BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್! - Vistara News

ಕರ್ನಾಟಕ

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

BS Yediyurappa: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ.

VISTARANEWS.COM


on

BS Yediyurappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಕೇಸ್‌ (POCSO Case) ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಪೋಕ್ಸೊ ವಿಶೇಷ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ಜುಲೈ 17ರಂದು ಬಿ.ಎಸ್.ಯಡಿಯೂರಪ್ಪ ಸೇರಿ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಖು ಎಂದು ಸಮನ್ಸ್‌ ಜಾರಿ ಮಾಡಿದೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

B S yediyurappa

ಯಡಿಯೂರಪ್ಪ ನಿರ್ದೇಶನದಂತೆ ಆರೋಪಿ ರುದ್ರೇಶ್‌ ಅವರಿಂದ 2 ಲಕ್ಷ ರೂ. ಪಡೆದು ಅದನ್ನು ಸಂತ್ರಸ್ತ ಮಹಿಳೆಗೆ ನೀಡಿ, ಆಕೆಯ ಫೋನ್‌ನಲ್ಲಿನ ಬಿಎಸ್‌ವೈಗೆ ಸಂಬಂಧಿಸಿದ ವಿಡಿಯೊವನ್ನು ಡಿಲೀಟ್‌ ಮಾಡಿಸಿರುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಿಂದ ತೆಗೆಸಿದ ಆರೋಪ ಅರುಣ್ ಮತ್ತು ಮರಿಸ್ವಾಮಿ ಅವರ ಮೇಲಿದೆ. ಇನ್ನು ಯಡಿಯೂರಪ್ಪ ಅವರು ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಗಳು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: Actress Ramya: ದರ್ಶನ್, ಪ್ರಜ್ವಲ್‌, ಸೂರಜ್, ಯಡಿಯೂರಪ್ಪ ಹೆಸರು ಉಲ್ಲೇಖಿಸಿ ಮತ್ತೆ ಕಿಡಿ ಕಾರಿದ ರಮ್ಯಾ; ಪೋಸ್ಟ್‌ನಲ್ಲಿ ಏನಿದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

ATM Robbery: ಎಟಿಎಂನಲ್ಲಿ 15 ಲಕ್ಷ ರೂ. ದೋಚಿದ ಕಳ್ಳರು; ಗ್ಯಾಸ್ ಕಟರ್ ಬಳಸಿ ಕೃತ್ಯ!

ATM Robbery: ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಎಸ್‌ಬಿಐ ಎಟಿಎಂನಲ್ಲಿ 15 ಲಕ್ಷ ರೂ. ಕದಿಯಲಾಗಿದೆ.

VISTARANEWS.COM


on

ATM Robbery
Koo

ದೊಡ್ಡಬಳ್ಳಾಪುರ: ಎಟಿಎಂನಲ್ಲಿ ಕಳ್ಳರು 15 ಲಕ್ಷ ರೂ. ದೋಚಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಎಸ್‌ಬಿಐ ಎಟಿಎಂನಲ್ಲಿ ಕಳವಾಗಿದ್ದು (ATM Robbery), ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರ ಕಟ್ ಮಾಡಿ ಹಣ ಕದಿಯಲಾಗಿದೆ.

ಶನಿವಾರ ತಡರಾತ್ರಿ 2 ಗಂಟೆ ವೇಳೆ ಗ್ಯಾಸ್ ಕಟರ್‌ನಿಂದ ಎಟಿಎಂ ಕಟ್ ಮಾಡಿರುವ ಖದೀಮರು, 15 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಸಿಸಿಟಿವಿ ಕಣ್ಣಿಂದ ತಪ್ಪಿಸಿಕೊಳ್ಳಲು ಅದಕ್ಕೆ ಬ್ಲಾಕ್ ಸ್ಪ್ರೇಯನ್ನು ಕಳ್ಳರು ಹೊಡೆದಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಇದೇ ಎಟಿಎಂನಲ್ಲಿ ಆರೆಯಿಂದ ಮೀಟಿ ಹಣ ದೋಚಲು ಕಳ್ಳರು ಯತ್ನಿಸಿದ್ದರು.

