Bengaluru Murder Case: ಬೆಂಗಳೂರಿನಲ್ಲಿ ಅತ್ತೆಗೆ ಚಾಕು ಹಾಕಿ ಪಾಪಿ ಅಳಿಯ ಪರಾರಿ - Vistara News

ಕರ್ನಾಟಕ

Bengaluru Murder Case: ಬೆಂಗಳೂರಿನಲ್ಲಿ ಅತ್ತೆಗೆ ಚಾಕು ಹಾಕಿ ಪಾಪಿ ಅಳಿಯ ಪರಾರಿ

Bengaluru Murder Case: ಮೊಮ್ಮಗಳಿಗೆ ಎಕ್ಸಾಂ ಇದೆ ಕಳಿಸಿಕೊಡು ಎಂದಿದ್ದಕ್ಕೆ ಅಳಿಯನೊಬ್ಬ ಅತ್ತೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿ ಪರಾರಿ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

VISTARANEWS.COM


on

Son-in-law murders mother-in-law in bengaluru
ಮೃತ ಏಳಲ್‌ ಅರಸಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಂಗೇರಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯ ಬೃಂದಾವನ ಲೇಔಟ್‌ನಲ್ಲಿ ಅಳಿಯನೊಬ್ಬ ಅತ್ತೆಗೆ ಚಾಕು ಇರಿದು ಹತ್ಯೆ (Bengaluru Murder Case) ಮಾಡಿದ್ದಾನೆ. ಏಳಲ್‌ ಅರಸಿ (48) ಕೊಲೆಯಾದ ದುರ್ದೈವಿ.

ಮೊಮ್ಮಗಳಿಗೆ ಎಕ್ಸಾಂ ಇದೆ ಕಳಿಸು ಎಂದು ಕೇಳಿದ್ದಕ್ಕೆ ಅಳಿಯ ದಿವಾಕರ್‌ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಏಳಲ್‌ ಅರಸಿಗೆ ಐವರು ಮಕ್ಕಳಿದ್ದು, ಅದರಲ್ಲಿ ಮೊದಲ ಮಗಳನ್ನು ದಿವಾಕರ್‌ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದರು. ಕೋಲಾರದ ಕೆ.ಜಿ.ಎಫ್‌ನಲ್ಲಿ ವಾಸವಿದ್ದ ದಿವಾಕರ್‌ ದಂಪತಿ ಮಧ್ಯೆ ಕಾರಣಾಂತರಗಳಿಂದ ಆಗಾಗ ಜಗಳ ನಡೆಯುತ್ತಿತ್ತು.

murder case Son-in-law murders mother-in-law in bengaluru

ಇತ್ತೀಚೆಗೆ ಆರೋಪಿ ದಿವಾಕರ್‌ ತನ್ನ ಮಗಳಿಗೆ ಎಕ್ಸಾಂ ಇದ್ದರೂ ಬೆಂಗಳೂರಿನ ಅಕ್ಕನ ಮನೆಗೆ ಕರೆತಂದಿದ್ದ. ಹೀಗಾಗಿ ಮಗುವನ್ನು ಕರೆದುಕೊಂಡು ಹೋಗಲು ಅತ್ತೆ ಏಳಲ್‌ ಅರಸಿ ಬಂದಿದ್ದರು. ಮೊಮ್ಮಗಳಿಗೆ ಎಕ್ಸಾಂ ಇದೆ ಕಳಿಸು ಎಂದು ಅಳಿಯ ದಿವಾಕರ್‌ಗೆ ಕೇಳಿದ್ದರು. ಇದಕ್ಕೆ ಒಪ್ಪದ ದಿವಾಕರ್‌ ಕ್ಯಾತೆ ತೆಗೆದು ಜಗಳಕ್ಕೆ ನಿಂತಿದ್ದ ಎನ್ನಲಾಗಿದೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಸಿಟ್ಟಿಗೆದ್ದ ದಿವಾಕರ್‌ ಚಾಕುವಿನಿಂದ ಅತ್ತೆಗೆ ಇರಿದಿದ್ದಾನೆ.

