ಬಳ್ಳಾರಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಮೋಕಾದ ಗ್ರಾಮ ಪಂಚಾಯಿತಿ ಕಚೇರಿ, ಬಳ್ಳಾರಿಯ ಕೌಲ್‍ಬಜಾರ್‌ನ ಸೆಂಟ್ ಜೋಸೆಫ್ ಪ್ರೌಢಶಾಲೆಯ 4ನೇ ತರಗತಿ ಕೊಠಡಿ, 5 ನೇ ತರಗತಿ ಕೊಠಡಿ ಹಾಗೂ 6ನೇ ತರಗತಿ ಕೊಠಡಿ ಮತ್ತು ರೂಪನಗುಡಿ ಗ್ರಾಮ ಪಂಚಾಯಿತಿ ಕಚೇರಿ ಸೇರಿ 05 ಮತಗಟ್ಟೆ ಕೇಂದ್ರಗಳು.

ಬಳ್ಳಾರಿ ನಗರ ಕ್ಷೇತ್ರ
ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಳ್ಳಾರಿ ನಗರದ ಅಂಬಲಿಬಾಗ್‍ನ ಅಂಚೆ ಕಚೇರಿ ಹತ್ತಿರದ ಸರ್ಕಾರಿ ಬಾಲಕೀಯರ ಕಾಲೇಜಿನ ಕೊಠಡಿ ಸಂಖ್ಯೆ 42, ಕೊಠಡಿ ಸಂಖ್ಯೆ 43, ಕೊಠಡಿ ಸಂಖ್ಯೆ 44, ಎಸ್.ಎನ್.ಪೇಟೆ ಮುಖ್ಯ ರಸ್ತೆಯ ಎಸ್‍ಎಸ್‍ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02, ಗಾಂಧಿನಗರದ ಬಾಲಭಾರತಿ ಇಂಗ್ಲೀಷ್ ಮಾಧ್ಯಮ ಶಾಲೆಯ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02 ಸೇರಿ ಒಟ್ಟು 07 ಮತಗಟ್ಟೆ ಕೇಂದ್ರಗಳು.

ಸಂಡೂರು ಕ್ಷೇತ್ರ
ಸಂಡೂರು ಕ್ಷೇತ್ರ ವ್ಯಾಪ್ತಿಯಲ್ಲಿ ತೋರಣಗಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02, ಸಂಡೂರು ಪಟ್ಟಣದ ತಾಲ್ಲೂಕು ಕಚೇರಿ ಮತ್ತು ಚೋರನೂರು ಹೋಬಳಿಯ ನಾಡಕಚೇರಿ ಕಾರ್ಯಾಲಯ ಸೇರಿ ಒಟ್ಟು 04 ಮತಗಟ್ಟೆ ಕೇಂದ್ರಗಳು.‌

ಇದನ್ನೂ ಓದಿ:Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಜೂನ್ 03 ರಂದು ಮತದಾನ ನಡೆಯಲಿದ್ದು, ಈಗಾಗಲೇ ನೋಂದಾಯಿಸಿಕೊಂಡಿರುವ ಎಲ್ಲಾ ಅರ್ಹ ಮತದಾರರು ಅಂದು ತಪ್ಪದೇ ಮತಗಟ್ಟೆ ಕೇಂದ್ರಗಳಿಗೆ ತೆರಳಿ ಮತದಾನ ಮಾಡಬೇಕು ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

Rain News : ರಾಜ್ಯಾದ್ಯಂತ ಇನ್ನೊಂದು ವಾರ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಹಲವೆಡೆ ರೆಡ್‌ ಅಲರ್ಟ್‌ ನೀಡಲಾಗಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು/ಕಾರವಾರ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಗಾಳಿ ಸಹಿತ ಹಗುರದಿಂದ (Rain News) ಕೂಡಿದ ಮಳೆಯಾಗಿದೆ. ಶಿವಾಜಿನಗರ, ವಸಂತನಗರ, ಶಾಂತಿನಗರ, ಜಯನಗರ, ವಿಜಯ ನಗರ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿ ನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಹಲವೆಡೆ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು (Karnataka Weather Forecast) ಪರದಾಡಿದರು.

