Accident Case : ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ; ಎರಡು ಹೋಳಾಯ್ತು ತಲೆ ಬುರುಡೆ - Vistara News

ಬೆಂಗಳೂರು ಗ್ರಾಮಾಂತರ

Accident Case : ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ; ಎರಡು ಹೋಳಾಯ್ತು ತಲೆ ಬುರುಡೆ

Accident Case : ಹೆದ್ದಾರಿ ಮೇಲೆ ಹಾದು ಹೋಗಿರುವ ರೈಲ್ವೆ ಬ್ರಿಡ್ಜ್ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬಿದ್ದ ರಭಸಕ್ಕೆ ಅಪರಿಚಿತನ ತಲೆಯು ಎರಡು ಹೋಳಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

Accident Case In Anekal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಆನೇಕಲ್: ರೈಲ್ವೆ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ (Accident Case) ನಡೆದಿದೆ.

ಏ.15ರ ಸೋಮವಾರ ಬೆಳಗ್ಗೆ 7.30 ರ ಸುಮಾರಿಗೆ ಚಲಿಸುತ್ತಿದ್ದ ರೈಲಿನಿಂದ ಆಯಾತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಬ್ರಿಡ್ಜ್ ಮೇಲಿಂದ ಹೆದ್ದಾರಿ ರಸ್ತೆಗೆ ಬಿದ್ದ ರಭಸಕ್ಕೆ ವ್ಯಕ್ತಿಯ ತಲೆಯು ಎರಡು ಸೀಳು ಬಿಟ್ಟಿತ್ತು. ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೆದ್ದಾರಿಯಲ್ಲಿ ಸಂಭವಿಸಿದ ಈ ದುರಂತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸೂರ್ಯನಗರ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಗುರುತು ಪತ್ತೆ ಆಗಿಲ್ಲ.

ಇದು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ. ಆಂಬ್ಯುಲೆನ್ಸ್‌ ಮೂಲಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Fire Accident : ಶಾರ್ಟ್ ಸಕ್ಯೂರ್ಟ್‌ನಿಂದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ; 4 ವರ್ಷದ ಮಗು ಉಸಿರುಗಟ್ಟಿ ಸಾವು

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಒಬ್ಬ ಯುವಕ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Bike Accident) ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ಭಾನುವಾರ ನಡೆದಿದೆ. ಬೈಕ್‌ನಲ್ಲಿ ಹೋಗುತ್ತಿದ್ದಾಗ ಪೈಪ್‌ಲೇನ್‌ಗಾಗಿ ತೋಡಿದ್ದ ಗುಂಡಿಗೆ ಬೈಕ್ ಸಮೇತ ಬಿದ್ದು ಯುವಕ ಕೊನೆಯುಸಿರೆಳೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವರ್ಷದ‌ ಹಿಂದೆ ಉಲ್ಲಾಳ ಕೆರೆ ಬಳಿ ಇದೇ ರೀತಿಯ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಕಾರ್ಮಿಕನೊಬ್ಬ ಮೃತಪಟ್ಟಿದ್ದ. ಭಾನುವಾರ ಜಲಮಂಡಳಿ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೆಂಗೇರಿ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಂಡಿ ಪಕ್ಕ ಯಾವುದೇ ಬ್ಯಾರಿಕೇಡ್ ಅಳವಡಿಸದಿರುವುದು ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ | Chitradurga News: ಮನೆ ಮುಂದೆ ನಾಯಿ ಹೊಲಸು ಮಾಡಿದ್ದನ್ನು ಪ್ರಶ್ನಿಸಿದ ವ್ಯಕ್ತಿಗೆ ಚೂರಿ ಇರಿತ!

ಟಯರ್‌ ಬ್ಲಾಸ್ಟ್‌ ಆಗಿ ಟಿಪ್ಪರ್ ಪಲ್ಟಿ; ರಸ್ತೆ ಬದಿ ನಿಂತಿದ್ದ ಒಂದೇ ಕುಟುಂಬದ ಐವರ ದುರ್ಮರಣ

ಬಾಗಲಕೋಟೆ: ಟಯರ್‌ ಬ್ಲಾಸ್ಟ್‌ ಆಗಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿದ ಘಟನೆ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಹೊಲದ ಕೆಲಸ ಮುಗಿಸಿ ರಸ್ತೆ ಪಕ್ಕ ನಿಂತಿದ್ದವರ ಮೇಲೆ ಟಿಪ್ಪರ್‌ ಪಲ್ಟಿಯಾಗಿದ್ದರಿಂದ ದುರಂತ ನಡೆದಿದೆ.

ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (70), ಪತ್ನಿ ಯಲ್ಲವ್ವ ಯಂಕಪ್ಪ ತೋಳಮಟ್ಟಿ (60), ಮಗ ಪುಂಡಲೀಕ ಯಂಕಪ್ಪ ತೋಳಮಟ್ಟಿ (35), ಮಗಳು ನಾಗವ್ವ ಅಶೋಕ ಬಮ್ಮಣ್ಣವರ (45), ಅಳಿಯ ಅಶೋಕ ನಿಂಗಪ್ಪ ಬಮ್ಮಣ್ಣವರ (50) ಮೃತರು. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ಬೀಳಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಬೆಂಗಳೂರು

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣಗೊಂಡಿದೆ.

VISTARANEWS.COM


on

Bengaluru airport

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ಟರ್ಮಿನಲ್‌ 2 ನಲ್ಲಿ ‘ಟೈಗರ್ ವಿಂಗ್ಸ್’ ಶೀರ್ಷಿಕೆಯ “ವರ್ಟಿಕಲ್‌ ಗಾರ್ಡನ್‌”ನನ್ನು ಅನಾವರಣಗೊಳಿಸಲಾಗಿದೆ. ಫ್ರೆಂಚ್ ದೇಶದ ರಾಷ್ಟ್ರೀಯ ವೈಜ್ಞಾನಿಕ ಸಂಶೋಧನಾ ಕೇಂದ್ರದೊಂದಿಗೆ ಗುರುತಿಸಿಕೊಂಡಿರುವ ವಿಶ್ವದರ್ಜೆಯ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್ ಬ್ಲಾಂಕ್ ಅವರ ಸಹಯೋಗದೊಂದಿಗೆ ಈ ವರ್ಟಿಕಲ್‌ ಗಾರ್ಡನ್‌ನನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ.

ಟರ್ಮಿನಲ್ 2 (T2) ನಲ್ಲಿ ನಿರ್ಮಿಸಿರುವ ಈ ವರ್ಟಿಕಲ್‌ ಗಾರ್ಡನ್‌ 30 ಅಡಿ ಎತ್ತರ ಹಾಗೂ 160 ಅಡಿ ಅಗಲ (2 ಗೋಡೆಗಳಿದ್ದು, ಪ್ರತಿ ಗೊಡೆ 80 ಅಡಿ ಅಗಲವಿದೆ)ದಲ್ಲಿ ವಿಸ್ತೃತವಾಗಿ ಬೆಳೆಸಲಾಗಿದೆ. ಪ್ಯಾಟ್ರಿಕ್‌ ಬ್ಲಾಂಕ್‌ ಅವರು ಭಾರತದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ವರ್ಟಿಕಲ್‌ ಗಾರ್ಡನ್‌ ನಿರ್ಮಿಸಿದ್ದು ಇದೇ ಮೊದಲು, ಮೂಲಭೂತ ಸೌಕರ್ಯಗಳೊಂದಿಗೆ ಪ್ರಕೃತಿಯನ್ನು ಸೆರೆ ಹಿಡಿದಂತ ಸುಂದರ ದೃಶ್ಯಾವಳಿಂದ ಈ ಗೋಡೆ ಉದ್ಯಾನ ಕಂಗೊಳಿಸಲಿದೆ. ಈ ಮೂಲಕ ಟಿ2 ನ ಅಡಿಪಾಯದ ಮೂಲತತ್ವವನ್ನು ಉದಾರಿಸಿದೆ. ‘ಟೈಗರ್ ವಿಂಗ್ಸ್’ ನ ಈ ವರ್ಟಿಕಲ್‌ ಗಾರ್ಡನ್‌ 153 ವಿವಿಧ ಜಾತಿಗಳ 15,000 ಕ್ಕೂ ಹೆಚ್ಚು ಸಸ್ಯಗಳಿಂದ ನಿರ್ಮಿಸಲಾಗಿದೆ. ಪ್ಯಾಟ್ರಿಕ್‌ ಬ್ಲಾಂಕ್‌ ಅವರು ಕರ್ನಾಟಕ ಸೇರಿದಂತೆ ಸುತ್ತಮುತ್ತಲಿನ ಪಶ್ಚಿಮ ಘಟ್ಟಗಳ ಕಾಡುಗಳಿಗೆ ತೆರಳಿ, ಅಪರೂಪದ ಆಯ್ದ ಸಸ್ಯ ಪ್ರಭೇದಗಳನ್ನು ಸಂಗ್ರಹಿಸಿ, ಈ ಗೋಡೆ ಉದ್ಯಾನವನ್ನು ನಿರ್ಮಿಸಿದ್ದಾರೆ.