ಇದನ್ನೂ ಓದಿ: RBI Notice: ಶಿಂಷಾ ಸಹಕಾರ ಬ್ಯಾಂಕ್‌ ಸೇರಿ 5 ಬ್ಯಾಂಕ್‌ಗಳಿಂದ ಹಣ ತೆಗೆಯದಂತೆ ಗ್ರಾಹಕರಿಗೆ ನಿರ್ಬಂಧ

ಗಂಭೀರ ಗಾಯಗೊಂಡಿದ್ದ ಏಳಲ್ ಅರಸಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸದ್ಯ ಆರೋಪಿ ದಿವಾಕರ್‌ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

Lok Sabha Election 2024: ಲೋಕಸಭಾ ಚುನಾವಣೆ-2024 ಹಿನ್ನೆಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಮತದಾನದ ಮಹತ್ವ ಅರಿತಿರುವ ದಂಪತಿ, ದುಬೈನಿಂದ ಗಂಗಾವತಿಗೆ ಮತದಾನ ಮಾಡಲು ಆಗಮಿಸಿದ್ದಾರೆ. ದುಬೈನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಐಶ್ವರ್ಯ ಗೌಡರ್ ಮತ್ತು ಕಿರಣ್ ಪಾಟೀಲ್ ದಂಪತಿ ಭಾರತದ ಪೌರರಾಗಿ ಮತದಾನ ಮಾಡಲು ಬಂದಿದ್ದಾಗಿ ತಿಳಿಸಿದ್ದಾರೆ.

VISTARANEWS.COM


on

couple came to Gangavathi from Dubai to vote
Koo

ಗಂಗಾವತಿ: ಲೋಕಸಭಾ ಚುನಾವಣೆ 2024 (Lok Sabha Election 2024) ಹಿನ್ನೆಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಮತದಾನದ ಮಹತ್ವ ಅರಿತಿರುವ ದಂಪತಿ, ದುಬೈನಿಂದ (Dubai) ಗಂಗಾವತಿಗೆ ಮತದಾನಕ್ಕಾಗಿ ಆಗಮಿಸಿದ್ದಾರೆ.

ನಗರದ ಎಪಿಎಂಸಿ ಸಮೀಪದ ನಿವಾಸಿಯಾಗಿರುವ ಉದ್ಯಮಿ ಆರ್ಹಾಳ ಶರಣಪ್ಪ ಅವರ ಪುತ್ರಿ ಐಶ್ವರ್ಯ ಗೌಡರ್ ಮತ್ತು ಅಳಿಯ ಕಿರಣ್ ಪಾಟೀಲ್ ದಂಪತಿ ದುಬೈನಲ್ಲಿ ನೆಲೆಸಿದ್ದಾರೆ. ಲೋಕಸಭಾ ಚುನಾವಣೆಗೆ ಮತದಾನ ಮಾಡುವ ಉದ್ದೇಶಕ್ಕಾಗಿಯೇ ದುಬೈನಿಂದ ಗಂಗಾವತಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

ಕಿರಣ್ ಪಾಟೀಲ್ ಕೂಡ ಗಂಗಾವತಿಯ ಕುವೆಂಪು ಬಡಾವಣೆಯ ನಿವಾಸಿಯಾಗಿದ್ದು, ಕಳೆದ ಒಂದೂವರೆ ವರ್ಷದಿಂದ ದುಬೈನಲ್ಲಿ ನೆಲೆಸಿದ್ದಾರೆ. ಕಳೆದ ಡಿಸಂಬರ್‌ನಲ್ಲಿ ಐಶ್ವರ್ಯ ಮತ್ತು ಕಿರಣ್ ಪಾಟೀಲ್‌ಗೆ ವಿವಾಹವಾಗಿದ್ದು, ಇಬ್ಬರೂ ದುಬೈನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಇಲ್ಲಿನ ಎಪಿಎಂಸಿ ಮುಂಭಾಗದ ಟಿಎಪಿಸಿಎಂಎಸ್‌ನ ಮತಗಟ್ಟೆಯಲ್ಲಿ ಐಶ್ವರ್ಯ ಮತದಾನ ಮಾಡಲಿದ್ದು, ಬೆಂಡರವಾಡಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಕಿರಣ್ ಪಾಟೀಲ್ ಮತದಾನ ಮಾಡಲಿದ್ದಾರೆ. ಮತದಾನದ ಬಳಿಕ ಈ ದಂಪತಿ ಮತ್ತೆ ದುಬೈಗೆ ತೆರಳಲಿದ್ದಾರೆ.

