Prayoga : ಹೈಸ್ಕೂಲ್‌ ವಿದ್ಯಾರ್ಥಿಗಳನ್ನು ವಿಜ್ಞಾನಿಗಳಾಗಿಸಲು ವಿಶೇಷ ಪ್ರಯೋಗ, ಏನಿದು? Vistara News

ಬೆಂಗಳೂರು ಗ್ರಾಮಾಂತರ

Prayoga : ಹೈಸ್ಕೂಲ್‌ ವಿದ್ಯಾರ್ಥಿಗಳನ್ನು ವಿಜ್ಞಾನಿಗಳಾಗಿಸಲು ವಿಶೇಷ ಪ್ರಯೋಗ, ಏನಿದು?

Prayoga ಬೆಂಗಳೂರಿನ ಪ್ರಯೋಗ ಸಂಸ್ಥೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮಕ್ಕಳು ತಮ್ಮ ಸಂಶೋಧನಾ ವಿಚಾರಗಳನ್ನು ಇತ್ತೀಚೆಗೆ ಮಂಡಿಸಿದರು.

VISTARANEWS.COM


on

prayoga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇತ್ತೀಚೆಗೆ ಭಾರತದ ಚಂದ್ರಯಾನ 2 ಜಗತ್ತಿನ ಗಮನ ಸೆಳೆದಾಗ ಮತ್ತೊಂದು ಸಂಗತಿಯೂ ಬೆಳಕಿಗೆ ಬಂದಿತ್ತು. ಇಸ್ರೊದ ಹಲವಾರು ವಿಜ್ಞಾನಿಗಳು ಕನ್ನಡ ಮಾಧ್ಯಮದಲ್ಲಿ ಓದಿದವರಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ದಿನ ಮೈಲಿಗಟ್ಟಲೆ ನಡೆದು ಶಾಲೆಯ ವಿದ್ಯಾಭ್ಯಾಸವನ್ನು ಕೈಗೊಂಡಿದ್ದರು. ಕಷ್ಟಪಟ್ಟು ವಿಜ್ಞಾನಿಗಳಾಗಿ ಭವಿಷ್ಯ ರೂಪಿಸಿಕೊಂಡಿದ್ದರು. ಆದರೆ ಈಗಲೂ ಗ್ರಾಮೀಣ ಪ್ರದೇಶದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ವಿಜ್ಞಾನಿಗಳನ್ನಾಗಿಸಲು ಉಚಿತವಾಗಿ ತರಬೇತಿ ನೀಡಿದರೆ ಎಷ್ಟು ಒಳ್ಳೆಯದು ಎನ್ನುತ್ತೀರಾ. ರಾಜ್ಯದಲ್ಲಿ ಅಂಥ ಅತ್ಯಂತ ಅಪರೂಪದ ಪ್ರಯೋಗ (Prayoga) ನಡೆಯುತ್ತಿದೆ!

