Site icon Vistara News

ಭ್ರಷ್ಟರ, ಕ್ರಿಮಿನಲ್‌ಗಳ, ಉಗ್ರವಾದಿಗಳ ಪಾರ್ಟಿ ಕಾಂಗ್ರೆಸ್‌: ನಳೀನ್ ಕುಮಾರ್ ಕಟೀಲ್

ನಳೀನ್ ಕುಮಾರ್ ಕಟೀಲ್

ಬಳ್ಳಾರಿ: ಭ್ರಷ್ಟರ ಪಾರ್ಟಿ, ಕ್ರಿಮಿನಲ್‌ಗಳ ಪಾರ್ಟಿ‌, ಉಗ್ರವಾದಿಗಳ ಪಾರ್ಟಿ ಕಾಂಗ್ರೆಸ್‌ ಆಗಿದ್ದು, ಕೇವಲ ಮತ ಬ್ಯಾಂಕ್‌ಗೋಸ್ಕರವಾಗಿ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿದ್ದಾರೆ.

ಬಳ್ಳಾರಿಯ ತೋರಣಗಲ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಚಿಂತನೆ ರಾವಣನದ್ದು. ಮುಖ ಮಾತ್ರ ಸಿದ್ದರಾಮಯ್ಯನದು‌. ಬಿಕ್ಷಾಟನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಸಿದ್ದರಾಮಣ್ಣಾ, ನಿಮ್ಮ ರಾಷ್ಟ್ರೀಯ ಅಧ್ಯಕ್ಷ ಯಾವ ಕಾರಣಕ್ಕೆ ಬೇಲ್ ಮೇಲೆ ಇದ್ದಾರೆ? ನಿಮ್ಮ ರಾಷ್ಟ್ರೀಯ ಮಹಾರಾಜ ಉಪಾಧ್ಯಕ್ಷರು ರಾಹುಲ್ ಗಾಂಧಿ ಯಾಕೆ ಬೇಲ್ ಮೇಲೆ ಇದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | ಗಲಭೆ ನಡೆಸಿ ಅಧಿಕಾರಕ್ಕೇರಲು ಕಾಂಗ್ರೆಸ್‌ ಪ್ರಯತ್ನ: ನಳಿನ್‌ ಕುಮಾರ್‌ ಕಟೀಲ್‌ ಆರೋಪ

ಕಾಂಗ್ರೆಸ್ ಸೇರಬೇಕು ಅಂದರೆ ಅವನ ಮೇಲೆ 50 ಕ್ರಿಮಿನಲ್ ಕೇಸ್ ಇರಬೇಕು. ಅಲ್ಪ ಸಂಖ್ಯಾತರಿಗೆ ಶಾದಿ ಭಾಗ್ಯ ಕೊಟ್ಟಿದ್ದೀರಿ. ಅಲ್ಪಸಂಖ್ಯಾತ ಪತ್ರಕರ್ತರಿಗೆ ಲ್ಯಾಪ್ ಟಾಪ್ ಕೊಟ್ಟಿದ್ದೀರಿ. ಅಲ್ಪಸಂಖ್ಯಾತ ಶಾಲಾ ಮಕ್ಕಳಿಗೆ ಮಾತ್ರ ಪ್ರವಾಸ ಕೊಟ್ಟಿದ್ದೀರಿ. ಶಾಲೆಯಲ್ಲಿ ಮಕ್ಕಳನ್ನು , ಪತ್ರಕರ್ತರನ್ನು, ಸಮಾಜದಲ್ಲಿ ಸಮುದಾಯವನ್ನು, ಕೊನೆಗೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ಪ್ರಯತ್ನ ಮಾಡಿದ್ದೀರಿ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | ಶಾಸಕ ಅನಿಲ್ ಬೆನಕೆಗೆ ಬೆಳಗಾವಿ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸ್ಥಾನ

Exit mobile version