Accident News: ಅಜಾಗರೂಕ ಚಾಲನೆ, ಸ್ಕೂಟರ್‌ ಸವಾರನ ಪ್ರಾಣ ತೆಗೆದ ಕಾರು ಚಾಲಕಿ - Vistara News

Latest

Accident News: ಅಜಾಗರೂಕ ಚಾಲನೆ, ಸ್ಕೂಟರ್‌ ಸವಾರನ ಪ್ರಾಣ ತೆಗೆದ ಕಾರು ಚಾಲಕಿ

ಟಿ. ದಾಸರಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಅಜಾಗರೂಕವಾಗಿ ಕಾರು ಚಲಾಯಿಸಿದ ಮಹಿಳೆಯೊಬ್ಬರು ಸ್ಕೂಟರ್‌ ಸವಾರನ ಪ್ರಾಣವನ್ನು ಬಲಿ ಪಡೆದಿದ್ದಾರೆ.

VISTARANEWS.COM


on

dasarahalli accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜ್ಞಾನಭಾರತಿ ಹಿಟ್‌ ಆಂಡ್‌ ರನ್ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ಸ್ಕೂಟರ್‌ ಸವಾರನ ಪ್ರಾಣವನ್ನೇ ಒಬ್ಬಾಕೆ ತೆಗೆದಿದ್ದಾಳೆ.

ದುರ್ಘಟನೆಯಲ್ಲಿ, ತಂದೆಯನ್ನು ನೋಡಲು ಹೋದ ಮಗನೇ ಶವವಾಗಿದ್ದಾರೆ. ಅವರ ಜತೆಗಿದ್ದ ಅವರ ಪುತ್ರನೂ ತೀವ್ರವಾಗಿ ಗಾಯಗೊಂಡಿದ್ದು ಸರ್ಜರಿಗೆ ಒಳಗಾಗಿದ್ದಾನೆ.

ಟಿ.ದಾಸರಹಳ್ಳಿಯಲ್ಲಿ ಈ ಭೀಕರ ಅಪಘಾತ ನಡೆದಿದೆ. ಸಂಜಯ್‌ ಬಾಬು ಎಂಬವರು ತಮ್ಮ ತಂದೆಯನ್ನು ನೋಡಲು ಮಗ ವೇದಾಂತ್‌ ಜತೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಶುಭಾ ಎಂಬವರು ಚಲಾಯಿಸುತ್ತಿದ್ದ ವ್ಯಾಗನಾರ್ ಕಾರ್ ಡಿಕ್ಕಿಯಾದ ಪರಿಣಾಮ ತಂದೆ ಮಗ ಕೆಳಗೆ ಬಿದ್ದು ಗಾಯಗೊಂಡರು. ತಂದೆ ಮಗನನ್ನು ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದು, ಹಲವಾರು ಶಸ್ತ್ರಚಿಕಿತ್ಸೆಗಳ ಬಳಿಕವೂ ಚಿಕಿತ್ಸೆ ಫಲಕಾರಿಯಾಗದೆ ಸಂಜಯ್ ಬಾಬು ನಿಧನರಾಗಿದ್ದಾರೆ.

ಮಹಿಳೆ ಕಾರನ್ನು ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಮಗ ವೇದಾಂತ್‌ಗೂ ಬಲಭಾಗದ ಕೈಯ 4 ರಿಬ್ಸ್ ಮುರಿದಿದ್ದು, ಎಡಗೈ ಭುಜದ ಮೂಳೆ ಮುರಿದಿದೆ. ಆತನಿಗೂ ಶಸ್ತ್ರಚಿಕಿತ್ಸೆ ಅವಶ್ಯಕವೆಂದು ವೈದ್ಯರು ತಿಳಿಸಿದ್ದಾರೆ. ಕಾರಿನ ಮಾಲಕಿ ಶುಭ ಅವರನ್ನು ಪೀಣ್ಯ ಸಂಚಾರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Accident news: ಬೆಳಗ್ಗೆ ಮೋದಿ ಕಾರ್ಯಕ್ರಮಕ್ಕೆ ಹೋದ ವಿದ್ಯಾರ್ಥಿಗಳು ಸಂಜೆ ಅಪಘಾತದಲ್ಲಿ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Viral Video: ಮದುವೆ ಸಮಾರಂಭಗಳಲ್ಲಿ ಒಂದಲ್ಲ ಒಂದು ಎಡವಟ್ಟು ನಡೆದೇ ನಡೆಯುತ್ತೆ. ಇದರಲ್ಲಿ ಕೆಲವು ಗಂಭೀರ ರೂಪ ತಾಳಿದರೆ, ಇನ್ನು ಕೆಲವು ಎಲ್ಲರ ನಗೆಪಾಟಲಿಗೆ ಗುರಿಯಾಗುತ್ತದೆ. ಇಲ್ಲಿ ಸಿಕ್ಕಿರುವ ವಿಡಿಯೋವೊಂದು ಎಲ್ಲರೂ ನಗುವಂತೆ ಮಾಡಿದೆ.

