Self Harming : ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಬಲಿ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ - Vistara News

ಬೆಂಗಳೂರು ಗ್ರಾಮಾಂತರ

Self Harming : ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಬಲಿ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Self Harming : ಪತಿಗೆ ಬೇರೆಯವರ ಜತೆಗೆ ಅನೈತಿಕ ಸಂಬಂಧವಿದೆ ಎಂದು ಮನನೊಂದ ಪತ್ನಿ ಮೈ ಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಕಿ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

VISTARANEWS.COM


on

her husband was having an illicit relationship Suicide by setting herself on fire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು ಗ್ರಾಮಾಂತರ: ಹುಳಿಮಾವು ಸಮೀಪದ ಅಕ್ಷಯನಗರದಲ್ಲಿ ಮಹಿಳೆಯೊಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅನುಷಾ ಮೃತ ದುರ್ದೈವಿ. ಎರಡು‌ ದಿನದ ಹಿಂದೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಅನುಷಾಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಬೆಂಕಿ ಕೆನ್ನಾಲಿಗೆ ಸುಟ್ಟು ಕರಕಲಾಗಿದ್ದ ಅನುಷಾ ಸಾವು-ಬದುಕಿನ ಮಧ್ಯೆ ಹೋರಾಡಿ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅನುಷಾ ಐದು ವರ್ಷಗಳ ಹಿಂದೆ ಶ್ರೀಹರಿ ಎಂಬಾತನ ಜತೆಗೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗುವೂ ಇದೆ. ಇತ್ತೀಚೆಗೆ ಪತಿ ಶ್ರೀಹರಿಗೆ ಮತ್ತೊಬ್ಬಳ ಜತೆಗೆ ಅನೈತಿಕ ಸಂಬಂಧ ಇದೆ ಎಂದು ಅನುಷಾ ಅನುಮಾನಿಸಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿ, ಆಗಾಗ ಜಗಳ ನಡೆಯುತ್ತಿತ್ತು. ಮೊನ್ನೆಯೂ ಇದೇ ವಿಚಾರಕ್ಕೆ ಗಲಾಟೆ ಆಗಿದ್ದು, ಇದರಿಂದ ಮನನೊಂದ ಅನುಷಾ ಬಾತ್ ರೂಂನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.

ಆಕೆಯ ಕಿರುಚಾಟ ಕೇಳಿ ಬಂದ ಕುಟುಂಬಸ್ಥರು ಕೂಡಲೇ ಬಾಗಿಲು ಮುರಿದು ಬೆಂಕಿ ನಂದಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅನುಷಾ ಮೃತಪಟ್ಟಿದ್ದಾಳೆ.

ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪೊಲೀಸರು ತನಿಖೆಯನ್ನು‌ ನಡೆಸುತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಾಯಿ ಇಲ್ಲದೆ ಮಗುವು ತಬಲಿಯಾಗಿದೆ.

ದರ್ಶನ್‌ ಎರಡನೇ ಮದುವೆ ಆಗಿಲ್ವಾ? ನಾನು ಮಾಡಿಕೊಂಡ್ರೆ ತಪ್ಪೇನು?

ಹುಳಿಮಾವು ಅಕ್ಷಯನಗರದಲ್ಲಿ ಗೃಹಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಷ ತಂದೆ ಹೇಮಂತ್ ಪ್ರತಿಕ್ರಿಯಿಸಿದ್ದು, ಕಳೆದ ಮೂರು ತಿಂಗಳಿನಿಂದ ಜಗಳ ಹೆಚ್ಚಾಗಿದೆ. ನನ್ನ ಮಗಳಿಗೆ ಮಹಿಳೆ ಠಾಣೆಗೆ ದೂರು ಕೊಡೋಣಾ ಅಂದಿದ್ದೆ. ಇಲ್ಲ ಬೇಡ ನನ್ನ ಸಂಸಾರನ ಸರಿ ಮಾಡಿಕೊಳ್ಳುತ್ತಿನಿ ಅಂತಿದ್ದಳು. ಮಗಳು ಬೆಂಕಿ ಕೊಳ್ಳುವಾಗ ಅವನು ಮನೆಲೇ ಇದ್ದಾನೆ, ಆದರೂ ಕಾಪಾಡಿಲ್ಲ. ರೂಮ್‌ನ ವಾಶ್ ರೂಂನಲ್ಲಿ ವಾಟ್ಸಪ್ ವಿಡಿಯೋ ಕಾಲ್ ಮಾಡಿಕೊಂಡೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಮೊದಲೇ ಪೆಟ್ರೋಲ್ ತೆಗೆದುಕೊಂಡು ಬಂದು ಮನೇಲಿ ಇಟ್ಟಿದ್ದಾಳೆ. ವೀಡಿಯೊ‌ ಕಾಲ್ ರಿಸೀವ್ ಮಾಡಿ ಸುಮ್ಮನೆ ಇದ್ದಾನೆ. ಈ ಬಗ್ಗೆ ಕೇಳಿದ್ದರೆ, ನಟ ದರ್ಶನ್ ಎರಡನೆ ಮದುವೆ ಆಗಿದ್ದಾನೆ ಆತ ಸಂತೋಷವಾಗಿಲ್ವಾ? ನಾನು ಎರಡನೇ ಮದುವೆ ಆದರೆ ತಪ್ಪೇನು ಅಂತ ಮರು ಪ್ರಶ್ನೆ ಹಾಕಿದ್ದನಂತೆ.

