Lok Sabha Election 2024: ಬಿಜೆಪಿ ಕೈಗೊಂಬೆ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಡಿ.ಕೆ. ಸುರೇಶ್ - Vistara News

ಬೆಂಗಳೂರು ಗ್ರಾಮಾಂತರ

Lok Sabha Election 2024: ಬಿಜೆಪಿ ಕೈಗೊಂಬೆ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಡಿ.ಕೆ. ಸುರೇಶ್

Lok Sabha Election 2024: ಬಿಜೆಪಿ ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ.

VISTARANEWS.COM


on

MP D K Suresh latest statement In Anekal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ಬಿಜೆಪಿ (BJP) ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ (Lok Sabha Election 2024) ಆರೋಪಿಸಿದ್ದಾರೆ.

ಆನೇಕಲ್‌ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಕೆಲವು ಅಧಿಕಾರಿಗಳು ಬಂದು ನಮ್ಮ ಕಾರ್ಯಕರ್ತರನ್ನು, ಅವರ ಕುಟುಂಬದ ಹೆಣ್ಣುಮಕ್ಕಳನ್ನು ಬೆದರಿಸಿದ್ದಾರೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಬರೆಯುತ್ತಿದ್ದು, ಐಟಿ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ. ಅವರ ಕೆಲಸ ಕೇವಲ ಪರಿಶೀಲನೆ ಮಾಡುವುದು ಮಾತ್ರ. ಅದನ್ನು ಬಿಟ್ಟು ಬಿಜೆಪಿ ಪರ ಪ್ರಚಾರ ಮಾಡುವುದು ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಏ. 24ರಂದು ಭಾಷಾ ಉತ್ಸವ

ನನ್ನ ಚಾಲಕರ ಮನೆಯಲ್ಲಿ ಅವರ ಕುಟುಂಬದವರನ್ನು ಎಳೆದಾಡಿದ್ದಾರೆ. ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರನ್ನು ಒಂಟಿ ಕಾಲಲ್ಲಿ ನಿಲ್ಲಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ. ಅವರು ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಅಧಿಕಾರಿಗಳ ದುರ್ಬಳಕೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಚುನಾವಣೆ ನಿಷ್ಪಕ್ಷಪಾತ ಚುನಾವಣೆ ಮಾಡಬೇಕು. ನಾನು ನನ್ನ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ ಹೊರತು, ನನಗೆ ಯಾರನ್ನು ಬೆದರಿಸುವ ಅಗತ್ಯವಿಲ್ಲ ಎಂದು ಸಂಸದ ಡಿ.ಕೆ ಸುರೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟ ಹತ್ತಿ ಪ್ರಾರ್ಥಿಸಿದ ಅಭಿಮಾನಿಗಳು

ಜನತಾದಳ ಹಾಗೂ ಜೆಡಿಎಸ್‌ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ. ಅವರು ಹಿರಿಯರಿದ್ದು, ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿರುವ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದ ಅವರು, ನಾನು ಹಾಗೂ ಶಿವಕುಮಾರ್ ಅವರಿಗೆ ಕಲ್ಲು ಹೊಡೆದಿದ್ದಾರೆ ಎಂದು ಹೇಳುತ್ತಾರಲ್ಲ, ಅವರ ಕುಟುಂಬದಲ್ಲಿ ಯಾರೆಲ್ಲಾ ಎಲ್ಲಿ ಕಲ್ಲು ಹೊಡೆದಿದ್ದಾರೆ ಎಂದು ನಾನು ತೋರಿಸುತ್ತೇನೆ. ಅವರು ಯಾರ ಜಮಿನುಗಳನ್ನು ಯಾರ ಹೆಸರಲ್ಲಿ ಹಾಕಿಕೊಂಡಿದ್ದಾರೆ ಎಂಬುದನ್ನು ತೋರಿಸಬಹುದು. ಆದರೆ ಅದರ ಅಗತ್ಯ ನಮಗಿಲ್ಲ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

Taliban Writing: ತಾನು ಪೊಲೀಸ್‌ ಕೆಲಸ ಪಡೆಯಲು ದರ್ಗಾಕ್ಕೆ ಹರಕೆ ಹೊತ್ತಿರುವುದಾಗಿ, ಕೆಲಸ ಸಿಕ್ಕಿದ ಬಳಿಕ ಸಂಪೂರ್ಣ ಮುಸ್ಲಿಂ ಆಗಿರುವುದಾಗಿ ಹುಚ್ಚಾಟ ನಡೆಸಿದ ಪೊಲೀಸ್‌ ಪೇದೆ ಮುನಿರಾಜು ಹೇಳಿಕೊಂಡಿದ್ದಾನೆ. ಆತ ಈಗ ಜೈಲುಪಾಲಾಗಿದ್ದಾನೆ.