ಇದನ್ನೂ ಓದಿ: No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

`ಭಾರತ ಬದಲಾಗುತ್ತಿದ್ದು, ಅಭಿವೃದ್ಧಿಗೆ ವೇಗ ಸಿಕ್ಕಿದೆ. ವಿದೇಶಗಳಲ್ಲೂ ಭಾರತದ ಬಗ್ಗೆ ಗೌರವ ಭಾವ ಮೂಡಿದೆ. ಹೀಗಾಗಿ ಭಾರತದ ಪ್ರಜೆಗಳೆಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಎನಿಸುತ್ತಿದೆ. ಭಾರತದ ಪೌರರಾಗಿ ಮತದಾನ ಮಾಡಲು ಬಂದಿದ್ದಾಗಿ ಐಶ್ವರ್ಯ ಮತ್ತು ಕಿರಣ್ ದಂಪತಿ ತಿಳಿಸಿದ್ದಾರೆ.

Continue Reading

ಕೊಡಗು

Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

Marriage Cancel : ಯಾವ್ಯಾವುದೋ ಕಾರಣಕ್ಕೆ ಮದುವೆಯ ದಿನ ಮುರಿದು ಬಿದ್ದಿರುವುದು ನೋಡಿದ್ದೇವೆ. ಆದರೆ ಕೊಡಗಿನಲ್ಲಿ ವರನ ಕಡೆಯವರಿಗೆ ಸಿಹಿ ತಿಂಡಿ‌ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯೊಂದು ಮುರಿದಿದೆ.

VISTARANEWS.COM


on

By

marriage cancel in kodagu
Koo

ಕೊಡಗು: ವರದಕ್ಷಿಣೆ ಕೊಡಲಿಲ್ಲ ಎಂದು ಮದುವೆ ದಿನವೇ ವರನೊಬ್ಬ ಮದುವೆ ಬೇಡ (Marriage Cancel) ಎಂದಿದ್ದಾನೆ. ಮದುವೆ ಬೇಡ ಎನ್ನಲು ಮೊದಲು ಕಾರಣ ಕೊಟ್ಟಿದ್ದು, ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲದ ಕಾರಣ ಹೇಳಿ ನನಗೆ ಈ ಮದುವೆ ಬೇಡ ಎಂದು ಗಲಾಟೆ ಮಾಡಿದ್ದಾನೆ.

ಕೊಡಗು ಜಿಲ್ಲೆಯಲ್ಲಿ ಸೋಮವಾರ ಪೇಟೆಯ ಜಾನಕಿ ಕನ್ವೆನ್ಶನ್‌ ಹಾಲ್‌ನಲ್ಲಿ ಘಟನೆ ನಡೆದಿದೆ. ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿ ಮತ್ತು ತುಮಕೂರು ಜಿಲ್ಲೆಯ ಯುವಕ ನೊಂದಿಗೆ ಮೇ 5ರಂದು ಮದುವೆ ನಿಶ್ಚಯಾಗಿವಾಗಿತ್ತು. ಆದರೆ ರಾತ್ರೋ ರಾತ್ರಿ ವರ ಉಂಗುರ ಕಳಚಿಕೊಟ್ಟು ಹೋಗಿದ್ದಾನೆ.