ವಿಡಿಯೊ ಕಾಲ್‌ನಲ್ಲೇ ಬೆಂಕಿ ಹಚ್ಚಿಕೊಂಡ ಅನುಷಾ

ಅನುಷಾ ಗಂಡನಿಗೆ ವಾಟ್ಸಪ್ ಕಾಲ್ ಮಾಡುತ್ತಲೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಅದನ್ನೂ ಕಂಡರೂ ಶ್ರೀಹರಿ ಸುಮ್ಮನಾಗಿದ್ದ. ಮೂರು ತಿಂಗಳಿನಿಂದ ಡಿವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ನನಗೆ ಬೇರೆ ಸಂಬಂಧ ಇದೆ ನನ್ನ ಬಿಟ್ಟು ಬಿಡು ಅಂತಿದ್ದ. ಆಕೆ ಬೆಂಕಿ ಹಚ್ಚಿಕೊಂಡಾಗ ಕಾಪಾಡಬಹುದಿತ್ತು, ಆದರೆ ಸಾಯಲಿ ಅಂತಾನೇ ಸುಮ್ಮನೆ ಇದ್ದಾನೆ. ಮದುವೆ ಆದಾಗಿನಿಂದಲೂ ಚಿತ್ರಹಿಂಸೆ ನೀಡುತ್ತಾನೆ ಇದ್ದ ಎಂದು ಮೃತಳ ಅಕ್ಕ ಉಷಾ ಆಕ್ರೋಶ ಹೊರಹಾಕಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Karnataka Weather Forecast : ರಾಜ್ಯಾದ್ಯಂತ ಸೆ.6ರಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ (Rain News) ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಗಾಳಿಯೊಂದಿಗೆ ಮಳೆ ಅಬ್ಬರ

ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.

ಭಾನುವಾರವೂ ಭಾರಿ ಮಳೆ ಎಚ್ಚರಿಕೆ

ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan : ರೇಣುಕಾಸ್ವಾಮಿಯ ಪ್ಯಾಂಟ್‌ ಬಿಚ್ಚಿಸಿ ಮರ್ಮಾಂಗಕ್ಕೆ ‌ಒದ್ದಿದ್ದರಾ ದರ್ಶನ್! ಚಾರ್ಜ್‌ಶೀಟ್‌ನಲ್ಲಿ ಕ್ರೌರ್ಯದ ಅನಾವರಣ

Actor Darshan : ಚಾರ್ಜ್‌ಶೀಟ್‌ನಲ್ಲಿ ದರ್ಶನ್‌ ಕ್ರೌರ್ಯದ ಅನಾವರಣವಾಗಿದೆ. ರೇಣುಕಾಸ್ವಾಮಿಯ ಪ್ಯಾಂಟ್‌ ಬಿಚ್ಚಿಸಿ ಮರ್ಮಾಂಗಕ್ಕೆ ‌ಒದ್ದಿದ್ದರಿಂದಲೇ ಪ್ರಾಣಹಾರಿ ಹೋಯ್ತಾ? ಇಷ್ಟಕ್ಕೂ ದರ್ಶನ್‌ ಸಿಟ್ಟು ಏನೆಲ್ಲ ಮಾಡಿಬಿಡುತ್ತಾ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Darshan Brutality revealed in chargesheet
Koo

ಬೆಂಗಳೂರು: ಡಿ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಮೇಲೆ ದರ್ಶನ್ (Actor darshan) ಕೆಂಡಾಮಂಡಲ ಆಗಲು ಕಾರಣವೇನು ಗೊತ್ತಾ? ಅಷ್ಟಕ್ಕೂ ರೇಣುಕಾಸ್ವಾಮಿ ಪವಿತ್ರಗೌಡಗೆ ಏನೇನ್ ಸಂದೇಶಗಳನ್ನು ಕಳುಹಿಸಿದ್ದ. ಆ ಚಾಟಿಂಗ್‌ ಡಿಟೈಲ್ಸ್‌ ಇಲ್ಲಿದೆ.

ದರ್ಶನ್ ಕೋಪಕ್ಕೆ ಕಾರಣವಾಗಿದ್ದು ಎರಡು ಅಶ್ಲೀಲ ವಿಡಿಯೊ, ಒಂದು ಫೋಟೊ. ರೇಣುಕಾಸ್ವಾಮಿ ಪವಿತ್ರಗೌಡ ಫೋಟೊ ಕಂಡು ನಾನು ನಿನ್ನನ್ನ ಅನುಭವಿಸಬೇಕೆಂದು ಮೆಸೇಜ್ ಮಾಡಿದ್ದ. ಮೆಸೇಜ್ ಹಿಂದೆಯೆ ಎರಡು ಅಶ್ಲೀಲ ವಿಡಿಯೊ ಕಳಿಸಿ, ಅಶ್ಲೀಲವಾದ ಸಂದೇಶಗಳ ರವಾನಿಸಿದ್ದ. ಇದಾದ ಬಳಿಕ ರೇಣುಕಾಸ್ವಾಮಿ ತನ್ನ ಮರ್ಮಾಂಗದ ಫೋಟೊವನ್ನು ಪವಿತ್ರಾಗೌಡಗೆ ಕಳಿಸಿದ್ದ.