The largest vertical garden has been unveiled at Terminal 2 of the Kempegowda International Airport

ಈ ಗೋಡೆ ಉದ್ಯಾನವನ್ನು ಮಣ್ಣು ರಹಿತವಾಗಿ ನಿರ್ಮಿಸಲಾಗಿದ್ದು, ಈ ಟೆಕ್ನಾಲಜಿಯನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಲಾಗಿದೆ. ಮತ್ತೊಂದು ವಿಶೇಷವೆಂದರೆ, ನಮ್ಮ ರಾಷ್ಟ್ರೀಯ ಪ್ರಾಣಿ ಹುಲಿಯ ಶಕ್ತಿ ಮತ್ತು ಅದರ ಗಾಂಭೀರ್ಯತೆಯನ್ನು ಪ್ರತಿಬಿಂಬಿಸುವಂತೆ ಈ ಗೋಡೆ ಉದ್ಯಾನ ನಿರ್ಮಾಣಗೊಂಡಿದೆ. ಅದಕ್ಕಾಗಿಯೇ ಈ ವರ್ಟಿಕಲ್‌ ಗಾರ್ಡನ್‌ಗೆ ‘ಟೈಗರ್ ವಿಂಗ್ಸ್’ ಎಂದು ಹೆಸರಿಡಲಾಗಿದೆ. ಶತಾವರಿ ಸಸ್ಯಗಳು ವಿಮಾನದ ರೆಕ್ಕೆಗಳ ಸಿಲೂಯೆಟ್ ಅನ್ನು ಗುರುತಿಸುತ್ತದೆ. ಇನ್ನು, ಕೆಂಪು, ಕಿತ್ತಳೆ, ಹಳದಿ ಮತ್ತು ಬಿಳಿ ಇಕ್ಸೋರಾ ಹೂವುಗಳು ಹುಲಿ ಬಣ್ಣಗಳನ್ನು ಪ್ರತಿನಿಧಿಸುತ್ತವೆ.

ಟೈಗರ್ ವಿಂಗ್ಸ್‌

  • ಭಾರತದಲ್ಲಿ ಪ್ಯಾಟ್ರಿಕ್ ಬ್ಲಾಂಕ್‌ ಅವರ ಅತಿದೊಡ್ಡ ಗೋಡೆ ಉದ್ಯಾನ ಇದೇ ಮೊದಲು
  • 4000 ಚದರ ಅಡಿಗಳಲ್ಲಿ ನಿರ್ಮಿಸಲಾಗಿದೆ.
  • 15000 ಗಿಡಗಳನ್ನು ಒಳಗೊಂಡಿದೆ
  • 150ಕ್ಕೂ ಹೆಚ್ಚು ಜಾತಿಯ ಸಸ್ಯಗಳು ಇವೆ.
  • ಮಣ್ಣುರಹಿತ ತಂತ್ರಜ್ಞಾನವನ್ನು ಬಳಸಲಾಗಿದೆ.


ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಮಾತನಾಡಿ, “ಬೆಂಗಳೂರಿನಲ್ಲಿ ಸುಸ್ಥಿರತೆ, ಕಲಾತ್ಮಕತೆ ಮತ್ತು ತಾಂತ್ರಿಕ ಪ್ರಗತಿಯಲ್ಲಿ ಹೊಸ ದೃಷ್ಟಿಕೋನವನ್ನು ತರಲು ಬಯಸಿದ್ದೇವೆ. ಬಿಎಲ್‌ಆರ್‌ ವಿಮಾನ ನಿಲ್ದಾಣದಲ್ಲಿ ಪ್ಯಾಟ್ರಿಕ್‌ನ ಅವರ ಹೊಸ ವಿಧಾನದಿಂದ ಪ್ರಕೃತಿಯ ಮಡಿಲಿನಲ್ಲಿ ಸಸ್ಯಗಳನ್ನು ಬೆಳೆಯುವಂತೆಯೇ ಬೆಳೆಯಲು ಅನುವು ಮಾಡಿಕೊಟ್ಟಿದೆ. ಟರ್ಮಿನಲ್ 2 ನಾಲ್ಕು ಮೂಲ ತತ್ವಗಳಿಂದ ನಿರ್ಮಿಸಲ್ಪಟ್ಟಿದೆ, ಉದ್ಯಾನವದಲ್ಲಿ ಟರ್ಮಿನಲ್, ತಂತ್ರಜ್ಞಾನ, ಕಲೆ ಮತ್ತು ಸುಸ್ಥಿರತೆ ಈ ನಾಲ್ಕು ತತ್ವಗಳ ಮೂಲಕ ಬೆಂಗಳೂರಿನ ನೈಜ ಸೌಂದರ್ಯವನ್ನು ಪ್ರತಿಬಿಂಬಿಸುತ್ತದೆ ಎಂದರು.

The largest vertical garden has been unveiled at Terminal 2 of the Kempegowda International Airport

ಹೆಸರಾಂತ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್ ಬ್ಲಾಂಕ್ ಮಾತನಾಡಿ, “ಟೈಗರ್ ವಿಂಗ್ಸ್” ಪ್ರಕೃತಿ ಮತ್ತು ವಾಸ್ತುಶಿಲ್ಪದ ನಡುವಿನ ಸಂಬಂಧವನ್ನು ಸಾಕಾರಗೊಳ್ಳುವ ಸ್ವಪ್ನವಾಗಿದೆ. ವಿಶೇಷವಾದ ಭಾವನೆಯನ್ನು ಬಳಸಿಕೊಳ್ಳುವ ಮೂಲಕ, ಪ್ರಕೃತಿಯ ಮಡಿಲಿನಲ್ಲಿ ಸಸ್ಯಗಳು ಬೆಳೆಯುವ ವಾತಾವರಣವನ್ನು ಇಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಯು ಕೇವಲ ವಿಮಾನ ನಿಲ್ದಾಣದ ದೃಶ್ಯವನ್ನು ಇನ್ನಷ್ಟು ವರ್ಧಿಸುತ್ತದೆ. ಅಷ್ಟೇ ಅಲ್ಲದೆ, ಪ್ರಯಾಣಿಕರಿಗೆ ತಮ್ಮ ಪ್ರಯಾಣದ ಅನುಭವವನ್ನು ಇನ್ನಷ್ಟು ಉಲ್ಲಾಸಗೊಳಿಸಲಿದೆ. ನಮ್ಮ ಸುತ್ತಲೂ ಪರಿಸರವೇ ತುಂಬಿರುವ ಸಂತಸ ನೀಡಲಿದೆ.

ಈ ವರ್ಟಿಕಲ್‌ ಉದ್ಯಾನವು ಹೆಚ್ಚು ನೀರಿನ-ಸಮರ್ಥವಾಗಿದೆ, ಎಚ್ಚರಿಕೆಯಿಂದ ವಿನ್ಯಾಸಗೊಳಿಸಿದ ನೀರಾವರಿ ವ್ಯವಸ್ಥೆಯನ್ನು ಬಳಸಲಾಗಿದ್ದು, ಪದರಗಳ ಮೂಲಕ ಸಸ್ಯಗಳಿಗೆ ಸರಿಯಾದ ಪ್ರಮಾಣದ ನೀರನ್ನು ಒದಗಿಸುತ್ತದೆ. ಈ ವಿಧಾನವು ಹೆಚ್ಚು ಸಮರ್ಥನೀಯವಾಗಿದ್ದು, ನೈಸರ್ಗಿಕ ಬಂಡೆ ಅಥವಾ ಕಲ್ಲಿನ ಗೋಡೆಗಳ ಮೇಲೆ ಸಸ್ಯಗಳು ಹೇಗೆ ಬೆಳೆಯುತ್ತವೆ ಎಂಬುದನ್ನು ತೋರಿಸುತ್ತದೆ. ಇಂತಹ ಸ್ಥಳಗಳಲ್ಲಿ ನೀರು ಮತ್ತು ಪೋಷಕಾಂಶಗಳು ಕಡಿಮೆ ಇದ್ದರೂ ಸಸ್ಯಗಳು ಸೊಂಪಾಗಿ ಬೆಳೆಯುತ್ತವೆ. ಬ್ಲಾಂಕ್‌ನ ಅವರ ಹೈಡ್ರೋಪೋನಿಕ್ ವಿಧಾನವು ವೈವಿಧ್ಯಮಯವಾದ ಸಸ್ಯ ಪ್ರಭೇದಗಳನ್ನು ಕಾಂಪ್ಯಾಕ್ಟ್ ಲಂಬ ಜಾಗದಲ್ಲಿ ಸಹಬಾಳ್ವೆ ಮಾಡಲು ಅನುವು ಮಾಡಿಕೊಡುತ್ತದೆ, ಇದು ಗಾಳಿಯ ಗುಣಮಟ್ಟವನ್ನು ಹೆಚ್ಚಿಸಿ, ತಂಪಾದ, ಹೆಚ್ಚು ಆಹ್ಲಾದಕರ ವಾತಾವರಣಕ್ಕೆ ಕೊಡುಗೆ ನೀಡುವ ಅಭಿವೃದ್ಧಿ ಹೊಂದುತ್ತಿರುವ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ.

