Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ - Vistara News

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

Bengaluru News: ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ 20ನೇ ವರ್ಷದ ಸಂಭ್ರಮೋತ್ಸವದ ಅಂಗವಾಗಿ ಜುಲೈ 6 ಮತ್ತು 7 ರಂದು ‘ನಾದ ನೃತ್ಯಾನುಭವʼ ವಿಶೇಷ ಗಾಯನ, ವಾದನ ಮತ್ತು ನೃತ್ಯ ಕಾರ್ಯಕ್ರಮ ಆಯೋಜಿಸಿದೆ.

VISTARANEWS.COM


on

natana Tarangini 20th anniversary celebration on July 6 and 7 in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಕುಮಾರಸ್ವಾಮಿ ಬಡಾವಣೆಯ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ 20ನೇ ವರ್ಷದ ಸಂಭ್ರಮೋತ್ಸವದ ಅಂಗವಾಗಿ ಜುಲೈ 6 ಮತ್ತು 7 ರಂದು ‘ನಾದ ನೃತ್ಯಾನುಭವʼ ವಿಶೇಷ ಗಾಯನ, ವಾದನ ಮತ್ತು ನೃತ್ಯ ಕಾರ್ಯಕ್ರಮ (Bengaluru News) ಆಯೋಜಿಸಿದೆ.

ಬೆಂಗಳೂರಿನ ಜಯನಗರ 8ನೇ ಬಡಾವಣೆಯ ಶ್ರೀ ಜಯರಾಮ ಸೇವಾ ಮಂಡಳಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ನಟನ ತರಂಗಿಣಿ ಅಕಾಡೆಮಿಯ 5ನೇ ವಾರ್ಷಿಕೋತ್ಸವವೂ ಸಂಗಮಗೊಂಡಿದೆ. ಜು. 6ರ ಶನಿವಾರ ಮಧ್ಯಾಹ್ನ 2.30ಕ್ಕೆ ನಟನ ತರಂಗಣಿ ವಿದ್ಯಾರ್ಥಿಗಳಿಂದ ಗಾಯನ ಮತ್ತು ವಾದ್ಯ ಸಂಗೀತ ಕಾರ್ಯಕ್ರಮದ ಮೂಲಕ ವಾರ್ಷಿಕೋತ್ಸವ ಆರಂಭವಾಗಲಿದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಸಂಜೆ 5ಕ್ಕೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿಯ ರಂಜನಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಪ್ರೊ. ಅರವಿಂದ ಹೆಬ್ಬಾರ್, ಶಿವಮೊಗ್ಗದ ಸಂಗೀತ ಕಾರ್ಯಕ್ರಮಗಳ ಸಂಘಟಕ ಸುಬ್ರಹ್ಮಣ್ಯ ಶಾಸ್ತ್ರಿ, ಚೆನ್ನೈನ ದಾಸಪ್ರಕಾಶ್ ಕುಟುಂಬದ ಕೆ. ಗಂಗಾ ಪ್ರಸಾದ್, ಪುತ್ತೂರಿನ ಕರ್ನಾಟಕ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಶ್ರೀಹರಿ ಭಾಗವಹಿಸಲಿದ್ದಾರೆ.

ಶ್ರೀನಿವಾಸ್‌ಗೆ ನಾದಶ್ರೀ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಮೃದಂಗ ಮತ್ತು ತಬಲಾ ತಯಾರಕ ವಿದ್ವಾನ್ ಶ್ರೀನಿವಾಸ ಅನಂತ ರಾಮಯ್ಯ ಅವರಿಗೆ ‘ನಾದ ಶ್ರೀʼ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು. ಸಂಜೆ 5:30ಕ್ಕೆ ನಟನ ತರಂಗಣಿ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯ ಪ್ರದರ್ಶನವಿದೆ. ಮೃದಂಗ ಪಕ್ಕವಾದ್ಯದಲ್ಲಿ ವಿದ್ವಾನ್ ಕೆ.ಕೆ. ಭಾನುಪ್ರಕಾಶ್ ಸಹಕಾರ ನೀಡಲಿದ್ದಾರೆ. ಸಂಜೆ 7.30 ಕ್ಕೆ ವಿಶೇಷ ನೃತ್ಯ ಪ್ರಸ್ತುತಿಯಲ್ಲಿ ಚೆನ್ನೈನ ಖ್ಯಾತ ಕಲಾವಿದೆ ವಿದುಷಿ ದಿವ್ಯಾ ವೇಣುಗೋಪಾಲ್ ಭರತನಾಟ್ಯ ಜರುಗಲಿದೆ.

