ಬಿಸಿಲ ನಾಡಿನಲ್ಲಿ ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಜನ - Vistara News

ಬಳ್ಳಾರಿ

ಬಿಸಿಲ ನಾಡಿನಲ್ಲಿ ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಜನ

ಮಳೆರಾಯನ ಆರ್ಭಟದಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು, ವಿದ್ಯುತ್‌ ಸಂಪರ್ಕ ಕಡಿತಗೊಂಡಿತು. ರಾತ್ರಿಯಿಡೀ ಜನರು ನಿದ್ದೆಗೆಡೆಉವಂತಾಯಿತು.

VISTARANEWS.COM


on

ಬಿಸಿಲನಾಡಲ್ಲಿ ಮಳೆರಾಯನ ಭಯಂಕರ ಆರ್ಭಟ
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಬಿಸಿಲ ನಗರಿ ಬಳ್ಳಾರಿಯಲ್ಲಿ ಗುರುವಾರ ಸಂಜೆಯಿಂದ ರಾತ್ರಿ ಸುರಿದ ಭಯಂಕರವಾದ ಆಲಿಕಲ್ಲು ಮಳೆಗೆ ಜನಜೀವನ ತತ್ತರಿಸಿ ಹೋಗಿದೆ. ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದರಿಂದ ಅಲ್ಲಿನ ನಿವಾಸಿಗಳು ರಾತ್ರಿಯೆಲ್ಲಾ ಜಾಗರಣೆ ಮಾಡುವ ಪರಿಸ್ಥಿತಿ ಎದುರಾಗಿತ್ತು. ಮಳೆಯ ನೀರಿನಿಂದ ಮನೆಯ ಸಾಮಾನು ರಕ್ಷಣೆಗೆ ಹರಸಾಹಸ ಪಡುವಂತಾಯಿತು.

ಹಲವು ಕಡೆಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುಳಿವೆ, ಇದರಿಂದಾಗಿ ನಗರದ ಬಹುತೇಕ ಕಡೆಗಳಲ್ಲಿ ರಾತ್ರಿಯಿಂದಲೇ ವಿದ್ಯುತ್‌ ಸಂಪರ್ಕ ಇರಲಿಲ್ಲ. ಇಡೀ ನಗರವೇ ಕತ್ತಲಲ್ಲಿ ಕಳೆಯುವಂತಾಯಿತು. ಆಲಿಕಲ್ಲು ಮತ್ತು ಧಾರಾಕಾರ ಮಳೆಗೆ ನೂರಾರು ಮರಗಳು ನೆಲಕ್ಕುಳಿದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಸಂಗನಕಲ್ಲು ರಸ್ತೆಯ ನಿರ್ಮಾಣ ಹಂತದಲ್ಲಿರುವ ದೇವಸ್ಥಾನದ ಗೋಪುರಕ್ಕೆ ಸಿಡಿಲು‌ ಬಡಿದಿದೆ. ಅಲಲ್ಲಿ ಮನೆಗಳ ಮೇಲೆ, ವಾಹನಗಳ ಮೇಲೆ ಮರಗಳು ಬಿದ್ದಿವೆ. ಕೆಲವೊಂದು ಶಾಲೆಗಳ ಆಡಳಿತ ಮಂಡಳಿಗಳು ಶಾಲೆಯನ್ನು ಒಂದು‌ ಗಂಟೆ ತಡವಾಗಿ ಆರಂಭಿಸಿವೆ.

ಬೆಳಿಗ್ಗೆಯಿಂದಲೇ ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಬೇಟಿ ನೀಡುತ್ತಿದ್ದಾರೆ. ಶಾಸಕರಿಗೆ ಆಯಾ ವಾರ್ಡಿನ ಪಾಲಿಕೆ ಸದಸ್ಯರು ಸಾಥ್ ನೀಡುತ್ತಿದ್ದಾರೆ.

