Site icon Vistara News

Lok Sabha Election 2024: ಚನ್ನಪಟ್ಟಣದ ವಿವಿಧೆಡೆ ಸಂಸದ ಡಿ.ಕೆ.ಸುರೇಶ್‌ ಮತಯಾಚನೆ

MP DK Suresh election campaign in various places of Channapattana

ಚನ್ನಪಟ್ಟಣ: ತಾಲೂಕಿನ ಕೋಡಂಬಳ್ಳಿ, ಸಿಂಗಾರಾಜಿಪುರದಲ್ಲಿ ಬುಧವಾರ ಸಂಸದ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್‌, ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ (Lok Sabha Election 2024) ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಿ.ಕೆ.ಸುರೇಶ್‌ ರಾಜ್ಯ ಕಾಂಗ್ರೆಸ್‌ ಸರ್ಕಾರವು (State Congress Government) ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಎಲ್ಲರಿಗೂ ತಲುಪುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ, ಕಾಂಗ್ರೆಸ್‌ ಶಕ್ತಿ ಹೆಚ್ಚಿಸಿ ಎಂದು ಮನವಿ ಮಾಡಿದರು.

ಚನ್ನಪಟ್ಟಣ ತಾಲೂಕಿನ ವಿವಿಧೆಡೆ ಬುಧವಾರ ಸಂಸದ ಡಿ.ಕೆ. ಸುರೇಶ್‌ ಚುನಾವಣಾ ಪ್ರಚಾರ ನಡೆಸಿದರು.

ಇದನ್ನೂ ಓದಿ: ಚಂದ್ರನ ಅಂಗಳದಲ್ಲಿ ಭಾರತೀಯನನ್ನು ಇಳಿಸುವ ತನಕ ಬಿಡಲ್ಲ; ಇಸ್ರೋ ಅಧ್ಯಕ್ಷ ಮಹತ್ವದ ಘೋಷಣೆ

ಮಾಜಿ ಸಿಎಂ ಕುಮಾರಸ್ವಾಮಿ ಅವರು ರಾಮನಗರ ಒಂದು ಕಣ್ಣು, ಚನ್ನಪಟ್ಟಣ ಒಂದು ಕಣ್ಣು ಎನ್ನುತ್ತಿದ್ದರು. ಆದರೆ ಈಗ ಇವೆರಡು ಕಣ್ಣನ್ನು ಬಿಟ್ಟು ಮಂಡ್ಯಕ್ಕೆ ಹೋಗಿದ್ದಾರೆ ಎಂದು ದೂರಿದ ಅವರು, ನಿಮ್ಮ ಸಮಸ್ಯೆ ಏನೇ ಇದ್ದರೂ ನಿಮ್ಮ ಜತೆ ಇದ್ದು ಕೆಲಸ ಮಾಡುತ್ತೇನೆ. ನಾನು ಕೇವಲ ಚುನಾವಣೆ ಸಮಯದಲ್ಲಿ ಮಾತ್ರ ಬರುವುದಿಲ್ಲ. ಎಲ್ಲಾ ಸಂದರ್ಭದಲ್ಲೂ ನಿಮ್ಮ ಜತೆ ಇರುತ್ತೇನೆ. ಕೋವಿಡ್ ಸಂದರ್ಭದಲ್ಲೂ ನಿಮ್ಮ ಕಷ್ಟಕ್ಕೆ ಸ್ಪಂದಿಸಿದ್ದೇನೆ. ತಮಗೆ ಮತ ನೀಡಿ ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಇದನ್ನೂ ಓದಿ: T20 World Cup: ಟಿ20 ವಿಶ್ವಕಪ್​ನಲ್ಲಿ ರೋಹಿತ್​ ಜತೆ ವಿರಾಟ್​ ಕೊಹ್ಲಿ ಆರಂಭಿಕನಾಗಿ ಕಣಕ್ಕೆ

ಮುಂದಿನ ದಿನಗಳಲ್ಲಿ ಚನ್ನಪಟ್ಟಣದ ತಾಲೂಕಿನ ಪ್ರತಿ ಹಳ್ಳಿಯ ಮನೆ-ಮನೆಗೆ ಕುಡಿಯುವ ನೀರು ಪೂರೈಸುವುದಾಗಿ ಭರವಸೆ ನೀಡಿದ ಅವರು, ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ, ತಮಗೆ ಮತ ನೀಡುವಂತೆ ಅವರು ಇದೇ ವೇಳೆ ಮನವಿ ಮಾಡಿದರು.

Exit mobile version