ವಿವಾಹಕ್ಕೂ ಮೊದಲು ವರನ ಕಡೆಯವರಿಂದ ವರದಕ್ಷಿಣೆ ಕೊಡುವಂತೆ ಒತ್ತಾಯವು ಕೇಳಿ ಬಂದಿತ್ತು ಎನ್ನಲಾಗಿದೆ. ಚಿನ್ನಾಭರಣ ಮತ್ತು ಬೆಂಗಳೂರಿನಲ್ಲಿ ಸೈಟ್ ಕೊಡುವಂತೆ ವರನ ಪೋಷಕರು ಒತ್ತಾಯಿಸಿದ್ದರು. ಮದುವೆ ದಿನ ಚಿನ್ನ ಕೊಟ್ಟಿಲ್ಲ ಎಂದು ಊಟದ ನೆಪ ಹೇಳಿ ಗಲಾಟೆ ತೆಗೆದು ಮದುವೆ ಬೇಡ ಎಂದು ಬಿಟ್ಟು ಹೋಗಿದ್ದಾರೆ ಎಂದು ವಧುವಿನ ಪೋಷಕರು ಆರೋಪಿಸಿದ್ದಾರೆ.

ವರನ ಕಡೆಯವರು ಶನಿವಾರ ಸಂಜೆಯೇ ತುಮಕೂರಿನಿಂದ ಮಂಟಪಕ್ಕೆ ಆಗಮಿಸಿದ್ದರು. ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ, ಎಂದು ಸಣ್ಣ ಗಲಾಟೆ ತೆಗೆದಿದ್ದಾರೆ. ನಂತರ ಈ ಮದುವೆ ಗಲಾಟೆಯು ಪೊಲೀಸ್‌ ಠಾಣೆಯ ಮೆಟ್ಟಿಲೇರಿದಾಗ, ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದಾನೆ.

ಇದೆಲ್ಲ ಘಟನೆಯಿಂದ ಬೇಸತ್ತ ವಧು ಕೂಡ ಈ ಮದುವೆಯೇ ಬೇಡ, ಈಗಲೇ ಈ ರೀತಿ ವರ್ತಿಸುವ ಗಂಡು ನನಗೂ ಬೇಡಪ್ಪಾ ಎಂದು ಪೊಲೀಸರೆದುರು ಹೇಳಿಕೆ ನೀಡಿದ್ದಾಳೆ. ಹೀಗಾಗಿ ಗುರು ಹಿರಿಯರೆಲ್ಲರೂ ಸೇರಿ ನಿಶ್ಚಯಿಸಿದ ವಿವಾಹ ಕಾರ್ಯವು ಸಿಹಿ ತಿಂಡಿ ವಿಚಾರವಾಗಿ ಮುರಿದು ಬಿದ್ದಿದೆ.

ಇದನ್ನೂ ಓದಿ: 12 ತಾಸು, 6 ಮಷೀನ್‌ಗಳಿಂದ 30 ಕೋಟಿ ರೂ. ಎಣಿಕೆ; ಕಾಂಗ್ರೆಸ್‌ ಮುಖಂಡನ ಪಿಎ ಮನೆಯಲ್ಲಿ ಹಣದ ರಾಶಿ!

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಬಾಗಿಲ ಬಳಿ ಬಿಗಿದಪ್ಪಿ ನಿಂತಿದ್ದ ಯುವಕ- ಯುವತಿಯ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ದೆಹಲಿ ಮೆಟ್ರೋದಂತೆ ಬೆಂಗಳೂರಲ್ಲಿ ನಮ್ಮ ಮೆಟ್ರೋ ಪರಿವರ್ತನೆ ಆಗುತ್ತಿದೆ ಎಂದು ಅಸಮಾಧಾನ (Namma Metro) ತೋರಿದ್ದಾರೆ.

ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್‌ (Sam459om) ಎಂಬುವವರ ಖಾತೆಯಿಂದ ಪೋಸ್ಟ್‌ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್‌ ಮಾಡಿದ್ದಾರೆ.

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ.‌ ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ.