ಕೊಪ್ಪಳದಲ್ಲಿ ಹಳ್ಳ ದಾಟಲು ಹೋದವರ ಪರದಾಟ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಜಾಲಿಹಾಳ ಗ್ರಾಮದಲ್ಲಿ ಹಳ್ಳ ದಾಟಲು ಹೋಗಿ ಬೊಲೆರೋ ವಾಹನದಲ್ಲಿದ್ದ 15 ಕಾರ್ಮಿಕರು ಮಧ್ಯದಲ್ಲಿಯೇ ಸಿಲುಕಿಕೊಂಡಿದ್ದಾರೆ. ವಿಂಡ್ ಪವರ್ ನಲ್ಲಿ ಕೆಲಸ ಮಾಡುವ ಕಾರ್ಮಿಕರು, ವಾಪಸ್‌ ಜಾಲಿಹಾಳಗೆ ತೆರಳುತ್ತಿದ್ದರು. ಈ ವೇಳೆ ಹಳ್ಳದಲ್ಲಿ ಸಿಲುಕಿ ಪರದಾಟ ಅನುಭವಿಸಿದರು.

ಉತ್ತರ ಕನ್ನಡದಲ್ಲಿ ತಡರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಒಂದು ವಾರ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 23 ರಂದು ಸಮುದ್ರ ಭಾಗದಲ್ಲಿ 45 ರಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಮುನ್ಸೂಚನೆ ನೀಡಲಾಗಿದೆ.

ಕೊಡಗು ಜನತೆಗೆ ಜಿಲ್ಲಾಡಳಿತ ಸೂಚನೆ

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕೊಡಗಿಗೆ ‌ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂ.23, 24 ಹಾಗೂ 25ರಂದು ಎಚ್ಚರಿಕೆಯಿಂದ ಇರುವಂತೆ ಕೊಡಗಿನ ಜನತೆಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಸುಮಾರು 115 ರಿಂದ 204.4 ಮೀ.ಮಿ‌ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Murder case : ಕಾಡಿಗೆ ಹೋದ ಮಹಿಳೆಯ ಕತ್ತು ಕೊಯ್ದು ಕೊಲೆ; ಹಂತಕರು ಪರಾರಿ

ಮಳೆಯಿಂದ ಹಾಳಾಗಿರುವ ಸರ್ಕಾರಿ ಶಾಲೆ

ಭಾರಿ ಮಳೆಯಿಂದಾಗಿ ಸರ್ಕಾರಿ ಶಾಲೆಯೊಂದು ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಗಿಲಕೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಇಂಥಹದೊಂದು ಅವಸ್ಥೆ ಇದೆ. ಮಳೆ ಬಂದಾಗ ಶಾಲೆಯ ಚಾವಣಿ, ಶಾಲೆಯ ಅಡುಗೆ ಕೋಣೆ ಸೋರುತ್ತಿದೆ. ಶಾಲೆ ಕೊಠಡಿ ಒಳಗೆ ಭಯದ ವಾತಾವರಣದಲ್ಲೇ ಮಕ್ಕಳು ಕೂರುವಂತಾಗಿದೆ. ಮಳೆ ನೀರು ಸೋರಿಕೆಯಿಂದಾಗಿ ಶಾಲಾ ಆವರಣದಲ್ಲಿ ಸಿಬ್ಬಂದಿ ಅಡುಗೆ ಮಾಡುತ್ತಿದ್ದಾರೆ. ಇದುವರೆಗೂ ಯಾವೊಬ್ಬ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿಲ್ಲ. ಇತ್ತ ಶಾಲೆಯ ಶಿಕ್ಷಕರು ಅಸಹಾಯಕರಾಗಿದ್ದಾರೆ.

ಶನಿವಾರ ಇಲ್ಲೆಲ್ಲ ಮಳೆ ಅಬ್ಬರ

ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಹಾಗೂ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳುರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವೆಡೆ ಬಿರುಗಾಳಿ ಸಹಿತ ಗುಡುಗು ಜತೆಗೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Bellary City Corporation: ಬಳ್ಳಾರಿ ಪಾಲಿಕೆ ಕಾಂಗ್ರೆಸ್‌ ತೆಕ್ಕೆಗೆ; ನೂತನ ಮೇಯರ್ ಆಗಿ ಮುಲ್ಲಂಗಿ ನಂದೀಶ್ ಆಯ್ಕೆ

Bellary City Corporation: ಬಳ್ಳಾರಿ ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಹಾಗೂ ಉಪ ಮೇಯರ್ ಆಗಿ ಡಿ. ಸುಕುಂ ಆಯ್ಕೆಯಾಗಿದ್ದಾರೆ.

