Murder Case : ಬನ್ನೇರುಘಟ್ಟದಲ್ಲಿ ಮಗನಿಂದಲೇ ತಂದೆಯ ಬರ್ಬರ ಹತ್ಯೆ - Vistara News

ಬೆಂಗಳೂರು ಗ್ರಾಮಾಂತರ

Murder Case : ಬನ್ನೇರುಘಟ್ಟದಲ್ಲಿ ಮಗನಿಂದಲೇ ತಂದೆಯ ಬರ್ಬರ ಹತ್ಯೆ

VISTARANEWS.COM


on

Murder case
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ಮಗನಿಂದಲೇ ತಂದೆಯ ಬರ್ಬರ ಹತ್ಯೆಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮನೆಯಲ್ಲಿದ್ದ ಚಾಕುವಿನಿಂದ ಇರಿದು ತಂದೆಯನ್ನು ಪಾಪಿ ಮಗ ಕೊಲೆ ಮಾಡಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಘಟನೆ ನಡೆದಿದೆ.

ವೇಲಾಯುದನ್ (76) ಕೊಲೆಯಾದವರು. ವಿನೋದ್ ಕುಮಾರ್ ಕೊಲೆ ಆರೋಪಿ ಆಗಿದ್ದಾನೆ. ಮೂಲತಃ ಕೇರಳ ಮೂಲದ ಏರಿಮಲೆ ಮೂಲದವರು. ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಮನೆಯಲ್ಲಿದ್ದ ಚಾಕು ತೆಗೆದುಕೊಂಡು ತಂದೆಗೆ ಇರಿದಿದ್ದಾನೆ. ಸ್ಥಳದಲ್ಲೇ ತೀವ್ರ ರಕ್ತಸ್ರಾವವಾಗಿ ವೇಲಾಯುದನ್ ಮೃತಪಟ್ಟಿದ್ದಾರೆ.

Father brutally murdered by son in Bannerghatta
Father brutally murdered by son in Bannerghatta

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬನ್ನೇರುಘಟ್ಟ ಪೊಲೀಸರು, ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಆರೋಪಿ ವಿನೋದ್‌ನನ್ನು ಬನ್ನೇರುಘಟ್ಟ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ತುಮಕೂರು

Spider detection : ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆ

Spider detection : ತುಮಕೂರು ಜಿಲ್ಲೆಯ ದೇವರಾಯನದುರ್ಗದ ಬಳಿಯ ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಸಂಶೋದಕರು ಜೇಡಕ್ಕೆ ಸ್ಥಳೀಯ ಹೆಸರನ್ನೇ ನಾಮಕರಣ ಮಾಡಿದ್ದು, “ತೆಂಕಣ ಜಯಮಂಗಲಿ” ಜೇಡ ಎಂಬ ಹೆಸರಿಟ್ಟಿದ್ದಾರೆ.

VISTARANEWS.COM


on

By

Spider detection A new species of spider found on the banks of Jayamangali river
Koo

ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ (Spider detection) ಪತ್ತೆಯಾಗಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಪ್ರಾರಂಭವಾದ ಸಂಶೋಧನೆ ವೇಳೆ ಹೊಸ ಪ್ರಭೇದ ಜೇಡ ಪತ್ತೆಯಾಗಿತ್ತು. ತುಮಕೂರು ಜಿಲ್ಲೆಯ ದೇವರಾಯನದುರ್ಗದ ಬಳಿಯ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ ಪತ್ತೆಯಾಗಿತ್ತು. ವೈಲ್ಡ್ ಲೈಫ್ ಅವರ್ನೇಸ್ ನೇಚರ್ ತಂಡ ಮೊದಲಿಗೆ 2023ರ ಏಪ್ರಿಲ್ ತಿಂಗಳಿನಲ್ಲಿ ಪತ್ತೆ ಹಚ್ಚಿತ್ತು. ಸಂಶೋದಕರು ಜೇಡಕ್ಕೆ ಸ್ಥಳೀಯ ಹೆಸರನ್ನೇ ನಾಮಕರಣ ಮಾಡಿದ್ದರು. “ತೆಂಕಣ ಜಯಮಂಗಲಿ” ಜೇಡ ಎಂಬ ಹೆಸರಿಟ್ಟಿದ್ದರು.

Spider detection A new species of spider found on the banks of Jayamangali river

ಪ್ರಭೇದವಷ್ಟೇ ಅಲ್ಲದೆ ಇದರ ಜೀನಸ್ ಕೂಡ ವಿಜ್ಞಾನ ಲೋಕಕ್ಕೆ ಹೊಸದಾಗಿದೆ. ದೇವರಾಯನ ದುರ್ಗ ಕೇವಲ ಪುಣ್ಯ ಕ್ಷೇತ್ರವಷ್ಟೆ ಅಲ್ಲದೆ ಜೀವವೈವಿದ್ಯತೆಯ ತಾಣ ಎಂದು ಸಂಶೋಧಕ ಲೋಹಿತ್ ತಿಳಿಸಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಜೈವಿಕ ವಿಜ್ಲಾನ ಕೇಂದ್ರ ಮತ್ತು ಯೂನಿವರ್ಸಿಟಿ ಆಪ್ ಬ್ರಿಟೀಷ್ ಕೊಲಾಂಬಿಯಾ ಲ್ಯಾಬ್ ನ ಸಹಯೊಗದೊಂದಿಗೆ ಹೊಸ ಪ್ರಭೇದ ಗುರುತಿಸುವಿಕೆ ಕಾರ್ಯ ನಡೆದಿದೆ.

