Auto Drivers : ಡಬಲ್‌ ಮೀಟರ್‌ ಕೇಳಿದ, ಕರೆದ ಕಡೆ ಬಾರದ ಆಟೋ ಡ್ರೈವರ್ಸ್‌ ಮೇಲೆ 670 ಕೇಸ್! Vistara News

ಕರ್ನಾಟಕ

Auto Drivers : ಡಬಲ್‌ ಮೀಟರ್‌ ಕೇಳಿದ, ಕರೆದ ಕಡೆ ಬಾರದ ಆಟೋ ಡ್ರೈವರ್ಸ್‌ ಮೇಲೆ 670 ಕೇಸ್!

Auto Drivers : ನಿಗದಿತ ಸ್ಥಳಕ್ಕೆ ಪ್ರಯಾಣಕ್ಕಾಗಿ ಕರೆದರೆ ಕೆಲವು ಆಟೋ ಚಾಲಕರು ಬರಲು ಒಪ್ಪುವುದಿಲ್ಲ, ಇನ್ನು ಕೆಲವರು ಡಬಲ್‌ ಚಾರ್ಜ್‌ ಕೇಳುವಂತಹ ಪ್ರಕರಣಗಳ ಬಗ್ಗೆ ಹಲವಾರು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 670 ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Karnataka bandh Auto
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ (Shakti Scheme) ಆಟೋ ಚಾಲಕರು (Auto Drivers) ಸಂಕಷ್ಟಕ್ಕೀಡಾಗಿದ್ದಾರೆ. ಅದೇ ವೇಳೆ ಕೆಲವು ಆಟೋ ಚಾಲಕರ ದುರ್ವರ್ತನೆ ಕೂಡ ಮಿತಿ ಮೀರಿದೆ ಎಂಬ ಆರೋಪ ಕೇಳಿಬಂದಿದೆ. ಜತೆಗೆ ಡಬಲ್‌ ಮೀಟರ್‌ (Double meter) ಕೇಳಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ನಿರಂತರವಾಗಿ ಬರುತ್ತಿರುವ ದೂರಿನ ಅನ್ವಯ ಸಂಚಾರ ಪೊಲೀಸರು ಅಖಾಡಕ್ಕಿಳಿದು ಕ್ರಮ ಕೈಗೊಂಡಿದ್ದಾರೆ. ಇದರ ಪರಿಣಾಮ ಒಟ್ಟು 670 ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, 3 ಲಕ್ಷದ 36 ಸಾವಿರದ 500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಆಟೋ ಚಾಲಕರಿಗೆ ಸಂಬಂಧಪಟ್ಟಂತಹ ದೂರುಗಳು ನೀಡಲು ಪೊಲೀಸರು ಪ್ರತ್ಯೇಕ ಲೈನ್‌ ವ್ಯವಸ್ಥೆ ಮಾಡಿದ್ದರು. ಆದರೆ, ಆ ನಂಬರ್‌ಗಳಿಗೆ ಕರೆ ಮಾಡುವುದಕ್ಕಿಂತ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ (Social Media) ಸಾರ್ವಜನಿಕರು ಪೋಸ್ಟ್‌ ಮಾಡಿ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಮನಗಂಡು ಪೊಲೀಸರೇ ಖುದ್ದು ಕಾರ್ಯಾಚರಣೆಗೆ (Police Operation) ಇಳಿದ ಪರಿಣಾಮ ಈಗ ದುರ್ವರ್ತನೆ ತೋರಿದ ಆಟೋ ಚಾಲಕರು ದಂಡ ತೆತ್ತಿದ್ದಾರೆ.

ಮಫ್ತಿಯಲ್ಲಿ ನಡೆದ ಕಾರ್ಯಾಚರಣೆ

ಪೊಲೀಸರು ಮಫ್ತಿಯಲ್ಲಿ ಕಾರ್ಯಾಚರಣೆ (Police Mufti operation) ನಡೆಸಿದ್ದರಿಂದ ನೂರಾರು ಆಟೋ ಚಾಲಕರಿಗೆ ದಂಡ ಬಿದ್ದಿದೆ. ಕರೆದ ಸ್ಥಳಕ್ಕೆ ಬಾರದ ಆಟೋ ಚಾಲಕರು ಅಧಿಕ ಮೊತ್ತಕ್ಕೆ ಬೇಡಿಕೆ ಇಡುತ್ತಿದ್ದರು. ಈ ಸಂಬಂಧ ಉತ್ತರ ವಿಭಾಗ ಹಾಗೂ ಉತ್ತರ ಉಪ ವಿಭಾಗದಲ್ಲಿ ಬರುವ ಒಟ್ಟು 11 ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಫ್ತಿ ಮೂಲಕ ಕಾರ್ಯಾಚರಣೆ ನಡೆಸಲಾಗಿತ್ತು.

