Assault Case : ಬೈಕ್ ಗುದ್ದಿದ್ದನ್ನು ಪ್ರಶ್ನಿಸಿದಕ್ಕೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡಿದ ಪುಡಿರೌಡಿಗಳು - Vistara News

ಬೆಂಗಳೂರು ಗ್ರಾಮಾಂತರ

Assault Case : ಬೈಕ್ ಗುದ್ದಿದ್ದನ್ನು ಪ್ರಶ್ನಿಸಿದಕ್ಕೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡಿದ ಪುಡಿರೌಡಿಗಳು

Assault case : ಅತಿವೇಗವಾಗಿ ಬಂದಿದ್ದಲ್ಲದೇ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಇದನ್ನೂ ಪ್ರಶ್ನಿಸಿದ್ದಕ್ಕೆ ಸವಾರನಿಗೆ ಡ್ರ್ಯಾಗರ್‌ನಿಂದ ಅಟ್ಯಾಕ್‌ ಮಾಡಿದ್ದು, ಇದಕ್ಕೆ ಪ್ರತಿರೋಧ ತೋರುತ್ತಿದ್ದಂತೆ ಪೆಪ್ಪರ್ ಸ್ಪ್ರೇ ಹೊಡೆದು ಎಸ್ಕೇಪ್‌ ಆಗಿದ್ದಾರೆ.

VISTARANEWS.COM


on

assault Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ಬೆಂಗಳೂರು ಗ್ರಾಮಾಂತರದ ಆನೇಕಲ್‌ನಲ್ಲಿ ಪುಡಿ ರೌಡಿಗಳ (Assault Case) ಅಟ್ಟಹಾಸ ಹೆಚ್ಚಾಗುತ್ತಿದೆ. ಬೈಕ್ ಗುದ್ದಿದ್ದನ್ನು ಪ್ರಶ್ನಿಸಿದಕ್ಕೆ ಡ್ರ್ಯಾಗರ್‌ನಿಂದ ಡೆಡ್ಲಿ ಅಟ್ಯಾಕ್ ನಡೆಸಿದ್ದಾರೆ. ಆನೇಕಲ್ ಬಸ್ ನಿಲ್ದಾಣದ ಮುಂಭಾಗವೇ ಈ ಘಟನೆ ನಡೆದಿದೆ.

ಶನಿವಾರ ರಾತ್ರಿ ಆನೇಕಲ್ ಬಸ್ ನಿಲ್ದಾಣದ ಮುಂಭಾಗ ಆನೇಕಲ್ ಟೌನ್ ನಿವಾಸಿ ಮೋಹನ್ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಮೋಹನ್‌ ಬೈಕ್‌ನಲ್ಲಿ ಬರುವಾಗ ಅತಿ ವೇಗವಾಗಿ ಬೈಕ್‌ನಲ್ಲಿ ಬಂದ ಪುಡಿರೌಡಿಗಳು ಗುದ್ದಿದ್ದಾರೆ. ಇದನ್ನು ಪ್ರಶ್ನಿಸಿದ ಮೋಹನ್ ಮೇಲೆ ಏಕಾಏಕಿ ಅಟ್ಯಾಕ್ ಮಾಡಿದ್ದಾರೆ.

ತಮ್ಮ ಬಳಿಯಿದ್ದ ಡ್ರ್ಯಾಗರ್ ತೆಗೆದು ಮೋಹನ್‌ಗೆ ಬೀಸಿದ್ದಾರೆ. ಈ ವೇಳೆ ಅಲ್ಲಿದ್ದ ಜನರು ಪುಡಿರೌಡಿಗಳನ್ನು ಹಿಡಿದುಕೊಳ್ಳಲು ಮುಂದಾಗಿದ್ದಾರೆ. ಆಗ ಮೋಹನ್ ಸೇರಿದಂತೆ ಅಲ್ಲಿದ್ದ ಜನರ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹೊಡೆದು, ಡ್ರ್ಯಾಗರ್‌ನಿಂದ ಸಿಕ್ಕಸಿಕ್ಕವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದೇ ವೇಳೆ ಓರ್ವ ಪುಡಿ ರೌಡಿಯನ್ನು ಹಿಡಿದುಕೊಂಡಿದ್ದಾರೆ. ಮತ್ತೋರ್ವ ಅಲ್ಲಿಂದ ಪರಾರಿ ಆಗಿದ್ದಾನೆ. ಇದೆಲ್ಲವೂ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಗಾಯಗೊಂಡ ಮೋಹನ್‌ಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆನೇಕಲ್ ಭಾಗದಲ್ಲಿ ಕ್ಷುಲ್ಲಕ ಕಾರಣಗಳಿಗೆ ಕೊಲೆ, ಕೊಲೆ ಯತ್ನ ಪ್ರಕರಣಗಳು ನಡೆಯುತ್ತಿದೆ . ಸದ್ಯ ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಗುರಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಂದೇ ಬಿಟ್ಟರು

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನನ್ನು ಕೊಲೆ ಮಾಡಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಯ್ಸಳ ನಗರದ ಮನೋಜ್ (22) ಕೊಲೆಯಾದ ವ್ಯಕ್ತಿ. ಶನಿವಾರ ಮುಂಜಾನೆ 3 ಗಂಟೆಗೆ ಹೊಯ್ಸಳ ನಗರ ಮೂರನೇ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ಸದ್ಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ (Crime News).