ಪೇಟೆಂಟ್‌ ಹಂತ ಪಡೆಯುವ ಸಾಧ್ಯತೆ: ಬೆಂಗಳೂರಿನ ಪ್ರಯೋಗ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಶನ್ ರಿಸರ್ಚ್, ಕನಕಪುರ ರಸ್ತೆಯಲ್ಲಿರುವ ತನ್ನ ಕೇಂದ್ರದಲ್ಲಿ ನಾನಾ ಪ್ರೌಢ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಉಚಿತವಾಗಿ ವೈಜ್ಞಾನಿಕ ಸಂಶೋಧನೆಗಳ ಬಗ್ಗೆ ತರಬೇತಿ ಒದಗಿಸುತ್ತದೆ. ಮಕ್ಕಳ ಕೆಲವು ಸಂಶೋಧನೆಗಳು ಪೇಟೆಂಟ್‌ ಪಡೆಯುವ ಹಂತಕ್ಕೂ ಅಭಿವೃದ್ಧಿಯಾಗಿವೆ. ಪ್ರಯೋಗ ಸಂಸ್ಥೆಯ ಅನ್ವೇಷಣಾ 2023 ಕಾರ್ಯಕ್ರಮದ ಎರಡನೆಯ ಆವೃತ್ತಿ ಇತ್ತೀಚೆಗೆ ನಡೆಯಿತು. ಬೆಂಗಳೂರಿನ ವಿವಿಧ ಶಾಲೆಗಳ 9 ಮತ್ತು ಅದಕ್ಕಿಂತ ಮೇಲ್ಪಟ್ಟ ತರಗತಿಗಳ 14 ವಿದ್ಯಾರ್ಥಿಗಳು 5 ವೈಜ್ಞಾನಿಕ ಸಂಶೋಧನೆಗಳನ್ನು ಪ್ರದರ್ಶಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಾರ್ವಜನಿಕ ಬೋಧನಾ ಆಯುಕ್ತರಾದ ಕಾವೇರಿ ಬಿ.ಬಿ ಅವರು ಮಾತನಾಡಿ, “ ಯುವ ಸಂಶೋಧಕರು ವಿಶ್ವಾಸದಿಂದ ತಮ್ಮ ಸಂಶೋಧನೆಗಳನ್ನು ಪ್ರಸ್ತುತಪಡಿಸಿರುವುದನ್ನು ನೋಡಿ ಸಂತೋಷವಾಗಿದೆ. ವಿಜ್ಞಾನ ಸಂಶೋಧನೆಯನ್ನು ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಮತ್ತು ಸಮಾಜದ ಹಿಂದುಳಿದ ವರ್ಗದ ವಿದ್ಯಾರ್ಥಿನಿಯರಿಗೆ ಕೊಂಡೊಯ್ಯುವ ಪ್ರಯೋಗದ ಉಪಕ್ರಮ ಸ್ವಾಗತಾರ್ಹ ಎಂದರು.

ಪ್ರೊ.ಪಿ.ಆರ್ ಕೃಷ್ಣಸ್ವಾಮಿ ಮಾತನಾಡಿ, “ ವಿಜ್ಞಾನ ಮತ್ತು ವೈಜ್ಞಾನಿಕ ಸಂಶೋಧನೆ ಮನುಷ್ಯನ ವಂಶವಾಹಿಗಳಲ್ಲಿದೆ. ಇದಕ್ಕೆ ಬೇಕಾಗಿರುವುದು ಅನ್ವೇಷಣಾ ಪ್ರವೃತ್ತಿ ಮತ್ತು ವಿಭಿನ್ನವಾಗಿ ಯೋಚಿಸುವ ಸಾಮರ್ಥ್ಯ. ಆರ್ಥಿಕವಾಗಿ ಹಿಂದುಳಿದ ಮತ್ತು ಅವಕಾಶ ವಂಚಿತ ಪ್ರದೇಶಗಳಿಂದ ಬಂದಿರುವ ವಿದ್ಯಾರ್ಥಿಗಳ ಉತ್ಸಾಹ ಗಮನಿಸಿದರೆ, ಸಂಶೋಧನೆಯ ಕ್ಷೇತ್ರದಲ್ಲಿ ಭಾರತದ ಭವಿಷ್ಯ ಬಹಳ ಉಜ್ವಲವಾಗಿದೆ ಎಂದು ನಾನು ಹೇಳಬಲ್ಲೆ ಎಂದು ಹೇಳಿದರು.
ಪ್ರಯೋಗ ಸಂಸ್ಥೆಯ ಮುಖ್ಯ ಮಾರ್ಗದರ್ಶಕ ಡಾ. ಎಚ್. ಎಸ್. ನಾಗರಾಜ ಮಾತನಾಡಿ, ವಿಶ್ವದರ್ಜೆಯ ಸಂಶೋಧಕರು ಮತ್ತು ಚಿಂತನಶೀಲ ನಾಯಕರುಗಳಾಗಬಲ್ಲ ವಿದ್ಯಾರ್ಥಿಗಳನ್ನು ಭಾರತ ಹೊಂದಿದೆ. ಅವರು ಅತ್ಯಂತ ಸಮರ್ಥ ವಿಜ್ಞಾನಿಗಳಾಗಿ ರೂಪುಗೊಳ್ಳಲು ನಾವು ಅವರ ಸಾಮರ್ಥ್ಯಗಳನ್ನು ಗುರುತಿಸಿ ಪೋಷಿಸಬೇಕು. ವಿಶ್ವದ ಕೆಲವೇ ದೇಶಗಳಲ್ಲಿ ವಿದ್ಯಾರ್ಥಿಗಳು ಸ್ವತಂತ್ರ ಸಂಶೋಧನಾ ಯೋಜನೆಗಳಲ್ಲಿ ಭಾಗವಹಿಸಲು ಅವಕಾಶಗಳನ್ನು ಒದಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ನಗರ ಪ್ರದೇಶಗಳಿಂದ ಮಾತ್ರವಲ್ಲ, ಗ್ರಾಮೀಣ ಪ್ರದೇಶಗಳಿಂದ, ಅವಕಾಶ ವಂಚಿತ ವಿದ್ಯಾರ್ಥಿಗಳಿಗೆ ಸಂಶೋ ಧನಾ ಅವಕಾಶಗಳನ್ನು ವಿಸ್ತರಿಸುವ ಸಂಸ್ಥೆಗಳಲ್ಲಿ ಪ್ರಯೋಗವೂ ಒಂದಾಗಿದೆ ಎಂದು ತಿಳಿಸಿದರು. ಪ್ರಯೋಗ ಸಂಸ್ಥೆ ಅಭಿವೃದ್ಧಿಪಡಿಸಿರುವ 50 ಸರ್ಕಾರಿ ಶಾಲೆಗಳು ಸೇರಿದಂತೆ 70 ಶಾಲೆಗಳಿಗೆ ಒದಗಿಸಲಾಗುವ ವಿಶೇಷ ವಿಜ್ಞಾನ ಪ್ರಯೋಗಾಲಯ ಸಾಮಗ್ರಿಗಳನ್ನು (Lab Solutions) ಅನಾವರಣಗೊಳಿಸಲಾಯಿತು. ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ ಸುಮಂಗಲಾ ಭಾಗವಹಿಸಿದ್ದರು.

