Bengaluru Airport: ಬಿಎಲ್‌ಆರ್ ಪಲ್ಸ್ ಆ್ಯಪ್ ಲಾಂಚ್ ಮಾಡಿದ ಬೆಂಗಳೂರು ಏರ್‌ಪೋರ್ಟ್! ಪ್ರಯಾಣಿಕರಿಗೆ ಏನು ಲಾಭ? - Vistara News

ಕರ್ನಾಟಕ

Bengaluru Airport: ಬಿಎಲ್‌ಆರ್ ಪಲ್ಸ್ ಆ್ಯಪ್ ಲಾಂಚ್ ಮಾಡಿದ ಬೆಂಗಳೂರು ಏರ್‌ಪೋರ್ಟ್! ಪ್ರಯಾಣಿಕರಿಗೆ ಏನು ಲಾಭ?

Bengaluru Airport: ವಿಮಾನ ಪ್ರಯಾಣಿಕರಿಗೆ ನೆರವು ಒದಗಿಸುವುದಕ್ಕಾಗಿ ಬೆಂಗಳೂರು ಅಂತಾರಾಷ್ಟ್ರೀ ವಿಮಾನಿಲ್ದಾಣ ಕಂಪನಿಯ ಬಿಎಲ್ಆರ್ ಪಲ್ಸ್ ಎಂಬ ಹೊಸ ಮೊಬೈಲ್ ಆ್ಯಪ್ ಲಾಂಚ್ ಮಾಡಿದೆ.

VISTARANEWS.COM


on

BLR Pulse App
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು, ಕರ್ನಾಟಕ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda international Airport) ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್ ಲಿ.(Bangalore International Airport Limited – BIAL) ಬಿಎಲ್ಆರ್ ಪಲ್ಸ್ (BLR Pulse) ಎಂಬ ಹೊಸ ಆ್ಯಪ್ ಲಾಂಚ್ ಮಾಡಿದೆ. ಈ ಆ್ಯಪ್ (Mobile App) ಮೂಲಕ ತನ್ನ ಪ್ರಯಾಣಿಕರಿಗೆ ಯಾವುದೇ ತಡೆ ರಹಿತ ಸೇವೆಯನ್ನು ಒದಗಿಸಲು ವಿಮಾನ ನಿಲ್ದಾಣವು ಮುಂದಾಗಿದೆ(Bengaluru Airport).

ಈ ಬಿಎಲ್ಆರ್ ಪಲ್ಸ್ ಆ್ಯಪ್ ಮೂಲಕ ಪ್ರಯಾಣಿಕರು ವಿಮಾನಗಳ ಹಾರಾಟದ ನೈಜ ಸಮಯದ ಅಪ್‌ಡೇಟ್ ಪ ಡೆದುಕೊಳ್ಳಬಹುದು ಇಲ್ಲವೇ ಆ ಬಗ್ಗೆ ವಿಚಾರಣೆ ನಡೆಸಬಹುದು. ವಿಮಾನ ನಿಲ್ದಾಣದ ಒಳಗೆ ರೆಸ್ಟೋರೆಂಟ್‌ಗಳಲ್ಲಿ ಟೇಬಲ್ ಕಾಯ್ದಿರಿಸಬಹುದು, ವೈಫೈ ಸಂಪರ್ಕಿಸಬಹುದು, ಚೆಕ್ ಇನ್ ಗೇಟ್‌ಗಳ ಮಾಹಿತಿಯನ್ನು ಸಂಗ್ರಹಿಸಬಹುದು ಮತ್ತು ವಿಳಂಬವಾಗುವ ವಿಮಾನಗಳನ್ನು ಸಹ ಟ್ರ್ಯಾಕ್ ಮಾಡಬಹುದಾಗಿದೆ. ಈ ಆ್ಯಪ್ ಮೂಲಕ ಟರ್ಮಿನಲ್‌ಗಳ ಒಳಗಿನ ಎಫ್ ಆ್ಯಂಡ್ ಬಿ ಔಟ್‌ಲೆಟ್‌ಗಳಲ್ಲಿ ರಿಯಾಯಿತಿಗಳ ಬಗ್ಗೆ ಮಾಹಿತಿಯನ್ನೂ ಮಾಹಿತಿಯನ್ನು ತಿಳಿದುಕೊಳ್ಳಬಹುದು ಎಂದು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಟ್ವೀಟ್ ಮಾಡಿದ್ದಾರೆ.