ಘಟನೆ ವಿವರ

ಮನೋಜ್ ಮತ್ತು ಆತನ ಸ್ನೇಹಿತ ಆಂಟೋನಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ವ್ಯಕ್ತಿ ಮನೋಜ್‌ನನ್ನು ಗುರಾಯಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ. ಪರಿಸ್ಥಿತಿ ಕೈ ಮೀರಿ ಆರೋಪಿಗಳು ಮನೋಜ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಆರೋಪಿಗಳು ಚಾಕುವಿನಿಂದ ಮನೋಜ್ ಮತ್ತು ಆಂಟೋನಿಗೆ ಚುಚ್ಚಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮನೋಜ್‌ನನ್ನು ಕೂಡಲೇ ಸ್ನೇಹಿತರು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಮನೋಜ್ ಮೃತಪಟ್ಟಿದ್ದಾನೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿರುವ ರಾಮಮೂರ್ತಿನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ʼʼಹೊಯ್ಸಳ ನಗರದ 13 ಕ್ರಾಸ್‌ನಲ್ಲಿ ಮನೋಜ್ ಮತ್ತು ಸ್ನೇಹಿತರೊಂದಿಗೆ ನಡೆದುಕೊಂಡು ಬರುತ್ತಿದ್ದಾಗ ಅದೇ ಏರಿಯಾದ ಹುಡುಗರೊಂದಿಗೆ ಜಗಳ ನಡೆದಿದೆ. ಈ ವೇಳೆ ಆರೋಪಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಮನೋಜ್ ಸಾವನ್ನಪ್ಪಿದರೆ ಸ್ನೇಹಿತ ಆಂಟೋನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆʼʼ ಎಂದು ಪೊಲೀಸರು ತಿಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Guru Purnima 2024 : ವಿವಿಧೆಡೆ ಅದ್ಧೂರಿಯಾಗಿ ನೆರವೇರಿದ ಗುರುಪೂರ್ಣಿಮಾ ಮಹೋತ್ಸವ

Guru Purnima 2024 : ಗುರುಪೂರ್ಣಿಮಾ ಹಿನ್ನೆಲೆಯಲ್ಲಿ ನಗರ ವಿವಿಧೆಡೆ ಅದ್ಧೂರಿಯಾಗಿ ಮಹೋತ್ಸವ ನಡೆದಿದೆ. ಸಾಯಿಬಾಬಾ ಮಂದಿರಗಳಲ್ಲಿ ಭಕ್ತರಿಂದ ತುಂಬಿಹೋಗಿತ್ತು. ವ್ಯಾಸ ಪೂರ್ಣಿಮೆಯಂದು ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಕೈಗೊಳ್ಳಲಾಗಿದೆ.

VISTARANEWS.COM


on

By

Guru Purnima 2024 mahotsava celebrated in different parts of the country
Koo

ದೇವನಹಳ್ಳಿ/ಬಳ್ಳಾರಿ: ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಗುರುಪೂರ್ಣಿಮಾ (Guru Purnima 2024) ಮಹೋತ್ಸವ ಜತೆಗೆ ಸಾಯಿಬಾಬಾ ಮಂದಿರಗಳಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿರುವ ಶ್ರೀ ಸಾಯಿಬಾಬಾ ಸೇವಾ ಕೇಂದ್ರದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

ಸಾಯಿಬಾಬಾರ ಮೂರ್ತಿಗೆ ಬಿಳಿ ಗುಲಾಬಿ ಹಾಗೂ ಮುಸುಕಿನ ಜೋಳದಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಸುಮಾರು 10 ಸಾವಿರಕ್ಕೂ ಅಧಿಕ ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಂದ ಭಕ್ತಾರು ಆಗಮಿಸಿದ್ದರು. ಭಾನುವಾರ ಆಗಿದ್ದರಿಂದ ಮುಂಜಾನೆಯಿಂದಲೇ ಭಕ್ತರ ದಂಡು ಹರಿದು ಬಂದಿತ್ತು. ಬಂದಿದ್ದ ಎಲ್ಲಾ ಭಕ್ತಾಧಿಗಳಿಗೆ‌ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ಭಕ್ತಾಧಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

Guru Purnima 2024 mahotsava celebrated in different parts of the country

ಇನ್ನೂ ಬಳ್ಳಾರಿಯ ಬಾಲಾಂಜನೇಯ ಸ್ವಾಮಿ ಮಠದಲ್ಲಿ ಹರಿಹರಪುರದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾ ಸ್ವಾಮೀಜಿ ವ್ಯಾಸ ಪೂರ್ಣಿಮೆಯಂದು ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಕೈಗೊಂಡರು. ಇತ್ತ ಆಷಾಢ ಹುಣ್ಣಿಮೆ ಹಿನ್ನೆಲೆಯಲ್ಲಿ ಕೊಪ್ಪಳದ ಹುಲಗಿ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಹರಿದು ಬಂದಿದ್ದರು. ತುಂತುರು ಮಳೆಯ ಮಧ್ಯೆಯು ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀಹುಲಿಗೆಮ್ಮದೇವಿಯ ದರ್ಶನ ಪಡೆದರು.

ಇದನ್ನೂ ಓದಿ: Kiccha Sudeep: ಕನ್ನಡಿಗರ ಸ್ವಾಭಿಮಾನವೇ ಮುಖ್ಯ; ಫೋನ್ ಪೇ ಬ್ರ್ಯಾಂಡ್‌ ಅಂಬಾಸಿಡರ್ ಸ್ಥಾನ ತ್ಯಜಿಸುತ್ತಾರಾ ಕಿಚ್ಚ ಸುದೀಪ್?

ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

ಬೆಂಗಳೂರು: ಗುರು ಪೂರ್ಣಿಮೆ(Guru Purnima 2024) ಅಂಗವಾಗಿ ಇಂದು ಬಹುತೇಕರು ತಮ್ಮ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಗುರುಗಳ ಸೇವೆಯನ್ನು ಸ್ಮರಿಸುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ಪ್ರಮುಖ ಗುರುಗಳ ಕುರಿತ ಕಿರು ಪರಿಚಯವೊಂದು ಇಂತಿದೆ.