ಮಫ್ತಿಯಲ್ಲಿ ನಡೆದ ಕಾರ್ಯಾಚರಣೆಯನ್ನು ಎರಡು ಭಾಗಗಳಾಗಿ ವಿಂಗಡನೆ ಮಾಡಲಾಗಿತ್ತು. ಅದರಲ್ಲಿ ನಿಗದಿತ ಮೊತ್ತಕ್ಕಿಂತ ಅಧಿಕ ಮೊತ್ತಕ್ಕೆ ಡಿಮ್ಯಾಂಡ್‌ ಮಾಡುವುದು ಹಾಗೂ ಕರೆದ ಸ್ಥಳಕ್ಕೆ ಬಾರದೆ ಸಾರ್ವಜನಿಕರ ಜತೆ ಉದ್ಧಟತನ ಮೆರೆಯುವವರನ್ನು ಗುರಿಯಾಗಿಸಿಕೊಂಡು ಪೊಲೀಸರು ಫೀಲ್ಟ್‌ಗೆ ಇಳಿದಿದ್ದರು. ಎರಡು ಕೆಟಗರಿಯಲ್ಲಿ ಕಾರ್ಯಾಚರಣೆ ನಡೆಸಿದಾಗ ಲಕ್ಷಾಂತರ ಮೌಲ್ಯದ ಮೊತ್ತ ಸಂಗ್ರಹವಾಗಿದೆ.

ಸೆಪ್ಟೆಂಬರ್‌ ತಿಂಗಳು 14ರಿಂದ 23ನೇ ತಾರೀಖಿನವರೆಗೆ ನಡೆದ ಕಾರ್ಯಾಚರಣೆ ಇದಾಗಿದ್ದು, ಕರೆದ ಕಡೆ ಬರುವುದಿಲ್ಲ ಎಂಬ ದೂರಿನ ಅನ್ವಯ ನಾರ್ತ್ ಈಸ್ಟ್ ಸಬ್ ಡಿವಿಶನ್‌ನಲ್ಲಿ 95 ಪ್ರಕರಣಗಳನ್ನು ದಾಖಲಿಸಿ 47,500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಇನ್ನು ಉತ್ತರ ಉಪ ವಿಭಾಗದಲ್ಲಿ 221 ಕೇಸ್ ದಾಖಲಿಸಿ 1 ಲಕ್ಷ 10 ಸಾವಿರದ 500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಅಂದರೆ ಒಟ್ಟು 316 ಕೇಸ್‌ಗಳನ್ನು ದಾಖಲಿಸಿ 1 ಲಕ್ಷದ 58 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: Chaitra Fraud Case : ಫೈರ್‌ ಬ್ರಾಂಡ್‌ ಭಾಷಣಕಾರ್ತಿ ಚೈತ್ರಾ ಈಗ ಕೈದಿ ನಂಬರ್ 9737!

ಭಾರಿ ದಂಡ ವಸೂಲಿ

ಇನ್ನು ಅಧಿಕ ಮೊತ್ತದ ಬೇಡಿಕೆ ಇಟ್ಟ ಅನ್ವಯವಾಗಿ ನಾರ್ತ್ ಈಸ್ಟ್ ಸಬ್ ಡಿವಿಶನ್‌ನಲ್ಲಿ 95 ಪ್ರಕರಣ ದಾಖಲಿಸಿ 47,500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಹಾಗೆ ಆಟೋ ಚಾಲಕರಿಂದ ಪ್ರಯಾಣಿಕರಿಗೆ ಹೆಚ್ಚುವರಿ ಹಣ ಬೇಡಿಕೆ ಹಿನ್ನೆಲೆಯಲ್ಲಿ ಈಶಾನ್ಯ ಉಪ‌ ವಿಭಾಗದಲ್ಲಿ 141 ಪ್ರಕರಣ ದಾಖಲಿಸಿ 72 ಸಾವಿರ ದಂಡ ವಸೂಲಿ ಮಾಡಲಾಗಿದೆ. ಉತ್ತರ ಉಪ ವಿಭಾಗದಲ್ಲಿ 213 ಕೇಸ್ ದಾಖಲಿಸಿ 6 ಸಾವಿರದ 500 ದಂಡ ವಸೂಲಿ ಒಟ್ಟು 354 ಪ್ರಕರಣ ದಾಖಲಿಸಿ 1 ಲಕ್ಷದ 78 ಸಾವಿರದ 500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Murder Case: ಮುಂದಿನ ತಿಂಗಳು ಮದುವೆಯಾಗಲಿ‌ದ್ದ ಆಟೋ ಚಾಲಕನ ಬರ್ಬರ ಹತ್ಯೆ

