Site icon Vistara News

Murder Case: ಬಾರ್‌ ಕ್ಯಾಷಿಯರ್‌ನನ್ನು ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ; ಹಂತಕರನ್ನು ಬಂಧಿಸಿದ ಪೊಲೀಸರು

Bar cashier crushed to death with a stone, Police arrest the killers

Bar cashier crushed to death with a stone, Police arrest the killers

ಬೆಂಗಳೂರು: ಆರ್‌ಎಂಸಿ ಯಾರ್ಡ್‌ ಬಳಿ ಕಲ್ಲಿನಿಂದ ಜಜ್ಜಿ ಯುವಕನ ಹತ್ಯೆ (Bengaluru Murder Case) ಮಾಡಲಾಗಿದೆ. ಶೇಖರ್ ಬಾರ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಅಲಿಯಾಸ್ ಜೋಗಿ ಎಂಬಾತ ಮೃತಪಟ್ಟವನು.

ಕರ್ಣ ಅಲಿಯಾಸ್‌ ಸಿದ್ದೋಜಿ ರಾವ್, ಗಿರೀಶ್ ಎಂಬುವವರು ಈ ಕೃತ್ಯ ಎಸಗಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆಯು ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಆರ್‌ಎಂಸಿ ಯಾರ್ಡ್ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಆರೋಪಿಗಳಾದ ಕರ್ಣ, ಗಿರೀಶ್‌ನನ್ನು ಬಂಧಿಸಿ, ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಕೊಡಗಿನ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಸಹೋದರ ಸಂಬಂಧಿಯಿಂದಲೇ ವ್ಯಕ್ತಿಯೊಬ್ಬ ಕೊಲೆ ಆಗಿ ಹೋಗಿದ್ದಾನೆ. ಎಂ.ಸಂತು ಸುಬ್ಬಯ್ಯ (39) ಮೃತ ದುರ್ದೈವಿ. ಕಾಳಪ್ಪ ಎಂಬಾತ ಸಂತು ಸುಬ್ಬಯ್ಯರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಬುಧವಾರ ರಾತ್ರಿ ಇಬ್ಬರೂ ಎಣ್ಣೆ ಪಾರ್ಟಿ ನಡೆಸಿದ್ದಾರೆ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಜಗಳ ತಾರಕಕ್ಕೇರಿ ಸಂತು ಸುಬ್ಬಯ್ಯನಿಗೆ ಕಾಳಪ್ಪ ಚಾಕುವಿನಿಂದ ಇರಿದಿದ್ದಾನೆ. ವಿಷಯ ತಿಳಿದ ಸ್ಥಳೀಯ ನಾಗರಿಕರು ಹಲ್ಲೆಗೊಳಗಾದ ಸಂತು ಸುಬ್ಬಯ್ಯನರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಈ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: North East Election Results: ಮೇಘಾಲಯದಲ್ಲಿ ಅತಂತ್ರ ಫಲಿತಾಂಶ? ಬಿಜೆಪಿ ಜತೆ ಎನ್‌ಪಿಪಿ ಮೈತ್ರಿ ಸಾಧ್ಯತೆ

ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಶ್ರೀಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕಾಳಪ್ಪನನ್ನು ಬಂಧಿಸಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version