ನಿಮ್ಮ ವೈಯಕ್ತಿಕಗೊಳಿಸಿದ ಟ್ರಾವೆಲ್ ಬಡಿ ಕೇವಲ ಟ್ಯಾಪ್ ದೂರದಲ್ಲಿದ್ದಾನೆ. ಬಿಎಲ್ಆರ್ ಪಲ್ಸ್ – #BLRAirport ಅನ್ನು ಅನುಭವಿಸುವ ಹೊಸ ಮಾರ್ಗವನ್ನು ಒದಗಿಸುವ ಅಪ್ಲಿಕೇಶನ್ ಇದಾಗಿದೆ. ಫ್ಲೈಟ್ ಮಾಹಿತಿಯಿಂದ ನಿಮ್ಮ ಪ್ರಯಾಣಕ್ಕೆ ಅಗತ್ಯವಿರುವ ಯಾವುದಾದರೂ ಸ್ಥಳಗಳನ್ನು ಸಂಗ್ರಹಿಸಲು ಸರತಿ ಕಾಯುವ ಸಮಯದವರೆಗೆ ಮಾಹಿತಿ ಈ ಪಲ್ಸ್‌ನಲ್ಲಿ ಲಭ್ಯವಿದೆ. ಬಹು ಗೇಟ್‌ಗಳ ಮೂಲಕ ನ್ಯಾವಿಗೇಟ್ ಮಾಡಲು ಮತ್ತು ಸಮಯಕ್ಕೆ ತಮ್ಮ ವಿಮಾನವನ್ನು ಹತ್ತಲು ಕೊನೆಯ ನಿಮಿಷದ ಫ್ಲೈಯರ್‌ಗಳಿಗೆ ಅಪ್ಲಿಕೇಶನ್ ಉತ್ತಮ ಸಹಾಯವಾಗಲಿದೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Emergency Landing: ಮಹಿಳೆಗೆ ಹೃದಯ ಸಮಸ್ಯೆ; ಬೆಂಗಳೂರಿಂದ ದಿಲ್ಲಿಗೆ ಹೊರಟ ವಿಮಾನ ತುರ್ತು ಭೂಸ್ಪರ್ಶ

