Aero India 2023: ಏರೋ ಇಂಡಿಯಾದಿಂದ ಕರ್ನಾಟಕದ ಯುವಕರಿಗೆ ಹೆಚ್ಚಿನ ಉದ್ಯೋಗ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ - Vistara News

Aero India

Aero India 2023: ಏರೋ ಇಂಡಿಯಾದಿಂದ ಕರ್ನಾಟಕದ ಯುವಕರಿಗೆ ಹೆಚ್ಚಿನ ಉದ್ಯೋಗ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

ಈ ವರ್ಷ ಆರಂಭವಾಗುತ್ತಿರುವ ಏರೋ ಇಂಡಿಯಾ ( Aero India 2023) ಇಲ್ಲಿವರೆಗೆ ನಡೆದ ಅತಿ ದೊಡ್ಡ ಕಾರ್ಯಕ್ರಮ ಆಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದರು.

VISTARANEWS.COM


on

Rajnath singh says Aero India 2023 will generate more employment to karnataka youth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ಏರೋ ಇಂಡಿಯಾ ಆಯೋಜನೆ ಆಗುತ್ತಿರುವುದು ಇಲ್ಲಿನ ಕೌಶಲ್ಯಯುತ ಯುವಕರಿಗೆ ಉದ್ಯೋಗ ಸೃಜನೆ ಮಾಡಲು ಪೂರಕವಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರದಿಂದ ಆರಂಭವಾಗಲಿರುವ ಏರೋ ಇಂಡಿಯಾ 2023ರ (Aero India 2023) ಕಾರ್ಯಕ್ರಮದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಏರೋ ಇಂಡಿಯಾ ಆಯೋಜನೆಯು ರಕ್ಷಣಾ ಕ್ಷೇತ್ರಕ್ಕೆ ಬಹುದೊಡ್ಡ ಉತ್ತೇಜನ ನೀಡುತ್ತದೆ. ಜತೆಗೆ ಪ್ರಧಾನ ಮಂತ್ರಿಯವರು ನೀಡಿದ ಆತ್ಮನಿರ್ಭರ ಭಾರತದ ಪ್ರದರ್ಶನವಾಗುತ್ತದೆ. ನಾವು ಈ ಬಾರಿ ಬಹುದೊಡ್ಡ ಕಾರ್ಯಕ್ರಮ ಮಾಡುವ ಯೋಚನೆಯಿತ್ತು. ಈ ವರ್ಷ 100 ದೇಶಗಳ 800 ಎಕ್ಸಿಬಿಟರ್ಸ್‌ಗಳೊಂದಿಗೆ ನಡೆಯುತ್ತಿದೆ. ಇದು ದೇಶದಲ್ಲಿ ಇಲ್ಲಿವರೆಗಿನ ಅತಿ ದೊಡ್ಡ ಕಾರ್ಯಕ್ರಮ.

ನಮ್ಮ ದೇಶದ ಬೆಳವಣಿಗೆಗೆ ಕೊಡುಗೆ ನೀಡುವ ಅತಿ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿನ ಕೌಶಲ್ಯಯುತ ಮಾನವ ಸಂಪನ್ಮೂಲದ ಕಾರಣಕ್ಕೆ ಖಾಸಗಿ, ಸರ್ಕಾರಿ ಸಂಸ್ಥೆಗಳು ಇಲ್ಲಿ ನೆಲೆ ಕಂಡಿವೆ. ಇದೆಲ್ಲದರಿಂದಾಗಿ ಏರೋ ಸ್ಪೇಸ್‌ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಬೆಂಗಳೂರು, ಭವಿಷ್ಯದಲ್ಲಿ ವಿಶ್ವದ ಏರೋ ಸ್ಪೇಸ್‌ ಕೇಂದ್ರವಾಗಲಿದೆ ಎಂಬ ನಿರೀಕ್ಷೆಯಿದೆ. ಇದರಲ್ಲಿ ಕರ್ನಾಟಕ ಪೆವಿಲಿಯನ್‌ ಸಹ ಇರಲಿದೆ. ಹೊರಗಿನಿಂದ ಆಗಮಿಸುವ ಹೂಡಿಕೆಯಲ್ಲಿ ಹೆಚ್ಚಿನ ಅಂಶ ಕರ್ನಾಟಕದಲ್ಲಿ ಆಗುವ ಸಾಧ್ಯತೆಯಿದೆ. ಏರೋ ಇಂಡಿಯಾದಿಂದ ಕರ್ನಾಟಕದ ಯುವಕರಿಗೆ ಅತಿ ಹೆಚ್ಚು ಲಾಭ ಆಗುತ್ತದೆ ಎಂದರು.

