Lok Sabha Election 2024 : ಲೋಕಸಭೆ ಎಲೆಕ್ಷನ್;‌ ಏಪ್ರಿಲ್‌ 26ರಂದು ಬನ್ನೇರುಘಟ್ಟ ಪಾರ್ಕ್‌ ಕ್ಲೋಸ್‌ - Vistara News

ಬೆಂಗಳೂರು ಗ್ರಾಮಾಂತರ

Lok Sabha Election 2024 : ಲೋಕಸಭೆ ಎಲೆಕ್ಷನ್;‌ ಏಪ್ರಿಲ್‌ 26ರಂದು ಬನ್ನೇರುಘಟ್ಟ ಪಾರ್ಕ್‌ ಕ್ಲೋಸ್‌

Bannerghatta National Park: ಏಪ್ರಿಲ್‌ 26ರಂದು‌ ಮೊದಲ ಹಂತದ ಲೋಕಸಭೆ ಚುನಾವಣೆಯ ಮತದಾನ (Lok Sabha Election 2024) ನಡೆಯಲಿದೆ. ಆ ದಿನ ಸಾರ್ವತ್ರಿಕ ರಜೆ ಇರಲಿದ್ದು, ಮತದಾನ ಮಾಡುವುದನ್ನು ಮತದಾರರು ತಪ್ಪಿಸಬಾರೆಂದು ಪ್ರವಾಸಿ ತಾಣವಾದ ಬನ್ನೇರುಘಟ್ಟ ಉದ್ಯಾನವನಕ್ಕೆ ಆ ದಿನ ರಜೆ ನೀಡಲಾಗಿದೆ.

VISTARANEWS.COM


on

Lok sabha Election Bannerghatta Park to be closed on April 26
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok sabha Election 2024) ಹಿನ್ನೆಲೆಯಲ್ಲಿ ಶೇ 100ಕ್ಕೆ 100ರಷ್ಟು ಮತದಾನ (Voting) ಆಗಬೇಕೆಂದು, ಚುನಾವಣಾ ಆಯೋಗ ನಾನಾ ಕಸರತ್ತುಗಳನ್ನು ಮಾಡುತ್ತಿದೆ. ಚುನಾವಣಾ ಆಯೋಗಕ್ಕೆ ಸಾಥ್‌ ನೀಡಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ (Bannerghatta National Park) ಆಡಳಿತ ಮಂಡಳಿ ಮತದಾನದ ದಿನದಂದು ರಜೆ ಘೋಷಣೆ ಮಾಡಿದೆ.

ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ರಾಜಕೀಯ ಪಕ್ಷಗಳಂತೆ ಚುನಾವಣಾ ಆಯೋಗವೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮತದಾನ ನಡೆಯುವ (Voting Day) ಆ ಎರಡು ದಿನವೂ ಸಾರ್ವತ್ರಿಕ ರಜೆಯನ್ನು (Government Holiday) ಘೋಷಿಸಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು (Paid leave) ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ದಿನಗಳಂದು ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.

ರಜೆ ಸಿಕ್ಕ ಖುಷಿಯಲ್ಲಿ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗದೆ ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ. ಹೀಗಾಗಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಝೂ, ಸಫಾರಿ ಮತ್ತು ಚಿಟ್ಟೆ ಪಾರ್ಕ್ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುವುದಿಲ್ಲ. ಏಪ್ರಿಲ್‌ 26ರಂದು ಮತದಾನ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ ಘೋಷಿಸಲಾಗಿದೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಜನರು ಸಕ್ರಿಯವಾಗಿ ಭಾಗಿಯಾಗಲೆಂದು ರಜೆ ಘೋಷಣೆ ಮಾಡಲಾಗಿದೆ.