ಇದನ್ನೂ ಓದಿ | Dengue Cases in Hassan: ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

murder case

ಶಿವಮೊಗ್ಗ : ಕಾಣೆಯಾಗಿದ್ದ (Missing Case) ಯುವತಿಯೊಬ್ಬಳು ಶವವಾಗಿ (Dead Body Found) ಪತ್ತೆಯಾಗಿದ್ದಾಳೆ. ಶಿವಮೊಗ್ಗದ (Shivamogga News) ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ.

ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ತಂದೆ ಕುಶಾಲ್ ಮಿಸ್ಸಿಂಗ್‌ ಕಂಪ್ಲೇಟ್‌ ಕೊಟ್ಟಿದ್ದರು.

ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಗಿಳಿದಾಗ ಪೂಜಾಳ ಶವವು ಪತ್ತೆಯಾಗಿತ್ತು. ಬಳಿಕ ಆಕೆಯ ಫೋನ್‌ ಕಾಲ್‌ ಲಿಸ್ಟ್‌ ತೆಗೆದು ಮಿಸ್ಸಿಂಗ್‌ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.

ಈ ವೇಳೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎಂಬಾತನಿಂದಲೇ ಪೂಜಾ ಕೂಲೆಯಾಗಿದ್ದಳು. ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರನೆ ನಡೆಸಿದಾಗ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ‌ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಇದನ್ನೂ ಓದಿ: Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯಿಂದ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

Continue Reading

ಬೆಂಗಳೂರು ಗ್ರಾಮಾಂತರ

Attempt To Murder: ಬಾಯಿಗೆ ಬಂದಂತೆ ಬೈದ್ರು ಅಂತ ಸಿಟ್ಟು; ಮಾಲೀಕನಿಗೆ ಹೊಡೆದು ಕೋಮಾಗೆ ಕಳಿಸಿದ ಸಪ್ಲೇಯರ್‌!

Attempt To Murder: ಹೋಟೆಲ್‌ ಮಾಲೀಕ ಬಾಯಿಗೆ ಬಂದಂತೆ ಬೈಯುತ್ತಾರೆ ಎಂದು ಸಿಟ್ಟಾದ ಸಪ್ಲೇಯರ್‌ ಕೊಲೆಗೆ ಯತ್ನಿಸಿದ್ದಾನೆ. ರಾಡಿನಿಂದ ಹೊಡೆದ ಪರಿಣಾಮ ಮಾಲೀಕ ಕೋಮಾಗೆ ಜಾರಿದ್ದು,ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

VISTARANEWS.COM


on

By

Attempt To Murder
ಕೋಮಾ ಜಾರಿದ ವಿಜಯೇಂದ್ರ ಹಾಗೂ ಹಲ್ಲೆ ನಡೆಸಿ ಆರೋಪಿ ಮಂಜಪ್ಪ
Koo

ಬೆಂಗಳೂರು ಗ್ರಾಮಾಂತರ: ಪೊಲೀಸರ ದಿಕ್ಕು ತಪ್ಪಿಸಲು ಹೋದ ಸಪ್ಲೇಯರ್‌ (Attempt To Murder) ಜೈಲುಪಾಲಾಗಿದ್ದಾನೆ. ಮಂಜಪ್ಪ ತನಗೆ ಅನ್ನ ಹಾಕಿದ ಮಾಲೀಕನ ಕೊಲೆ ಮಾಡಲು ಯತ್ನಿಸಿ ಪೊಲೀಸರಿಗೆ ಲಾಕ್‌ ಆದ ಆರೋಪಿಯಾಗಿದ್ದಾನೆ.