ವಿದ್ಯಾರ್ಥಿಗಳಿಂದ ವಾದ್ಯ ವೈಭವ

ಜುಲೈ 7 ರ ಮಧ್ಯಾಹ್ನ 2 ಗಂಟೆಗೆ ನಟನ ತರಂಗಿಣಿ ಸಂಸ್ಥೆ ವಿದ್ಯಾರ್ಥಿಗಳಿಂದ ಗಾಯನ ಮತ್ತು ವಾದ್ಯ ನೆರವೇರಲಿದೆ. ಸಂಜೆ 6ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಜ್ಯೋತಿಷ್ಯ ಶಾಸ್ತ್ರಜ್ಞ, ಬೇಕಲ್ ಗೋಕುಲಂ ಗೋಶಾಲೆ ಸಂಸ್ಥಾಪಕ ವಿಷ್ಣು ಪ್ರಸಾದ ಹೆಬ್ಬಾರ್ ಮತ್ತು ನಾಗರತ್ನಾ ಹೆಬ್ಬಾರ್, ಬೆಂಗಳೂರಿನ ರಾಮಸೇವಾ ಮಂಡಳಿ ಕಾರ್ಯನಿರ್ವಾಹಕ ಅಭಿಜಿತ್ ವಾದಿರಾಜ್, ಉಡುಪಿಯ ಹಿರಿಯ ಸಂಗೀತ ತಜ್ಞ, ಸಂಯೋಜಕ, ರಂಜನಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಅರವಿಂದ ಹೆಬ್ಬಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಟನ ತರಂಗಿಣಿ ಸಂಸ್ಥಾಪಕ ಅಧ್ಯಕ್ಷೆ ಡಾ. ವೈ.ಜಿ. ಪರಿಮಳಾ, ಕಾರ್ಯದರ್ಶಿಗಳಾದ ವಿದ್ವಾನ್ ನಿಕ್ಷಿತ್ ಪುತ್ತೂರು ಮತ್ತು ವಿದುಷಿ ವೈ. ಜಿ. ಶ್ರೀ ಲತಾ ಉಪಸ್ಥಿತರಿರಲಿದ್ದಾರೆ.

ಸುಬ್ರಹ್ಮಣ್ಯ ಶಾಸ್ತ್ರಿಗೆ ಕಲಾಶ್ರಯ ಪ್ರಶಸ್ತಿ

ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ, ಕಲಾ ಪ್ರೇಮಿ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಇದೇ ವೇದಿಕೆಯಲ್ಲಿ ‘ಕಲಾಶ್ರಯʼ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ನಂತರ ನಡೆಯಲಿರುವ ದ್ವಂದ್ವ ಗಾಯನದಲ್ಲಿ ಲತಾಂಗಿ ಸಹೋದರಿಯರು ಎಂದೇ ಖ್ಯಾತರಾದ ಅರ್ಚನಾ ಮತ್ತು ಸಮನ್ವಿ ಕರ್ನಾಟಕ ಶಾಸ್ತ್ರೀಯ ಸಂಗೀತ ಸುಧೆ ಹರಿಸಲಿದ್ದಾರೆ. ಪಕ್ಕವಾದ್ಯದಲ್ಲಿ ವಿದುಷಿ ಸಿ.ವಿ. ಶ್ರುತಿ (ಪಿಟೀಲು), ವಿದ್ವಾನ್ ಆನೂರು ಅನಂತ ಕೃಷ್ಣ ಶರ್ಮ(ಮೃದಂಗ), ವಿದುಷಿ ಸುಕನ್ಯಾ ರಾಮಗೋಪಾಲ್ (ಘಟಂ) ಮತ್ತು ವಿದ್ವಾನ್ ಪಯ್ಯನೂರ್ ಗೋವಿಂದ ಪ್ರಸಾದ್ (ಮೋರ್ಸಿಂಗ್) ಸಾಥ್ ನೀಡಲಿರುವುದು ವಿಶೇಷ. ಕಲಾರಸಿಕರು ಭಾಗವಹಿಸುವಂತೆ ಸಂಗೀತ ಮತ್ತು ನೃತ್ಯ ‘ಉಭಯ ಕಲಾ ವಿದುಷಿʼ ವೈ.ಜಿ. ಶ್ರೀಲತಾ ಕೋರಿದ್ದಾದ್ದಾರೆ.

