ದೊಡ್ಡಬಳ್ಳಾಪುರ ಆಸ್ಪತ್ರೆಯ ಆಡಳಿತಾಧಿಕಾರಿ ವಜಾ - Vistara News

ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ಆಸ್ಪತ್ರೆಯ ಆಡಳಿತಾಧಿಕಾರಿ ವಜಾ

ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್‌ ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡಿದ್ದಾರೆ. ಆಸ್ಪತ್ರೆಯ ಆಡಳಿತದ ಪ್ರಭಾರವನ್ನು ತಕ್ಷಣ ಜಾರಿಗೆ ಬರುವಂತೆ ಬದಲಾಯಿಸಿದ್ದಾರೆ.

VISTARANEWS.COM


on

ಆಸ್ಪತ್ರೆ
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದಿದ್ದು ರಾಜ್ಯ ಅರೋಗ್ಯ ಸಚಿವ ಡಾ. ಸುಧಾಕರ್‌ ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡಿದ್ದಾರೆ. ಆಸ್ಪತ್ರೆಯ ಆಡಳಿತದ ಪ್ರಭಾರವನ್ನು ತಕ್ಷಣ ಜಾರಿಗೆ ಬರುವಂತೆ ಬದಲಾಯಿಸಿದ್ದಾರೆ. ಈ ಆಸ್ಪತ್ರೆಯ ಆಡಳಿತ ಜವಾಭ್ಧಾರಿಯನ್ನು ಈಗ ಡಾ. ಚೆನ್ನಕೇಶವ ಎಸ್.ಪಿ ಅವರಿಗೆ ನೀಡಲಾಗಿದೆ. ಈ ವಿಷಯದ ಬಗ್ಗೆ ಡಾ. ಸುದಾಕರ್‌ ಟ್ವೀಟ್‌ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ:‌

ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯೊಂದರಲ್ಲಿ ಸುಮಾರು 6 ಗಂಟೆಗಳ ಕಾಲ ವಿದ್ಯುಚ್ಛಕ್ತಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದ ಅಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಸಾರ್ವಜನಿಕರು ಬಳಲುವಂತಾಗಿತ್ತು. ಈ ಹಿಂದೆಯೂ ಈ ರೀತಿಯ ತೊಡಕುಗಳು ಆಸ್ಪತ್ರೆಯಲ್ಲಿ ಕಂಡುಬಂದಿದ್ದು, ಆಸ್ಪತ್ರಯ ಆಡಳಿತವನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ಅಧಿಕಾರಿ ಡಾ. ರಮೇಶ್‌ ಪಿ.ಎಸ್.‌ ಅವರಿಗೆ ಸೂಚಿಸಿತ್ತು. ಆದರೆ ಡಾ. ರಾಮೇಶ್‌ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿದ್ದು ಕಂಡುಬಂದಿಲ್ಲ.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸ್ಥಳೀಯರು ಈ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನು ಗಮನಿಸಿದ ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್‌ ಕೂಡಲೇ ಕ್ರಮ ಕೈಗೊಂಡಿದ್ದಾರೆ. ಡಾ. ರಮೇಶ್‌ ಉತ್ತಮ ರೀತಿಯಲ್ಲಿ ಆಡಳಿತವನ್ನು ನಿರ್ವಹಿಸುವಲ್ಲಿ ವಿಫಲರಾದ ಕಾರಣಕ್ಕೆ ಅವರನ್ನು ಆಸ್ಪತ್ರೆಯ ಆಡಳಿತಾಧಿಕಾರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಆಸ್ಪತ್ರೆಯ ಆಡಳಿತದ ಜವಾಬ್ಧಾರಿಯನ್ನು ಡಾ. ಚೆನ್ನಕೇಶವ ಅವರು ನಡೆಸುವಂತೆ ಸಚಿವ ಸುಧಾಕರ್ ಸೂಚಿಸಿದ್ದಾರೆ ಹಾಗೂ ಡಾ. ಅರುಣ್‌ ಕುಮಾರ್‌ ಎಂ.ಹೆಚ್.‌ ಅವರನ್ನು ನಿವಾಸಿ ವೈದ್ಯಾಧಿಕಾರಿಯಾಗಿ ನೇಮಕಮಾಡಿದ್ದಾರೆ.