VISTARANEWS.COM


on

taliban writing muniraju
Koo

ಆನೇಕಲ್: ಆನೆಕಲ್‌ನಲ್ಲಿ (Anekal news) ತನ್ನ ಮನೆಯ ಕಾಂಪೌಂಡ್ ಮೇಲೆ ಹುಚ್ಚುಚ್ಚಾಗಿ ದೇಶದ್ರೋಹಿ, ಪ್ರಚೋದನಾತ್ಮಕ ಬರಹ (Taliban Writing) ಬರೆದಿರುವ ಪೊಲೀಸ್ ಪೇದೆ, ತಾನೀಗ ಮುಸ್ಲಿಂ ಧರ್ಮದ ಕಟ್ಟರ್‌ ಅನುಯಾಯಿ ಎಂದು ಹೇಳಿಕೊಂಡಿದ್ದಾನೆ. ಈತನನ್ನು ಪೊಲೀಸರು ವಶಕ್ಕೆ ಪಡೆದು (Crime news) ತನಿಖೆ ನಡೆಸುತ್ತಿದ್ದಾರೆ.‌ ಇದರ ಹಿಂದೆ ಮತಾಂತರ (conversion) ಆಯಾಮವೂ ಇದೆಯೇ ಎಂಬುದೂ ತನಿಖೆ ಆಗಬೇಕಾಗಿದೆ ಎಂದುಗ್ರಾಮಸ್ಥರು ಹೇಳಿದ್ದಾರೆ.

ತಾನು ಪೊಲೀಸ್‌ ಕೆಲಸ ಪಡೆಯಲು ದರ್ಗಾಕ್ಕೆ ಹರಕೆ ಹೊತ್ತಿರುವುದಾಗಿ, ಕೆಲಸ ಸಿಕ್ಕಿದ ಬಳಿಕ ಸಂಪೂರ್ಣ ಮುಸ್ಲಿಂ ಆಗಿರುವುದಾಗಿ ಹುಚ್ಚಾಟ ನಡೆಸಿದ ಪೊಲೀಸ್‌ ಪೇದೆ ಮುನಿರಾಜು ಹೇಳಿಕೊಂಡಿದ್ದಾನೆ. ಆತ ಈಗ ಜೈಲುಪಾಲಾಗಿದ್ದಾನೆ. ಈ ಘಟನೆ ಸೂರ್ಯಸಿಟಿ ಠಾಣಾ ವ್ಯಾಪ್ತಿಯ ಬಂಡಾಪುರದಲ್ಲಿ ನಡೆದಿದೆ. ಗ್ರಾಮಸ್ಥರಿಂದ ವಿಷಯ ತಿಳಿದು ಆರೋಪಿ ಮುನಿರಾಜುನನ್ನು ಬಂಧಿಸಲು ಪೊಲೀಸರು ಮುಂದಾದಾಗ, ಬಂಧಿಸಲು ಬಂದ ಪೊಲೀಸರಿಗೆ “ನನ್ನನ್ನು ಕರೆದೊಯ್ಯಲು ಬಂದು ದೊಡ್ಡ ತಪ್ಪು ಮಾಡುತ್ತಿದ್ದೀರಿ. ನನ್ನ ಕೈಯನ್ನು ಮುಟ್ಟಬೇಡಿ. ಬಿಡಿ” ಎಂದು ಈತ ಅವಾಜ್ ಹಾಕಿದ್ದಾನೆ.