ಕಳೆದ ಜೂ.18ರಂದು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸಿಲಿಕಾನ್ ಟೌನ್‌ನಲ್ಲಿ ಕುಂದಾಪುರ ಮೂಲದ ವಿಜಯೇಂದ್ರ ಶೆಟ್ಟಿ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಮಂಜುನಾಥ್ ಟಿಪನ್ ಸೆಂಟರ್ ಮಾಲೀಕನಾಗಿರುವ ವಿಜಯೇಂದ್ರ, ಆ ದಿನ ರಾತ್ರಿ ಮಲಗಿದ್ದ ವೇಳೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು.

ವಿಜಯೇಂದ್ರರ ಚಿರಾಟ ಕೇಳಿ ಅಕ್ಕ-ಪಕ್ಕದವರು ಸಹಾಯಕ್ಕೆ ಧಾವಿಸಿದ್ದರು. ಬಳಿಕ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆಗೀಳಿದ ಪೊಲೀಸರಿಗೆ ಶಾಕ್‌ ಕಾದಿತ್ತು. ಯಾಕಂದರೆ ಮಾಲೀಕನ ಹೆಣ ಉರುಳಿಸಲು ಜತೆಗೆ ಇದ್ದ ಹೋಟೆಲ್ ಸಿಬ್ಬಂದಿಯೇ ಮುಂದಾಗಿದ್ದ.

ಮಾಲೀಕ ವಿಜಯೇಂದ್ರ ಹೋಟೆಲ್‌ನಲ್ಲಿ ದಿನನಿತ್ಯ ಬಾಯಿಗೆ ಬಂದಂತೆ ಬಯ್ಯುತ್ತಿದ್ದರು. ಇದರಿಂದ ಕುಪಿತಗೊಂಡಿದ್ದ ಸಪ್ಲೇಯರ್ ಮಂಜಪ್ಪನಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ಅದರಂತೆ ವಿಜಯೇಂದ್ರ ಮಲಗಿದ್ದ ವೇಳೆ ಎಂಟ್ರಿ ಕೊಟ್ಟ ಮಂಜಪ್ಪ ಜಿಮ್ ರಾಡ್‌ನಿಂದ ತಲೆಗೆ ಬಲವಾಗಿ ಹಲ್ಲೆ ನಡೆಸಿ ಕಾಲ್ಕಿತ್ತಿದ್ದ.

ರಕ್ತದ ಮಡುವಿನಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ ವಿಜಯೇಂದ್ರ ಅವರನ್ನು ಸ್ಥಳೀಯರು, ಹೋಟೆಲ್‌ ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದರು. ಬೆಳಗ್ಗೆ ವಾಪಸ್‌ ಕೃತ್ಯ ನಡೆದ ಸ್ಥಳಕ್ಕೆ ಬಂದಿದ್ದ ಮಂಜಪ್ಪ, ಏನು ಗೊತ್ತಿಲ್ಲದಂತೆ ನಾಟಕವಾಡಿದ್ದ. ಮಾತ್ರವಲ್ಲ ಯಾವುದೇ ಅಂಜಿಕೆಯಿಲ್ಲದೇ ಮಾಧ್ಯಮಗಳಿಗೆ ಹೇಳಿಕೆಯನ್ನೂ ಕೊಟ್ಟಿದ್ದ.

ಆದರೆ ಪೊಲೀಸರ ತನಿಖೆ ವೇಳೆ ಸಪ್ಲೇಯರ್ ಮಂಜಪ್ಪನ ಕೃತ್ಯ ಬಯಲಾಗಿತ್ತು. ಸದ್ಯ ಆರೋಪಿ ಮಂಜಪ್ಪನನ್ನು ಬಂಧಿಸಿರುವ ಪೊಲೀರು ಜೈಲಿಗೆ ಅಟ್ಟಿದ್ದಾರೆ. ಇತ್ತ ವಿಜಯೇಂದ್ರ ಮಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ವಿಜಯೇಂದ್ರ ಕೋಮಾ ಸ್ಥಿತಿಯಲ್ಲಿದ್ದಾರೆ.