ಕೆಲವರು ಪ್ರೀತಿ-ಪ್ರೇಮ, ಪ್ರಣಯವೆಲ್ಲ ಮನೆಯಲ್ಲಿದ್ದರೆ ಚೆನ್ನ ಎಂದಿದ್ದಾರೆ. ಹಾಗೇ, ಸಾರ್ವಜನಿಕ ಪ್ರದೇಶದಲ್ಲಿ ಹೀಗೆ ಮಾಡುವುದರಿಂದ ಉಳಿದವರಿಗೆ ಮುಜುಗರ ಆಗುತ್ತದೆ ಎಂದೂ ಹೇಳಿದ್ದಾರೆ. ಆದರೆ ಇನ್ನೂ ಕೆಲವರು. ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಡಗು

Kodagu News: ಸೋಮವಾರಪೇಟೆಯಲ್ಲಿ ಮರ ಬಿದ್ದು ಕಾರ್ಮಿಕ ಸಾವು

Kodagu News: ಟಿಂಬರ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮರ ಬಿದ್ದು, ಕಾರ್ಮಿಕನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ.ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ ಕಂಬ್ತಳ್ಳಿ ನಿವಾಸಿ ಮಿತ್ರೇಶ್ (42) ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

VISTARANEWS.COM


on

Laborer died by falling tree in Somawarpet
Koo

ಸೋಮವಾರಪೇಟೆ: ಟಿಂಬರ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮರ ಬಿದ್ದು, ಕಾರ್ಮಿಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ (Kodagu News) ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಇದನ್ನೂ ಓದಿ: Viral News: ಅವಳಿ-ತ್ರಿವಳಿ ಅಲ್ಲ.. ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ

ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ ಕಂಬ್ತಳ್ಳಿ ನಿವಾಸಿ ಮಿತ್ರೇಶ್ (42) ಮೃತಪಟ್ಟ ವ್ಯಕ್ತಿ. ಹಾನಗಲ್ಲು ಗ್ರಾಮದಲ್ಲಿರುವ ಚಂಗಪ್ಪ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿದ್ದ ಸಿಲ್ವರ್ ಮರಗಳನ್ನು ಜಮಾಲ್ ಮತ್ತು ಕವನ್ ಅವರಿಗೆ ಮಾರಾಟ ಮಾಡಿದ್ದು, ಟಿಂಬರ್ ಕೆಲಸಕ್ಕೆ ಮಿತ್ರೇಶ್ ತೆರಳಿದ್ದರು. ಮರ ಕಡಿಯುತ್ತಿರುವ ಸಂದರ್ಭದಲ್ಲಿ ಬುಡ ಕಟಾವು ಮಾಡಿದ ಮರ ಆಕಸ್ಮಿಕವಾಗಿ ಪಕ್ಕದ ಮರದ ಮೇಲೆ ಬಿದ್ದಿದೆ. ಪರಿಣಾಮ ಬುಡ ಸಹಿತ ಮತ್ತೊಂದು ಮರ ಕೆಳಭಾಗದಲ್ಲಿದ್ದ ಮಿತ್ರೇಶ್ ಅವರ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡ ಮಿತ್ರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Road Accident: ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

ಚಿತ್ರದುರ್ಗ/ಚಿಕ್ಕಮಗಳೂರು/ಮೈಸೂರು: ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತಗಳಲ್ಲಿ (Road Accident) ಸಾವು-ನೋವು ಸಂಭವಿಸಿದೆ. ಅತಿ ವೇಗ ಚಾಲನೆಗೆ ನಾಲ್ವರು ಪ್ರಾಣವನ್ನೇ ತೆತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಹರಿಹರದ ಸಾರಥಿ ಗ್ರಾಮದ ಕೊಟ್ರೇಶಪ್ಪ (65), ಹುಬ್ಬಳ್ಳಿಯ ಪುಷ್ಟ (55) ಮೃತ ದುರ್ದೈವಿಗಳು.

ಇದನ್ನೂ ಓದಿ: ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

ಚಿತ್ರದುರ್ಗದಲ್ಲಿ ಮದುವೆ ಮುಗಿಸಿಕೊಂಡು ವಾಪಸ್‌ ಬರುವಾಗ ಈ ದುರ್ಘಟನೆ ನಡೆದಿದೆ. ಅತಿ ವೇಗದ ಚಾಲನೆಯಿಂದ‌ಲೇ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಗಾಯಗೊಂಡವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ಸವಾರರು ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದಾರೆ. ಪರಿಣಾಮ ಬೈಕ್‌ನಿಂದ ಹಾರಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟಾಗಿತ್ತು. ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು. ತಿರುವಿನಲ್ಲಿ ನಿಯಂತ್ರಣಕ್ಕೆ ಬೈಕ್ ನೇರ ವಿದ್ಯುತ್‌ ಕಂಬಕ್ಕೆ ಗುದ್ದಿದೆ.

