Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ - Vistara News

ಬೆಂಗಳೂರು

Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

Fortis Hospital: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Fortis Hospital
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ನರ ಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ., 19 ವರ್ಷದ ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್‌ಪಾತ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಇವರ ತಲೆ, ಕೈಗೆ ತೀವ್ರವಾಗಿ ಪೆಟ್ಟಾಗಿತ್ತು. ಅಪಘಾತದ ತೀವ್ರತೆಯಿಂದಾಗಿ ಇವರ ಬಲಗೈ ಮೂಳೆ ಮುರಿದು, ತಲೆಗೆ ತೀವ್ರವಾಗಿ ಗಾಯವಾಗಿ ಕಿವಿಯಿಂದ ರಕ್ತಸ್ತ್ರಾವವಾಗಿತ್ತು. ಇದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು. ಕೂಡಲೇ ಅವರನ್ನು ಫೋರ್ಟಿಸ್‌ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಕರೆತರಲಾಯಿತು.

ಕೂಡಲೇ ನಮ್ಮ ವೈದ್ಯರ ತಂಡ ಅವರನ್ನು ಎಂಆರ್‌ಐಗೆ ಒಳಪಡಿಸಲಾಯಿತು. ಅವರಿಗೆ ಮೆದುಳಿನ ಕೋಶಗಳ ನಡುವೆ ಸಂಪರ್ಕ ಕಲ್ಪಿಸುವ ನರಗಳಲ್ಲಿ ರಕ್ತಸ್ರಾವ ಆಗಿರುವುದು ಕಂಡು ಬಂತು. ಇದನ್ನು ಆಕ್ಸಾನಲ್‌ ಗಾಯ ಎನ್ನಲಾಗುತ್ತದೆ. ಈ ಗಾಯದಿಂದ ಅವರು ಮಾತನಾಡುವ ಹಾಗೂ ಚಲಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುವ ಸಂಭವವಿರುತ್ತದೆ. ಹೀಗಾಗಿ ಅವರಿಗೆ ಕೂಡಲೇ ತುರ್ತು ಚಿಕಿತ್ಸೆಯನ್ನು ನೀಡಲಾಯಿತು. ನ್ಯೂರೋ ತಂಡವು ಅವರ ಮಾತಿನ ತೊಂದರೆ, ಮೆಮೊರಿ ಸಮಸ್ಯೆಯನ್ನು ಪರಿಸರಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಿದರು. ಆರಂಭಿಕ ಚಿಕಿತ್ಸೆಯ ನಂತರ, ಫಿಸಿಯೋಥೆರಪಿ ಮತ್ತು ಸ್ಪೀಚ್ ಥೆರಪಿ ನೀಡಲಾಗುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: Janopakari Doddanna Shetty: ಗಾಣಿಗ ಸಮುದಾಯ ಶ್ರಮದಿಂದ ಬದುಕು ಕಟ್ಟಿಕೊಂಡಿದೆ; ಡಿ.ಕೆ. ಶಿವಕುಮಾರ್ ಶ್ಲಾಘನೆ

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ನಾರಾಯಣ್ ಹುಲ್ಸೆ ಮಾತನಾಡಿ, ಅಪಘಾತದಿಂದ ರಾಜ್‌ ಅವರ ಬಲಗೈ ಮೇಲ್ಭಾಗದ ಮೂಳೆ ಮುರಿದ ಕಾರಣ ಅವರಿಗೆ ತೆಳವಾದ ತಂತಿಯನ್ನು ಬಳಸಿಕೊಂಡು, ಪ್ಲೇಟ್‌ ಹಾಗೂ ಸ್ಕ್ರೂಗಳನ್ನು ಬಲಗೊಳಿಸಲಾಗಿದೆ. ಜತೆಗೆ ಮೊಣಕೈ ಕೀಲಿನ ಒಂದು ಭಾಗವನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Bangalore Hotels: ಹೋಟೆಲ್‌, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ-ವಹಿವಾಟು ಅವಧಿ ವಿಸ್ತರಿಸಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ.

VISTARANEWS.COM


on

Bangalore Hotels
Koo

ಬೆಂಗಳೂರು: ರಾಜಧಾನಿಯಲ್ಲಿ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ (Bangalore Hotels) ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ.