ಇದನ್ನೂ ಓದಿ: Murder case : ಸ್ನೇಹಿತನಿಂದಲೇ ಕೊಲೆಯಾದಳು ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ

ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದ 66 ವಸ್ತುಗಳು ಎಫ್ಎಸ್ಎಲ್‌ಗೆ ರವಾನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ‌ ಕೊಲೆ‌ ಪ್ರಕರಣದ (Renuka Swamy Murder Case) ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ರೇಣುಕಾಸ್ವಾಮಿ ಬಳಸಿದ ವಸ್ತುಗಳು, ಆತನ ಶವ ಪರೀಕ್ಷೆ ವೇಳೆ ಸಂಗ್ರಹಿಸಿದ ಹಾಗೂ ಆರೋಪಿಗಳಿಂದ ವಶಕ್ಕೆ ಪಡೆದ ವಸ್ತುಗಳನ್ನು ಎಫ್ಎಸ್ಎಲ್‌ಗೆ ರವಾನೆ ಮಾಡಲಾಗಿದೆ.

ರೇಣುಕಾಸ್ವಾಮಿಯ ಬಟ್ಟೆಗಳು ಸೇರಿ ಇನ್ನಿತರ ವಸ್ತುಗಳು, ಸಿಸಿಟಿವಿ ಫುಟೇಜ್, ಮೊಬೈಲ್ ಫೋನ್‌ಗಳು ಸೇರಿ 66 ವಸ್ತುಗಳನ್ನು ಎಫ್ಎಸ್ಎಲ್‌ಗೆ ರವಾನೆ ಮಾಡಲಾಗಿದೆ. ಪ್ರಕರಣದಲ್ಲಿ ಆರೋಪಿಗಳ ಪಾತ್ರ ತಿಳಿಯಲು ಅವರಿಗೆ ಸಂಬಂಧಿಸಿದ ಪ್ರತಿಯೊಂದು ವಸ್ತುವನ್ನು ಎಫ್ಎಸ್ಎಲ್‌ಗೆ ಕಳುಹಿಸಿ ತನಿಖಾ ತಂಡ ವರದಿ ಪಡೆಯುತ್ತಿದೆ.

ರೇಣುಕಾಸ್ವಾಮಿ ಸಾವಿನ ಅಸಲಿ ಸಮಯ ಪತ್ತೆಗೆ ಮುಂದಾದ ಪೊಲೀಸರು

ನಟ ದರ್ಶನ್ ಮತ್ತು ಗ್ಯಾಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೇಣುಕಾಸ್ವಾಮಿ ಸಾವಿನ ಅಸಲಿ ಸಮಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆ ವಿಧಿ ವೈದ್ಯಶಾಸ್ತ್ರ ಪ್ರಾಧ್ಯಾಪಕರಿಗೆ ಪೊಲೀಸರಿಂದ ಪತ್ರ ಬರೆಯಲಾಗಿದ್ದು, ರೇಣುಕಾಸ್ವಾಮಿ ಯಾವ ದಿನ, ಯಾವ ಸಮಯಕ್ಕೆ ಸಾವನ್ನಪ್ಪಿದ್ದಾನೆ ಎಂಬುದನ್ನು ಪರಿಶೀಲಿಸಿ ಸ್ಪಷ್ಟವಾದ ವರದಿ ನೀಡುವಂತೆ ಕೋರಲಾಗಿದೆ.