ರಮಾಕಾಂತ್‌ ಅಚ್ರೇಕರ್(ಸಚಿನ್ ತೆಂಡೂಲ್ಕರ್​ ಗುರು)


ಕ್ರಿಕೆಟ್‌ ದೇವರು ಎಂದು ಕರೆಯಲ್ಪಡುವ ಸಚಿನ್​ ತೆಂಡೂಲ್ಕರ್(Sachin Tendulkar)​ ವಿಶ್ವ ಕ್ರಿಕೆಟ್​ನಲ್ಲಿ ಹಲವು ಸಾಧನೆ ಮಾಡಲು ಕಾರಣ ಅವರ ಗುರು ರಮಾಕಾಂತ್‌ ಅಚ್ರೇಕರ್(Ramakant Achrekar). ಬಾಲ್ಯದಿಂದಲೇ ಅಚ್ರೇಕರ್ ಗರಡಿಯಲ್ಲಿ ಪಳಗಿದ ಸಚಿನ್​ ಇಂದು ವಿಶ್ವ ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುವಂತಾಗಿದೆ. 1932ರಲ್ಲಿ ಜನಿಸಿದ ಅಚ್ರೇಕರ್ ಮುಂಬೈ ಸ್ಥಳೀಯ ಕ್ರಿಕೆಟ್‍ನಲ್ಲಿ ಉತ್ತಮ ಆಟಗಾರರಾಗಿ ಹೆಸರು ಗಳಿಸಿದವರಾಗಿದ್ದರು. ಸಚಿನ್ ತೆಂಡೂಲ್ಕರ್ ಸೇರಿದಂತೆ ವಿನೋದ್ ಕಾಂಬ್ಳಿ, ಅಜಿತ್ ಆಗರ್ಕರ್, ಪ್ರವೀಣ್‌ ಆಮ್ರೆ, ಸಮೀರ್‌ ದಿಘೆ, ಬಲ್ವಿಂದರ್‌ ಸಿಂಗ್‌ ಸಂಧು ಸೇರಿದಂತೆ ಹಲವಾರು ಕ್ರಿಕೆಟಿಗರನ್ನು ದೇಶಕ್ಕೆ ಪರಿಚಯಿಸಿದ ಹೆಗ್ಗಳಿಕೆ ಅಚ್ರೇಕರ್ ಅವರದ್ದು.

Guru Purnima 2024


1990ರಲ್ಲಿ ಭಾರತ ಸರ್ಕಾರ ಅಚ್ರೇಕರ್ ಅವರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು.2010ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಇವರು ಭಾಜನರಾಗಿದ್ದರು. ಸಚಿನ್​ ಎಷ್ಟೇ ದೊಡ್ಡ ಖ್ಯಾತಿ ಗಳಿಸಿದರೂ ಕೂಡ ತಮ್ಮ ಗುರುವಿನ ತ್ಯಾಗವನ್ನು ಸದಾ ನೆನಪಿಸಿಕೊಳ್ಳುತ್ತಿರುತ್ತಾರೆ. ಅಚ್ರೇಕರ್ ಅಂತಿಮ ಸಂಸ್ಕಾರಕ್ಕೆ ಶವವನ್ನು ತೆಗೆದುಕೊಂಡು ಹೋಗುವ ವೇಳೆ ಪಾರ್ಥೀವ ಶರೀರಕ್ಕೆ ಸಚಿನ್‌ ತೆಂಡುಲ್ಕರ್‌ ಕೂಡ ಹೆಗಲು ಕೊಡುವ ಮೂಲಕ ಗುರುವಿನ ಮೇಲಿನ ಪ್ರೀತಿಯನ್ನು ಮೆರೆದಿದ್ದರು. ಅಚ್ರೇಕರ್ 2019ರಲ್ಲಿ ನಿಧನ ಹೊಂದಿದ್ದರು.

ಎಸ್. ಎಂ ಆರಿಫ್(ಗೋಪಿಚಂದ್‌ ಗುರು)


ಭಾರತ ಕಂಡ ಶ್ರೇಷ್ಠ ಬ್ಯಾಡ್ಮಿಂಟನ್‌ ಆಟಗಾರರಲ್ಲಿ ಪಿ.ಗೋಪಿಚಂದ್‌(Pullela Gopichand) ಕೂಡ ಒಬ್ಬರು. ಇವರನ್ನು ಈ ಮಟ್ಟಕ್ಕೆ ಬೆಳೆಸಿದ್ದ ಇವರ ಗುರುಗಳಾದ ಎಸ್. ಎಂ ಆರಿಫ್(coach SM Arif.). ಇವರ ಕೋಚಿಂಗ್ ಮಾರ್ಗದರ್ಶನದಲ್ಲೇ ಗೋಪಿಚಂದ್ 2001 ರಲ್ಲಿ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಓಪನ್ ಚಾಂಪಿಯನ್‌ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದು. 11 ವಯಸ್ಸಿನಲ್ಲಿಯೇ ಬ್ಯಾಡ್ಮಿಂಟನ್ ಗೀಳಿಗೆ ಬಿದಿದ್ದ ಗೋಪಿಚಂದ್‌ ಅವರನ್ನು ಶ್ರೇಷ್ಠ ಬ್ಯಾಡ್ಮಿಂಟನ್​ ಆಟಗಾರನಾಗಿ ಮಾಡಿದ್ದು ಅವರ ಕೋಚ್​ ಆರಿಫ್. ಇವರ ಮಾರ್ಗದಶದಲ್ಲಿ ಗೋಪಿಚಂದ್‌ ಕೇವಲ 18 ವರ್ಷ ವಯಸ್ಸಿರುವಾಗ ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಆಗಿ ಹೊಮ್ಮಿದ್ದರು. ಮೂರು ವರ್ಷದ ನಂತರ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಗೆದ್ದು ಬೀಗಿದ್ದರು. ಸತತವಾಗಿ ಐದು ವರ್ಷ ಅವರು ಆ ಪಟ್ಟವನ್ನು ಬೇರೆ ಯಾರಿಗೂ ಬಿಟ್ಟುಕೊಟ್ಟಿರಲಿಲ್ಲ.


