Electric shock : ಬಟ್ಟೆ ಒಣ ಹಾಕಲು ಹೋದಾಗ ಕರೆಂಟ್‌ ಶಾಕ್‌ನಿಂದ ವಿದ್ಯಾರ್ಥಿ ಸಾವು - Vistara News

ಬೆಂಗಳೂರು ಗ್ರಾಮಾಂತರ

Electric shock : ಬಟ್ಟೆ ಒಣ ಹಾಕಲು ಹೋದಾಗ ಕರೆಂಟ್‌ ಶಾಕ್‌ನಿಂದ ವಿದ್ಯಾರ್ಥಿ ಸಾವು

Electric shock : ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಯೊಬ್ಬ ಬಟ್ಟೆ ಒಣ ಹಾಕಲು ಹೋದಾಗ ವಿದ್ಯುತ್‌ ತಂತಿ ತಗುಲಿ ದಾರುಣವಾಗಿ ಮೃತಪಟ್ಟಿದ್ದಾನೆ. ಮೃತ ಕುಟುಂಬಸ್ಥರು ಈ ಸಂಬಂಧ ದೂರು ನೀಡಿದ್ದಾರೆ.

VISTARANEWS.COM


on

Electric shock
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇವನಹಳ್ಳಿ: ಡಾ.ಬಿಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ಕರೆಂಟ್‌ ಶಾಕ್‌ನಿಂದ (Electric shock) ಮೃತಪಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಘಟನೆ ನಡೆದಿದೆ. ಸಾಯಿಭವನ್ (13) ಮೃತ ದುರ್ದೈವಿ.

ಹೊಸಕೋಟೆ ತಾಲೂಕಿನ ಸೂಲಿಬೆಲೆ ನಿವಾಸಿ ಸಾಯಿಭವನ್‌ ಕಳೆದ ಎರಡು ವರ್ಷಗಳಿಂದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಹಾಸ್ಟೆಲ್‌ನಲ್ಲಿದ್ದ ಸಾಯಿಭವನ್‌ ಭಾನುವಾರ ಬೆಳಗ್ಗೆ ಬಟ್ಟೆ ಒಣ ಹಾಕಲು ಹೋಗಿದ್ದಾನೆ. ಈ ವೇಳೆ ವಸತಿ ನಿಲಯದ ಮೇಲಿನ 11KV ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹೊಸಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌

ಬೆಂಗಳೂರು/ಚಿಕ್ಕಬಳ್ಳಾಪುರ: ಕರೆಂಟ್ ಶಾಕ್ (Electric shock) ಹೊಡೆದು ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಾಡುಗೋಡಿ‌ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬೇನ ಅಗ್ರಹಾರದಲ್ಲಿ ನಡೆದಿದೆ. ಬಿಪುಲ್ ಕುಮಾರ್ (35) ಮೃತ ದುರ್ದೈವಿ.

ಟೈಲ್ಸ್ ಶೋ ರೂಂನಲ್ಲಿ ಕೆಲಸ‌ ಮಾಡುತ್ತಿದ್ದ ಬಿಪುಲ್, ಫ್ಯಾನ್ ಆನ್ ಮಾಡಲು ಹೋಗಿದ್ದಾನೆ. ಈ ವೇಳೆ ಕರೆಂಟ್ ಶಾಕ್ ಬಡಿದಿದ್ದು ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಬಿಪುಲ್‌ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

ರಿಪೇರಿ ಮಾಡುವಾಗಲೇ ಪ್ರವಹಿಸಿದ ವಿದ್ಯುತ್‌; ಲೈನ್‌ಮ್ಯಾನ್‌ ಸಾವು

ಚಿಕ್ಕಬಳ್ಳಾಪುರದಲ್ಲಿ ಕಾರು ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ದುರ್ಮರಣ ಬೆನ್ನಲ್ಲೆ ಗೌರಿಬಿದನೂರಿನ ಬಿಸಲಹಳ್ಳಿ ಗ್ರಾಮದಲ್ಲಿ ಮೊತ್ತೊಬ್ಬ ಬೆಸ್ಕಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಾವಣಗೆರೆ ಮೂಲದ ಉದಯ್ ಕುಮಾರ್ (28 ) ಮೃತ ದುರ್ದೈವಿ.

ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಹೋದ ಉದಯ್‌ಗೆ ವಿದ್ಯುತ್‌ ಪ್ರವಹಿಸಿದ್ದು ಕ್ಷಣ ಮಾತ್ರದಲ್ಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇನ್ನೂ ಕಂಬದಲ್ಲೇ ಲೈನ್ ಮ್ಯಾನ್ ಮೃತದೇಹ ನೇತಾಡುತ್ತಿದ್ದು, ದುರ್ಘಟನೆ ಸಂಭವಿಸಿ ಒಂದು ಗಂಟೆ ಕಳೆದರೂ ಸ್ಥಳಕ್ಕೆ ಯಾವೊಬ್ಬ ಬೆಸ್ಕಾ ಅಧಿಕಾರಿಗಳು ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದರು.