ಏನಿದು ಪ್ರಯೋಗ ಸಂಸ್ಥೆ? ರಾಜ್ಯದ ಸರ್ಕಾರಿ ಹಾಗೂ ಹಿಂದುಳಿದ ಶಾಲೆಗಳಲ್ಲಿನ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಂಶೋಧನೆ, ಸೃಜನಶೀಲತೆಗೆ ಉತ್ತೇಜನ ನೀಡಲು ಹಾಗೂ ಭವಿಷ್ಯದ ವಿಜ್ಞಾನಿಗಳನ್ನಾಗಿಸಲು ಅತ್ಯಾಧುನಿಕ ತರಬೇತಿಯನ್ನು ಪ್ರಯೋಗ ಸಂಸ್ಥೆ ಉಚಿತವಾಗಿ ನೀಡುತ್ತದೆ. ಐಐಎಸ್ಸಿ ಸೇರಿದಂತೆ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಹಾಗೂ ಹಿರಿಯ ವಿಜ್ಞಾನಿಗಳು ಇಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವುದು ವಿಶೇಷ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಮುಂದಿನ 24 ಗಂಟೆಯಲ್ಲಿ ಥಂಡಿ ಗಾಳಿ ಬೀಸಲಿದ್ದು, ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Rain alert
Koo

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಹಗುರ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.

ಮೇಲ್ಮೈ ಗಾಳಿಯೊಂದಿಗೆ ಮಳೆ ಸಾಥ್‌

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Cash shower: ಶರತ್ ಬಚ್ಚೇಗೌಡ ಮೇಲೆ ನೋಟುಗಳ ಸುರಿಮಳೆಗೈದ ಅಭಿಮಾನಿಗಳು!

