Site icon Vistara News

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿ ತಲ್ವಾರ್‌ ಹಿಡಿದು ಯುವಕರ ಪುಂಡಾಟ

ತಲ್ವಾರ್

ಬೆಂಗಳೂರು: ನಗರದ ಇಂಡಿಯನ್ ಎಕ್ಸ್​ಪ್ರೆಸ್​ ಬಸ್ ನಿಲ್ದಾಣದಲ್ಲಿ ಯುವಕರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಯುವಕನೊಬ್ಬ ನಡುರಸ್ತೆಯಲ್ಲೇ ತಲ್ವಾರ್ ಹಿಡಿದು ಯುವಕನ ಮೇಲೆ ಹಲ್ಲೆ ಮಾಡಿದ್ದು, ಯುವತಿಯೊಬ್ಬಳು ಯುವಕನನ್ನು ರಕ್ಷಿಸಿಕೊಳ್ಳಲು ಪರದಾಡಿದ್ದು ಕಂಡುಬಂತು.

ವಿಧಾನಸೌಧ ಸಮೀಪದ ಕ್ವೀನ್ಸ್‌ ರಸ್ತೆಯಲ್ಲಿ ಬೈಕ್‌ನ ಮೇಲಿದ್ದ ಯುವಕನ ಮೇಲೆ ಮೂವರು ಯುವಕರು ಲಾಂಗ್ ಹಿಡಿದು ಹಲ್ಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಡುರಸ್ತೆಯಲ್ಲಿ ಗಲಾಟೆ ಮಾಡಿದ ಪುಂಡರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗಲಾಟೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

ಇದನ್ನೂ ಓದಿ | Road Accident | ವಾಯವ್ಯ ಸಾರಿಗೆ-ಬೈಕ್‌ ನಡುವೆ ಅಪಘಾತ; ಇಬ್ಬರು ಬೈಕ್‌ ಸವಾರರು ಸಾವು

Exit mobile version