ಚಾಂಪಿಯನ್ನರ ಗುರು ಗೋಪಿಚಂದ್‌


ಭಾರತ ಕಂಡ ಶ್ರೇಷ್ಠ ಬ್ಯಾಡ್ಮಿಂಟನ್‌ ಆಟಗಾರರಲ್ಲಿ ಪಿ.ಗೋಪಿಚಂದ್‌ ಕೂಡ ಒಬ್ಬರು. ಅವರು ಆಟಗಾರರಾಗಿ ಮಿಂಚಿದ್ದಕ್ಕಿಂತ ತರಬೇತುದಾರರಾಗಿ ಮೆರೆದಿದ್ದೇ ಹೆಚ್ಚು. ಅವರ ಗರಡಿಯಲ್ಲಿ ಸೈನಾ ನೆಹ್ವಾಲ್‌(Saina Nehwal) ಪಿ.ವಿ.ಸಿಂಧು(PV Sindhu), ಕೆ.ಶ್ರೀಕಾಂತ್‌, ಎಚ್‌.ಎಸ್‌.ಪ್ರಣಯ್‌, ಸಾಯಿ ಪ್ರಣೀತ್‌ರಂತಹ ಖ್ಯಾತ ಆಟಗಾರರು ಬೆಳಕಿಗೆ ಬಂದಿದ್ದು. ಇದರಲ್ಲಿ ಸೈನಾ ಮತ್ತು ಪಿವಿ ಸಿಂಧು ಪ್ರತಿಷ್ಠಿತ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ವಿಶ್ವಮಟ್ಟದಲ್ಲಿ ಭಾರತದ ಹೆಸರು ಬೆಳಗಿದ್ದೇ ಈ ತಾರೆಯರಿಂದ. ಭಾರತೀಯರು ಬ್ಯಾಡ್ಮಿಂಟನ್‌ನಲ್ಲಿ ಏನೆಲ್ಲ ಸಾಧಿಸಬಹುದೋ, ಅಷ್ಟೆಲ್ಲ ಸಾಧಿಸಿದ್ದಾರೆ. ಅದರ ಹಿಂದಿರುವುದು ಹೈದರಾಬಾದ್‌ನಲ್ಲಿರುವ ಗೋಪಿಚಂದ್‌ ಅಕಾಡೆಮಿ. ತರಬೇತುದಾರರಾಗಿ ಅಸಾಮಾನ್ಯ ಸಾಧನೆಯನ್ನೇ ಮಾಡಿದ ಕೀರ್ತಿ ಇವರದ್ದು.


ಸತ್ಪಾಲ್‌ ಸಿಂಗ್‌

ಒಲಿಂಪಿಕ್ಸ್‌ನಲ್ಲಿ ಎರಡು ಚಿನ್ನ ಗೆದ್ದಿರುವ ಸುಶೀಲ್‌ ಕುಮಾರ್(Sushil Kumar) ಮತ್ತು ಯೋಗೇಶ್ವರ ದತ್‌(Yogeshwar Dutt,) ಅವರನ್ನು ಭಾರತೀಯ ಕುಸ್ತಿಗೆ ಪರಿಚಯಿಸಿದ ಕೀರ್ತಿ ಮಾಜಿ ಕುಸ್ತಿಪಟು ಮತ್ತು ತರಬೇತುದಾರ ಸತ್ಪಾಲ್‌ ಸಿಂಗ್‌(Satpal Singh) ಅವರಿಗೆ ಸಲ್ಲುತ್ತದೆ. ಕುಸ್ತಿಪಟುವಾಗಿದ್ದ ಸತ್ಪಾಲ್‌ ಸಿಂಗ್‌, 1982 ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನ ಗೆದ್ದಿದ್ದರು. ಇದಕ್ಕೂ ಮುನ್ನ 1974ರ ಕೂಟದಲ್ಲಿ ಕಂಚು ಜಯಿಸಿದ್ದರು. ಭಾರತೀಯ ಕುಸ್ತಿಗೆ ನೀಡಿದ ಮಹೋನ್ನತ ಕೊಡುಗೆಗಾಗಿ ಅವರಿಗೆ 1983ರಲ್ಲಿ ‘ಪದ್ಮ ಶ್ರೀ’ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. 2009ರಲ್ಲಿ ‘ದ್ರೋಣಾಚಾರ್ಯ’ ಪ್ರಶಸ್ತಿಯೂ ಅವರಿಗೆ ಅರಸಿ ಬಂದಿತ್ತು.

Guru Purnima 2024


ಜಗದೀಶ್ ಸಿಂಗ್(ವಿಜೇಂದರ್ ಸಿಂಗ್ ಕೋಚ್​)


2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಅವರ ಕೋಚ್​ ಜಗದೀಶ್ ಸಿಂಗ್. ಕ್ರೀಡಾಪಟುವಾಗಿದ್ದ ಜಗದೀಶ್ ಸಿಂಗ್ ದೇಶಕ್ಕೆ ಶ್ರೇಷ್ಠ ಬಾಕ್ಸರ್​ಗಳನ್ನು ನೀಡಬೇಕು ಎನ್ನುವ ಉದ್ದೇಶದಿಂದ ತಮ್ಮ ಮನೆ ಮತ್ತು ಜಮೀನನ್ನು ಅಡಮಾನವಿಟ್ಟು ಗ್ರಾಮೀಣ ಬ್ಯಾಂಕ್‌ನಿಂದ ನಾಲ್ಕು ಲಕ್ಷ ಸಾಲ ಪಡೆದು ಬಾಕ್ಸಿಂಗ್​ ಕ್ಲಬ್ ಆರಂಭಿಸಿದ್ದರು. ಇದೇ ಕ್ಲಬ್​ನಲ್ಲಿ ಪಳಗಿದ ವಿಜೇಂದರ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದು ಸಂಭ್ರಮಿಸಿದ್ದರು. 2007 ರಲ್ಲಿ, ಭಾರತ ಸರ್ಕಾರವು ಜಗದೀಶ್​ ಸಿಂಗ್ ಅವರಿಗೆ ಪ್ರತಿಷ್ಠಿತ ದ್ರೋಣಾಚಾರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಇದನ್ನೂ ಓದಿ ರಾಜ ಮಾರ್ಗ ಅಂಕಣ : ಅಪವಾದ ಎಲ್ಲರ ಬದುಕಿನಲ್ಲಿಯೂ ಬರುತ್ತವೆ, ಅದನ್ನು ಮೀರಿ ನಿಲ್ಲುವುದು ಹೇಗೆ?