ಇದೆಲ್ಲವನ್ನೂ ನೋಡಿದ ದರ್ಶನ್‌ಗೆ ತನ್ನೊಳಗೆ ಇದ್ದ ಮೃಗತ್ವ ಹೊರಬಂದಿತ್ತು. ಕೊಳಕು ಭಾಷೆಯಿಂದ ನಿಂದಿಸಿ ರೇಣುಕಾಸ್ವಾಮಿಗೆ ಹಲ್ಲೆ ಮಾಡಿ ಏನೋ ಸೂ.. ಮಗನೇ, ನನ್ನ ಹೆಂಡತಿಗೆ ಕೆಟ್ಟ ಮೆಸೇಜ್ ಮಾಡುತ್ತೀಯಾ? ಎಷ್ಟೋ ಧೈರ್ಯ ನಿಂಗೆ ಎಂದು ಕಾಲಿಂದ ಎದೆ ಭಾಗಕ್ಕೆ ಒದ್ದಿದ್ದ. ಬಳಿಕ ಏಯ್ ಪವನ್ ಇವನ ಪ್ಯಾಂಟ್ ಬಿಚ್ಚೋ ಎಂದ ದರ್ಶನ್‌, ಮರ್ಮಾಂಗಕ್ಕೆ ಒದ್ದಿದ್ದ. ಜಾರ್ಜ್‌ಶೀಟ್‌ನಲ್ಲಿ ದರ್ಶನ್ ಮಿತಿ ಮೀರಿದ ಕ್ರೌರ್ಯದ ಅನಾವರಣವಾಗಿದೆ.

ಪವಿತ್ರಾ ಮೊಬೈಲ್‌ನಲ್ಲಿ ಏನೆಲ್ಲ ಇತ್ತು?

ಐಫೋನ್‌ 15 ಪ್ರೋ ಮ್ಯಾಕ್ಸ್‌ ಬಳಸುತ್ತಿದ್ದ ಪವಿತ್ರಾ ಮನೋಜ್‌ ಹೆಸರಿನಲ್ಲಿ ಸಿಮ್‌ ಇತ್ತು. ದರ್ಶನ್ ಹೆಸರನ್ನು “D” ಎಂದು ಸೇವ್ ಮಾಡಿದ್ದರೆ, ಎ3 ಪವನ್ ಹೆಸರನ್ನು ಪವನ್ ನ್ಯೂ ಎಂದು ಸೇವ್ ಮಾಡಿದ್ದರು. ನಂದೀಶ್‌ ಹೆಸರನ್ನು ನಂದಿ ಪವನ್‌, ಧನರಾಜ್ ಹೆಸರನ್ನು ರಾಜು, ವಿನಯ್‌ ಹೆಸರನ್ನ ವಿನಯ್‌ ಹಾಗೂ ನಾಗರಾಜ್ ಹೆಸರನ್ನು ನಾಗು ಮೈಸೂರು, ಲಕ್ಷ್ಮಣ್‌ ಹೆಸರನ್ನು ಲಕ್ಷ್ಮಣ್‌ ಡಿ ಹಾಗೂ ಆಪ್ತ ಗೆಳತಿ ಸಮತಾಳನ್ನು ಸ್ಯಾಮ್‌ ಹೆಸರಲ್ಲಿ ಸೇವ್ ಮಾಡಿದ್ದಾರೆ. ಪವಿತ್ರಾ ಮೊಬೈಲ್‌ನಲ್ಲಿ ಪ್ರಕರಣ ಸಂಬಂಧ 65 ಫೋಟೊಗಳು ಪತ್ತೆಯಾಗಿವೆ. 17 ಸ್ಕೀನ್‌‌ ಶಾಟ್‌ಗಳು, ರೇಣುಕಾ ಕಳಿಸಿದ್ದ 20 ಅಶ್ಲೀಲ ಸಂದೇಶಗಳ ಸ್ಕ್ರೀನ್‌ಶಾಟ್‌ ಇವೆ.