VISTARANEWS.COM


on

Bellary City Corporation
Koo

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಆಯ್ಕೆಯಾಗಿದ್ದಾರೆ. ಮುಲ್ಲಂಗಿ ನಂದೀಶ್ ಪಾಲಿಕೆಯ 18ನೇ ವಾರ್ಡಿನ ಸದಸ್ಯ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತರಾಗಿದ್ದಾರೆ. ಬಿಜೆಪಿಯ ಮೇಯರ್ ಅಭ್ಯರ್ಥಿ ಶ್ರೀನಿವಾಸ್ ಮೋತ್ಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಮುಲ್ಲಂಗಿ ನಂದೀಶ್‌ಗೆ ಗೆಲುವು ಸಾಧಿಸಿದ್ದು, ಈ ಮೂಲಕ ಮೇಯರ್ ಚುನಾವಣೆಯಲ್ಲಿ (Bellary City Corporation) ಮಾಜಿ ಸಚಿವ ಬಿ. ನಾಗೇಂದ್ರ ಮೇಲುಗೈ ಸಾಧಿಸಿದ್ದಾರೆ.

ಇನ್ನು ಉಪ ಮೇಯರ್ ಆಗಿ ಡಿ. ಸುಕುಂ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಡಿ. ಸುಕುಂ ಅವಿರೋಧ ಆಯ್ಕೆಯಾದರು. ಮೇಯರ್ ಸ್ಥಾನ ತಮ್ಮ ಬೆಂಬಲಿಗರಿಗೆ ಕೊಡಿಸಲು ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಶಾಸಕ ಭರತ್ ರೆಡ್ಡಿ ನಡುವೆ ಪೈಪೋಟಿ ಇತ್ತು. ಕೊನೆಗೆ ಹೈಕಮಾಂಡ್ ಮಧ್ಯಸ್ಥಿಕೆಯಿಂದ ನಂದೀಶ್ ಅವರಿಗೆ ಮೇಯರ್ ಸ್ಥಾನ ಒಲಿದಿದೆ.

ಇದನ್ನೂ ಓದಿ | Channapatna By Election: ಚನ್ನಪಟ್ಟಣದಿಂದ ಡಿಕೆಶಿ ಸ್ಪರ್ಧಿಸಲ್ಲ: ಅಚ್ಚರಿ ಹೇಳಿಕೆ ಕೊಟ್ಟ ಜಿ.ಟಿ. ದೇವೇಗೌಡ

ಪಾಲಿಕೆತಯಲ್ಲಿ ಮೇಯ‌ರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿದೆ. ಒಟ್ಟು 39 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್ 21 ಸ್ಥಾನ ಗೆದ್ದಿತ್ತು. ಇದರ ಜತೆಗೆ, ಪಕ್ಷೇತರರಾಗಿ ಗೆದ್ದಿದ್ದ ಐವರು ಸದಸ್ಯರು ಚುನಾವಣೆ ನಂತರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಪಾಲಿಕೆಯಲ್ಲಿ ಕಾಂಗ್ರೆಸ್ ಒಟ್ಟು 26 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 13 ಸದಸ್ಯರನ್ನು ಹೊಂದಿದೆ. ಪಾಲಿಕೆಯಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್‌ನಿಂದ ಮೇಯರ್ ಸ್ಥಾನಕ್ಕೆ ನಾಲ್ವರು ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಮುಲ್ಲಂಗಿ ನಂದೀಶ್‌ಗೆ ಪಾಲಿಕೆಯ ಮೇಯರ್‌ ಪಟ್ಟ ಒಲಿದಿದೆ.

Continue Reading

ಕರ್ನಾಟಕ

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

International Yoga Day 2024:  ತನಗಾಗಿ, ಸಮಾಜದ ಸ್ವಾಸ್ತ್ಯಕ್ಕಾಗಿ, ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕರ್ನಾಟಕದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.

VISTARANEWS.COM


on

By

International Yoga Day 2024
Koo

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2024) ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಪ್ರತಿ ವರ್ಷ ಜೂನ್ 21ರಂದು ಪ್ರಪಂಚದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ. ಹತ್ತು ವರ್ಷಗಳಿಂದ ದೇಶಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಇದು ಪ್ರತಿಯೊಬ್ಬರೂ ತಮ್ಮ ದೈನಂದಿನ ದಿನಚರಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಲು ಪ್ರೇರಣೆ ನೀಡುತ್ತದೆ. ವೇಗದ ಜಗತ್ತಿನಲ್ಲಿ ಆಂತರಿಕ ಶಾಂತಿ ಮತ್ತು ಸಮತೋಲನಕ್ಕೆ ದಾರಿಯನ್ನು ತೋರುತ್ತದೆ. ಹಾಗಾದರೆ ಕರ್ನಾಟಕದಲ್ಲಿ ಹೇಗಿತ್ತು ಯೋಗಾಭ್ಯಾಸ ಇಲ್ಲಿದೆ ಅದರ ಸಣ್ಣ ಝಲಕ್‌..

