2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ - Vistara News

ಬೆಂಗಳೂರು

2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

2nd Puc Exam : ದ್ವಿತೀಯ ಪರೀಕ್ಷೆ 2ರ ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು, ಮರು ಮೌಲ್ಯಮಾಪನ, ಮರು ಎಣಿಕೆಗೆ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕಾಗಿ ದಿನಾಂಕಗಳನ್ನು ಪ್ರಕಟಿಸಲಾಗಿದೆ.

VISTARANEWS.COM


on

2nd Pux Exam
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಏಪ್ರಿಲ್ 29 ರಿಂದ ಮೇ 16ರವರೆಗೆ ನಡೆದಿದ್ದ 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ (2nd Puc Exam) ಫಲಿತಾಂಶ ಪ್ರಕಟಗೊಂಡಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ 2ರ ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು, ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಗಾಗಿ ಮೇ 21ರಿಂದ 23ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಡ್ಡಾಯವಾಗಿ ಸ್ಕ್ಯಾನಿಂಗ್‌ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಮರುಮೌಲ್ಯಮಾಪನ ಹಾಗೂ ಮರುಎಣಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅಂತಹವರು ಮೇ 22ರಿಂದ 25ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಯನ್ನು Kseab.karnataka.gov.in ವೆಬ್‌ಸೈಟ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಡೌನ್‌ಲೋಡ್‌ ಮಾಡಿಕೊಳ್ಳಲು ಮೇ 22ರಿಂದ 24ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನಿಂಗ್‌ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಶುಲ್ಕ ನಿಗದಿ ಮಾಡಲಾಗಿದೆ. ಮರು ಮೌಲ್ಯಮಾಪನದ ಶುಲ್ಕದ ಪ್ರತಿ ವಿಷಯಕ್ಕೆ 1,670 ರೂ. ಇದೆ. ಇನ್ನೂ ಯಾವುದೇ ಅಭ್ಯರ್ಥಿಗಳು ಪರೀಕ್ಷೆ 3ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ. ಮರು ಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ 2ರ ಅಂತಿಮ ಅಂಕಗಳೆಂದು ಪರಿಗಣಿಸಲಾಗುತ್ತದೆ. ಇನ್ನೂ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಯ ಫಲಿತಾಂಶವನ್ನು , ಮಂಡಲಿಯ ವೆಬ್‌ಸೈಟ್‌ Kseab.karnataka.gov.in ಪ್ರಕಟಿಸಲಾಗುತ್ತದೆ. ಅಂಕಗಳ ಮರುಎಣಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: 2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ; ನೋಂದಣಿಗೂ ಡೇಟ್‌ ಫಿಕ್ಸ್‌

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (2nd PUC Exam) 3ನೇ ಪೂರಕ ಪರೀಕ್ಷೆಯು ನಡೆಯಲಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್‌ 24ರಿಂದ ಜುಲೈ 5ರವರೆಗೆ ಪರೀಕ್ಷೆಯು ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ


ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಪರೀಕ್ಷೆ -3ಕ್ಕೆ ನೋಂದಾಯಿಸಿಕೊಳ್ಳಲು ಹೀಗೆ ಮಾಡಿ

2023-24ನೇ ಸಾಲಿನ ಫಲಿತಾಂಶ ಪೂರ್ಣಗೊಂಡಿರದ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹೊಸಬರು ಮತ್ತು ಖಾಸಗಿಯಾಗಿ ನೋಂದಾವಣೆಯಾದ ವಿದ್ಯಾರ್ಥಿಗಳು ಮಂಡಲಿಯ ವೆಬ್‌ಸೈಟ್‌ ಮೂಲಕ ನೇರವಾಗಿ ಪರೀಕ್ಷೆ 3ಕ್ಕೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಮೇ 23ರಿಂದ 28ರವರಗೆ ದಂಡ ರಹಿತ ನೋಂದಣಿ ಮಾಡಿಕೊಳ್ಳಬಹುದು. ಒಂದು ವೇಳೆ ಮೇ 28ರೊಳಗೆ ಅರ್ಜಿ ಸಲ್ಲಿಸದೇ ಹೋದರೆ ಮೇ 29ರಿಂದ 30ರವರೆಗೆ ದಂಡ ಸಹಿತ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಕೆಎಸ್‌ಇಎಬಿ ತಂತ್ರಾಂಶದಲ್ಲಿ ಸಲ್ಲಿಸಬೇಕು. ಮೇ 23ರಿಂದ ಮ28ರ ಒಳಗಾಗಿ ಇಂದೀಕರಿಸಬೇಕು. ಕೊನೆ ದಿನವನ್ನು ಮೀರಿದರೆ ದಂಡ ಸಹಿತ ಮೇ 29ರಿಂದ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.

2024ರ ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕವನ್ನು ನಿಗಧಿಸಲಾಗಿದೆ. ಒಂದು ವಿಷಯಕ್ಕೆ 140 ರೂ ಹಾಗೂ ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400 ರೂ. ನಿಗದಿ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ 3ಕ್ಕೆ ಮೇ 24ರಿಂದ 28ರವರೆಗೆ ತಮ್ಮ ಕಾಲೇಜು ಅಥವಾ KSEAB ಪೋರ್ಟಲ್‌ನಲ್ಲಿ ಆನ್‌ಲೈನ್‌ ಮುಖಾಂತರ ನೋಂದಾಯಿಸಿಕೊಳ್ಳಬಹುದು. ಇನ್ನೂ ಫಲಿತಾಂಶ ತಿರಸ್ಕರಣಾ ಪದ್ಧತಿಯನ್ನು ರದ್ದುಪಡಿಸಲಾಗಿದೆ. 2023ರ ನಂತರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ 3ರಲ್ಲಿ ಹಾಜರಾಗಬೇಕಾದರೆ ಮಂಡಲಿಯು ಒದಗಿಸಿದ ಫಲಿತಾಂಶದ ಪಟ್ಟಿಯ ಆಧಾರದ ಮೇಲೆ ಶುಲ್ಕವನ್ನು ಭರಿಸಬೇಕಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest23 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