ತಡವಾಗಿ ಬಂದ ಅಧಿಕಾರಿಗಳಿಗೆ ತರಾಟೆ

ವಿದ್ಯುತ್ ದುರಸ್ಥಿ ವೇಳೆ ಲೈನ್ ಮ್ಯಾನ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕ ತಡವಾಗಿ ಬಂದ ಬೆಸ್ಕಾ ಅಧಿಕಾರಿಗಳಿಗೆ ಸ್ಥಳೀಯರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಬಳಿಕ ವಿದ್ಯುತ್‌ ಕಂಬದಲ್ಲಿದ್ದ ಮೃತದೇಹವನ್ನು ಕೆಳಗೆ ಇಳಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Karnataka Weather Forecast : ಭಾನುವಾರ ಬೆಂಗಳೂರು, ಕಲಬುರಗಿ, ಕೊಪ್ಪಳ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕೊಡಗಿನಲ್ಲಿ ಮಳೆ ಎಫೆಕ್ಟ್‌ನಿಂದಾಗಿ (Rain News) ಭಾರಿ ಗಾತ್ರದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಮೋಡ ಕವಿದ ವಾತಾವರಣ (Karnataka Weather Forecast) ಇತ್ತು. ಮಧ್ಯಾಹ್ನದ ಹೊತ್ತು ಕೆಲವೊಮ್ಮೆ ಜಿಟಿ ಜಿಟಿ ಮಳೆಯ (Rain News) ಸಿಂಚನವಾಗುತ್ತಿತ್ತು. ಭಾನುವಾರ ಗಾಳಿಯೊಂದಿಗೆ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್‌ವೃತ್ತ, ಕಾರ್ಪೋರೇಶನ್ ಸರ್ಕಲ್‌, ಕೆಆರ್‌ ಮಾರ್ಕೆಟ್, ಶೇಷಾದ್ರಿಪುರಂ, ಗಾಂಧಿನಗರ, ಶಿವಾಜಿನಗರ. ವಿಧಾನಸೌಧ ಸುತ್ತಮುತ್ತ ಮಳೆಯಾಗಿದೆ. ಇತ್ತ ದಿಢೀರ್‌ ಬಂದ ಮಳೆಗೆ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಯಿತು.

ಇತ್ತ ಕಲಬುರಗಿಯಲ್ಲಿ ಭಾನುವಾರ ವರುಣನ ಆರ್ಭಟ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದು,ಜನ ಜೀವನ ಅಸ್ತವ್ಯಸ್ತವಾಗಿತ್ತು. ಕೊಪ್ಪಳದಲ್ಲೂ ಕಳೆದ ಒಂದು ವಾರ ಬಿಡುವು ನೀಡಿದ್ದ ಮಳೆರಾಯ ಭಾನುವಾರ ಅಬ್ಬರಿಸಿದ್ದ. ಕೊಪ್ಪಳ ತಾಲೂಕಿನ‌ ಹಿರೇಸಿಂದೋಗಿ ಸುತ್ತಮುತ್ತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಭಾರಿ ಮಳೆ ಎಫೆಕ್ಟ್‌ ರಾ.ಹೆ 275ರಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ, ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಜುಲೈ 1ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ಗುಡ್ಡದ ಬದಿಯಿಂದ ಮಣ್ಣು ಕುಸಿತಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು.

ಭೋರ್ಗರೆದ ಧನುಷ್ ಕೋಟಿ ಜಲಪಾತ

ಮೈಸೂರಿನ ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ ಹಿನ್ನೆಲೆಯಲ್ಲಿ ಧನುಷ್ ಕೋಟಿ ಜಲಪಾತ ಭೋರ್ಗರೆದಿದೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತಕ್ಕೆ ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ.

ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಯ ಒಳಹರಿವು ಹೆಚ್ಚಳಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ, ಬಾವನಸೌದತ್ತಿ ಸಂಪರ್ಕಿಸುವ ಹಳೆ ಸೇತುವೆ ಜಲಾವೃತಗೊಂಡಿದೆ.