VISTARANEWS.COM


on

By

Viral Video
Koo

ಮದುವೆ (wedding) ಮಂಟಪ ಸುಂದರವಾಗಿ ಅಲಂಕಾರಗೊಂಡಿತ್ತು. ವಧು ವರರು ಇಬ್ಬರೂ ವೇದಿಕೆಯಲ್ಲಿ ನಿಂತು ಒಂದೊಂದೇ ಶಾಸ್ತ್ರಗಳನ್ನು ಮಾಡುತ್ತಿದ್ದರು. ಇನ್ನೇನು ಹೂವಿನ ಮಾಲೆ (flower garland) ವಿನಿಮಯ ಮಾಡಿಕೊಳ್ಳಬೇಕಿತ್ತು. ವರನು (groom) ವಧುವಿಗೆ (bride) ಹೂವಿನ ಮಾಲೆ ಹಾಕಲು ಅವರಿಗೆ ಕುಳಿತು ಕೊಳ್ಳಲು ಇಟ್ಟಿದ್ದ ಸಿಂಹಾಸನದಿಂದ ಜಿಗಿದಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಎಲ್ಲರೂ ನಗುವಂತೆ ಮಾಡಿದೆ.

ಹಿಂದೂ ಸಂಪ್ರದಾಯದ ಮದುವೆಯಲ್ಲಿ ಹೂವಿನ ಮಾಲೆಯನ್ನು ಬದಲಾಯಿಸಿಕೊಳ್ಳುವ ಶಾಸ್ತ್ರವಿದೆ. ಈ ಸಂದರ್ಭದಲ್ಲಿ ವಧು ವರರು ಇಬ್ಬರಿಗೂ ಸಾಕಷ್ಟು ಸವಾಲುಗಳನ್ನು ಹತ್ತಿರದ ಸಂಬಂಧಿ, ಸ್ನೇಹಿತರು ತಂದೊಡ್ಡುತ್ತಾರೆ. ಅಂತೆಯೇ ಇಲ್ಲಿ ವಧು ಮತ್ತು ವರರು ಹೂವಿನ ಹಾರಗಳನ್ನು ವಿನಿಮಯ ಮಾಡಿಕೊಳ್ಳುವಾಗ ವಧುವಿನ ಕುಟುಂಬದವರು ವಧುವನ್ನು ಎತ್ತಿ ಹಿಡಿದು ವರನ ಮುಂದೆ ಸವಾಲು ಹಾಕಿದರು.

ಹಲವು ಬಾರಿ ವರ ಮಾಲೆ ಹಾಕಲು ಪ್ರಯತ್ನಿಸುತ್ತಾನೆ. ಆದರೆ ವಿಫಲನಾಗುತ್ತಾನೆ. ಕೊನೆಗೂ ವರನು ತನ್ನ ವಧುವನ್ನು ಗೆಲ್ಲುವ ಮಾರ್ಗವನ್ನು ಕಂಡುಕೊಂಡಿದ್ದಾನೆ. ಇದರ ವಿಡಿಯೋ ಎಕ್ಸ್ ನಲ್ಲಿ ಭಾರೀ ವೈರಲ್ ಆಗಿದ್ದು, ಇದಕ್ಕೆ ಸಾಕಷ್ಟು ಮಂದಿ ನೆಟ್ಟಿಗರು ಕಾಮೆಂಟ್ ಕೂಡ ಮಾಡಿದ್ದಾರೆ.

ಇದನ್ನೂ ಓದಿ: Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

ಏನಿದೆ ವಿಡಿಯೋದಲ್ಲಿ?

ಈ ವಿಡಿಯೋದಲ್ಲಿ ಸೆರೆಯಾಗಿರುವಂತೆ ವಧು ಈಗಾಗಲೇ ತನ್ನ ಗಂಡನ ಕುತ್ತಿಗೆಗೆ ಹೂವಿನ ಹಾರವನ್ನು ಹಾಕಿದ್ದಳು. ಈಗ ವರನ ಸರದಿ. ವಧುವಿನ ಸಂಬಂಧಿಗಳು ಅವಳನ್ನು ಎತ್ತಿ ಹಿಡಿದು ವರನಿಗೆ ಹೂಮಾಲೆ ಹಾಕುವ ಸವಾಲು ಹಾಕುತ್ತಾರೆ.


ವರನು ಮದುವೆಯ ಸಿಂಹಾಸನದ ಮೇಲೇರಿ ಜಿಗಿದ ಯಶಸ್ವಿಯಾಗಿ ವಧುವಿನ ಕುತ್ತಿಗೆಗೆ ಹಾರವನ್ನು ಹಾಕಿದನು. ವಧುವಿನ ಜೊತೆಗೆ ಸಂಬಂಧಿಕರು ತಮ್ಮ ಸಮತೋಲನವನ್ನು ಕಳೆದುಕೊಳ್ಳುತ್ತಾರೆ. ಪರಿಣಾಮವಾಗಿ ಎಲ್ಲರೂ ವೇದಿಕೆಯ ಮೇಲೆ ಬಿದ್ದರು. ಕೊನೆಯಲ್ಲಿ, ವರನು ಹೆಮ್ಮೆಯಿಂದ ನಿಂತಿರುವಾಗ ವಧು ನಕ್ಕಳು.