ಈ ಪ್ರಕರಣದ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

ಇದನ್ನೂ ಓದಿ:

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Bomb Threat: ಬೆಂಗಳೂರು ಏರ್‌ಪೋರ್ಟ್‌ನ ಅಲ್ಪಾ 2ರ ಆಡಳಿತ ಕಚೇರಿಯ ಬಾತ್ ರೂಮ್‌ನಲ್ಲಿ ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶ ಬರೆದಿದ್ದ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

VISTARANEWS.COM


on

Bomb Threat
Koo

ದೇವನಹಳ್ಳಿ: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ (Bomb Threat) ಸಂದೇಶ ಬಂದಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅನಾಮಿಕ ವ್ಯಕ್ತಿಯೊಬ್ಬ ಏರ್‌ಪೋರ್ಟ್‌ನ ಬಾತ್ ರೂಮ್‌ನ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆದ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಏರ್‌ಪೋರ್ಟ್‌ನ ಅಲ್ಪಾ 2ರ ಆಡಳಿತ ಕಚೇರಿಯ ಬಾತ್ ರೂಮ್‌ನಲ್ಲಿ ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶ ಬರೆದಿದ್ದ. ತಕ್ಷಣ ಶ್ವಾನದಳ, ಬಾಂಬ್ ಸ್ಕ್ವಾಡ್‌ನೊಂದಿಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಸಂದೇಶ ಅಂತ ಗೊತ್ತಾಗಿ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚೆಗೆ ಪದೇಪದೆ ಕೆಲ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸುತ್ತಿರುವುದು ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ | Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಠಿಕಾಣಿ, ನಾಳೆ ಮಧ್ಯರಾತ್ರಿಯೇ ಪ್ರಜ್ವಲ್‌ ರೇವಣ್ಣ ವಶಕ್ಕೆ

Prajwal Revanna Case

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP ‌Prajwal Revanna Case) ಭಾರತಕ್ಕೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿರುವ ಎಸ್‌ಐಟಿ (SIT) ತಂಡ, ಏರ್‌ಪೋರ್ಟ್‌ನಲ್ಲಿಯೇ (Kempegowda International Airport – KIA) ಸದ್ಯ ಠಿಕಾಣಿ ಹಾಕಿದೆ.

ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ. ಹೀಗಾಗಿ ಅದಕ್ಕೂ ಮುನ್ನವೇ, ಅಂದರೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಲೇ ಆರೆಸ್ಟ್‌ ಮಾಡಲು ಎಸ್‌ಐಟಿ ಸಜ್ಜಾಗಿದೆ.

ನಾಳೆ ರಾತ್ರಿ 12.35ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ಗೆ ಜರ್ಮನಿಯಿಂದ ಬರಲಿರುವ ಲುಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್‌ ಲ್ಯಾಂಡ್ ಆಗಲಿದ್ದಾರೆ ಎಂದು ಗೊತ್ತಾಗಿದೆ. ವಿಮಾನದಿಂದ ಇಳಿದ ಬಳಿಕ ಪ್ರಜ್ವಲ್‌ ಇಮಿಗ್ರೇಷನ್‌‌‌‌‌ ಡೆಸ್ಕ್‌‌ಗೆ ಬರಬೇಕು. ಪಾಸ್‌ಪೋರ್ಟ್‌ಗೆ ಸ್ಟಾಂಪ್‌‌‌ ಹಾಕಿಸಬೇಕು. ಈಗ ಲುಕೌಟ್‌ ನೋಟೀಸ್‌ ಇರುವುದರಿಂದ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆಯಲಿದ್ದಾರೆ. ಏರ್‌‌ಪೋರ್ಟ್‌ ಅಧಿಕಾರಿಗಳಿಂದ SITಗೆ ಪ್ರಜ್ವಲ್ ಹಸ್ತಾಂತರ ನಡೆಯಲಿದೆ.

ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್‌ ಟಿಕೆಟ್ ಕಾಯ್ದಿರಿಸಿರುವುದರಿಂದ ಅಲರ್ಟ್ ಆಗಿರುವ ಎಸ್ಐಟಿ ತಂಡ, ಏರ್‌ಪೋರ್ಟ್‌ನಲ್ಲಿಯೇ ಠಿಕಾಣಿ ಹೂಡಿದೆ. ಎರಡು ಮೂರು ಬಾರಿ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿ‌ ಕೊನೆ ಗಳಿಗೆಯಲ್ಲಿ ಕ್ಯಾನ್ಸಲ್ ಮಾಡಿಕೊಂಡಿದ್ದರು. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಏರ್ಪೋರ್ಟ್‌ನಲ್ಲಿ ಬೀಡು ಬಿಟ್ಟಿದ್ದಾರೆ. 31ರಂದು ಬರುದಾಗಿ ಹೇಳಿ ಒಂದು ದಿನ ಮುಂಚಿತವಾಗಿಯೇ ಬಂದ್ರೆ ಕಷ್ಟ ಎಂದು ಏರ್ಪೋರ್ಟ್‌ನಲ್ಲಿ ಎರಡೆರಡು ತಂಡಗಳು ಕಾಯುತ್ತಿವೆ.

ಬಂದ ಬಳಿಕ ಏನೇನು?

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಬಳಿಕ ಮೆಡಿಕಲ್ ಟೆಸ್ಟ್‌ ಮತ್ತಿತರ ಅಗತ್ಯ ವಿಧಿವಿಧಾನಗಳು ನಡೆಯಲಿವೆ. ನಂತರ ತನಿಖೆ ನಡೆಸಲು ಎಸ್ಐಟಿ ತಯಾರಿ ಮಾಡಿಕೊಳ್ಳುತ್ತಿದೆ. ಎರಡು ಕೋನಗಳಲ್ಲಿ ಪ್ರಜ್ವಲ್ ರೇವಣ್ಣರನ್ನು ವಿಚಾರಣೆ ಮಾಡಲು ಸಿದ್ಧತೆ ನಡೆಸಲಾಗಿದೆ. ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಎರಡು ತರಹದ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದ್ದು, ತಪ್ಪು ಒಪ್ಪಿಕೊಳ್ಳಬಹುದು ಅಥವಾ ತಾನು ಮಾಡಿಯೇ ಇಲ್ಲ ಅನ್ನಬಹುದು. ಈ ಎರಡೂ ಆಯಾಮಗಳಲ್ಲೂ ಎಸ್‌ಐಟಿ ತನಿಖೆ ಮಾಡಬೇಕಿದೆ.

ಪ್ರಜ್ವಲ್ ರೇವಣ್ಣ ತಪ್ಪು ಒಪ್ಪಿಕೊಂಡರೆ ಎಸ್‌ಐಟಿ ಕೆಲಸ ಸರಾಗವಾಗಲಿದೆ. ಆರೋಪಿತನ ಹೇಳಿಕೆ ದಾಖಲಿಸಿಕೊಂಡು ಸ್ಥಳ ಮಹಜರು ಮಾಡಲಾಗುತ್ತದೆ. ಎಲ್ಲೆಲ್ಲಿ ಕೃತ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ನೀಡಿರುವ ಹೇಳಿಕೆ ಆಧಾರದಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡುತ್ತಾರೆ. ಎಂಪಿ ಗೆಸ್ಟ್ ಹೌಸ್, ಹೊಳೆನರಸೀಪುರದ ಫಾರ್ಮ್ ಹೌಸ್ ಸೇರಿ ಹಲವೆಡೆ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

ಪ್ರಜ್ವಲ್‌ ತಮ್ಮ ಮೇಲಿರುವ ಆರೋಪ ತಳ್ಳಿ ಹಾಕಿದರೆ ಸಂತ್ರಸ್ತೆ ಹೇಳಿಕೆ ಪ್ರಾಮುಖ್ಯತೆ ಪಡೆಯಲಿದೆ. ಆಕೆಯ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ನಡೆಯುತ್ತದೆ. ಈಗಾಗಲೇ ಸಂತ್ರಸ್ತೆ ಹೇಳಿಕೆ ದಾಖಲಿಸಿರುವ ಎಸ್ಐಟಿ, ಜೊತೆಗೆ ಸ್ಥಳ ಮಹಜರು ನಡೆಸಿ ಒಂದಷ್ಟು ಸಾಕ್ಷ್ಯಗಳನ್ನು ಕಲೆಹಾಕಿದೆ. ಇದರ ಜೊತೆಗೆ ಆರೋಪಿ ಹೇಳಿಕೆಯನ್ನೂ ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.