ಕರಾವಳಿಗೆ ಭಾರಿ ಮಳೆ ಮುನ್ಸೂಚನೆ

ಜುಲೈ 1ರಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆಯಿದೆ ಹಾಗೂ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಮಾಡುವುದಲ್ಲದೇ (Bike Wheeling) ಬೈಕ್‌ನಲ್ಲಿ ಓಡಾಡುವ ಯುವತಿಯರಿಗೆ ಕೀಟಲೆ ಮಾಡಿ ಪುಂಡರು ರ‍್ಯಾಗಿಂಗ್‌ ಮಾಡಿದ್ದಾರೆ. ಪುಂಡರ ಹಾವಳಿ ತಪ್ಪಿಸುವಲ್ಲಿ ಪೊಲೀಸರು ಹಿಂದೆ ಬಿದ್ದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

By

bike wheeling
Koo

ಆನೇಕಲ್: ಬೆಂಗಳೂರಿನ ಬೀದಿಗಳಲ್ಲಿ ಭಯಾನಕ ವ್ಹೀಲಿಂಗ್‌ (Bike Wheeling) ಹಾವಳಿ ಹೆಚ್ಚಾಗಿದೆ. ವ್ಹೀಲಿಂಗ್‌ ಜತೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಗೆ ಕೀಟಲೆ ಮಾಡಿ ಯುವಕರು ಪುಂಡಾಟ ಮೆರೆದಿದ್ದಾರೆ. ಪುಂಡರ ಹಾವಳಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ.

ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಿ ಸಿಕ್ಕಸಿಕ್ಕ ರೋಡ್‌ಗಳಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುವ ಚಟ ಹಲವು ಯುವಕರಲ್ಲಿ ಕಂಡುಬರುತ್ತಿದೆ. ಇದೀಗ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆದ್ದಾರಿಯುದ್ದಕ್ಕೂ ವ್ಹೀಲಿಂಗ್‌ ಮಾಡಿ ಕಿರಿಕಿರಿ ಮಾಡಿದ್ದಾರೆ. ಮಾತ್ರವಲ್ಲದೇ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರನ್ನು ಚುಡಾಯಿಸಿರುವುದು ಕಂಡು ಬಂದಿದೆ.

ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಜನ ಯುವಕರ ತಂಡವು ಎಲೆಕ್ಟ್ರಾನಿಕ್ ಸಿಟಿಯಿಂದ ಚಂದಾಪುರದವರೆಗೆ ಯುವತಿಯನ್ನು ಹಿಂಬಾಲಿಸುತ್ತಾ ಕೀಟಲೆ ಮಾಡಿದ್ದಾರೆ. ಹಲವು ಬಾರಿ ಯುವತಿ ಎಚ್ಚರಿಕೆ ನೀಡಿದರೂ ಯುವಕರು ಹುಚ್ಚಾಟ ಮೆರೆದಿದ್ದಾರೆ. ವ್ಹೀಲಿಂಗ್‌ ಮಾಡಿ ಇತರೆ ವಾಹನಗಳಿಗೂ ಕಿರಿಕ್ ಮಾಡಿದ್ದಲ್ಲೇ ರಾಜಾರೋಷವಾಗಿ ಹೆದ್ದಾರಿಯಲ್ಲಿ ಯುವತಿಯರನ್ನು ರೇಗಿಸಿದ್ದಾರೆ.

ಇದನ್ನೂ ಓದಿ: Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

ಇತ್ತ ಕಾರು-ಆಟೋ ಚಾಲಕರು ಸೂಚನೆಗೂ ತಲೆ ಕೆಡಿಸಿಕೊಳ್ಳದೆ ಯುವಕರು ಪುಂಡಾಟಿಕೆ ತೋರಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ಎದುರಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕ ಯುವತಿಗೆ ತೊಂದರೆ ಮಾಡಿದ್ದಾರೆ. ಬಳಿಕ ಯುವತಿ ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಳ್ಳಲು ಶುರು ಮಾಡುತ್ತಿದ್ದಂತೆ ತಾವು ಧರಿಸಿದ್ದ ಶರ್ಟ್‌ನಲ್ಲೇ ಮುಖ ಮುಚ್ಚಿಕೊಂಡು ಎಸ್ಕೇಪ್‌ ಆಗಲು ಯತ್ನಿಸಿದ್ದಾರೆ.

ಬೈಕ್‌ನಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದ ಸವಾರ ಸಾವು

ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಯುವಕನೊರ್ವ ಮೃತಪಟ್ಟಿದ್ದಾನೆ. ಬೈಕ್‌ನಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಕುಮಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ತಡರಾತ್ರಿ 1.30ಕ್ಕೆ ಬೆಂಗಳೂರಿನ ಬೊಮ್ಮನಹಳ್ಳಿ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಘಟನೆ ನಡೆದಿದೆ.

