Fire accident : ಬೆಂಗಳೂರಿನ ಮಾಗಡಿ ರಸ್ತೆಯ ವೈನ್‌ಶಾಪ್‌ನಲ್ಲಿ ಬೆಂಕಿ ಅವಘಡ - Vistara News

ಕ್ರೈಂ

Fire accident : ಬೆಂಗಳೂರಿನ ಮಾಗಡಿ ರಸ್ತೆಯ ವೈನ್‌ಶಾಪ್‌ನಲ್ಲಿ ಬೆಂಕಿ ಅವಘಡ

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವೈನ್‌ ಶಾಪ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಶಾರ್ಟ್‌ ಸರ್ಕ್ಯೂಟ್‌ ಇದಕ್ಕೆ ಕಾರಣ ಇರಬಹುದು (Fire accident) ಎಂದು ಭಾವಿಸಲಾಗಿದೆ.

VISTARANEWS.COM


on

fire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಮಾಗಡಿ ರಸ್ತೆ, ಕೊಟ್ಟಿಗೆಪಾಳ್ಯ ರಸ್ತೆಗೆ ಹೊಂದಿಕೊಂಡಂತೆ ಇರುವ ವೈನ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು , ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎನ್ನಲಾಗಿದೆ. ಅಲ್ಕೋಹಾಲ್ ಇದ್ದ ಕಾರಣ ಬೆಂಕಿ ಬಿರುಸಾಗಿ ಹತ್ತಿಕೊಂಡಿದ್ದು ತಕ್ಷಣ ಸ್ಥಳೀಯರು (Fire accident) ಅಗ್ನಿಶಾಮಕ ದಳಕ್ಕೆ ವಿಷಯ ಮುಟ್ಟಿಸಿದರು.

ಚಂದು ವೈನ್ಸ್‌ನಲ್ಲಿ ಈ ಘಟನೆ ಸಂಭವಿಸಿದ್ದು ಚಂದ್ರಶೇಖರ್ ಎಂಬುವವರಿಗೆ ಸೇರಿದೆ. ವೈನ್ ಶಾಪ್ ಗೆ ಒತ್ತಿಕೊಂಡಂತೆ ಇದ್ದ ಕಟ್ಟಡಕ್ಕೆ ಬೆಂಕಿ ತಗುಲುವ ಸಾಧ್ಯತೆ ಹಿನ್ನಲೆ ತಕ್ಷಣ ಆಗಮಿಸಿದ ಅಗ್ನಿಶಾಮಕ ಸಿಬ್ಬಂಧಿಗಳು ಸತತ ಒಂದು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ.

ಸುಮಾರು ಒಂದೂ ಮೂವತ್ತರ ಸಂಧರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಈ ಅಗ್ನಿ ಅವಘಡದ ಬಗ್ಗೆ ದೂರು ಪಡೆದು ಪೊಲೀಸರು ತನಿಖೆ ನಡೆಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Physical Abuse : ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳವನ್ನು ವೀಡಿಯೊ ಬಹಿರಂಗಪಡಿಸಿದೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

VISTARANEWS.COM


on

Physical Abuse
Koo

ರಾಂಚಿ: ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ಸ್ಪೇನ್​ನಿಂದ ಬಂದಿದ್ದ ಪ್ರವಾಸಿ ಮಹಿಳೆಯೊಬ್ಬಳ ಮೇಲೆ ಏಳು ಜನರು ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ ಭಯಾನಕ ಘಟನೆ ನಡೆದಿದೆ. ಈ ಘಟನೆ ಮಾರ್ಚ್​ನಲ್ಲಿ ನಡೆದಿದೆ. ಮಹಿಳೆ ಹಾಗೂ ಆಕೆಯ ಪತಿ ಆಘಾತಕಾರಿ ಘಟನೆಗ ಮತ್ತು ನಂತರದ ವಿವರಗಳನ್ನು ದಾಖಲಿಸುವ ವೀಡಿಯೊವೊಂದನ್ನು ತಮ್ಮ ದೇಶಕ್ಕೆ ಮರಳಿದ ಬಳಿಕ ಬಿಡುಗಡೆ ಮಾಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ವಿವರ ನೀಡಿದ್ದು, ಭಾರತದಲ್ಲಿ ಆಗಿರುವ ಕಹಿಘಟನೆಯನ್ನು ವಿವರಿಸಿದ್ದಾರೆ.

