Site icon Vistara News

Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

Inauguration of new building of Kannada Film Producers Association on June 30

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭ ಇದೇ ಜೂನ್ 30ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ (Bengaluru News) ತಿಳಿಸಿದರು.

ನಗರದ ನಿರ್ಮಾಪಕರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹಳ ಜನರ ಶ್ರಮದಿಂದ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ, ಉದ್ಘಾಟನೆ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೂತನ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ, ಈ ಸಂದರ್ಭದಲ್ಲಿ ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಫಿಲಂ ಫೆಡರೇಷನ್‌ ಆಫ್‌ ಇಂಡಿಯಾ ಪದಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

ಹೊಂಬಾಳೆ ಫಿಲಂಸ್‍, ಆರ್‌.ಎಸ್‌. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್‌ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆ ಎಂದೇ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಸಾರಾ ಗೋವಿಂದು ತಿಳಿಸಿದರು.

ಇದನ್ನೂ ಓದಿ: Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ನೂತನ ಚಿತ್ರ ‘ಈ ಪಾದ ಪುಣ್ಯ ಪಾದ’ ಶೀರ್ಷಿಕೆ ಅನಾವರಣ

ಈ ಸಂದರ್ಭದಲ್ಲಿ ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ಎಂ.ಜಿ. ರಾಮಮೂರ್ತಿ, ರಮೇಶ್‍ ಯಾದವ್‍, ಆರ್.ಎಸ್. ಗೌಡ ಹಾಗೂ ಇತರರು ಪಾಲ್ಗೊಂಡಿದ್ದರು.

Exit mobile version