International Yoga Day 2024

ವಿಜಯನಗರದ ಹೊಸಪೇಟೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಯೋಗದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಯೋಗ ಗುರು ಭವರಲಾಲ್ ಆರ್ಯ ಸೇರಿದಂತೆ ನೂರಾರು ಯೋಗಪಟುಗಳು ಭಾಗಿಯಾದರು.

International Yoga Day 2024

ಇತ್ತ ಬಳ್ಳಾರಿಯ ಜಿಂದಾಲ್‌ನಲ್ಲಿ ನೂರಾರು ಜನರು ಏಕಕಾಲಕ್ಕೆ ಯೋಗಾಭ್ಯಾಸ ಮಾಡಿದರು. ಸಿಎಂ ಸಿದ್ದರಾಮಯ್ಯ, ವಚನಾನಂದ ಶ್ರೀ, ಅವಧೂತ ವಿನಯ್ ಗುರೂಜಿ ಸಾಥ್‌ ನೀಡಿದ್ದರು.

ವಿಜಯಪುರದ ಅಂಬೇಡ್ಕರ್ ಮೈದಾನದಲ್ಲಿ ಯೋಗ ದಿನಾಚರಣೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭಾಗಿಯಾದರು. ಜಿಲ್ಲಾಧಿಕಾರಿಗಳು ಟಿ ಬೂಬಾಲನ್, ಸಿಇಓ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ ಸೇರಿ ಸಾವಿರಾರು ವಿದ್ಯಾರ್ಥಿಗಳು ಯೋಗದ ಮಹತ್ವ ಸಾರಿದ್ದರು.

International Yoga Day 2024

ಇತ್ತ ಧಾರವಾಡದ ಆರ್ ಎನ್ ಶೆಟ್ಟಿ ಒಳಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ನಡೆಸಲಾಯಿತು. ಮೊದಲು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ನಿನ್ನೆ ಸಂಜೆ ಸುರಿದ ಮಳೆಯಿಂದಾಗಿ ಒಳಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಡಿಸಿ ದಿವ್ಯಾ ಪ್ರಭು ಹಾಗೂ ಜಿಪಂ ಸಿ ಈ ಓ ಡಿಕೆ ಸ್ವರೂಪ ಭಾಗಿಯಾದರು.

International Yoga Day 2024  

ಧಾರವಾಡದ ಎಪಿಎಂಸಿಯಲ್ಲಿ ಸೋಬಾನ ಪದ ಹಾಡಿ ವಿಭಿನ್ನವಾಗಿ ಯೋಗ ದಿನವನ್ನು ಆಚರಿಸಲಾಯಿತು. ಯೋಗವನ್ನು ಬೀಸುವ ಕಲ್ಲಿನ ಬಗೆಯಲ್ಲಿ ಆಚರಿಸಿದರು. ಒಬ್ಬರಿಗೊಬ್ಬರು ಕೈಹಿಡಿದು ಜಾನಪದ ಹಾಡನ್ನು ಹಾಡಿ ಆಚರಿಸಲಾಯಿತು.

ಬೆಳಗಾವಿಯಲ್ಲಿ 10ನೇ ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೆಪಿಟಿಸಿಎಲ್ ಭವನದಲ್ಲಿ ನಡೆಸಲಾಯಿತು. ಮಳೆಯಿಂದ ಕೆಪಿಟಿಸಿಎಲ್ ಭವನದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಸಾಥ್‌ ನೀಡಿದ್ದರು.

ಕೊಡಗಿನಲ್ಲೂ ಯೋಗ ಗುರು ಮಹೇಶ್ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಕೊಡಗು ಡಿಸಿ, ಎಸ್‌ಪಿ, ಸಿಇಓ ಸೇರಿ ಯೋಗಾಭ್ಯಾಸ ಮಾಡಿದರು.