ವಿಡಿಯೊದ ಆರಂಭದಲ್ಲಿ ದಂಪತಿ “ಈ ಸುದೀರ್ಘ ಅಧ್ಯಾಯದ ನಂತರ ನಾವು ಈ ಅಹಿತಕರ ಹಂತವನ್ನು ದಾಟಿದ್ದೇವೆ. ಮತ್ತೆ ನಮ್ಮ ಪ್ರವಾಸ ಆರಂಭಿಸುತ್ತೇವೆ. ಆದರೆ ನಮಗಿದು ಮರುಹುಟ್ಟು. ನಾವು ಇದುವರೆಗೆ ಪಡೆದ ಈ ವಿರಾಮಕ್ಕೆ ಕಾರಣವಿದೆ ಎಂದು ಹೇಳಿ ಭಾರತದಲ್ಲಿ ಆದ ಘಟನೆಗಳನ್ನು ವಿವರಿಸಿದ್ದಾರೆ. ಅಲ್ಲದೆ, ಇಂದಿನಿಂದ ನಾವು ವಾರಕ್ಕೊಮ್ಮೆ ನಮ್ಮ ವೀಡಿಯೊಗಳನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅವರಿಬ್ಬರೂ ಯೂಟ್ಯೂಬರ್​ಗಳಾಗಿದ್ದು ಬೈಕ್​ ಮೂಲಕ ಹಲವು ದೇಶಗಳನ್ನು ಸುತ್ತುತ್ತಿರುತ್ತಾರೆ.

ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳದಲ್ಲಿದ್ದ ವೇಳೆ ಚಿತ್ರೀಕರಿಸಿದ ವೀಡಿಯೊ ಬಹಿರಂಗಪಡಿಸಿದ್ದಾರೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

ದಂಪತಿ ಅತ್ಯಾಚಾರ ಮಾಡಿದವರಲ್ಲಿ ಒಬ್ಬನ ಗುರುತನ್ನು ಬಹಿರಂಗಪಡಿಸಿದ್ದಾರೆ. ಮಹಿಳೆ ಕಡಲೆಕಾಯಿ ತಿನ್ನುತ್ತಿದ್ದಾಗ ಆ ವ್ಯಕ್ತಿ ಮಾತನಾಡಿಸಿದ್ದ. ಅಲ್ಲದೆ ಅವರ ಜತೆ ಅನುಚಿತವಾಗಿ ವರ್ತಿಸಿದ್ದ. ಬಳಿಕ ದಂಪತಿ ಆ ಪ್ರದೇಶವನ್ನು ತೊರೆದು ಕೆಲವು ಗಂಟೆಗಳ ನಂತರ ತಮ್ಮ ಕ್ಯಾಂಪ್​ಗೆ ಮರಳಿದ್ದರು. ಅವರು ತಂಗಿದ್ದ ಜಾಗ ನಿರ್ಜನವಾಗಿತ್ತು. ಆ ಬಳಿಕ ಅವರು ‘ತಮ್ಮ ಜೀವನದ ಭಯಾನಕ 3 ಗಂಟೆಗಳನ್ನು’ ನೆನಪಿಸಿಕೊಂಡಿದ್ದಾರೆ. “ರಾತ್ರಿ 8 ಗಂಟೆಗೆ ಪ್ರಾರಂಭವಾದ ತೊಂದರೆ ರಾತ್ರಿ 11 ಗಂಟೆಗೆ ಕೊನೆಗೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

“ನಾನು ಏನು ಮಾಡಬೇಕೆಂದು ಆ ವೇಳೆ ನನಗೆ ತಿಳಿಯಲಿಲ್ಲ. ಪತ್ನಿ ಪೊದೆಯ ಮಧ್ಯೆ ಬಿದ್ದಿದ್ದಳು. ನಾನು ಎದ್ದು ಅವಳ ಬಳಿ ಓಡಿದೆ ಎಂದು ಪತಿ ವಿಡಿಯೊದಲ್ಲಿ ಹೇಳಿದ್ದಾರೆ. ನಂತರ ಇಬ್ಬರೂ ಆಸ್ಪತ್ರೆಗೆ ತೆರಳಿದೆವು ಏಳು ಜನರು ಅವಳ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದರು. ಅವರು ಅವಳನ್ನು ಹೊಡೆದಿದ್ದರು.. ಅವರು ನನಗೂ ಹೆಲ್ಮೆಟ್​ನಿಂದ ಹಲವು ಬಾರಿ ಹೊಡಿದಿದ್ದಾರೆ. ಕಲ್ಲುಗಳಿಂದ ಹಲ್ಲೆ ನಡೆಸಿದರು” ಎಂದು ಸಂತ್ರಸ್ತೆಯ ಪತಿ ಹೇಳಿದ್ದಾರೆ.