ನಟ ದರ್ಶನ್‌ ಬಳಸುತ್ತಿದ್ದ ಐಫೋನ್‌ 15 ಪ್ರೋನಲ್ಲಿ ಗೆಳತಿ ಹೆಸರನ್ನು 3 ಹೆಸರಲ್ಲಿ ಸೇವ್ ಮಾಡಿದ್ದರು. PAVI, PAVIIII, PVITRA GOWDA ಹೆಸರಲ್ಲಿ ಸೇವ್‌ ಮಾಡಿ ಪವಿತ್ರ ಜತೆ ಚಾಟಿಂಗ್‌ ನಡೆಸಿದ್ದಾರೆ. ಡಿಲೀಟ್‌ ಆಗಿದ್ದ ವಾಟ್ಟಾಪ್‌ ಕಾಲ್ ರಿಟ್ರೀವ್‌ ವೇಳೆ ಪತ್ತೆಯಾಗಿದೆ. ವಿನಯ್ ಜತೆ ಚಾಟಿಂಗ್‌, ಮ್ಯಾನೇಜರ್‌ ನಾಗರಾಜ್ ಜತೆ ವಾಟ್ಸಾಪ್‌ ಕಾಲ್ ಸಂಭಾಷಣೆ ಇದೆ. ಜೂನ್‌ 8ರಿಂದ 11ರವೆರಗೂ 32 ಬಾರಿ ವಾಟ್ಸಾಪ್ ಕಾಲ್ ಮಾಡಲಾಗಿದ್ದು, ಪ್ರದೋಶ್‌ ಜತೆ 10 ಬಾರಿ ವಾಟ್ಸಾಪ್‌‌‌ ಕಾಲ್‌ನಲ್ಲಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: Actor Darshan:ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರೆಂಡರ್‌ ಆಗು ಎಂದಾಗ ದರ್ಶನ್‌ ಅಭಿಮಾನಿ ರಾಘವೇಂದ್ರ ನಿರಾಕರಿಸಿದ್ದೇಕೆ?

ವಿನಯ್‌ ಮೊಬೈಲ್‌ನಲ್ಲಿ ಪವಿತ್ರಾಳ ಹೆಸರು ಡಿ ಬಾಸ್‌ ವೈಫ್‌ ಎಂದು ಸೇವ್‌

ಇನ್ನು ವಿನಯ್‌ ಮೊಬೈಲ್‌ನಲ್ಲಿ ಪವಿತ್ರಾ ಗೌಡ ಫೋನ್‌ ನಂಬರ್‌ ಅನ್ನು ಡಿ-ಬಾಸ್‌ ವೈಫ್‌ ಎಂದು ಸೇವ್‌ ಆಗಿದೆ. ಪ್ರದೂಷ್‌, ಪವನ್‌ ಜತೆ 42 ಬಾರಿ ವಾಟ್ಸಾಪ್‌ ಕಾಲ್‌ ಸಂಭಾಷಣೆ ನಡೆದಿದೆ. ಪ್ರಕರಣ ಸಂಬಂಧ 10 ಫೋಟೊಗಳು ರಿಟ್ರೀವ್‌ನಲ್ಲಿ ಪತ್ತೆಯಾಗಿದೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಲ್ಲಿ ಹಿಂಬಾಲಿಸಿ ತೆಗೆದ ಫೋಟೊ, ಪಟ್ಟಣಗೆರೆ ಶೆಡ್‌‌ಗೆ ಕರೆತಂದಾಗ, ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿರುವ ಫೋಟೊ ಸಿಕ್ಕಿದೆ. ಜತೆಗೆ ರೇಣುಕಾಸ್ವಾಮಿ ಶವವನ್ನು ಸುಮನಹಳ್ಳಿ ರಾಜಕಾಲುವೆ ಬಳಿ ಬಿಸಾಡಿರುವ ಫೋಟೊ ಲಭ್ಯವಾಗಿದೆ.

ದೀಪಕ್‌ ಮೊಬೈಲ್‌ನಲ್ಲಿ ಅಡಗಿದ್ದ ರಹಸ್ಯ

ದೀಪಕ್‌ ಮೊಬೈಲ್‌ನಲ್ಲಿ 30 ನಿಮಿಷದ ಆಡಿಯೊ ಸಂಭಾಷಣೆ ಪತ್ತೆಯಾಗಿದೆ. ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ನಡೆಸಿರುವ ಮಾತುಕತೆ ಇದಾಗಿದೆ. ಸ್ವಾಮಿ ಕೊಲೆಗೆ ಸಂಬಂಧಿಸಿದಂತೆ 5 ಆಡಿಯೋ ಸಂಭಾಷಣೆ ಪತ್ತೆಯಾಗಿದೆ. ಜತೆಗೆ ಮತ್ತೊಬ್ಬ ಆರೋಪಿ ಅನುಕುಮಾರ್‌ ಮೊಬೈಲ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವಿಡಿಯೊ ಸಿಕ್ಕಿದೆ. ಆರೋಪಿ ಪ್ರದೂಷ್‌ ಜತೆ ನಡೆಸಿರುವ ಚಾಟಿಂಗ್‌ ಸಿಕ್ಕಿದೆ. ಅನುಕುಮಾರ್‌ ಹಾಗೂ ರಾಘವೇಂದ್ರ ಪತ್ನಿ ಸಹನಾ ಜತೆ ನಡೆಸಿರುವ ಸಂಭಾಷಣೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan : ದರ್ಶನ್‌ ಕೊಟ್ಟ ಮೂರೇ ಹೊಡೆತಕ್ಕೆ ಜೀವ ಬಿಟ್ಟಿದ್ದ ರೇಣುಕಾಸ್ವಾಮಿ!; ಆ 45 ನಿಮಿಷ ಶೆಡ್‌ನಲ್ಲಿ ನಡೆದಿದ್ದೇನು?