ರಾಹುಲ್ ದ್ರಾವಿಡ್​


ಆಟಗಾರನಾಗಿ ಮತ್ತು ಮಾರ್ಗದರ್ಶಕರಾಗಿ ಭಾರತದ ಕ್ರಿಕೆಟ್​ಗೆ ಅಪಾರ ಸೇವೆ ಸಲ್ಲಿಸಿದ್ದ ಕೀರ್ತಿ ರಾಹುಲ್​ ದ್ರಾವಿಡ್(Rahul Dravid)​ಗೆ ಸಲ್ಲುತ್ತದೆ. ಇವರು ಕರ್ನಾಟಕದವರು ಎಂಬುದು ಕನ್ನಡಿಗರ ಹೆಮ್ಮೆ. ಅಂಡರ್​-19 ಕೋಚ್​ ಆಗಿ, ಆ ಬಳಿಕ ಸೀನಿಯರ್​ ತಂಡದ ಕೋಚ್​ ಆಗಿ ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಹೆಗ್ಗಳಿಕೆ ದ್ರಾವಿಡ್​ ಅವರದ್ದಾಗಿದೆ. ಇಂದು ಭಾರತ ತಂಡದಲ್ಲಿ ಮಿಂಚುತ್ತಿರುವ ಹಲವು ಕ್ರಿಕೆಟ್​ ಆಟಗಾರರು ದ್ರಾವಿಡ್​ ಗರಡಿಯಲ್ಲೇ ಪಳಗಿದ ಆಟಗಾರರಾಗಿದ್ದಾರೆ. ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಸಾಧನೆಯ ಹಿಂದೆ ದ್ರಾವಿಡ್​ ಅವರ ಮಾರ್ಗದರ್ಶನ ಮುಖ್ಯವಾಗಿತ್ತು. ತಂಡ ಒಂದೇ ಒಂದು ಪಂದ್ಯ ಸೋಲದೆ ಕಪ್​ ಗೆದ್ದು ಇತಿಹಾಸ ನಿರ್ಮಿಸಿತ್ತು. ಒಬ್ಬ ಜಂಟಲ್ ಮ್ಯಾನ್ ಕ್ರಿಕೆಟರ್ ಆಗಿ, ಕ್ಯಾಪ್ಟನ್ ಆಗಿ, ಕೋಚ್ ಆಗಿ ಭಾರತೀಯ ಕ್ರಿಕೆಟನ್ನು ಶ್ರೀಮಂತಗೊಳಿಸಿದ ಅವರಿಗೆ ಭಾರತರತ್ನ ಪ್ರಶಸ್ತಿ(bharatha ratna award) ನೀಡಬೇಕು ಎನ್ನುವುದು ಹಲವು ಮಾಜಿ ಕ್ರಿಕೆಟಿಗರ ಆಗ್ರಹವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

Karnataka Rain : ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಬಹುತೇಕ ಕಡೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿವೆ. ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಮೃತಪಟ್ಟಿದೆ.

VISTARANEWS.COM


on

By

karnataka rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru News : ಓವರ್‌ ನೈಟ್‌ ಪಾರ್ಟಿ; ವಿರಾಟ್‌ ಕೊಹ್ಲಿ ಮಾಲಿಕತ್ವದ ಪಬ್‌ ಸೇರಿ 10ಕ್ಕೂ ಹೆಚ್ಚು ಪಬ್‌ಗಳ ಮೇಲೆ ಎಫ್‌ಐಆರ್‌

ದ್ವೀಪದಂತೆ ಆದ ಮಂಡಕಳಲೆ ಗ್ರಾಮ

ಶಿವಮೊಗ್ಗದಲ್ಲಿ ಮಳೆಯಾರ್ಭಟಕ್ಕೆ ಮಂಡಕಳಲೆ ಗ್ರಾಮ ದ್ವೀಪದಂತೆ ಆಗಿದೆ. ಜತೆಗೆ ಎರಡು ಮನೆಗಳು ನೆಲಸಮವಾಗಿದ್ದು, ಕುಟುಂಬಸ್ಥರು ಕಂಗಲಾಗಿದ್ದಾರೆ. ಪ್ರಕಾಶ್ ಹಾಗೂ ಜಯಲಕ್ಷ್ಮಿ ಎಂಬುವವರ ಮನೆ ನೆಲಸಮವಾಗಿದೆ. ಜಿಲ್ಲಾಡಳಿತ ಮಂಡಕಳಲೆ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ ನಿರಾಶ್ರಿತರಿಗೆ ಕಾಳಜಿ ಕೇಂದ್ರ ಸ್ಥಾಪನೆ ಮಾಡಿದೆ. ಇನ್ನೂ ಸಚಿವ ಮಧುಬಂಗಾರಪ್ಪ ಪ್ರತಿ ಕುಟುಂಬಕ್ಕೆ 5 ಸಾವಿರ ವೈಯಕ್ತಿಕ ಪರಿಹಾರ ನೀಡಿದ್ದು, ಮನೆ ಕಳೆದು ಕೊಂಡವರಿಗೆ 5 ಲಕ್ಷ ರೂ. ಹಣ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾನಲೆ ಗ್ರಾಮದಲ್ಲಿ ಅಪಾಯ ಮಟ್ಟ ಮೀರಿ ವರದಾ ನದಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸೇತುವೆ ಮುಳಗಡೆಯಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸಂಪರ್ಕಕ್ಕೆ ಅಡಚಣೆ ಉಂಟಾಗಿದೆ.