ನಂತರ ಅವರು ಪೊಲೀಸ್ ರಕ್ಷಣೆ ಪಡೆದು ಮೂರು ದಿನಗಳ ಕಾಲ ಇದ್ದರು. ನಾವು ಮುಂದುವರಿಯಲಿದ್ದೇವೆ, ವಿಧಿ ನಮಗೆ ಎರಡನೇ ಅವಕಾಶವನ್ನು ನೀಡಿದೆ. ನಾವು ಸಾವನ್ನು ಹತ್ತಿರದಿಂದ ನೋಡಿದ್ದೇವೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಇದಲ್ಲದೆ, ಸಂತ್ರಸ್ತೆಯ ಪತಿಗೆ ಪೊಲೀಸರು 10 ಲಕ್ಷ ರೂ.ಗಳ ಪರಿಹಾರವನ್ನು ಸಹ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Moral policing: ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

VISTARANEWS.COM


on

Moral policing
Koo

ಚಿತ್ರದುರ್ಗ: ಜತೆಗೆ ಕೆಲಸ ಮಾಡುವ ಮುಸ್ಲಿಂ ಯುವತಿಯೊಬ್ಬಳನ್ನು ಬೈಕ್​ನಲ್ಲಿ ಡ್ರಾಪ್ ಮಾಡಿರುವುದನ್ನು ಆಕ್ಷೇಪಿಸಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್​ಗಿರಿ (Moral policing) ಪ್ರದರ್ಶಿಸಿದ ಪ್ರಕರಣ ಚಿತ್ರದುರ್ಗದಲ್ಲಿ ವರದಿಯಾಗಿದೆ. ಈ ಬಗ್ಗೆ ವಿರೋಧ ವ್ಯಕ್ತಗೊಂಡಿದ್ದು ನೈತಿಕ ಪೊಲೀಸ್​ಗಿರಿ ಪ್ರದರ್ಶಿಸಿದವರನ್ನು ಶಿಕ್ಷಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ.

ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

ಉಮೇಶ್ ನ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸತತವಾಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ತೆಲೆ, ಮರ್ಮಾಂಗ ಭಾಗಕ್ಕೆ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮೇಶ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ

ಕಾರ್ಪೋರೇಟರ್‌ ಮಗಳ ಕೊಲೆ; ಪ್ರೀತಿಸಲು ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಫಯಾಜ್‌!

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

Hubli murder case : ಆರೋಪಿ ಫಯಾಜ್ ಮೂಲತಃ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿಯಾಗಿದ್ದಾನೆ. ತಂದೆ ಬಾಬಾಸಾಬ್, ತಾಯಿ ಮುಮ್ತಾಜ್ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಫಯಾಜ್​ ಫೇಲ್ ಆಗಿದ್ದರಿಂದ ಕಾಲೇಜ್ ಬಿಟ್ಟಿದ್ದ. ಆತ ಅದೇ ಕಾಲೇಜಿನಲ್ಲಿ ಬಿಸಿಎ ಕೋರ್ಸ್​ನಲ್ಲಿ ಫೇಲ್ ಆಗಿದ್ದ. ಬಿಸಿಎ ಕಲಿಯುವಾಗ ವೇಳೆ ನೇಹಾ ಆತನ ಕ್ಲಾಸ್​ಮೇಟ್ ಆಗಿದ್ದರು.

VISTARANEWS.COM


on

Hubli Murder Case
Koo

ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ (Hubli murder case) ಆರೋಪಿ ಫಯಾಜ್​ನ ಪೋಷಕರಿಬ್ಬರೂ ಶಾಲಾ ಶಿಕ್ಷಕರು ಎಂಬ ಮಾಹಿತಿ ಗೊತ್ತಾಗಿದೆ. ಆದರೆ, ವಿದ್ಯೆ ತಲೆಗೆ ಹತ್ತಿಸಿಕೊಳ್ಳದ ಆತ ಕಾಲೇಜಿನಿಂದ ಫೇಲ್ ಆಗಿ ಹೊರಕ್ಕೆ ಬಿದಿದ್ದ. ಇದೀಗ ಹಳೇ ಸಹಪಾಠಿಯನ್ನೇ ಕೊಲೆ ಮಾಡಿದ್ದಾನೆ. ಆಕೆಯನ್ನು ಕೊಲ್ಲಲೆಂದೇ ಚಾಕು ಹಿಡಿದುಕೊಂಡು ಕಾಲೇಜ್​ ಕ್ಯಾಂಪ್​ಸ್​ಗೆ ಬಂದಿದ್ದ ಎಂಬ ಮಾಹಿತಿ ಗೊತ್ತಾಗಿದೆ.