ಇದನ್ನೂ ಓದಿ: Aero India 2023 : ಏರೋ ಇಂಡಿಯಾ ಶೋಗೆ ಪ್ರಧಾನಿ ಮೋದಿ ನಾಳೆ ಚಾಲನೆ, ಇಲ್ಲಿದೆ ವಿವರ

ಪದವಿಗಳು ಹೆಚ್ಚಾಗುತ್ತಿರುವುದು ಹೆಚ್ಚುತ್ತಿರುವ ನಿರುದ್ಯೋಗದ ಗುರುತು ಆಗಬಾರದು. ಇದೇ ಮಣ್ಣಿನ ಮಹಾನ್‌ ಪುತ್ರ ಸರ್‌ ಎಂ. ವಿಶ್ವೇಶ್ವರಯ್ಯ ಹೇಳಿದಂತೆ, ಉತ್ತಮ ದೇಶ ನಿರ್ಮಾಣಕ್ಕೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡಬೇಕು. ಇದರತ್ತ ಏರೋ ಇಂಡಿಯಾ ಪರಿಣಾಮಕಾರಿ ಆಗಲಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ದೇಶಗಳೊಂದಿಗೆ ನಮ್ಮ ಮನಸ್ಸು ಮತ್ತು ವಿಚಾರಗಳ ಸಂಬಂಧವೂ ಇದೆ. ಇದೇ ಕಾರಣಕ್ಕೆ ಏರೋ ಇಂಡಿಯಾ ಎಲ್ಲ ದಾಖಲೆಗಳನ್ನೂ ಮೀರಿ ಮುಂದುವರಿಯುತ್ತಿದೆ. ರಕ್ಷಣಾ ಕೈಗಾರಿಕೆ ಕ್ಷೇತ್ರಕ್ಕೆ ಉತ್ತೇಜನ ನೀಡಿದಷ್ಟೂ ದೇಶದ ಅಭಿವೃದ್ಧಿಗೆ ಸಹಾಯಕವಾಗುತ್ತದೆ. ಇಲ್ಲಿ ಸಂಶೋಧನೆ ನಡೆಸುವ ಅನೇಕ ತಂತ್ರಜ್ಞಾನಗಳು ಸಾಮಾನ್ಯ ಜಗತ್ತಿನಲ್ಲೂ ಉಪಯೋಗಕ್ಕೆ ಬರುತ್ತವೆ. ನಾವು ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ ಸಾಧಿಸುವುದರ ಜತೆಗೆ ದೇಶದ ಸಮಗ್ರ ಅಭಿವೃದ್ಧಿಯನ್ನು ಸಾಧಿಸಲು ಈ ಕಾರ್ಯಕ್ರಮ ಸಹಕಾರಿ ಎಂದರು.

ಹೊಸ ವಿಚಾರಗಳಿಗೆ ಆದ್ಯತೆ ನೀಡಿದ ಬಸವಣ್ಣ, ಬೆಂಗಳೂರು ಸ್ಥಾಪಿಸಿದ ಕೆಂಪೇಗೌಡರನ್ನು ಭಾಷಣದ ಆರಂಭದಲ್ಲಿ ರಾಜನಾಥ್‌ ಸಿಂಗ್‌ ಸ್ಮರಿಸಿದರು.

ವಿಂಗ್ಸ್‌ ಆಫ್‌ ಫ್ಯೂಚರ್‌
ಭಾರತದ ಪೆವಿಲಿಯನ್‌ನಲ್ಲಿ, ಭಾರತದ ಭಾವಿಷ್ಯದ ಸಾಮರ್ಥ್ಯವನ್ನು ತೋರಿಸಲಿದೆ. ಈಗಾಗಲೆ ಸ್ಥಾಪಿತವಾದ ಸಂಸ್ಥೆಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶೀಸಲಿವೆ. ರಕ್ಷಣಾ ಸಚಿವರ ಕಾನ್‌ಕ್ಲೇವ್‌ ಒಂದು ಬಹುಮುಖ್ಯ ಕಾರ್ಯಕ್ರಮ. ನಮ್ಮ ಮಿತ್ರ ದೇಶಗಳೊಂದಿಗೆ ರಕ್ಷಣಾ ಸಹಕಾರಕ್ಕೆ ಪೂರಕವಾಗಲಿದೆ. ಇದರ ಜತೆಗೆ ಸಿಇಒ ರೌಂಡ್‌ ಟೇಬಲ್‌ ಸಹ ನಡೆಯಲಿದೆ, ಇದೂ ಬಹುಮುಖ್ಯ ಭಾಗ. ಸ್ಟಾರ್ಟಪ್‌ ಮಂಥನ್‌ ಕಾರ್ಯಕ್ರಮದಲ್ಲಿ, ಯುವ ಉದ್ಯಮಿಗಳಿಗೆ ಪೂರಕ ವೇದಿಕೆ ಲಭಿಸಲಿದೆ.

ಭಾರತದಲ್ಲೇ ವಿಮಾನ ಉತ್ಪಾದನೆ ಆಗಲಿದೆ
ಇದಕ್ಕೂ ಮೊದಲು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, 14ನೇ ಬಾರಿ ಏರೋ ಇಂಡಿಯಾ ಆಯೋಜನೆಗೆ ಕರ್ನಾಟಕಕ್ಕೆ ಅವಕಾಶ ನೀಡಿರುವ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಧನ್ಯವಾದಗಳು.