ಈ ಬಗ್ಗೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಸಿಎಲ್‌ 4, ಸಿಎಲ್‌ 6, ಸಿಎಲ್‌ 7, ಸಿಎಲ್‌ 7D ಲೈಸೆನ್ಸ್ ಪಡೆದ ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌ಗೆ ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ಹಾಗೂ ಸಿಎಲ್‌ 9 ಲೈಸೆನ್ಸ್ ಪಡೆದ ಬಾರ್‌ಗಳಿಗೆ ಬೆಳಗ್ಗೆ 10ರಿಂದ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿನ ಸಮಯ ನಿಗದಿಪಡಿಸಲಾಗಿದೆ.

2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 269 ರಲ್ಲಿ ಘೋಷಿಸಲಾದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯಾರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜುಲೈ 06 ರಂದು ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಸಹಮತಿ ನೀಡಿದ ಹಿನ್ನೆಲೆ ವ್ಯಾಪಾರ-ವಹಿವಾಟು ವಿಸ್ತರಣೆಗೆ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

Lalbagh Flower Show: ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

Lalbagh Flower Show
Lalbagh Flower Show

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಆ.8ರಿಂದ 19ವರೆಗೆ 216ನೇ ಫಲಪುಷ್ಪ ಪ್ರದರ್ಶನ (Lalbagh Flower Show) ನಡೆಯಲಿದೆ. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr BR Ambedkar) ಅವರ ಜೀವನಗಾಥೆಯ ಥೀಮ್‌ ನೋಡುಗರನ್ನು ರಂಜಿಸಲಿದ್ದು, ಆಗಸ್ಟ್ 8 ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಫ್ಲವರ್‌ ಶೋಗೆ ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಾಮಲಾ ಇಕ್ಬಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಆಗಸ್ಟ್ 8 ರಿಂದ 19ವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅಂಬೇಡ್ಕರ್ ಅವರ ಜೀವನ ಆಧಾರಿತ ಪುಷ್ಪ ಪ್ರದರ್ಶನ ಇರಲಿದ್ದು, ಆಗಸ್ಟ್ 8ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ಇನ್ನು ಮುಖ್ಯ ಅತಿಥಿಯಾಗಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಅವರು ಬರಲಿದ್ದಾರೆ ಎಂದ ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾತನಾಡಿ, ಈ ಬಾರಿ ಲಾಲ್‌ಬಾಗ್‌ ಪರಿಸರದಲ್ಲಿ ಭೀಮ ಸಂದೇಶ ಅನಾವರಣವಾಗಲಿದೆ. 12 ದಿನಗಳ ಕಾಲ 6 ಆಂಬ್ಯುಲೆನ್ಸ್ ಸೇರಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಡೆಂಗ್ಯೂ ಆತಂಕ ಇರುವುದರಿಂದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಆಗಿತ್ತು, ಈ ಬಾರಿ ಅಂತಹ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಪ್ರವೇಶ ಶುಲ್ಕ ಎಷ್ಟು?

168 ವಿವಿಧ ಪ್ರಭೇದದ ಸಸ್ಯಗಳನ್ನು ನಾವೇ ಬೆಳೆದಿದ್ದೇವೆ. ದ್ವಿ ಚಕ್ರ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ, ಸಂಚಾರ ದಟ್ಟಣೆ ಕಡಿಮೆ ಮಾಡಲು ಜನರು ಆದಷ್ಟು ಮೆಟ್ರೋ ಬಳಸಬೇಕು. ಆನ್‌ಲೈನ್‌ ಟಿಕೆಟ್ ಕೂಡ ಲಭ್ಯವಿರುತ್ತದೆ. ಪ್ರವೇಶ ಶುಲ್ಕ ಮಕ್ಕಳಿಗೆ 30 ರೂ., ಸಾಮಾನ್ಯರಿಗೆ 100 ರೂ. ಇರಲಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು.

