Fire accident | ಜಿಗಣಿ ಪ್ಲಾಸ್ಟಿಕ್‌ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ - Vistara News

ಬೆಂಗಳೂರು ಗ್ರಾಮಾಂತರ

Fire accident | ಜಿಗಣಿ ಪ್ಲಾಸ್ಟಿಕ್‌ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಫರ್ನಿಚರ್‌ ಹಾಗೂ ಪ್ಲಾಸ್ಟಿಕ್‌ ಚೀಲ ತಯಾರಿಕೆ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ.

VISTARANEWS.COM


on

fire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್‌: ಪ್ಲಾಸ್ಟಿಕ್ ಚೀಲ ಹಾಗೂ ಫರ್ನಿಚರ್‌ಗಳನ್ನು ತಯಾರು ಮಾಡುತ್ತಿದ್ದ ಕಾರ್ಖಾನೆಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಗ್ನಿ ದುರಂತ ಸಂಭವಿಸಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಟ್ರೆವಿ ಫರ್ನಿಚರ್ ಪ್ರೈವೇಟ್ ಲಿಮಿಟೆಡ್ ಕಂಪನಿ ಹಾಗೂ ಸನ್ ಸೇನೆ ಕಾರ್ಖಾನೆಯಲ್ಲಿ ಬೆಂಕಿ ಹಬ್ಬಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುಂಜಾನೆ ಆಗಿದ್ದರಿಂದ ಕಾರ್ಮಿಕರು ಯಾರೂ ಕಾರ್ಖಾನೆಯಲ್ಲಿ ಇರಲಿಲ್ಲ. ರಾತ್ರಿ ಪಾಳಿ ಕೆಲಸ ಮುಗಿಸಿ ಕಾರ್ಮಿಕರು ಹೋಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Karnataka Weather Forecast : ಮಳೆ ಅವಾಂತರವು ಮುಂದುವರಿದಿದೆ. ನಿರಂತರ ಮಳೆಗೆ (Rain News) ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ನೀರು ಸೋರುತ್ತಿರುವ ಕಾರಣಕ್ಕೆ ಚಾಲಕನೊಬ್ಬ ಕೈಯಲ್ಲಿ ಛತ್ರಿ ಹಿಡಿದು ಚಲಾಯಿಸಿದ್ದಾರೆ. ಇತ್ತ ವ್ಯಾಪಕ ಮಳೆಗೆ ಮಾಳಿಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ಮಕ್ಕಳಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Karnataka Weather Forecast
Koo

ಧಾರವಾಡ/ದಾವಣಗೆರೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆ (Rain News) ಬಂದರು ಕಷ್ಟ ಬಾರದೆ ಇದ್ದರೂ ನಷ್ಟ ಎನ್ನುವಂತಾಗಿದೆ. ಮಳೆಯಿಂದಾಗಿ (karnataka Weather Forecast) ಅವಾಂತರವೇ ಸೃಷ್ಟಿಯಾಗಿದ್ದು, ಸಾವು-ನೋವು ಸಂಭವಿಸಿದೆ. ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಇದಾಗಿದ್ದು, ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಚಾಲಕ ಛತ್ರಿ ಹಿಡಿದ ದೃಶ್ಯವನ್ನು ನಿರ್ವಾಹಕಿ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ.

karnataka Weather Forecast

ದಾವಣಗೆರೆಯಲ್ಲಿ ಕುಸಿದು ಬಿದ್ದ ಮಾಳಿಗೆ ಮನೆ

ಭಾರಿ ಮಳೆಗೆ ಮಾಳಿಗೆ ಮನೆಯೊಂದು ಕುಸಿದು ಬಿದ್ದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದ ಮಾಳಿಗೆ ಮನೆ ಕುಸಿದಿದೆ. ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲಾ ಎಂಬುವರಿಗೆ ಸೇರಿದ ಮಾಳಿಗೆ ಮನೆಯಲ್ಲಿ ಮಕ್ಕಳು ಪಾರಾಗಿದ್ದು, ಸನಾವುಲ್ಲಾ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಹಾಸನದಲ್ಲಿ ಮಳೆ ಗಾಳಿಗೆ ರಸ್ತೆಗೆ ಬಿದ್ದ ಮರ

