Site icon Vistara News

Murder Case : ಅಪರಿಚಿತ ಮಹಿಳೆಯ ಕಾಲುಗಳು ಪತ್ತೆ! ತುಂಡು ತುಂಡಾಗಿ ಕತ್ತರಿಸಿ ಎಸೆದರೆ ಹಂತಕರು

Unidentified womans legs found

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಕಾಡಂಚಿನ ಗ್ರಾಮ ಮುನಿಮಾರಾಯ್ಯನದೊಡ್ಡಿ ಸಮೀಪ ಅಪರಿಚಿತ ಮಹಿಳೆಯ (Murder Case) ಕಾಲುಗಳು ಪತ್ತೆಯಾಗಿವೆ. ಮಹಿಳೆಯನ್ನು ಕೊಲೆ ಮಾಡಿ (Murder Case) ನಂತರ ಅನುಮಾನ ಬಾರದಿರಲಿ ಎಂದು ಹಂತಕರು ದೇಹವನ್ನು ಕತ್ತರಿಸಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಕೆರೆ ಜಾಗದ ನಿರ್ಜನ ಪ್ರದೇಶದಲ್ಲಿ ಕಾಲುಗಳನ್ನು ಎಸೆದು ಹೋಗಿದ್ದಾರೆ. ಕೊಳೆತ ಸ್ಥಿತಿಯಲ್ಲಿ ಕಾಲುಗಳು ಪತ್ತೆಯಾಗಿದೆ. ಇದೇ ಜಾಗದ ಸಮೀಪ ಕಳೆದ ಹದಿನೈದು ದಿನಗಳ ಹಿಂದೆ ಮಹಿಳೆಯ ಕೈ ಪತ್ತೆಯಾಗಿತ್ತು. ಇದೀಗ ಕೈ ಸಿಕ್ಕ ಜಾಗದ ಸಮೀಪವೇ ಮಹಿಳೆಯ ಎರಡು ಕಾಲುಗಳು ಸಿಕ್ಕಿವೆ.

ಮುಂಜಾನೆ ಗ್ರಾಮಸ್ಥರು ಗಮನಿಸಿ ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಂತಕರು ಮಹಿಳೆಯನ್ನು ಕೊಂದು ಅಂಗಾಂಗಳನ್ನು ಕತ್ತರಿಸಿ ಬೇರೆ ಬೇರೆ ಕಡೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಮಹಿಳೆಯ ಉಳಿದ ಅಂಗಾಂಗಗಳ ಹುಡುಕಾಟವನ್ನು ನಡೆಸಿದ್ದಾರೆ.

ಸ್ಥಳಕ್ಕೆ ಶ್ವಾನದಳ, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನೂ ಹಂತಕರ ಬೆನ್ನತ್ತಿರುವ ಬನ್ನೇರುಘಟ್ಟ ಪೊಲೀಸರು ಕೈ ಮತ್ತು ಕಾಲುಗಳ ಜಾಡು ಹಿಡಿದಿದ್ದಾರೆ.

ಇದನ್ನೂ ಓದಿ: Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

Physical assault : ನಾನು ಬೇಡ್ವಾ.. ಕಿಡ್ನ್ಯಾಪ್‌ ಮಾಡಿ ತಾಳಿ ಕಟ್ಟಿ ಬಿಡ್ತೀನಿ! ಮಹಿಳಾ ಪಿಎಸ್‌ಐಗೆ ಧಮ್ಕಿ

ಬೆಂಗಳೂರು: ಮಹಿಳಾ ಪಿಎಸ್ಐಗೆ ಮತ್ತೊಬ್ಬ ಪಿಎಸ್‌ಐ ಲೈಂಗಿಕ ಕಿರುಕುಳ (Physical Assault) ನೀಡಿದ್ದಾನೆ. ಮಹಿಳಾ ಪಿಎಸ್‌ಐ ಜತೆಗಿನ ಫೋಟೊ ಸೆರೆಹಿಡಿದು ಮದುವೆ ಆಗು ಎಂದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ 28 ವರ್ಷದ ಮಹಿಳಾ ಪಿಎಸ್‌ಐ ಕೊಟ್ಟ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