ಏರೋ ಇಂಡಿಯಾವನ್ನು ಆಯೋಜಿಸುವ ಭಾರತದ ಸಾಮಮರ್ಥ್ಯವನ್ನು ಕೋವಿಡ್‌ ಪ್ರಶ್ನಿಸಿತು. ಪ್ಯಾರಿಸ್‌ ಏರ್‌ ಷೋ ರದ್ದಾಯಿತು. ಆದರೆ ಭಾರತದಲ್ಲಿ ನಡೆಯಿತು. ಏರೋ ಇಂಡಿಯಾ ಕಾರ್ಯಕ್ರಮವು ಅತ್ಯಂತ ದೊಡ್ಡದಾಗಿ ಆಯೋಜನೆ ಆಗುತ್ತಿದೆ. ಕಳೆದ್‌ ವರ್ಷ 23 ಸಾವಿರ ಚದರ ಮೀಟರ್‌ ವಿಸ್ತೀರ್ಣದಲ್ಲಿದ್ದ ಪ್ರದರ್ಶನ ವಿಸ್ತೀರ್ಣವು ಈ ಬಾರಿ 35 ಸಾವಿರ ಚದರ ಮೀಟರ್‌ ಆಗಿದೆ. ಹಾರಾಟ ಪ್ರದರ್ಶನ 67 ಇದೆ. 800 ಪ್ರದರ್ಶಕರು ಆಗಮಿಸುತ್ತಿದ್ದಾರೆ. ಕಳೆದ ಬಾರಿ 55 ದೇಶಗಳಿಂದ ಭಾಗಿಯಾಗಿದ್ದು, ಈ ಬಾರಿ 98 ದೇಶಗಳಿಂದ ಆಗಮಿಸಲಿದ್ದಾರೆ.

ವಾಯು ದಳವು ಯಾವ ಸಮಯಕ್ಕೆ ಆಗಮಿಸುತ್ತದೆ ಎನ್ನುವುದು ಯುದ್ಧದ ಫಲಿತಾಂಶವನ್ನು ನಿರ್ಧರಿಸುತ್ತದೆ. ವಾಯು ದಳವನ್ನು ಬಲಗೊಳಿಸುವುದು ನಿರಂತರ ಪ್ರಯತ್ನ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ರಕ್ಷಣಾ ಉತ್ಪಾದನೆ, ರಕ್ಷಣಾ ತಂತ್ರಜ್ಞಾನ ಉತ್ತೇಜನದಲ್ಲಿ ಅಗಾಧ ಬದಲಾವಣೆ ಆಗಿದೆ. ನಮ್ಮ ರಕ್ಷಣಾ ಅವಶ್ಯಕತೆಯ ಶೇ. 77 ಆಮದಾಗುತ್ತಿತ್ತು. ಈಗ ಶೇ. 67 ಉತ್ಪಾದನೆ ಮಾಡುವುದರೊಂದಿಗೆ ರಫ್ತನ್ನೂ ಮಾಡುತ್ತಿದ್ದೇವೆ.

ಏರೋ ಸ್ಪೇಸ್‌ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. 1940ರ ಅವಧಿಯಿಂದಲೂ ಏರೋ ಸ್ಪೇಸ್‌ ಕ್ಷೇತ್ರಕ್ಕೆ ಉತ್ತೇಜನ ಲಭಿಸುತ್ತಿದೆ. ಎಚ್‌ಎಎಲ್‌ ನಂತರದಲ್ಲಿ ಎನ್‌ಎಎಲ್‌, ಬಿಎಚ್‌ಇಎಲ್‌, ಇಸ್ರೊ ಸೇರಿ ಅನೇಕ ಸಂಸ್ಥೆಗಳು ಆರಂಭವಾಗಿದ್ದರಿಂದ ಸಂಶೋಧನೆ ಮತ್ತು ಅಭಿವೃದ್ಧಿಗೂ ಉತ್ತೇಜನ ಸಿಕ್ಕಿತು. ಪ್ರತಿ ದಶಕದಲ್ಲೂ ಬೆಂಗಳೂರಿನಲ್ಲಿ ಒಂದಲ್ಲ ಒಂದು ಪ್ರಮುಖ ಬೆಳವಣಿಗೆ ನಡೆಯುತ್ತಿದೆ. ಒಂದು ಪೂರಾ ವಿಮಾನವನ್ನು ಬೆಂಗಳೂರಿನಲ್ಲಿ ನಿರ್ಮಾಣ ಮಾಡಬೇಕು ಎನ್ನುವುದು ನಮ್ಮ ಕನಸಾಗಿದ್ದು, ಆ ದಿನ ಅತ್ಯಂತ ದೂರದಲ್ಲಿಲ್ಲ ಎಂದರು.