Continue Reading

ಮಳೆ

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯೊಂದಿಗೆ (Rain News) ಗುಡುಗು, ಮಿಂಚು ಇರಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 29 ರಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಮಧ್ಯಮ ಮಳೆಯಾದರೆ, ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಕೆಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಒಣಹವೆ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

ಇನ್ನೇನೂ ಸಮ್ಮರ್‌ ಸೀಸನ್‌ (Summer dress fashion) ಮುಗಿಯುವ ಹಂತದಲ್ಲಿದೆ. ಆಗಲೇ ವೆವಿ ಡ್ರೆಸ್‌ಗಳು ಎಂಟ್ರಿ ನೀಡಿವೆ. ಹೌದು. ನೋಡಿದಾಕ್ಷಣ ಮನೋಲ್ಲಾಸ ತುಂಬುವಂತಹ ಉತ್ಸಾಹ ಮೂಡಿಸುವ ಡಿಫರೆಂಟ್‌ ಲುಕ್‌ ನೀಡುವ ನಾನಾ ಶೇಡ್‌ನ ವೆವಿ ಡ್ರೆಸ್‌ಗಳು ಫ್ಯಾಷನ್‌ ಲೋಕಕ್ಕೆ ಕಾಲಿಟ್ಟಿವೆ.

Summer Dress Fashion

ಏನಿದು ವೆವಿ ಡ್ರೆಸ್‌?

ಅರರೆ, ಏನಿದು ವೆವಿ ಡ್ರೆಸ್‌ ಎಂದು ಯೋಚಿಸುತ್ತಿದ್ದೀರಾ! ಹೆಸರೇ ಹೇಳುವಂತೆ, ಇವು ಬೀಚ್‌ನಲ್ಲಿ ಸಮುದ್ರದ ಅಲೆಗಳನ್ನು ಬಿಂಬಿಸುವಂತಹ ಪ್ರಿಂಟ್ಸ್ ಇರುವಂತಹ ಸಮ್ಮರ್‌ ಡ್ರೆಸ್‌ಗಳಿವು. ನೋಡಲು ಬೀಚ್‌ ಲುಕ್‌ ಪ್ಲಸ್‌ ಹಾಲಿ ಡೇ ಪಾರ್ಟಿ ಲುಕ್‌ ನೀಡುವಂತಹ ಉಡುಗೆಗಳಿವು. ಅಷ್ಟೇಕೆ! ಲಂಚ್‌-ಬ್ರಂಚ್‌ ಪಾರ್ಟಿಗಳಲ್ಲೂ ಕಾಣಬಹುದಾದ ಹೈ ಫ್ಯಾಷನ್‌ ಉಡುಪುಗಳಿವು. ಇವುಗಳ ಪ್ರಿಂಟ್ಸ್ ಅಲೆಗಳಂತೆ ಇರುವುದರಿಂದ ಇವನ್ನು ವೆವಿ ಡ್ರೆಸ್‌ಗಳೆಂದು ಕರೆಯಲಾಗುತ್ತದೆ. ನಾನಾ ಹೈ ಫ್ಯಾಷನ್‌ ಬ್ರಾಂಡ್‌ಗಳಲ್ಲಿ ಇವು ಬಿಡುಗಡೆಗೊಂಡಿವೆ. ಸೆಲೆಬ್ರೆಟಿಗಳು ಮಾತ್ರವಲ್ಲ, ಸ್ಟೈಲಿಶ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ ಎಂದು ವಿವರಿಸುತ್ತಾರೆ ಸ್ಟೈಲಿಸ್ಟ್‌ಗಳು.