ಇದನ್ನೂ ಓದಿ: Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

ಸಂಗೀತ ಶಿಕ್ಷಣ ವ್ಯಕ್ತಿತ್ವಕ್ಕೆ ಸಂಸ್ಕಾರ ರೂಢಿಸಿ ಬದುಕನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಮನಸ್ಸಿನ ಕಲಾತ್ಮಕ ಭಾಗವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುತ್ತದೆ. ವ್ಯಕ್ತಿಯ ಭಾವನಾತ್ಮಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮದ ನಡುವೆ ಸಮತೋಲನವನ್ನು ತರುತ್ತದೆ. ಸಂಗೀತ ಕಲಿಕೆ ಒಂದು ಸೌಹಾರ್ದ ಮತ್ತು ಸುಂದರ ಸಮಾಜದ ಬೆಳವಣಿಗೆಗೆ ಅತ್ಯಗತ್ಯ. ನಾನು ನಟನ ತರಂಗಿಣಿ-ಕಲಾ ಶಾಲೆಯನ್ನು ಪ್ರಾರಂಭಿಸಲು ಇದೇ ಸ್ಫೂರ್ತಿ. 20 ವರ್ಷದಿಂದ ಭಗವಂತನ ಸೇವೆ ಎಂದೇ ಭಾವಿಸಿ ಸಾವಿರಾರು ಮಕ್ಕಳಿಗೆ ಬೋಧನೆ ಮಾಡಿದ್ದೇನೆ. ಈ ಕೈಂಕರ್ಯ ನನಗೆ ಧನ್ಯತೆ ನೀಡಿದೆ.

-ವಿದುಷಿ ವೈ.ಜಿ. ಪರಿಮಳ, ನಟನ ತರಂಗಿಣಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rain Affected areas: ಮಳೆ ಸಂತ್ರಸ್ತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

Rain Affected areas: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ 2,225 ಗ್ರಾಮಗಳು ಮತ್ತು 20,38,334 ಜನರು ಪ್ರವಾಹ, ಭೂ ಕುಸಿತಕ್ಕೆ ಪ್ರತೀ ವರ್ಷ ತುತ್ತಾಗುತ್ತಾರೆ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಮಳೆ ಸಂತ್ರಸ್ತ ಗ್ರಾಮಗಳನ್ನು (Rain Affected areas) ಗುರುತಿಸಿ, ಅವರಿಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಈ ವರ್ಷ ಮಳೆಯಿಂದ ಮನೆ, ಬೆಳೆ ಹಾನಿ ಆಗಿರುವವರಿಗೆ ಎಸ್‌ಡಿಆರ್‌ಎಫ್‌ ಪ್ರಕಾರ ಪರಿಹಾರವನ್ನು ಕೂಡಲೇ ಇತ್ಯರ್ಥ ಮಾಡಬೇಕು ಎಂದು ಸೂಚನೆ ನೀಡಿದರು.

ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಸಿಎಂ, ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕು ಎಂದರು. ಇದೇ ವೇಳೆ ಕಾಲ ಮಿತಿ ಮೀರಿದ ಅರ್ಜಿಗಳು ಏಕೆ ಇದೆ ಎಂದು ಆಯಾ ಜಿಲ್ಲಾಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿ ಇತ್ಯರ್ಥ ಮಾಡಲು ಸೂಚಿಸಿದರು.

ಪಿಂಚಣಿಗಳ ವಿಲೇ ಅವಧಿ ಸದ್ಯ 45 ದಿನ ಇದೆ. ಇದನ್ನು 30 ದಿನಕ್ಕೆ ಇಳಿಸಲಾಗುವುದು. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎನ್ನುವ ಸೂಚನೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಿಎಂ ನೀಡಿದರು. ಇನ್ನು ಸಣ್ಣ ಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ ವರ್ತಿಸಿ ರೈತ ಕುಟುಂಬಗಳಿಗೆ ಸಹಾಯ ಮಾಡಿ ಎಂದರು.

ಇದನ್ನೂ ಓದಿ | Shiva Rajkumar: ಹಾವೇರಿ ಅಪಘಾತ; ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ಮಾಡಿದ ಶಿವಣ್ಣ ದಂಪತಿ

ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನೋಂದಣಾಧಿಕಾರಿಗಳ ಕಚೇರಿಗಳಿಗೆ ಪ್ರತಿ ತಿಂಗಳು ಕೋಟಿಗಟ್ಟಲೆ ಬಾಡಿಗೆ ನೀಡುತ್ತಿದ್ದೇವೆ. ಇವರಿಗೆ ಸ್ವಂತ ಕಟ್ಟಡ ಕೊಡಿ. ಸ್ವಂತ ಕಟ್ಟಡದ ಅವಕಾಶ ಇಲ್ಲದಿದ್ದರೆ ಜಾಗ ನೀಡಿ ಕಟ್ಟಡ ಕಟ್ಟಿಸಿ. ಇದರಿಂದ ನಮಗೆ ವರ್ಷಕ್ಕೆ 40-50 ಕೋಟಿ ಬಾಡಿಗೆ ಹಣ ಉಳಿತಾಯವಾಗುತ್ತದೆ ಎಂದು ಸೂಚನೆ ನೀಡಿದರು.