ವಿಚಾರಣೆ ವೇಳೆ ತಾನು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲಸಕ್ಕೆ ಸೇರುವ ಮುನ್ನಾ ಒಂದು ದರ್ಗಾಕ್ಕೆ ಹೋಗಿ ಹರಕೆ ಮಾಡಿಕೊಂಡಿದ್ದೆ. ನನಗೆ ಪೊಲೀಸ್ ಉದ್ಯೋಗ ಸಿಕ್ಕಿದ್ದು, ಅಂದಿನಿಂದಲೇ ನಾನು ಮುಸ್ಲಿಂ ಧರ್ಮದ ಅನುಯಾಯಿಯಾದೆ ಎಂದು ಹೇಳಿಕೆ ನೀಡಿದ್ದಾನೆ. ತಾನೇ ತನ್ನ ಕೈಯಿಂದ ಮನೆ ಗೋಡೆ, ಕಾಂಪೌಂಡ್ ಹಾಗೂ ಗೇಟ್ ಮತ್ತು ಸುತ್ತಲಿನ ಗೋಡೆ ಮೇಲೆ ಬರೆದಿರುವುದಾಗಿ ತಿಳಿಸಿದ್ದಾನೆ. ಈ ಬರಹಗಳು ಸಮಾಜದ ಶಾಂತಿ ಕದಡುವಂತಿವೆ. ಜವಾಬ್ದಾರಿಯುತ ಪೊಲೀಸನಾಗಿ ಹೀಗೆ ಬರೆಯಬಹುದೇ ಎಂಬ ಪ್ರಶ್ನೆಗೆ, ತಾನು ಮಾಡಿರುವುದು ಸರಿ. ಪಶ್ಚಾತ್ತಾಪವಿಲ್ಲ ಎಂದಿದ್ದಾನೆ.

ಇಸ್ಲಾಂ, ಥರ್ಡ್ ವರ್ಲ್ಡ್ ವಾರ್, ತಾಲಿಬಾನ್ ಇಂಡಿಯಾ ಹೆಡ್ ಬಿ ಕೇರ್ ಫುಲ್ (Taliban india head be careful) ಸಲಾಂ ಇಸ್ಲಾಂ, ಸೇರಿದಂತೆ ಆತಂಕ ಸೃಷ್ಟಿಸುವ ಹಲವು ರೀತಿಯ ಗೋಡೆ ಬರಹಗಳು ಕಂಡು ಬಂದಿದೆ. ಇಡೀ ಮನೆಯ ಗೋಡೆ ತುಂಬೆಲ್ಲಾ ದೇಶ ವಿರೋಧಿ ಬರಹಗಳಿದ್ದು, ಗೇಟ್‌ನ ಒಂದು ಬದಿಯಲ್ಲಿ ರಾಜೀವ್ ಗಾಂಧಿ ಎಂದೂ ಬರೆದಿದೆ. ಈ ಪ್ರಚೋದನಾತ್ಮಕ ಬರಹಗಳು ದೇಶದ್ರೋಹಿ ಕೃತ್ಯ ಎಂದು ಕೆಲವು ಗ್ರಾಮಸ್ಥರು ಆಪಾದಿಸಿದ್ದಾರೆ.

ಪಾಕಿಸ್ತಾನ ಬಾವುಟ ಹಾರಿಸಿದ್ದ!

ಕಾನ್‌ಸ್ಟೇಬಲ್‌ ಮುನಿರಾಜು ನಶೆಯಲ್ಲಿ ಇಂತಹ ಕೃತ್ಯವೆಸಗಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ, ಈತ ಬೆಂಗಳೂರಿನ ವಿಲ್ಸನ್ ಗಾರ್ಡನ್ ಮತ್ತು ಬಾಣಸವಾಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಕಳೆದ ಮೂರು ತಿಂಗಳಿಂದ ಕರ್ತವ್ಯಕ್ಕೆ ಚಕ್ಕರ್ ಹೊಡೆದಿದ್ದಾನೆ. ಸದಾ ಪಾನಮತ್ತನಾಗಿ ಹುಚ್ಚನಂತೆ ವರ್ತಿಸುವ ಈತ ಮೂರು ತಿಂಗಳ ಹಿಂದೆ ಮನೆಯ ಮೇಲೆ ಪಾಕಿಸ್ತಾನ ಬಾವುಟ ಹಾರಿಸಿದ್ದ ಎನ್ನಲಾಗಿದೆ. ಇತ್ತೀಚೆಗೆ ಗ್ರಾಮದಲ್ಲಿ ಗೂಂಡಾ ರೀತಿ ವರ್ತನೆ ಮಾಡುತ್ತಾ ಲಾಂಗು ಮಚ್ಚು ಹಿಡಿದು ಜನರನ್ನು ಹೆದರಿಸುತ್ತಿದ್ದ. ಈ ಹಿಂದೆಯೂ ಇದೇ ರೀತಿ ಬರಹಗಳನ್ನು ಬರೆದಿದ್ದು, ಗ್ರಾಮಸ್ಥರು ಎಚ್ಚರಿಸಿ ತೆರವುಗೊಳಿಸಿದ್ದರು. ಮತ್ತೆ ಇಂತಹ ದೇಶದ್ರೋಹಿ ಬರಹಗಳನ್ನು ಬರೆದಿದ್ದಾನೆ.