Sharath Bachegowda: ಶಾಸಕ ಶರತ್ ಬಚ್ಚೇಗೌಡ ಹುಟ್ಟುಹಬ್ಬ ಆಚರಣೆ ವೇಳೆ ಹೂವಿನ ಜತೆಗೆ ಹಣದ ಮಳೆ ಸುರಿಸಿ, ಅಭಿಮಾನಿಗಳು ಜೈಕಾರ ಹಾಕಿದ್ದಾರೆ.

VISTARANEWS.COM


on

MLA Sharath Bachegowda
Koo

ಬೆಂಗಳೂರು ಗ್ರಾಮಾಂತರ: ಶಾಸಕ ಶರತ್ ಬಚ್ಚೇಗೌಡ ಹುಟ್ಟುಹಬ್ಬದಲ್ಲಿ ಝಣ ಝಣ ಕಾಂಚಾಣ ಸದ್ದು ಮಾಡಿದೆ. ತಮ್ಮ ನೆಚ್ಚಿನ ನಾಯಕನಿಗೆ ಅಭಿಮಾನಿಗಳು ಹೂವಿನ ಜತೆ ನೋಟುಗಳ ಸುರಿಮಳೆಗೈದಿರುವುದು (Cash shower) ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ನಡೆದಿದೆ.

ಶಾಸಕ ಶರತ್ ಬಚ್ಚೇಗೌಡ ಹುಟ್ಟುಹಬ್ಬ ಆಚರಣೆ ವೇಳೆ ಹೂ ಜತೆಗೆ ಹಣದ ಮಳೆ ಸುರಿಸಿ, ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ಹಣದ ಮಳೆ ಸುರಿಯುತ್ತಿದ್ದಂತೆ ಎಚ್ಚೆತ್ತ ಶಾಸಕ ಶರತ್ ಬಚ್ಚೇಗೌಡ, ಕೆಳಕ್ಕೆ‌ ಬಿದ್ದ ಹಣವನ್ನ ಸ್ವತಃ ಕೈಗೆತ್ತಿಕೊಂಡು ಜನರಿಗೆ ನೀಡಿದ್ದಾರೆ. ನಂತರ ಹಣ ಹಾಕದಂತೆ ಅಭಿಮಾನಿಗಳಿಗೆ ತಾಕೀತು ಮಾಡಿದ್ದಾರೆ.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೃಹತ್‌ ಸೇಬಿನ ಹಾರದೊಂದಿಗೆ ಶಾಸಕ ಶರತ್ ಬಚ್ಚೇಗೌಡ ಅವರಿಗೆ ಸ್ವಾಗತ ಕೋರಲಾಗಿದೆ. ಈ ವೇಳೆ ಹೂವಿನ ಜತೆಗೆ ನೋಟಿನ ಮಳೆ ಸುರಿಸಲಾಗಿದೆ. ಆದರೆ, ಸಂಭ್ರಮಾಚರಣೆ ವೇಳೆ ನೋಟಿನ ಸುರಿಮಳೆ ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಹುಟ್ಟು ಹಬ್ಬವನ್ನು ಬೆಂಬಲಿಗರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡಿರುವ ಶರತ್ ಬಚ್ಚೇಗೌಡ ಅವರು ಮುತ್ಸಂದ್ರ ಮತ್ತು ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ಒಂದರಂತೆ 2 ಆಂಬ್ಯುಲೆನ್ಸ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಒಟ್ಟು 30 ಲಕ್ಷ ರೂ. ಮೌಲ್ಯದ ಎರಡು ಮಿನಿ ಆ್ಯಂಬುಲೆನ್ಸ್‌ಗಳನ್ನು ಶಾಸಕರು ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಹೈದರಾಬಾದ್​​​ನಲ್ಲಿ ಸಚಿವ ಶಿವಾನಂದ ಪಾಟೀಲ್‌ ಭಾಗವಹಿಸಿದ್ದ ನಡೆದ ವಿವಾಹ ಕಾರ್ಯಕ್ರಮದಲ್ಲಿ ನೋಟಿನ ಸುರಿಮಳೆಗೈದ ಘಟನೆ ನಡೆದಿತ್ತು. ಕವ್ವಾಲಿ ವೀಕ್ಷಿಸುತ್ತಿದ್ದ ವೇಳೆ ಸಚಿವ ಶಿವಾನಂದ ಪಾಟೀಲ್ ಮೇಲೆ ವ್ಯಕ್ತಿಯೊಬ್ಬರು ನೋಟುಗಳ ಮಳೆಗೈದಿದ್ದರು. ಆದರೆ, ಯಾವುದೇ ಪ್ರತಿರೋಧ‌ ತೋರದಿದ್ದ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ವಿರೋಧ ಪಕ್ಷಗಳ ನಾಯಕರು ಆಕ್ರೋಶ ಹೊರಹಾಕಿದ್ದರು. ರಾಜ್ಯದಲ್ಲಿ ಒಂದೆಡೆ ಬರಗಾಲವಿದ್ದರೆ, ಮತ್ತೊಂದೆಡೆ ನಾಡಿನ ಜನರಿಂದ ಲೂಟಿ ಮಾಡಿದ ಹಣದಲ್ಲಿ ಮಂತ್ರಿಗಳು ಮಜಾ ಉಡಾಯಿಸುತ್ತಿದ್ದಾರೆ ಎಂದು ವಿಪಕ್ಷಗಳು ಕಿಡಿಕಾರಿದ್ದವು. ಇದೀಗ ಶರತ್ ಬಚ್ಚೇಗೌಡ ಹುಟ್ಟುಹಬ್ಬದಲ್ಲಿ ನೋಟಿನ ಸುರಿಮಳೆಗೈದಿರುವುದು ಕಂಡುಬಂದಿದೆ.