Actor Darshan : ನಟ ದರ್ಶನ್‌ ಕೊಟ್ಟ ಮೂರೇ ಹೊಡೆತಕ್ಕೆ ರೇಣುಕಾಸ್ವಾಮಿ ಜೀವ ಬಿಟ್ಟಿದ್ದ . ಆ 45 ನಿಮಿಷ ಶೆಡ್‌ನಲ್ಲಿ ನಡೆದಿದ್ದೇನು? ಚಾರ್ಜ್‌‌ಶೀಟ್‌ನಲ್ಲಿ ಆಡಿಯೋ ವಿಡಿಯೋ ವರದಿ ಉಲ್ಲೇಖವಾಗಿದೆ.

VISTARANEWS.COM


on

By

actor darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಸಂಬಂಧ ಚಾರ್ಜ್‌ಶೀಟ್‌ ಸಲ್ಲಿಕೆ ಆಗಿದ್ದೇ ತಡ ದರ್ಶನ್‌ ಟೀಂನ (actor darshan) ಕೌರ್ಯ ಹೇಗಿತ್ತು ಎಂದು ಒಂದೊಂದೆ ಬಯಲಾಗುತ್ತಿದೆ. ಇಷ್ಟಕ್ಕೂ ಪಟ್ಟಣಗೆರೆ ಶೆಡ್‌ನಲ್ಲಿ ದರ್ಶನ್ ಇದ್ದ ಆ 45 ನಿಮಿಷ ನಡೆದಿದ್ದು ಏನು ಗೊತ್ತಾ? ರೇಣುಕಾಸ್ವಾಮಿ ಸಾವಿಗೆ ಕಾರಣವಾಗಿದ್ದೇ ದರ್ಶನ್‌ ಕೊಟ್ಟ ಆ ಮೂರು ಹೊಡೆತಗಳು.

ಹೊಡೆತ 1

ನಟ ದರ್ಶನ್‌ ಸಿಟ್ಟಿನಲ್ಲಿ ರೇಣುಕಾಸ್ವಾಮಿ ಎದೆಗೆ ಒಂದೆ ಸಮನೆ ಒದ್ದಿದ್ದ. 110 ಕೆ.ಜಿಯ ಮನುಷ್ಯ ನರಪೇತಲನಂತಿದ್ದ ರೇಣುಕಾಸ್ವಾಮಿ ಎದೆಗೆ ಶೂ ಕಾಲಿನಿಂದ ಒದ್ದಿದ್ದ. ದರ್ಶನ್ ಹೊಡೆತಕ್ಕೆ ರೇಣುಕಾಸ್ವಾಮಿ ಎದೆ ಮೂಳೆ ಪುಡಿ ಪುಡಿಯಾಗಿತ್ತು.

ಹೊಡೆತ 2

ಸಿನಿಮಾ ಶೈಲಿಯಲ್ಲಿ ರೇಣುಕಾಸ್ವಾಮಿಯನ್ನು ಎತ್ತಿ ಲಾರಿಗೆ ಬಿಸಾಕಿದ್ದ ದರ್ಶನ್. ದರ್ಶನ್ ಬಿಸಾಕಿದ ರಭಸಕ್ಕೆ ರೇಣುಕಾಸ್ವಾಮಿ ತಲೆಗೆ ಗಂಭೀರ ಗಾಯವಾಗಿತ್ತು. ತಲೆ ಬುರುಡೆಗೆ ಏಟು ಬಿದ್ದು ರಕ್ತ ಹೆಪ್ಪುಗಟ್ಟಿತ್ತು.

ಹೊಡೆತ 3

ಇದೇ ಫೋಟೊ ಅಲ್ವೇನೋ ನೀನು ಕಳಿಸಿದ್ದು ನಿನ್ನ…..! ಎಂದು ರೇಣುಕಾಸ್ವಾಮಿ ಮರ್ಮಾಂಗಕ್ಕೆ ನಟ ದರ್ಶನ್‌ ಒದ್ದಿದ್ದ. ಮರ್ಮಾಂಗಕ್ಕೆ ಒದೆಯುತ್ತಿದ್ದಂತೆ ರೇಣುಕಾಸ್ವಾಮಿ ಪ್ರಜ್ಞೆ ತಪ್ಪಿ ಬಿದ್ದಿದ್ದ. ಈ ಹೊಡೆತಗಳೆ ರೇಣುಕಾಸ್ವಾಮಿ ಸಾವಿಗೆ ಕಾರಣ ಎನ್ನಲಾಗಿದೆ. ಎಫ್‌ಎಸ್‌ಎಲ್‌ ರಿಪೋರ್ಟ್‌ನಲ್ಲೂ ಸಾವಿನ ರಹಸ್ಯ ಬಯಲಾಗಿದ್ದು, ಚಾರ್ಜ್ ಶೀಟ್‌ನಲ್ಲಿ ಇದೆಲ್ಲವನ್ನು ಪೊಲೀಸರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Dvija Film : ಅಕ್ಟೋಬರ್‌ಗೆ ‘ದ್ವಿಜ’ ಚಿತ್ರ ಬಿಡುಗಡೆಗೆ ಸಜ್ಜು; ಕ್ರೈಂ ಥ್ರಿಲ್ಲರ್‌ ಮೂವಿಯಲ್ಲಿ ಕ್ರಿಮಿನಲ್ ಜಗತ್ತು ಅನಾವರಣ