Spider detection A new species of spider found on the banks of Jayamangali river

ತುಮಕೂರಿನ ದೇವರಾಯನದುರ್ಗದ ಹೊಸ ಜೇಡ ಪ್ರಬೇಧವನ್ನು ಜಯಮಂಗಲಿ ನದಿಯ ಹೆಸರಿನಲ್ಲಿ ಪರಿಚಯಿಸಲಾಗುತ್ತಿದೆ. ಚಿನ್ಮಯ್ ಸಿ ಮಳಿಯೆ, ಲೋಹಿತ್ ವೈ ಟಿ ಮತ್ತು ವೈಲ್ಡ್ ಲೈಫ್ ಅವವೇರ್ನೆಸ್ ನೇಚರ್ ಕ್ಲಬ್ಬಿನ ನಿಶಾ ಬಿ ಜಿ ಕಾಡಿನ ಹುಡುಕಾಟಗಳಲ್ಲಿ ಈ ಜೇಡವು ಸಿಕ್ಕಿದ್ದು ಮತ್ತು ಮೊದಲು ಕಂಡಿದ್ದು ದೇವರಾಯನದುರ್ಗದ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ, ಏಪ್ರಿಲ್ 2023 ರಲ್ಲಿ.

ಒಂದೂವರೆ ವರ್ಷಗಳ ಹಿಂದೆ ಶುರುವಾದ ಈ ಸಂಶೋಧನೆ, ಜೀನಸ್ ಕೂಡ ಹೊಸದಾದ ಕಾರಣ ವಿಜ್ಞಾನಿಗಳಾದ ಜಾನ್ ಕೆಲಬ್, ಕಿರಣ್ ಮರಾಟೆ, ಕೃಷ್ಣಮೇಘ ಕುಂಟೆ ಮತ್ತು ಕೆನಡಾದ ವೈನೆ ಮ್ಯಾಡಿಸನ್ ಕೈ ಜೋಡಿಸಿದರು. ಎನ್ ಸಿ ಬಿ ಎಸ್ ಮತ್ತು ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ ಲ್ಯಾಬ್ಗಳೊಂದಿಗಿನ ಸಹಯೋಗದಲ್ಲಿ ಮೂಡಿಬಂತು.

ದೇವರಾಯನದುರ್ಗ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆ ಹೊಲ ಜಾಗದಿಂದ ಜೇಡದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಂತರಾಷ್ಟ್ರೀಯ ನಿಯತಕಾಲಿಕೆ Zookeys ಈ ಸಂಶೋಧನ ಬರಹವನ್ನು 11 ಅಕ್ಟೋಬರ್ 2024 ರಂದು ಪ್ರಕಟಿಸಿದೆ.

ಪ್ರಬೇಧವಷ್ಟೇ ಅಲ್ಲದೆ ಇದರ ಜೀನಸ್ ಕೂಡ ವಿಜ್ಞಾನ ಲೋಕಕ್ಕೆ ಹೊಸದು, ಅದನ್ನು ತೆಂಕಣ ಎಂದು ಹೆಸರಿಸಿದ್ದೇವೆ. ಎಷ್ಟೋ ಕೀಟ ಜೇಡಗಳಂತ ಜೀವಿಗಳ ಹೆಸರು ಆಂಗ್ಲ/ ಲ್ಯಾಟಿನ್ ಮಯವಾಗಿದ್ದು ಹೇಳಲು ನೆನಪಿಡಲು ಕಷ್ಟ, ಆ ಕಾರಣ ಇದು ತೆಂಕಣ ಜಯಮಂಗಲಿ.

ದೇವರಾಯನದುರ್ಗ ಕಾಡು, ಬೆಟ್ಟ, ನದಿ, ಜಲಮೂಲಗಳು ಜೀವವೈವಿಧ್ಯತೆಯನ್ನು ಪೋಶಿಸುತ್ತ ಸುತ್ತಲಿನ ನಗರ ಹಳ್ಳಿಗಳನ್ನು ಕಾಪಾಡುತ್ತಾ ಬಂದಿದೆ. ಈ ಹೊಸ ಜೇಡದಂತೆ ವಿಜ್ಞಾನಕ್ಕೆ ಪರಿಚಯವಿಲ್ಲದ ಇನ್ನೂ ಅನೇಕ ಜೀವಿಗಳು ಈ ಕಾಡಿನ ಕಣಜದಲ್ಲಿ ಇವೆ. ದೇವರಾಯನದುರ್ಗವನ್ನು ಕೇವಲ ಪುಣ್ಯಕ್ಷೇತ್ರ ಅಥವಾ ಪ್ರವಾಸಿ ತಾಣವಾಗಿಯಷ್ಟೇ ನೋಡಲು ಸಾಧ್ಯವಿಲ್ಲ, ಇದು ಜೀವವೈವಿಧ್ಯತೆಯ ತಾಣವೂ ಹೌದು.