ಹಾಸನ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಒಂದು ಕಾರು ಜಖಂ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಾಸನ ನಗರದ ಹೌಸಿಂಗ್ ಬೋರ್ಡ್‌ ಬಡಾವಣೆಯಲ್ಲಿ ಈ ಘಟೆನೆ ನಡೆದಿದೆ. ಇತ್ತ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಧರೆಗುರುಳಿದ 50 ವರ್ಷದ ಅರಳಿ ಮರ

ಬಿರುಗಾಳಿ ಸಹಿತ‌ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಳಿಕಟ್ಟೆಯಲ್ಲಿದ್ದ 50 ವರ್ಷಗಳಿಗೂ ಹಳೆಯ ಅರಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಯಾರು ಇಲ್ಲದ ಕಾರಣಕ್ಕೆ ಅಪಾಯವೊಂದು ತಪ್ಪಿದೆ. ಇಶಾ ಫೌಂಡೇಶನ್ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬಿರುಗಾಳಿಗೆ ಜಾಹೀರಾತು ಫಲಕಗಳು ನೆಲಕ್ಕೆ ಬಿದ್ದಿವೆ. ಚಿಕನ್ ಹಾಗೂ ಚಾಟ್ಸ್ ಅಂಗಡಿ ಮೇಲೆ ಫಲಕ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rave party: ರೇವ್ ಪಾರ್ಟಿಯಲ್ಲಿ ಇಬ್ಬರು ತೆಲುಗು ನಟಿಯರು ಭಾಗಿ ವಿಚಾರವು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವೇಳೆ 103 ಮಂದಿ ಭಾಗಿಯಾಗಿದ್ದ 103 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಪ್ರಮುಖವಾಗಿ ನಟಿಯರಾದ ಹೇಮಾ ಮತ್ತು ಆಶಿ ರಾಯ್‌ ಇದ್ದರು. ಈಗ ಹೇಮಾ ವರದಿ ಪಾಸಿಟಿವ್‌ ಬಂದರೆ, ಆಶಿ ರಾಯ್‌ ಅವರದ್ದು ನೆಗೆಟಿವ್‌ ಬಂದಿದೆ.

VISTARANEWS.COM


on

Rave party Ashi Roy has not consumed drugs and Hema intake is confirmed
Koo

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಯಲ್ಲಿ (Rave party) ಕೇಸ್‌ಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ (Telugu actress Hema) ಸೇವನೆ ಡ್ರಗ್ಸ್‌ ಸೇವನೆ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಆದರೆ, ಇನ್ನೊಬ್ಬ ನಟಿ ಆಶಿ ರಾಯ್ (Aashi Roy) ಅವರ ರಿಪೋರ್ಟ್‌ ನೆಗೆಟಿವ್‌ ಬಂದಿದೆ ಎಂದು ಹೇಳಲಾಗಿದೆ.

ರೇವ್ ಪಾರ್ಟಿಯಲ್ಲಿ ಇಬ್ಬರು ತೆಲುಗು ನಟಿಯರು ಭಾಗಿ ವಿಚಾರವು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವೇಳೆ 103 ಮಂದಿ ಭಾಗಿಯಾಗಿದ್ದ 103 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಪ್ರಮುಖವಾಗಿ ನಟಿಯರಾದ ಹೇಮಾ ಮತ್ತು ಆಶಿ ರಾಯ್‌ ಇದ್ದರು. ಈಗ ಹೇಮಾ ವರದಿ ಪಾಸಿಟಿವ್‌ ಬಂದರೆ, ಆಶಿ ರಾಯ್‌ ಅವರದ್ದು ನೆಗೆಟಿವ್‌ ಬಂದಿದೆ.