ಮಹಿಳಾ ಪಿಎಸ್‌ಐಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮತ್ತೊಬ್ಬ ಪಿಎಸ್‌ಐನ ಬಂಧನವಾಗಿದೆ. ಕೆ.ಎಸ್‌.ಐ.ಎಸ್‌.ಎಫ್‌ನ ಪಿಎಸ್‌ಐ ಸಂಜಯ್ ಕುಮಾರ್ (34) ಬಂಧಿತ ಆರೋಪಿ ಆಗಿದ್ದಾನೆ. ಸಂಜಯ್‌ ಕುಮಾರ್‌ ಹಾಗೂ ಮಹಿಳಾ ಪಿಎಸ್‌ಐ ಬ್ಯಾಚ್ ಮೇಟ್ ಆಗಿದ್ದರು. ತರಬೇತಿ ಪಡೆಯುವ ವೇಳೆ ಸಂಜಯ್ ಪ್ರೇಮ ನಿವೇದನೆಯನ್ನು ಮಾಡಿಕೊಂಡಿದ್ದ. ಆದರೆ ಮಹಿಳೆ ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ್ದರು.

ಇದನ್ನೂ ಓದಿ: Murder Case : ಬೆಂಗಳೂರಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು; ಉಸಿರುಗಟ್ಟಿಸಿ ಕೊಂದನೇ ಹಂತಕ!

ಆದರೂ ಬಿಡದೇ ಹಿಂದೆ ಬಿದ್ದಿದ್ದ ಸಂಜಯ್‌, ಕೆಎಸ್‌ಐಎಸ್‌ಎಫ್‌ನಲ್ಲಿ ಪಿಎಸ್‌ಐ ಆಗಿ ಇದ್ದುಕೊಂಡು ನಿಮ್ಮನ್ನು ವಿವಾಹ ಆಗುವುದಿಲ್ಲ. ಯುಪಿಎಸ್‌ಸಿ ಮಾಡುತ್ತೇನೆ ನನಗೆ ಓದಲು ಸಹಾಯ ಮಾಡಿ ಎಂದು ಹೇಳಿದ್ದ. ಓದಿನ ನೆಪ ಇಟ್ಟುಕೊಂಡು ಮಹಿಳೆಗೆ ಹತ್ತಿರವಾಗಿದ್ದ. ಸಂಜಯ್‌ 2020ರಲ್ಲಿ 5.50 ಲಕ್ಷ ರೂ. ತೆಗೆದುಕೊಂಡಿದ್ದಾರೆ ಸಂತ್ರಸ್ತೆ ಆರೋಪಿಸಿದ್ದಾಳೆ. ಓದುವ ನೆಪದಲ್ಲಿ ಹತ್ತಿರವಾದ ಸಂಜಯ್‌, ತನಗೆ ತಿಳಿಯದೆ ಆತನ ಜತೆಗೆ ಇರುವ ಫೋಟೋ ತೆಗೆದುಕೊಂಡಿದ್ದಾನೆ. ಅವುಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ನನಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನನ್ನನ್ನು ತಿರಸ್ಕರಿಸಿದರೆ ಅಪಹರಿಸಿಕೊಂಡು ಹೋಗಿ ತಾಳಿ ಕಟ್ಟುವುದಾಗಿ ಸಂಜಯ್‌, ಮಹಿಳೆಗೆ ಬೆದರಿಕೆ ಹಾಕಿದ್ದಾನೆ. ಕಳೆದ ಮಾ.11ರಂದು ಸಂಜಯ್ ಏಕಾಏಕಿ ನಮ್ಮ ಮನೆಗೆ ನುಗ್ಗಿ ನನ್ನ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾನೆ ಎಂದು ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version