ಹೊಸ ಟರ್ಮಿಲ್‌ 2ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಮೆಟಾವರ್ಸ್ ಅನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಲಾಂಚ್ ಮಾಡಿದ್ದರು. ಈ ತ್ರಿಡಿ ಇಂಟರ್‌ಫೇಸ್ ಗ್ರಾಹಕರಿಗೆ ತಮ್ಮ ಫ್ಲೈಟ್‌ಗಳಿಗೆ ಚೆಕ್ ಇನ್, ಟರ್ಮಿನಲ್ ಮ್ತತು ಶಾಪ್‌ಗಳ ನಾವಿಗೇಟ್ ಸೇರಿದಂತೆ ಇನ್ನಿತರ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿತ್ತು. ಕಳೆದ ವರ್ಷ ಜೂನ್ ತಿಂಗಳಲ್ಲಿ ಕೆಂಪೇಗೌಡ ಇಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಒಟ್ಟು 10 ರೋಬೋಟ್‌ಗಳನ್ನು ನಿಯೋಜನೆ ಮಾಡಲಾಗಿತ್ತು. ಈ ರೋಪೋಟ್‌ಗಳು ಕೃತಕ ಬುದ್ಧಿಮತ್ತೆಯ ಆಧಾರದ ಮೇಲೆ ಕೆಲಸ ಮಾಡುತ್ತವೆ. ವಿನಂತಿಯ ಮೇರೆಗೆ ಪ್ರಯಾಣಿಕರಿಗೆ ಎಸ್ಕಾರ್ಟ್ ಕೂಡ ಮಾಡಬಲ್ಲವು ಈ ರೋಬೋಟ್‌ಗಳು. ಈಗ ಬಿಎಲ್ಆರ್ ಪಲ್ಸ್ ಆ್ಯಪ್ ಮೂಲಕ ವಿಮಾನ ನಿಲ್ದಾಣವು ತನ್ನ ಪ್ರಯಾಣಿಕರ ಸೇವೆಯ ಅನುಭವವನ್ನು ಮತ್ತಷ್ಟು ಹೆಚ್ಚಿಸಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Petrol Diesel Price: ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿದೆ. ಈ ನಿರ್ಧಾರ ವಾಪಸ್‌ ಪಡೆಯದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Petrol Diesel Price
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಸ್ಥಾನಗಳು ಬಾರದ ಹಿನ್ನೆಲೆಯಲ್ಲಿ ಆ ಸಿಟ್ಟನ್ನು ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆ. ವಿದ್ಯುತ್ ದರ ಹೆಚ್ಚಳ,‌ ಸ್ಟ್ಯಾಂಪ್ ಡ್ಯೂಟಿ‌ ಹೆಚ್ಚಿಸಿದ್ದರು. ಇದೀಗ ಈಗ ಪೆಟ್ರೋ‌ಲ್, ಡೀಸೆಲ್‌ ದರ ಲೀಟರ್‌ಗೆ 3 ರೂ‌. ಹೆಚ್ಚಳ (Petrol Diesel Price) ಮಾಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಬರೆ‌ ಹಾಕಲು ಹೊರಟಿದ್ದಾರೆ. ಇದನ್ನು ಖಂಡಿಸಿ ಮುಂದಿನ ಸೋಮವಾರ ಪ್ರತಿಭಟನೆ ಮಾಡುತ್ತೇವೆ, ಅಷ್ಟರೊಳಗೆ ಎಚ್ಚೆತ್ತು ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ‌ದ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿ, ಈ ಸರ್ಕಾರದಲ್ಲಿ ಅಧಿಕಾರಿಗಳಿಗೆ ಸಂಬಳ ಕೊಡಲೂ ಆಗದಂತಹ ಪರಿಸ್ಥಿತಿ ಇದೆ. ಹೀಗಾಗಿ ‌ತೆರಿಗೆ‌ ಹೆಚ್ಚಳ‌ ಮಾಡಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಸಿಎಂ ರೆಡಿ ಇಲ್ಲ, ಅವರು‌ ಭಂಡತನ ಬಿಡಬೇಕು. ಮುಂದಿನ ಸೋಮವಾರ ಪ್ರತಿಭಟನೆ ಮಾಡುತ್ತೇವೆ. ಅಷ್ಟರೊಳಗೆ ಎಚ್ಚೆತ್ತುಕೊಂಡು ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಜೂ.18ಕ್ಕೆ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಿಜೆಪಿ ಮುತ್ತಿಗೆ

ಬೆಳಗ್ಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ವಾಲ್ಮೀಕಿ ಸಮುದಾಯದ ನಾಯಕರು ಕಚೇರಿಗೆ ಬಂದಿದ್ದರು. ವಾಲ್ಮೀಕಿ ನಿಗಮ ಹಗರಣ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಏಕೆಂದರೆ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಇಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನ ಪಕ್ಷ ಇಲ್ಲಿಗೆ ಕೈ ಬಿಡಲ್ಲ, ಪಕ್ಷದಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಿದ್ದೇವೆ. ಇದೇ 18 ರಂದು ರಾಜ್ಯದ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಿಜೆಪಿ ಮುತ್ತಿಗೆ ಹಾಕಲಿದೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕೌಂಟ್‌ಗೆ ವಾಪಸ್ ಬಂದಿದೆ ಎನ್ನುತ್ತಾರೆ. ಅದು ಮುಖ್ಯವಲ್ಲ, ಪ್ರಕರಣವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬೇಕು. ಸಮುದಾಯಕ್ಕೆ ಆದ‌ ಅನ್ಯಾಯ ಸರಿಪಡಿಸಬೇಕು. ಹಣಕಾಸು‌ ಇಲಾಖೆಗೆ‌ ಮಾಹಿತಿ‌ ಇಲ್ಲದೇ ಇಷ್ಟು ದೊಡ್ಡ‌ ಹಗರಣ ಆಗಲು ಸಾಧ್ಯವಿಲ್ಲ. ಇದನ್ನ ರಾಜ್ಯಸರ್ಕಾರ ಮುಚ್ಚಿ ಹಾಕಲು ಹೊರಟಿದೆ. 28 ರಂದು‌ ಎಲ್ಲಾ ಜಿಲ್ಲಾ‌ಧಿಕಾರಿ ಕಚೇರಿಗಳಿಗೂ ಮುತ್ತಿಗೆ‌ ಹಾಕಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ | Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