ಇದನ್ನೂ ಓದಿ: Monsoon 2022: ಜೂ.2ಕ್ಕೆ ಕರ್ನಾಟಕಕ್ಕೆ ಮುಂಗಾರು ಪ್ರವೇಶ; 7ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Karnataka Rain : ಬೆಂಗಳೂರು, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ (Heavy Rain Effect) ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಮಧ್ಯೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ಕಾರವಾರ: ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆಯು (Heavy Rain) ಅಬ್ಬರಿಸಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ (Karnataka Rain) ಇತ್ತು.. ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್‌, ಕಾಟನ್‌ಪೇಟೆ, ಕೆಆರ್‌ ಮಾರ್ಕೆಟ್‌ ,ಟೌನ್ ಹಾಲ್, ಶಿವಾನಂದ ಸರ್ಕಲ್, ಮೈಸೂರು ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ಜಿಟಿ ಜಿಟಿಯಾಗಿ ಶುರುವಾದ ಮಳೆಯು ನಂತರ ಕೆಲ ಕಾಲ ಅಬ್ಬರಿಸಿತ್ತು. ಇತ್ತ ಧಾರವಾಡ ನಗರದಲ್ಲೂ ನಿರಂತರ ಮಳೆಯಾಗಿದೆ. ಬೆಳಗ್ಗೆಯಿಂದಲ್ಲೂ ಬಿಟ್ಟು ಬಿಡದೆ ಸುರಿಯುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಿಂದಾಗಿ ಸವಾರರು ಪರದಾಡಿದರು. ಧಾರವಾಡ ಗ್ರಾಮೀಣ ಕೆಲ ಭಾಗಗಳಲ್ಲಿ ಹೊರತುಪಡಿಸಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ನಿರಂತರ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆಯು ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ. ಶೃಂಗೇರಿ ತಾಲೂಕಿನ ಕೂತು ಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪದೆಪದೇ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ತಾಲೂಕು ಆಡಳಿತವು ಗುಡ್ಡಗಾಡು ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಅಡ್ಡಲಾಗಿ ಬಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿತ್ತು. ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಹೆದ್ದಾರಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆವರೆಗೆ ವಾಹನಗಳು ಹೆದ್ದಾರಿಯ ಮತ್ತೊಂದು ಬದಿಯಿಂದ ಸಂಚರಿಸುತ್ತಿದ್ದವು.

ಮುಂದುವರಿದ ಪ್ರವಾಸಿಗರ ಹುಚ್ಚಾಟ

ಬೆಳಗಾವಿಯ ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನೀರು ರಭಸವಾಗಿ ಧುಮ್ಮಿಕ್ಕುವ ಸ್ಥಳಗಳಲ್ಲಿ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಜತೆಗೆ ಕೆಲವರು ಬಂಡೆಗಲ್ಲುಗಳ‌ ಮೇಲೆ ಕುಳಿತು ಊಟ ಮಾಡುತ್ತಿರುವುದು ಕಂಡು ಬಂದಿದೆ. ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮಳೆಯಲ್ಲೇ ಟ್ರಾಫಿಕ್‌ಗೆ ಸಿಲುಕಿದ ಪ್ರವಾಸಿಗರು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಮಳೆಯಲ್ಲೇ ಟ್ರಾಫಿಕ್‌ನಲ್ಲಿ ಸಿಲುಕಿದರು. ಸುಮಾರು ಎರಡು ಗಂಟೆ ಕಾಲ ನಿಂತಲ್ಲೇ ನಿಲ್ಲುಂತಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಟೂರಿಸ್ಟ್‌ಗಳು ಆಗಮಿಸಿದ್ದರು.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಳೆಗೆ ಜಲಾಶಯಗಳು ಭರ್ತಿ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಾಜ್ಯದ ಹಲವೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಭರ್ತಿಗೆ ಎರಡು ಅಡಿ ಬಾಕಿ‌ ಇದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಗಣನೀಯವಾಗಿ ಏರಿಕೆ ಆಗುತ್ತಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಅಣೆಕಟ್ಟಾಗಿದೆ.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ನಿನ್ನೆ ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು ಭಾನುವಾರ 18. 24 ಗೆ ಏರಿಕೆ ಆಗಿದೆ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಸಂತಸ ಹೆಚ್ಚಿಸಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ಆಗಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ 10 ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Rain News : ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯು (Karnataka weather Forecast) ಅಬ್ಬರಿಸಲಿದ್ದು, ಗಾಳಿ ವೇಗವು ಗಂಟೆಗೆ 40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

karnataka weather Forecast
ಉಡುಪಿಯಲ್ಲಿ ರಸ್ತೆಯೇ ಕಾಣದಷ್ಟು ಅಬ್ಬರಿಸಿರುವ ಮಳೆ.. ರಸ್ತೆ ಕಾಣದೆ ಹೆಡ್‌ಲೈಟ್‌ ಹಾಕಿ ವಾಹನಗಳ ಸಂಚಾರ
Koo