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

ಕಳೆದ ಬಾರಿ 60-70 ಲಕ್ಷ ಲಾಭ ಆಗಿದೆ.. ಈ ಬಾರಿ ಕೂಡ ಸಾಕಷ್ಟು ಆದಾಯ ಬರುವ ನಿರೀಕ್ಷೆ ಇದೆ. ವಾಕಿಂಗ್ ಬರುವವರು ಕೂಡ ಟಿಕೆಟ್ ತೆಗೆದುಕೊಂಡು ಬರಬೇಕು. ಪಾರ್ಕ್‌ನಲ್ಲಿ ಜೇನು ಹುಳುಗಳು ಇಲ್ಲ, ಎರಡು ವರ್ಷಗಳ ಹಿಂದೆ ಇತ್ತು, ಈಗ ಇಲ್ಲ. ಬಹುತೇಕ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

Continue Reading

ಕರ್ನಾಟಕ

Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

Muda Scam: ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಟಿ.ಜೆ. ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆ ಹಾಗೂ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದಾರೆ.

VISTARANEWS.COM


on

MUDA scam
Koo

ಬೆಂಗಳೂರು: ಮುಡಾ ಹಗರಣ (Muda Scam) ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಟಿ. ಜೆ. ಅಬ್ರಹಾಂ ಅವರು ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ಸಿಎಂ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆಗಳನ್ನು ನೀಡಿದ್ದಾರೆ.

ರಾಜಭವನಕ್ಕೆ ಬರುವಂತೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಸೂಚಿಸಿದ ಹಿನ್ನೆಲೆಯಲ್ಲಿ ಅಬ್ರಹಾಂ ಭೇಟಿಯಾಗಿದ್ದರು. ಮುಡಾ ಹಗರಣ ಕುರಿತು ಮತ್ತಷ್ಟು ದಾಖಲೆಗಳನ್ನು ರಾಜ್ಯಪಾಲರು ಕೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ರಾಜ್ಯಪಾಲರು ಅನುಮತಿ ಕೊಡುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ.

ಆರೋಪದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದ ಟಿ.ಜೆ. ಅಬ್ರಹಾಂ

ರಾಜ್ಯಪಾಲರ ಭೇಟಿ ಬಳಿಕ ಟಿ.ಜೆ. ಅಬ್ರಹಾಂ ಮಾತನಾಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನನ್ನ ಬೇಡಿಕೆ ಏನಿತ್ತೋ ಅದರ ಮೇರೆಗೆ ಸರ್ಕಾರಕ್ಕೆ ರಾಜ್ಯಪಾಲರು ಶೋಕಾಸ್ ನೊಟೀಸ್ ಕೊಟ್ಟಿದ್ದರು. ಆದರೆ ಸಚಿವ ಸಂಪುಟ ಸಿಎಂ ತಪ್ಪಿಲ್ಲ, ರಾಜ್ಯಪಾಲರು ನೋಟಿಸ್ ಕೊಟ್ಟಿರೋದೇ ತಪ್ಪು ಅಂತ ನಿರ್ಣಯ ಮಾಡಿದೆ. ಅಬ್ರಹಾಂ ಸರಿಯಿಲ್ಲ ಅಂತಲೂ ಸರ್ಕಾರ ಆಪಾದನೆ ಮಾಡಿದೆ. ಹೀಗಾಗಿ ಪ್ರಕರಣದ ಬಗ್ಗೆ ರಾಜ್ಯಪಾಲರಿಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಸರ್ಕಾರ ನನ್ನ ಮೇಲೆ ಮಾಡಿರುವ ಆರೋಪ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ನನಗೆ ತಿಳಿದ ಮಟ್ಟಿಗೆ ರಾಜ್ಯಪಾಲರು ಸಿಎಂಗೆ ಎರಡನೇ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ ಎಂದರೆ ಅವರಿಗೆ ಪ್ರಕರಣವನ್ನು ಮುಂದುವರಿಸಲು ಆಸಕ್ತಿ ಇದೆ ಎಂದರ್ಥ. ಕಳೆದ ಗುರುವಾರ ರಾಜ್ಯಪಾಲರ ಸಮಯ ಕೇಳಿದ್ದೆ, ಇವತ್ತು ಬರಲು ಹೇಳಿದ್ದರು, ಬಂದು ಸ್ಪಷ್ಟೀಕರಣ ಕೊಟ್ಟಿದ್ದೇನೆ ಎಂದರು.