ಮನೆಯಲ್ಲಿ ತಂದೆ ತಾಯಿ ಮತ್ತು ಪತ್ನಿಯ ಮಾತನ್ನೂ ಕೇಳದೆ ಅವರ ಮೇಲೆಯೇ ಹಲ್ಲೆ ಮಾಡುತ್ತಿದ್ದ. ಕುಡಿತದ ಚಟಕ್ಕೆ ಬಿದ್ದ ಮತ್ತಿನಲ್ಲಿ ದೇಶ ವಿರೋಧಿ ಬರಹಗಳನ್ನು ಬರೆದಿದ್ದ ಎನ್ನಲಾಗಿದೆ. ಮದುವೆ ಆದ ಬಳಿಕ ತಾನು ತಾಲಿಬಾನ್‌ಗೆ ಸೇರಿಕೊಂಡಿದ್ದಾಗಿ ತಿಳಿಸಿ ಅಲ್ಲಾ ಎಂದು ಕೂಗುತ್ತಿದ್ದ ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Self Harming : ಇಬ್ಬರು ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆಹುತಿಯಾದ ತಾಯಿ

Continue Reading

ಬೆಂಗಳೂರು ಗ್ರಾಮಾಂತರ

Road Accident: ಪಂಚರ್‌ ಹಾಕುತ್ತಿದ್ದ ಲಾರಿ ಚಾಲಕ ಬೈಕ್‌ ಡಿಕ್ಕಿಯಾಗಿ ಸಾವು, ಹಿಟ್‌ ಆ್ಯಂಡ್‌ ರನ್‌ನಲ್ಲಿ ಯುವಕ ಮೃತ

Road Accident: ಲಾರಿ ಪಂಚರ್‌ ಹಾಕುತ್ತಿದ್ದ ಚಾಲಕನಿಗೆ ಬೈಕ್‌ ಡಿಕ್ಕಿಯಾಗಿ ಚಾಲಕ ಸಾವು ಕಂಡಿದ್ದರೆ, ಇನ್ನೊಂದು ಪ್ರಕರಣದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವಿಗೀಡಾಗಿದ್ದಾರೆ.

VISTARANEWS.COM


on

road accident anekal
ಪ್ರತಾಪ್‌, ರೋಹಿತ್‌ ಕುಮಾರ್
Koo

ಆನೇಕಲ್: ಬೆಂಗಳೂರು ಗ್ರಾಮಾಂತರ ಪ್ರದೇಶ (Bangalore Rural) ಆನೇಕಲ್‌ನಲ್ಲಿ (Anekal news) ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ (Road Accident) ಇಬ್ಬರು ಅಸುನೀಗಿದ್ದಾರೆ. ಅಪಘಾತದ ಭೀಕರತೆಗೆ ಇಬ್ಬರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ಥಳಿರಸ್ತೆಯ ಸುಣವಾರ ಗೇಟ್ ಸಮೀಪ ಒಂದು ಘಟನೆ ನಡೆದಿದ್ದು, ಲಾರಿ ಚಾಲಕ ಪಂಚರ್ ಆಗಿದ್ದ ಲಾರಿಯ ಟೈರ್ ಚೇಂಜ್‌ ಮಾಡುವಾಗ ಅಪಘಾತ ನಡೆದಿದೆ. ಟೈರ್ ಓಪನ್ ಮಾಡಲು ಜಾಕ್ ಹಾಕುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದೆ. ಜಾಕ್ ಸ್ಲಿಪ್ ಆಗುತ್ತಿದ್ದಂತೆ ಚಾಲಕನ ಮೇಲೆ ಲಾರಿ ಕುಸಿದಿದೆ. ಲಾರಿ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ದೊಡ್ಡಹಾಗಡೆ ಗ್ರಾಮದ ರೋಹಿತ್ ಕುಮಾರ್ ಸಾವನ್ನಪ್ಪಿದ ಲಾರಿ ಚಾಲಕ. ಗೊಬ್ಬರ ತುಂಬಿದ್ದ ಲಾರಿಯನ್ನು ಅನ್ಲೋಡ್ ಮಾಡಲು ಹೋಗುತ್ತಿದ್ದಾಗ ಸುಣವಾರ ಗೇಟ್ ಬಳಿ ಪಂಚರ್ ಆಗಿತ್ತು. ಮತ್ತೊಂದು ಟೈರ್ ಹಾಕಲು ಲಾರಿಯ ಕೆಳಗೆ ಮಲಗಿ ಜಾಕ್ ಹಾಕುತ್ತಿದ್ದರು. ಕತ್ತಲಿನಲ್ಲಿ ಕಾಣದೆ ಅತಿವೇಗವಾಗಿ ಬಂದ ಬೈಕ್ ಸವಾರ ಲಾರಿ ಚಾಲಕನಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಲಾರಿಯ ಜಾಕ್ ಸ್ಲಿಪ್ ಆಗುತ್ತಿದ್ದಂತೆ ಚಾಲಕನ ತಲೆಯ ಮೇಲೆ ಲಾರಿ ಕುಸಿದಿತ್ತು. ಡಿಕ್ಕಿಯ ರಭಸಕ್ಕೆ ಮೆದುಳು ಹೊರಗೆ ಬಂದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿದ್ದಾರೆ.