ಅರುಣ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. 10ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ (Murder Case) ನಡೆದಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

arun murderd
Koo

ಬೆಂಗಳೂರು: ರಾಜಧಾನಿಯಲ್ಲಿ ಯುವಕನೊಬ್ಬನನ್ನು ಹತ್ತಕ್ಕೂ ಅಧಿಕ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ (Murder Case) ಮಾಡಿದ್ದಾರೆ. ಅರುಣ್ (24) ಕೊಲೆಯಾದ ಆಟೋ ಚಾಲಕ. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಅರುಣ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಅರುಣ್‌ನ ಮದುವೆ ಸಹ ಮುಂದಿನ ತಿಂಗಳು ಫಿಕ್ಸ್ ಆಗಿತ್ತು. 10ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿರುವ ರೀತಿ ನೋಡಿದರೆ ಹಳೆಯ ದ್ವೇಷ ತೀರಿಸಿಕೊಳ್ಳಲು ನಡೆದ ಕೃತ್ಯದಂತೆ ಕಾಣಿಸುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಮಚ್ಚಿನಿಂದ ಕೊಚ್ಚಿ ಮಗನನ್ನೇ ಕೊಂದ ತಂದೆ

ಆನೇಕಲ್: ಮಚ್ಚಿನಿಂದ ಕೊಚ್ಚಿ ಮಗನನ್ನು ತಂದೆಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್‌ ಸಮೀಪದ ನಾರಾಯಣಪುರದಲ್ಲಿ ನಡೆದಿದೆ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದಾಗ ಮಗನನ್ನು ತಂದೆಯೇ ಹತ್ಯೆ (Murder Case) ಮಾಡಿದ್ದಾರೆ.

ಸುರೇಶ್ (35) ಕೊಲೆಯಾದ ವ್ಯಕ್ತಿ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅದೇ ರೀತಿ ಮಂಗಳವಾರವೂ ಕುಡಿದು ಬಂದು ಗಲಾಟೆ ಮಾಡಿದ್ದ. ತಾಯಿಯನ್ನ ಹಿಡಿದು ಹೊಡೆಯುತ್ತಿದ್ದ ಹಿನ್ನೆಲೆಯಲ್ಲಿ ಗಲಾಟೆ ಬಿಡಿಸಲು ತಂದೆ ಮುಂದಾಗಿದ್ದಾರೆ. ಆದರೆ, ಗಲಾಟೆ ವಿಕೋಪಕ್ಕೆ ತಿರುಗಿದಾಗ ತಂದೆ ಮಚ್ಚಿನಿಂದ ಸುರೇಶ್‌ಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಆನೇಕಲ್ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದ್ದು, ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Sukhdev Singh Gogamedi: ರಜಪೂತ್ ಕರ್ಣಿ ಸೇನಾ ಮುಖಂಡ ಸುಖ್​ದೇವ್​​ ಗೋಗಮೇಡಿ ಗುಂಡಿಟ್ಟು ಹತ್ಯೆ

Continue Reading

ಕರ್ನಾಟಕ

karnataka Weather :‌ ಇಂದು-ನಾಳೆ ಭಾಗಶಃ ಮೋಡ ಕವಿದ ವಾತಾವರಣ; ಇಲ್ಲೆಲ್ಲ ಮಳೆ ಸೂಚನೆ

Rain News : ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ. ಕರಾವಳಿಯಲ್ಲಿ ಮಳೆಯು ಮಾಯವಾಗಿದ್ದು, ಶುಷ್ಕ ವಾತಾವರಣವು (Dry Weather) ಮೇಲುಗೈ ಸಾಧಿಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಸೂರ್ಯ ಮರೆಯಾಗಿ, ಮೋಡ ಕವಿದ ವಾತಾವರಣ (karnataka Weather Forecast) ಇರಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಮಲೆನಾಡು ಹಾಗೂ ಕರಾವಳಿಯಲ್ಲಿ ಒಣ ಹವೆ ಇರಲಿದೆ.

ರಾಜಧಾನಿ ಬೆಂಗಳೂರಲ್ಲಿ ಥಂಡಿ ಗಾಳಿಯೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಸೂರ್ಯನ ದರ್ಶನ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗಲಿದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Rohit Sharma : ಫಾರಿನ್ ಟೂರ್​ ಮುಗಿಸಿ ಮರಳಿದ ರೋಹಿತ್​ ಶರ್ಮಾ ಫ್ಯಾಮಿಲಿ

ಇಲ್ಲೆಲ್ಲ ಚದುರಿದ ಮಳೆ

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿಯಲಿದೆ. ಉಳಿದಂತೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಸೂರ್ಯ ಕಣ್ಮರೆಯಾಗಲಿದ್ದಾನೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 25 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

ವಿಸ್ತಾರ ಸಂಪಾದಕೀಯ: ಅಡಿಕೆ ಬೆಳೆಯ ಸಂಕಷ್ಟಗಳನ್ನು ನಿವಾರಿಸಿ

Vistara Editorial: ಅಡಿಕೆಗೆ ಸಂಬಂಧಿಸಿ ಸರ್ಕಾರ ತಾನು ನೀಡಿರುವ ಭರವಸೆಗಳನ್ನು ಈಡೇರಿಸುವ ಕೆಲಸ ಕೂಡಲೇ ಮಾಡಬೇಕು. ಎಲೆಚುಕ್ಕಿ ಹಾಗೂ ಹಳದಿ ರೋಗಗಳ ಮತ್ತದರ ಪರಿಹಾರದ ಕುರಿತ ಅಧ್ಯಯನ ಎಲ್ಲಿಗೆ ತಲುಪಿದೆ ಎಂಬುದನ್ನು ತಿಳಿಸಬೇಕು.