ಬೆಂಗಳೂರು: ರಾಜ್ಯಾದ್ಯಂತ‌ ಮಳೆ ಅಬ್ಬರ (Karnataka Weather Forecast) ಮುಂದುವರಿದಿದೆ. ಕರ್ನಾಟಕ ಕರಾವಳಿಯಲ್ಲಿ ಭಾನುವಾರ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದೆ. ಪ್ರತ್ಯೇಕ ಸ್ಥಳದಲ್ಲಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಇನ್ನೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ, ಕೆಲವಡೆ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: BESCOM Order : ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತ ಕೇಬಲ್‌ ತೆರವಿಗೆ ಗಡುವು; ಬಿಸಿ ಮುಟ್ಟಿಸಲು ಸಜ್ಜಾದ ಬೆಸ್ಕಾಂ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತಗೆ ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Karnataka Weather Forecast: ಮುಂಗಾರು ಅಬ್ಬರಕ್ಕೆ ಜನರು ವಿಲವಿಲ ಅಂತ ಒದ್ದಾಡುವಂತೆ ಮಾಡಿದೆ. ಮಳೆ ಬಂದರೂ (Heavy rain Effect) ಕಷ್ಟ ಬಾರದೆ ಇದ್ದರೂ ಸಂಕಷ್ಟ ಎಂಬಂತಾಗಿದೆ. ಈಗಾಗಲೇ ಭಾರಿ ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳಲ್ಲಿ (Trekking) ಚಾರಣಕ್ಕೆ ನಿಷೇಧ ಹೇರಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ಮಂಗಳೂರು: ವ್ಯಾಪಕ ಮಳೆಯಿಂದಾಗಿ (Karnataka Weather Forecast) ಕರಾವಳಿಯ ಹಲವೆಡೆ ಪ್ರವಾಸಿಗರಿಗೆ ನಿಷೇಧ ಹಾಕಲಾಗಿದೆ. ಗಿರಿಶಿಖರಗಳಲ್ಲಿ ಚಾರಣಕ್ಕೆ ಹೋಗಬೇಕಾದರೆ ಮಳೆಗಾಲ (Heavy rain) ಮುಗಿಯುವವರೆಗೂ ಕಾಯಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಭೂ ಕುಸಿತ , ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿವೆ. ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿ ಶಿಖರಗಳಿಗೆ ಚಾರಣಕ್ಕೆ ಹೋಗುವ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್ ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರಕ್ಕಿಂಗ್, ಸಾಹಸ ಯಾತ್ರೆಗೂ ನಿಷೇಧ ಹಾಕಲಾಗಿದೆ. ಇವೆಲ್ಲದರ ಜತೆಗೆ ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಅಲ್ಲೂ ನದಿ ಹಾಗು ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ ಚಟುವಟಿಕೆಗಳಿಗೂ ಬ್ರೇಕ್‌ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿಷೇಧ ಆದೇಶವನ್ನು ಹೊರಡಿಸಿದ್ದಾರೆ.

ಇಲ್ಲೆಲ್ಲ ಮಳೆ ಅಬ್ಬರ

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಕನ್ನಡದ ಕ್ಯಾಸಲ್‌ ರಾಕ್‌ನಲ್ಲಿ 17 ಸೆಂ.ಮೀ ಮಳೆಯಾದರೆ, ಹೊನ್ನಾವರದಲ್ಲಿ 16 ಹಾಗೂ ಉಡುಪಿಯಲ್ಲಿ 15, ಅಂಕೋಲಾದಲ್ಲಿ 13 ಸೆಂ.ಮೀ ಮಳೆಯಾಗಿದೆ.