Continue Reading

ಮಳೆ

Karnataka Rain : ಅಬ್ಬರಿಸುತ್ತಿರುವ ಮಳೆಗೆ ಕಂಗಲಾದ ರೈತರು; ಜಮೀನುಗಳಿಗೆ ನೀರು ನುಗ್ಗಿ ಅವಾಂತರ

Karnataka Rain : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರೈತರು ಕಂಗಲಾಗಿದ್ದಾರೆ. ಜಮೀನುಗಳು ಜಲಾವೃತಗೊಂಡಿದ್ದು, ಬೆಳೆ ಕೊಳೆತು ಹೋಗುವ ಆತಂಕದಲ್ಲಿದ್ದಾರೆ.

VISTARANEWS.COM


on

By

karnataka Rain
Koo

ಹಾವೇರಿ: ಹಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣನ (Karnataka Rain ) ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿದೆ. ನಗರದ ಪಿಬಿ ರಸ್ತೆ, ಹಾನಗಲ್ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ. ಕೆರೆಯಂತಾದ ರಸ್ತೆಗಳಲ್ಲಿ ವಾಹನ‌ ಸವಾರರು ಪರದಾಡಿದರು. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ‌ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರವೇ ಸೃಷ್ಟಿಯಾಗಿದೆ.

ಹಾವೇರಿ ತಾಲೂಕಿನ ಕನಕಾಪುರ ಬಳಿ ತುಂಗಾ ಮೇಲ್ದಂಡೆ ಯೋಜನೆ ಕಾಲುವೆ ಒಡೆದು ಬೆಳೆಹಾನಿಯಾಗಿದೆ. ಜಮೀನುಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಬ್ಯಾಡಗಿ ಪಟ್ಟಣದ ಜನಾತಾ ಪ್ಲಾಟ್‌ನ ಮನೆಗಳಿಗೆ ನೀರು ನುಗ್ಗಿದೆ. ಹಾವೇರಿ ಬ್ಯಾಡಗಿ ರಸ್ತೆ ತಡೆದು ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಪ್ರತಿಭಟಿಸಿದರು. ಮಳೆ ನೀರು ಹೋಗಲು ಸರಿಯಾದ ಕಾಲುವೆ ಇಲ್ಲದ ಪರಿಣಾಮ ಮಳೆ ನೀರು ಮನೆಗಳಿಗೆ ನುಗ್ಗಿದೆ ಎಂದು ಆಕ್ರೋಶಿಸಿದರು.

ವಿಜಯನಗರದಲ್ಲೂ ಧಾರಾಕಾರ ಮಳೆ

ವಿಜಯನಗರ ಜಿಲ್ಲೆಯಲ್ಲಿ ನಿನ್ನೆ ತಡೆರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ, ಮನೆಗಳಿಗೆ ನೀರು ನುಗ್ಗಿದೆ. ಕೂಡ್ಲಿಗಿ ತಾಲೂಕಿನ ಕೊಟ್ಟೂರು ರಸ್ತೆಯಲ್ಲಿ ಹತ್ತಾರು ಮನೆಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ನೀರು ನುಗ್ಗಿದ್ದರಿಂದ ರಾತ್ರಿಯಿಡಿ ನಿವಾಸಿಗಳು ಜಾಗರಣೆ ಇರಬೇಕಾಯಿತು. ಮೊಣಕಾಲುದ್ದ ಮಳೆ ನೀರು ನಿಂತು ಮನೆಯಲ್ಲಿದ್ದ ಸಾಮಗ್ರಿಗಳು ನೀರಲ್ಲೇ ಮುಳುಗಡೆಯಾಗಿದ್ದವು. ಮಳೆ ನೀರು ನುಗ್ಗಿದ ಮನೆಗಳಿಗೆ ತೆರಳಿ ಜನರ ಸಮಸ್ಯೆಯನ್ನು ಪುರಸಭೆ ಅಧ್ಯಕ್ಷ ಕಾವಲಿ ಶಿವಪ್ಪ ಆಲಿಸಿದರು.

ತಡರಾತ್ರಿ ಸುರಿದ ಮಳೆಗೆ ಈರುಳ್ಳಿ ಬೆಳೆಗೆ ಹಾನಿಯಾಗಿದೆ. ಹತ್ತಾರು ಎಕರೆಯಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆಗೆ ಮಳೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದೆ. ಬೆಳೆದು ನಿಂತಿದ್ದ ಈರುಳ್ಳಿ ಬೆಳೆಗೆ ಮಳೆ ನೀರು ನುಗ್ಗಿದ್ದರಿಂದ ಕೊಳೆಯುವ ಆತಂಕ ಇದೆ. ವಿಜಯನಗರದ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಎಸ್.ಎಂ ಮಂಜಯ್ಯ ಎಂಬವವರು ಬೆಳೆಗೆ ನುಗ್ಗಿದ ನೀರನ್ನು ಹರಿಮಾಡಿ ಬಿಟ್ಟು ಈರುಳ್ಳಿ ರಕ್ಷಣೆಗೆ ಮುಂದಾದರು. ಕೈಗೆ ಬಂದ ತುತ್ತು ಬಾಯಿಗೆ ಬರುತ್ತೋ..? ಇಲ್ವೋ..? ಆತಂಕದಲ್ಲಿದ್ದಾರೆ. ಬೆಳೆ ನಾಶ ಆದರೆ ಸೂಕ್ತ ಪರಿಹಾರ ಕೊಡಬೇಕು ಅಂತ ಈರುಳ್ಳಿ ಬೆಳೆಗಾರರಿಂದ ಆಗ್ರಹಿಸಿದ್ದಾರೆ.