ಇನ್ನೊಂದು ಘಟನೆಯಲ್ಲಿ, ಹಿಟ್ ಆಂಡ್ ರನ್‌ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ಘಟನೆ ನಡೆದಿದೆ. ಪ್ರತಾಪ್(26) ಸಾವನ್ನಪ್ಪಿದ ಬೈಕ್ ಸವಾರ. ಸ್ನೇಹಿತನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಅಪರಿಚಿತ ವಾಹ‌ನ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಹಿಟ್ ಅಂಡ್ ರನ್ ಅಪಘಾತಕ್ಕೆ ಬೈಕ್ ಸವಾರ ಪ್ರತಾಪ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಆಧರಿಸಿ, ಅಪಘಾತ ನಡೆಸಿದ ವಾಹನದ ತಲಾಶೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case Prajwal Congress supported MP Says Ashok
ಕ್ರೈಂ22 mins ago

‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ಅಶೋಕ್ ಉಲ್ಟಾ ಹೊಡೆದಿದ್ದೇಕೆ?

shyam rangeela
ದೇಶ23 mins ago

Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Prajwal Revanna Case
ಪ್ರಮುಖ ಸುದ್ದಿ24 mins ago

Prajwal Revanna Case: ಪ್ರಜ್ವಲ್ ಗಂಡಾಂತರ; ಜ್ಯೋತಿಷಿ ಮೊರೆ ಹೋದ ದೇವೇಗೌಡ, ರೇವಣ್ಣ!

Chaitra Achar
ಫ್ಯಾಷನ್51 mins ago

Chaitra Achar: ನೋಡುಗರ ಹುಬ್ಬೇರಿಸಿದ ನಟಿ ಚೈತ್ರಾ ಆಚಾರ್‌ ಪಾರದರ್ಶಕ ನಿಟ್‌ವೇರ್

Veena kashappanavar
ಕರ್ನಾಟಕ1 hour ago

Veena Kashappanavar: ರಾಜಕೀಯದಿಂದ ದೂರ ಸರಿದ್ರಾ ವೀಣಾ ಕಾಶಪ್ಪನವರ್‌? ಭಾವನಾತ್ಮಕ ಪೋಸ್ಟ್‌ ಹಾಕಿದ ಕೈ ನಾಯಕಿ!

Mayank Yadav
ಕ್ರೀಡೆ1 hour ago

Mayank Yadav: ಗಾಯಾಳು ಮಾಯಾಂಕ್‌ ಯಾದವ್‌ ಐಪಿಎಲ್​ನಿಂದ ಔಟ್​?

Bomb threat
ದೇಶ2 hours ago

Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Saree Fashion
ಫ್ಯಾಷನ್2 hours ago

Saree Fashion: ಸೀರೆಯ ಹೊಸ ಟ್ರೆಂಡ್‌ ಬಗ್ಗೆ ರ‍್ಯಾಪರ್‌ ಇಶಾನಿಯ ವ್ಯಾಖ್ಯಾನ ಇದು!

karnataka weather Forecast
ಮಳೆ2 hours ago

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Lottery
ವೈರಲ್ ನ್ಯೂಸ್2 hours ago

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