ನಟಿ ಹೇಮಾ ಸೇವಿಸಿರೋದು ಯಾವ ಡ್ರಗ್ಸ್?

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾರೆ? ಇದರ ಜಾಲ ಯಾವುದು? ಎಂಬಿತ್ಯಾದಿ ಅಂಶಗಳನ್ನು ಬಯಲಿಗೆಳೆಯಲು ತಯಾರಿ ನಡೆಸಲಾಗಿದೆ.

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

ಕಿರಿಕ್‌ ಮಾಡಿದ್ದ ನಟಿ ಹೇಮಾ

ಜಿಆರ್ ಫಾರ್ಮ್ ಹೌಸ್‌ನಲ್ಲಿ ಶನಿವಾರ ರಾತ್ರಿಯಿಂದಲೇ ರೇವ್ ಪಾರ್ಟಿ ಶುರುವಾಗಿತ್ತು ಎಂಬುದು ಗೊತ್ತಾಗಿದೆ. ಒಂದು ದಿನ ಪಾರ್ಟಿ ಆದ ಬಳಿಕ ಸಿಸಿಬಿ ಪೊಲೀಸರಿಗೆ ವಿಚಾರ ತಿಳಿದು ರೈಡ್ ಮಾಡಲಾಗಿದೆ‌. ಇದರ ಜತೆಗೆ ಸಿಸಿಬಿ ಪೊಲೀಸರೊಂದಿಗೆ ನಟಿ ಹೇಮಾ ಕಿರಿಕ್ ಮಾಡಿದ್ದಾರೆ. ವಿಚಾರಣೆಗೆಂದು ಪೊಲೀಸರು ಇರಿಸಿಕೊಂಡಿದ್ದಾಗ ಕಿರಿಕ್ ತೆಗೆದು, ನನಗೆ ಸರಿಯಾದ ಊಟ ಕೊಟ್ಟಿಲ್ಲ. ನಾನೊಬ್ಬ ನಟಿ ಸರಿಯಾಗಿ ಟ್ರೀಟ್ ಮಾಡಿ ಎಂದು ಆಕ್ರೋಶ ಹೊರಹಾಕಿದ್ದರು ಎಂದು ತಿಳಿದುಬಂದಿದೆ.

ರೇವ್‌ ಪಾರ್ಟಿ ಕೇಸ್‌; ಹೆಬ್ಬಗೋಡಿ ಠಾಣೆಯ ಎಎಸ್‌ಐ ಸೇರಿ ಮೂವರ ಸಸ್ಪೆಂಡ್‌

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿನ ಎಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ವೇಳೆ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್‌ ಬಾಲದಂಡಿ ಚಾರ್ಜ್ ಮೆಮೋ‌ ನೀಡಿದ್ದು, ಇಷ್ಟೆಲ್ಲ ಆಗುತ್ತಿದ್ದರೂ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ? ಇದಕ್ಕೆ ಕಾರಣ ನೀಡಿ ಎಂದು ವಿವರಣೆಯನ್ನು ಕೇಳಿದ್ದಾರೆ. ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ ಅವರ ಉತ್ತರ ಆಧರಿಸಿ ಅವರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

ಠಾಣೆಯ ಎಸ್.ಬಿ. ಗಿರೀಶ್, ಎಎಸ್ಐ ನಾರಾಯಣ ಸ್ವಾಮಿ ಮತ್ತು ಬೀಟ್ ಕಾನ್ಸ್‌ಟೇಬಲ್ ದೇವರಾಜು ಅಮಾನತಾದವರು. ಸಿಸಿಬಿ ಪೊಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೊಲೀಸರಿಗೆ ಯಾಕೆ ಇರಲಿಲ್ಲ ಎಂದು ಪ್ರಶ್ನೆ ಮಾಡಲಾಗಿದ್ದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

