Site icon Vistara News

ಗಂಡ-ಹೆಂಡತಿ ಜಗಳ; ಪತ್ನಿಗೆ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಯತ್ನ

crime

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪ ಹೆಂಡತಿಗೆ ಚಾಕು ಇರಿದ ಬಳಿಕ ಕತ್ತು, ಹೊಟ್ಟೆ ಭಾಗಕ್ಕೆ ಚಾಕು ಇರಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಧರ್ಮಪುರಿ ಮೂಲದ ರಮೇಶ್ ಮತ್ತು ಅರ್ಪಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಪೀಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಗಂಡ-ಹೆಂಡತಿ ನಡುವೆ ಶನಿವಾರ ಜಗಳ ನಡೆದಿದೆ. ಈ ವೇಳೆ ಹೆಂಡತಿಗೆ ಗಂಡ ಚಾಕುವಿನಿಂದ ಇರಿದು ಬಳಿಕ ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಏಳು ವರ್ಷದ ಹಿಂದೆ ಪ್ರೀತಿಸಿ ಇಬ್ಬರೂ ವಿವಾಹವಾಗಿ ಹೊಸಕೋಟೆಯಲ್ಲಿ ನೆಲೆಸಿದ್ದರು. ವರ್ಷದ ಹಿಂದೆ ದಂಪತಿ ನಡುವೆ ಗಲಾಟೆಯಾಗಿ ಬೇರೆಯಾಗಿದ್ದರು. ಕಳೆದ ವಾರ ಹಿರಿಯರ ಸಮ್ಮುಖದಲ್ಲಿ ನ್ಯಾಯ ಪಂಚಾಯಿತಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾತನಾಡಬೇಕೆಂದು ಪತ್ನಿ ಅರ್ಪಿತಾಳನ್ನು‌ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದ ಗಂಡ, ಪಿಲ್ಲಗುಂಪೆಯ ಅಂಗಡಿಯೊಂದ ಬಳಿ ಏಕಾಏಕಿ ಚಾಕುವಿನಿಂದ ಇರಿದು, ಬಳಿಕ ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ದಂಪತಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದನ್ನೂ ಓದಿ | Road Accident | ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಡಿಕ್ಕಿ; ಸ್ಥಳದಲ್ಲೇ ಸವಾರ ಸಾವು, ಮತ್ತೊಬ್ಬ ಗಂಭೀರ

Exit mobile version