ಮತದಾನದ ಪ್ರಮಾಣ ಹೆಚ್ಚಳ ಮಾಡುವ ದೃಷ್ಟಿಯಿಂದ ಏಪ್ರಿಲ್‌ 26ರಂದು ಬನ್ನೇರುಘಟ್ಟ ಪಾರ್ಕ್‌ ರಜೆ ಇರಲಿದೆ. 26 ಬದಲಾಗಿ ಏಪ್ರಿಲ್‌ 30ರಂದು ಪಾರ್ಕ್‌ ತೆರೆಯಲಿದೆ. ಬನ್ನೇರುಘಟ್ಟ ಪಾರ್ಕ್‌ ಪ್ರತಿ ಮಂಗಳವಾರ ರಜೆ ಇರುತ್ತಿತ್ತು. ಆದರೆ 26ರ ರಜೆಯನ್ನು ಸರಿದೂಗಿಸುವ ಸಲುವಾಗಿ ಏಪ್ರಿಲ್‌ 30ರಂದು ಪ್ರವಾಸಿಗರ ವೀಕ್ಷಣೆಗೆ ಲಭ್ಯ ಇರಲಿದೆ.

ಇದನ್ನೂ ಓದಿ: Namma Metro: ಮತ್ತೆ ಅವಮಾನ ಮಾಡಿದ ನಮ್ಮ ಮೆಟ್ರೋ; ಬಟನ್‌ ಇಲ್ಲದ್ದಕ್ಕೆ ಕಾರ್ಮಿಕನಿಗೆ ಪ್ರವೇಶ ನೀಡದ ಸಿಬ್ಬಂದಿ!

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ

1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)
2.ಹಾಸನ (ಸಾಮಾನ್ಯ)
3.ದಕ್ಷಿಣ ಕನ್ನಡ (ಸಾಮಾನ್ಯ)
4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)
5. ತುಮಕೂರು (ಸಾಮಾನ್ಯ)
6.ಮಂಡ್ಯ (ಸಾಮಾನ್ಯ)
7.ಮೈಸೂರು-ಕೊಡಗು (ಸಾಮಾನ್ಯ)
8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)
9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)
10 ಬೆಂಗಳೂರು ಉತ್ತರ (ಸಾಮಾನ್ಯ)
11. ಬೆಂಗಳೂರು ಕೇಂದ್ರ (ಸಾಮಾನ್ಯ)
12. ಬೆಂಗಳೂರು ದಕ್ಷಿಣ (ಸಾಮಾನ್ಯ)
13.ಚಿಕ್ಕಬಳ್ಳಾಪುರ (ಸಾಮಾನ್ಯ)
14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)

Lok Sabha Election 2024 Karnataka declares 2 day general holiday
Lok Sabha Election 2024 Karnataka declares 2 day general holiday

ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ

1.ಚಿಕ್ಕೋಡಿ (ಸಾಮಾನ್ಯ)
2.ಬೆಳಗಾವಿ (ಸಾಮಾನ್ಯ)
3.ಬಾಗಲಕೋಟೆ (ಸಾಮಾನ್ಯ)
4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)
5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)
6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)
7.ಬೀದರ್ (ಸಾಮಾನ್ಯ)
8,ಕೊಪ್ಪಳ (ಸಾಮಾನ್ಯ)
9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)
10. ಹಾವೇರಿ (ಸಾಮಾನ್ಯ)
11. ಧಾರವಾಡ (ಸಾಮಾನ್ಯ)
12.ಉತ್ತರ ಕನ್ನಡ (ಸಾಮಾನ್ಯ)
13.ದಾವಣಗೆರೆ (ಸಾಮಾನ್ಯ)
14.ಶಿವಮೊಗ್ಗ (ಸಾಮಾನ್ಯ)

Lok Sabha Election 2024 Karnataka declares 2 day general holiday

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ಮತದಾನ ನಡೆಯುವ 2 ದಿನವೂ ಸಾರ್ವತ್ರಿಕ ರಜೆ ಘೋಷಣೆ

ಗನ್‌ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ಕೇಸ್‌; ಸರ್ಕಾರಕ್ಕೆ ಆರ್‌. ಅಶೋಕ್‌, ವಿಜಯೇಂದ್ರ ಕ್ಲಾಸ್‌