ಈ ಸಸ್ಯಶಾಸ್ತ್ರೀಯ ಮೇರುಕೃತಿಯು ಭಾರತದ ವನ್ಯಜೀವಿ ಪರಂಪರೆಯನ್ನು ವೈಭವೀಕರಿಸುವುದರಲ್ಲೆ, ಆಧುನಿಕ, ಪರಿಸರ ಸ್ನೇಹಿ ಸ್ಥಳವಾಗಿ BLR ವಿಮಾನ ನಿಲ್ದಾಣದ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ, ಕರ್ನಾಟಕದ ಜೀವವೈವಿಧ್ಯದ ಶ್ರೀಮಂತಿಕೆಯನ್ನು ಬೆಂಗಳೂರಿನ ಪ್ರಮುಖ ಟ್ರಾವೆಲ್ ಹಬ್‌ ಆಗಿ ಪರಿವರ್ತಿಸುತ್ತದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಬೆಂಗಳೂರು ಗ್ರಾಮಾಂತರ

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Murder Case : ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಮ್ಮನನ್ನು ಅಣ್ಣನೇ ದೊಣ್ಣೆಯಿಂದ ಹೊಡೆದು ಕೊಂದು ಹಾಕಿದ್ದಾನೆ. ಸರ್ಜಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

Murder Case

ಆನೇಕಲ್: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ (Murder Case) ನಡೆದಿದೆ. ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಪಂಡಿತನ ಅಗ್ರಹಾರದಲ್ಲಿ ಘಟನೆ ನಡೆದಿದೆ. ಆನಂದ (27) ಕೊಲೆಯಾದವರು.

ಮಣಿಕಂಠ(32) ಕೊಲೆ ಮಾಡಿದ ಆರೋಪಿ ಆಗಿದ್ದಾನೆ. ತಮಿಳುನಾಡು ಮೂಲದ ಈ ಅಣ್ಣ-ತಮ್ಮಂದಿರು ಪಂಡಿತನ ಅಗ್ರಹಾರದಲ್ಲಿ ಗಾರೆ ಕೆಲಸಕ್ಕಾಗಿ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಆನಂದ್ ತಂದೆ-ತಾಯಿ ಜತೆಗೆ ವಾಸವಿದ್ದರೆ, ಇತ್ತ ಮಣಿಕಂಠ ಮಂಡ್ಯದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ.

ನಿನ್ನೆ ತಂದೆ-ತಾಯಿಯನ್ನು ನೋಡಿಕೊಂಡು ಹೋಗಲು ಮಣಿಕಂಠ ಬಂದಿದ್ದ. ಆನಂದ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಸುಖಾ ಸುಮ್ಮನೆ ತಂದೆ, ತಾಯಿ, ಅಣ್ಣನ ಜತೆಗೆ ಕಿರಿಕ್ ತೆಗೆಯುತ್ತಿದ್ದ. ಕಳೆದ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕುಡಿದು ಬಂದು ಆನಂದ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಮಣಿಕಂಠ ಆನಂದ್‌ಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆನಂದ್‌ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

Murder case

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರ್ಜಾಪುರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆರೋಪಿ ಮಣಿಕಂಠನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Latest1 hour ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest17 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest18 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest19 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking19 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest20 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest22 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest23 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ23 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest1 day ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