ಚಾರ್ಜ್‌‌ಶೀಟ್‌ನಲ್ಲಿ ಆಡಿಯೋ ವಿಡಿಯೋ ವರದಿ ಉಲ್ಲೇಖ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಚಾರ್ಜ್‌‌ಶೀಟ್‌ನಲ್ಲಿ ಆಡಿಯೋ ವಿಡಿಯೋ ವರದಿ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ಒಟ್ಟು 30 ಸ್ಯಾಂಪಲ್ಸ್‌ಗಳಿಗೆ ಸಂಬಂಧಿಸಿದ ಆಡಿಯೋ ವಿಡಿಯೋ ವರದಿ ಇದೆ. ಹಾಗಾದರೆ ಆ ಆಡಿಯೋ ವಿಡಿಯೋ ವರದಿಯಲ್ಲಿ ಏನೇನಿದೆ?

  • ಆರೋಪಿಗಳು ಟ್ರೆಂಡ್ಸ್‌‌ ಶೋನಲ್ಲಿ ಬಟ್ಟೆ ಖರೀದಿಸಿದ ಸಿಸಿಟಿವಿ ಫೂಟೇಜ್
  • ಶವ ಬಿಸಾಡಿದ ಸ್ಥಳದಲ್ಲಿ ಸತ್ವ ಅಪಾರ್ಟ್‌ಮೆಂಟ್‌ನ ಸಿಸಿಟಿವಿ
  • ತುಮಕೂರಿನ ದುರ್ಗಾ ಬಾರ್‌‌ನಲ್ಲಿ ಎಣ್ಣೆ ಖರೀದಿಸಿದ ಸಿಸಿಟಿವಿ
  • ಚಿತ್ರದುರ್ಗ ಟು ಬೆಂಗಳೂರು ಟೋಲ್‌ಗಳ ಸಿಸಿಟಿವಿ ಫೂಟೇಜ್
  • ಚಿತ್ರದುರ್ಗದ ಬಾಲಾಜಿ ಬಾರ್‌ನ ಸಿಸಿಟಿವಿ ವಿಡಿಯೋ
  • ಮೈಸೂರಿನ ರ‍್ಯಾಡಿಸನ್‌ ಬ್ಲೂ ಹೋಟೆಲ್‌ನ ಸಿಸಿಟಿವಿ
  • ಆರೋಪಿಗಳು ಶರಣಾಗತಿಗೆ ಬಂದ ವೇಳೆ ಸಿಸಿಟಿವಿ
  • ರೇಣುಕಾಸ್ವಾಮಿ ಫೋಟೋ ಇರುವ ಪೆನ್‌ಡ್ರೈವ್‌‌
  • ಎ1 ಪವಿತ್ರಾ ಗೌಡ & ದರ್ಶನ್‌‌ಗೆ ಸಂಬಂಧಿಸಿದ ಫೋಟೊ
  • ಇತರೆ 15 ಜನ ಆರೋಪಿಗಳಿಗೆ ಸಂಬಂಧಿಸಿದ ಫೋಟೋಗಳು
  • ಸಾಕ್ಷಿದಾರರ ಫೋಟೋಗಳು ಕೂಡ ರಿಟ್ರೀವ್‌ನಲ್ಲಿ ಪತ್ತೆ.
  • ದರ್ಶನ್‌ ಮನೆಯ ಡಿವಿಆರ್‌.
  • ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ & ಪಟ್ಟಣಗೆರೆ ಶೆಡ್‌ನ ಸಿಸಿಟಿವಿ.
  • ಆರೋಪಿಗಳ ವಾಹನಗಳು ಮಾತೇಶ್ವರಿ ಸ್ಟೋರ್‌‌ ಬಳಿಯ ಸಿಸಿಟಿವಿ.
  • ಮಾರಮ್ಮ ಟೆಂಪಲ್‌ ಬಳಿಯ ಸಿಸಿಟಿವಿ ವಿಡಿಯೋ.
  • ಪವಿತ್ರಾ ಗೌಡ ಮನೆಯ ಸಿಸಿಟಿವಿ ಫೂಟೇಜ್‌.
  • ಬಾಡಿ ಬಿಸಾಡಲು ಹೋದ ವೇಳೆ ಸೆರೆ ಸಿಕ್ಕ ಸಿಸಿಟಿವಿ ವಿಡಿಯೋ.
  • ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ ಸಿಸಿಟಿವಿ.
  • ಈ ಎಲ್ಲಾ ಆಡಿಯೋ ವಿಡಿಯೋ ವರದಿಗೆ ಸಂಬಂಧಿಸಿದಂತೆ ತಜ್ಞರ ಅಭಿಪ್ರಾಯ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan : ನಾವಿಬ್ಬರು ಮದುವೆ ಆಗಿಲ್ಲ.. ಜಸ್ಟ್‌ ಲಿವಿಂಗ್‌ ಟುಗೆದರ್‌ನಲ್ಲಿ ಇದ್ದೀವಿ- ವಿಚಾರಣೆಯಲ್ಲಿ ನಟ ದರ್ಶನ್‌ ಹೇಳಿಕೆ