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ರೋಡ್‌ ಶೋ ನಡೆಸುವ ವೇಳೆ ಸೊಂಟದಲ್ಲಿ ಗನ್‌ ಇಟ್ಟುಕೊಂಡಿದ್ದ ವ್ಯಕ್ತಿ ಸಿಎಂಗೆ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್‌ನದ್ದು ಗೂಂಡಾ ರಾಜ್ಯ, ಪೊಲೀಸ್‌ ಇಲಾಖೆ ಸತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಸಹ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಎಂಥವರನ್ನು ಕಟ್ಟಿಕೊಂಡು ಚುನಾವಣೆ ನಡೆಸಲು ಹೊರಟಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿ ಒದಗಿಸಿದೆ ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ಕಾಂಗ್ರೆಸ್‌ ಕಾರ್ಯಕರ್ತರು ಗನ್‌ ಇಟ್ಟುಕೊಂಡು ಓಡಾಡುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ಹೇಳಿದರು.

ಚುನಾವಣೆಯ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್‌ ವಾಪಸ್‌ ಕೊಡಬೇಕಾಗಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್‌ ಅನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್‌ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂತಹವರು ಮುಖ್ಯಮಂತ್ರಿಗಳಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಕಾಂಗ್ರೆಸ್ಸಿನ ಗೂಂಡಾ ರಾಜ್ಯ ಎಂದು ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದರು.

ಇದು ಅತಿ ದೊಡ್ಡ ಭದ್ರತಾ ವೈಫಲ್ಯವಾಗಿದೆ. ಇನ್ನು ನಾಳೆಯ ದಿನಗಳಲ್ಲಿ ಯಾರಾದರೂ ಬಾಂಬ್‌ ಇಟ್ಟುಕೊಂಡು ಓಡಾಡಬಹುದು. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ನಾನು ಸದನದಲ್ಲೇ ಹೇಳಿದ್ದೆ. ಇದು ಕೂಡ ಒಂದು ನಿದರ್ಶನ. ಇದಕ್ಕೆ ಸರ್ಕಾರ ಏನು ಉತ್ತರ ಕೊಡಲಿದೆ ಎಂದು ಜನರು ನಿರೀಕ್ಷಿಸುತ್ತಿದ್ದಾರೆ. ಈ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಎಂದು ಆರ್.‌ ಅಶೋಕ್‌ ತಿಳಿಸಿದರು.

ಕೇರಳ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿತ್ತು. ಕರ್ನಾಟಕ ಸರ್ಕಾರ ಈಗಾಗಲೇ ಬರ ಪರಿಹಾರ ಬಿಡುಗಡೆ ಮಾಡಬೇಕಿದ್ದರೂ, ಚುನಾವಣೆಯ ಸಮಯದಲ್ಲಿ ಕೇಂದ್ರದ ಮೇಲೆ ಆರೋಪ ಮಾಡಲಾಗಿದೆ. ರಾಜ್ಯ ಸರ್ಕಾರ ಉಚಿತಗಳನ್ನು ನೀಡಿ ಹಣ ಖಾಲಿ ಮಾಡಿಕೊಂಡಿರುವುದರಿಂದ ಪರಿಹಾರ ನೀಡಲು ಹಣವಿಲ್ಲ ಎಂದು ಆರ್.‌ ಅಶೋಕ್‌ ಹೇಳಿದರು.

ಬಿ.ವೈ. ವಿಜಯೇಂದ್ರ ವಾಗ್ದಾಳಿ

ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷದ ರೋಡ್ ಶೋ ವೇಳೆ ಗನ್ ಇಟ್ಟುಕೊಂಡ ವ್ಯಕ್ತಿಯೊಬ್ಬ ಮುಖ್ಯಮಂತ್ರಿಗಳಿಗೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಾರ ಹಾಕಿರುವ ಘಟನೆ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿ.ವೈ. ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.

