Site icon Vistara News

Student Dies | ಈಜಲು ಹೋಗಿ ಹೊಂಡದಲ್ಲಿ ಮುಳುಗಿ ವಸತಿ ಶಾಲೆಯ ವಿದ್ಯಾರ್ಥಿ ಸಾವು

Student Dies

ದೇವನಹಳ್ಳಿ: ತಾಲೂಕಿನ ದೇವನಾಯಕನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಿಂಭಾಗದಲ್ಲಿ ಈಜಲು ಹೋಗಿದ್ದಾಗ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ (Student Dies) ಮೃತಪಟ್ಟಿದ್ದಾನೆ.

ಏಳನೇ ತರಗತಿ ವಿದ್ಯಾರ್ಥಿ ಜುನೇದ್ (14) ಮೃತ ಬಾಲಕ. ಮೊರಾರ್ಜಿ ಶಾಲೆಯ ಶಿಕ್ಷಕರು ಪ್ರವಾಸಕ್ಕೆ ತೆರಳಿದ್ದರು. ಹೀಗಾಗಿ ಶಾಲೆಯ ವಿದ್ಯಾರ್ಥಿಗಳನ್ನು ನೋಡಿಕೊಳ್ಳಲು ಮೇಲ್ವಿಚಾರಕರೊಬ್ಬರನ್ನು ನೇಮಿಸಲಾಗಿತ್ತು. ಬುಧವಾರ 6 ಹುಡುಗರನ್ನು ಶಾಲೆಯ ಸಮೀಪದ ಹೊಂಡಕ್ಕೆ ಈಜಲು ಮೇಲ್ವಿಚಾರಕ ಕರೆದುಕೊಂಡು ಹೋಗಿದ್ದ. ಈ ವೇಳೆ ಈಜಲು‌ ಬಾರದ ಜುನೇದ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮೊರಾರ್ಜಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದಲೇ ಬಾಲಕ ಮೃತ ಪಟ್ಟಿದ್ದಾನೆ ಎಂದು ಪಾಲಕರು ಆರೋಪಿಸಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Drowned in river | ಹಂಪಿ ಪುರಂದರ ಮಂಟಪ ಬಳಿ ಈಜಲು ಹೋಗಿದ್ದ ಇಬ್ಬರು ಯುವಕರು ತುಂಗಭದ್ರೆ ಪಾಲು

Exit mobile version