ಆರೋಪಿ ಫಯಾಜ್ ಮೂಲತಃ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿಯಾಗಿದ್ದಾನೆ. ತಂದೆ ಬಾಬಾಸಾಬ್, ತಾಯಿ ಮುಮ್ತಾಜ್ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಫಯಾಜ್​ ಫೇಲ್ ಆಗಿದ್ದರಿಂದ ಕಾಲೇಜ್ ಬಿಟ್ಟಿದ್ದ. ಆತ ಅದೇ ಕಾಲೇಜಿನಲ್ಲಿ ಬಿಸಿಎ ಕೋರ್ಸ್​ನಲ್ಲಿ ಫೇಲ್ ಆಗಿದ್ದ. ಬಿಸಿಎ ಕಲಿಯುವಾಗ ವೇಳೆ ನೇಹಾ ಆತನ ಕ್ಲಾಸ್​ಮೇಟ್ ಆಗಿದ್ದರು.

ಹಲವು ಸಮಯದಿಂದ ಆಕೆಯ ಹಿಂದೆ ಬಿದ್ದಿದ್ದ ಫಯಾಜ್​ ಪ್ರೀತಿ ಮಾಡುವಂತೆ ಸತಾಯಿಸಿದ್ದ. ಆದರೆ ಅದಕ್ಕೆ ನಿರಾಕರಿಸಿದ್ದಳು. ಅಂತೆಯೇ ಗುರುವಾರ ಕಾಲೇಜಿಗೆ ಚಾಕು ಸಮೇತ ಬಂದಿದ್ದ ಆತ ಕೊಲೆ ಮಾಡಿದ್ದಾನೆ.

ಏನಿದು ಪ್ರಕರಣ?

ಫಯಾಜ್​ ಪಾಗಲ್‌ ಪ್ರೇಮಿಯಾಗಿದ್ದು, ನೇಹಾ ಅವರನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಇದನ್ನೂ ಓದಿ: Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

ನೇಹಾಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫಯಾಜ್​ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.

ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ

ನೇಹಾಳನ್ನು ಕೊಂದ ಆರೋಪಿಯನ್ನು ಎನ್​ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಹಿಂದೂ ಕಾರ್ಯಕರ್ತರು ಪೊಲೀಸ್​ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆದಿದೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ಎನ್ಕೌಂಟರ್ ಮಾಡುವಂತೆ ಒತ್ತಾಯಿಸಿದ್ದಾರೆ. ಪಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಒತ್ತಾಯ ಮಾಡಿದ್ದಾರೆ. ಈ ವೇಳೆ ಡಿಸಿಪಿ ರಾಜೀವ್ ಮತ್ತು ಸಂಘಟನೆಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

Continue Reading

ಕರ್ನಾಟಕ

Murder Case: ಬೆಂಗಳೂರಲ್ಲಿ ಜೋಡಿ ಕೊಲೆ: ಅನೈತಿಕ ಸಂಬಂಧ ಸಾಕು ಎಂದವಳ ಕೊಂದ; ತಲೆ ಒಡೆದು ಸಾಯಿಸಿದ ಹುಡುಗಿ ಅಮ್ಮ!