ನೀತಿ ಸಂಹಿತೆ ಜಾರಿಯಾದ ಬೆನ್ನಲೇ ಸ್ವರಕ್ಷಣೆಗಾಗಿ ಗನ್ ಲೈಸನ್ಸ್ ಪಡೆದು ತಮ್ಮ ಬಳಿ ಇಟ್ಟುಕೊಳ್ಳುವವರಿಂದ ಆಯುಧಗಳನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸ್ವಾಧೀನಕ್ಕೆ ತೆಗೆದು ಕೊಳ್ಳುವ ಪೋಲಿಸರು ಈ ವ್ಯಕ್ತಿಯಿಂದ ಗನ್ ಏಕೆ ವಶಕ್ಕೆ ಪಡೆದುಕೊಂಡಿಲ್ಲ ಎಂಬುದು ನಿಗೂಢ ಪ್ರಶ್ನೆಯಾಗಿದೆ. ಈ ವ್ಯಕ್ತಿಯಾರು? ಈತನ ಹಿನ್ನಲೆ ಏನು ಎಂಬ ಬಗ್ಗೆ ತನಿಖೆಯಾಗಬೇಕಿದೆ. ಕಾಂಗ್ರೆಸ್ ಎಂಥವರನ್ನು ಕಟ್ಟಿಕೊಂಡು ಚುನಾವಣೆ ನಡೆಸಲು ಹೊರಟಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿ ಒದಗಿಸಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಸೇರಿದ ವಾಣಿ ಶಿವರಾಂ; ಕಾಂಗ್ರೆಸ್‌ ವಕ್ತಾರೆಯಾಗಿ ತೇಜಸ್ವಿನಿ ಗೌಡ ನೇಮಕ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ವಿಧ್ವಂಸಕರ ಅಟ್ಟಹಾಸ ಮರುಕಳಿಸುತ್ತಲೇ ಇದ್ದು ಇಂದಿನ ಈ ಘಟನೆಯ ಕುರಿತು ಚುನಾವಣಾ ಆಯೋಗ ಗಂಭೀರ ಕ್ರಮಕ್ಕೆ ಮುಂದಾಗಬೇಕಿದೆ, ಇದರ ಜತೆಗೇ ಸಮಾಜಘಾತುಕ ಶಕ್ತಿಗಳ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟು ಶಾಂತಿಯುತ ಮತದಾನಕ್ಕೆ ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಒತ್ತಾಯಿಸುವೆ ಎಂದು ಗುಡುಗಿದ್ದಾರೆ.

ಸಿಎಂ ಸಭೆಯಲ್ಲಿ ಭದ್ರತಾ ಲೋಪ ಆಗಬಾರದು: ಎಚ್‌ಡಿಕೆ

ಚುನಾವಣೆಯ ಪ್ರಚಾರದ ರೋಡ್ ಶೋ ಕಾರ್ಯಕ್ರಮದಲ್ಲಿ ಪಿಸ್ತೂಲು ಹೊಂದಿದ್ದ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಅವರಿಗೆ ಸನ್ಮಾನ ಮಾಡಿರುವ ಘಟನೆ ಭದ್ರತಾ ಲೋಪ ಆಗಬಾರದು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

Rain News: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Rain News
Koo

ಬೆಂಗಳೂರು: ರಾಜಧಾನಿ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಲ್ಲದೆ ಕಂಗೆಟ್ಟಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಬೆಂಗಳೂರಿನ ಹಲವೆಡೆ ದಿಢೀರನೆ ಸುರಿದ ಮಳೆಯಿಂದ (Rain News) ರಸ್ತೆಗಳು ಜಲಾವೃತವಾಗಿ ಹೊಳೆಯಂತಾಗಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು.

ಬೆಂಗಳೂರಲ್ಲಿ ಮಳೆ ಆರ್ಭಟ; ಸಿಟಿಯಲ್ಲಿ ಕೂಲ್ ವೆದರ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಸುರಿಯುತ್ತಿದೆ. ಇನ್ನು ನಗರದಲ್ಲಿ ಬುಧವಾರ ಸಂಜೆಯಿಂದ ಹಲವೆಡೆ ಮಳೆ ಅರ್ಭಟ ಶುರು ಆಗಿದ್ದು, ಶಿವಾಜಿನಗರ, ವಸಂತನಗರ, ಶಾಂತಿನಗರ, ಜಯ ನಗರ, ವಿಜಯ ನಗರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಯಶವಂತಪುರ, ರಾಜಾಜಿ ನಗರ, ಶೇಷಾದ್ರಿಪುರಂ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಭರ್ಜರಿ ಮಳೆಯ ಜೊತೆಗೆ ಗುಡುಗು-ಮಿಂಚು ಸಹ ಕಂಡು ಬಂದಿದೆ. ಬೇಸಿಗೆಯಲ್ಲಿ ಭಾರಿ ಮಳೆಯಿಂದ ರಾಜಧಾನಿಯ ವಾತಾವರಣ ತಂಪಾಗಿದ್ದರಿಂದ ಜನರು ಸಂತಸಪಡುತ್ತಿದ್ದಾರೆ.