ಇದನ್ನೂ ಓದಿ | Congress politics: ಮಧು ಬಂಗಾರಪ್ಪಗೆ ಅಹಂ ತಲೆಗೇರಿದೆ; ಕಾಂಗ್ರೆಸ್‌ ಶಾಸಕ ಬೇಳೂರು ವಾಗ್ದಾಳಿ

ತಮ್ಮ ಹುಟ್ಟು ಹಬ್ಬವನ್ನು ಬೆಂಬಲಿಗರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡ ಶರತ್ ಬಚ್ಚೇಗೌಡ ಅವರು ಮುತ್ಸಂದ್ರ ಮತ್ತು ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ಒಂದರಂತೆ 2 ಆಂಬುಲೆನ್ಸ್ಗಳನ್ನು ಕೊಡುಗೆಯಾಗಿ ನೀಡಿದರು. ಇನ್ನು ರೋಗಿಗಳ ಜೀವ ಉಳಿಸಲಿಕ್ಕೆ ಈ ಆಂಬುಲೆನ್ಸ್ ಸದ್ಬಳಕೆ ಆಗಲಿ ಎಂದು ಶಾಸಕ ಶರತ್ ಬಚ್ಚೇಗೌಡ ಹಾರೈಸಿದರು. ಒಟ್ಟು 30 ಲಕ್ಷ ರೂ. ಮೌಲ್ಯದ ಎರಡು ಮಿನಿ ಆ್ಯಂಬುಲೆನ್ಸ್‌ಗಳನ್ನು ವಿತರಣೆ ಮಾಡಿದ ನಂತರ, ಆಯಾ ಗ್ರಾಮ ಪಂಚಾಯತಿ ವತಿಯಿಂದ ಆ್ಯಂಬುಲೆನ್ಸ್‌ಗಳನ್ನು ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Road Accident : ಅತಿವೇಗ ತಂದ ಆಪತ್ತು; ಇಬ್ಬರ ಪ್ರಾಣ ಕಸಿದ ಅಪಘಾತಗಳು!

Road Accident : ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಉಸಿರು ಚೆಲ್ಲಿದ್ದರೆ, ಮತ್ತೊರ್ವ ಸ್ಥಿತಿ ಚಿಂತಾಜನಕವಾಗಿದೆ.