ರೇಣುಕಾಸ್ವಾಮಿ ಸಾಯುವ ಮುನ್ನ ಸಂಜೆ ಸುಮಾರು 4.30 ರಿಂದ 5 ಗಂಟೆಯ ನಡುವೆ ಆಹಾರ ಸೇವನೆ ಮಾಡಿದ್ದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ರೇಣುಕಾಸ್ವಾಮಿ ಮರಣದ ನಂತರ ಆತನ ದೇಹದಲ್ಲಿ ಉಂಟಾಗುವ ಬದಲಾವಣೆ, ಮೃತದೇಹ ಫ್ರೀಜರ್‌ನಲ್ಲಿ ಇಟ್ಟಿರುವ ಸಮಯವನ್ನು ಪರಿಗಣನೆಗೆ ತೆಗೆದುಕೊಂಡು ಪರಿಶೀಲಿಸಬೇಕು ಎಂದು ಕಾಮಾಕ್ಷಿಪಾಳ್ಯ ಪೊಲೀಸರು, ವಿಕ್ಟೋರಿಯಾ ಆಸ್ಪತ್ರೆ ವಿಧಿ ವೈಧ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Murder case : ಸ್ನೇಹಿತನಿಂದಲೇ ಕೊಲೆಯಾದಳು ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ

Missing Case : ಕಾಣೆಯಾಗಿದ್ದ ಯುವತಿಯೊಬ್ಬಳ ಶವ (Dead body Found) ಪತ್ತೆಯಾಗಿದ್ದು, ಹಣಕಾಸಿನ ವಿಚಾರಕ್ಕೆ (Money Dispute) ಸ್ನೇಹಿತರಿಬ್ಬರ ನಡುವೆ ಶುರುವಾದ ಜಗಳವು ಬಳಿಕ ಕೊಲೆಯಲ್ಲಿ (Murder case) ಅಂತ್ಯವಾಗಿದೆ.

VISTARANEWS.COM


on

By

murder case
Koo

ಶಿವಮೊಗ್ಗ : ಕಾಣೆಯಾಗಿದ್ದ (Missing Case) ಯುವತಿಯೊಬ್ಬಳು ಶವವಾಗಿ (Dead Body Found) ಪತ್ತೆಯಾಗಿದ್ದಾಳೆ. ಶಿವಮೊಗ್ಗದ (Shivamogga News) ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ.

ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ತಂದೆ ಕುಶಾಲ್ ಮಿಸ್ಸಿಂಗ್‌ ಕಂಪ್ಲೇಟ್‌ ಕೊಟ್ಟಿದ್ದರು.

ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಗಿಳಿದಾಗ ಪೂಜಾಳ ಶವವು ಪತ್ತೆಯಾಗಿತ್ತು. ಬಳಿಕ ಆಕೆಯ ಫೋನ್‌ ಕಾಲ್‌ ಲಿಸ್ಟ್‌ ತೆಗೆದು ಮಿಸ್ಸಿಂಗ್‌ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.

ಈ ವೇಳೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎಂಬಾತನಿಂದಲೇ ಪೂಜಾ ಕೂಲೆಯಾಗಿದ್ದಳು. ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರನೆ ನಡೆಸಿದಾಗ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ‌ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯಿಂದ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ: Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

ಬೆಂಗಳೂರು: ರಾಜಕಾಲುವೆ (Rajakaluve)ಗೆ ಬಿದ್ದ ಬೈಕ್‌ ಸವಾರನ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಹೇಮಂತ ಕುಮಾರ್ (27) ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ರಾಜಕಾಲುವೆಗೆ ಬಿದ್ದಿದ್ದರು. ಡಿವೈಡರ್‌ಗೆ ಗುದ್ದಿದ ಪರಿಣಾಮ ಹೇಮಂತ ಕುಮಾರ್ ಚಿಮ್ಮಿ ವೃಷಭಾವತಿ ನದಿ‌ ರಾಜಕಾಲುವೆ ಒಳಗೆ ಬಿದ್ದಿದ್ದರು. ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಅವರು ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ ಎಂದು ಊಹಿಸಲಾಗಿದೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್‌ ಗುರುತಿಸಲು ಸಾಧ್ಯವಾಗದೆ ಈ ಅವಘಡ ಸಂಭವಿಸಿದೆ. ಆದರೆ ಮೂರು ದಿನಗಳಿಂದ ಅವರು ಪತ್ತೆಯಾಗಿರಲಿಲ್ಲ. ಇದೀಗ ಮೃತದೇಹ ಕಂಡು ಬಂದಿದೆ (Road Accident).