Summer Dress Fashion

ಶಾರ್ವರಿ ವೆವಿ ಡ್ರೆಸ್‌

ಬಾಲಿವುಡ್‌ನಲ್ಲಿ ಇನ್ನೂ ಅತಿ ಹೆಚ್ಚಾಗಿ ಕಂಡು ಬರದ ಉಡುಪುಗಳಲ್ಲಿ ಈ ವೆವಿ ಡ್ರೆಸ್‌ ಕೂಡ ಸೇರಿದೆ. ಯಾಕೆಂದರೇ, ಈ ಉಡುಪು ಈ ಜನರೇಷನ್‌ ನಟಿಯರ ಲಿಸ್ಟ್ನಲ್ಲಿದೆ. ಇದಕ್ಕೆ ಪೂರಕ ಎಂಬಂತೆ, ಬಾಲಿವುಡ್‌ ನಟಿ ಶಾರ್ವರಿ ಸಮುದ್ರದ ಅಲೆಗಳನ್ನು ನೆನಪಿಸುವ ಪಿಸ್ತಾ ಮಿಂಟ್‌ ಗ್ರೀನ್‌ ಶೇಡ್ ಮಿಕ್ಸ್ ಇರುವಂತಹ ವೆವಿ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಫ್ಯಾಷನ್‌ ಲೋಕದಲ್ಲಿ ಟ್ರೆಂಡ್‌ ಸೆಟ್‌ ಮಾಡಿದ್ದಾರೆ. ಸದ್ಯ, ಇತರೇ ಯಾವುದೇ ನಟಿಯರು ಪ್ರಯೋಗಿಸದ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿರುವ ಹೆಗ್ಗಳಿಕೆ ಇವರದು. ವೆವಿ ಡ್ರೆಸ್‌ನಂತಹ ಸಮ್ಮರ್‌ ಡ್ರೆಸ್‌ ಇದೆಯಾ! ಒಮ್ಮೆ ನಾವು ಕೂಡ ಧರಿಸೋಣಾ! ಎಂಬ ಟೀನೇಜ್‌ ಹುಡುಗಿಯರ ಫ್ಯಾಷನ್‌ ಚಾಯ್ಸ್‌ಗೆ ಹೊಸ ಶೇಡ್‌ಗಳು ಆಕರ್ಷಿಸುತ್ತಿವೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕಿ ಜಿಯಾ. ಅವರ ಪ್ರಕಾರ, ವೆವಿ ಡ್ರೆಸ್‌ಗಳು ಯಂಗ್‌ ಲುಕ್‌ ನೀಡುತ್ತವಂತೆ. ಹಾಗಾಗಿ ಆನ್‌ಲೈನ್‌ನಲ್ಲಿ ಇದೀಗ ಇವುಗಳ ಖರೀದಿ ಹೆಚ್ಚಾಗಿದೆ ಎನ್ನುತ್ತಾರೆ.

Summer Dress Fashion

ವೆವಿ ಡ್ರೆಸ್‌ಗಳ ಟ್ರೆಂಡ್‌

ಸಾಗರ ಹಾಗೂ ಸಮುದ್ರ ಅಲೆಗಳ ನ್ಯಾಚುರಲ್‌ ಶೇಡ್ಸ್, ಪೀಚ್‌ ಹಾಗೂ ಕೇಸರಿ ಶೇಡ್‌ಗಳ ನೈಜವೆನಿಸದ ಪ್ರಿಂಟ್ಸ್‌ನ ವೆವಿ ಡ್ರೆಸ್‌ಗಳು, ಅಸ್ಸೆಮ್ಮಿಟ್ರಿಕಲ್‌ ವೆವಿ ಡ್ರೆಸ್‌ಗಳು ಅದರಲ್ಲೂ, ವೈಟ್‌ & ಸೀ ಬ್ಲ್ಯೂ , ರಾಯಲ್‌ ಬ್ಲ್ಯೂ ವೆವಿ ಡ್ರೆಸ್‌ಗಳು ಅತಿ ಹೆಚ್ಚಾಗಿ ಬೇಡಿಕೆ ಪಡೆದುಕೊಂಡಿವೆ.