Murder Case: ಸುರೇಶ್ ಮತ್ತು ಅನುಷಾ ಹಲವಾರು ವರ್ಷಗಳಿಂದ ಪರಿಚಿತರಾಗಿದ್ದರು. ಸುರೇಶ್‌ಗೆ ಮದುವೆಯಾಗಿತ್ತು. ಇಷ್ಟಿದ್ದರೂ ಸುರೇಶ್ ಹಾಗೂ ಅನುಷಾ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು. ಸುರೇಶ್ ಗೊರಗುಂಟೆ ಪಾಳ್ಯ ನಿವಾಸಿಯಾಗಿದ್ದ. ಅನುಷಾ ಶಾಕಾಂಬರಿ ನಗರ ನಿವಾಸಿಯಾಗಿದ್ದಾಳೆ. ಆದರೆ, ಈ ಮಧ್ಯೆ ಅನುಷಾಗೆ ಸಂಬಂಧವನ್ನು ಮುಂದುವರಿಸುವುದು ಇಷ್ಟ ಇರಲಿಲ್ಲ. ಹೀಗಾಗಿ ಗುರುವಾರ ಭೇಟಿಯಾಗಿ ಸಂಬಂಧಕ್ಕೆ ಅಂತ್ಯ ಹಾಡಲು ತೀರ್ಮಾನವನ್ನು ಮಾಡಿದ್ದರು ಎನ್ನಲಾಗಿದೆ. ಆದರೆ, ಈ ಭೇಟಿಯೇ ಜೀವಕ್ಕೆ ಮುಳುವಾಗಿದೆ.

VISTARANEWS.COM


on

Murder case Double murder in Bengaluru
Koo

ಬೆಂಗಳೂರು: ಬೆಂಗಳೂರಿನಲ್ಲಿ ಅನೈತಿಕ ಸಂಬಂಧವೊಂದು 2 ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಕಳೆದ ಐದು ವರ್ಷಗಳಿಂದ ಅಕ್ರಮ ಸಂಬಂಧದಲ್ಲಿದ್ದ ಜೋಡಿ ಮಧ್ಯೆ ಬಿರುಕು ಬಂದಿತ್ತು. ಎರಡು ಮಕ್ಕಳ ತಂದೆ ಜತೆ ಸಂಬಂಧ ಇಟ್ಟುಕೊಂಡಿದ್ದ ಯುವತಿಯು ಇನ್ನು ಸಾಕು ದೂರ ಇರೋಣ ಎಂದಿದ್ದೇ ಕೊಲೆಗೆ ಕಾರಣವಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಯುವತಿಯನ್ನು ಚಾಕುವಿನಿಂದ ಕೊಚ್ಚಿ ಕೊಚ್ಚಿ ಕೊಂದಿದ್ದಾನೆ. ಈ ವೇಳೆ ಮಗಳ ರಕ್ಷಣೆಗೆ ಧಾವಿಸಿದ ತಾಯಿಯು ಇಟ್ಟಿಗೆಯಿಂದ ಆತನ ತಲೆಗೆ ಜೋರಾಗಿ ಹೊಡೆದಿದ್ದಾಳೆ. ಹೀಗಾಗಿ ಆತನೂ ಸಹ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸಾರಕ್ಕಿ ಮಾರ್ಕೆಟ್ ಬಳಿ ಈ ಘಟನೆ ನಡೆದಿದೆ. ಸುರೇಶ್ (46) ಹಾಗೂ ಅನುಷಾ (25) ಕೊಲೆಯಾದವರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಏನಿದು ದ್ವೇಷ?

ಸುರೇಶ್ ಮತ್ತು ಅನುಷಾ ಹಲವಾರು ವರ್ಷಗಳಿಂದ ಪರಿಚಿತರಾಗಿದ್ದರು. ಸುರೇಶ್‌ಗೆ ಮದುವೆಯಾಗಿತ್ತು. ಇಷ್ಟಿದ್ದರೂ ಸುರೇಶ್ ಹಾಗೂ ಅನುಷಾ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು. ಸುರೇಶ್ ಗೊರಗುಂಟೆ ಪಾಳ್ಯ ನಿವಾಸಿಯಾಗಿದ್ದ. ಅನುಷಾ ಶಾಕಾಂಬರಿ ನಗರ ನಿವಾಸಿಯಾಗಿದ್ದಾಳೆ. ಆದರೆ, ಈ ಮಧ್ಯೆ ಅನುಷಾಗೆ ಸಂಬಂಧವನ್ನು ಮುಂದುವರಿಸುವುದು ಇಷ್ಟ ಇರಲಿಲ್ಲ. ಹೀಗಾಗಿ ಗುರುವಾರ ಭೇಟಿಯಾಗಿ ಸಂಬಂಧಕ್ಕೆ ಅಂತ್ಯ ಹಾಡಲು ತೀರ್ಮಾನವನ್ನು ಮಾಡಿದ್ದರು ಎನ್ನಲಾಗಿದೆ.