ಸತತ ಶೋಧ ಕಾರ್ಯ

ಶುಕ್ರವಾರದಿಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹೇಮಂತ ಕುಮಾರ್‌ಗಾಗಿ ಸತತವಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಬಿದ್ದ ಸ್ಥಳದಲ್ಲಿಯೇ ಯುವಕನ ಮೃತದೇಹ ಪತ್ತೆಯಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಮೃತದೇಹವನ್ನು ಮೇಲಕ್ಕೆ ಎತ್ತಿ ಅಂಬ್ಯುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಯಾದಗಿರಿ: ಬಾವಿಗೆ ಎಸೆದು ಹಸುಗೂಸನ್ನು ಕೊಲೆ (Murder case) ಮಾಡಲಾಗಿದೆ. ಯಾದಗಿರಿ ನಗರದ ಅಂಬೇಡ್ಕರ್ ಬಡಾವಣೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮೀನಾಕ್ಷಿ (2 ತಿಂಗಳು) ಮೃತ ದುರ್ದೈವಿ. ನಾಗೇಶ್ ಹಾಗೂ ಚಿಟ್ಟೆಮ್ಮ ದಂಪತಿಯ ಮಗು ಮೀನಾಕ್ಷಿಯನ್ನು ಕೊಲೆ ಯಾರು ಮಾಡಿದ್ದಾರೆ? ಯಾಕೆ‌‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಬಡಾವಣೆಯ ಹೊರ ಭಾಗದ ನಿರ್ಜನ ಪ್ರದೇಶದಲ್ಲಿರುವ ಬಾವಿಗೆ ಬಿಸಾಡಿ ಹೋಗಿದ್ದಾರೆ.

ಹೆಣ್ಣು ಮಗು ಎಂಬ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಮಗುವಿನ ಪೋಷಕರು ಕಣ್ಣೀರು ಹಾಕುತ್ತಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಮೇಲೆ ಎತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Dengue Cases in Hassan: ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

Dengue Cases in Hassan: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಶಂಕಿತ ಡೆಂಗ್ಯೂನಿಂದ ಮೃತಪಟ್ಟಿದ್ದಾಳೆ.

VISTARANEWS.COM


on

Dengue Cases in Hassan
Koo

ಹಾಸನ: ಶಂಕಿತ ಡೆಂಗ್ಯೂಗೆ (Dengue Cases in Hassan) 26 ವರ್ಷದ ಯುವತಿ ಬಲಿಯಾಗಿರುವ ಘಟನೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂಲೂನಾಯ್ಕ-ಸುಮಿತ್ರಾದೇವಿ ಎಂಬುವವರ ಪುತ್ರಿ ಸುಪ್ರಿತಾ (26) ಮೃತ ಯುವತಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರಿತಾಗೆ ಬಹುಅಂಗಾಗ ವೈಫಲ್ಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಪ್ರಿತಾ ಮೃತಪಟ್ಟಿದ್ದಾಳೆ. ಇದರಿಂದ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.

ಇದನ್ನೂ ಓದಿ | Dengue fever: ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

Rat fever: ಡೆಂಗ್ಯೂ ರುದ್ರ ನರ್ತನದ ನಡುವೆ ಹಾವೇರಿಯಲ್ಲಿ ಬಾಲಕನಿಗೆ ಇಲಿ ಜ್ವರ!