  • ಸಮ್ಮರ್‌ ಪಾರ್ಟಿಗೆ ಹಾಗೂ ಔಟಿಂಗ್‌ಗೆ ಮ್ಯಾಚ್‌ ಆಗುತ್ತವೆ.
  • ಹೆಚ್ಚು ಆಕ್ಸೆಸರೀಸ್‌ ಧರಿಸುವ ಅಗತ್ಯವಿಲ್ಲ.
  • ಮಿನಿಮಲ್‌ ಮೇಕಪ್‌ ಆಕರ್ಷಕವಾಗಿ ಕಾಣಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Rain News : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಯಾದಗಿರಿಯಲ್ಲಿ ಗಾಳಿ ಸಹಿತ ಮಳೆಗೆ ವಿದ್ಯುತ್‌ ಕಂಬ ಮುರಿದು ಬಿದ್ದ ಪರಿಣಾಮ ಮೂರು ದಿನದಿಂದ ಕರೆಂಟ್‌ ಕಟ್‌ ಆಗಿದೆ. ಇತ್ತ ಗ್ರಾಮಸ್ಥರು ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌ (Karnataka Weather Forecast) ಮಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಯಾದಗಿರಿ: ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದರೂ ಮಳೆ ಅವಾಂತರ (Rain News) ಮಾತ್ರ ಕಡಿಮೆ ಆಗುತ್ತಿಲ್ಲ. ಯಾದಗಿರಿಯಲ್ಲಿ ಮಳೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಪರಿಣಾಮ ಮೂರು ದಿನಗಳಿಂದ ಕರೆಂಟ್‌ ಇಲ್ಲದಂತಾಗಿದೆ.ಇತ್ತ ಮಂಗಳವಾರ ಚಿಕ್ಕಮಗಳೂರಿನಲ್ಲಿ ಭಾರಿ (Karnataka weather Forecast) ಮಳೆಯಾಗುತ್ತಿದೆ.

ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿದಿದೆ. ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಸುತ್ತಮುತ್ತ ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಸವಾರರು ರಸ್ತೆ ಬದಿ ವಾಹನ ನಿಲ್ಲಿಸಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಯಾದಗಿರಿಯಲ್ಲಿ ಮಳೆಗೆ ಪವರ್‌ ಕಟ್‌; ಜನರೇಟರ್ ಮೂಲಕ ಮೊಬೈಲ್‌ಗಳಿಗೆ ಚಾರ್ಜಿಂಗ್‌

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದಿದ್ದು, ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಲಕಲ್, ಮರಮಕಲ್, ನಾಲ್ವಡಗಿ ಗ್ರಾಮಸ್ಥರು ವಿದ್ಯುತ್‌ ಇಲ್ಲದೆ ಪರದಾಡುತ್ತಿದ್ದಾರೆ. ತುರ್ತು ಎಂದಾಗ ಫೋನ್‌ ಮಾಡಲು ಮೊಬೈಲ್‌ನಲ್ಲಿ ಚಾರ್ಜಿಂಗ್‌ ಇಲ್ಲ.

ಹೀಗಾಗಿ ಮೊಬೈಲ್‌ ಚಾರ್ಜಿಂಗ್‌ಗಾಗಿ ಗ್ರಾಮಸ್ಥರು ಸೂಪರ್‌ ಪ್ಲ್ಯಾನ್‌ವೊಂದನ್ನು ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ ಹತ್ತಾರು ಪವರ್ ಬಾಕ್ಸ್ ಇಟ್ಟು ವಿದ್ಯುತ್ ಕನೆಕ್ಷನ್ ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ‌ ಮೊಬೈಲ್ ಜಾರ್ಜ್ ಮಾಡಲು ಪಾಳಿ ವ್ಯವಸ್ಥೆ ಮಾಡಲಾಗಿದೆ. ಮರಮಕಲ್ ಗ್ರಾಮದ ಬಸವೇಶ್ವರ ಮಂದಿರದಲ್ಲಿ ಮೊಬೈಲ್ ಚಾರ್ಜಿಂಗ್‌ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ತಲೆದೊರಿದ್ದು, ಜನರೇಟರ್ ಮೂಲಕವೇ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಎತ್ತಿನ ಬಂಡಿ, ಬೈಕ್ ಮೇಲೆ ದೂರದಿಂದ ಬಂದು ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬೇಗ ವಿದ್ಯುತ್ ದುರಸ್ತಿ ಮಾಡುವಂತೆ ಒತ್ತಾಯ ಬಂದಿದೆ.

ಇದನ್ನೂ ಓದಿ: Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಎಲ್ಲೆಲ್ಲಿ ಮಳೆ ಅಬ್ಬರ?

