Site icon Vistara News

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

murder Case

ಹೊಸಕೋಟೆ: ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದನ್ನು ಪ್ರಶ್ನೆ (Murder Case) ಮಾಡಿದ್ದಕ್ಕೆ ವ್ಯಕ್ತಿಯೊಬ್ಬ ಕೊಲೆಯಾಗಿ ಹೋಗಿದ್ದಾನೆ. ನವೀನ್‌ ನಾಯಕ್‌ ಮೃತ (27) ದುರ್ದೈವಿ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್ 75 ಡಾಬ ಬಳಿ ಘಟನೆ ನಡೆದಿದೆ.

ನವೀನ್ ನಾಯಕ್ ಗಂಗಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಭಾನುವಾರ ಬೆಳಗಿನ ಜಾವ ತರಕಾರಿ ವ್ಯಾಪಾರಕ್ಕೆ ಕಾರೊಂದರಲ್ಲಿ ಹೋಗುತ್ತಿದ್ದಾಗ, ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದವರನ್ನು ನವೀನ್‌ ನಾಯಕ್‌ ಪ್ರಶ್ನೆ ಮಾಡಿದ್ದ. ಈ ವೇಳೆ ಕಾರಿನಲ್ಲಿದ್ದವರಿಗೂ ನವೀನ್‌ ನಡುವೆ ಗಲಾಟೆ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಮೃತ ನವೀನ್‌ ನಾಯಕ್‌

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಡಿವೈಎಸ್‌ಪಿ ಶಂಕರ್ ಗೌಡ ಅಣ್ಣ ಸಾಹೇಬ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಓವರ್‌ ಟೇಕ್‌ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಾರಣಾಂತಿಕವಾಗಿ ನಾಲ್ವರು ಹಲ್ಲೆ ನಡೆಸಿದ್ದಾರೆ. ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ನವೀನ್‌ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.

ರಸ್ತೆ ಬದಿಯಲ್ಲಿ ಬಿದ್ದಿದ್ದ ನವೀನ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿ ಆಗಿರುವ ಹಂತಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕುಟುಂಬಸ್ಥರ ಆಕ್ರಂದನ

ಇದನ್ನೂ ಓದಿ: Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ (Murder Case) ನಡೆದಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಸಮೀಪವೇ ಈ ಕೃತ್ಯ ನಡೆದಿದೆ. ಶೇಖರ್ ಎಂಬಾತ ಕೊಲೆಯಾದವನು. ಶಿವಕುಮಾರ್ (35) ಕೊಲೆಗೈದ ಆರೋಪಿಯಾಗಿದ್ದಾನೆ.

ಅನೈತಿಕ ಸಂಬಂಧ, ಕಿರುಕುಳ, ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಡುರಸ್ತೆಯಲ್ಲಿ ಶೇಖರ್‌ ಮೇಲೆ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆ ನಿವಾಸಿ ಶಿವಕುಮಾರ್ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾನೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೇಖರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ಶಿವಕುಮಾರ್‌ ಪತ್ತೆಗೆ ಚಿಕ್ಕಬಳ್ಳಾಪುರ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version