ಇತ್ತ ವರದಾ ನದಿಯಲ್ಲಿ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಹಾನಗಲ್ ತಾಲೂಕಿನಲ್ಲಿ ಹಲವು ಸೇತುವೆ ಮುಳುಗಡೆಯಾಗಿದೆ. ಬಾಳಂಬೀಡ, ಅರೆಲಕಮಾಪುರ ಸಂಪರ್ಕ ಸೇತುವೆ ಮುಳುಗಡೆ ಆಗಿದ್ದರಿಂದ ಹತ್ತಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ನೂರಾರು ಎಕರೆ ಬೆಳೆ ನೀರುಪಾಲಾಗಿದೆ. ದೇವಸ್ಥಾನ, ವಿದ್ಯುತ್ ಕಂಬ, ವಿದ್ಯುತ್ ಟ್ರಾನ್ಸ್ ಫಾರ್ಮರ್, ರೈತರ ಪಂಪ್ ಸೆಟ್‌ಗಳು ನೀರುಪಾಲಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Karnataka Rain : ವ್ಯಾಪಕ ಮಳೆಯಿಂದ ಸಾವು-ನೋವು ಮುಂದುವರಿದಿದ್ದು, ಚಿಕ್ಕೋಡಿಯಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ. ಹಾಗಾದರೆ ಯಾವ್ಯಾವ ಜಿಲ್ಲೆಯಲ್ಲಿ ಏನೇನು ಅನಾಹುತ ಸಂಭವಿಸಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka Rain
Koo

ಚಿಕ್ಕೋಡಿ: ಶನಿವಾರ ರಾತ್ರಿಯಿಡಿ ಸುರಿದ ಭಾರಿ ಮಳೆಗೆ (Karnataka Rain) ಮನೆ ಗೋಡೆ ಕುಸಿದು ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕೋಡಿಯ ನಿಪ್ಪಾಣಿ ನಗರದ ಜತ್ರಾಟ್ ವೇಸ್‌ನಲ್ಲಿ ಗೋಡೆ ಕುಸಿದು ತಿರುಪತಿ ಹತ್ಕರ (45) ಎಂಬುವವರು ಮೃತಪಟ್ಟಿದ್ದಾರೆ.

ತಿರುಪತಿ ತಗಡಿನ ಶೆಡ್‌ನಲ್ಲಿ ವಾಸವಾಗಿದ್ದರು. ಊಟ ಮುಗಿಸಿ ನಿದ್ರೆ ಜಾರಿದಾಗ ತಡರಾತ್ರಿ 2:30ರ ಸುಮಾರು ಪಕ್ಕದ ಗೋಡೆ ಕುಸಿದಿದೆ. ಈ ವೇಳೆ ಗಂಭೀರ ಗಾಯಗೊಂಡ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಹಸೀಲ್ದಾರ್‌, ಉಪ ವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಹಾವೇರಿಯಲ್ಲೂ ಕುಸಿದು ಬಿದ್ದ ಮನೆ

ಹಾವೇರಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ರಾಣೇಬೆನ್ನೂರ ತಾಲೂಕಿನ ನೂಕಾಪುರ ಗ್ರಾಮದಲ್ಲಿ ರುದ್ರಪ್ಪ ಚೌವ್ಹಾಣ್ ಎನ್ನುವವರಿಗೆ ಸೇರಿದ ಮನೆ ಕುಸಿದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನೂ ರುದ್ರಪ್ಪ ಮನೆ ಕಳೆದುಕೊಂಡು ಕಂಗಲಾಗಿದ್ದಾರೆ.

ಚಿಕ್ಕಮಗಳೂರಲ್ಲಿ ನೆಲಕಚ್ಚುತ್ತಿವೆ ಮನೆಗಳು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಮನೆಗಳು ಕುಸಿಯುತ್ತಿವೆ. ಭಾರೀ ಗಾಳಿ, ಮಳೆಗೆ ಮನೆ ಗೋಡೆ ಕುಸಿದು, ಚಾವಣೆ ನೆಲಕ್ಕೆ ಕುಸಿಯುತ್ತಿದೆ. ದಿನ್ಯನಿತ್ಯ ಬಳಸುವ ಅಗತ್ಯವಸ್ತುಗಳು ಮಣ್ಣು ಪಾಲಾಗುತ್ತಿವೆ. ಹಳುವಳ್ಳಿ ಗ್ರಾಮದ ತಾರಿಕೊಂಡ ಉಮಾ ರಮೇಶ್ ಎಂಬುವವರ ಮನೆಗೆ ಹಾನಿಯಾಗಿದೆ. ಮನೆ‌ ಕುಸಿತದಿಂದ ಕಂಗಾಲಾಗಿರುವ ಉಮಾ ರಮೇಶ್ ಕುಟುಂಬದವರು ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸದ್ಯ ಮನೆ ಇಲ್ಲದೆ ಕೊಟ್ಟಿಗೆಯಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: Drowned in water : ಉಕ್ಕಿ ಹರಿಯುತ್ತಿದ್ದ ತುಂಗಭದ್ರ ನದಿಯಲ್ಲಿ ಕೊಚ್ಚಿ ಹೋದ ಯುವಕ

ಪ್ರವಾಹದ ಎಚ್ಚರಿಕೆ

ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕೆ.ಆರ್.ಎಸ್ ಜಲಾಶಯದಿಂದ 50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಾನಗಳಿಗೆ ತೆರಳಲು ಸೂಚನೆ ನೀಡಿದ್ದಾರೆ.