ಹಡಗಲಿ ತಾಲೂಕಿನಲ್ಲೂ ಭಾರೀ ಮಳೆ ಸುರಿದಿದ್ದು, ಈರುಳ್ಳಿ ಹೊಲಕ್ಕೆ ನೀರು ನುಗ್ಗಿತ್ತು. ಅಪಾರ ಪ್ರಮಾಣ ಈರುಳ್ಳಿ ಬೆಳೆ ನಾಶವಾಗಿದೆ. ಹಡಗಲಿ ತಾಲೂಕಿನ ಕೆಂಚಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 3.5 ಎಕರೆ ಹೊಲದಲ್ಲಿ ಈರುಳ್ಳಿ ಕಿತ್ತು ಒಣಗಿಸಲು ಹಾಕಲಾಗಿತ್ತು. ಆದರೆ ನಿನ್ನೆ ರಾತ್ರಿ ಭಾರೀ ಮಳೆಯಿಂದಾಗಿ ನೀರಲ್ಲೇ ಈರುಳ್ಳಿ ಬೆಳೆ ತೇಲಾಡಿದೆ. ಎಕರೆಗೆ ಹತ್ತಾರು ಸಾವಿರ ಖರ್ಚು ಮಾಡಲಾಗಿತ್ತು. ಮಾರ್ಕೆಟ್‌ನಲ್ಲಿ ಈರುಳ್ಳಿ ಬೆಳೆಗೆ ಬೆಲೆ ಇರುವುದರಿಂದ ಆಶಾ ಭವಾನೆಯಲ್ಲಿದ್ದರು. ಆದರೆ ಏಕಾಏಕಿ ನಿನ್ನೆ ಮಳೆ ಸುರಿದಿದ್ದು, ಈರುಳ್ಳಿ ಕೊಳೆತುಹೋಗುವ ಆತಂಕದಲ್ಲಿ ಅನ್ನದಾತ ಇದ್ದಾರೆ.

ದಾವಣಗೆರೆಯಲ್ಲಿ ನಿರಂತರ ಮಳೆಗೆ ಗೋಡೆ ಕುಸಿತ

ನಿರಂತರವಾಗಿ ಸುರಿದ ಮಳೆಗೆ ದೊಡ್ಡಬೊಮ್ಮನಹಳ್ಳಿ ಕೋಟೆ ಗೋಡೆ ಕುಸಿದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ಘಟನೆ ನಡೆದಿದೆ. ಪಾಳೇಗಾರರ ಕಾಲದಲ್ಲಿ ನಿರ್ಮಾಣವಾಗಿದ್ದ ಕೋಟೆ ಗೋಡೆಯು ನಿರಂತರ ಮಳೆಯಿಂದ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತವಾಗಿಲ್ಲ. ಸತತ ಮಳೆಯಿಂದ ಜಗಳೂರು ತಾಲ್ಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಮಳೆ‌ ಜತೆ 57 ಕೆರೆ ಯೋಜನೆ ನೀರು ಕೂಡ ಸೇರಿ ಕೋಡಿ‌ ಬೀಳುತ್ತಿವೆ. ಕೋಡಿ ಬಿದ್ದ ತಾಲೂಕಿನ ಎರಡನೇ ಅತಿ ದೊಡ್ಡ ಕೆರೆ ಗಡಿಮಾಕುಂಟೆ‌ ಕೆರೆಯ ಕೋಡಿ ಬೀಳುವ ದೃಶ್ಯವನ್ನು ನೋಡಲು ಗ್ರಾಮಸ್ಥರು ನೆರೆದಿದ್ದರು. ಕೋಡಿ ಬೀಳುತ್ತಿದ್ದಂತೆ ಕೇಕೆ‌‌ ಶಿಳ್ಳೇ‌ಹಾಕಿ ಸಂತೋಷ ವ್ಯಕ್ತಪಡಿಸಿದರು.

ಕೊಪ್ಪಳದಲ್ಲಿ ಮಳೆಗೆ ನೆಲಕಚ್ಚಿದ ಮೆಕ್ಕೆಜೋಳ

ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿ ತಡರಾತ್ರಿ ಸುರಿದ ಮಳೆಗೆ ಮೆಕ್ಕೆಜೋಳ ಬೆಳೆ ನೆಲ‌ಕಚ್ಚಿದೆ. ಮಳೆಯ ಆರ್ಭಟಕ್ಕೆ ಮೆಕ್ಕಜೋಳ ಬೆಳೆ ಹಾನಿಯಾಗಿದೆ. ತಿಗರಿ ಗ್ರಾಮದ‌‌ ಕೊಟ್ರಪ್ಪ ಅಂಗಡಿ ಎಂಬ ರೈತನ ಬೆಳೆ ಹಾನಿಯಾಗಿದೆ. ಎರಡು ಎಕರೆ‌ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆ ಬೆಳೆದಿದ್ದರು. ಆದರೆ ಮಳೆಯಿಂದಾಗಿ ಮೆಕ್ಕೆಜೋಳ ಬೆಳೆ ನೆಲಕಚ್ಚಿದ್ದು, ಪರಿಹಾರ ನೀಡುವಂತೆ ರೈತ ಕೊಟ್ರಪ್ಪ ಆಗ್ರಹಿಸಿದರು.