ಮಹಿಳಾ ಆಯೋಗದ ವರದಿ ಬಳಿಕ ಕ್ರಮ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಕಲಬುರಗಿ ಮಹಿಳಾ ಹಾಸ್ಟೆಲ್‌ಗೆ ಭೇಟಿ ನೀಡಿ ಹಾಸ್ಟೆಲ್ ಟ್ಯಾಂಕ್ ಮೂಲಕ ಕಲುಷಿತ ನೀರಿನ ಸರಬರಾಜು ಆಗುತ್ತಿರುವ ಬಗ್ಗೆ ಬರೆದಿರುವ ಪತ್ರವನ್ನು ಸಿಎಂ ಸಭೆಯಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆ ಸಮಸ್ಯೆಯನ್ನು ಬಗೆಹರಿಸಿ ಈಗಾಗಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಉತ್ತರಿಸಿದರು.

ಗ್ಯಾರಂಟಿ ಯೋಜನೆ ಸಮೀಕ್ಷೆ

ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು. ರಾಜ್ಯದಲ್ಲಿ 8452317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ಸಿಎಂ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ

ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆಗೆ ಟಾಸ್ಕ್‌ಫೋರ್ಸ್‌ ರಚಿಸಲಾಗಿದೆ. ಕಲುಷಿತ ನೀರು ಪರೀಕ್ಷೆಗೆ ಸಾಕಷ್ಟು ಪ್ರಮಾಣದಲ್ಲಿ ಕಿಟ್‌ ಲಭ್ಯವಿದೆ. ಪ್ರತಿ ಹೋಬಳಿಗೆ ಭೇಟಿ ನೀಡಿ ಪ್ರಮಾಣ ಪತ್ರ ಒದಗಿಸಲು ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಇದುವರೆಗೆ 42945 ಜನವಸತಿ ಪ್ರದೇಶಗಳಲ್ಲಿ ಜಂಟಿ ತಪಾಸಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಶುದ್ಧ ನೀರು ಘಟಕ ದುರಸ್ತಿ ಮಾಡಿ

ಕೆಟ್ಟು ನಿಂತಿರುವ ಶುದ್ಧ ನೀರಿನ ಘಟಕಗಳ ದುರಸ್ತಿಗೆ ಯೋಜನೆ ರೂಪಿಸಬೇಕು. ಈಗಾಗಲೇ ಅಂತಹ ಶುದ್ಧ ನೀರು ಘಟಕಗಳ ಪರಿಶೀಲನೆ ನಡೆಸಲಾಗಿದ್ದು, ಸಮರ್ಪಕ ಯೋಜನೆ ರೂಪಿಸಿ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

Continue Reading

ಕೊಪ್ಪಳ

Road Accident : ಕೊಪ್ಪಳದಲ್ಲಿ ಟಿಪ್ಪರ್‌ ಹರಿದು ಬೈಕ್‌ ಸವಾರ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ನಡೆದಿದ್ದು, ಕೊಪ್ಪಳದಲ್ಲಿ ಲಾರಿ ಹರಿದು ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಬಸ್‌ ಹಿಂಬದಿಗೆ ಬೊಲೆರೋ ಡಿಕ್ಕಿ ಹೊಡೆದು, ಕಾರವಾರದಲ್ಲಿ ಅಡ್ಡ ಬಂದ ಜಾನುವಾರು ತಪ್ಪಿಸಲು ಹೋಗಿ ಹೈವೇಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

VISTARANEWS.COM


on

By

road Accident
Koo

ಕೊಪ್ಪಳ: ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಕಾಸನಕಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿದ ಸವಾರ ಟಿಪ್ಪರ್ ವಾಹನದ ವ್ಹೀಲ್‌ಗೆ ಸಿಲುಕಿ ಮೃತಪಟ್ಟಿದ್ದಾರೆ.

ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮುನಿರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬಸ್‌ ಹಿಂಬದಿಗೆ ಗುದ್ದಿದ ಬೊಲೆರೋ

ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಮೈಸೂರಿನ ಆಲನಹಳ್ಳಿ ರಿಂಗ್ ರೋಡ್ ಬಳಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್‌ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದ್ದು, ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಅಡ್ಡ ಬಂದ ಜಾನುವಾರು; ಹೈವೇಯಲ್ಲಿ ಸರಣಿ ಅಪಘಾತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಅರಗಾ ಗ್ರಾಮದ ಬಳಿ ಏಕಾಏಕಿ ಜಾನುವಾರು ಅಡ್ಡ ಬಂದಿದೆ. ಜಾನುವಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಎರಡು ಕಾರು, ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಂಕೋಲಾ ಭಾಗದಿಂದ ಕಾರವಾರದತ್ತ ಆಗಮಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ದನ ಎದುರಾಗಿದ್ದರಿಂದ ಚಾಲಕ ಸಡನ್‌ ಬ್ರೇಕ್ ಹಾಕಿದ್ದಾನೆ.

ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಡಿಸೈರ್ ಕಾರು ಚಾಲಕ ಸಹ ಬ್ರೇಕ್ ಹಾಕಿ ನಿಲ್ಲಿಸಿದ್ದ. ಆದರೆ ಹಿಂದಿನಿಂದ ಬಂದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ ಪರಿಣಾಮ ಮುಂದಿದ್ದ ಸ್ಕಾರ್ಪಿಯೋಗೆ ಗುದ್ದಿ ಕಾರು ಜಖಂಗೊಂಡಿದೆ. ಇತ್ತ ಬಸ್ ಡಿಕ್ಕಿಯಾದ ಪರಿಣಾಮ ಕಾರೊಂದು ದನಕ್ಕೆ ಗುದ್ದಿದೆ. ಡಿಸೈರ್ ಕಾರಿನಲ್ಲಿದ್ದ ವೃದ್ಧೆಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದವರನ್ನು ಕೆಳಗಿಳಿಸಿದ ಸ್ಥಳೀಯರು ಗಾಯಾಳುಗಳು ಕಾರವಾರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

MUDA site scandal: ಈ ಮೊದಲು ನ್ಯಾಯಾಲಯ ಆದೇಶದಂತೆ ರಾಕೇಶ್‌ ಪಾಪಣ್ಣಗೆ ಬದಲಿ ನಿವೇಶನ ಹಂಚಿಕೆ ಆಗಿತ್ತು. ಹಂಚಿಕೆ ವೇಳೆ ತಪ್ಪಾಗಿದೆ ಎಂದು ಗೊತ್ತಾಗಿದೆ. ಈಗ ಅದನ್ನೂ ತಡೆ ಹಿಡಿಯಲಾಗಿದೆ ಎಂದು ಮುಡಾ ಅಧ್ಯಕ್ಷ ಮರಿಗೌಡ ತಿಳಿಸಿದ್ದಾರೆ.

VISTARANEWS.COM


on

MUDA site scandal
Koo

ಮೈಸೂರು: ಮುಡಾ ನಿವೇಶನ ಹಗರಣ (MUDA site scandal) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಾನೂನು ಬಾಹಿರವಾಗಿ ಹಂಚಿಕೆಯಾದ ಸೈಟ್‌ಗಳನ್ನು ಅಮಾನತು ಮಾಡಿ, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದೀಗ ಸಿಎಂ ಆಪ್ತ, ಜಿಪಂ ಮಾಜಿ ಸದಸ್ಯ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಸೈಟ್‌ ಅನ್ನೂ ತಡೆ ಹಿಡಿದಿರುವುದು ಕಂಡುಬಂದಿದೆ.

ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ಪ್ರತಿಕ್ರಿಯಿಸಿ, ನಿವೇಶನ ಹಂಚಿಕೆ ತಡೆ ಹಿಡಿಯಲಾಗಿದೆ. ಈ ಮೊದಲು ನ್ಯಾಯಾಲಯ ಆದೇಶದಂತೆ ಬದಲಿ ನಿವೇಶನ ಹಂಚಿಕೆ ಆಗಿತ್ತು. ಹಂಚಿಕೆ ವೇಳೆ ತಪ್ಪಾಗಿದೆ ಎಂದು ಗೊತ್ತಾಗಿದೆ. ಈಗ ಅದನ್ನೂ ತಡೆ ಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