International Yoga Day 2024

ಬಾಗಲಕೋಟೆಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಯೋಗ ದಿನಾಚರಣೆಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್ ಭಾಗಿಯಾದರು. ವಿವಿಧ ಯೋಗ ಭಂಗಿಗಳ ಮೂಲಕ‌ ಯೋಗ ಪಟುಗಳು ಗಮನ ಸೆಳೆದರು. ಯೋಗದಲ್ಲಿ ಎಲ್ಲ ವಯೋಮಾನದವರು ಭಾಗಿಯಾಗಿದ್ದರು. ಡಿಸಿ ಜಾನಕಿ ಕೆ.ಎಮ್, ಸಿಇಒ ಶಶಿಧರ್ ಕುರೇರ, ಎಸ್ಪಿ ಅಮರನಾಥ್ ರೆಡ್ಡಿ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

International Yoga Day 2024

ಕೊಪ್ಪಳ ಜಿಲ್ಲಾಡಳಿತ, ಪತಂಜಲಿ ಯೋಗ ಸಮಿತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಯೋಗ ದಿನನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ನಲಿನ್ ಅತುಲ್, ಜಿ.ಪಂ. ಸಿಇಓ ರಾಹುಲ್ ರತ್ನಂ ಪಾಂಡೆಯ ಸೇರಿದಂತೆ ಹಲವರು ಭಾಗಿಯಾಗಿದ್ದರು. ಯೋಗಪಟುಗಳು, ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಯೋಗ ಪ್ರದರ್ಶಿಸಿದರು.

ತುಮಕೂರಿನಲ್ಲಿ ಯೋಗ ದಿನಾಚರಣೆಗೆ ಕೇಂದ್ರ ಸಚಿವ ವಿ ಸೋಮಣ್ಣ ಚಾಲನೆ ನೀಡಿದರು. ತುಮಕೂರಿನ ಡಿಎಆರ್ ಪೊಲೀಸ್ ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ‌ ಸಿಇಓ ಜಿ.ಪ್ರಭು, ಎಸ್ ಪಿ ಅಶೋಕ್ ಸೇರಿದಂತೆ ಹಲವರು ಸಾಥ್ ನೀಡಿದ್ದರು.

International Yoga Day 2024

ಯಾದಗಿರಿಯ ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಮೈದಾನದಲ್ಲಿ ಯೋಗ ದಿನಾಚರಣೆ ಹಿನ್ನೆಲೆ ಗಿಡಕ್ಕೆ ನೀರುಣಿಸುವ ಮೂಲಕ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಚಾಲನೆ ನೀಡಿದರು. ಡಿಸಿ ಡಾ.ಸುಶೀಲಾ, ಎಸ್ಪಿ ಸಂಗೀತಾ ಭಾಗಿಯಾಗಿದ್ದರು. ಯೋಗದಲ್ಲಿ ನೂರಾರು ವಿದ್ಯಾರ್ಥಿಗಳು ಮಗ್ನರಾಗಿದ್ದರು. ಕೊಡಗು, ಚಿಕ್ಕಮಗಳೂರು, ಗದಗದಲ್ಲೂ ಯೋಗಾಭ್ಯಾಸ ನಡೆದಿದೆ.

International Yoga Day 2024

ಕಲಬುರಗಿಯ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಯೋಗಾ ದಿನಾಚರಣೆಯಲ್ಲಿ ಸಾವಿರಾರು ಜನರು ಭಾಗಿಯಾಗಿದರು. ಇತ್ತ ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮದಲ್ಲಿ ಎಸ್ಪಿ ಬಿ ಎಸ್ ನೇಮಗೌಡ, ಎಡಿಸಿ ಅನ್ನಪೂರ್ಣಾ, ನಗರಸಭೆ ಅಧ್ಯಕ್ಷೆ ಉಷಾ ದಾಸರ್ ಭಾಗಿಯಾಗಿದ್ದರು.

ತನಗಾಗಿ, ಸಮಾಜದ ಸ್ವಾಸ್ತ್ಯಕ್ಕಾಗಿ, ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಮಂಡ್ಯ ನಗರದ ಪಿಇಟಿ ಕ್ರೀಡಾಂಗಣದಲ್ಲಿ ಯೋಗಾ ಪಂತಜಲಿ ಮಹರ್ಷಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬೇಬಿ ಮಠದ ಪೀಠಾಧ್ಯಕ್ಷರಾದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಆದಿಚುಂಚನಗಿರಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಡಿಸಿ ಡಾ. ಕುಮಾರ,ಎಸ್ಪಿ ಎನ್.ಯತೀಶ್, ಸಿಇಓ ವೇದಿಕೆ ಮೇಲೆ ವಿವಿಧ ಬಗೆಯ ಯೋಗ ಪ್ರದರ್ಶಿಸಿದರು.