Living together : ನಟ ದರ್ಶನ್‌ (Actor Darshan) ಹಾಗೂ ಪವಿತ್ರಾಗೌಡ (Pavitra gowda) ಗ್ಯಾಂಗ್‌ ಕೊಲೆ ಕೇಸ್‌ನಲ್ಲಿ ಜೈಲು ಕಂಬಿ ಎಣಿಸುತ್ತಿದೆ. ಈ ನಡುವೆ ನಾವಿಬ್ಬರು ಮದುವೆ ಆಗಿಲ್ಲ, ಲಿವಿಂಗ್‌ ಟುಗೆದರ್‌ನಲ್ಲಿ ಇದ್ದೇವೆ ಎಂದು ವಿಚಾರಣೆ ವೇಳೆ ದರ್ಶನ್‌ ಬಾಯ್ಬಿಟ್ಟಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

VISTARANEWS.COM


on

By

Actor Darshan says he is not married to Pavithra Gowda
Koo

ಬೆಂಗಳೂರು:‌ ನಾನು ಪವಿತ್ರಾಗೌಡ ಮದುವೆ ಆಗಿಲ್ಲ, ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ ಎಂದು ಕೊಲೆ ಆರೋಪಿ ನಟ ದರ್ಶನ್‌ (Actor Darshan) ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌, ಗೆಳತಿ ಪವಿತ್ರಾಗೌಡ ಸೇರಿ 17 ಮಂದಿ ಜೈಲು ಪಾಲಾಗಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಮಸೇಜ್‌ಗಳನ್ನು ಮಾಡಿದ್ದಕ್ಕೆ, ಆತನನ್ನು ಕಿಡ್ನ್ಯಾಪ್‌ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ನಟ ದರ್ಶನ್‌ ಗ್ಯಾಂಗ್‌ ಕಂಬಿ ಎಣಿಸುತ್ತಿದ್ದಾರೆ.

ಖುದ್ದು ಡಿಸಿಪಿಯಿಂದಲೇ ವಿಚಾರಣೆ ನಡೆದಾಗ ನಟ ದರ್ಶನ್‌ ತನ್ನ ಹಾಗೂ ಪವಿತ್ರಗೌಡ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ನಾನು ಪವಿತ್ರಾಗೌಡ ಮದುವೆ ಆಗಿಲ್ಲ. ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ ಎಂದಿದ್ದಾರೆ. ದರ್ಶನ್‌ ಹಾಗೂ ಪವಿತ್ರಾಗೌಡ ಲಿವಿಂಗ್‌ ಟುಗೆದರ್‌ನಲ್ಲಿಇರುವುದಾಗಿ ಬಾಯ್ಬಿಟ್ಟಿದ್ದಾರೆ. ಸದ್ಯ ಇಬ್ಬರ ಸಂಬಂಧದ ಬಗ್ಗೆಯೂ ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Actor Darshan says he is not married to Pavithra Gowda
Actor Darshan says he is not married to Pavithra Gowda

ಕಿಡ್ನ್ಯಾಪ್‌ಗೂ ಮೊದಲು ಪವಿತ್ರಾಗೌಡಗೆ ರೇಣುಕಾಸ್ವಾಮಿಯ ಫೋಟೊ ಕಳಿಸಿದ್ದ ರಾಘವೇಂದ್ರ

ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್‌ ಮಾಡುವ ಮುನ್ನ ರಾಘವೇಂದ್ರ ಪವಿತ್ರಾಗೌಡಗೆ ರೇಣುಕಾಸ್ವಾಮಿಯ ಫೋಟೊವನ್ನು ಕಳಿಸಿದ್ದ. ಇವನೇನಾ ರೇಣುಕಾಸ್ವಾಮಿ ಎಂದು ಕನ್ಫರ್ಮ್ ಮಾಡಲು ರಾಘವೇಂದ್ರ ಪವನ್‌ಗೆ ಫೋಟೊ ಕಳಿಸಿದ್ದ. ರಾಘವೇಂದ್ರ ಕಾರಲ್ಲಿ ಕೂತು ತೆಗೆದ ಫೋಟೊವನ್ನು ಪವನ್ ಮೂಲಕ ಪವಿತ್ರ ಹಾಗೂ ದರ್ಶನ್‌ಗೆ ಕಳುಹಿಸಿದ್ದರು. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ರೇಣುಕಸ್ವಾಮಿ ಫೋಟೊ ತೆಗೆದಿದ್ದರು.

Actor Darshan says he is not married to Pavithra Gowda
Actor Darshan says he is not married to Pavithra Gowda

ನಟ ದರ್ಶನ್ ಸಿನಿಮಾ ಪೋಸ್ಟರ್‌ಗಳಲ್ಲಿ ಆರೋಪಿಗಳು

ಆರೋಪಿಗಳಾದ ರಾಘವೇಂದ್ರ, ಅನುಕುಮಾರ್ ಹಾಗೂ ಜಗದೀಶ್ ನಟ ದರ್ಶನ್ ಸಿನಿಮಾ ಪೋಸ್ಟರ್‌ಗಳಲ್ಲಿಯೂ ಇರುವುದನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ನಟ ದರ್ಶನ್‌ನ ಪಕ್ಕ ಅಭಿಮಾನಿಗಳಾಗಿದ್ದ ಆರೋಪಿಗಳು, ಕ್ರಾಂತಿ ಹಾಗೂ ಕಾಟೇರಾ ಸಿನಿಮಾದ ಪೋಸ್ಟರ್‌ನಲ್ಲಿ ಪೋಸ್‌ ಕೊಟ್ಟಿದ್ದರು. ಸದ್ಯ ಪೋಸ್ಟರ್‌ಗಳ ಫೋಟೊಗಳನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