Continue Reading

ಕ್ರೈಂ

Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

Rave party: ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

VISTARANEWS.COM


on

Bangalore rave party case Hema got locked up to give build up infront of Police
Koo

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ (Telugu actress Hema) ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

ಕಿರಿಕ್‌ ಮಾಡಿದ್ದ ನಟಿ ಹೇಮಾ

ಜಿಆರ್ ಫಾರ್ಮ್ ಹೌಸ್‌ನಲ್ಲಿ ಶನಿವಾರ ರಾತ್ರಿಯಿಂದಲೇ ರೇವ್ ಪಾರ್ಟಿ ಶುರುವಾಗಿತ್ತು ಎಂಬುದು ಗೊತ್ತಾಗಿದೆ. ಒಂದು ದಿನ ಪಾರ್ಟಿ ಆದ ಬಳಿಕ ಸಿಸಿಬಿ ಪೊಲೀಸರಿಗೆ ವಿಚಾರ ತಿಳಿದು ರೈಡ್ ಮಾಡಲಾಗಿದೆ‌. ಇದರ ಜತೆಗೆ ಸಿಸಿಬಿ ಪೊಲೀಸರೊಂದಿಗೆ ನಟಿ ಹೇಮಾ ಕಿರಿಕ್ ಮಾಡಿದ್ದಾರೆ. ವಿಚಾರಣೆಗೆಂದು ಪೊಲೀಸರು ಇರಿಸಿಕೊಂಡಿದ್ದಾಗ ಕಿರಿಕ್ ತೆಗೆದು, ನನಗೆ ಸರಿಯಾದ ಊಟ ಕೊಟ್ಟಿಲ್ಲ. ನಾನೊಬ್ಬ ನಟಿ ಸರಿಯಾಗಿ ಟ್ರೀಟ್ ಮಾಡಿ ಎಂದು ಆಕ್ರೋಶ ಹೊರಹಾಕಿದ್ದರು ಎಂದು ತಿಳಿದುಬಂದಿದೆ.

ರೇವ್‌ ಪಾರ್ಟಿ ಕೇಸ್‌; ಹೆಬ್ಬಗೋಡಿ ಠಾಣೆಯ ಎಎಸ್‌ಐ ಸೇರಿ ಮೂವರ ಸಸ್ಪೆಂಡ್‌

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿನ ಎಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ವೇಳೆ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್‌ ಬಾಲದಂಡಿ ಚಾರ್ಜ್ ಮೆಮೋ‌ ನೀಡಿದ್ದು, ಇಷ್ಟೆಲ್ಲ ಆಗುತ್ತಿದ್ದರೂ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ? ಇದಕ್ಕೆ ಕಾರಣ ನೀಡಿ ಎಂದು ವಿವರಣೆಯನ್ನು ಕೇಳಿದ್ದಾರೆ. ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ ಅವರ ಉತ್ತರ ಆಧರಿಸಿ ಅವರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಠಾಣೆಯ ಎಸ್.ಬಿ. ಗಿರೀಶ್, ಎಎಸ್ಐ ನಾರಾಯಣ ಸ್ವಾಮಿ ಮತ್ತು ಬೀಟ್ ಕಾನ್ಸ್‌ಟೇಬಲ್ ದೇವರಾಜು ಅಮಾನತಾದವರು. ಸಿಸಿಬಿ ಪೊಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೊಲೀಸರಿಗೆ ಯಾಕೆ ಇರಲಿಲ್ಲ ಎಂದು ಪ್ರಶ್ನೆ ಮಾಡಲಾಗಿದ್ದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

ರೇವ್‌ ಪಾರ್ಟಿಯಲ್ಲಿ ತೆಲುಗು ನಟಿಯರಾದ ಹೇಮಾ (Telugu actress Hema) ಹಾಗೂ ಆಶಿ ರಾಯ್ (Aashi Roy) ಒಳಗೊಂಡಂತೆ 103 ಮಂದಿ ಭಾಗಿಯಾಗಿದ್ದರು. ಇಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಷ್ಟೂ ಮಂದಿಯನ್ನು ತಪಾಸಣೆಗೊಳಪಡಿಸಲಾಗಿತ್ತು. ಈಗ ವೈದ್ಯಕೀಯ ವರದಿ ಬಂದಿದ್ದು, ಅವರಲ್ಲಿ 86 ಮಂದಿಯ ರಿಪೋರ್ಟ್ ಪಾಸಿಟಿವ್ ಬಂದಿದೆ. ನಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ.