ಮೈಸೂರು ಜಿಲ್ಲಾಡಳಿತ ಮತ್ತು ಆಯುಷ್ ಇಲಾಖೆ ವತಿಯಿಂದ ಅರಮನೆ ಮುಂಭಾಗದಲ್ಲಿ ಯೋಗಾ ದಿನಾಚರಣೆ ಆಚರಿಸಲಾಯಿತು. ಅರಮನೆ ಆವರಣದಲ್ಲಿ ಯೋಗಪಟುಗಳು ಮತ್ತು ಸಾರ್ವಜನಿಕರು ಯೋಗ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಶಾಸಕ ಶ್ರೀವತ್ಸ, ಸಂಸದ ಯದುವೀರ್ ಒಡೆಯರ್, ಎಂಎಲ್ಸಿ ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಪಂ ಸಿಇಒ ಗಾಯಿತ್ರಿ ಮತ್ತಿತರರು ಭಾಗಿಯಾಗಿದ್ದರು.

ಚಿಕ್ಕಮಗಳೂರಿನ ನಗರದ ಜಿಲ್ಲಾ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆದಿದೆ. ಶಾಲಾ ಮಕ್ಕಳು, ಯೋಗಪಟುಗಳು,ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಸಿರಿಗೆರೆ ಪೀಠದ ಡಾ, ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ವೆಂಕಟೇಶ್, ಎಸ್ ಪಿ ಉಮಾ ಪ್ರಶಾಂತ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಮಾಡಿದರು.

ಕೋಲಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ‌ ನಡೆಯುತ್ತಿರುವ ಯೋಗ ದಿನಾಚರಣೆಯಲ್ಲಿ ನೂತನ ಸಂಸದ ಮಲ್ಲೇಶ್ ಬಾಬು ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಭಾಗಿಯಾದರು. ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಶಾಸಕ‌ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ‌ಯೋಗ ದಿನವನ್ನು ಆಚರಿಸಲಾಯಿತು. ನೃಪತುಂಗ ಬೆಟ್ಟದ ತಪ್ಪಲಿನಲ್ಲಿ‌ ಯೋಗಾಸನ‌ ಮಾಡಲಾಯಿತು.

ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗಿಯಾದರು. ಹಾವೇರಿಯಲ್ಲಿ ಇನ್ನರ್ ವೀಲ್ ಕ್ಲಬ್ ನಿಂದ ಯೋಗ ದಿನಾಚರಣೆಯಲ್ಲಿ ನೂರಾರು ಮಹಿಳಾ ಯೋಗಪಟುಗಳು ಭಾಗಿಯಾದರು. ಹಾಸನದಲ್ಲಿಯೂ ಯೋಗ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಎಂಪಿ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸತ್ಯಭಾಮ ಸಾಥ್‌ ನೀಡಿದರು. ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ‌ ವಿವಿಧ ಯೋಗ ಭಂಗಿಗಳ ಮೂಲಕ ಯೋಗಪಟುಗಳು ಕಣ್ಮನ ಸೆಳೆದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CM Siddaramaiah: ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಯೋಗಾಸನ ಹಾಕಿದ ಸಿಎಂ; ನಟಿ ಶ್ರೀಲೀಲಾ ನೋಡಲು ಮುಗಿಬಿದ್ದ ಜನ

CM Siddaramaiah: ನಟಿ ಶ್ರೀಲೀಲಾಗೆ ಸಿಎಂ ಶಾಲು ಹೊದಿಸಿ ಸನ್ಮಾನಿಸಿದರು. ನಟಿ ಶ್ರೀಲೀಲಾ ತೆಗೆದ ಸೆಲ್ಫಿಗೆ ಸಿಎಂ, ಸಂತೋಷ್ ಲಾಡ್ ಪೋಸ್ ಕೊಟ್ಟರು. ಅಕ್ಕಮಹಾದೇವಿ ಕೈಬರಹದ ಫೋಟೋ ಅನ್ನು ಸಿಎಂ ಬಿಡುಗಡೆ ಮಾಡಿದರು. ವೇದಿಕೆ ಮೇಲಿದ್ದ ನಟಿ ಶ್ರೀಲೀಲಾ ನೋಡಲು ಜನ ಮುಗಿಬಿದ್ದರು.