ಮರ ಬಿದ್ದು 2 ಕಾರು ಜಖಂ

ಕೂಡ್ಲು ಗೇಟ್, ರೂಪೇನ ಅಗ್ರಹಾರದ ಬಳಿ ಮಳೆಯಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದದ್ದು ಕಂಡುಬಂತು. ಇನ್ನು ಮಡಿವಾಳ ಸುತ್ತ ಮುತ್ತಲೂ ಭಾರಿ ಮಳೆಗಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಉಲ್ಲಾಳ ಹತ್ತಿರದ ಜ್ಞಾನಜ್ಯೋತಿ ನಗರದಲ್ಲಿ ಮರ ಬಿದ್ದಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ 2 ಕಾರು ಜಖಂಗೊಂಡಿದೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪ ಹೆದ್ದಾರಿ ಜಲಾವೃತ

ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದ್ದರಿಂದ ಸವಾರರು ಪರದಾಡಿದರು. ಪ್ರತಿ ಬಾರಿ ಮಳೆ ಬಂದಾಗ ರಾಷ್ಟ್ರೀಯ ಹೆದ್ದಾರಿ ಹೊಳೆಯಂತಾಗುತ್ತದೆ. ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದರಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

ಕೊಡಗು, ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ಸುರಿದಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೂಡಿಗೆರೆ ಪಟ್ಟಣದಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಿಸಿಲಿಗೆ ನೀರಿಲ್ಲದೆ ಒಣಗುತಿದ್ದ ಬೆಳೆಗಳಿಗೆ ವರುಣ ತಂಪೆರೆದಿದ್ದಾನೆ. ರಣಬಿಸಿಲಿಗೆ ಕೃಷಿ ಚಟುವಟಿಕೆಗಳಿಂದ ಕಂಗೆಟ್ಟಿದ್ದ ಅನ್ನದಾತ, ಕೊನೆಗೂ ಒಂದಷ್ಟು ಮಳೆ ಬಂತಲ್ಲಾ ಎಂದು ನಿಟ್ಟುಸಿರು ಬಿಟ್ಟಿದ್ದಾನೆ.

ಕೆಜಿಎಫ್‌ನಲ್ಲಿ ಮನೆಗಳಿಗೆ ನುಗ್ಗಿದ ನೀರು

ಕೋಲಾರ: ಜಿಲ್ಲೆಯ ವಿವಿಧೆಡೆ ಬೆಳ್ಳಂ ಬೆಳಗ್ಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದ್ದರಿಂದ ಮಾವು ಹಾಗೂ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಇನ್ನು ಕೆಜಿಎಫ್ ನಗರದ ಹಲವು ಬಡಾವಣೆಗಳ ತಗ್ಗು ಪ್ರದೇಶ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಕೆಜಿಎಫ್‌ನ ರಾಬರ್ಟ್‌ಸನ್ ಪೇಟೆ, ಮಾರಿಕುಪ್ಪಮ್, ಫಿಶ್ ಲೈನ್ ಬಡಾವಣೆಗಳಲ್ಲಿ ಮನೆಗಳಿಗೆ ಮಳೆನೀರು ನುಗ್ಗಿದ್ದ ಮನೆಯಲ್ಲಿನ ವಸ್ತುಗಳು ನೀರುಪಾಲಾಗಿವೆ. ಇದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ.