VISTARANEWS.COM


on

Vistara Editorial, Leaf spot disease for areca nut
Koo

ವಾಣಿಜ್ಯ ಬೆಳೆ ಅಡಿಕೆ ಅಮರಿಕೊಂಡಿರುವ ಸಂಕಷ್ಟಗಳು ಒಂದೆರಡಲ್ಲ. ರಾಜ್ಯದಲ್ಲಿ ಬೆಳೆ ನಷ್ಟ, ಎಲೆ ಚುಕ್ಕೆ ರೋಗ (Leaf spot disease for areca nut), ಹಳದಿ ರೋಗ, ಬೆಲೆ ಕುಸಿತಗಳಂತಹ ಹೊಡೆತದಿಂದ ಕಂಗಾಲಾಗಿರುವ ಅಡಿಕೆ ಬೆಳಗಾರರಿಗೆ ಈಗ ಮತ್ತೊಂದು ಶಾಕಿಂಗ್‌ ನ್ಯೂಸ್‌. ರಾಜ್ಯದಲ್ಲಿ ಅಡಿಕೆ ಅಕ್ರಮ ದಂಧೆಯ ವ್ಯವಸ್ಥಿತ ಜಾಲವೊಂದು ಹುಟ್ಟಿಕೊಂಡಿದೆ. ಅಂತಾರಾಜ್ಯ ಜಾಲ ಇದಾಗಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 11 ಟನ್‌ ಅಕ್ರಮ ಅಡಿಕೆಯನ್ನು (Illegal Areca nut) ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದಾಗ ಈ ವಿಷಯ ತಿಳಿದುಬಂದಿದೆ. ಇತರ ರಾಜ್ಯಗಳಿಂದ ರಾಜ್ಯದ ಮಾರುಕಟ್ಟೆಯನ್ನು ಅಡಿಕೆ ಅಕ್ರಮವಾಗಿ ಪ್ರವೇಶ ಮಾಡುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಭೂತಾನ್, ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆಯನ್ನು ಭಾರತಕ್ಕೆ ಸಾಗಾಟ ಮಾಡಲಾಗುತ್ತಿದೆ. ಈಶಾನ್ಯ ಪ್ರದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಗಳು ಬರುತ್ತಿವೆ. ಅಸ್ಸಾಂ ಮತ್ತು ಮಣಿಪುರದಂತಹ ಪ್ರದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟ ಇಲ್ಲದ ಅಡಿಕೆ ಪೂರೈಸುವ ಜಾಲ ವ್ಯಾಪಕವಾಗಿ ವ್ಯಾಪಿಸುತ್ತಿದೆ. ಇದು ಇಲ್ಲಿ ಅಡಿಕೆ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬ ಆತಂಕ ಎದುರಾಗಿದೆ. ಇಂತಹ ಅಕ್ರಮಕ್ಕೆ ಕೂಡಲೇ ಕಡಿವಾಣ ಹಾಕಿ, ಈ ಬಗ್ಗೆ ಕಠಿಣ ಕಾನೂನು ರೂಪಿಸಬೇಕು ಎಂಬುದು ಎಲ್ಲ ಅಡಿಕೆ ಬೆಳೆಗಾರರ ಆಗ್ರಹ(Vistara Editorial).