ಹಾವೇರಿ: ಡೆಂಗ್ಯೂ ರುದ್ರ ನರ್ತನದ ನಡುವೆ ಜಿಲ್ಲೆಯಲ್ಲಿ ಇಲಿ ಜ್ವರ (Rat fever) ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ 12 ವರ್ಷದ ಬಾಲಕನಿಗೆ ಇಲಿ ಜ್ವರ ದೃಢಪಟ್ಟಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದೊಂದು ವಾರದಿಂದ ಬಾಲಕ ಜ್ವರದಿಂದ ಬಳಲುತ್ತಿದ್ದ . ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಇಲಿ ಜ್ವರ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸದ್ಯ ಬಾಲಕನ ಆರೋಗ್ಯ ಸ್ಥಿರವಾಗಿದೆ.

ಈ ಬಗ್ಗೆ ಜಿಲ್ಲಾಸ್ಪತ್ರೆಯ ಡಾ.ಭಾಗ್ಯ ಪ್ರತಿಕ್ರಿಯಿಸಿ, ಬಾಲಕನಿಗೆ ಇಲಿ ಜ್ವರ ಬಂದಿರುವುದು ನೆನ್ನೆ ಗೊತ್ತಾಗಿದೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕನ‌ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಡೆಂಗ್ಯೂ ಜ್ವರದ ಲಕ್ಷಣಗಳೇ ಇಲಿ ಜ್ವರ ಕಾಣಿಸಿಕೊಂಡವರಲ್ಲೂ ಕಂಡುಬರುತ್ತವೆ ಎಂದು ತಿಳಿಸಿದರು.

ಏನಿದು ಇಲಿ ಜ್ವರ, ಹೇಗೆ ಹರಡುತ್ತದೆ?

ವೈಜ್ಞಾನಿಕವಾಗಿ ಲೆಪ್ಟೊಸ್ಪಿರೋಸಿಸ್ ಎಂದು ಕರೆಯಲ್ಪಡುವ ಇಲಿ ಜ್ವರ, ಲೆಪ್ಟೊಸ್ಪೈರಾ ಎಂಬ ಬ್ಯಾಕ್ಟೀರಿಯಗಳ ಮೂಲಕ ಪ್ರಾಣಿಗಳಿಂದ ಮಾನವರಿಗೆ ಹರಡುವ ರೋಗವಾಗಿದೆ. ಮುಖ್ಯವಾಗಿ ಇಲಿ, ಹೆಗ್ಗಣಗಳಿಂದ ಈ ರೋಗಾಣುಗಳು ಹರಡುವುದರಿಂದ ಇದಕ್ಕೆ ಇಲಿ ಜ್ವರವೆಂದು ಹೆಸರು. ಈ ರೋಗ ಕೇವಲ ಮನುಷ್ಯರನ್ನಷ್ಟೇ ಅಲ್ಲ ದನ, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಬೆಕ್ಕು, ವನ್ಯಮೃಗಗಳು ಹೀಗೆ ಬಹುತೇಕ ಪ್ರಾಣಿಗಳನ್ನು ಬಾಧಿಸುತ್ತದೆ.

ಹೆಚ್ಚಾಗಿ ಇಲಿ, ಹೆಗ್ಗಣಗಳ ಮೂಲಕ ಈ ರೋಗ ಹರಡುತ್ತದೆ. ರೋಗಪೀಡಿತ ಇಲಿಗಳು ಹಾಗೂ ಪ್ರಾಣಿಗಳ ಮೂತ್ರದ ಮೂಲಕ ಈ ಕಾಯಿಲೆ ಹರಡುತ್ತದೆ. ಆದರೆ ಮನುಷ್ಯನಿಂದ ಮನುಷ್ಯನಿಗೆ ಇದು ಹರಡುವುದಿಲ್ಲ. ಮಣ್ಣಿನಲ್ಲಿ ಈ ರೋಗಾಣುಗಳು ಸುಮಾರು 6 ಗಂಟೆವರೆಗೆ ಜೀವಂತವಿದ್ದರೆ, ನೀರಿನಲ್ಲಿ ಅರು ತಿಂಗಳವರೆಗೆ ಬದುಕಬಲ್ಲವು. ಹಾಗಾಗಿ ಮಳೆಗಾಲದಲ್ಲಿ ಈ ರೋಗದ ಹಾವಳಿ ಜಾಸ್ತಿ ಇರುತ್ತದೆ.