ವಾಸು ಎಂಬಾತನ ಬರ್ತ್‌ ಡೇ ಪಾರ್ಟಿಗಾಗಿ ಏರ್ಪಡಿಸಲಾಗಿದ್ದ ಈ ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೋ ಗಾಂಜಾ ಪತ್ತೆಯಾಗಿದ್ದವು.

Sunset To Sun Rise victory ಶೀರ್ಷಿಕೆಯಲ್ಲಿ ಈ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಸುಮಾರು ನೂರೈವತ್ತು ಮಂದಿ ಸೇರಿದ್ದರು. ಪೊಲೀಸ್‌ ದಾಳಿ ವೇಳೆ ಕೆಲವರು ತಪ್ಪಿಸಿಕೊಂಡು ಓಡಿದ್ದರು. ಆದರೆ, ಬಹುತೇಕ ಮಂದಿ ಸಿಕ್ಕಿಬಿದ್ದಿದ್ದರು. ಈಗ ಸಿಕ್ಕಿಬಿದ್ದವರಲ್ಲಿ ಬಹುತೇಕರ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ಸೇವನೆ ಸಂಬಂಧ ಪಾಸಿಟಿವ್ ಅಂಶ ಪತ್ತೆಯಾಗಿದೆ. ಹೀಗಾಗಿ ಪಾಸಿಟಿವ್‌ ರಿಪೋರ್ಟ್‌ ಬಂದವರಿಗೆ ಸಿಸಿಬಿ ನೋಟಿಸ್ ನೀಡಲಿದ್ದು, ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ.

ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ್ದ ಹೇಮಾ!

ಈ ರೇವ್‌ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿದ್ದಂತೆ ವಿಡಿಯೊವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದ ಹೇಮಾ, ನಾನು ಆ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಲೇ ಇಲ್ಲ. ಹೈದರಾಬಾದ್‌ನ ಫಾರ್ಮ್‌ ಹೌಸ್‌ನಲ್ಲಿದ್ದೇನೆ ಎಂದು ವಿಡಿಯೊ ಸಂದೇಶವನ್ನು ಹರಿಬಿಟ್ಟಿದ್ದರು. ಆದರೆ, ಮುಜುಗರ ತಪ್ಪಿಸಲು ಅವರು ಅದೇ ಫಾರಂ ಹೌಸ್‌ನ ಒಂದು ಕಡೆ ಬಂದು ವಿಡಿಯೊ ಮಾಡಿದ್ದಾರೆ ಎಂದು ಹಲವರು ಅಂದೇ ಹೇಳಿದ್ದರು. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವರು ವಾದಿಸಿದ್ದರು. ಈಗ ಈ ಸಂಬಂಧ ಪೊಲೀಸರಿಗೆ ಬಂದಿರುವ ರಿಪೋರ್ಟ್‌ ವೈರಲ್‌ ಆಗಿದ್ದು, ಅವರು ಸಹ ಮಾದಕ ವಸ್ತು ಸೇವನೆ ಮಾಡಿರುವುದು ಸಾಬೀತಾಗಿದೆ ಎಂದು ತಿಳಿದುಬಂದಿದೆ.

ಕಮೋಡ್‌ನಲ್ಲಿ ಫ್ಲಶ್‌ ಮಾಡಿದರು!

ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದರು. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದರು.. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಫಾರ್ಮ್ ಹೌಸ್‌ನ ಇಂಚಿಂಚನ್ನೂ ಜಾಲಾಡಿದ್ದರು.

3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಅಂದೇ ಪೊಲೀಸರು ಬಂಧಿಸಿದ್ದರು. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು.

ಎಂಟ್ರಿಗೆ ಪಾಸ್‌ವರ್ಡ್‌ ನೀಡಿದ್ದ ವಾಸು

ಪಾರ್ಟಿ ಆಯೋಜಕ, ಆರೋಪಿ ವಾಸು ಪೊಲೀಸರಿಂದ ಬಚಾವಾಗಲು ʼನಾನು ಪಾರ್ಟಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆದಿದ್ದೇನೆಂದುʼ ಸುಳ್ಳು ಹೇಳಿಕೆ ನೀಡಿದ್ದ. ಆದರೆ, ಫಾರ್ಮ್ ಹೌಸ್ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಪಾರ್ಟಿಗೆ ಬಂದವರು ಫಾರ್ಮ್ ಹೌಸ್ ಒಳಗೆ ಹೋಗಬೇಕಾದರೆ ಸೆಕ್ಯೂರಿಟಿಗೆ ಪಾಸ್ ವರ್ಡ್ ಹೇಳಬೇಕಿತ್ತು. ವಾಸು ನೀಡಿದ ಪಾಸ್‌ವರ್ಡ್ ಹೇಳಿದರೆ ಮಾತ್ರ ಒಳಗೆ ಎಂಟ್ರಿಯಾಗಬಹುದಿತ್ತು. ಡ್ರಗ್ ಪಾರ್ಟಿ ಹಿನ್ನೆಲೆಯಲ್ಲಿ ಬೇರೆ ಯಾರೂ ಬಾರದಿರಲಿ ಎಂಬ ಕಾರಣಕ್ಕೆ ವಾಸು ಪಾಸ್‌ವರ್ಡ್ ನೀಡಿದ್ದ.

ಮಾದಕ ವಸ್ತುಗಳ ವಶಕ್ಕೆ

ಫಾರಂ ಹೌಸ್‌ನಲ್ಲಿ ಸದ್ಯ ಭಾರಿ ಪ್ರಮಾಣದಲ್ಲಿ ಎಂಡಿಎಂಎ, ಕ್ಯಾಪ್ಸೂಲ್, ಕೊಕೇನ್ ಇತ್ಯಾದಿ ಮಾದಕ ವಸ್ತುಗಳು ದೊರೆತಿದ್ದವು. 45 ಗ್ರಾಂನಷ್ಟು ಡ್ರಗ್ ವಶಕ್ಕೆ ಪಡೆಯಲಾಗಿತ್ತು. 1 ಗ್ರಾಂ ಕೊಕೇನ್‌ಗೆ 8ರಿಂದ 9 ಸಾವಿರ ರೂ. ದರವಿದೆ. ಇಂತಹ ಕೊಕೇನ್ ಭಾರಿ ಪ್ರಮಾಣದಲ್ಲಿ ಪಾರ್ಟಿಯಲ್ಲಿ ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಡ್ರಗ್ಸ್‌ನ ಮೌಲ್ಯ ಪರಿಶೀಲನೆಯನ್ನು ಸಿಸಿಬಿ ನಡೆಸುತ್ತಿದೆ.

ಇದನ್ನೂ ಓದಿ: Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

ನಟಿ ಆಶಿ ರಾಯ್ ಹೇಳಿದ್ದೇನು?