ಭಾರತದಲ್ಲಿ ಅಡಿಕೆ ಬೆಳೆಯುವ ಪ್ರಮುಖ ರಾಜ್ಯ ಕರ್ನಾಟಕ. ಅದರಲ್ಲೂ ಇಂದು ಮಲೆನಾಡು ಹಾಗೂ ಕರಾವಳಿ ಭಾಗಗಳ ಜೀವನಾಡಿಯೇ ಅಡಿಕೆ ಎಂಬಂತಾಗಿದೆ. ಭೂತಾನ್‌ನಿಂದ ಹಸಿ ಅಡಿಕೆ ಆಮದಿಗೆ ಸರ್ಕಾರ ಒಪ್ಪಿಗೆ ನೀಡಿದ್ದ ಸುದ್ದಿ ಹರಡುತ್ತಿದ್ದಂತೆ ರಾಜ್ಯದಲ್ಲಿ ರಾಶಿ ಕೆಂಪಡಿಕೆಯ ಬೆಲೆಯಲ್ಲಿ ಅಲ್ಪ ಕುಸಿತ ಕಂಡಿತ್ತು. ಅಂದರೆ ಇಲ್ಲಿ ಆಗುವ ಒಂದು ಸಣ್ಣ ಚಲನೆಯೂ ಕೋಟ್ಯಂತರ ಮೌಲ್ಯದ ಅಡಿಕೆ ಮಾರುಕಟ್ಟೆಯಲ್ಲಿ ತೀವ್ರ ಏರುಪೇರಿಗೆ ಕಾರಣವಾಗುತ್ತದೆ. ಇದರ ಜೊತೆಗೆ ಅಡಿಕೆಯನ್ನು ಕಾಡುತ್ತಿರುವ ಇನ್ನೂ ಹಲವು ಸಮಸ್ಯೆಗಳಿವೆ. ಮುಖ್ಯವಾಗಿ ಎಲೆ ಚುಕ್ಕಿ ರೋಗ ಮತ್ತು ಹಳದಿ ರೋಗ. ಮಲೆನಾಡು, ಕರಾವಳಿ ಹಾಗೂ ಮಧ್ಯ ಕರ್ನಾಟಕ ಭಾಗದ ಕೆಲವು ಕಡೆ ಅಡಿಕೆ ಬೆಳೆಗೆ ಕಾಡುತ್ತಿರುವ ಎಲೆ ಚುಕ್ಕಿ ರೋಗದ (Leaf spot Disease) ವಿಷಯ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಪ್ರಸ್ತಾಪವಾಗಿದೆ. ಎಲೆ ಚುಕ್ಕಿ ರೋಗದ ತೀವ್ರತೆ ಬಗ್ಗೆ ಪರಿಷತ್‌ನಲ್ಲಿ ಪರಿಷತ್ ಸದಸ್ಯ ರುದ್ರೇಗೌಡ ಪ್ರಸ್ತಾಪಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉತ್ತರಿಸಿದ್ದಾರೆ.

ಎಲೆ ಚುಕ್ಕಿ ರೋಗವನ್ನು ತಡೆಗಟ್ಟಲು ಸಂಶೋಧನೆ ನಡೆಸಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಸಂಶೋಧನೆಗೆ ಹಣ ಕೂಡ ಬಿಡುಗಡೆ ಮಾಡಲಾಗಿದೆ. ಇದನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಚಲುವರಾಯಸ್ವಾಮಿ ಉತ್ತರಿಸಿದ್ದಾರೆ. ಮಲೆನಾಡು ಭಾಗದಲ್ಲಿ ಅಡಿಕೆಯನ್ನು ಕಾಡುತ್ತಿರುವ ಎಲೆ ಚುಕ್ಕೆ ರೋಗದ ಕುರಿತು ʻವಿಸ್ತಾರ ನ್ಯೂಸ್‌ʼ ನಡೆಸಿದ್ದ ʻಅಡಕತ್ತರಿಯಲ್ಲಿ ಅಡಕೆʼ ಎಂಬ ಅಭಿಯಾನದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ (Congress Government) ಈ ರೋಗದ ನಿಯಂತ್ರಣಕ್ಕೆ ಅಗತ್ಯವಾಗಿರುವ ಔಷಧವನ್ನು ಕಂಡು ಹಿಡಿಯುವ ಸಂಶೋಧನೆಗೆ ಹಣಕಾಸಿನ ನೆರವನ್ನು ಈಚೆಗೆ ನೀಡಿತ್ತು. ಮೊದಲ ಹಂತವಾಗಿ ಶಿವಮೊಗ್ಗ ತೋಟಗಾರಿಕಾ ವಿವಿಗೆ ಸಂಶೋಧನೆಯ ಉದ್ದೇಶಕ್ಕಾಗಿ 43.61 ಲಕ್ಷ ಅನುದಾನ ಬಿಡುಗಡೆ ಮಾಡಿತ್ತು. ರಾಜ್ಯದ 7 ಜಿಲ್ಲೆಗಳಲ್ಲಿನ 53,977.04 ಹೆಕ್ಟೇರ್‌ಗೂ ಹೆಚ್ಚಿನ ಅಡಿಕೆ ತೋಟಗಳು ಎಲೆಚುಕ್ಕಿ ರೋಗದಿಂದ ನಾಶವಾಗುವ ಹಂತ ತಲುಪಿವೆ. ಇದರ ನಿಯಂತ್ರಣಕ್ಕೆ ನಿರ್ದಿಷ್ಟವಾದ ಔಷಧ ಇಲ್ಲದಿರುವುದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಮಲೆನಾಡು ಜಿಲ್ಲೆಗಳಲ್ಲಿ ಈ ರೋಗದ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶೇ.74 ಅಡಿಕೆ ತೋಟ ನಾಶವಾಗಿದೆ. ಈ ರೋಗದ ನಿಯಂತ್ರಣಕ್ಕೆ ಔಷಧಿಯನ್ನು ಕಂಡು ಹಿಡಿಯಬೇಕೆಂಬ ಉದ್ದೇಶದಿಂದ ಶೃಂಗೇರಿ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ಕೇಂದ್ರಗಳನ್ನು ತೆರೆಯಲಾಗಿದೆ.