ಜು.7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಗಾಳಿ ವೇಗವು 30-40ಕಿ.ಮೀ ಇರಲಿದ್ದು, ಜತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಗಾಳಿ ವೇಗವು 30 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ,ಕೊಡಗು, ಮೈಸೂರು, ರಾಮನಗರ ಸೇರಿದಂತೆ ದಾವಣಗೆರೆ, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನು ಹಿಡಿಯುವ ಸಾಹಸ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಮಳೆ ಪ್ರಮಾಣದಿಂದಾಗಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಘಟ್ಟದಲ್ಲಿಯೂ ನಿರಂತರವಾಗಿ ಮಳೆ ಹೆಚ್ಚಿದ್ದು, ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ತೀರ ಪ್ರದೇಶದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಪ್ರವಾಹದ ಭೀತಿ ಇರುವುದರಿಂದ ನೇತ್ರಾವತಿ ನದಿ ತೀರದವರಿಗೆ, ದ್ವೀಪ ಪ್ರದೇಶ ಜನರಿಗೂ ಸೂಚನೆ ನೀಡಲಾಗಿದೆ. ನದಿಯಲ್ಲಿ ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದರೂ, ಸ್ಥಳೀಯರು ದೋಣಿ ಮೂಲಕ ಮೀನು ಹಿಡಿಯುತ್ತಿರುವುದು ಕಂಡು ಬಂದಿದೆ.

ತುಂಗಭದ್ರೆಯ ತಟದಲ್ಲಿ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷ

ದಾವಣಗೆರೆಯ ಹರಿಹರದ ಬಳಿಯ ರಾಜನಹಳ್ಳಿ ಜಾಕ್ ವೆಲ್ ಬಳಿ ನೀರು ನಾಯಿಗಳ ಹಿಂಡು ಹಿಂಡಾಗಿ ಪ್ರತ್ಯಕ್ಷವಾಗಿದೆ. ನೀರು ನಾಯಿಗಳು ಜನರ ಕಣ್ಣಿಗೆ ಕಾಣುವುದು ಅಪರೂಪ. ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯ ದಡದಲ್ಲಿ ನೀರು ನಾಯಿಗಳು ಆಟವಾಡುತ್ತಿರುವುದು ಕಂಡು ಬಂದಿದೆ. ನೀರು ನಾಯಿ ಕಂಡರೆ ಸಮೃದ್ಧಿ ಮಳೆ ಬೆಳೆ ಆಗುತ್ತೆ ಎಂಬ ನಂಬಿಕೆ ಇದೆ.

ಅಬ್ಬಿ ಜಲಪಾತಕ್ಕೆ ಸಾಕು ನಾಯಿ ಜತೆಗೆ ಬಂದ ಪ್ರವಾಸಿಗರು!

ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಸಾಕು ನಾಯಿ ಹಿಡಿದು ಪ್ರವಾಸಿತಾಣವಾದ ಮಡಿಕೇರಿ ಸಮೀಪದ ಅಬ್ಬಿ ಜಲಪಾತಕ್ಕೆ ಬಂದಿದ್ದಾರೆ. ಶ್ವಾನವನ್ನು ಒಳಗೆ ತರಬೇಡಿ ಎಂದರು ಹೇಳಿದರೆ ಪ್ರವಾಸಿಗರು ಪೊಲೀಸರೊಟ್ಟಿಗೆ ಕೂಗಾಟ ಶುರು ಮಾಡುತ್ತಿದ್ದಾರೆ.