ನನ್ನ ವಿರುದ್ಧ ಯಾವ ದೂರೂ ಇಲ್ಲ. ಸರ್ಕಾರಕ್ಕೆ ನಾನು ನೇರ ಸವಾಲ್ ಹಾಕುತ್ತೇನೆ. ನನ್ನ ವಿರುದ್ಧ ಕೇಸ್ ಹುಡುಕಿ, ಹುಡುಕಲು ಆಗದಿದ್ದರೆ ಹೇಗೆ ಹುಡುಕಬೇಕು ಅಂತ ನನ್ನ ಕೇಳಿ ಎಂದು ಕಿಡಿಕಾರಿದ್ದಾರೆ.

ಏನಿದು ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿಟ್ಟಿದೆ. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ​

ಸಿಎಂಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಾರಾ? ಅಥವಾ ನೋಟಿಸ್ ವಾಪಸ್ ಪಡೆಯುತ್ತಾರಾ ಎಂಬುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ | L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

ಸಿಎಂಗೆ ಪ್ರಾಸಿಕ್ಯೂಷನ್‌ ಭಯ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

Continue Reading

ಕರ್ನಾಟಕ

Janopakari Doddanna Shetty: ಗಾಣಿಗ ಸಮುದಾಯ ಶ್ರಮದಿಂದ ಬದುಕು ಕಟ್ಟಿಕೊಂಡಿದೆ; ಡಿ.ಕೆ. ಶಿವಕುಮಾರ್ ಶ್ಲಾಘನೆ

Janopakari Doddanna Shetty: ಜನೋಪಕಾರಿ ದೊಡ್ಡಣ್ಣ ಶೆಟ್ಟರು ಬ್ರಿಟಿಷರ ಆಡಳಿತ ಅವಧಿಯಲ್ಲಿಯೇ ಬೆಂಗಳೂರು ಹೃದಯ ಭಾಗದಲ್ಲಿ ಧರ್ಮಾತ್ಮ ಸಂಸ್ಥೆ ಕಟ್ಟಿ ಸಮಾಜದ ಎಲ್ಲಾ ಸಮುದಾಯಗಳ ನೆರವಿಗೆ ನಿಂತ ಮಹಾನುಭಾವ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಖಚಿತ. ಇದರ ನಡುವೆ ಏನನ್ನು ಗಳಿಸುತ್ತೇವೆ, ಸಾಧಿಸುತ್ತೇವೆ ಎನ್ನುವುದು ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

VISTARANEWS.COM


on

Janopakari Doddanna Shetty
Koo

ಬೆಂಗಳೂರು: ದೀಪ ಉರಿಯುವಾಗ (Janopakari Doddanna Shetty) ಎಣ್ಣೆ, ಬತ್ತಿ ಏನೂ ಕಾಣುವುದಿಲ್ಲ. ಕಾಣುವುದು ಬೆಳಕು ಮಾತ್ರ. ಗಾಣಿಗ ಸಮುದಾಯ ತಯಾರಿಸುವ ಎಣ್ಣೆಯು ದೀಪ ಹಾಗೂ ಮನುಷ್ಯನನ್ನು ತಂಪಾಗಿಸಲು ತಲೆಗೂ ಬೇಕು. ಗಾಣಿಗ ಸಮುದಾಯ ಶ್ರಮದ ಮೂಲಕ ಬದುಕು ಕಟ್ಟಿಕೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (Bengaluru News) ಅಭಿಪ್ರಾಯಪಟ್ಟರು.

ಯಜಮಾನ್ ಜನೋಪಕಾರಿ ದೊಡ್ಡಣ್ಣ ಶೆಟ್ಟಿ ಅವರ 103ನೇ ವಾರ್ಷಿಕ ಆರಾಧನಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಮನುಷ್ಯ ಇದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಹರಕೆ ಹೊತ್ತಿರುವುದಿಲ್ಲ. ಹುಟ್ಟಿದ ನಂತರ ಜಾತ್ಯತೀತವಾಗಿ ಬದುಕಬೇಕು. ದೊಡ್ಡಣ್ಣ ಶೆಟ್ಟರು ಭೇದ ಭಾವ ಮಾಡದೆ ಬದುಕಿದ ಕಾರಣಕ್ಕೆ ಅವರನ್ನು ನೆನಪಿಸುತ್ತಿದ್ದೇವೆ. ನಿಮ್ಮ ವೃತ್ತಿ, ಸಮುದಾಯವನ್ನು ಉಳಿಸಿಕೊಳ್ಳಲು ಸಂಘಟಿತರಾಗಿ ಎಂದು ತಿಳಿಸಿದರು.