VISTARANEWS.COM


on

By

Road Accident In Karnataka
Koo

ಬೆಂಗಳೂರು: ಅತಿ ವೇಗ ಚಾಲನೆಯು ಚಾಲಕನೊಬ್ಬನ ಪ್ರಾಣವನ್ನೇ ಕಸಿದುಕೊಂಡಿದೆ. ಮಧ್ಯರಾತ್ರಿ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು (Road Accident) ಬರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಿರಣ್ (28) ಮೃತ ಚಾಲಕ.

ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 1.20ಕ್ಕೆ ಈ ಅಪಘಾತ ನಡೆದಿದೆ. ಮಹರಾಜ ಪ್ಯಾಲೇಸ್ ಹೋಟೆಲ್ ಕಡೆಯಿಂದ ರೀತು ಆಸ್ಪತ್ರೆ ಕಡೆ ಹೋಗುವಾಗ ಈ ಅಪಘಾತ ಸಂಭವಿಸಿದೆ. ಅತಿ ವೇಗ ಮತ್ತು ನಿರ್ಲಕ್ಷ್ಯತೆಯಿಂದ ಬಂದು ಫುಟ್ ಪಾತ್ ಮೇಲಿರುವ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಸಭಕ್ಕೆ ಕಿರಣ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

Car and goods Accident

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಘಟ್ಟಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವಾದ ಕಾರನ್ನು ವಶಕ್ಕೆ ಪಡೆದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Fire Accident : ಬೆಂಕಿಗೆ ಸಿಲುಕಿ ಸುಟ್ಟು ಕರಕಲಾದ ಹಸುಗಳು! ನಿಂತಲ್ಲೇ ಹೊತ್ತಿ ಉರಿದ ಲಾರಿ

ಕಾರು-ಗೂಡ್ಸ್‌ ವಾಹನ ಮುಖಾಮುಖಿ ಡಿಕ್ಕಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗೊಲ್ಲಹಳ್ಳಿ ಬಳಿ ಕಾರು ಮತ್ತು ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ವಾಹನಗಳು ಜಖಂ ಗೊಂಡಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದರೆ, ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.

car accident

ಶಿವಕುಮಾರ್( 32) ಮೃತ ದುರ್ದೈವಿ. ಅನಂತರಾಮ್( 37) ಗಾಯಾಳು. ಇವರಿಬ್ಬರು ಬೆಂಗಳೂರಿನ ಬಾಗಲುಗುಂಟೆ ನಿವಾಸಿಗಳಾಗಿದ್ದು, ಗಾಯಾಳು ಅನಂತ ರಾಮ್‌ಗೆ ಚಿಕಿತ್ಸೆ ಮುಂದುವರಿದಿದೆ. ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಹೋಗುವಾಗ ಅಪಘಾತ ನಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Leopard Death : ನಾಯಿಗಳ ದಾಳಿಯಿಂದ ಚಿರತೆ ಮರಿ ಸಾವು, ಇನ್ನೊಂದು ಕರೆಂಟ್‌ ಶಾಕ್‌ಗೆ ಬಲಿ

ಅಪಘಾತದಲ್ಲಿ ವ್ಯಕ್ತಿ ಸಾವು, ಕೊಲೆ ಶಂಕೆ

ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕಲಬುರಗಿ-ಶಹಾಪುರ ಹೆದ್ದಾರಿ ಬಳಿಯ ಮೂಡಬೂಳ ಬಳಿ ಘಟನೆ ನಡೆದಿದೆ. ಕಲಬುರಗಿ ಮೂಲದ ರಾಜು ಚವ್ಹಾಣ್ ಮೃತ ವ್ಯಕ್ತಿ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮೂಡಬೂಳ ಮುಖ್ಯ ಕಾಲುವೆ ಬಳಿ ಶವವಾಗಿ ಪತ್ತೆ ಆಗಿದೆ.