VISTARANEWS.COM


on

cm siddaramaiah international yoga day 2024
Koo

ಬಳ್ಳಾರಿ: ಬಳ್ಳಾರಿಯ ಜಿಂದಾಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನ (International Yoga Day 2024) ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ನಟಿ ಶ್ರೀಲೀಲಾ (Actress Sreeleela) ಭಾಗವಹಿಸಿದರು. ಶ್ವಾಸಗುರು ವಚನಾನಂದ ಸ್ವಾಮೀಜಿ (Shwasa Guru Vachanananda Swamiji) ನೇತೃತ್ವದಲ್ಲಿ ಕಾರ್ಯಕ್ರಮ ಹಾಗೂ ಯೋಗಾಸನಗಳ (Yogasana) ಪ್ರದರ್ಶನ ನಡೆಯಿತು.

ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೆಲ ಹೊತ್ತು ವೇದಿಕೆ ಮೇಲೆ ಯೋಗ ಮಾಡಿದರು. ಬಳಿಕ ಸಸಿಗೆ ನೀರು ಎರೆದು ಭಾಷಣ ಮಾಡದೇ ವೇದಿಕೆಯಿಂದ ನಿರ್ಗಮಿಸಿದರು.

“ಯೋಗ ದಿನದಲ್ಲಿ ಭಾಗಿ ಆಗಿದ್ದು ತುಂಬಾ ಸಂತೋಷ ಆಗ್ತಿದೆ. ಸೂರ್ಯನಮಸ್ಕಾರ, ಪ್ರಾಣಾಯಾಮ ಮನುಷ್ಯನಿಗೆ ಬಹಳ ಮುಖ್ಯ. ನಾನು ಮನೆಯಲ್ಲಿ ಇದ್ದಾಗ ಯೋಗ ಮಾಡುತ್ತೇನೆ. ಬಳ್ಳಾರಿಗೆ ಬಂದಿದ್ದು ನನ್ನ ಮನೆಗೆ ಬಂದಂಥ ಅನುಭವ ಆಯ್ತು. ಅಭಿಮಾನಿಗಳು ನನ್ನನ್ನು ಕಂಡು ಸಂತೋಷ ಪಟ್ರು, ನಾನೂ ಸಂತೋಷ ಪಟ್ಟೆ. ಸಂತೋಷ್ ಲಾಡ್, ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ” ಎಂದು ನಟಿ ಶ್ರೀಲೀಲಾ ಹೇಳಿದರು.

“ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದು ನನ್ನ ಅದೃಷ್ಟ. ಯಾವೆಲ್ಲ ಸಿನಿಮಾ ಮಾಡ್ತಿದ್ದಿಯಾ ಅಂತ ಸಿದ್ದರಾಮಯ್ಯ ಕೇಳಿದ್ರು. ದೊಡ್ಡವರ ಜೊತೆಗೆ ವೇದಿಕೆ ಹಂಚಿಕೊಂಡಾಗ ಮತ್ತಷ್ಟು ಜವಾಬ್ದಾರಿ ಹೆಚ್ಚಾಗುತ್ತದೆ” ಎಂದು ಶ್ರೀಲೀಲಾ ನುಡಿದರು. ಈ ಸಂದರ್ಭದಲ್ಲಿ, ನಟ ದರ್ಶನ್ ವಿರುದ್ಧ ಕೇಳಿಬಂದ ಕೊಲೆ ಆರೋಪದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಶ್ರೀಲೀಲಾ ಉತ್ತರ ನೀಡಲು ಹಿಂದೇಟು ಹಾಕಿದರು. “ಕೇವಲ ಯೋಗ ದಿನದ ಬಗ್ಗೆ ಮಾತ್ರ ಪ್ರಶ್ನೆ ಕೇಳಿ” ಎಂದು ಈ ಸಂದರ್ಭದಲ್ಲಿ ವಚನಾನಂದ ಸ್ವಾಮೀಜಿ ತಡೆದರು.

ನಟಿ ಶ್ರೀಲೀಲಾಗೆ ಸಿಎಂ ಶಾಲು ಹೊದಿಸಿ ಸನ್ಮಾನಿಸಿದರು. ನಟಿ ಶ್ರೀಲೀಲಾ ತೆಗೆದ ಸೆಲ್ಫಿಗೆ ಸಿಎಂ, ಸಂತೋಷ್ ಲಾಡ್ ಪೋಸ್ ಕೊಟ್ಟರು. ಅಕ್ಕಮಹಾದೇವಿ ಕೈಬರಹದ ಫೋಟೋ ಅನ್ನು ಸಿಎಂ ಬಿಡುಗಡೆ ಮಾಡಿದರು. ವೇದಿಕೆ ಮೇಲಿದ್ದ ನಟಿ ಶ್ರೀಲೀಲಾ ನೋಡಲು ಜನ ಮುಗಿಬಿದ್ದರು. ವೇದಿಕೆ ಮೇಲೆ ನಿಂತು ಶ್ರೀಲೀಲಾ ಕೈಬೀಸುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ, ಕೇಕೆ ಹೊಡೆದು ಸಂಭ್ರಮಿಸಿದರು.