ದೊಡ್ಡಣ್ಣ ಶೆಟ್ಟರು ಬ್ರಿಟಿಷರ ಆಡಳಿತ ಅವಧಿಯಲ್ಲಿಯೇ ಬೆಂಗಳೂರು ಹೃದಯ ಭಾಗದಲ್ಲಿ ಧರ್ಮಾತ್ಮ ಸಂಸ್ಥೆ ಕಟ್ಟಿ ಸಮಾಜದ ಎಲ್ಲಾ ಸಮುದಾಯಗಳ ನೆರವಿಗೆ ನಿಂತ ಮಹಾನುಭಾವ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಖಚಿತ ಇದರ ನಡುವೆ ಏನನ್ನು ಗಳಿಸುತ್ತೇವೆ, ಸಾಧಿಸುತ್ತೇವೆ ಎನ್ನುವುದು ಮುಖ್ಯ. ದೊಡ್ಡಣ್ಣ ಶೆಟ್ಟರು ಗತಿಸಿಹೋಗಿ ನೂರು ವರ್ಷಗಳಾದರೂ ಅವರ ನೆನಪು ನಮ್ಮ ನಡುವೆಯಿದೆ ಎಂದರು.

ಇದನ್ನೂ ಓದಿ: Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

ದೇವರು ಯಾರಿಗೆ ವರ, ಶಾಪ ಏನನ್ನೂ ಕೊಡುವುದಿಲ್ಲ. ಸಿಗುವ ಅವಕಾಶದಲ್ಲಿ ಉಪಕಾರ ಮಾಡಿ. ಅನ್ಯ ಕಾರ್ಯಗಳು ಇರುವ ಕಾರಣ ನಿಮಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ತುಳಿತಕ್ಕೆ ಒಳಗಾಗಿರುವ ಸಮಾಜವು ಹಿಂದುಳಿದಿದ್ದೇವೆ ಎನ್ನುವ ಚಿಂತೆ ಮಾಡಬಾರದು. ನಿಮ್ಮ ಸಮಸ್ಯೆಗಳನ್ನು ನಮಗೆ ತಿಳಿಸಿ ನಾವು ಬಗೆಹರಿಸುತ್ತೇವೆ ಎಂದು ತಿಳಿಸಿದರು.

Continue Reading

ಮಳೆ

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

Karnataka Weather Forecast : ಸುಳಿಗಾಳಿ ಎಫೆಕ್ಟ್‌ನಿಂದಾಗಿ ರಭಸವಾಗಿ ಬೀಸುವ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಮತ್ತೆ ಮಳೆ ಅವಾಂತರಗಳು ಮುಂದುವರಿದಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಬೆಳಗಾವಿ: ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಾದ ಹಿನ್ನೆಲೆಯಲ್ಲಿ ಆಗಸ್ಟ್ 9 ರವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗುವ (Karnataka Weather Forecast) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ (Heavy Rain) ಹಲವೆಡೆ ಅಸ್ತವ್ಯಸ್ತವಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಕಿತ್ತೂರು ತಾಲೂಕಿನ ನಿಂಗಾಪುರ ಗ್ರಾಮಕ್ಕೆ ಹೊಂದಿಕೊಂಡಿರೋ ಹುಲಿಕೆರೆ ಹಿನ್ನೀರಿನಲ್ಲಿ ವಿದ್ಯಾರ್ಥಿಗಳು ಪರದಾಟ ಅನುಭವಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಮಕ್ಕಳು ಕೆರೆಯ ಪಾಲಾಗುವ ಭೀತಿ ಇದೆ.

ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಕೆರೆ, ಹಳ್ಳ-ಕೊಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ಮಕ್ಕಳು ಕಲಿಕೆಗಾಗಿ ಜೀವ ಪಣಕ್ಕಿಟ್ಟು ಕೆರೆ ದಾಟುವಂತಾಗಿದೆ. ಕೆರೆ ಹಿನ್ನೀರು ದಾಟಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಗಾಳಿ ತುಂಬಿದ ಟ್ಯೂಬೆಗಳೇ ಗತಿಯಾಗಿದೆ. ಪೋಷಕರು ಗಾಳಿ ತುಂಬಿದ ಟ್ಯೂಬ್‌ಗೆ ಹಗ್ಗ ಕಟ್ಟಿ ಎಳೆದು ಮಕ್ಕಳ ದಾಟಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಮಕ್ಕಳು ಕೆರೆಯ ಪಾಲಾಗುವ ಭೀತಿ ಇದೆ. ಸೇತುವೆ ನಿರ್ಮಾಣ ಮಾಡಿ ಕೊಡಿ ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಹೋಟೆಲ್‌ ನುಗ್ಗಿದ ನೀರು