ಮೃತ ರಾಜು ಚವ್ಹಾಣ್ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ. ಹತ್ಯೆ ಮಾಡಿ ಶವ ಬೀಸಾಕಿದ್ದಾರೆ ಎಂದು ರಾಜು ಚವ್ಹಾಣ್ ಪತ್ನಿಯಿಂದ ದೂರು ನೀಡಿದ್ದಾರೆ. ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Fire Accident : ಬೆಂಕಿಗೆ ಸಿಲುಕಿ ಸುಟ್ಟು ಕರಕಲಾದ ಹಸುಗಳು! ನಿಂತಲ್ಲೇ ಹೊತ್ತಿ ಉರಿದ ಲಾರಿ

Fire Accident : ಪ್ರತ್ಯೇಕ ಕಡೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸಾವು- ನೋವು ಸಂಭವಿಸಿದೆ. ದನದ ಕೊಟ್ಟಿಗೆಯಲ್ಲಿ ಆಕಸ್ಮಿಕ ಅಗ್ನಿ ಅವಘಡದಿಂದ ಜಾನುವಾರುಗಳು ಮೃತಪಟ್ಟಿದ್ದರೆ ಮತ್ತೊಂದು ಕಡೆ ಲಾರಿ ಹಾಗೂ ಜ್ಯುವೆಲರಿ ಶಾಪ್‌ವೊಂದು ಸುಟ್ಟು ಕರಕಲಾಗಿದೆ.

VISTARANEWS.COM


on

By

Fire Accident Cows die in fire
Koo

ಆನೇಕಲ್‌/ಕೊಪ್ಪಳ/ಧಾರವಾಡ : ದನದ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ, ಬೆಂಕಿಯ ಮಧ್ಯೆ (Fire Accident) ಸಿಕ್ಕಿಹಾಕಿಕೊಂಡ ದನಗಳು ಪ್ರಾಣ ಕಳೆದುಕೊಂಡಿವೆ. ಒಂಬತ್ತು ಹಸುಗಳು ದಾರುಣವಾಗಿ ಮೃತಪಟ್ಟಿದ್ದರೆ, ಉಳಿದ ಐದು ಹಸುಗಳ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಹೊರವಲಯ ಹುಳಿಮಂಗಲ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಕೊಟ್ಟಿಗೆಯಲ್ಲಿ ಹದಿನೈದು ಹಸುಗಳನ್ನು ಕಟ್ಟ ಹಾಕಲಾಗಿತ್ತು. ಅದೇ ಕೊಟ್ಟಿಗೆಯಲ್ಲಿ ಎರಡು ಬೈಕ್ ನಿಲ್ಲಿಸಲಾಗಿತ್ತು. ಶುಕ್ರವಾರ ರಾತ್ರಿ ಎರಡು ಗಂಟೆ ಸುಮಾರಿಗೆ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಬೆಂಕಿ ಆವರಿಸಿದ್ದು, ಒಂಬತ್ತು ಹಸುಗಳು ಸುಟ್ಟು ಕರಕಲಾಗಿವೆ. ಬದುಕುಳಿದಿರುವ ಐದು ಹಸುಗಳಿಗೆ ಗಂಭೀರವಾದ ಸುಟ್ಟಗಾಯಗಳಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿವೆ. ಕೊಟ್ಟಿಗೆಯಲ್ಲಿದ್ದ ಬೈಕ್‌ಗಳು ಬೆಂಕಿಗಾಹುತಿ ಆಗಿದೆ. ಸ್ಥಳಕ್ಕೆ ಪಶುವೈದ್ಯರ ತಂಡ ಹಾಗೂ ಜಿಗಣಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Trains cancelled : ಮೂರು ತಿಂಗಳು ಈ ಮಾರ್ಗಗಳ ರೈಲು ಸಂಚಾರ ರದ್ದು!