ಸರಿತಾ ಸರವಾಗ್ ಎಂಬವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಕೂಡ ಮಾಡಿದ್ದು, ಸಾಕಷ್ಟು ಮಂದಿ ತಾವು ನೋಡಿರುವ, ಅನುಭವದ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಇದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಹೂವಿನ ಮಾಲೆ ಹಾಕುವಾಗ ವರನ ತಂಡದ ವ್ಯಕ್ತಿಯೊಬ್ಬರು ಅವನನ್ನು ಮೇಲೆತ್ತುತ್ತಾನೆ. ಆಗ ಆತ ವಧುವಿನ ಮೇಲೆ ಬೀಳುವುದರಲ್ಲಿದ್ದ. ಆದರೆ ವಧುವಿನ ಸಮಯಪ್ರಜ್ಞೆಯಿಂದ ಘಟನೆಯು ದುರಂತ ತಿರುವು ಪಡೆಯುವುದು ತಪ್ಪಿತ್ತು.

Continue Reading

ಆರೋಗ್ಯ

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Outdoor Exercise: ಆರೋಗ್ಯವಾಗಿರಲು ವ್ಯಾಯಾಮ ಬಹು ಮುಖ್ಯ. ವ್ಯಾಯಾಮ ಮಾಡುವ ಪ್ರತಿಯೊಂದು ವಿಧಾನಗಳು ಮಾನಸಿಕ ಆರೋಗ್ಯ ಕಾಪಾಡಲು ನಮಗೆ ಸಹಕಾರಿಯಾಗುತ್ತದೆ. ಆದರಲ್ಲೂ ಹೊರಗಣ ವ್ಯಾಯಾಮ ಮಾಡುವುದರಿಂದ ಮಾನಸಿಕ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಅದು ಹೇಗೆ ಗೊತ್ತೇ? ಈ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Outdoor Exercise
Koo

ಆರೋಗ್ಯವಾಗಿರಲು (healthy) ವ್ಯಾಯಾಮ (exercise) ಬಹುಮುಖ್ಯ. ಪ್ರತಿಯೊಂದು ರೀತಿಯ ವ್ಯಾಯಾಮವೂ ದೇಹ, ಮನಸ್ಸಿನ ಆರೋಗ್ಯಕ್ಕೆ ತನ್ನದೇ ಆದ ರೀತಿಯಲ್ಲಿ ಪರಿಣಾಮ ಬೀರುತ್ತದೆ. ಅದರಲ್ಲೂ ಹೊರಾಂಗಣ ವ್ಯಾಯಾಮ ದೇಹಕ್ಕೆ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೆ (mental health) ಬಹು ಪ್ರಯೋಜನಕಾರಿಯಾಗಿದೆ.

ಹೊರಾಂಗಣದಲ್ಲಿ ವ್ಯಾಯಾಮ (Outdoor Exercise) ಖಿನ್ನತೆಯ (depression) ಅಪಾಯವನ್ನು ಕಡಿಮೆ ಮಾಡುವುದು ಮಾತ್ರವಲ್ಲ ವಿವಿಧ ಮಾನಸಿಕ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ ತಜ್ಞರು. ಹೊರಾಂಗಣದಲ್ಲಿ ವ್ಯಾಯಾಮ ಮಾಡುವುದರಿಂದ ಭಾವನಾತ್ಮಕ, ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಹೊರಾಂಗಣ ವ್ಯಾಯಾಮ ಮಾಡುವುದರಿಂದ ಖಿನ್ನತೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ ಕೆಲವು ಅಂಶಗಳು.

ಇದನ್ನೂ ಓದಿ: Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!


ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದು

ಸೂರ್ಯನ ಬೆಳಕು ನಮ್ಮ ದೇಹದ ಸಿರೊಟೋನಿನ್ ಉತ್ಪಾದನೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ನರಗಳ ಯೋಗಕ್ಷೇಮ ಮತ್ತು ಸಂತೋಷದ ಭಾವನೆಗಳಿಗೆ ಸೂರ್ಯನ ಬೆಳಕು ಸಾಕಷ್ಟು ಕೊಡುಗೆ ನೀಡುತ್ತದೆ. ನೈಸರ್ಗಿಕ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಸೀಸನಲ್ ಎಫೆಕ್ಟಿವ್ ಡಿಸಾರ್ಡರ್ (ಎಸ್‌ಎಡಿ) ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಮತ್ತು ಸಾಮಾನ್ಯವಾಗಿ ಮನಸ್ಥಿತಿಯನ್ನು ಸುಧಾರಿಸುತ್ತದೆ.