ಮಳೆಯ ಅಬ್ಬರಕ್ಕೆ ಹೋಟೆಲ್ ಅಂಗಡಿಗಳಿಗೆ ನೀರು ನುಗ್ಗಿದೆ. ರಾತ್ರಿ ಮಳೆ ನೀರು ನುಗ್ಗಿದ್ದರಿಂದ ಹೋಟೆಲ್ ಮಾಲೀಕರು ಪರದಾಡಬೇಕಾಯಿತು. ದೊಡ್ಡಬಳ್ಳಾಪುರದ ರೈಲ್ವೆ ಸ್ಟೇಷನ್ ಬಳಿ ಇರುವ ಅಂಗಡಿಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ಚರಂಡಿಗಳು ಬಂದ್ ಮಾಡಿರುವ ಕಾರಣ ಈ ರೀತಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮುಚ್ಚಿರುವ ಚರಂಡಿಗಳನ್ನು ತೆರವುಗೊಳಿಸುವಂತೆ ನಗರ ಸಭೆ ಅಧಿಕಾರಿಗಳಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಳೆ ತಗ್ಗಿದ್ದರೂ ಮುಂದುವರಿದ ಪ್ರವಾಹ ಸ್ಥಿತಿ

ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾದರೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಮಳೆ ಪ್ರಮಾಣ ಕಡಿಮೆಯಾದರೂ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿದು ಬರುತ್ತಿದೆ. ಪರಿಣಾಮ ಕೃಷ್ಣಾ ನದಿ ತೀರದ ಜಮೀನುಗಳು ಸ‌ಂಪೂರ್ಣ ಜಲಾವೃತಗೊಂಡಿದೆ. ಕಾಗವಾಡ ತಾಲೂಕಿನ ಜುಗೂಳ ಹಾಗೂ ಮಹಾರಾಷ್ಟ್ರದ ಖಿದ್ರಾಪೂರ ಗ್ರಾಮದ ಕೆಲ ಪ್ರದೇಶಗಳ ಜಲಾವೃತ ಯಥಾಸ್ಥಿತಿ ಇದೆ. ಚಿಕ್ಕೋಡಿ ಉಪ ವಿಭಾಗದ 22 ಗ್ರಾಮಗಳ ನದಿ ತೀರದಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಮಳೆ ಪ್ರಮಾಣ ಹೆಚ್ಚಾದರೇ ನದಿ ತೀರ ಬಿಟ್ಟು ಗ್ರಾಮಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ.

ವಿಜಯಪುರದಲ್ಲಿ ಉಮರಾಣಿ- ಲವಗಿ ಹಳೆಯ ಬ್ಯಾರೇಜ್ ಮುಳುಗಡೆ

ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ಭೀಮಾನದಿ ತುಂಬಿ ಹರಿಯುತ್ತಿದೆ. ಪರಿಣಾಮ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ನದಿಗೆ ಅಡ್ಡಲಾಗಿರುವ ಉಮರಾಣಿ- ಲವಗಿ ಹಳೆಯ ಬ್ಯಾರೇಜ್ ಮುಳುಗಡೆಯಾಗಿದೆ. ಚಡಚಣ, ಇಂಡಿ, ಆಲಮೇಲ ಸಿಂದಗಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ಇದೆ.

ಧಾರಾಕಾರ ಮಳೆಗೆ ಆಸ್ಪತ್ರೆಗೆ ನುಗ್ಗಿದ ನೀರು

ತುಮಕೂರಿನ ಗುಬ್ಬಿ ಪಟ್ಟಣದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದೆ. ರೋಗಿಗಳಿದ್ದ ಕೊಠಡಿ ಸಂಪೂರ್ಣ ಜಲಾವೃತಗೊಂಡಿತ್ತು. ನೀರು ನುಗ್ಗಿದ ಪರಿಣಾಮ ರೋಗಿಗಳು ಪರದಾಡಬೇಕಾಯಿತು. ಕೆಳಗೆ ನೀರು ಮಯವಾದ ಕಾರಣಕ್ಕೆ ಮಧ್ಯರಾತ್ರಿಯೇ ರೋಗಿಗಳನ್ನು ಮೊದಲ ಹಾಗೂ ಎರಡನೇ ಮಹಡಿಯಲ್ಲಿರುವ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ.