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರಮಳೆ/ಗುಡುಗು ಸಹಿತ ಮಳೆಯಾದರೆ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯ ನಿರೀಕ್ಷೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ತಿರುವಿನಲ್ಲಿದ್ದ ಜವರಾಯ; ಸ್ಪೀಡಾಗಿ ಬಂದು ಫೆನ್ಸಿಂಗ್ ಕಂಬಕ್ಕೆ ಡಿಕ್ಕಿ, ಬೈಕ್‌ ಸವಾರ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ವರದಿ ಆಗಿವೆ. ಆನೇಕಲ್‌ನಲ್ಲಿ ಬೈಕ್‌ ಸವಾರನೊಬ್ಬ ಅತಿವೇಗ ಚಾಲನೆಗೆ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಬೆಂಗಳೂರಲ್ಲಿ ಇಬ್ಬರು ಪಾದಚಾರಿಗಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident in Anekal
Koo

ಆನೇಕಲ್: ನಿಯಂತ್ರಣ ತಪ್ಪಿ ಫೆನ್ಸಿಂಗ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ (Road Accident ) ಮೃತಪಟ್ಟಿದ್ದಾರೆ. ಆನೇಕಲ್‌ನ ಕಗ್ಗಲೀಪುರ ರಸ್ತೆಯ ಬ್ಯಾಲಮರನದೊಡ್ಡಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಶಾನಭೋಗನಹಳ್ಳಿ ನಿವಾಸಿ ರಾಮಚಂದ್ರ (22) ಮೃತ ದುರ್ದೈವಿ.

ಸೋಮವಾರ ರಾತ್ರಿ ಬೈಕ್‌ನಲ್ಲಿ ಬರುವಾಗ ತಿರುವಿನಲ್ಲಿ ಅತಿ ವೇಗವಾಗಿ ಬಂದಿದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಬರುತ್ತಿದ್ದಾಗ ಬೈಕ್‌ನ ನಿಯಂತ್ರಣ ತಪ್ಪಿ ಫೆನ್ಸಿಂಗ್ ಕಂಬಕ್ಕೆ ಡಿಕ್ಕಿಯಾಗಿದೆ. ಫೆನ್ಸಿಂಗ್ ಕಂಬ ಮತ್ತು ಮುಳ್ಳಿನ ತಂತಿ ಬೇಲಿ ತಗುಲಿ ರಾಮಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕುಡಿದ ಮತ್ತಿನಲ್ಲಿ ಬೈಕ್‌ ಚಲಾಯಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಇದನ್ನೂ ಓದಿ: Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

ಕಾರು ಡಿಕ್ಕಿ ಪಾದಚಾರಿ ಮಹಿಳೆ ಸಾವು

ಬೆಂಗಳೂರಿನ ಮಾರತ್ ಹಳ್ಳಿ ಸಮೀಪದ ಬೋರ್ ವೆಲ್ ಜಂಕ್ಷನ್ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಗಾಯಗೊಂಡ ಪಾದಚಾರಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಎಚ್ಎಎಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕಾರು ಚಾಲಕನ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಕೆಎಸ್ಆರ್‌ಟಿಸಿ ಬಸ್ ಹರಿದು ಪಾದಚಾರಿ ಸಾವು

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಟರ್ಮಿನಲ್ 3 ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹರಿದು ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಮೃತ ವ್ಯಕ್ತಿಯು 25 ವರ್ಷದ ಆಸುಪಾಸಿನಲ್ಲಿದ್ದು, ಹೆಸರು ಪತ್ತೆಯಾಗಿಲ್ಲ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Babar Azam
ವೈರಲ್ ನ್ಯೂಸ್7 mins ago

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Madhu Chopra on Priyanka Chopra-Nick Jonas' age gap
ಬಾಲಿವುಡ್14 mins ago

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Tamarind Fruit Benefits
ಆರೋಗ್ಯ14 mins ago

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

Karnataka Weather
ಮಳೆ30 mins ago

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Viral News
ವೈರಲ್ ನ್ಯೂಸ್46 mins ago

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Rashmika Mandanna shares why she doesn’t speak English
ಸಿನಿಮಾ50 mins ago

Rashmika Mandanna: ಸಮಾರಂಭಗಳಲ್ಲಿ ರಶ್ಮಿಕಾ ಇಂಗ್ಲೀಷ್‌ ಏಕೆ ಮಾತನಾಡಲ್ಲ? ನಟಿ ಕೊಟ್ಟ ಸ್ಪಷ್ಟನೆ ಏನು?

Bhavani Revanna
ಕರ್ನಾಟಕ56 mins ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Team India's T20 WC Jersey
ಕ್ರೀಡೆ57 mins ago

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Missing Case
ಕರ್ನಾಟಕ1 hour ago

Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

Prajwal Revanna Case
ಕರ್ನಾಟಕ1 hour ago

Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ22 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