ಭದ್ರಾವತಿಯಲ್ಲಿ ಮಳೆ ಅಬ್ಬರ

ಶಿವಮೊಗ್ಗದ ಭದ್ರಾವತಿ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತಗೊಂಡಿದೆ. ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಚರಂಡಿಗಳು ತುಂಬಿ ಹರಿಯುತ್ತಿವೆ. ಚರಂಡಿ ತುಂಬಿದ ಪರಿಣಾಮ ರಸ್ತೆ ಮೇಲೆ ನೀರು ಹರಿಯುತ್ತಿದೆ. ಭದ್ರಾವತಿ ನಗರದ ಜನ್ನಾಪುರದ ಕಿತ್ತೂರು ರಾಣಿ ಚೆನ್ನಮ್ಮ ಬ್ಲಾಕ್‌ನ ಮನೆಯೊಂದರ ಕಾಂಪೌಂಡ್‌ ಗೋಡೆ ಕುಸಿದಿದೆ. ಮನೆಗಳಿಗೆ ನುಗ್ಗಿರುವ ನೀರನ್ನು ಹೊರ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ.

ಧಾರವಾಡದಲ್ಲಿ ಪ್ರವಾಹಕ್ಕೆ ಸಿಲುಕಿದ ವ್ಯಕ್ತಿ

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕಾಲವಾಡ ಗ್ರಾಮದ ಹೊರಹೊಲಯದಲ್ಲಿ ಬೆಣ್ಣೆ ಹಳ್ಳದ ಪ್ರವಾಹಕ್ಕೆ ವ್ಯಕ್ತಿಯೊಬ್ಬರು ಸಿಲುಕಿದ ಘಟನೆ ನಡೆದಿದೆ. ಲಕ್ಷ್ಮಣ ಬಾರಕೇರ ಹಳ್ಳದಲ್ಲಿ ಸಿಲುಕಿರುವವರು. ಕಳೆದ ಎರಡು ದಿನಗಳಿಂದ ಲಕ್ಷ್ಮಣ ಹೊಲದಲ್ಲಿಯೇ ಇದ್ದರು. ನಿನ್ನೆ ಏಕಾಏಕಿ ಬೆಣ್ಣೆ ಹಳ್ಳದ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಸುತ್ತಲೂ ನೀರು ಆವರಿಸಿದೆ. ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ಹೊರತರಲಾಯಿತು. ಸ್ಥಳಕ್ಕೆ ನವಲಗುಂದ ಶಾಸಕ ಕೋನರೆಡ್ಡಿ ಭೇಟಿ ನೀಡಿದರು.

ಮಡಿಕೇರಿಯಲ್ಲಿ ಮಳೆಯ ಸಿಂಚನ

ಶನಿವಾರ ಬೆಳಗ್ಗಿನಿಂದಲೇ ತುಂತುರು ಮಳೆ ಆರಂಭವಾಗಿದ್ದು, ದಸರಾ ಶೋಭಾಯಾತ್ರೆ ಸಿದ್ಧತೆಗೆ ವರುಣ ಅಡ್ಡಿಯಾಗಿದ್ದಾನೆ. ಮಳೆಯ‌ ನಡುವೆ ಶೋಭಾಯಾತ್ರೆಗೆ ಬಿರುಸಿನ ಸಿದ್ಧತೆ ನಡೆಯುತ್ತಿದೆ. ಸಂಜೆ ವೇಳೆಗೆ ಮಳೆ ಬಿಡುವು ನೀಡುವ ಸಾಧ್ಯತೆ ಇದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದ್ದು, ಮಳೆಯಿಂದ ಜನತೆಗೆ ಕಿರಿಕಿರಿ‌ ಅನುಭವಿಸಿದ್ದಾರೆ.

Continue Reading

ಮಳೆ

Karnataka Weather : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಬೆಂಗಳೂರಿಗೂ ಅಲರ್ಟ್‌

Karnataka Weather Forecast : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, ಬೆಂಗಳೂರಿಗೂ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

moderate rains and at isolated to scattered heavy to very heavy rains associated with thunderstorm
Koo

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾದರೆ, ಕರಾವಳಿಯಲ್ಲಿ ಸಾಧಾರಣವಾಗಿರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಮಧ್ಯಮದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

moderate rains and at isolated to scattered heavy to very heavy rains associated with thunderstorm
moderate rains and at isolated to scattered heavy to very heavy rains associated with thunderstorm

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೆಲವೊಮ್ಮೆ ಗುಡುಗು ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಯಾದಗಿರಿಯಲ್ಲಿ ಮಳೆಯಾರ್ಭಟ; ಸಿಡಿಲು ಬಡಿದು ಮಹಿಳೆ ಸಾವು, ಮತ್ತಿಬ್ಬರಿಗೆ ಗಾಯ

Karnataka Rain : ಯಾದಗಿರಿಯಲ್ಲಿ ಮಳೆಯಾರ್ಭಟ ಜೋರಾಗಿದ್ದು, ಸಿಡಿಲು ಬಡಿದು ಮಹಿಳೆ ಮೃತಪಟ್ಟರೆ, ಮತ್ತಿಬ್ಬರಿಗೆ ಗಾಯವಾಗಿದೆ.