ಏರೋ ಇಂಡಿಯಾ ವಿಶೇಷತೆಗಳು
ಫೆಬ್ರವರಿ 14ರಂದು ನಡೆಯಲಿರುವ ರಕ್ಷಣಾ ಸಚಿವರ ಕಾನ್‌ಕ್ಲೇವ್‌ನಲ್ಲಿ 32 ವಿದೇಶಗಳ ರಕ್ಷಣಾ ಸಚಿವರು ಭಾಗವಹಿಸಲಿದ್ದಾರೆ. ಏರೋ ಇಂಡಿಯಾದಲ್ಲಿ 23 ದೇಶಗಳ ವಾಯು ದಳದ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Aero India

Aero india 2023 : ರಕ್ಷಣಾ ಇಲಾಖೆಯಿಂದ 32 ಕಂಪನಿಗಳ ಜತೆ ಒಪ್ಪಂದ

ಏರೋ ಇಂಡಿಯಾದಲ್ಲಿ (Aero india 2023) ರಕ್ಷಣಾ ವಲಯಕ್ಕೆ ಅಗತ್ಯಕ್ಕೆ ತಕ್ಕ ಹಾಗೆ ಒಂಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.

VISTARANEWS.COM


on

Aero India
Koo

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ (Aero india 2023) 35 ಕಂಪನಿಗಳ ಜತೆ ರಕ್ಷಣಾ ಇಲಾಖೆಯು ಒಪ್ಪಂದ ಮಾಡಿಕೊಂಡಿದೆ. ಬಂಧನ್ ಕಾರ್ಯಕ್ರಮದಡಿಯಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. 2,930.98 ಕೋಟಿ ರೂಪಾಯಿ ಮೊತ್ತದ ಒಪ್ಪಂದ ನಡೆದಿದೆ. ಕಾರ್ಯಕ್ರಮದಲ್ಲಿ ಒಟ್ಟು 266 ಕಂಪನಿಗಳು ಪಾಲ್ಗೊಂಡಿದ್ದವು.

ಒಪ್ಪಂದಗಳಿಗೆ ಸಹಿ ಹಾಕಿದ ಕಂಪನಿಗಳು

ಬೆಲಾಟೆಕ್ಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್-630 ಕೋಟಿ, ಏಡಿನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್-500 ಕೋಟಿ, ಫಿಕ್ಸಲ್ ಸ್ಪೇಸ್ ಇಂಡಿಯಾ ಪ್ರೈ.ಲಿ-300 ಕೋಟಿ, ಡೈನಾಮೆಟಿಕ್ ಟೆಕ್ನಾಲಜೀಸ್-250 ಕೋಟಿ, ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ &ಏರೋಸ್ಪೇಸ್ ಟೆಕ್ನಾಲಜೀಸ್ , TESCOM-100 ಕೋಟಿ, ಡೆಲ್ಪ್ಟ್ (ಜೆ.ಕೆ.ಪೇಪರ್ ಲಿ.)-100 ಕೋಟಿ, ನೆಕ್ಸ್ಟ್ ಬಿಗ್ ಇನೋವೇಷನ್ ಲ್ಯಾಬ್ಸ್ ಲಿ.-100 ಕೋಟಿ, SASMOS HET ಟೆಕ್ನಾಲಜಿಸ್ ಲಿ.-75 ಕೋಟಿ, MS ವೇವ್ಸ್ ಮಷಿನ್-50 ಕೋಟಿ, ಭೂಮಿ ಎನ್ ಟೆಕ್ ಇಕ್ವಿಪ್ ಮೆಂಟ್ಸ್ ಪ್ರೈ.ಲಿ-50 ಕೋಟಿ, ಏರೋ ಪ್ಲಾಟಿನ್ ಟೆಕ್ನಾಲಜಿಸ್ ಪ್ರೈ.ಲಿ-30 ಕೋಟಿ, ಕಾಸ್ಟ್ ಕ್ರಾಪ್ಟ್-30 ಕೋಟಿ, ಡಕಂ ಏರೋಸ್ಪೇಸ್ ಟೆಕ್ನಾಲಜೀಸ್ ಪ್ರೈ.ಲಿ-25 ಕೋಟಿ, ಎಲ್ಡಾಸ್ ಟೆಕ್ನಾಲಜಿ-23 ಕೋಟಿ, ಟೆಕ್ಸಲ್ ಎಂಜಿನಿಯರ್ಸ್-20 ಕೋಟಿ.

ಇದನ್ನೂ ಓದಿ : Aero India 2023 : ಏರೋ ಇಂಡಿಯಾದಲ್ಲಿ ಅಮೆರಿಕದ ಅತಿ ದೊಡ್ಡ ತಂಡ, ನೂತನ F-35 ಯುದ್ಧ ವಿಮಾನ ಪ್ರದರ್ಶನ