ಈ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆಶಿ ರಾಯ್‌ ಸಹ ವಿಡಿಯೊವೊಂದನ್ನು ಮಾಡಿ ಸ್ಪಷ್ಟನೆ ನೀಡಿದ್ದಾರೆ. ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದು ವಿಡಿಯೊವನ್ನು ಹಂಚಿಕೊಂಡಿದ್ದರು. ಆಶಿ ರಾಯ್‌ ಹಲವು ಸಂದರ್ಶನದಲ್ಲಿ ಪಾರ್ಟಿಯಲ್ಲಿ ಹೇಮಾ ಅವರನ್ನು ನೋಡಿಲ್ಲ ಎಂದಿದ್ದಾರೆ. ಆಶಿರಾಯ್‌ ಅವರು ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

Continue Reading

ಮಳೆ

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Karnataka Rain : ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಹಲವೆಡೆ ಭಾರಿ ಮಳೆ-ಗಾಳಿಯಿಂದಾಗಿ ಮರಗಳು ಧರೆಗುರುಳುತ್ತಿವೆ. ಪರಿಣಾಮ ಅನಾಹುತಗಳು ಸಂಭವಿಸುತ್ತಿವೆ. ಮರದ ಬೃಹತ್‌ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಜಾನುವಾರವೊಂದು ಮೃತಪಟ್ಟಿದೆ. ಕೆಲವೆಡೆ ಮನೆಯ ಶೆಡ್‌ಗಳು ಹಾರಿ ಹೋಗಿವೆ.

VISTARANEWS.COM


on

By

Karnataka Rain
Koo

ಉಡುಪಿ/ಬೆಳಗಾವಿ: ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಾವು- ನೋವು (Karnataka Rain) ಸಂಭವಿಸುತ್ತಿದೆ. ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಉಡುಪಿಯ ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿ ಮೃತ ದುರ್ದೈವಿ.

ರಕ್ಷಿತ್‌ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್‌ನನ್ನು ಕೂಡಲೇ ಕುಟುಂಬಸ್ಥರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾನೆ.

ಬೆಳಗಾವಿಯಲ್ಲಿ ಮರದಡಿ ನಿಂತಿದ್ದ ಆಕಳು ಸಾವು

ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಗಾಳಿಯೊಂದಿಗೆ ಭಾರಿ‌ ಮಳೆಯಾಗಿದೆ. ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದೆ. ಗುರುವಾರ ಸಂಜೆ ಸುರಿದ ಮಳೆಯಿಂದ ಮನೆ ಮುಂದಿದ್ದ ಮರ ಬಿದ್ದಿದೆ. ಮರದ ಕೆಳಗೆ ಕಟ್ಟಿದ್ದ ಆಕಳು ಮೇಲೆ ಬೃಹತ್‌ ಗಾತ್ರದ ಕೊಂಬೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಂಕರ್ ರೊಡ್ಡಣ್ಣವರ್ ಎಂಬುವವರಿಗೆ ಸೇರಿದ ಆಕಳು ಮೃತಪಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಮನೆ ಬಿದ್ದು ಬೀದಿಗೆ ಬಂದ ಕುಟುಂಬ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎಲ್ಲವನ್ನೂ ಕಳೆದುಕೊಂಡು ಕುಟುಂಬವೊಂದು ಬೀದಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಭಾರಿ ಮಳೆಗೆ ಲಕ್ಷ್ಮೀ ಮಾದರ್ ಎಂಬುವವರ ಮನೆಯ ಚಾವಣಿ ಹಾರಿ ಹೋಗಿದೆ. ಲಕ್ಷ್ಮಿ ಅವರ ಕೈ ಮೇಲೂ ಚಾವಣಿ ಬಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಎಲ್ಲ ಸಾಮಾಗ್ರಿಗಳಿಗೂ ಹಾನಿಯಾಗಿವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಲಕ್ಷ್ಮೀ ಮನವಿ ಮಾಡಿದ್ದಾರೆ. ಇನ್ನೂ ಭಾರಿ ಬಿರುಗಾಳಿಗೆ 5ಕ್ಕೂ ಹೆಚ್ಚು ಶೆಡ್‌ಗಳ ಚಾವಣಿ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಗಳಿಗೆ ಹಾನಿ ಹಿನ್ನೆಲೆ ಇಬ್ಬರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗಲಕೋಟೆಯಲ್ಲಿ ನೆಲಕ್ಕುರುಳಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಾಗಲಕೋಟೆಯ ತುಳಸಿಗೇರಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಮುರಿದು ಬಿದ್ದು, ಚಾವಣಿಗೆ ಹಾರಿಹೋಗಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ನೆಲಕ್ಕುರಳಿದೆ. ನೋಡ ನೋಡುತ್ತಿದ್ದಂತೆ ಶೆಡ್‌ನ ಚಾವಣಿ ಶಿಟ್ ಗಾಳಿಯಲ್ಲಿ ಹಾರಾಡಿದ್ದವು. ಕಾಯಿ ಅಂಗಡಿಗಳ ಮೇಲೆ ಮರದ ಕೊಂಬೆ ಮುರಿದು ಬಿದ್ದ ಹಾನಿಯಾಗಿತ್ತು.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

