Site icon Vistara News

Murder Case: ಮನೆಯ ಮುಂದೆಯೇ ವ್ಯಕ್ತಿಯ ತಲೆಗೆ ಹೊಡೆದು ಕೊಲೆ

murder mujahiddin

ಶಿವಮೊಗ್ಗ: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬನನ್ನು ಮನೆಯ ಮುಂದೆಯೇ ರಾತ್ರೋರಾತ್ರಿ ಹೊಡೆದು ಕೊಲೆ (Murder Case) ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮುಜಾಹಿದ್ದೀನ್ (32) ಕೊಲೆಯಾದ ವ್ಯಕ್ತಿ. ರಾತ್ರಿ ಸುಮಾರು 12.30ರ ಸಮಯದಲ್ಲಿ ನಡೆದಿರುವ ಘಟನೆ ಇದು. ರಾತ್ರಿ ಮನೆಯಿಂದ ಹೊರಗೆ ಬಂದಾಗ ಹತ್ಯೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮಾರಕಾಯುಧದಿಂದ ಈತನ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಜಾಹಿದ್ದೀನ್‌ಗೆ ಸಾಕಷ್ಟು ಶತ್ರುಗಳಿದ್ದಾರೆ. ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಬಳ್ಳಾರಿ: ನಡುರಸ್ತೆಯಲ್ಲಿ ಮಚ್ಚು ಸೇರಿ ವಿವಿಧ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗುಗ್ಗರಹಟ್ಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಗುಗ್ಗರಹಟ್ಟಿಯ ಕಾರ್ಪೆಂಟರ್ ಬಾಷಾ (40) ಮೃತರು. ರಿಯಲ್ ಎಸ್ಟೇಟ್ ಹಿನ್ನೆಲೆಯಲ್ಲಿ ಕೊಲೆಯಾಗಿರುವ (Murder Case) ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರಿಂದ ಕೈ, ಎದೆ ಭಾಗದಲ್ಲಿ ಗಂಭೀರ ಗಾಯಗಳಾಗಿ ಬಾಷಾ ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮತ್ತು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime Video : ಕೊಲೆ ಆರೋಪಿಗಳನ್ನು ಕರೆದೊಯ್ಯಲಾಗುತ್ತಿದ್ದ ಬಸ್ಸನ್ನೇ ಹತ್ತಿ ಗುಂಡಿಕ್ಕಿದರು!

Exit mobile version