ವೈಭವ್ ಎಂಟರ್ ಪ್ರೈಸಸ್-20 ಕೋಟಿ, ಹಿಮಾನ್ಸಿ ಥರ್ಮಲ್ ಸೊಲ್ಯೂಷನ್ಸ್-16.28 ಕೋಟಿ, ಎವಿಟಮ್ ಟೆಕ್ನಾಲಜೀಸ್ -16 ಕೋಟಿ, ಆರವ ಏರೋಸ್ಪೇಸ್-16 ಕೋಟಿ, SST ಕಟಿಂಗ್ ಟೂಲ್ಸ್-15 ಕೋಟಿ, ಆಲ್ಟೀಸ್ ಏರೋಸ್ಪೇಸ್ ಪ್ರೈ.ಲಿ-15 ಕೋಟಿ, ಉದಯ್ ಎಂಟರ್ ಪ್ರೈಸಸ್-15 ಕೋಟಿ, ಸೋಮಾ ಆಟೋಮೇಶನ್-12 ಕೋಟಿ, IIGP ವಾಲ್ವ್ ಟೆಕ್ನಾಲಜೀಸ್ ಪ್ರೈ.ಲಿ-12 ಕೋಟಿ, ಲವೀರಾ ಟೆಕ್ನಾಲಜಿ ಪ್ರೈ.ಲಿ-11 ಕೋಟಿ, ಗರುಡ ಏರೋಟೆಕ್-10 ಕೋಟಿ, G S ಗಿಯರ್ಸ್ ಪ್ರೈ.ಲಿ-8 ಕೋಟಿ, ಇನ್ಫಿನಿಟಿ ಏರೋಟೆಕ್-7 ಕೋಟಿ, ಡಟಾಕ್ಯೂ ಸರ್ವೀಸಸ್ ಪ್ರೈ.ಲಿ-2.70 ಕೋಟಿ, ಬುರ್ಜಿ ಏರೋಸ್ಪೇಸ್-2 ಕೋಟಿ, ಜನರಸ್ ಏರೋಸ್ಪೇಸ್ & ಇನ್ಪಾರ್ಮೇಶನ್ ಟೆಕ್ನಾಲಜಿ ಪ್ರೈ.ಲಿ-320 ಕೋಟಿ, ಏಸೋನಾಟೆಕ್ ಮ್ಯಾನಿಫ್ಯಾಕ್ಚರಿಂಗ್ ಪ್ರೈ.ಲಿ-150 ಕೋಟಿ.

Continue Reading

Aero India

Aero India 2023: ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

Aero India 2023: ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ದೇಶೀಯ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

Approval for release of funds for various infrastructure projects in state cabinet meeting
Koo

ಬೆಂಗಳೂರು: ರಕ್ಷಣಾ ವಲಯದಲ್ಲಿ (Aero India 2023) ಬಂಧನ್‌ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧವಾಗಿದ್ದು, ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65 ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಏರೋ ಇಂಡಿಯಾ 2023ರ ಬಂಧನ್ – ಒಪ್ಪಂದಗಳಿಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

ರಕ್ಷಣೆ ಮತ್ತು ಏರೋಸ್ಪೇಸ್ ವಲಯವು ಸ್ಥಾಪಿತ ಕ್ಷೇತ್ರವಾಗಿದ್ದು, ಇದರಲ್ಲಿ ಅತ್ಯಂತ ಪರಿಣಿತರು ಮಾತ್ರ ಕೆಲಸವನ್ನು ಸಂಪೂರ್ಣಗೊಳಿಸಬಲ್ಲರು. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದೊಂದಿಗೆ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ರಕ್ಷಣಾ ವಲಯವು ತೆರೆದುಕೊಂಡಿದೆ. ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಬೇಡಿಕೆಯ ಶೇ.80 ರಷ್ಟನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಆದರೆ, ಈಗ ಪ್ರಧಾನಿಗಳ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ದೇಶದಲ್ಲಿಯೇ ತಯಾರಿಕೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ | Karnataka Budget: ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಬೇಕು ಪ್ರತ್ಯೇಕ ಅನುದಾನ: ಸಿಎಂಗೆ ಪ್ರೊ. ಎಂ.ಆರ್.‌ ದೊರೆಸ್ವಾಮಿ ಪತ್ರ

ನಮ್ಮ ಉತ್ಪಾದನೆ ಸಾಮರ್ಥ್ಯ ಅಂದುಕೊಂಡದ್ದಕ್ಕಿಂತ ಹೆಚ್ಚಿದೆ

ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ನಮ್ಮ ದೇಶದ ಉತ್ಪಾದನಾ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ. ಎಂಎಸ್ಎಂಇ ಕೂಡ ಇದನ್ನು ಉತ್ಪಾದನೆ ಮಾಡಬಲ್ಲುದಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ರಕ್ಷಣಾ ವಸ್ತುಗಳ ಉತ್ಪಾದನಾ ಸಂಸ್ಥೆಗಳು ಅತ್ಯುನ್ನತ ತಂತ್ರಜ್ಞಾನವನ್ನು ಹೊಂದಿದ್ದು, ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲುದಾಗಿದೆ ಎಂದು ಹೇಳಿದರು.