ಇತ್ತ ಪ್ರವಾಸಿಗರನ್ನು ಕಂಡು ಶ್ವಾನಗಳು ಕಚ್ಚಲು ಎಳೆದಾಡುತ್ತಿದ್ದ ದೃಶ್ಯ ಕಂಡು ಬಂತು. ಮಕ್ಕಳು ಸೇರಿದಂತೆ ನೂರಾರು ಪ್ರವಾಸಿಗರು ಇರುವ ಸ್ಥಳದಲ್ಲಿ ಜರ್ಮನ್ ಶೆಫರ್ಡ್, ಎರಡು ಲ್ಯಾಬ್ ಸೇರಿದಂತೆ ಶ್ವಾನವನ್ನು ಹಿಡಿದು ಒಳಗೆ ಬಂದಿದ್ದಾರೆ. ಬಳಿಕ ಬಲವಂತವಾಗಿ ಪೊಲೀಸರು ಹೊರಗೆ ಕಳುಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Karnataka Rain : ಬಿರುಗಾಳಿ ಸಹಿತ ಭಾರಿ ಮಳೆಗೆ ಆಕಾಶದೆತ್ತರಕ್ಕೆ ಅಂಗಡಿಯ ತಗಡು ಹಾರಿ ಹೋಗಿದೆ. ಮತ್ತೊಂದು ಕಡೆ ರಸ್ತೆಗೆ ಮರವೊಂದು ಉರುಳಿದ ಪರಿಣಾಮ ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್‌ ಆಗಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು/ಮಂಗಳೂರು: ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರಕ್ಕೆ (Karnataka Rain) ಬೃಹತ್‌ ಮರವೊಂದು ರಸ್ತೆಗುರುಳಿದೆ. ಪರಿಣಾಮ ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್ ಆಗಿದೆ. ಎನ್ಆರ್‌ ಪುರ ತಾಲೂಕಿನಿಂದ ಕಳಸ ತಾಲೂಕಿಗೆ ಈ ಮಾರ್ಗ ಸಂಪರ್ಕ ಕಲ್ಪಿಸಲಿದೆ. ಮರ ಬಿದ್ದ ಪರಿಣಾಮ ಶನಿವಾರ ಬೆಳ್ಳಂಬೆಳಗ್ಗೆಯೇ ಬಾಳೆಹೊನ್ನೂರು-ಕಳಸ ರಸ್ತೆ, ಹೊರನಾಡಿಗೆ ಹೋಗಿ-ಬರುವ ಮಾರ್ಗವೂ ಬಂದ್ ಆಗಿತ್ತು. ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್‌ ಉಂಟಾಗಿದ್ದರಿಂದ ಸ್ಥಳೀಯರೇ ಮರ ತೆರವು ಮಾಡಿದರು.

ಚಾರ್ಮಾಡಿಯಲ್ಲಿ ಮತ್ತೆ ಆತಂಕ ಮೂಡಿಸಿದ ರಸ್ತೆ ಬಿರುಕು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಹೆದ್ದಾರಿಯಲ್ಲಿ ಮತ್ತೆ ರಸ್ತೆ ಬಿರುಕು ಬಿಡುವ ಆತಂಕ ಹೆಚ್ಚಿದೆ. ರಸ್ತೆ ಬಿರುಕು ಕಾಣಿಸಿಕೊಳ್ಳದಂತೆ ಮರೆಮಾಚಲು ಅಧಿಕಾರಿಗಳ ಯತ್ನಿಸುತ್ತಿದ್ದಾರೆ. ಹೆದ್ದಾರಿಯ ಹಲವು ತಿರುವುಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಾಂಕ್ರೀಟ್ ಮೂಲಕ ತೇಪೆ ಹಚ್ಚುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಡೆದಿರುವ ಕೋಟಿ ವೆಚ್ಚದ ಕಾಮಗಾರಿಯು, ಮಳೆಯಿಂದ ಹಾನಿಯಾಗಿದೆ.

ಉಕ್ಕಿ ಹರಿದ ತುಂಗಾಭದ್ರಾ ನದಿ; ಅಂಗಡಿಗಳು ಮುಳುಗಡೆ

ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾಭದ್ರಾ ನದಿ ಪಾತ್ರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ದಾವಣಗೆರೆ ಜಿಲ್ಲೆಯ ಉಕ್ಕಡಗಾತ್ರಿ ಸಮೀಪ ತುಂಗಾಭದ್ರಾ ನದಿ ಉಕ್ಕಿ ಹರಿದಿದೆ. ಉಕ್ಕಡಗಾತ್ರಿ ಸಮೀಪದ ಸ್ನಾನಘಟ್ಟದವರೆಗು ನೀರು ನುಗ್ಗಿದ್ದು, ಹತ್ತಾರು ಪೂಜಾಸಾಮಾಗ್ರಿ ಅಂಗಡಿಗಳು ಮುಳುಗಡೆಯಾಗಿವೆ. ಉಕ್ಕಡಗಾತ್ರಿ ಆಗಮಿಸುವ ಭಕ್ತರಿಗೆ ದೇವಸ್ಥಾನದ ಟ್ರಸ್ಟ್‌ನಿಂದ ತುಂಗಾಭದ್ರಾ ನದಿ ಪಾತ್ರಕ್ಕೆ ಸ್ನಾನ ಸೇರಿದಂತೆ ಇತರೇ ಕಾರಣಗಳಿಗೆ ನೀರಿಗೆ ಇಳಿಯದಂತೆ ಸೂಚನೆ ನೀಡಿದೆ.