ಸ್ಥಳಕ್ಕೆ ಎನ್‌.ಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಟೇರಿಂಗ್‌ ಕಟ್‌ ಆಗಿ ಗದ್ದೆಗೆ ನುಗ್ಗಿದ ಕೆಎಸ್ಆರ್‌ಟಿಸಿ ಬಸ್

30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್‌ ಕಟ್ಟಿಂಗ್‌ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ.

ಇದನ್ನೂ ಓದಿ: Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಮತ್ತು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೆಆರ್‌ನಗರ ಡಿಪೋಗೆ ಸೇರಿದ ಬಸ್ ಕೇರಳಾಪುರದಿಂದ ಸಾಲಿಗ್ರಾಮ, ಚುಂಚನಕಟ್ಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದರು. ಕೆಆರ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Continue Reading

ಬಾಗಲಕೋಟೆ

Lok Sabha Election 2024: ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಸಾವು

Lok Sabha Election 2024: ಚುನಾವಣಾ ಕರ್ತವ್ಯದ ಮೇಲೆ ಜಮಖಂಡಿಯಿಂದ ಮುಧೋಳಕ್ಕೆ ಹೋಗುವಾಗ ಹೃದಯಾಘಾತವಾಗಿದ್ದರಿಂದ ಮುಖ್ಯ ಶಿಕ್ಷಕ ಮೃತಪಟ್ಟಿದ್ದಾರೆ.

VISTARANEWS.COM


on

Lok Sabha Election 2024
Koo

ಬಾಗಲಕೋಟೆ: ರಾಜ್ಯದಲ್ಲಿ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ (Lok Sabha Election 2024) ನಡೆಯುವ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದಾರೆ.

ಜಮಖಂಡಿ ತಾಲೂಕಿನ ಬಿದಿರಿಯ ಜನತಾ ಫ್ಲಾಟ್‌ನ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಿ.ಡಿ‌.ಸಿದ್ದಾಪುರ ಮೃತರು. ಇವರು ಬಸ್‌ನಲ್ಲಿ ಜಮಖಂಡಿಯಿಂದ ಮುಧೋಳಕ್ಕೆ ಹೋಗುವಾಗ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆದಿದ್ದಾರೆ. ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಶಿಕ್ಷಕ ನಿಯೋಜನೆಗೊಂಡಿದ್ದರು.

ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಚಿತ್ರದುರ್ಗ: 4 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ಸಿಕ್ಕಿಬಿದ್ದವರು.

ಗುತ್ತಿಗೆದಾರರಿಗೆ ಬಿಲ್ ಮಾಡಿಕೊಡಲು ಕಾರ್ಯದರ್ಶಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಚಿತ್ರದುರ್ಗದ ಮೆದೆಹಳ್ಳಿ ರಸ್ತೆಯಲ್ಲಿರುವ ಬಯಲುಸೀಮೆ‌ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್ಪಿ ಮೃತ್ಯುಂಜಯ ಬಣಕಾರ ನೇತೃತ್ವದಲ್ಲಿ ನಡೆದ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ | Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

ಕಾಫಿ ತೋಟದ ಮಧ್ಯೆ ನೇತಾಡುತ್ತಿತ್ತು ವ್ಯಕ್ತಿ ಶವ; ಕೆರೆಯಲ್ಲಿ ತೇಲಿ ಬಂದ ಅಪರಿಚಿತ

ಕೊಡಗು: ಕಾಫಿ ತೋಟದ ಮಧ್ಯೆ ನೇಣು ಬಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಣೆ. ಮಾದಪುರ ಸಮೀಪದ ಗರಗಂದೂರು ಗ್ರಾಮದ ಮಧು ಮೃತ ದುರ್ದೈವಿ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ವಸಮೀಪದ 7ನೇ ಹೊಸಕೋಟೆಯಲ್ಲಿ ಘಟನೆ (Dead Body Found) ನಡೆದಿದೆ.