VISTARANEWS.COM


on

By

Heavy rains lash Yadgir Woman killed in lightning strike
Koo

ಯಾದಗಿರಿ: ಭಾರಿ ಮಳೆ ಜತೆಗೆ ಸಿಡಿಲು ಬಡಿದು ಕೂಲಿ ಕಾರ್ಮಿಕ‌ ಮಹಿಳೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಂದ್ಲಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರ್ಮಿಕರು ಹತ್ತಿ ಬಿಡಿಸಲು ಬೇರೊಬ್ಬರ ಜಮೀನಿಗೆ ಕೂಲಿಗೆ ತೆರಳಿದ್ದರು. ನಿನ್ನೆ ಸಂಜೆ ಜಮೀನಿನಲ್ಲಿ ಹತ್ತಿ ಬಿಡಿಸುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ನಿಂಗಮ್ಮ ಕೊಂಗಂಡಿ (35) ಮೃತ ದುರ್ದೈವಿ. ಭಾಗಮ್ಮ, ಬಸವರಾಜ ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸುರಪುರ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಲವತ್ತು ಕೋಳಿಗಳು ಬಲಿ

ಕೊಪ್ಪಳ ತಾಲೂಕಿನ ಗಿಣಗೇರಿಯ ಹುಲಿಗಿ ಚಿಕನ್ ಸೆಂಟರ್‌ನಲ್ಲಿ ಭಾರಿ ಮಳೆಗೆ ನಲವತ್ತು ಕೋಳಿಗಳು ಬಲಿಯಾಗಿವೆ. ನಿನ್ನೆ ರಾತ್ರಿ ಸುರಿದ ಮಳೆಗೆ ರಾಜು ಎಂಬುವವರಿಗೆ ಸೇರಿದ ಶಾಪ್‌ನ ಒಳಗೆ ಗ್ರಾಮದ ಚರಂಡಿ ನೀರು ನುಗ್ಗಿದೆ. ಪರಿಣಾಮ ನೀರಿಗೆ ಸಿಲುಕಿ ಮಾರಾಟಕ್ಕಿಟ್ಟಿದ್ದ ಕೋಳಿಗಳು ಮೃತಪಟ್ಟಿವೆ. ಸಾವಿರಾರು ರೂಪಾಯಿ ಮೌಲ್ಯದ ಕೋಳಿಗಳು ಕಳೆದುಕೊಂಡು ಶಾಪ್ ಮಾಲೀಕ ನಷ್ಟ ಅನುಭವಿಸಿದ್ದರು.

ಕೋಡಿ ಬಿದ್ದು ಮನೆಗಳು ಜಲಾವೃತ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಹಿರೇಮಲ್ಲನಹೊಳೆ ಗ್ರಾಮದಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ
ಹಿರೇಮಲ್ಲನಹೊಳೆ ಕೆರೆ ಕೋಡಿ ಬಿದ್ದಿದೆ. ಮೂವತ್ತು ವರ್ಷಗಳ ಬಳಿಕ ಕೆರೆ ಕೋಡಿ ಬಿದ್ದಿದ್ದು, 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದವು. ಕೆರೆ ತುಂಬಿ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ತೊರೆಸಾಲು, ಹಿರೇಮಲ್ಲನಹೊಳೆ, ತಾಯಿಟೋಣಿ, ಹಾಲೆಹಳ್ಳಿ, ಕೋರಚರಹಟ್ಟಿ ಗ್ರಾಮದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಜೆಸಿಬಿ ಮೂಲಕ ಕೋಡಿ ಬಿದ್ದ ನೀರನ ಹರಿವನ್ನು ಬೇರೆ ಕಡೆಗೆ ಬದಲಿಸಲು ಪ್ರಯತ್ನಿಸಿದರು.