ಹಿನ್‌ಕಲ್ ಸರ್ವೆ ನಂ.211ರಲ್ಲಿ 3.05 ಗುಂಟೆ ಜಮೀನು ಸಂಬಂಧಿಸಿದ ಪ್ರಕರಣದಲ್ಲಿ 1981ರಲ್ಲಿ ಸ್ವಾದೀನ ಪಡೆದು, 1984ರಲ್ಲಿ ಕೈ ಬಿಡಲಾಗಿತ್ತು. ಅದಕ್ಕೆ 2024ರ ಜೂನ್‌ 12 ರಂದು ಪರಿಹಾರ ಕೊಡಲಾಗಿತ್ತು. 36,753 ಚದರ ಅಡಿ ಪರಿಹಾರ ಕೊಡಲಾಗಿತ್ತು. ಇದಕ್ಕಾಗಿ ವಿಜಯನಗರದ ವಿವಿಧ ಬಡಾವಣೆಗಳಲ್ಲಿ‌ 20 ನಿವೇಶನ ಕೊಟ್ಟು ಆದೇಶ ಮಾಡಲಾಗಿತ್ತು. ಈಗ ಆ ದೇಶಕ್ಕೂ ತಡೆ ಬಿದ್ದಿದೆ ಎಂದು ಹೇಳಿದ್ದಾರೆ.

ಎಂಎಲ್‌ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ದೇವನೂರು 3ನೇ ಹಂತದ ಬದಲು ಮುಖ್ಯರಸ್ತೆಯಲ್ಲಿ ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ರಾಜಕೀಯವಾಗಿ ದಿವಾಳಿಯಾಗಿರುವ ಅವರು ಈಗ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಎಚ್‌.ವಿಶ್ವನಾಥ್‌ಗೂ ಬದಲಿ ನಿವೇಶನ

50-50 ಅನುಪಾತದಲ್ಲಿ ಸಿಎಂ ಕುಟುಂಬ ನಿಯಮಬಾಹಿರ ಸೈಟ್ ಪಡೆದ ಆರೋಪದ ಬಗ್ಗೆ ಶಾಸಕ ಹರೀಶ್‌ಗೌಡ ಪ್ರತಿಕ್ರಿಯಿಸಿ, ಇಡೀ ಪ್ರಕರಣದಲ್ಲಿ ಸಿಎಂ ಹಾಗೂ ಅವರ ಕುಟುಂಬ ಕಾನೂನಾತ್ಮಕವಾಗಿ ಇದೆ. ಇಲ್ಲಿ ಮುಡಾ, ಸಿಎಂ ಕುಟುಂಬಕ್ಕೆ 75 ಸಾವಿರ ಚದರ ಅಡಿ ಜಾಗ ಕೊಡಬೇಕಿತ್ತು. ಆದರೂ ಕೊಟ್ಟಿರುವ 38 ಸಾವಿರ ಚದ ಅಡಿಗೆ ನಮ್ಮ ನಾಯಕರ ತೃಪ್ತಿ ಪಟ್ಟುಕೊಂಡಿದ್ದಾರೆ. ಅಂತಹವರ ಮೇಲೆ ಸುಳ್ಳು ಆರೋಪ ಮಾಡೋದು ಸರಿಯಲ್ಲ. ಇಂತಹ ಆರೋಪ ಮಾಡುತ್ತಿರುವ ಎಚ್‌.ವಿಶ್ವನಾಥ್ ಕೂಡ ದೇವನೂರು ಬಡಾವಣೆಯಲ್ಲಿ ಬದಲಿ ನಿವೇಶನ ಪಡೆದಿದ್ದಾರೆ.
ಅವರ ಪತ್ನಿ ಶಾಂತಮ್ಮ ಹೆಸರಲ್ಲಿ ನಿವೇಶನ ಪಡೆದಿದ್ದರು. ನಿವೇಶನ ಸಂಖ್ಯೆ 2,525ರ ಬದಲಾಗಿ ಹೈವೆ ಬಳಿ ಬರುವ ನಿವೇಶನ ಸಂಖ್ಯೆ 307 ಅನ್ನು ಪಡೆದಿದ್ದಾರೆ. ಅಂತಹವರು ಸಿಎಂ ಬಗ್ಗೆ ಮಾತನಾಡುವಾಗ ಸರಿಯಾಗಿ ಮಾತನಾಡಬೇಕು ಎಂದರು.

ವಿಶ್ವನಾಥ್‌ರಂತಹ ದಿವಾಳಿ ರಾಜಕಾರಣಿ ಇನ್ನೊಬ್ಬ ಇಲ್ಲ. ಇಡೀ ಪ್ರಕರಣದಲ್ಲಿ ಅಕ್ರಮ ಎಸಗಿರುವ ಎಲ್ಲರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಸದ್ಯದಲ್ಲೇ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಹೇಳಿದರು.