ಆದರೆ, ಅನುಷಾ ತನ್ನ ಕೈ ತಪ್ಪಿ ಹೋಗುತ್ತಾಳೆ ಎಂದು ಕೋಪಗೊಂಡಿದ್ದ ಸುರೇಶ್‌, ಸಂಬಂಧವನ್ನು ಬಿಡಬೇಡ ಎಂದು ಸಾಕಷ್ಟು ಬಾರಿ ಮನವಿ ಮಾಡಿದ್ದ. ಆಕೆ ತನ್ನ ಸಂಪರ್ಕ ನಿಲ್ಲಿಸುವ ಎಂದು ಹೇಳಿದ್ದರೂ ಕೇಳಲಿಲ್ಲ. ಈ ವೇಳೆ ಕೋಪಗೊಂಡ ಸುರೇಶ್‌ ಮೊದಲೇ ನಿರ್ಧರಿಸಿ ತಂದಿದ್ದ ಚಾಕುವನ್ನು ಹೊರಗೆ ತೆಗೆದಿದ್ದಾನೆ. ಕೊನೆಗೆ ಮಾತಿಗೆ ಮಾತು ಬೆಳೆದಿದ್ದರಿಂದ ಅನುಷಾ ಮೇಲೆ ಇರಿದಿದ್ದಾನೆ.

ನಡೆದು ಹೋಯಿತು ಎರಡು ಕೊಲೆ!

ಈ ವೇಳೆ ಮಗಳ ವಿಷಯ ತಿಳಿದಿದ್ದ ಅನುಷಾ ತಾಯಿ ಗೀತಾ ಸಹ ಅಲ್ಲಿಗೆ ಬಂದಿದ್ದರು. ಸುರೇಶ್ ತನ್ನ ಮಗಳಿಗೆ ಚಾಕು ಹಾಕುತಿದ್ದಾಗ ತಡೆಯಲು ಅವರು ಬಂದಿದ್ದಾರೆ. ಆದರೆ, ಇದನ್ನು ಕೇಳದ ಸುರೇಶ್‌ ಚಾಕುವಿನಿಂದ ಇರಿಯುತ್ತಲೇ ಇದ್ದ. ಹೀಗಾಗಿ ಮಗಳನ್ನು ರಕ್ಷಣೆ ಮಾಡುವ ಸಲುವಾಗಿ ಗೀತಾ ಪಕ್ಕದಲ್ಲೇ ಇದ್ದ ಇಟ್ಟಿಗೆಯನ್ನು ತೆಗೆದುಕೊಂಡು ಸುರೇಶ್‌ ತಲೆ ಮೇಲೆ ಜೋರಾಗಿ ಹೊಡೆದಿದ್ದಾಳೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸುರೇಶ್‌ ಸಹ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅನುಷಾ ಸಹ ಅಲ್ಲಿಯೇ ಕೊನೆಯುಸಿರೆಳೆದಿದ್ದಾಳೆ. ಸದ್ಯ ಆರೋಪಿ ಗೀತಾಳನ್ನು ಜೆಪಿ‌ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುರೇಶ್‌ಗೆ ಇಬ್ಬರು ಮಕ್ಕಳು

ಸುರೇಶ್‌ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಅನುಷಾಗೆ ಇನ್ನು ಮದುವೆಯಾಗಿರಲಿಲ್ಲ. ಆದರೂ ಇಬ್ಬರ ನಡುವೆ ಐದು ವರ್ಷಗಳಿಂದ ಪ್ರೀತಿ ಇತ್ತು. ಇಬ್ಬರ ಪ್ರೇಮ ಪುರಾಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಇಂದು ಸಹ ಬೆಳಗ್ಗೆ ಪೊಲೀಸ್‌ ಠಾಣೆಯಲ್ಲಿ ರಾಜೀ ಪಂಚಾಯಿತಿ ನಡೆದಿತ್ತು. ಅದಾದ ಬಳಿಕವೂ ಸುರೇಶ್ ಹಾಗೂ ಅನುಷಾ ಪಾರ್ಕ್‌ನಲ್ಲಿ ಕೊನೇ ಭೇಟಿಗೆ ನಿಶ್ಚಯಿಸಿದ್ದರು. ಅಲ್ಲಿ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.

Continue Reading
Advertisement
Steet Food
ಆಹಾರ/ಅಡುಗೆ39 mins ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ51 mins ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ1 hour ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ2 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ2 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Rishab Shetty
ಸಿನಿಮಾ2 hours ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ3 hours ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ3 hours ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Indian Railways
ದೇಶ3 hours ago

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