ಲೋಕಸಭಾ ಚುನಾವಣೆಯ‌ಲ್ಲಿ ಹಿನ್ನಡೆ‌ ಪರಿಣಾಮ ನಮ್ಮ ಕಾರ್ಯಕರ್ತರಿಗೆ‌ ಕಿರಿಕುಳ ನೀಡಿ, ಎಫ್‌ಐಆರ್‌ ಹಾಕುತ್ತಿದ್ದಾರೆ. ಹೀಗಾಗಿ ಕಾನೂನು‌ ಪ್ರಕೋಷ್ಠ‌ಗಳನ್ನು ಹೆಚ್ಚಿಸುತ್ತಿದ್ದೇವೆ. ಈ‌ ಬಂಡ ಕಾಂಗ್ರೆಸ್ ಸರ್ಕಾರವನ್ನು ಧೈರ್ಯವಾಗಿ ಎದುರಿಸುತ್ತೇವೆ. ಪ್ರತಿ‌ ಮಂಡಲ ಮಟ್ಟದಲ್ಲೂ ಕಾನೂನು‌ ಪ್ರಕೋಷ್ಠ‌ ಮಾಡುತ್ತೇವೆ ಎಂದು ಹೇಳಿದರು.

Continue Reading

ಕರ್ನಾಟಕ

ಗ್ಯಾರಂಟಿ ಉಚಿತ, ಬೆಲೆಯೇರಿಕೆ ಖಚಿತ; ಪೆಟ್ರೋಲ್‌ ಬೆಲೆ ಏರಿಕೆಯಿಂದ ರಾಜ್ಯ ಸರ್ಕಾರಕ್ಕೆ ಎಷ್ಟು ಆದಾಯ?

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಚುನಾವಣೆ ಮುಗಿದ ಕಾರಣ ಬೆಲೆಯೇರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 1 ಸಾವಿರ ಕೋಟಿ ರೂ. ಆದಾಯ ಲಭಿಸಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Siddaramaiah
Koo

ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬರೆಯನ್ನು ಕರ್ನಾಟಕ ಸರ್ಕಾರ ಎಳೆದಿದೆ. ಹೌದು, ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ (Petrol Diesel Price) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 250 ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ ಎಂದು ತಿಳಿದುಬಂದಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಿಂದ ರಾಜ್ಯ ಸರ್ಕಾರಕ್ಕೆ ವ್ಯಾಟ್‌ ರೂಪದಲ್ಲಿ ವರ್ಷಕ್ಕೆ 250 ಕೋಟಿ ರೂ. ಹೆಚ್ಚುವರಿ ಆದಾಯ ಸಿಗಲಿದೆ. ರಾಜ್ಯ ಹಣಕಾಸು ಇಲಾಖೆಯ ಮೂಲಗಳ ಪ್ರಕಾರ, ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ವ್ಯಾಟ್ ರೂಪದಲ್ಲಿ ವರ್ಷಕ್ಕೆ ರೂ. 9,500 ಕೋಟಿ ಆದಾಯವನ್ನು ಗಳಿಸುತ್ತದೆ. ಇದು ತಿಂಗಳಿಗೆ 800 ಕೋಟಿ ರೂ. ಆಗುತ್ತದೆ. ಇನ್ನು ಈಗ ಬೆಲೆಯೇರಿಕೆ ಮಾಡಿರುವುದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ವರ್ಷಕ್ಕೆ 9,750 ಕೋಟಿ ರೂ. ಸಿಗಲಿದೆ ಎಂದು ತಿಳಿದುಬಂದಿದೆ.