ರಕ್ಷಣಾ ಕ್ಷೇತ್ರದಲ್ಲಿ ವಿಫುಲ ಅವಕಾಶ

ಉತ್ಪಾದನಾ ವಲಯದಲ್ಲಿ ಡೊಮೈನ್ ಬದಲಾವಣೆಯಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಿವೆ. ಆದ್ದರಿಂದ ನಾವು ಮಹತ್ವಾಕಾಂಕ್ಷೆಯಿಂದ ವೈಜ್ಞಾನಿಕವಾಗಿ ಯೋಚನೆ ಮಾಡಬೇಕಿದೆ. ಈ ಎಲ್ಲ ವಿಷಯಗಳನ್ನು ಬಂಧನ್ ಹೆಸರಲ್ಲಿ ನಾವು ಒಟ್ಟಿಗೆ ತಂದಿದ್ದೇವೆ. ಇಂದು ಸಹಿ ಆಗಿರುವ ಎಲ್ಲ ಒಪ್ಪಂದಗಳು ಭವಿಷ್ಯದ ಅಗತ್ಯ, ಬೆಳವಣಿಗೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಾಕ್ಷಿಯಾಗಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ | Payment aggregator : ರಿಲಯನ್ಸ್‌, ಜೊಮ್ಯಾಟೊ ಸೇರಿ 32 ಕಂಪನಿಗಳಿಗೆ ಪೇಮೆಂಟ್‌ ಅಗ್ರಿಗೇಟರ್‌ ಲೈಸೆನ್ಸ್ ವಿತರಣೆ

32 ಒಪ್ಪಂದಗಳಿಗೆ ರಾಜ್ಯ ಸಹಿ

ಬೆಂಗಳೂರಿನಲ್ಲಿ ಏರೋ ಸ್ಪೇಸ್ ಪಾರ್ಕ್ ಸ್ಥಾಪನೆ ಮತ್ತು ಅದರ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರದ ಒಟ್ಟು ರಕ್ಷಣಾ ಉತ್ಪಾದನೆಯಲ್ಲಿ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ ಸಂಸ್ಥೆಗಳು ಶೇ.65 ಪಾಲನ್ನು ಪೂರೈಸುತ್ತಿದೆ. 2900 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹೂಡಿಕೆಯ 32 ಒಪ್ಪಂದಗಳಿಗೆ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಸಹಿ ಹಾಕಿವೆ. ಈ ಏರೋ ಇಂಡಿಯಾ ಪ್ರದರ್ಶನ “ಟಾಕ್ ಆಫ್ ದಿ ಟೌನ್” ಆಗಿದೆ ಎಂದು ಸಿಎಂ ಹೇಳಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮಾನೆ, ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

Continue Reading

Aero India

Aero India 2023: ಏರೋಸ್ಪೇಸ್ ವಲಯದಲ್ಲಿ ಕರ್ನಾಟಕ ನಂ.1 ಆಗಲು ಅರ್ಹ: ಸಿಎಂ ಬೊಮ್ಮಾಯಿ

ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.

VISTARANEWS.COM


on

CM Basavaraj Bommai says Karnataka deserves to be no.1 in aerospace sector:
Koo

ಬೆಂಗಳೂರು: ಏರೋಸ್ಪೇಸ್ (Aero India 2023) ವಲಯದಲ್ಲಿ ಲಂಡನ್ ಮತ್ತು ಸಿಂಗಾಪುರದ ನಂತರ ಕರ್ನಾಟಕ ರಾಜ್ಯವಿದ್ದು, ಕರ್ನಾಟಕ ನಂ.1 ಸ್ಥಾನಕ್ಕೇರಲು ಎಲ್ಲ ಅರ್ಹತೆ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮಾತನಾಡಿ, ಬೆಂಗಳೂರು ಸತತ 14 ಬಾರಿ ಏರ್ ಶೋ ಏರ್ಪಡಿಸಿದೆ. ದೇಶದ ಯಾವುದೇ ರಾಜ್ಯ ಇಷ್ಟೊಂದು ಏರ್ ಶೋ ಏರ್ಪಡಿಸಿಲ್ಲ. ಈ ಬಾರಿ ಅತಿ ದೊಡ್ಡ ಶೋ, ಹೆಚ್ಚಿನ ಉದ್ಯಮಿಗಳು ಭಾಗವಹಿಸುತ್ತಿದ್ದು, ಹೆಚ್ಚಿನ ಪ್ರದರ್ಶನಗಳು ನಡೆಯುತ್ತಿದೆ ಎಂದರು.