50:50 ಅನುಪಾತದಲ್ಲಿ ನಿವೇಶನ ಕೊಡಲಿಕ್ಕೆ 2015ರಲ್ಲೇ ಗೆಜೆಟ್ ನೋಟಿಫಿಕೇಶನ್ ಆಗಿದೆ. ಆಗ 60:40 ಅನುಪಾತದಲ್ಲಿ ನೀಡಬೇಕೆಂದು ಆದೇಶ ಇದೆ. ಅದಾದ ಬಳಿಕ 2020ರಲ್ಲಿ 50:50 ಅನುಪಾತದಲ್ಲಿ ನಿವೇಶನ ನೀಡಲಿಕ್ಕೆ ಪ್ರಾಧಿಕಾರ ನಿರ್ಣಯ ಮಾಡಿತು ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Steel Flyover: ಉದ್ಘಾಟನೆಯಾದ ಎರಡನೇ ವರ್ಷದ ಒಳಗೆ ಮೇಲ್ಸೇತುವೆ ಜಾಯಿಂಟ್ ಬಿರುಕು ಬಿಟ್ಟಿದೆ. ಬಿಹಾರದಲ್ಲಿ ಕಂಡುಬರುತ್ತಿರುವ ಸಾಲು ಸಾಲು ಸೇತುವೆಗಳ ಕುಸಿತದ ನಡುವೆ ಈ ಸೇತುವೆಯ ಬಿರುಕು ಆತಂಕ ಮೂಡಿಸಿದೆ. ಪಾಲಿಕೆ ಅಧಿಕಾರಿಗಳ ಕಳಪೆ ಕಾಮಗಾರಿ ಹಾಗೂ ಕಳಪೆ ನಿರ್ವಹಣೆಗೆ ವಾಹನ ಸವಾರರು ಕೆರಳಿ ಕೆಂಡವಾಗಿದ್ದಾರೆ.

VISTARANEWS.COM


on

steel flyover bridge shivananda circle
Koo

ಬೆಂಗಳೂರು: ಮತ್ತೊಮ್ಮೆ ಬಿಬಿಎಂಪಿ (BBMP) ಕಳಪೆ ಕಾಮಗಾರಿ ಬಟಾ ಬಯಲಾಗಿದ್ದು, ಶಿವಾನಂದ ಸರ್ಕಲ್‌ನಲ್ಲಿ (Shivananda Circle) ನಿರ್ಮಿಸಲಾಗಿರುವ ಬೆಂಗಳೂರಿನ (Bangalore) ಚೊಚ್ಚಲ ಸ್ಟೀಲ್ ಫ್ಲೈ ಓವರ್ ಬ್ರಿಡ್ಜ್‌ನ (Steel Flyover Bridge) ಜಾಯಿಂಟ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ.

ಲೋಕಾರ್ಪಣೆಗೊಂಡ ಎರಡೇ ವರ್ಷದಲ್ಲಿ ಸ್ಟೀಲ್ ಬ್ರಿಡ್ಜ್ ಬಿರುಕು ಬಿಟ್ಟಿದ್ದು, ಮೇಲೆ ನಿಂತರೆ ನೆಲ ಕಾಣುವಷ್ಟರ ಮಟ್ಟಿಗೆ ಕಂದಕ ಮೇಲ್ಸೇತುವೆಯಲ್ಲಿ ಕಾಣಿಸಿಕೊಂಡಿದೆ. ಶಿವಾನಂದ ಸರ್ಕಲ್‌ನ ಬೆಂಗಳೂರು ಕೆಫೆ ಬಳಿ ಇರುವ ಪಿಲ್ಲರ್ ಮೇಲಿನ ಜಾಯಿಂಟ್ ಕ್ರ್ಯಾಕ್ ಆಗಿದ್ದು, ಇದೀಗ ಈ ಸೇತುವೆಯ ಮೇಲಿನ ಪ್ರಯಾಣ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ಉದ್ಘಾಟನೆಯಾದ ಎರಡನೇ ವರ್ಷದ ಒಳಗೆ ಮೇಲ್ಸೇತುವೆ ಜಾಯಿಂಟ್ ಬಿರುಕು ಬಿಟ್ಟಿದೆ. ಬಿಹಾರದಲ್ಲಿ ಕಂಡುಬರುತ್ತಿರುವ ಸಾಲು ಸಾಲು ಸೇತುವೆಗಳ ಕುಸಿತದ ನಡುವೆ ಈ ಸೇತುವೆಯ ಬಿರುಕು ಆತಂಕ ಮೂಡಿಸಿದೆ. ಪಾಲಿಕೆ ಅಧಿಕಾರಿಗಳ ಕಳಪೆ ಕಾಮಗಾರಿ ಹಾಗೂ ಕಳಪೆ ನಿರ್ವಹಣೆಗೆ ವಾಹನ ಸವಾರರು ಕೆರಳಿ ಕೆಂಡವಾಗಿದ್ದಾರೆ.