ಹಾಗೆಯೇ ಹಳದಿ ರೋಗ ಕೂಡ. ಆರಂಭದಲ್ಲಿ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಭಾಗದಲ್ಲಿ ಕಾಣಿಸಿಕೊಂಡ ಹಳದಿ ರೋಗ ಅಡಿಕೆ ತೋಟವನ್ನು ನಾಶ ಮಾಡಿ ಅಡಕೆ ಕೃಷಿಕರ ಬದುಕನ್ನು ಸಂಕಷ್ಟಕ್ಕೀಡು ಮಾಡಿತ್ತು. ನಂತರ ಇದು ದಕ್ಷಿಣ ಕನ್ನಡದಾದ್ಯಂತ ವ್ಯಾಪಿಸಿದೆ. ತುಂಬಾ ಕೃಷಿಕರು ಹಳದಿ ರೋಗ ಬಂದು ನಾಶವಾದ ತೋಟವನ್ನು ಕಡಿದುಹಾಕಿದ್ದಾರೆ. ಅಡಿಕೆ ದೀರ್ಘಾವಧಿ ಬೆಳೆಯಾದ್ದರಿಂದ ಅದನ್ನು ಕಡಿದುಹಾಕಿದರೆ ಮುಂದಿನ ಹಲವಾರು ವರ್ಷಗಳು ಯಾವ ಆದಾಯವೂ ಇರುವುದಿಲ್ಲ. ಕಾಸರಗೋಡಿನ ಸಿಪಿಸಿಆರ್‌ಐನಿಂದ 7 ಕೋಟಿ ವೆಚ್ಚದಲ್ಲಿ ಹಳದಿ ಎಲೆ ರೋಗದ ನಿಯಂತ್ರಣ ಅಧ್ಯಯನ ಆರಂಭಿಸಲಾಗಿತ್ತು. ಹಳದಿ ಎಲೆ ರೋಗ ನಿರೋಧಕ ತಳಿಯ ಅಭಿವೃದ್ಧಿಯ ಬಗ್ಗೆಯೂ ಸಂಶೋಧನೆ ಆರಂಭವಾಗಿತ್ತು. ಎಲೆಚುಕ್ಕಿ ಹಾಗೂ ಹಳದಿ ರೋಗಗಳ ಕಾಟದಿಂದ ರೋಗದಿಂದ ತೋಟ ನಾಶವಾಗಿದ್ದರಿಂದ ಮುಂದೇನು ಮಾಡಬೇಕೆಂದು ತೋಚದೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಶೃಂಗೇರಿ ತಾಲೂಕಿನಲ್ಲಿ ಸುಮಾರು 400ಕ್ಕೂ ಹೆಚ್ಚು ಕುಟುಂಬಗಳು ಊರು ತೊರೆದಿದ್ದವು.

ಸರ್ಕಾರ ತಾನು ನೀಡಿರುವ ಭರವಸೆಗಳನ್ನು ಈಡೇರಿಸುವ ಕೆಲಸ ಕೂಡಲೇ ಮಾಡಬೇಕು. ಎಲೆಚುಕ್ಕಿ ಹಾಗೂ ಹಳದಿ ರೋಗಗಳ ಮತ್ತದರ ಪರಿಹಾರದ ಕುರಿತ ಅಧ್ಯಯನ ಎಲ್ಲಿಗೆ ತಲುಪಿದೆ, ಅದರ ಮೇಲೆ ಸರ್ಕಾರದ ನೆಲೆಯಿಂದ ಯಾರಾದರೂ ನಿಗಾ ಇಟ್ಟಿದ್ದಾರೆಯೇ, ಎಂಬುದರ ಬಗ್ಗೆ ಮಾಹಿತಿಯಿಲ್ಲ. ಈ ರೋಗಗಳ ಕಂಟಕದ ನಡುವೆ ಅಕ್ರಮ ಅಡಿಕೆಯೂ ರಾಜ್ಯವನ್ನು ಪ್ರವೇಶಿಸಿದರೆ ನಮ್ಮ ಅಡಿಕೆ ಬೆಳೆಗಾರರ ಮರಣ ಶಾಸನ ಬರೆದಂತೆಯೇ. ರೋಗಗಳ ಬಗೆಗೆ ಹೇಗೋ ಹಾಗೇ ಅಕ್ರಮ ಅಡಿಕೆಯ ಆಗಮನವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅಡಿಕೆಯು ಕರಾವಳಿ ಹಾಗೂ ಮಲೆನಾಡಿನ ನಾಲ್ಕು ಜಿಲ್ಲೆಗಳ, ಆ ಮೂಲಕ ನಾಡಿನ ಶ್ರೀಮಂತಿಕೆಗೆ ಕಾರಣವಾಗಿದೆ. ಇಲ್ಲಿಂದ ರಫ್ತಾಗುವ ಅಡಿಕೆಗೆ ಉತ್ತಮ ಗುಣಮಟ್ಟ, ಒಳ್ಳೆಯ ಹೆಸರು ಇದೆ. ಅದನ್ನು ಉಳಿಸಿಕೊಳ್ಳಬೇಕು. ಅಗ್ಗದ ಅಡಿಕೆಗೆ ಹಾಗೂ ಮದ್ದಿಲ್ಲದ ರೋಗಗಳಿಗೆ ನಮ್ಮ ಅಡಿಕೆ ಬಲಿಯಾಗದಿರಲಿ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ದಸರಾ ಹೀರೊ ‘ಅರ್ಜುನ’ ದಾರುಣ ಸಾವು, ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ

Continue Reading

ಕರ್ನಾಟಕ

Elephant Arjuna: ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

Elephant Arjuna: ಅರ್ಜುನನ ಸೇವೆಯನ್ನು ನಾಡಿನ ಜನರು ಸದಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

VISTARANEWS.COM


on

Elephant Arjuna
Koo

ಬೆಳಗಾವಿ: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಸೀನಿಯರ್, ಬಲಭೀಮ ಎಂದೇ ಖ್ಯಾತವಾಗಿದ್ದ ಹಾಗೂ ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕವನ್ನು (Elephant Arjuna) ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರ್ಜುನನ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಸಚಿವರು, ನಾಡಿನ ಜನರ ಪ್ರೀತಿಗೆ ಪಾತ್ರವಾಗಿದ್ದ ಅರ್ಜನನ ಸಾವು ಅತ್ಯಂತ ದುಃಖದಾಯಕ. ಅರ್ಜನ ಮತ್ತು ನಾಡಿನ ಜನತೆಯ ನಡುವೆ ಭಾವನಾತ್ಮಕ ಸಂಬಂಧ ಇತ್ತು. ಈ ಆನೆ ಸಾವು ನಾಡಿನಾದ್ಯಂತ ಇರುವ ಪ್ರಾಣಿ ಪ್ರಿಯರಿಗೆ ಮತ್ತು ಸಾರ್ವಜನಿಕರಿಗೆ ನೋವು ತಂದಿದೆ.
ಹಲವು ಹುಲಿ, ಆನೆ ಕಾರ್ಯಾಚರಣೆಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡಿದ್ದ ಎಂದು ಸ್ಮರಿಸಿದ್ದಾರೆ.

ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಅರ್ಜುನ ಸೇವೆಯನ್ನು ನಾಡಿನ ಜನರು ಸದಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಆನೆ ಕಾರ್ಯಾಚರಣೆ ವಿಧಾನ ಮಾರ್ಪಾಡಿಗೆ ಸೂಚನೆ

ಆನೆ ಕಾರ್ಯಾಚರಣೆ ವೇಳೆ ಲೋಲಗಳು ಆಗುತ್ತಿರುವ ಹಿನ್ನೆಲೆಯಲ್ಲಿ ಆನೆ ಕಾರ್ಯಾಚರಣೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ.)ದಲ್ಲಿ ಏನಾದರೂ ತಿದ್ದುಪಡಿ ಅಥವಾ ಮಾರ್ಪಾಡು ಮಾಡಬೇಕಾಗಿದೆಯೇ ಎಂಬ ಬಗ್ಗೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು, ತಜ್ಞರೊಂದಿಗೆ ಸಮಾಲೋಚನೆ ನಡೆಸಿ 3 ದಿನಗಳ ಒಳಗಾಗಿ ಕಡತದಲ್ಲಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಸೂಚಿಸಿದ್ದಾರೆ.

ರಾಜ್ಯದ ಆನೆಗಳ ಸಂಖ್ಯೆಯಲ್ಲಿ ರಾಷ್ಟ್ರದಲ್ಲೇ ಮೊದಲ ಸ್ಥಾನದಲ್ಲಿರುವುದು ಸಂತೋಷದ ವಿಷಯವಾದರೂ, ಕೆಲವು ಪುಂಡಾನೆಗಳು ಪದೇ ಪದೇ ನಾಡಿಗೆ ಬರುತ್ತಿರುವುದು ಮತ್ತು ಜೀವಹಾನಿ, ಬೆಳೆ ಹಾನಿ ಆಗುತ್ತಿರುವುದಲ್ಲದೆ, ಆನೆ ಕಾರ್ಯಾಚರಣೆ ವೇಳೆ ಆನೆಗಳು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಸಾವಿಗೀಡಾಗುತ್ತಿರುವುದು ಅತ್ಯಂತ ಆತಂಕದ ಸಂಗತಿಯಾಗಿದೆ. ಹೀಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ.)ದಲ್ಲಿ ತಿದ್ದುಪಡಿ ಅಥವಾ ಮಾರ್ಪಾಡು ಮಾಡಬೇಕಾಗಿದೆಯೇ ಎಂಬ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ | Elephant Arjuna : ಅಧಿಕಾರಿಗಳ ಗುಂಡಿನಿಂದಲೇ ಅರ್ಜುನನ ಮರಣ?; ಇಲ್ಲಿದೆ ವಿಡಿಯೊ ಸಾಕ್ಷಿ