ಕುಸಿದು ಬಿದ್ದ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರ

ಭಾರಿ ಗಾಳಿ ಮಳೆಗೆ ದೇವಳದ ಅನ್ನಛತ್ರ ಕುಸಿದು ಭಾರಿ ಅನಾಹುತ ತಪ್ಪಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರದಲ್ಲಿ ಘಟನೆ ನಡೆದಿದೆ. ಕೊಲ್ಲೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದು, ತಡರಾತ್ರಿಯವರಗೂ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಚಿಕ್ಕಮಗಳೂರಲ್ಲಿ ಮರ ಬಿದ್ದು ಐವರು ಕೂದಲೆಳೆ ಅಂತರದಲ್ಲಿ ಪಾರು

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದೇ ವೇಳೆ ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲಗಿದ್ದಾಗ ಮಂಚದ ಮೇಲೆಯೇ ಬೃಹತ್ ಗಾತ್ರದ ಕೊಂಬೆ ಬಿದ್ದಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಅವಘಡ ಸಂಭವಿಸಿದೆ. ಬೃಹತ್ ಗಾತ್ರದ ಮರ ಬಿದ್ದರೂ ಐವರು ಉಳಿದಿದ್ದೆ ಪವಾಡ ಎಂದಿದ್ದಾರೆ.

ಮಳೆ ಅನಾಹುತಕ್ಕೆ ಶುಂಠಿ ಬೆಳೆ ನಾಶ

ಮೈಸೂರಿನಲ್ಲಿ ಮಳೆ ಅನಾಹುತ ಮುಂದುವರಿದಿದೆ. ಸರಗೂರು ತಾಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಅವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಜಮೀನಿನಲ್ಲಿ ಮಳೆ ನೀರು ನಿಂತಿದ್ದರಿಂದ ಪುಟ್ಟತಾಯಮ್ಮ ಕಣ್ಣೀರಿಟ್ಟು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಯಚೂರಲ್ಲಿ ಸುರಿದ ಒಂದೇ ಮಳೆಗೆ ಜಮೀನು ಜಲಾವೃತ

ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಒಂದೇ ಮಳೆಗೆ ಜಮೀನು ಜಲಾವೃತಗೊಂಡಿದೆ. ಮಳೆಯಿಂದಾಗಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದರಿಂದ ಬಿತ್ತನೆಗೆ ತಯಾರಿ ನಡೆಸಿದ್ದ ರೈತರಿಗೆ ಭಾರೀ‌ ನಿರಾಸೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ದೇಶ18 mins ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ19 mins ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು43 mins ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ1 hour ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ1 hour ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ1 hour ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Kangana Ranaut
ದೇಶ2 hours ago

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

T20 World Cup 2024
ಕ್ರೀಡೆ2 hours ago

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

Prajwal Revanna Case
ಕರ್ನಾಟಕ2 hours ago

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Yuzvendra Chahal
ಕ್ರಿಕೆಟ್3 hours ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