500 ಮೀಟರ್ ಉದ್ದದ ಮೇಲ್ಸೇತುವೆ 40 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿದೆ. 2022ರಲ್ಲಿ ಇದು ಲೋಕಾರ್ಪಣೆಗೊಂಡಿತ್ತು. ಅರ್ಧ ಕಿಲೋಮೀಟರ್ ಉದ್ದದ ಮೇಲ್ಸೇತುವೆಯನ್ನು, ಶಿವಾನಂದ ಸರ್ಕಲ್‌ನ ವಾಹನಗಳ ದಟ್ಟಣೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಸಿಎಂ ಅಧಿಕೃತ ನಿವಾಸ, ಸಚಿವರ ಮನೆಗಳು ಸೇರಿದಂತೆ ವಿವಿಐಪಿಗಳ ಸಂಚಾರವೂ ಸಾಕಷ್ಟಿದೆ.

ಸೇತುವೆಯು ಪ್ರಯಾಣದ ಸಮಯವನ್ನು ಕಡಿತಗೊಳಿಸುತ್ತದೆ. ಜನನಿಬಿಡ ರೇಸ್ ಕೋರ್ಸ್ ರಸ್ತೆಯಿಂದ ಶೇಷಾದ್ರಿಪುರಂ ರೈಲ್ವೆ ಕೆಳಸೇತುವೆಯನ್ನು ತಲುಪಲು ಮೊದಲಿನ ಇಪ್ಪತ್ತು ನಿಮಿಷಗಳಿಗೆ ಹೋಲಿಸಿದರೆ ಈಗ ಐದು ನಿಮಿಷಗಳಿಗಿಂತ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ. ಈ ಯೋಜನೆಗೆ 2017ರಲ್ಲಿ ಅಡಿಪಾಯ ಹಾಕಲಾಗಿತ್ತು. ಈ ಉಕ್ಕಿನ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಲು ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಐದು ವರ್ಷಗಳನ್ನು ತೆಗೆದುಕೊಂಡಿತು.

ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

ಬೆಂಗಳೂರು: ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಇಂದಿನಿಂದ (ಜುಲೈ 1) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಈ ಹೈವೇಯಲ್ಲಿ ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ.

ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ. ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Continue Reading
Advertisement
ಕರ್ನಾಟಕ1 min ago

Rain Affected areas: ಮಳೆ ಸಂತ್ರಸ್ತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

Murder Case
Latest24 mins ago

Murder Case: ಕದ್ದುಮುಚ್ಚಿ ಸರಸವಾಡುತ್ತಿದ್ದ ಮಹಿಳೆ ಸಿಕ್ಕಿಬಿದ್ದಾಗ ಗಂಡನನ್ನೇ ಕೊಂದಳು!

road Accident
ಕೊಪ್ಪಳ25 mins ago

Road Accident : ಕೊಪ್ಪಳದಲ್ಲಿ ಟಿಪ್ಪರ್‌ ಹರಿದು ಬೈಕ್‌ ಸವಾರ ಸಾವು

Abhishek Sharma
ಪ್ರಮುಖ ಸುದ್ದಿ26 mins ago

Abhishek Sharma : ಅಭಿಷೇಕ್​ ಶತಕಕ್ಕೆ ಸಹೋದರಿಯ ಚಪ್ಪಾಳೆ, ವಿಡಿಯೊ ಶೇರ್ ಮಾಡಿದ ಕೋಮಲ್​ ಶರ್ಮಾ

MUDA site scandal
ಕರ್ನಾಟಕ43 mins ago

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

steel flyover bridge shivananda circle
ಪ್ರಮುಖ ಸುದ್ದಿ50 mins ago

Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Gurdaspur attack
ವಿದೇಶ52 mins ago

Gurdaspur Attack: ಗುರುದಾಸಪುರ ಉಗ್ರ ದಾಳಿಯ ರೂವಾರಿ, ಐಎಸ್ಐ ಅಧಿಕಾರಿಯನ್ನು ಕರಾಚಿಯಲ್ಲಿ ಫಿನಿಷ್ ಮಾಡಿದ ‘ಅಪರಿಚಿತರು’!

Karnataka Rain
ಮಳೆ52 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Haveri accident Shivanna couple helped the money to families
ಸ್ಯಾಂಡಲ್ ವುಡ್1 hour ago

Shiva Rajkumar: ಹಾವೇರಿ ಅಪಘಾತ; ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ಮಾಡಿದ ಶಿವಣ್ಣ ದಂಪತಿ

Mumbai Cricket Association
ಪ್ರಮುಖ ಸುದ್ದಿ1 hour ago

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ52 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ2 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ18 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ21 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ21 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಟ್ರೆಂಡಿಂಗ್‌