ಮಳೆಯಿಂದಾಗಿ ಸೋರುತ್ತಿರುವ ಸರ್ಕಾರಿ ಆಸ್ಪತ್ರೆ

ವಿಜಯನಗರ ಜಿಲ್ಲೆಯಲ್ಲಿ ರಾತ್ರಿಯಿಡಿ ಜಿಟಿ ಜಿಟಿ ಮಳೆಯಿಂದಾಗಿ ಸರ್ಕಾರಿ ಆಸ್ಪತ್ರೆ ರೋಗಿಗಳು ರಾತ್ರಿಯಿಡಿ ಜಾಗರಣೆ ಮಾಡಬೇಕಾಯಿತು. ಮಳೆಯಿಂದಾಗಿ ಕೊಟ್ಟೂರು ತಾಲೂಕಿನ ಸರ್ಕಾರಿ ಆಸ್ಪತ್ರೆ ಸೋರುತ್ತಿದೆ. ಜನ ಸ್ಪಂದನ ಕಾರ್ಯಕ್ರಮ ಮಾಡಿದ್ದ ಡಿಸಿ ದಿವಾಕರ್ ಆಸ್ಪತ್ರೆಗೆ ಭೇಟಿ ನೀಡಬಹುದು ಎಂದು ಸಿಬ್ಬಂದಿ ಸ್ವಚ್ಚತೆ ಮಾಡಿದ್ದರು. ಆದರೆ ರಾತ್ರಿಯಿಡಿ ಜಿಟಿಜಿಟಿ ಮಳೆಯಿಂದ ರೋಗಿಗಳು ಮಲಗುವ ಬೆಡ್ ಮೇಲೆ ನೀರು ಸೋರಿದೆ. ಇದರ ಮಧ್ಯೆ ರಾತ್ರಿಯಿಡೀ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಪರದಾಡಬೇಕಾಯಿತು. ಆಸ್ಪತ್ರೆಯ ಶೌಚಾಲಯ ಕೂಡಾ ಬ್ಲಾಕ್ ಆಗಿದೆ ಎಂದು ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸದ ಇಲಾಖೆಯ ವಿರುದ್ಧ ರೋಗಿಗಳು ಹಿಡಿಶಾಪ ಹಾಕಿದರು.

ಮೂರು ಸಂಪರ್ಕ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಇರುವ ಕೆಳ ಹಂತದ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಜಲಾವೃತವಾಗಿದೆ. ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತ ಮನವಿ ಮಾಡಿದೆ.

ಭಾರೀ ಮಳೆಗೆ ಕುಸಿದ ಸೇತುವೆ ಬದಿ ಮಣ್ಣು

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡದ ಬೇಳೂರು ಗ್ರಾಮದ ಸಂಪರ್ಕ ಸೇತುವೆ ಬದಿಯ ಮಣ್ಣು ಕುಸಿದಿದೆ. ಇನ್ನೂ ಉದ್ಘಾಟನೆಯಾಗಬೇಕಿದ್ದ ನೂತನ ಸೇತುವೆ ಧಾರಾಕಾರ ಮಳೆಗೆ ಸೇತುವೆಯ ಎರಡೂ ಭಾಗದ ಮಣ್ಣು, ಕಾಂಕ್ರೀಟ್ ಕುಸಿದಿದೆ. ಸುಮಾರು 40 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಿರುಸೇತುವೆ ನಿರ್ಮಾಣವಾಗಿತ್ತು. ಆದರೆ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಗೆ ಸೇತುವ ಪಕ್ಷದ ಗುಡ್ಡದಲ್ಲಿ ಹೆಚ್ಚು ನೀರು ಹರಿದು ಗುಡ್ಡ ಕುಸಿದಿದ್ದು, ಗುಡ್ಡದ ಮಣ್ಣು ಸೇತುವೆ ಭಾಗಕ್ಕೆ ಬಿದ್ದಿದೆ. ಪರಿಣಾಮ ಸೇತುವೆಯ ಎರಡೂ ಭಾಗದ ಸಂಪರ್ಕಕ್ಕೆ ಹಾಕಿದ್ದ ಮಣ್ಣು ಹಾಗೂ ಕಾಂಕ್ರೀಟ್ ಕಿತ್ತುಹೋಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅವ್ಯವಸ್ಥೆ ಉಂಟಾಗಿದ್ದು ಗ್ರಾಮಸ್ಥರು ಆತಂಕಗೊಳ್ಳುವಂತಾಗಿದೆ.