ಕುಮಾರ್ ಮತ್ತು ನವೀನ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕುಮಾರ್ ಮೃತಪಟ್ಟರೇ ನವೀನ್‌ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ನವೀನ್ (20) ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿವಾಳ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಜುಲೈ ಮೊದಲ ವಾರ ಮತ್ತಷ್ಟು ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Rain News : ಜೂ.30ರಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಐಎಂಡಿ ಯೆಲ್ಲೋ ಅಲರ್ಟ್‌ ಘೋಷಣೆ (Karnataka Weather Forecast) ಮಾಡಿದೆ. ಜುಲೈ ಮೊದಲ ವಾರ ಮತ್ತಷ್ಟು ತೀವ್ರಗೊಳ್ಳಲಿದ್ದು, ಜು.3ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಭಾನುವಾರ ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ , ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ ಸಣ್ಣ ಪ್ರಮಾಣದಲ್ಲಿ ಮಳೆಯ ಸಿಂಚನವಾಗಲಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಭಾರಿ ಮಳೆಯೊಂದಿಗೆ ಗುಡುಗು ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 3ರವರೆಗೆ ಮೀನುಗಾರರು ಮೀನುಗಾರಿಗೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

Karnataka Weather Forecast : ಮುಂಗಾರು ಮಳೆ ಅವಾಂತರವನ್ನೇ ಸೃಷ್ಟಿಸಿದ್ದು, ಚಿಕ್ಕಮಗಳೂರಲ್ಲಿ ಸ್ಕಿಡ್‌ ಆಗಿ ಕಾರೊಂದು ಹೇಮಾವತಿ ನದಿಗೆ ಹಾರಿದೆ. ಭಾನುವಾರವೂ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ (karnataka Weather Forecast) ಅಬ್ಬರ ಮುಂದುವರಿದಿದ್ದು, ಹೇಮಾವತಿ ನದಿಗೆ ಮತ್ತೊಂದು ಕಾರು ಬಿದ್ದಿದೆ. ಭಾರಿ ಮಳೆಯಿಂದ (Rain News) ಚಾಲಕನ ನಿಯಂತ್ರಣ ತಪ್ಪಿ ನದಿಗೆ ಹಾರಿದೆ. ನಿನ್ನೆ ಶುಕ್ರವಾರ ಕೂಡ ಇದೇ ಜಾಗದಲ್ಲಿ, ಇದೇ ಶೈಲಿಯಲ್ಲಿ ಕಾರು ಬಿದ್ದಿತ್ತು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಘಟನೆ ನಡೆದಿದೆ.

ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿಯಿಂದ ಮೂಡಿಗೆರೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಹಾರಿ ನದಿಗೆ ಬಿದ್ದಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳೀಯ ಸಹಾಯದಿಂದ ಕಾರನ್ನು ಮೇಲೆ ಎತ್ತಲಾಗಿದೆ.

ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿತ್ತು. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೆರಡು ಅಪಘಾತ ಸಂಭವಿಸಿದೆ.

ಇದನ್ನೂ ಓದಿ: Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

ಕರಾವಳಿಯಲ್ಲಿ ವಿಪರೀತ ಮಳೆ

ಜೂನ್‌ 30ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.‌ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಕ್ರಮವಾಗಿ 30-21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rain Tragedy
ಪ್ರಮುಖ ಸುದ್ದಿ1 hour ago

Rain Tragedy: ಪ್ರವಾಸಿಗರ ಕಣ್ಣಮುಂದೆಯೇ ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 7 ಮಂದಿ; ಇಲ್ಲಿದೆ ವಿಡಿಯೊ

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

Rohit Sharma
ಪ್ರಮುಖ ಸುದ್ದಿ3 hours ago

Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

VSK Media Awards 2024
ಬೆಂಗಳೂರು3 hours ago

VSK Media Awards 2024: ಲೋಕಹಿತಕ್ಕಾಗಿ ಪತ್ರಿಕೋದ್ಯಮ ಶ್ರಮಿಸಬೇಕು: ಪ್ರಫುಲ್ಲ ಕೇತ್ಕರ್

NIA Raid
ದೇಶ3 hours ago

NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

Basavakalyan News
ಬೀದರ್‌4 hours ago

Basavakalyan News: ರಾತ್ರಿ ಮಣ್ಣಲ್ಲಿ ಹೂತಿದ್ದ ಮಗು ಬೆಳಗ್ಗೆ ಜೋಕಾಲಿಯಲ್ಲಿ ಪ್ರತ್ಯಕ್ಷ!

T20 World Cup
ಪ್ರಮುಖ ಸುದ್ದಿ4 hours ago

T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

Goldman of Bihar
ವೈರಲ್ ನ್ಯೂಸ್4 hours ago

Goldman of Bihar: ಈತ ಬಂಗಾರದ ಮನುಷ್ಯ! ಕೊರಳಲ್ಲಿದೆ 5 ಕೆಜಿ ಚಿನ್ನ! ಬೈಕ್‌ನಲ್ಲೂ ಇದೆ ಬಂಗಾರ!

Lacchi Poojarthi
ಕರ್ನಾಟಕ4 hours ago

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

T20 World Cup 2024
ಪ್ರಮುಖ ಸುದ್ದಿ4 hours ago

T20 World Cup 2024 : ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ7 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು12 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