ಕೊಪ್ಪಳದಲ್ಲಿ ಹೊತ್ತಿ ಉರಿದ ಜ್ಯುವೆಲರಿ ಶಾಪ್‌

ಅಗ್ನಿ ಅವಘಡ ಸಂಭವಿಸಿ ಜ್ಯುವೆಲರಿ ಶಾಪ್‌ವೊಂದು ಹೊತ್ತಿ ಉರಿದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಮೂರು ಅಂತಸ್ತಿನ ಕಟ್ಟಡವು ಸಂಪೂರ್ಣ ಬೆಂಕಿಗಾಹುತಿ ಆಗಿದೆ. ಅಪಾರ ಪ್ರಮಾಣದ ಚಿನ್ನಾಭರಣವು ಬೆಂಕೆಗಾಹುತಿ ಆಗಿದೆ. ಗಂಗಾವತಿ ನಗರದ ಗಣೇಶ ಸರ್ಕಲ್‌ನಲ್ಲಿರುವ ಕೆಜಿಪಿ ಜ್ಯುವೆಲರಿ ಶಾಪ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ದೌಡಿಯಿಸಿದ್ದು, ಸತತ ಕಾರ್ಯಾಚರಣೆಯಿಂದ ಬೆಂಕಿ ತಹಬದಿಗೆ ಬಂದಿದೆ.

Fire Accident
ಕ್ಷಣಾರ್ಧದಲ್ಲೇ ಹೊತ್ತಿ ಉರಿದ ಲಾರಿ

ಧಾರವಾಡದಲ್ಲಿ ಕಂಟೆನರ್ ಹೊತ್ತು ಹೊರಟಿದ್ದ ಲಾರಿಯಲ್ಲಿ‌ ದಿಢೀರ್‌ ಬೆಂಕಿ

ಕಂಟೆನರ್ ಹೊತ್ತು ಹೊರಟಿದ್ದ ಲಾರಿಯಲ್ಲಿ‌ ದಿಢೀರ್‌ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಮಂಡ್ಯಾಳ್ ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಗೋವಾದಿಂದ ಧಾರವಾಡ ಕಡೆ ಬರುತ್ತಿದ್ದಾಗ ಏಕಾಏಕಿ‌ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ತಕ್ಷಣ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಕೆಳಗಿಳಿದು ಓಡಿದಿದ್ದಾರೆ.

ಲಾರಿಗೆ ಬೆಂಕಿ‌ ಹತ್ತಿದ ಕಾರಣ ಅಳ್ನಾವರ ರಸ್ತೆ ಕೆಲ ಕಾಲ ಬಂದ್ ಆಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Sangeetha is more cruel than Vinay drinking tonic task bigg boss
ಬಿಗ್ ಬಾಸ್21 mins ago

BBK SEASON 10: ವಿನಯ್‌ಗಿಂತ ಸಂಗೀತಾಗೆ ಕೊಬ್ಬು ಜಾಸ್ತಿ; ಟಾನಿಕ್ ಕುಡಿಸಿದ ಮೇಲೆ ಒದ್ದಾಟ-ಗುದ್ದಾಟ!

Kichcha Sudeep Save Snehith Gowda And Michel From Eliminations
ಬಿಗ್ ಬಾಸ್35 mins ago

BBK SEASON 10: ಬಿಗ್‌ ಬಾಸ್‌ ಇತಿಹಾಸದಲ್ಲೇ ಮೊದಲು; ಈ ವಾರ ನೋ ಎಲಿಮಿನೇಶನ್‌! ಸ್ನೇಹಿತ್- ಮೈಕಲ್‌ ಸೇಫ್‌!

Kodagu News
ಕರ್ನಾಟಕ1 hour ago

ಕೊಡಗು ಜಿಲ್ಲೆಯ ಹೊಳೆಯಲ್ಲಿ ತಾಯಿ, ಇಬ್ಬರು ಯುವತಿಯರ ಶವ ಪತ್ತೆ; ಸಾವಿಗೆ ಕಾರಣ?

Ishwar Sahu
ದೇಶ2 hours ago

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

Jyothi Reddy CEO of American Company
ಅಂಕಣ2 hours ago

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Venkataramana Reddy
ದೇಶ2 hours ago

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

Complaint to CM Siddaramaiah
ಕರ್ನಾಟಕ2 hours ago

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

women enjoying in rain
ಉಡುಪಿ3 hours ago

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Mizoram Election Result
ದೇಶ3 hours ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ3 hours ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ4 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ21 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