ತುಮಕೂರಿನಲ್ಲಿ ಧರೆಗುರುಳಿದ ಮರ

ತುಮಕೂರು ಜಿಲ್ಲೆಯಲ್ಲಿ ರಭಸವಾಗಿ ಸುರಿದ ಮಳೆಗೆ ವಿವಿಧೆಡೆ ಅವಾಂತರವೇ ಸೃಷ್ಟಿಯಾಗಿತ್ತು. ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಇತ್ತ ಬೈಕ್‌ ಸವಾರ ಕೂದಲೆಳೆ ಅಂತರದಿಂದ ಪಾರಾಗಿದ್ದರು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಬಳಿ ಘಟನೆ ನಡೆದಿದೆ. ಮರ ಬಿದ್ದ ಕಾರಣ ಬೈಕ್‌ನ ಹೆಡ್‌ಲೈಟ್ ಪುಡಿ ಪುಡಿಯಾಗಿತ್ತು.

ನದಿ ನೀರು ಇಳಿಕೆ ಆಯಿತು; ಮೊಸಳೆಗಳ ಕಾಟ ಶುರುವಾಯಿತು

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುಣ್ಣರಗಿ ಗ್ರಾಮದಲ್ಲಿ ವೇದಗಂಗಾ ನದಿ‌ ನೀರಲ್ಲಿ ಇಳಿಕೆ ಆಗುತ್ತಿದ್ದಂತೆ ಮೊಸಳೆಗಳ ಕಾಟ ಹೆಚ್ಚಾಗುತ್ತಿದೆ. ನಾಲ್ಕೈದು ಮೊಸಳೆಗಳು ಗ್ರಾಮದ ಹೊರ ವಲಯದಲ್ಲಿ ಪತ್ತೆಯಾಗಿವೆ. ಮೊಸಳೆ ಮರಿಗಳು ಗ್ರಾಮಕ್ಕೆ ನುಗ್ಗಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Handwork Saree Blouse
ಫ್ಯಾಷನ್14 mins ago

Handwork Saree Blouse: ಫೆಸ್ಟಿವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಹ್ಯಾಂಡ್‌ ವರ್ಕ್‌ ಡಿಸೈನರ್‌ ಬ್ಲೌಸ್‌!

Bangladesh Unrest
ದೇಶ27 mins ago

Bangladesh Unrest: ಬಾಂಗ್ಲಾದಲ್ಲಿ 19,000 ಭಾರತೀಯರು ಸಿಲುಕಿದ್ದಾರೆ; ಸಚಿವ ಜೈ ಶಂಕರ್‌

Bangalore Hotels
ಕರ್ನಾಟಕ38 mins ago

Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Rohit Sharma
ಕ್ರೀಡೆ38 mins ago

Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

Almonds
ಆರೋಗ್ಯ1 hour ago

Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

Devara Part 1
ಸಿನಿಮಾ1 hour ago

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

Bangladesh Unrest
ವಿದೇಶ1 hour ago

Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

National Handloom Day
ಫ್ಯಾಷನ್1 hour ago

National Handloom Day: ಮಾಡರ್ನ್‌ ಯುವತಿಯರ ಮನವನ್ನೂ ಗೆಲ್ಲುತ್ತಿರುವ ಹ್ಯಾಂಡ್‌ ಲೂಮ್‌ ಸೀರೆ

Mangalore Homestay case
ಕರ್ನಾಟಕ1 hour ago

Mangalore Homestay case: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ ಎಲ್ಲಾ 40 ಆರೋಪಿಗಳು ಖುಲಾಸೆ

shravan foods
ಆರೋಗ್ಯ2 hours ago

Shravan Recipes: ಶ್ರಾವಣ ಮಾಸದಲ್ಲಿ ಸಾಬುದಾನದ ಈ 5 ಖಾದ್ಯಗಳನ್ನು ಮಾಡಿ ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