ಚಿತ್ರದುರ್ಗದಲ್ಲೂ ಮಳೆ ಅಬ್ಬರ

ಚಿತ್ರದುರ್ಗ ಜಿಲ್ಲೆಯ ಹಲವು ಕಡೆ ತಡರಾತ್ರಿ ಮಳೆಯ ಅಬ್ಬರ ಜೋರಾಗಿತ್ತು. ಮಳೆಯ ಆರ್ಭಟಕ್ಕೆ ಕೆರೆ ಕಟ್ಟೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿತ್ತು. ಚಳ್ಳಕೆರೆ ತಾಲೂಕಿನ ರೇಖಲಗೆರೆ ಕೆರೆ ಕೋಡಿ ತುಂಬಿ ಹರಿಯುತ್ತಿದೆ. ರಾಮಸಾಗರ ಹಳ್ಳ ಸಂಪೂರ್ಣ ಭರ್ತಿಯಾಗಿದೆ. ರೇಖಲಗೆರೆ ಫೀಡರ್ ಚಾನಲ್ ಮೂಲಕ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ರಾತ್ರಿ ಮಳೆಗೆ ವರವು ಗ್ರಾಮದ ಕೆರೆಯೂ ಸಂಪೂರ್ಣ ಭರ್ತಿಯಾಗಿ, ಕೋಡಿ ಬಿದ್ದು ಹರಿಯುತ್ತಿದೆ. ಬರದ ನಾಡಲ್ಲಿ ಬರಪೂರ ಮಳೆಗೆ ಅನ್ನದಾತರಲ್ಲಿ ಸಂತಸ ಮೂಡಿದೆ.

ಇದನ್ನೂ ಓದಿ:Karnataka Weather : ದಕ್ಷಿಣದಿಂದ ಉತ್ತರ ಒಳನಾಡಿನವರೆಗೂ ಗುಡುಗು ಸಹಿತ ವ್ಯಾಪಕ ಮಳೆ ಮುನ್ಸೂಚನೆ

ಕೆರೆ ಕೋಡಿ ಬಿದ್ದು ಶವ ಸಾಗಿಸಲು ಗ್ರಾಮಸ್ಥರ ಹೆಣಗಾಟ

ಬೆಳಗಾವಿಯ ಕಿತ್ತೂರು ತಾಲೂಕಿನಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಬಸರಕೋಡ ಗ್ರಾಮದಲ್ಲಿ ಶವ ಸಾಗಿಸಲು ಗ್ರಾಮಸ್ಥರು ಹೆಣಗಾಡಿದರು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಸರಕೋಡ ಗ್ರಾಮದಲ್ಲಿ ಪ್ರತಿ ವರ್ಷ ಮಳೆಗಾಲ ಬಂದ್ರೇ ಶವ ಸಾಗಿಸಲು ಜನರು ಪರದಾಡಬೇಕು. ಸ್ಮಶಾನಕ್ಕೆ ಹೋಗುವ ಮಾರ್ಗದಲ್ಲಿರುವ ಕೆರೆ ಕೊಡಿ ಬಿದ್ದು ಪರದಾಟ ಅನುಭವಿಸಬೇಕು.

ಮಳೆಗಾಲದಲ್ಲಿ ರಸ್ತೆ ಮೇಲೆ ಕೆರೆಯ ನೀರು ಹಳ್ಳದಂತೆ ಹರಿದು ಹೋಗಲಿದೆ. ನಡುಮಟದ ನೀರಲ್ಲೇ ಶವ ಹೊತ್ತು ಸ್ಮಶಾನಕ್ಕೆ ಸಾಗಿಸುವ ಪರಿಸ್ಥಿತಿ ಇದೆ. ಗ್ರಾಮದಲ್ಲಿ ಹೃದಯಾಘಾತದಿಂದ ಶಂಕ್ರಪ್ಪ ಹರಿಜನ(40) ಎಂಬುವವರು ಮೃತಪಟ್ಟಿದ್ದರು. ಶವ ಹೊತ್ತು ರಭಸವಾಗಿ ಹರಿಯುವ ನೀರಲ್ಲೇ ಸಾಗಿದ ಗ್ರಾಮಸ್ಥರು ಅಂತ್ಯ ಸಂಸ್ಕಾರ ನೆರವೇರಿಸಿದರು. ಕೆರೆ ಪಕ್ಕ ಸೇತುವೆ ನಿರ್ಮಾಣಕ್ಕೆ ಹಣ ಬಂದ್ದರೂ, ಸಣ್ಣ ನೀರಾವರಿ ಇಲಾಖೆ ಅಸಡ್ಡೆ ತೋರುತ್ತಿದೆ. ಒಂದು ಕೋಟಿಗೂ ಅಧಿಕ ಹಣವನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ದುರಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತ

ಗದಗ ಜಿಲ್ಲೆಯ ನರಗುಂದ ತಾ. ಕುರ್ಲಗೇರಿ ಸೇತುವೆ ಭಾರೀ ಮಳೆಗೆ ಜಲಾವೃತಗೊಂಡಿದೆ. ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ರೋಣ ತಾ.ಯಾವಗಲ್ ಗ್ರಾಮದ ಬಳಿಯ ಸೇತುವೆ ಜಲಾವೃತವಾಗಿದೆ. ರೋಣ-ನರಗುಂದ ರಸ್ತೆ ಸಂಚಾರ ಸ್ಥಗಿತವಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಅಪಾಯ ಮಟ್ಟ ಮೀರಿ ಬೆಣ್ಣೆಹಳ್ಳ ಹರಿಯುತ್ತಿದೆ. ಹುಬ್ಬಳ್ಳಿ-ಧಾರವಾಢ ಹಾಗೂ ಗದಗ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಬೆಣ್ಣೆ ಹಳ್ಳದ ಬಳಿ ಯಾರು ಹೋಗದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಧ್ವನಿ ವರ್ಧಕದ ಮೂಲಕ ಬೆಣ್ಣೆ ಹಳ್ಳ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ ಮಾಡಿದೆ. ಕಷ್ಟ ಪಟ್ಟು ಬೆಳೆದ ಗೋವಿನಜೋಳ ಹತ್ತಿ ಈರುಳ್ಳಿ ಬೆಳೆಗಳು ಜಲಾವೃತಗೊಂಡು, ಬೆಳೆ ಹಾನಿಯಾಗಿದೆ.