ಮಳೆ ನಿಂತರೂ ಮತ್ತೆ ಭೂ ಕುಸಿತದ ಆತಂಕ!

ಮಳೆ ನಿಂತರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂ ಕುಸಿತದ ಆತಂಕ ಕಡಿಮೆ ಆಗಿಲ್ಲ. ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಸಮೀಪದಲ್ಲೇ ಭಾರೀ ಗುಡ್ಡ ಕುಸಿತ ಉಂಟಾಗಿದೆ. ಮಂಗಳೂರಿನ ವಾಮಂಜೂರು ಕೆತ್ತಿಕಲ್ ಬಳಿ ಭೂ ಕುಸಿತದ ಭೀತಿ ಎದುರಾಗಿದೆ. ಚತುಷ್ಪಥ‌ ಹೆದ್ದಾರಿ ಕಾಮಗಾರಿಗಾಗಿ ಗುಡ್ಡ ಕೊರೆದ ಪರಿಣಾಮ ಹೆದ್ದಾರಿಗೆ ತಾಗಿಕೊಂಡೇ ಇರೋ ಗುಡ್ಡದಲ್ಲಿ ಆಗಾಗ್ಗೆ ಮಣ್ಣು ಕುಸಿಯುತ್ತಿದೆ. ಗುಡ್ಡದ ತುದಿ ಭಾಗದಲ್ಲಿ ಭಾರೀ ಗಾತ್ರದ ಬಂಡೆಗಳು ಉರುಳಿ ಬೀಳುವ ಆತಂಕ ಇದೆ. ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪ ಗಾಳಿ ಸಹಿತ ಮಳೆಯಾಗಿದೆ. ಏಕಾಎಕಿ ಬಂದ ಗಾಳಿಗೆ ಅಂಗಡಿಯ ಶಿಟ್‌ಗಳು ಹಾರಿ ಹೋಗಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mahua Moitra
ದೇಶ14 seconds ago

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Self Harming
ವಿಜಯನಗರ16 mins ago

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Land Dispute
ಕರ್ನಾಟಕ19 mins ago

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Vastu Tips
ಧಾರ್ಮಿಕ36 mins ago

Vastu Tips: ಆರ್ಥಿಕ ಸಂಕಷ್ಟ ದೂರವಾಗಿ ಶ್ರೀಮಂತರಾಗಬೇಕೆ? ಈ ವಾಸ್ತು ನಿಯಮ ಪಾಲಿಸಿ

Union Budget 2024
ಬಜೆಟ್ 202446 mins ago

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

Sanath Jayasuriya
ಪ್ರಮುಖ ಸುದ್ದಿ48 mins ago

Sanath Jayasuriya : ಬ್ಯಾಟಿಂಗ್​ ದಿಗ್ಗಜ ಸನತ್​ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್​ ತಂಡದ ನೂತನ ಕೋಚ್​

Yogi Adityanath
ದೇಶ54 mins ago

Yogi Adityanath: ನಿಂತ ಜಾಗದಲ್ಲೇ ಬಡ ಮಹಿಳೆಗೆ ಮನೆ ಮಂಜೂರು ಮಾಡಿದ ಯೋಗಿ ಆದಿತ್ಯನಾಥ್;‌ ಇದು ‌Instant ಮಾನವೀಯತೆ

leopard attack
ರಾಯಚೂರು58 mins ago

Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

Viral Video
ವೈರಲ್ ನ್ಯೂಸ್1 hour ago

Viral Video: ದುಬೈ ಮಾಲ್‌ನಲ್ಲಿ ಬೊಂಬೆಗಳೊಂದಿಗೆ ಬೊಂಬೆಯಾದ ಮಾಡೆಲ್‌! ಗ್ರಾಹಕರು ಕಕ್ಕಾಬಿಕ್ಕಿ

bomb threat
ಕರ್ನಾಟಕ1 hour ago

Bomb Threat: ಬಾಯ್‌ ಫ್ರೆಂಡ್‌ ಬಿಟ್ಟು ಹೋಗ್ತಾನೆ ಎಂದು ಬೆಂಗಳೂರು ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಕರೆ ಮಾಡಿದ ಯುವತಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Davanagere news
ಮಳೆ2 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ2 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ12 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