Site icon Vistara News

Murder Case : ಚಾಕುವಿನಿಂದ ಹೆತ್ತವಳ ಕತ್ತು ಸೀಳಿ ಬರ್ಬರವಾಗಿ ಕೊಂದ ಪಾಪಿ ಮಗ

murder case

ದೊಡ್ಡಬಳ್ಳಾಪುರ: ಮಗನೇ ತಾಯಿಯ ಕತ್ತು ಕೊಯ್ದು ಕೊಲೆ (Murder Case) ಮಾಡಿದ್ದಾನೆ. ಚಾಕುವಿನಿಂದ ಕತ್ತು ಸೀಳಿ ತಾಯಿಯ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹೊರವಲಯದ ರಾಗರಾಳ್ಳಗುಟ್ಟೆ ಬಳಿ ನಡೆದಿದೆ. ಗ್ರಾಮದ ರತ್ನಮ್ಮ (56) ಕೊಲೆಯಾದವರು. ಮಗ ಗಂಗರಾಜು ಕೊಲೆ ಆರೋಪಿ ಆಗಿದ್ದಾನೆ.

ಕ್ಷುಲ್ಲಕ ಕಾರಣಕ್ಕೆ ತಾಯಿ-ಮಗನ ನಡುವೆ ಜಗಳ ಶುರುವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಗಂಗರಾಜು ತಾಯಿಯನ್ನು ಕೊಂದಿದ್ದಾನೆ. ಕೊಲೆ ನಂತರ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ರಾಗರಾಳ್ಳಗುಟ್ಟೆಯಲ್ಲಿ ಪ್ರಕರಣ ದಾಖಲಾಗಿದೆ.

ನಡುರಸ್ತೆಯಲ್ಲಿ ಅಡ್ಡಗಟ್ಟಿ ವ್ಯಕ್ತಿಯ ಹೊಟ್ಟೆ ಬಗೆದು ಕೊಂದ ದುಷ್ಕರ್ಮಿಗಳು

ಕಲಬುರಗಿ: ಕಲಬುರಗಿ ನಗರ ಹೊರವಲಯದ ಕೆಸರಟಗಿ ಬಳಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ವ್ಯಕ್ತಿಯನ್ನು ಹೊಡೆದು ಭೀಕರ ಹತ್ಯೆ (Murder Case) ಮಾಡಲಾಗಿದೆ. ಕಪಿಲ್ ಗಾಯಕ್ವಾಡ್ (38) ಕೊಲೆಯಾದವನು.

ಪತ್ನಿಯ ಸಮ್ಮುಖದಲ್ಲೆ ಪತಿ ಕಪಿಲ್‌ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ ಹೋಗುತ್ತಿದ್ದಾಗ, ಮಾರ್ಗ ಮಧ್ಯೆ ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರಿಡ್ಜ್‌ ಬಳಿ ಹತ್ಯೆ ನಡೆಸಿದ್ದಾರೆ. ಕುಟುಂಬಸ್ಥರಿಂದ ಕಪಿಲ್ ಪತ್ನಿ ಭಾಗ್ಯ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.

ಮೃತದೇಹವನ್ನ ಕಲಬುರಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version