Site icon Vistara News

ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

hang

ನೆಲಮಂಗಲ: ಬಾಲಕನೊಬ್ಬ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕು ಕಡಬಗೆರೆ ಗ್ರಾಮದಲ್ಲಿ ನಡೆದಿದೆ.

ಪೃಥ್ವಿರಾಜ್ (12) ಮೃತ ಬಾಲಕ. ಈತ ಕಡಬಗೆರೆ ನಿವಾಸಿ ವಿಜಯ್ ಕುಮಾರ್ ಮತ್ತು ಸವಿತಾ ದಂಪತಿಗಳ ಮಗ. ಕಡಬಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದ. ಶಾಲೆಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಬಾಲಕನಿಗೆ ಆತನ ತಾಯಿ ಬೈದು ಹೊಡೆದು ಬುದ್ಧಿ ಹೇಳಿದ್ದರು. ಇದರಿಂದ ನೊಂದ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಮೂವರು ರೈತರ ಸಾವು | ಟ್ರ್ಯಾಕ್ಟರ್ ಉರುಳಿ ಮೃತ್ಯು, ವಿದ್ಯುತ್‌ ಸ್ಪರ್ಶಕ್ಕೆ ಬಲಿ, ಸಾಲದ ಶೂಲದಿಂದ ಆತ್ಮಹತ್ಯೆ

Exit mobile version