ವಿಟಮಿನ್ ಡಿ ಉತ್ಪಾದನೆ

ಸೂರ್ಯನ ಬೆಳಕಿಗೆ ನಮ್ಮನ್ನು ನಾವು ಒಡ್ಡಿಕೊಳ್ಳುವುದರಿಂದ ವಿಟಮಿನ್ ಡಿ ಅನ್ನು ಉತ್ಪಾದಿಸಲು ಚರ್ಮಕ್ಕೆ ಉತ್ತೇಜಿನ ಸಿಕ್ಕಂತಾಗುತ್ತದೆ. ಮೆದುಳಿನ ಕಾರ್ಯವನ್ನು ಒಳಗೊಂಡಂತೆ ಒಟ್ಟಾರೆ ಆರೋಗ್ಯಕ್ಕೆ ನಿರ್ಣಾಯಕವಾಗಿದೆ. ಕಡಿಮೆ ಮಟ್ಟದ ವಿಟಮಿನ್ ಡಿ ಖಿನ್ನತೆ ಮತ್ತು ಇತರ ಮಾನಸಿಕ ಅಸ್ವಸ್ಥತೆಗಳನ್ನು ದೂರ ಮಾಡುತ್ತದೆ.

ದೈಹಿಕ ಚಟುವಟಿಕೆ

ವ್ಯಾಯಾಮ ಎಂಡಾರ್ಫಿನ್ ಗಳನ್ನು ಬಿಡುಗಡೆ ಮಾಡುತ್ತದೆ. ಮೆದುಳಿನಲ್ಲಿ ನೈಸರ್ಗಿಕ ನೋವು ನಿವಾರಕಗಳು ಮತ್ತು ಮೂಡ್ ಎಲಿವೇಟರ್ ಗಳಾಗಿ ಇದು ಕಾರ್ಯನಿರ್ವಹಿಸುವ ರಾಸಾಯನಿಕಗಳು. ಹೊರಾಂಗಣ ವ್ಯಾಯಾಮವು ಚಲನೆ ಮತ್ತು ದೈಹಿಕ ಪರಿಶ್ರಮವನ್ನು ಉತ್ತೇಜಿಸುತ್ತದೆ, ಇದು ಮನಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

ಸಾಮಾಜಿಕ ಸಂವಹನ

ಹೊರಾಂಗಣದಲ್ಲಿ ವ್ಯಾಯಾಮ ಮಾಡುವುದು ಸಾಮಾನ್ಯವಾಗಿ ನಡಿಗೆ, ಜಾಗಿಂಗ್ ಅಥವಾ ತಂಡದ ಕ್ರೀಡೆಗಳಂತಹ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ. ಇದನ್ನು ಇತರರೊಂದಿಗೆ ಮಾಡಬಹುದಾಗಿದೆ. ಮಾನಸಿಕ ಆರೋಗ್ಯಕ್ಕೆ ಸಾಮಾಜಿಕ ಸಂವಹನವು ಅತ್ಯಗತ್ಯ. ಏಕೆಂದರೆ ಇದು ಒಂಟಿತನದ ಭಾವನೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತದೆ.


ಪ್ರಕೃತಿಯೊಂದಿಗೆ ಸಂಪರ್ಕ

ಪರಿಸರದ ಮಧ್ಯೆ ಇರುವುದು ಮನಸ್ಸನ್ನು ಶಾಂತಗೊಳಿಸುತ್ತದೆ. ಹೊರಾಂಗಣ ವ್ಯಾಯಾಮವನ್ನು ಉದ್ಯಾನವನ, ಅರಣ್ಯ ಅಥವಾ ಕಡಲತೀರದಲ್ಲಿ ಅಥವಾ ಮನೆಯ ಬಾಲ್ಕನಿಯಲ್ಲಿ ಮಾಡುವುದರಿಂದ ಪ್ರಕೃತಿಯ ದೃಶ್ಯಗಳು, ಶಬ್ದಗಳು ಮತ್ತು ವಾಸನೆಗಳು ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.

ಒತ್ತಡ ಕಡಿಮೆ ಮಾಡುವುದು

ಹೊರಾಂಗಣ ವ್ಯಾಯಾಮವು ಮನಸ್ಸಿಗೆ ಸಾವಧಾನತೆಯನ್ನು ಒದಗಿಸುತ್ತದೆ. ಯಾಕೆಂದರೆ ಇದು ನಮ್ಮ ಸುತ್ತಮುತ್ತಲಿನ ಮತ್ತು ದೈಹಿಕ ಸಂವೇದನೆಗಳ ಮೇಲೆ ಕೇಂದ್ರೀಕರಿಸಲು ಸಹಾಯ ಮಾಡುತ್ತದೆ. ಸಾವಧಾನತೆಯು ಒತ್ತಡ ಮಟ್ಟವನ್ನು ಕಡಿಮೆ ಮಾಡಲು ಮತ್ತು ಮನಸ್ಸಿನ ಶಾಂತಿ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ಇದು ಸಹಾಯ ಮಾಡುತ್ತದೆ.

ಹೊಸ ಅನುಭವ

ಹೊರಾಂಗಣದಲ್ಲಿ ವ್ಯಾಯಾಮವು ದೃಶ್ಯಾವಳಿಗಳ ಬದಲಾವಣೆ ಹೊಸ ಅನುಭವಗಳನ್ನು ನೀಡುತ್ತದೆ. ಇದು ಒಳಾಂಗಣ ಜೀವನಕ್ರಮಗಳ ಏಕತಾನತೆಯನ್ನು ಹೋಗಲಾಡಿಸುತ್ತದೆ. ವ್ಯಾಯಾಮದ ದಿನಚರಿಗಳಲ್ಲಿನ ವೈವಿಧ್ಯತೆಯು ಬೇಸರವನ್ನು ದೂರ ಮಾಡುತ್ತದೆ ಮತ್ತು ಹೆಚ್ಚಿನ ಪ್ರೇರಣೆಯನ್ನು ನೀಡುತ್ತದೆ.