ಮರ ಬಿದ್ದು ವ್ಯಕ್ತಿ ಸಾವು

ರಾತ್ರಿ ಸುರಿದ ಭಾರಿ ಮಳೆಗೆ ಮರ ಉರುಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ಸಮೀಪದ ಅಂತೇವನಪಲ್ಲಿಯಲ್ಲಿ ನಡೆದಿದೆ. ಬೆಳಗ್ಗೆ 8 ಗಂಟೆ ವೇಳೆಗೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ಮೇಲೆ ಮರದ ಬೇರು ಬಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಚಿಕಿತ್ಸೆಗಾಗಿ ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

ಇನ್ನು ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮೇ 10ರಂದು ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಸಹ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.

Continue Reading

ಕರ್ನಾಟಕ

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Hoskote News: ಬಿಜೆಪಿ ಸರ್ಕಾರದ ಅವಧಿಯಲ್ಲೂ ಹೊಸಕೋಟೆಯ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಗಳನ್ನು ನೇಮಿಸಲಾಗಿತ್ತು. ಹೀಗಾಗಿ ಜನರನ್ನು ಬಿಜೆಪಿ ನಾಯಕರು ತಪ್ಪುದಾರಿಗೆಳೆಯುವ ಕೆಲಸ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

VISTARANEWS.COM


on

Hoskote News
Koo

ಹೊಸಕೋಟೆ: ನಗರದ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಹಿಂದು ವಿರೋಧಿ ಸಿಎಂ ಸಿದ್ದರಾಮಯ್ಯ ಈಗ ಹಿಂದುಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪತ್ತನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಿಮ್ಮದೇ ಸರ್ಕಾರ ಇದ್ದಾಗ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ನಾಯಕರೇ… ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳುವಿರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳುತ್ತೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು.

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಏನು ಹೇಳಿತ್ತು?

ಹೊಸಕೋಟೆಯ ಅವಿಮುಕ್ಷೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ನೇಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ರಾಜ್ಯ ಬಿಜೆಪಿ, ದೇವಸ್ಥಾನದ ಬ್ರಹ್ಮೋತ್ಸವದ ಮೇಲ್ವಿಚಾರಣೆಗೆ ಕಾಂಗ್ರೆಸ್ ‘ನವಾಜ್’ ಅವರನ್ನು ನೇಮಿಸಿದೆ. ನಮ್ಮ ದೇವಸ್ಥಾನಗಳನ್ನು ಲೂಟಿ ಮಾಡಲು ಪ್ರಯತ್ನಿಸಿದ ನಂತರ, ಹಿಂದು ವಿರೋಧಿ ಸಿಎಂ ಸಿದ್ದರಾಮಯ್ಯ ಈಗ ಹಿಂದುಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪನ್ಮೂಲಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿತ್ತು.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಹಿಂದುಗಳ ಹಕ್ಕುಗಳನ್ನು ಕಸಿದುಕೊಳ್ಳುವ, ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುವ ರಾಹುಲ್ ಗಾಂಧಿಯವರ ಭ್ರಮೆಯ ಕಲ್ಪನೆಗಳನ್ನು ಕಾರ್ಯಗತಗೊಳಿಸಲು ಆತುರ ತೋರುತ್ತಿದೆ. ಇಂದು ಇದು ಕರ್ನಾಟಕದಲ್ಲಿ ಕೇವಲ ಒಂದು ದೇವಾಲಯ, ನಾಳೆ ಅದು ಭಾರತದ ಪ್ರತಿಯೊಂದು ದೇವಾಲಯವಾಗಬಹುದು. ಕಾಂಗ್ರೆಸ್ ಬಗ್ಗೆ ಎಚ್ಚರವಿರಲಿ ಎಂದು ಬಿಜೆಪಿ ತಿಳಿಸಿತ್ತು.

Continue Reading

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pune
ದೇಶ1 hour ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ2 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ2 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ2 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ3 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Hindu Girl
ದೇಶ3 hours ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್3 hours ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Murder Case
ಕರ್ನಾಟಕ3 hours ago

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Virat Kohli
ಕ್ರೀಡೆ4 hours ago

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Poonch Terrorists
ದೇಶ4 hours ago

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ20 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