ಧಾರವಾಡ, ಯಾದಗಿರಿಯಲ್ಲಿ ಭರ್ಜರಿ ಮಳೆ

ಧಾರವಾಡ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಮತ್ತಷ್ಟು ಮಳೆ ಆದರೆ ಪ್ರವಾಹ ಭೀತಿಯಲ್ಲಿ ಹಳ್ಳಕ್ಕೆ ಹೊಂದಿರುವ ಗ್ರಾಮಗಳು ಜಲಾವೃತಗೊಳ್ಳುವ ಸಾಧ್ಯತೆ ಇದೆ. ಯಾದಗಿರಿ ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಗರ ಸೇರಿದಂತೆ ವಿವಿಧೆಡೆ ಒಂದು ಗಂಟೆಗೂ ಮಳೆ ಸುರಿದಿದೆ. ಮಳೆಯಿಂದ ಯಾದಗಿರಿ ರೈತರು ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Munirathnas honeytrap case gets a twist Names of influential leaders revealed in probe
ಬೆಂಗಳೂರು49 ನಿಮಿಷಗಳು ago

MLA Muniratna: ಮುನಿರತ್ನ ಹನಿಟ್ರ್ಯಾಪ್ ಕೇಸ್‌ಗೆ ಟ್ವಿಸ್ಟ್; ತನಿಖೆಯಲ್ಲಿ ಬಯಲಾಯ್ತು ಪ್ರಭಾವಿ ನಾಯಕರ ಹೆಸರು

Murder case
ಬೆಂಗಳೂರು ಗ್ರಾಮಾಂತರ1 ಗಂಟೆ ago

Murder Case : ಬನ್ನೇರುಘಟ್ಟದಲ್ಲಿ ಮಗನಿಂದಲೇ ತಂದೆಯ ಬರ್ಬರ ಹತ್ಯೆ

Actor Darshan suffers from back pain
ಬೆಂಗಳೂರು2 ಗಂಟೆಗಳು ago

Actor Darshan : ನಟ ದರ್ಶನ್‌ಗೆ ಬಿಟ್ಟು ಬಿಡದೆ ಕಾಡುತ್ತಿದೆ ಬೆನ್ನು ನೋವು; ನಾಳೆ ಆರು ಮಂದಿಯ ಬೇಲ್‌ ಭವಿಷ್ಯ

Spider detection A new species of spider found on the banks of Jayamangali river
ತುಮಕೂರು2 ಗಂಟೆಗಳು ago

Spider detection : ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆ

Dina Bhavishya
ಭವಿಷ್ಯ9 ಗಂಟೆಗಳು ago

Dina Bhavishya : ಈ ದಿನ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ

BSA motorcycles
ಆಟೋಮೊಬೈಲ್21 ಗಂಟೆಗಳು ago

BSA motorcycles : ‌ಬೆಂಗಳೂರಿಗೆ ಲಗ್ಗೆ ಇಟ್ಟ ಬಿಎಸ್ಎ ಗೋಲ್ಡ್‌ ಸ್ಟಾರ್

bwssb
ಬೆಂಗಳೂರು22 ಗಂಟೆಗಳು ago

BWSSB : ಬೆಂಗಳೂರಿಗರ ಬಹು ದಿನಗಳ ಕನಸು- ನನಸು; ಅಕ್ಟೋಬರ್ 16ರಂದು ಕಾವೇರಿ ಐದನೇ ಹಂತ ಲೋಕಾರ್ಪಣೆ

Actor Darshan is all set to move the court seeking transfer to Ballari to Bengaluru jail
ಬೆಂಗಳೂರು22 ಗಂಟೆಗಳು ago

Actor Darshan : ಬೆಂಗಳೂರು ಜೈಲಿಗೆ ಶಿಫ್ಟ್ ಮಾಡುವಂತೆ ಕೋರ್ಟ್ ಮೊರೆ ಹೋಗಲು ನಟ ದರ್ಶನ್ ತಯಾರಿ!

karnataka Rain
ಮಳೆ24 ಗಂಟೆಗಳು ago

Karnataka Rain : ಅಬ್ಬರಿಸುತ್ತಿರುವ ಮಳೆಗೆ ಕಂಗಲಾದ ರೈತರು; ಜಮೀನುಗಳಿಗೆ ನೀರು ನುಗ್ಗಿ ಅವಾಂತರ

high tech prostitution racket in the name of event management Husband and wife arrested
ಬೆಂಗಳೂರು1 ದಿನ ago

Prostitution Case : ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ಗಂಡ-ಹೆಂಡತಿ ಅರೆಸ್ಟ್‌

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ವಾರ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