ಬೆಂಗಳೂರಿನಲ್ಲಿ ಅಪಾರ ಅವಕಾಶಗಳು ಇವೆ. ಎಂಜಿನಿಯರ್‌ಗಳು, ತಂತ್ರಜ್ಞರ ನಿರಂತರ ಶ್ರಮದಿಂದ ಏರ್ ಶೋ ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಹಿರಿಯರು 1960ರಲ್ಲಿ ಇಲ್ಲಿ ಬಂಡವಾಳ ಹೂಡುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸ ತಂತ್ರಜ್ಞಾನ ಸಾಕಷ್ಟು ಬದಲಾವಣೆ ತಂದಿದೆ. ರಾಜ್ಯದ ಅಧಿಕಾರಿಗಳು ಯಶಸ್ಬಿಯಾಗಿ ಏರ್ ಶೋ ಆಯೋಜನೆ ಮಾಡಿದ್ದಾರೆ ಎಂದು ಅಭಿನಂದಿಸಿದರು.‌

ನಮ್ಮ ರಾಜ್ಯ ಯುವ ಪ್ರತಿಭಾವಂತ ಉದ್ಯಮಿಗಳು, ತಂತ್ರಜ್ಞರು, ಉದ್ಯಮಗಳು ಬೆಳೆಯಲು ಕಾರಣರಾಗಿದ್ದಾರೆ. ಯುವ ಪ್ರತಿಭಾವಂತರು ಇರುವುದರಿಂದ ಏರೊ ಸ್ಪೇಸ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಏರೊಸ್ಪೇಸ್ ನೀತಿ ರಾಜ್ಯದಲ್ಲಿದ್ದು, ಸಣ್ಣ ಕೈಗಾರಿಕೆಗಳು ಹಾಗೂ ಬೃಹತ್ ಉದ್ಯಮಗಳಿಗೆ ಸೂಕ್ತ ಅವಕಾಶಗಳಿವೆ. ನಾವು ಶೇ.65 ರಷ್ಟು ರಕ್ಷಣಾ ಪರಿಕರ ಉತ್ಪಾದನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶೇ.70 ರಷ್ಟು ಉತ್ಪಾದನೆ ಮಾಡುತ್ತೇವೆ.
ಈಗಾಗಲೇ ಅನೇಕರು ಇಲ್ಲಿ ಬಂಡವಾಳ ಹೂಡಿದ್ದಾರೆ, ಇನ್ನು ಅನೇಕರು ಬಂಡವಾಳ ಹೂಡುವ ಇಚ್ಛೆ ಹೊಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Sevalal Jayanthi: ಸಂತ ಸೇವಾಲಾಲ್‌ ಮಹಾಮಠ ಪ್ರತಿಷ್ಠಾನಕ್ಕೆ ₹10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ

ಯುಎಸ್ ಕಾನ್ಸುಲೇಟ್ ರಾಯಭಾರಿ ಬೆಂಗಳೂರು ಏರೋ ಇಂಡಿಯಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಲ್ಲಿ ಉತ್ತಮ ಪರಿಸರ, ಆರ್ಥಿಕ ಪರಿಸ್ಥಿತಿಯಿದ್ದು, ನಮ್ಮ ಬೆಳವಣಿಗೆಯಲ್ಲಿ ನೀವು ಭಾಗಿದಾರರಾಗಿ ಎಂದು ಕರೆ ನೀಡಿದರು.

ಬೃಹತ್ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣಾ ಹಾಜರಿದ್ದರು.

Continue Reading

Aero India

Aero India 2023: ಭಾರತದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಹೂಡಿಕೆದಾರರಿಗೆ ಸರ್ಕಾರ ಆಹ್ವಾನ

ಭಾರತದಲ್ಲಿ ರಕ್ಷಣಾ ವಲಯದ ಉದ್ದಿಮೆಗೆ ಸರ್ಕಾರ ಉತ್ತೇಜನ ಮುಂದುವರಿಸಲಿದೆ. ಇದು ದೇಶವನ್ನು ಸ್ವಾವಲಂಬಿಯಾಗಿಸುವುದಲ್ಲದೆ, ಉದ್ಯೋಗ ಸೃಷ್ಟಿಗೆ ಕೂಡ ಸಹಕಾರಿ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Aero India 2023) ವಿವರಿಸಿದ್ದಾರೆ.

VISTARANEWS.COM


on

rajanath singh
Koo

ಬೆಂಗಳೂರು: ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ತೆರೆಯುವಂತೆ ಜಾಗತಿಕ ಮಟ್ಟದ ಹೂಡಿಕೆದಾರರು, ಉದ್ಯಮಿಗಳು, ನಾನಾ ಉತ್ಪನ್ನಗಳ ಮೂಲ ಉತ್ಪಾದಕರಿಗೆ (Global original equipment manufactures) ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಹ್ವಾನಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ-ಇಂಡಿಯಾ ಏರ್‌ ಶೋದ (Aero India 2023) ನೇಪಥ್ಯದಲ್ಲಿ ಬಹು ರಾಷ್ಟ್ರೀಯ ಕಂಪನಿಗಳ ಸಿಇಒಗಳನ್ನು ಅವರು ಭೇಟಿಯಾದರು.