ಪ್ರಲ್ಹಾದ್‌ ಜೋಶಿ ಆಕ್ರೋಶ

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಬೇಕಾದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ.

ಸೋಮವಾರದಿಂದ ಪ್ರತಿಭಟನೆ ಎಂದ ಬಿಜೆಪಿ

ರಾಜ್ಯ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಏರಿಕೆ ಮಾಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಸೋಮವಾರದಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. “ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಹಾಗಾಗಿ, ಬೆಲೆಯೇರಿಕೆ ಮೂಲಕ ಜನರ ಮೇಲೆ ಸಿಟ್ಟು ತೀರಿಸಿಕೊಳ್ಳಲಾಗುತ್ತಿದೆ. ಮೊದಲು ವಿದ್ಯುತ್‌ ಬೆಲೆ ಏರಿಕೆ ಮಾಡಿತು. ಆಮೇಲೆ ಸ್ಟ್ಯಾಂಪ್‌ ಡ್ಯೂಟಿ ಏರಿಸಲಾಯಿತು. ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ರಾಜ್ಯದ ಜನರಿಗೆ ಬರೆ ಹಾಕುತ್ತಿದ್ದಾರೆ. ಬೆಲೆ ಏರಿಕೆ ಖಂಡಿಸಿ ಸೋಮವಾರ ಪ್ರತಿಭಟನೆ ಮಾಡುತ್ತೇವೆ” ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Continue Reading

ಕರ್ನಾಟಕ

HD Kumaraswamy: ಚನ್ನಪಟ್ಟಣ ಜನರನ್ನು ಯಾರೂ ಭಯಪಡಿಸಲು ಆಗಲ್ಲ; ಡಿಕೆ ಬ್ರದರ್ಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಚನ್ನಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ ಕಾರ್ಯಕರ್ತರು ಅದ್ಧರಿ ಸ್ವಾಗತ ಕೋರಿದರು.