ಕಾಡಾನೆ ಸೆರೆ ಕಾರ್ಯಾಚರಣೆಗೆ 64 ವರ್ಷದ ಅರ್ಜುನನನ್ನು ಬಳಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅರ್ಜುನನಿಗೆ ವಯಸ್ಸಾದ ಕಾರಣಕ್ಕೆ ಅರ್ಜುನನಿಗೆ ಅಂಬಾರಿ ಹೋರುವುದನ್ನೇ ನಿಲ್ಲಿಸಲಾಗಿದೆ. ಆದರೂ 64 ವರ್ಷದ ಅರ್ಜುನನ್ನು ಕಾಡಿನ ಪುಂಡಾನೆ ಸೆರೆ ಕಾರ್ಯಾಚರಣೆಗೆ ಬಳಿಸರುವುದು ಕಾನೂನು ಬಾಹಿರ ಎಂದು ಅರಣ್ಯಾಧಿಕಾರಿಗಳ ವಿರುದ್ಧ ವನ್ಯಜೀವಿ ತಜ್ಞರು ಅಸಮಾಧಾನ ಹೊರಹಾಕಿದ್ದಾರೆ. ಹೀಗಾಗಿ ಕಾರ್ಯಾಚರಣೆ ವಿಧಾನದಲ್ಲಿ ಬದಲಾವಣೆ ಮಾಡಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
arun murderd
ಕ್ರೈಂ14 mins ago

Murder Case: ಮುಂದಿನ ತಿಂಗಳು ಮದುವೆಯಾಗಲಿ‌ದ್ದ ಆಟೋ ಚಾಲಕನ ಬರ್ಬರ ಹತ್ಯೆ

dry fruits
ಆರೋಗ್ಯ29 mins ago

Dry Fruits Benefits: ಒಣಹಣ್ಣುಗಳನ್ನೂ, ಬೀಜಗಳನ್ನೂ ತಿನ್ನಿ: ಕ್ಯಾನ್ಸರ್‌ ನಿರೋಧಕತೆ ಬೆಳೆಸಿಕೊಳ್ಳಿ!

Sachin Pilot movements monitored, phone tracked Say OSD for Ashok Gehlot
ದೇಶ41 mins ago

ಸಚಿನ್ ಪೈಲಟ್ ಮೇಲೆ ನಿಗಾ, ಫೋನ್ ಕದ್ದಾಲಿಕೆ! ಸಿಎಂ ವಿಶೇಷ ಅಧಿಕಾರಿ ಹೇಳಿಕೆ

Karnataka weather Forecast
ಕರ್ನಾಟಕ56 mins ago

karnataka Weather :‌ ಇಂದು-ನಾಳೆ ಭಾಗಶಃ ಮೋಡ ಕವಿದ ವಾತಾವರಣ; ಇಲ್ಲೆಲ್ಲ ಮಳೆ ಸೂಚನೆ

Vistara Editorial, Leaf spot disease for areca nut
ಕರ್ನಾಟಕ2 hours ago

ವಿಸ್ತಾರ ಸಂಪಾದಕೀಯ: ಅಡಿಕೆ ಬೆಳೆಯ ಸಂಕಷ್ಟಗಳನ್ನು ನಿವಾರಿಸಿ

read your daily horoscope predictions for december 6 2023
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Elephant Arjuna
ಕರ್ನಾಟಕ8 hours ago

Elephant Arjuna: ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

Kabaddi news
ಕ್ರೀಡೆ8 hours ago

Pro Kabaddi : ಮುಂಬಾ ವಿರುದ್ಧ ಜಯಂಟ್ಸ್​​ಗೆ 39-37 ಅಂಕಗಳ ಜಯ

Belagavi Winter Session
ಕರ್ನಾಟಕ9 hours ago

Belagavi Winter Session: ವೇತನ ಆಯೋಗದ ವರದಿ ಬಗ್ಗೆ ಅತೃಪ್ತಿ; ಸಭಾತ್ಯಾಗ ಮಾಡಿದ ಕಮಲ, ದಳ ಸದಸ್ಯರು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

read your daily horoscope predictions for december 6 2023
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ11 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ11 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ11 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ4 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

ಟ್ರೆಂಡಿಂಗ್‌