ಉತ್ತಮ ನಿದ್ರೆ

ನಿಯಮಿತ ವ್ಯಾಯಾಮವನ್ನು ವಿಶೇಷವಾಗಿ ಹೊರಾಂಗಣದಲ್ಲಿ ಮಾಡಿದಾಗ ಉತ್ತಮ ನಿದ್ರೆ ಆವರಿಸುವುದು. ಇದು ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು. ಮಾನಸಿಕ ಆರೋಗ್ಯಕ್ಕೆ ಸಾಕಷ್ಟು ನಿದ್ರೆ ಅತ್ಯಗತ್ಯ, ಮತ್ತು ಸಾಕಷ್ಟು ವಿಶ್ರಾಂತಿ ಪಡೆಯುವುದು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸ್ವಾಭಿಮಾನವನ್ನು ಹೆಚ್ಚಿಸುತ್ತದೆ

ಹೊರಾಂಗಣ ವ್ಯಾಯಾಮದಲ್ಲಿ ಸಾಕಷ್ಟು ಸವಾಲುಗಳು ಎದುರಾಗುತ್ತದೆ. ಇದರಿಂದ ಸ್ವಾಭಿಮಾನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಬಹುದು. ಸಾಧನೆ ಮತ್ತು ಸಮರ್ಥ ಭಾವನೆಯು ಖಿನ್ನತೆಗೆ ಸಂಬಂಧಿಸಿದ ನಿಷ್ಪ್ರಯೋಜಕತೆ ಅಥವಾ ಅಸಮರ್ಪಕತೆಯ ಭಾವನೆಗಳನ್ನು ಹೋಗಲಾಡಿಸುತ್ತದೆ.

ನಕಾರಾತ್ಮಕ ಆಲೋಚನೆಗಳಿಂದ ಮುಕ್ತಿ

ಹೊರಾಂಗಣ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವುದರಿಂದ ಖಿನ್ನತೆಗೆ ಕಾರಣವಾಗುವ ಒತ್ತಡಗಳು ಮತ್ತು ನಕಾರಾತ್ಮಕ ಆಲೋಚನೆಗಳಿಂದ ದೂರವಾಗಬಹುದು. ದೈಹಿಕ ಚಟುವಟಿಕೆಯ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸುವುದರಿಂದ ಮನಸ್ಸು ನಕಾರಾತ್ಮಕ ಯೋಚನೆಗಳನ್ನು ಮಾಡುವುದನ್ನು ಬಿಡುತ್ತದೆ.

Continue Reading

ಕ್ರೈಂ

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

Medical Negligence: ಹಾವು ಕಡಿತದಿಂದ ಅಸ್ವಸ್ಥಗೊಂಡಿದ್ದ ಬಾಲಕನಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕ ಮೃತಪಟ್ಟಿದ್ದು, ಆಸ್ಪತ್ರೆ ವಿರುದ್ಧ ಹೋರಾಡಿದ ತಂದೆಗೆ ಕೊನೆಗೂ ನ್ಯಾಯ ಸಿಕ್ಕಿದೆ. ದೆಹಲಿಯ ರಾಷ್ಟ್ರೀಯ ಗ್ರಾಹಕ ನ್ಯಾಯಾಲಯವು ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ 10 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದೆ.

VISTARANEWS.COM


on

By

Medical Negligence
Koo

ನವದೆಹಲಿ: ಹಾವು ಕಡಿತದಿಂದ (snake bite) 12 ವರ್ಷದ ಬಾಲಕ (boy) ಮೃತಪಟ್ಟ 16 ವರ್ಷಗಳ ಬಳಿಕ ಬಾಲಕನ ತಂದೆಗೆ ದೆಹಲಿಯ (delhi) ರಾಷ್ಟ್ರೀಯ ಗ್ರಾಹಕ ನ್ಯಾಯಾಲಯವು ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ (Medical Negligence) 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಮಹಾರಾಷ್ಟ್ರದ (maharstra) ಮಹಾತ್ಮ ಗಾಂಧಿ ಮಿಷನ್ ಆಸ್ಪತ್ರೆಗೆ (Mahatma Gandhi Mission Hospital) ಆದೇಶ ನೀಡಿದೆ.

ಹಾವು ಕಡಿತದಿಂದ ಅಸ್ವಸ್ಥನಾಗಿದ್ದ ಮಹಾರಾಷ್ಟ್ರದ ಪರಶುರಾಮ್ ಲ್ಯಾಂಡ್ಗೆ ಅವರ ಮಗ ದೇವಾನಂದ್ 2007ರ ಅಕ್ಟೋಬರ್ ನಲ್ಲಿ ಮಹಾತ್ಮ ಗಾಂಧಿ ಮಿಷನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.

ಬಾಲಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣದ ವಿಚಾರಣೆ ನಡೆಸಿದ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು (NCDRC) ಆಸ್ಪತ್ರೆಯ ನಿರ್ಲಕ್ಷ್ಯವನ್ನು ಪರಿಗಣಿಸಿ ಲ್ಯಾಂಡ್ಗೆ ಅವರಿಗೆ ಪರಿಹಾರವನ್ನು ಏಪ್ರಿಲ್ 24 ರಂದು ಘೋಷಿಸಿದೆ.

ಇದನ್ನೂ ಓದಿ: Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

ಬಾಲಕನ ತಂದೆ ನೀಡಿರುವ ದೂರಿನ ಪ್ರಕಾರ ಆಸ್ಪತ್ರೆಯ ಡಾಕ್ಟರ್ ಶೀನು ಗುಪ್ತಾ ಅವರು ತಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದು, ದೇವಾನಂದ್ ನನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದರು ಎಂದು ಹೇಳಲಾಗಿದೆ.

ಮಗನ ಸ್ಥಿತಿ ಗಂಭೀರವಾದ ಕಾರಣ ಚಿಕಿತ್ಸೆ ಮುಂದುವರೆಸುವಂತೆ ಲ್ಯಾಂಡ್​ಗೆ ಅವರು ವೈದ್ಯರಲ್ಲಿ ಮನವಿ ಮಾಡಿದ ಬಳಿಕ ವೈದ್ಯರು 500 ರೂ. ಮೌಲ್ಯದ ಚುಚ್ಚುಮದ್ದನ್ನು ಸೂಚಿಸಿದ್ದರು. ಅವರು ಪತ್ನಿಯ ಚಿನ್ನಾಭರಣಗಳನ್ನು ಗಿರವಿ ಇಟ್ಟು ಚುಚ್ಚುಮದ್ದು ಸೇರಿದಂತೆ ವೈದ್ಯರು ಸೂಚಿಸಿರುವ ಹಲವಾರು ದುಬಾರಿ ಔಷಧಗಳನ್ನು ಖರೀದಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಆಸ್ಪತ್ರೆಗೆ ಹಿಂದಿರುಗಿ ಕೂಡಲೇ ಮಗನಿಗೆ ಚಿಕಿತ್ಸೆ ನೀಡುವಂತೆ ವಿನಂತಿಸಿದರು. ಆದರೂ ವೈದ್ಯರು ಹೆಚ್ಚಿನ ಹಣವನ್ನು ಠೇವಣಿ ಮಾಡುವವರೆಗೂ ಚಿಕಿತ್ಸೆ ಪ್ರಾರಂಭಿಸಲು ನಿರಾಕರಿಸಿದರು. ಇದರಿಂದ ದೇವಾನಂದ್ ರಾತ್ರಿ 8.30ರ ವೇಳೆಗೆ ನಿಧನನಾಗಿದ್ದಾನೆ.

ದೂರು ದಾಖಲು

ಈ ಕುರಿತು 2017ರಲ್ಲಿ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಲ್ಯಾಂಡ್ಗೆ ದೂರು ದಾಖಲಿಸಿದ್ದರು. ಆದರೆ, ಮೂರು ವರ್ಷಗಳ ಅನಂತರ ಮಹಾರಾಷ್ಟ್ರ ರಾಜ್ಯ ಗ್ರಾಹಕ ನ್ಯಾಯಾಲಯವು ವೈದ್ಯ ಗುಪ್ತಾ ಮತ್ತು ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ 10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿತ್ತು. ಇದರಿಂದ ಅಸಮಾಧಾನಗೊಂಡ ಆಸ್ಪತ್ರೆಯು ಎನ್‌ಸಿಡಿಆರ್‌ಸಿಗೆ ತೆರಳಿ ರಾಜ್ಯ ಗ್ರಾಹಕ ನ್ಯಾಯಾಲಯದ ಆದೇಶವು “ಕಾನೂನು ಅರ್ಹತೆಗಿಂತ ಹೆಚ್ಚಾಗಿ ಸಹಾನುಭೂತಿಯ ಆಧಾರದ ಮೇಲಿದೆ ಎಂದು ಆರೋಪಿಸಿ ದೂರು ನೀಡಿತ್ತು.

ಮಗನನ್ನು ಆಸ್ಪತ್ರೆಗೆ ಕರೆತರುವಲ್ಲಿ ದೂರುದಾರರು ಸರಿಸುಮಾರು ಅರ್ಧ ಗಂಟೆ ವಿಳಂಬ ಮಾಡಿರುವುದನ್ನು ರಾಜ್ಯ ಆಯೋಗವು ನಿರ್ಲಕ್ಷಿಸಿದೆ ಎಂದು ಆಸ್ಪತ್ರೆಯು ವಾದಿಸಿತು.

ಮಧ್ಯಾಹ್ನ 1.40 ರ ಸುಮಾರಿಗೆ ಬಾಲಕ ಆಸ್ಪತ್ರೆಯಲ್ಲಿದ್ದರೂ ಮಗನಿಗೆ ಚಿಕಿತ್ಸೆ ನೀಡಲಿಲ್ಲ ಎಂಬುದು ಲ್ಯಾಂಡ್ಗೆ ವಾದಿಸಿದ್ದರು. ಇದಕ್ಕೆ ಪ್ರತಿಯಾಗಿ ಆಸ್ಪತ್ರೆಯು ರೋಗಿಯ ಸ್ಥಿತಿ ಗಂಭೀರವಾಗಿತ್ತು ಎಂದು ಹೇಳಿದೆ.

ಇದಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ಪರಿಶೀಲಿಸಿದ ಬಳಿಕ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಲವಾದ ಪುರಾವೆಗಳು ದೊರೆತಿದೆ. ವೈದ್ಯಕೀಯ ಪೇಪರ್‌ಗಳನ್ನು ಪರೀಕ್ಷಿಸಿದಾಗ ವೈದ್ಯರು “ಸಕಾಲಿಕ ಚಿಕಿತ್ಸೆ” ನೀಡಲು ವಿಫಲವಾಗಿರುವುದು ತಿಳಿದು ಬಂದಿದೆ. ಇಷ್ಟು ಮಾತ್ರವಲ್ಲದೆ ಸಂಬಂಧವಿಲ್ಲದ ವ್ಯಕ್ತಿಯನ್ನು ಬಾಲಕನ ಅಜ್ಜ ಎಂದು ಹೇಳಿ ಹೆಚ್ಚಿನ ಅಪಾಯದ ಒಪ್ಪಿಗೆ ನಮೂನೆಗೆ ಸಹಿ ಹಾಕಿಸಲಾಗಿದೆ.

ಅಲ್ಲದೇ ಈ ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಲು ಆಸ್ಪತ್ರೆ ವಿಫಲವಾಗಿರುವುದು ಮತ್ತೊಂದು ಲೋಪವಾಗಿದೆ ಎಂದು ನ್ಯಾಯಾಲಯ ತಿಳಿಸಿದ್ದು, ಆಸ್ಪತ್ರೆಗೆ ದಂಡ ವಿಧಿಸಿದೆ.

Continue Reading

ಕ್ರೈಂ

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Gold Seized: ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಸುಮಾರು 70 ಲಕ್ಷ ರೂ. ಮೌಲ್ಯದ ಚಿನ್ನವನ್ನು ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಇಂಟೆಲಿಜೆನ್ಸ್ ಯೂನಿಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Gold Seized
Koo

ತಿರುಚಿರಾಪಳ್ಳಿ: ದುಬೈ ನಿಂದ (dubai) ಆಗಮಿಸಿದ ಪ್ರಯಾಣಿಕನೊಬ್ಬ ಗುದನಾಳದಲ್ಲಿ (Rectum) ಬಚ್ಚಿಟ್ಟುಕೊಂಡು ತಂದಿದ್ದ 24 ಕ್ಯಾರೆಟ್ ನ ಒಟ್ಟು 997 ಗ್ರಾಂ ಚಿನ್ನವನ್ನು (Gold Seized) ಶನಿವಾರ ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 70.58 ಲಕ್ಷ ರೂ. ಗಳಾಗಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ (Air India Express) ದುಬೈನಿಂದ ತಿರುಚ್ಚಿಗೆ (Trichy) ಆಗಮಿಸಿದ ಪ್ರಯಾಣಿಕ ಗುದನಾಳದಲ್ಲಿ ಮೂರು ಪ್ಯಾಕೆಟ್‌ಗಳಲ್ಲಿ ಚಿನ್ನವನ್ನು 1081 ಗ್ರಾಂ ಪೇಸ್ಟ್‌ ಮಾಡಿ ಬಚ್ಚಿಟ್ಟು ತಂದಿದ್ದು, ಆತನನ್ನು ಏರ್ ಇಂಟೆಲಿಜೆನ್ಸ್ ಯೂನಿಟ್ ನ ಅಧಿಕಾರಿಗಳು ವಶಕ್ಕೆ ಪಡೆದಿದ್ದರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.


ಚೆನ್ನೈ ನಲ್ಲಿ 1.25 ಕೆಜಿ ಚಿನ್ನ ವಶ

ಮತ್ತೊಂದು ಘಟನೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಂತಾರಾಷ್ಟ್ರೀಯ ಟರ್ಮಿನಲ್‌ನ ಆಗಮನದ ಲಾಂಜ್‌ನಲ್ಲಿರುವ ಶೌಚಾಲಯದಲ್ಲಿ 85 ಲಕ್ಷ ರೂಪಾಯಿ ಮೌಲ್ಯದ 1.25 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ರೆಸ್ಟ್ ರೂಂನಲ್ಲಿ ಕಸದ ತೊಟ್ಟಿಯಲ್ಲಿ ಪ್ಯಾಕೇಜ್ ಇರುವುದನ್ನು ಗಮನಿಸಿದ ಸ್ವಚ್ಛತಾ ಸಿಬ್ಬಂದಿ ಸಿಐಎಸ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಯಾವುದೇ ಸ್ಫೋಟಕ ವಸ್ತು ಇರಬಹುದೆಂದು ಪಾರ್ಸೆಲ್ ಅನ್ನು ಸ್ಕ್ಯಾನ್ ಮಾಡಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ ಒಳಗೆ ಅಡಗಿಸಿಟ್ಟ ಚಿನ್ನವನ್ನು ಪತ್ತೆ ಹಚ್ಚಿ ಅನಂತರ ಹೆಚ್ಚುವರಿ ತನಿಖೆಗಾಗಿ ಕಸ್ಟಮ್ಸ್ ಅಧಿಕಾರಿಗಳಿಗೆ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಪ್ರಯಾಣಿಕನೊಬ್ಬ ಮುಖ ಮುಚ್ಚಿಕೊಂಡು ಪಾರ್ಸೆಲ್ ಅನ್ನು ಡಸ್ಟ್‌ಬಿನ್‌ನಲ್ಲಿ ಹಾಕಿರುವುದನ್ನು ತೋರಿಸಿದೆ.