VISTARANEWS.COM


on

HD Kumaraswamy
Koo

ರಾಮನಗರ: ನನಗೆ ಎರಡು ಖಾತೆಗಳನ್ನು ಕೊಟ್ಟಿದ್ದಾರೆ. ನಿರುದ್ಯೋಗ ನಿವಾರಣೆಗೆ ಇಡೀ ದೇಶದಲ್ಲಿ ಕೆಲಸ ಮಾಡಬೇಕಿದೆ. ಹೊರರಾಜ್ಯಗಳಲ್ಲಿ ಕೆಲಸ ಮಾಡೋದಕ್ಕೂ ಯುವಕರು ಮಾನಸಿಕವಾಗಿ ಸಿದ್ಧರಾಗಬೇಕು. ಚನ್ನಪಟ್ಟಣ ಜನರನ್ನು ಭಯಪಡಿಸಲು ಆಗಲ್ಲ. ಮಂಡ್ಯ ಸೀಮೆಯ ಗಾಳಿ ಈ ಭಾಗದಲ್ಲಿ ಇದೆ ಎಂದು ಪರೋಕ್ಷವಾಗಿ ಡಿಕೆ ಬ್ರದರ್ಸ್‌ ವಿರುದ್ಧ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಚನ್ನಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಈ ಹಿಂದೆ ಯೋಗೇಶ್ವರ್ ಸಚಿವರಾಗಿ ದೇವೇಗೌಡರು ಕಟ್ಟಿದ ಇಗ್ಗಲೂರಿನಿಂದ ನೀರು ತಂದರು. ನಾವು ಜಾಹೀರಾತಿನಿಂದ ಪ್ರಚಾರ ತೆಗೆದುಕೊಳ್ಳಲಿಲ್ಲ. ಜನರ ಕಷ್ಟ ಅರ್ಥ ಮಾಡಿಕೊಂಡು ಬಂದಿದ್ದೇನೆ. ಈ ರಾಜ್ಯದಲ್ಲಿ ಮತ್ತೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ನಾನು ಕೃಷಿ ಸಚಿವ ಆಗದೇ ಇರಬಹುದು. ದೇವೇಗೌಡರಿಗೆ ಪ್ರಧಾನಿ ಕೂಡ ಗೌರವ ಕೊಡುತ್ತಾರೆ. ಅದರಂತೆ ನನಗೂ ಸ್ವಲ್ಪ ಗೌರವ ಇದೆ. ಸ್ಮಾರ್ಟ್ ಸಿಟಿ ಯೋಜನೆ ತರುವ ನಿಟ್ಟಿನಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಚನ್ನಪಟ್ಟಣ ನಗರಸಭೆ ಜನ ಹೆಚ್ಚು ಮತ ಕೊಟ್ಟರೂ ಅಭಿವೃದ್ಧಿ ಕುಂಠಿತವಾಯಿತು. ನಮ್ಮ ಎದುರಾಳಿಗಳು ನಮ್ಮನ್ನು ಸೋಲಿಸುವುದಕ್ಕೆ ಆಗಲ್ಲ ಎಂದಿದ್ದರು. ಬಹಳ ಅಭಿವೃದ್ಧಿ ಕೆಲಸ ಮಾಡಿದ್ದೇನೆ, ಕೂಲಿ ಕೊಡುತ್ತಾರೆ ಎಂತಿದ್ದರು. ಅದೇನೋ ಮಾತು ಎತ್ತಿದರೆ ಸಾಕ್ಷಿ ಗುಡ್ಡೆ ಎನ್ನುತ್ತಾರೆ. ಸಾಕ್ಷಿ ಗುಡ್ಡೆ ನೋಡಬೇಕು ಎಂದರೆ ಕನಕಪುರ ಮಾತ್ರ ಸಾಧ್ಯ. ಉಳಿದಂತೆ ಜಿಲ್ಲೆಯ ಯಾವ ಕ್ಷೇತ್ರವು ಅಭಿವೃದ್ಧಿ ಆಗಿಲ್ಲ. ಇದೀಗ ಚನ್ನಪಟ್ಟಣ ಕ್ಷೇತ್ರದ ಮೇಲೆ ವಕ್ರ ದೃಷ್ಟಿ ಬಿದ್ದಿದೆ ಎಂದು ಡಿಕೆ ಸಹೋದರರನ್ನು ಟೀಕಿಸಿದರು.