ಇದನ್ನೂ ಓದಿ | Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ವಾಂತಿಯಂತಹ ರೋಗಲಕ್ಷಣಗಳು ಇರುತ್ತವೆ. ಕೆಲವು ಪ್ರಕರಣಗಳಲ್ಲಿ ಇದು ಮೂತ್ರಪಿಂಡ ವೈಫಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಹೀಗಾಗಿ ಸಕಾಲದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ಅಗತ್ಯವಾಗಿದೆ.

Continue Reading
Advertisement
ATM Robbery
ಕರ್ನಾಟಕ12 mins ago

ATM Robbery: ಎಟಿಎಂನಲ್ಲಿ 15 ಲಕ್ಷ ರೂ. ದೋಚಿದ ಕಳ್ಳರು; ಗ್ಯಾಸ್ ಕಟರ್ ಬಳಸಿ ಕೃತ್ಯ!

Rohit Sharma
ಕ್ರೀಡೆ18 mins ago

Rohit Sharma: ಚಾಂಪಿಯನ್ಸ್​ ಟ್ರೋಫಿಗೂ ರೋಹಿತ್​ ನಾಯಕ; ಖಚಿತಪಡಿಸಿದ ಜಯ್​ ಶಾ

Attempt To Murder
ಬೆಂಗಳೂರು ಗ್ರಾಮಾಂತರ24 mins ago

Attempt To Murder: ಬಾಯಿಗೆ ಬಂದಂತೆ ಬೈದ್ರು ಅಂತ ಸಿಟ್ಟು; ಮಾಲೀಕನಿಗೆ ಹೊಡೆದು ಕೋಮಾಗೆ ಕಳಿಸಿದ ಸಪ್ಲೇಯರ್‌!

murder case
ಶಿವಮೊಗ್ಗ1 hour ago

Murder case : ಸ್ನೇಹಿತನಿಂದಲೇ ಕೊಲೆಯಾದಳು ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ

MS Dhoni Birthday
ಕ್ರೀಡೆ1 hour ago

MS Dhoni Birthday: ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಪತ್ನಿ; ವಿಡಿಯೊ ವೈರಲ್​

Dengue Cases in Hassan
ಪ್ರಮುಖ ಸುದ್ದಿ1 hour ago

Dengue Cases in Hassan: ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

Actor Darshan Ninasam Ratnakka shocked to hear the news of Darshan
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ ಸುದ್ದಿ ಕೇಳಿ ಆಘಾತವಾಗಿತ್ತು ಎಂದು ಬಿಕ್ಕಿ ಬಿಕ್ಕಿ ಅತ್ತ ನೀನಾಸಂ ರತ್ನಕ್ಕ!

Bhadra Dam
ಶಿವಮೊಗ್ಗ1 hour ago

Bhadra Dam: ಕೊನೆಗೂ ಭದ್ರಾ ಡ್ಯಾಂನ ರಿವರ್ ಗೇಟ್‌ ದುರಸ್ತಿ; ಸೋರಿಕೆಯಾಗುತ್ತಿದ್ದ ನೀರಿಗೆ ತಡೆ

Rat Fever
ಪ್ರಮುಖ ಸುದ್ದಿ2 hours ago

Rat fever: ಡೆಂಗ್ಯೂ ರುದ್ರ ನರ್ತನದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ; ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ!

Gautam Gambhir
ಕ್ರೀಡೆ2 hours ago

Gautam Gambhir: ಕೆಕೆಆರ್ ತಂಡದ ಮೆಂಟರ್​ ಸ್ಥಾನಕ್ಕೆ ಗಂಭೀರ್​ ರಾಜೀನಾಮೆ?; ಕೋಚ್​ ಆಗುವುದು ಖಚಿತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ8 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ20 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ23 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ24 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