ಕಾವೇರಿ ಎಸ್ಟೇಟ್ ಸಮೀಪದ ರಸ್ತೆ ಬದಿಯಲ್ಲಿ ಮಧು ತನ್ನ ಬೈಕ್ ನಿಲ್ಲಿಸಿ ನಂತರ ತೋಟಕ್ಕೆ ತೆರಳಿ, ಅಲ್ಲಿದ್ದ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಮಿಕರು ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕೆರೆಯಲ್ಲಿ ತೇಲುತ್ತಿದ್ದ ಅಪರಿಚಿತ ಶವ

ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ದೊಡ್ಡಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೀನು ಹಿಡಿಯಲು ಹೋಗಿ ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. 40 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ವ್ಯಕ್ತಿಯ ಮೃತದೇಹವಾಗಿದ್ದು, ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

ಕೆರೆಯಲ್ಲಿ ಶವ ತೇಲುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೊಲೀಸರು, ಕೆರೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ಸದ್ಯ ಇದು ಆಕಸ್ಮಿಕ ಸಾವೋ ಅಥವಾ ಕೊಲೆಯೋ ಎಂಬುದನ್ನು ತಿಳಿಯಲು ಮೃತದೇಹವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜತೆಗೆ ಮೃತನ ಗುರುತು ಪತ್ತೆಗೆ ಮುಂದಾಗಿದ್ದಾರೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
couple came to Gangavathi from Dubai to vote
ಕರ್ನಾಟಕ3 mins ago

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

Lok Sabha Election-2024
ದೇಶ7 mins ago

Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

marriage cancel in kodagu
ಕೊಡಗು24 mins ago

Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

Jasprit Bumrah
ಪ್ರಮುಖ ಸುದ್ದಿ25 mins ago

Jasprit Bumrah : ಪತ್ನಿ ಸಂಜನಾಗೆ ರೊಮ್ಯಾಂಟಿಕ್​​ ಬರ್ತ್​ಡೇ ವಿಶಸ್​ ಹೇಳಿದ ಜಸ್​ಪ್ರಿತ್​ ಬುಮ್ರಾ

Chinese Scientists
ವಿಜ್ಞಾನ31 mins ago

Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

Ranchi Cash
ದೇಶ34 mins ago

12 ತಾಸು, 6 ಮಷೀನ್‌ಗಳಿಂದ 30 ಕೋಟಿ ರೂ. ಎಣಿಕೆ; ಕಾಂಗ್ರೆಸ್‌ ಮುಖಂಡನ ಪಿಎ ಮನೆಯಲ್ಲಿ ಹಣದ ರಾಶಿ!

Weight Loss Tips kannada
ಲೈಫ್‌ಸ್ಟೈಲ್38 mins ago

Weight Loss Tips Kannada: ಈ ಐದರಲ್ಲಿ ಒಂದು ಜ್ಯೂಸ್‌ ಕುಡಿಯುತ್ತಿದ್ದರೂ ಸಾಕು, ನಿಮ್ಮ ದೇಹ ತೂಕ ಇಳಿಯುತ್ತದೆ!

Laborer died by falling tree in Somawarpet
ಕೊಡಗು40 mins ago

Kodagu News: ಸೋಮವಾರಪೇಟೆಯಲ್ಲಿ ಮರ ಬಿದ್ದು ಕಾರ್ಮಿಕ ಸಾವು

Akshaya Tritiya-2024
ಲೈಫ್‌ಸ್ಟೈಲ್44 mins ago

Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

Rahul Gandi
ದೇಶ49 mins ago

Rahul Gandhi : ಸುಳ್ಳು ಹರಡಬೇಡಿ, ಸುಮ್ಮನಿರಿ; ರಾಹುಲ್​ ಗಾಂಧಿಗೆ ಬಹಿರಂಗ ಪತ್ರ ಬರೆದು ಕುಟುಕಿದ ಯೂನಿವರ್ಸಿಟಿಗಳ ಕುಲಪತಿಗಳು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ22 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ24 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ5 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