ಮೈದುಂಬಿ ಹರಿಯುತ್ತಿರುವ ತುಂಗಾಭದ್ರಾ

ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ದಾವಣಗೆರೆಯ ಹರಿಹರದ ಬಳಿ ತುಂಗಾಭದ್ರ ನದಿ ಮೈದುಂಬಿ ಹರಿಯುತ್ತಿದೆ. ತುಂಗಾ ಜಲಾಶಯದಿಂದ 70 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಹರಿಹರ ಭಾಗದಲ್ಲಿ ಮೈದುಂಬಿ ಹರಿಯುತ್ತಿದೆ. ತುಂಗಾ ಆರತಿ ಮಂಟಪದ ಮೆಟ್ಟಿಲು ಸಂಪೂರ್ಣ ಜಲಾವೃತಗೊಂಡಿದೆ. ನೀರಿನ ಮಟ್ಟ 12 ರಿಂದ 13 ಮೀಟರ್ ಏರಿಕೆಯಾದರೆ ಜಿಲ್ಲೆಯ 38 ಗ್ರಾಮಗಳು ಮುಳುಗಡೆ ಆಗುವ ಸಾಧ್ಯತೆ ದೆ. ಹೀಗಾಗಿ ಜಿಲ್ಲೆಯ ಹೊನ್ನಾಳಿಯ ಬಾಲರಾಜ್ ಘಾಟ್, ಹರಿಹರದ ಗಂಗಾ ನಗರದಲ್ಲಿ ಆರೈಕೆ ಕೇಂದ್ರ ತೆರೆಯಲು ಜಿಲ್ಲಾಡಳಿತದಿಂದ ಸೂಚನೆ ನೀಡಿದೆ. ರಾಘವೇಂದ್ರ ಮಠದ ಹಿಂಬದಿಯ ಪೂಜಾ ಮಂಟಪ ಜಲಾವೃತವಾಗುವ ಸಾಧ್ಯತೆ ಇದೆ. ಇನ್ನೂ ಮಹಿಳೆಯರು ತುಂಗಭದ್ರಾ ನದಿಗೆ ಗಂಗಾ ಪೂಜಾ ಮಾಡುತ್ತಿದ್ದಾರೆ. ಈಗಾಗಲೇ ಹರಿಹರದ ಗಂಗಾ ನಗರದ ಮೂವತ್ತಕ್ಕೂ ಅಧಿಕ ಮನೆಗಳು ಮುಳುಗಡೆ ಆಗುವ ಸಾಧ್ಯತೆ ಇದ್ದು, ಗಂಗಾ ನಗರ ನಿವಾಸಿಗಳಿಗೆ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ.

ಜಮೀನಿಗೆ ನುಗ್ಗಿದ ನೀರು

ಕಾಲುವೆ ನೀರು ಜಮೀನಿಗೆ ನುಗ್ಗಿ ಬೆಳೆ ಜಲಾವೃತಗೊಂಡಿದೆ. ಕಾಲುವೆ ಸಮರ್ಪಕವಾಗಿ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಟ್ಟಿರುವ ವೇಳೆ ಜಮೀನಿಗೆ ನುಗ್ಗಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ನಾಗಯ್ಯ ಹಿರೇಮಠ ಎಂಬುವರ ಜಮೀನಿಗೆ ಕಾಲುವೆ ನೀರು ನುಗ್ಗಿದೆ. 8 ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದ ರೈತ ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ರಾಜ್ಯದ ವಿವಿಧೆಡೆ ಮುಂದುವರಿದ ಮಳೆಯ ಅಬ್ಬರ; ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ

Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

VISTARANEWS.COM


on

Karnataka Rain
Koo

ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ (Karnataka Rain).

ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಶಿವಮೂರ್ತಿ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದು ನಾಲ್ಕು ಮಂದಿಗೆಗೆ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೂರ್ತಿ, ಪತ್ನಿ ಸೇರಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಆರೋಗ್ಯ ವಿಚಾರಿಸಿದ್ದಾರೆ.

ಹಾಸನಕ್ಕೆ ಇಂದು ಕುಮಾರಸ್ವಾಮಿ, ಆರ್‌.ಅಶೋಕ್‌ ಭೇಟಿ

ಹಾಸನ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದು (ಜುಲೈ 21) ಹಾಸನಕ್ಕೆ ಭೇಟಿ ನೀಡಿ ಮಳೆ ಹಾನಿಯನ್ನು ಪರಿಶೀಲಿಸಲಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಲೋಕಸಭಾ ಚುನಾವಣೆ ನಂತರ‌ ಮೊದಲ ಬಾರಿಗೆ‌ ಎಚ್‌ಡಿಕೆ ತವರಿಗೆ ಆಗಮಿಸಲಿದ್ದು, ಸಕಲೇಶಪುರ‌ ತಾಲೂಕಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಮಳೆಯಿಂದ ರಸ್ತೆ ಕುಸಿದಿರುವ, ಹಾನಿಯಾಗಿರುವ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.

ಎಲ್ಲಿಗೆಲ್ಲ ಭೇಟಿ?

ಸಕಲೇಶಪುರ ತಾಲೂಕಿನ‌ ಕೊಲ್ಲಹಳ್ಳಿ, ದೊಡ್ಡತಪ್ಲು‌ ಸೇರಿದಂತೆ ಅನೇಕ ಭಾಗಗಳಿಗೆ ಎಚ್‌ಡಿಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ‌ಹೆದ್ದಾರಿ 75ರಲ್ಲಿ ಆಗಿರೋ ಅವಾಂತರ, ಶಿರಾಡಿ ಘಾಟ್‌ನಲ್ಲಾದ ಹಾನಿಯನ್ನು ವೀಕ್ಷಿಸಲಿದ್ದಾರೆ. ಬಳಿಕ ಮಳೆ‌ ಅನಾಹುತದ ಸಂಕಷ್ಟದಲ್ಲಿರೋ ರೈತರ ಸಮಸ್ಯೆ ಆಲಿಸಲಿದ್ದಾರೆ. ಜಿಲ್ಲೆಗೆ ಆಗಮಿಸಲಿರು ತಮ್ಮ ನಾಯಕನ್ನು ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಆರ್.ಅಶೋಕ್ ಪ್ರವಾಸ

ಹಾಸನ ಜಿಲ್ಲೆಯಲ್ಲಿ ಇಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಕೂಡ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಹಾಸನ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಕಲೇಶಪುರ ತಾಲೂಕಿನ‌ ಹಲವು ಪ್ರದೇಶಗಳಿಗೆ ತೆರಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಪರಿಹಾರ ಕ್ರಮದ ಬಗ್ಗೆ ಚರ್ಚಿಸಲಿರುವ ಅಶೋಕ್ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿರೋ‌ ಸ್ಥಳಗಳ ಪರಿಶೀಲನೆ ನಡೆಸಲಿದ್ದಾರೆ.