3 ಕೋಟಿ ಮನೆಗಳನ್ನು ಕಟ್ಟುವ ನಿರ್ಧಾರವನ್ನು ಪ್ರಧಾನಮಂತ್ರಿ ಮಾಡಿದ್ದಾರೆ. ನಾನು ಹುಟ್ಟಿದ್ದು ಹಾಸನ ಜಿಲ್ಲೆಯಾದರೂ ರಾಜಕೀಯ ಶಕ್ತಿ ಕೊಟ್ಟಿದ್ದು ಈ ಜಿಲ್ಲೆಯ ಜನ. ಮಂಡ್ಯ ಜಿಲ್ಲೆಯ ಜನ ಅತ್ಯಂತ ಮುಗ್ಧರು. 50 ವರ್ಷಗಳ ಹಿಂದೆ ಹೇಗಿತ್ತೋ, ಅದೇ ರೀತಿಯಲ್ಲಿ ಆ ಜಿಲ್ಲೆ ಇನ್ನೂ ಉಳಿದಿದೆ. ಕುಮಾರಣ್ಣ ಬಂದ್ರೆ ಏನೋ ಒಳ್ಳೆ ಕೆಲಸ ಮಾಡುತ್ತಾರೆ ಅಂದುಕೊಂಡಿದ್ದಾರೆ, ಹೀಗಾಗಿ ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲರ ಒಪ್ಪಿಗೆ ಪಡೆದು ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾದೆ. ಈ ಬಗ್ಗೆ ಹಲವಾರು ನಾಯಕರಿಗೆ ಅಸಮಾಧಾನವಾಗಿದೆ. ನಾನು ರಾಮನಗರದಲ್ಲಿ ಶಾಸಕನಾಗಿದ್ದಾಗ ಚನ್ನಪಟ್ಟಣಕ್ಕೆ ಬರಬೇಕು ಎಂದಿದ್ದರು. ಅಭಿಮಾನಿಗಳು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚನ್ನಪಟ್ಟಣದ ಶಾಸಕನಾದೆ. ಈ ಬಾರಿ ಲೋಕಸಭೆ ಚುನಾವಣೆಗೆ ನಿಲ್ಲಬೇಕು ಅಂದುಕೊಂಡಿರಲಿಲ್ಲ. ಈ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಇರಬೇಕೋ ಬೇಡವೋ ಅನ್ನೋ ಪರಿಸ್ಥಿತಿಯಾಗಿತ್ತು. ಮಂಡ್ಯದಲ್ಲಿಯೂ ನಾನು ಹೋಗದೇ ಇದ್ದರೂ ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.

ಕಳೆದ ವಿಧಾಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತಾರೆ ಅಂದುಕೊಂಡಿದ್ದಿರಿ. ಈಗ ನಾನು ಲೋಕಸಭೆಯಲ್ಲಿ ನಿಲ್ಲಬೇಕಾಯ್ತು‌. ಕೇಂದ್ರದಲ್ಲಿ ಕೃಷಿ ಸಚಿವನಾದರೆ ರೈತರಿಗೆ ಅನುಕೂಲವಾಗುತ್ತೆ ಅಂದುಕೊಂಡಿದ್ದಿರಿ. ಎಲ್ಲೇ ಹೋದರೂ ಕೃಷಿ ಸಚಿವ ಅಂತ ಘೋಷಣೆ ಮಾಡುತ್ತಿದ್ದರು. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ ವ್ಯವಸ್ಥೆ ಮಾಡಲಾಗುತ್ತದೆ. ದೇವೇಗೌಡರ ಮಾರ್ಗದರ್ಶನದಲ್ಲಿ ಹಳ್ಳಿಗಳ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಹಿಂದೆ ಎರಡು ಬಾರಿ ಸಿಎಂ ಆದಾಗ ಈ ರಾಜ್ಯದ ಜನ ಗುರುತಿಸಿದ್ದಾರೆ. ಇಲ್ಲಿ ಸಭೆ ಮಾಡಿದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂದುಕೊಂಡೆ. ಹಲವು ನಾಯಕರು ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ಮಾಡಿದ್ದೀರಿ, ಉದ್ಘಾಟನೆ ನಾನೇ ಮಾಡುವಂತೆ ಒತ್ತಡ ಹಾಕಿದ್ದರು. ಹೀಗಾಗಿ ಈ ಕಾರ್ಯಕ್ರಮ ಬಳಿಕ ಸಂಜೆ ರಾಜೀನಾಮೆ ಅಂಗೀಕಾರ ಮಾಡುವಂತೆ ಸ್ಪೀಕರ್‌ಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಘೋಷಣೆ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ. ಒಟ್ಟು 23 ಸಾಹಿತಿಗಳಿಗೆ ಪ್ರಶಸ್ತಿ ನೀಡಲಾಗಿದ್ದು, ಕರ್ನಾಟಕದ ಇಬ್ಬರಿಗೂ ಪ್ರಶಸ್ತಿ ದೊರೆತಿದೆ.

VISTARANEWS.COM


on

Kendra Sahitya Akademi Award
Koo

ನವದೆಹಲಿ/ಬೆಂಗಳೂರು: ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award) ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.