ಜಾಗತಿಕ ಉತ್ಪಾದಕರು ಭಾರತದಲ್ಲಿ ಜಂಟಿಯಾಗಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಬಹುದು. ಇಲ್ಲಿಂದಲೇ ಜಗತ್ತಿಗೆ ರಫ್ತು ಮಾಡಬಹುದು ಎಂದು ಅವರು ಆಹ್ವಾನಿಸಿದರು. ಜನರಲ್‌ ಆಟೋಮಿಕ್ಸ್‌, ಬೋಯಿಂಗ್‌, ಎಂಬ್ರೇರ್‌, ರಾಫೆಲ್‌ ಅಡ್ವಾನ್ಸ್‌ಡ್‌ ಡಿಫೆನ್ಸ್‌ ಸಿಸ್ಟಮ್ಸ್‌ ಸೇರಿದಂತೆ ಹಲವಾರು ಕಂಪನಿಗಳ ಮುಖ್ಯಸ್ಥರು ಈ ಸಂದರ್ಭ ಸಭೆಯಲ್ಲಿ ಭಾಗವಹಿಸಿದ್ದರು.

ಉದ್ದಿಮೆ ಸ್ಥಾಪಿಸುವವರಿಗೆ ಭೂಮಿ, ಮೂಲಸೌಕರ್ಯಕ್ಕೆ ತಗಲುವ ವೆಚ್ಚ, ಸರ್ಕಾರದ ರೀತಿ-ನೀತಿ, ಉತ್ತೇಜನ, ಮಾನವ ಸಂಪನ್ಮೂಲದ ಲಭ್ಯತೆ, ದೇಶೀಯ ರಕ್ಷಣಾ ವಲಯದ ಮಾರುಕಟ್ಟೆಯ ವಿವರಗಳನ್ನು ಸಚಿವರು ನೀಡಿದರು.

ಭಾರತವು ರಕ್ಷಣಾ ವಲಯದ ಉತ್ಪಾದನೆಯನ್ನು ಉತ್ತೇಜಿಸುತ್ತೆ. ಭಾರತ ಈ ವಲಯದಲ್ಲಿ ಸ್ವಾವಲಂಬಿಯಾಗಲು ಹಾಗೂ ಉದ್ಯೋಗ ಸೃಷ್ಟಿಗೆ ಇದು ಮಹತ್ತರ ಪಾತ್ರ ವಹಿಸಲಿದೆ ಎಂದರು. ರಕ್ಷಣಾ ಉದ್ಯಮ ಕಾರಿಡಾರ್‌ಗಳ ಸ್ಥಾಪನೆಗೆ ಉತ್ತರಪ್ರದೇಶ ಮತ್ತು ತಮಿಳುನಾಡು ಸರ್ಕಾರಗಳು ಘೋಷಿಸಿರುವ ಇನ್ಸೆಂಟಿವ್‌ಗಳನ್ನೂ ಸಚಿವರು ಪ್ರಸ್ತಾಪಿಸಿದರು.

ಸ್ವದೇಶಿ ಎಲ್‌ಸಿಎ ಎಂಜಿನ್‌ ಉತ್ಪಾದನೆಗೆ ಸಿದ್ಧತೆ: ಭಾರತವು ಶೀಘ್ರದಲ್ಲಿಯೇ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ಎಂಜಿನ್‌ಗಳನ್ನು ತಯಾರಿಸಲಿದೆ ಎಂದು (light combat aircraft engine) ಡಿಆರ್‌ ಡಿಒ ಮುಖ್ಯಸ್ಥ ಸಮೀರ್ ಕಾಮತ್‌ ತಿಳಿಸಿದ್ದಾರೆ.

Continue Reading
Advertisement
Lok Sabha Election
ಪ್ರಮುಖ ಸುದ್ದಿ19 seconds ago

Lok Sabha Election : ಇಂದೋರ್​ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯೂ ಕಣದಿಂದ ಹಿಂದಕ್ಕೆ; ಬಿಜೆಪಿಗೆ ಸೇರ್ಪಡೆ!

PM Narendra modi in Bagalakote and Attack on Congress
Lok Sabha Election 20246 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

Family Drama Trailer Out
ಸಿನಿಮಾ15 mins ago

Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

gold rate today rakul
ಚಿನ್ನದ ದರ19 mins ago

Gold Rate Today: ಚಿನ್ನದ ಬೆಲೆಯಲ್ಲಿ ₹330 ಇಳಿಕೆ; ಇಂದಿನ ಬಂಗಾರ- ಬೆಳ್ಳಿ ದರಗಳು ಇಲ್ಲಿವೆ

Narenda Modi Sonia gandhi
ದೇಶ24 mins ago

Narendra Modi: ರಾಜಕೀಯ ದ್ವೇಷ ಮರೆತು ಸೋನಿಯಾ, ರಾಹುಲ್‌ಗೆ ಸಹಾಯ; ಹೀಗ್ಯಾಕಂದ್ರು ಪ್ರಧಾನಿ ಮೋದಿ?

dheeren rajkumar announces a new film change his name
ಸ್ಯಾಂಡಲ್ ವುಡ್42 mins ago

Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

MS Dhoni
Latest52 mins ago

MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

Mahesh Babu shares sweet moments with sister Manjula and Prabhas aunt
South Cinema59 mins ago

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Kavya Maran
Latest1 hour ago

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ವೈರಲ್ ನ್ಯೂಸ್1 hour ago

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20246 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 hour ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202420 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202423 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