ರಸ್ತೆ ಪಕ್ಕದಲ್ಲಿಯೇ ನಿಂತ ನೂರಾರು ಲಾರಿಗಳು

ಬೆಳಗಾವಿ: ಪಶ್ಚಿಮ‌ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಶಿಥಿಲವಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಲಾರಿಗಳನ್ನು ತಡೆದು ನಿಲ್ಲಿಸಲಾಗಿದೆ. ಚೋರ್ಲಾ ಮಾರ್ಗವಾಗಿ ಬೆಳಗಾವಿಗೆ ಬರುವ ವಾಹನಗಳನ್ನು ಅಧಿಕಾರಿಗಳು ತಡೆದಿದ್ದು, ಇದರಿಂದ ಕಳೆದ 24 ಗಂಟೆಗಳಿಂದ ಸರಕು ಹೊತ್ತು ನೂರಾರು ಲಾರಿಗಳು ನಿಂತಲ್ಲಿಯೇ ನಿಂತಿವೆ. ಏಕಾಏಕಿ ಭಾರಿ ವಾಹನಗಳನ್ನು ತಡೆದಿದ್ದರಿಂದ ಲಾರಿ ಚಾಲಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆ ಬಂದ್ ಮಾಡುವುದನ್ನು ಅಧಿಕಾರಿಗಳು ಮೊದಲೇ ಹೇಳಬೇಕಿತ್ತು. ಏಕಾಏಕಿ ಬಂದ್ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು ಎಂದು ಚಾಲಕರು ಪ್ರಶ್ನಿಸಿದ್ದಾರೆ. ಲಾರಿಯಲ್ಲಿರುವ ಸರಕೆಲ್ಲ ಮಳೆಯಲ್ಲಿ ನೆನೆದು ಹೋಗುವ ಭೀತಿಯೂ ಚಾಲಕರನ್ನು ಕಾಡುತ್ತಿದೆ.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Continue Reading
Advertisement
VVS Laxman
ಕ್ರೀಡೆ43 seconds ago

VVS Laxman: ಲಕ್ನೋ ತಂಡದ ಕೋಚ್​ ಆಗಲಿದ್ದಾರೆ ವಿವಿಎಸ್​ ಲಕ್ಷ್ಮಣ್!

Tharun Sudhir marriage updates reveal on 21st July
ಸ್ಯಾಂಡಲ್ ವುಡ್6 mins ago

Tharun Sudhir: ಡೈರೆಕ್ಟರ್​ ತರುಣ್ ಸುಧೀರ್ ರಿಯಲ್ ಲೈಫ್ ಹೀರೋಯಿನ್ ರಿವೀಲ್‌ಗೆ ಡೇಟ್ ಫಿಕ್ಸ್..!

Pakistan Army
ವಿದೇಶ8 mins ago

Pakistan Army: ಭಾರತದ ಗಡಿಯಲ್ಲಿ ಉಗ್ರರಿಗೆ ಪಾಕ್ ಸೇನೆಯಿಂದಲೇ ತರಬೇತಿ, ಮಾರ್ಗದರ್ಶನ; ಮತ್ತೊಂದು ಕಳ್ಳಾಟ ಬಯಲು

Guru Purnima 2024 mahotsava celebrated in different parts of the country
ಬೆಂಗಳೂರು ಗ್ರಾಮಾಂತರ20 mins ago

Guru Purnima 2024 : ವಿವಿಧೆಡೆ ಅದ್ಧೂರಿಯಾಗಿ ನೆರವೇರಿದ ಗುರುಪೂರ್ಣಿಮಾ ಮಹೋತ್ಸವ

Paris Olympics 2024
ಪ್ರಮುಖ ಸುದ್ದಿ32 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

Viral Video
ವಿದೇಶ33 mins ago

Viral Video: ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಯುವಕ ಅಮೆರಿಕದಲ್ಲಿ ಗುಂಡೇಟಿಗೆ ಬಲಿ; ವಿಡಿಯೋ ಫುಲ್‌ ವೈರಲ್‌

Jasmine Bhasin says her corneas got damaged
ಸಿನಿಮಾ34 mins ago

Jasmin Bhasin: ಲೆನ್ಸ್‌ ಧರಿಸಿ ಎಡವಟ್ಟು; ಕಣ್ಣು ಕಳೆದುಕೊಂಡ್ರಾ ಖ್ಯಾತ ನಟಿ?

Women's T20 World Cup
ಕ್ರೀಡೆ41 mins ago

Women’s T20 World Cup: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ​ಸ್ಥಳಾಂತರ ಸಾಧ್ಯತೆ!

karnataka rain
ಮಳೆ53 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

Actor Naresh Shares Emotional Video About His Baby And Taged Director Nag Ashwin
ಟಾಲಿವುಡ್1 hour ago

Actor Naresh: ನನ್ನ ಬೇಬಿಯನ್ನು ದಯವಿಟ್ಟು ಹುಡುಕಿಕೊಡಿ ಎಂದು ಗಳಗಳನೇ ಅತ್ತ ನಟ ನರೇಶ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