ಶ್ರುತಿ ಬಿ.ಆರ್.‌ ಅವರು ಚಿಕ್ಕಮಗಳೂರಿನ ತರೀಕೆರೆಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಕೆಎಎಸ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕವಯತ್ರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇವರ ಮೊದಲ ಕವನ ಸಂಕಲನವಾದ ‘ಜೀರೋ ಬ್ಯಾಲೆನ್ಸ್’‌ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕಗಳೊಂದಿಗೆ ಪಡೆದಿದ್ದು, ಪಿಎಚ್‌.ಡಿಯನ್ನೂ ಪಡೆದಿದ್ದಾರೆ. ಇವರ ಲೇಖನಗಳು, ಕವಿತೆಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿಳಿಗೆರೆ ಅವರು ಇದೇ ಜಿಲ್ಲೆಯ ಹುಳಿಯಾರಿನ ಬಿಎಂಎಸ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾವಯವ ಕೃಷಿ, ಬೀಜ ನಾಟಿ, ನೀರು ಸಂಗ್ರಹ ಸೇರಿ ಹಲವು ಚಳವಳಿಗಳಲ್ಲೂ ಸಕ್ರಿಯರಾಗಿರುವ ಇವರು, ಸಾಹಿತ್ಯ ಕೃಷಿಯಲ್ಲೂ ನಾಡಿನಾದ್ಯಂತ ಹೆಸರು ಗಳಿಸಿದ್ದಾರೆ. ಕಾವ್ಯ, ಕತೆ, ನಾಟಕಗಳ ರಚನೆ ಮೂಲಕ ಇವರು ನಾಡಿನ ಮನೆಮಾತಾಗಿದ್ದಾರೆ. ಇವರಿಗೆ ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ದೊರೆತಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Continue Reading
Advertisement
Petrol Diesel Price
ಕರ್ನಾಟಕ16 mins ago

Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Siddaramaiah
ಕರ್ನಾಟಕ40 mins ago

ಗ್ಯಾರಂಟಿ ಉಚಿತ, ಬೆಲೆಯೇರಿಕೆ ಖಚಿತ; ಪೆಟ್ರೋಲ್‌ ಬೆಲೆ ಏರಿಕೆಯಿಂದ ರಾಜ್ಯ ಸರ್ಕಾರಕ್ಕೆ ಎಷ್ಟು ಆದಾಯ?

Amazon India
ದೇಶ1 hour ago

Amazon India: ನೀರು ಕುಡಿಯುವಂತಿಲ್ಲ, ವಾಶ್ ರೂಮ್ ಗೆ ಹೋಗುವಂತಿಲ್ಲ; ಸಿಬ್ಬಂದಿಗೆ ಅಮೆಜಾನ್ ಕಂಪನಿ ತಾಕೀತು!

HD Kumaraswamy
ಕರ್ನಾಟಕ1 hour ago

HD Kumaraswamy: ಚನ್ನಪಟ್ಟಣ ಜನರನ್ನು ಯಾರೂ ಭಯಪಡಿಸಲು ಆಗಲ್ಲ; ಡಿಕೆ ಬ್ರದರ್ಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Father's Day Fashion
ಫ್ಯಾಷನ್1 hour ago

Father’s Day Fashion: ಅಪ್ಪಂದಿರ ದಿನಕ್ಕೂ ಉಂಟು ಫ್ಯಾಷನ್‌ ಸ್ಟೇಟ್‌ಮೆಂಟ್ಸ್!

Kendra Sahitya Akademi Award
ಪ್ರಮುಖ ಸುದ್ದಿ2 hours ago

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

Period Pain Relief Food
ಆರೋಗ್ಯ2 hours ago

Period Pain Relief Food: ಪೀರಿಯಡ್‌ನ ನೋವು ನಿವಾರಣೆಗೆ ಈ ಆಹಾರಗಳು ಸೂಕ್ತ

karnataka Weather Forecast
ಮಳೆ2 hours ago

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Actor Darshan
ಕರ್ನಾಟಕ2 hours ago

Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Kendra Sahitya Akademi Award
ಪ್ರಮುಖ ಸುದ್ದಿ2 hours ago

Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ6 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