Actor Darshan says he is not married to Pavithra Gowda
Actor Darshan says he is not married to Pavithra Gowda

ಟೆನ್ಷನ್‌ನಲ್ಲೇ ಓಡಾಡುತ್ತಿದ್ದ ದರ್ಶನ್‌

ರೇಣುಕಾಸ್ವಾಮಿ ಕೊಲೆ ಬಳಿಕ ಮೈಸೂರಿನ‌ ರ‍್ಯಾಡಿಸನ್ ಹೋಟೆಲ್‌ನಲ್ಲಿ ನಾಗರಾಜ್ ಜತೆ ದರ್ಶನ್ ಚರ್ಚೆ ಮಾಡುತ್ತಿರುವ ಫೋಟೊಗಳು ಲಭ್ಯವಾಗಿವೆ. ರೇಣುಕಾಸ್ವಾಮಿ ಕೊಲೆ ಬಳಿಕ ದರ್ಶನ್‌ ಟೆನ್ಷನ್‌ನಲ್ಲೇ ಓಡಾಡುತ್ತಿದ್ದರು. 10ನೇ ತಾರೀಖು ರಾತ್ರಿ 10 ಗಂಟೆ ಸಮಯದಲ್ಲಿ ಸೆರೆಯಾದ ದೃಶ್ಯವಿದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
I lost control of my eyes while driving the car Film director Nagashekhar
ಬೆಂಗಳೂರು2 mins ago

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

her husband was having an illicit relationship Suicide by setting herself on fire
ಬೆಂಗಳೂರು ಗ್ರಾಮಾಂತರ30 mins ago

Self Harming : ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಬಲಿ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Karnataka weather Forecast
ಮಳೆ8 hours ago

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Dina bhavishya
ಭವಿಷ್ಯ8 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Hotel staff misleads police while arresting actor Darshan
ಸ್ಯಾಂಡಲ್ ವುಡ್22 hours ago

Actor Darshan: ನಟ ದರ್ಶನ್‌ನನ್ನು ಬಂಧಿಸುವಾಗ ಪೊಲೀಸರಿಗೆ ದಾರಿ ತಪ್ಪಿಸಿದ್ದ ಹೋಟೆಲ್‌ ಸಿಬ್ಬಂದಿ!

Darshan Brutality revealed in chargesheet
ಸ್ಯಾಂಡಲ್ ವುಡ್22 hours ago

Actor Darshan : ರೇಣುಕಾಸ್ವಾಮಿಯ ಪ್ಯಾಂಟ್‌ ಬಿಚ್ಚಿಸಿ ಮರ್ಮಾಂಗಕ್ಕೆ ‌ಒದ್ದಿದ್ದರಾ ದರ್ಶನ್! ಚಾರ್ಜ್‌ಶೀಟ್‌ನಲ್ಲಿ ಕ್ರೌರ್ಯದ ಅನಾವರಣ

Why did Darshans fan Raghavendra refuse to surrender
ಸ್ಯಾಂಡಲ್ ವುಡ್22 hours ago

Actor Darshan:ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರೆಂಡರ್‌ ಆಗು ಎಂದಾಗ ದರ್ಶನ್‌ ಅಭಿಮಾನಿ ರಾಘವೇಂದ್ರ ನಿರಾಕರಿಸಿದ್ದೇಕೆ?

actor darshan
ಸ್ಯಾಂಡಲ್ ವುಡ್22 hours ago

Actor Darshan : ದರ್ಶನ್‌ ಕೊಟ್ಟ ಮೂರೇ ಹೊಡೆತಕ್ಕೆ ಜೀವ ಬಿಟ್ಟಿದ್ದ ರೇಣುಕಾಸ್ವಾಮಿ!; ಆ 45 ನಿಮಿಷ ಶೆಡ್‌ನಲ್ಲಿ ನಡೆದಿದ್ದೇನು?

Haryana Naxal caught by police after coming to see girlfriend in Bengaluru
ಬೆಂಗಳೂರು1 day ago

Naxal arrested‌ : ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ನೋಡಲು ಬಂದು ಸಿಕ್ಕಿಬಿದ್ದ ಹರಿಯಾಣದ ನಕ್ಸಲ್‌

Actor Darshan says he is not married to Pavithra Gowda
ಸ್ಯಾಂಡಲ್ ವುಡ್1 day ago

Actor Darshan : ನಾವಿಬ್ಬರು ಮದುವೆ ಆಗಿಲ್ಲ.. ಜಸ್ಟ್‌ ಲಿವಿಂಗ್‌ ಟುಗೆದರ್‌ನಲ್ಲಿ ಇದ್ದೀವಿ- ವಿಚಾರಣೆಯಲ್ಲಿ ನಟ ದರ್ಶನ್‌ ಹೇಳಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್7 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 week ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