ಈ ವರ್ಷದ ಮಾರ್ಚ್‌ನಲ್ಲಿ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಎಐಯು ಅಧಿಕಾರಿಗಳು 410 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದರು.

ಸಿಂಗಾಪುರದಿಂದ ಬಂದಿದ್ದ ಪ್ರಯಾಣಿಕರೊಬ್ಬರಿಂದ 26.62 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. 24 ಕ್ಯಾರೆಟ್ ನ ಈ ಚಿನ್ನವು 330 ಗ್ರಾಂ ಆಗಿತ್ತು. ಪೇಸ್ಟ್ ರೂಪದಲ್ಲಿ ತರಲಾಗಿತ್ತು. 22 ಸಾವಿರ ಮೌಲ್ಯದ 80 ಗ್ರಾಂ ಚಿನ್ನವನ್ನು ಸಿಂಗಾಪುರದಿಂದ ತಿರುಚ್ಚಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಬಟ್ಟೆಯೊಳಗೆ ಬಚ್ಚಿಟ್ಟುಕೊಂಡು ತಂದಿದ್ದ.

ತಮಿಳುನಾಡಿನ ವಾಹನದಲ್ಲಿ ಬರುತ್ತಿದ್ದ ಚಿನ್ನಾಭರಣ ವಶಕ್ಕೆ

ಇತ್ತೀಚೆಗಷ್ಟೇ ಬೆಂಗಳೂರು ನಗರದಲ್ಲಿ ಭಾರಿ ಮೊತ್ತದ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. 7.999 ಕೆ.ಜಿ. ಚಿನ್ನಾಭರಣ ಹಾಗು 46.700 ಕೆಜಿ ಬೆಳ್ಳಿ ಸೇರಿ ಸುಮಾರು ಐದು ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ಬೆಂಗಳೂರಿನ ವಿವೇಕ್​ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೀಝ್​ ಮಾಡಲಾಗಿತ್ತು.

ವಿವೇಕ್ ​ನಗರದ ಗಾಂಧಿ ಪ್ರತಿಮೆ ಬಳಿ ಇರುವ ಚೆಕ್​ ಪೋಸ್ಟ್​ ಬಳಿ ಚುನಾವಣಾ ಅಧಿಕಾರಿಗಳು ವಾಹನ ಪರಿಶೀಲನೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ಈಶರ್​ ವಾಹನದಲ್ಲಿ ಚಿನ್ನಾಭರಣ ಸಿಕ್ಕಿತ್ತು.

ಒಂದೇ ಒಂದು ಪತ್ರವನ್ನು ಹಿಡಿದಿದ್ದ ಮೂವರು ವ್ಯಕ್ತಿಗಳು, ಗಾಡಿಯಲ್ಲಿ ಚಿನ್ನಾಭರಣವಿದ್ದು ಅದನ್ನು ನಗರದ ವಿವಿಧೆಡೆ ವಿತರಿಸಲು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ಹೇಳಿದ್ದರು.

ತಮಿಳುನಾಡಿನ ಉದ್ಯಮಿಯೊಬ್ಬನ ಸೂಚನೆಯ ಮೇರೆಗೆ ಹಾಗೂ ಆತ ಕೊಟ್ಟ ಫೋನ್​ ನಂಬರ್​ನಲ್ಲಿರುವ ವ್ಯಕ್ತಿಯನ್ನು ಸಂಪರ್ಕ​​ ಮಾಡಿ ಚಿನ್ನಾಭರಣ ತಲುಪಿಸಲು ಅವರು ಬಂದಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಿವೇಕ್ ​ನಗರ ಪೊಲೀಸರು ವಶಕ್ಕೆ ಪಡೆದಿದ್ದರು.

Continue Reading
Advertisement
Priyanka Gandhi Rahul Gandhi
ದೇಶ28 mins ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್35 mins ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ35 mins ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 202437 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Gold Rate
ಪ್ರಮುಖ ಸುದ್ದಿ1 hour ago

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

ದೇಶ1 hour ago

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

Varalaxmi Sarathkumar negative comments on fiance
ಕಾಲಿವುಡ್1 hour ago

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Viral Video
ವೈರಲ್ ನ್ಯೂಸ್2 hours ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Outdoor Exercise
ಆರೋಗ್ಯ2 hours ago

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 202437 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ4 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202421 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