ಜೆಎಸ್‌ಡಬ್ಲ್ಯೂ ಟೌನ್‌ಶಿಪ್‌ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಎರಡು ಸಾವಿರಕ್ಕೂ ಅಧಿಕ ಜನರು ಭಾಗಿಯಾದರು. ಸಚಿವ ಸಂತೋಷ್ ಲಾಡ್, ಎಂಪಿ ತುಕಾರಾಂ, ಮಾಜಿ ಸಚಿವ ಮುರುಗೇಶ್ ನಿರಾಣಿ, ಕೂಡ್ಲಿಗಿ ಶಾಸಕ ಶ್ರೀನಿವಾಸ್, ನಟಿ ಶ್ರೀಲೀಲಾ ಸಾಥ್ ನೀಡಿದರು. ʼಸ್ವಂತ ಮತ್ತು ಸಮಾಜಕ್ಕಾಗಿ ಯೋಗʼ ಧ್ಯೇಯ ವಾಕ್ಯದೊಂದಿಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತಿದೆ.

ಯೋಗ ನಿತ್ಯಜೀವನದ ಭಾಗವಾಗಲಿ: ನರೇಂದ್ರ ಮೋದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (jammu and kashmir) ಶ್ರೀನಗರದಲ್ಲಿ ಇಂದು ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2024) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಯೋಗವನ್ನು ಎಲ್ಲರೂ ತಮ್ಮ ದೈನಂದಿನ ಜೀವನದ ಭಾಗವಾಗಿಸಲು ಕರೆ ನೀಡಿದರು.

“ವಿಶ್ವದಾದ್ಯಂತ ಯೋಗಾಭ್ಯಾಸ ಮಾಡುವವರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಯೋಗದ ಮೂಲಕ ನಾವು ಹೆಚ್ಚಿನ ಶಕ್ತಿಯನ್ನು ಪಡೆಯಬಹುದು. ಯೋಗ ದಿನದಂದು ದೇಶದ ಜನರಿಗೆ ಮತ್ತು ವಿಶ್ವದ ಮೂಲೆ ಮೂಲೆಗಳಲ್ಲಿ ಯೋಗ ಮಾಡುವ ಜನರಿಗೆ ನಾನು ಶುಭಾಶಯಗಳನ್ನು ಹೇಳುತ್ತೇನೆ. ಅಂತಾರಾಷ್ಟ್ರೀಯ ಯೋಗ ದಿನವು 10 ವರ್ಷಗಳ ಐತಿಹಾಸಿಕ ಪ್ರಯಾಣವನ್ನು ಪೂರ್ಣಗೊಳಿಸಿದೆ. 2014ರಲ್ಲಿ ನಾನು ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರಸ್ತಾಪಿಸಿದೆ. ಭಾರತದ ಈ ಪ್ರಸ್ತಾಪವನ್ನು 177 ರಾಷ್ಟ್ರಗಳು ಬೆಂಬಲಿಸಿದವು. ಅಂದಿನಿಂದ ಯೋಗ ದಿನವು ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ” ಎಂದು ಮೋದಿ ನುಡಿದರು.

“ನಾನು ವಿದೇಶದಲ್ಲಿರುವಾಗ ಜಾಗತಿಕ ನಾಯಕರು ಯೋಗದ ಬಗ್ಗೆ ನನ್ನೊಂದಿಗೆ ಚರ್ಚಿಸುತ್ತಾರೆ. ನಾವು 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ, ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವಾಗಿಸಲು ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ” ಎಂದು ಅವರು ಕರೆ ನೀಡಿದರು.

ಇದನ್ನೂ ಓದಿ: International Yoga Day 2024: ಯೋಗ ದಿನಚರಿಯ ಭಾಗವಾಗಲಿ: ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ

Continue Reading
Advertisement
Kalki 2898 AD Final Trailer Released
ಕರ್ನಾಟಕ2 hours ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್2 hours ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ3 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ3 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ3 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ3 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ3 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ4 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು4 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ7 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