ಬೆಂಗಳೂರಿನಲ್ಲೇ ಆ್ಯಪಲ್ ಫೋನ್ ನಿರ್ಮಾಣ, 300 ಎಕರೆಯಲ್ಲಿ ಫಾಕ್ಸ್‌ಕಾನ್ ಘಟಕ, ಚೀನಾಗೆ ಹಿನ್ನಡೆ - Vistara News

ದೇಶ

ಬೆಂಗಳೂರಿನಲ್ಲೇ ಆ್ಯಪಲ್ ಫೋನ್ ನಿರ್ಮಾಣ, 300 ಎಕರೆಯಲ್ಲಿ ಫಾಕ್ಸ್‌ಕಾನ್ ಘಟಕ, ಚೀನಾಗೆ ಹಿನ್ನಡೆ

ಆ್ಯಪಲ್‌(Apple) ಕಂಪನಿಯ ಫೋನ್‌ಗಳನ್ನು ನಿರ್ಮಾಣ ಮಾಡುವ ಫಾಕ್ಸ್‌ಕಾನ್ ಟೆಕ್ನಾಲಜಿ (Foxconn) ಬೆಂಗಳೂರಿನಲ್ಲಿ ತನ್ನ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡಲಿದೆ. ಕಂಪನಿಯ ಈ ನಡೆಯು ಚೀನಾಕ್ಕೆ ಭಾರೀ ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

Apple phone Manufacturing in Bengaluru, Foxconn plant in 300 acres, setback for China
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚೀನಾ ಮತ್ತು ಅಮೆರಿಕ ಮಧ್ಯೆ ಸಂಘರ್ಷ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆ್ಯಪಲ್ (Apple) ಕಂಪನಿಯು ತನ್ನ ಉತ್ಪಾದನಾ ಚಟುವಟಿಕೆಗಳನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡುತ್ತಿದೆ. ಆ್ಯಪಲ್‌ ಫೋನ್‌ಗಳನ್ನು ಸ್ಥಳೀಯವಾಗಿ ಉತ್ಪಾದಿಸುವ ಪಾಲುದಾರ ಕಂಪನಿಯಾಗಿರುವ ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್(Foxconn Technology Group), ಬೆಂಗಳೂರು (Bengaluru)ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುಮಾರು 300 ಎಕರೆ ಪ್ರದೇಶದಲ್ಲಿ ಉತ್ಪಾದನಾ ಘಟಕ ಆರಂಭಿಸಲಿದೆ. ಇದಕ್ಕಾಗಿ ಸುಮಾರು 700 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ತೈವಾನ್ ಮೂಲದ ಫಾಕ್ಸ್‌ಕಾನ್ ಟೆಕ್ನಾಲಜಿ ಕಂಪನಿಯು ತನ್ನ ಪ್ರಮುಖ ಘಟಕವಾದ ಹೊನ್ ಹೈ ಪ್ರೆಸಿಶನ್ ಇಂಡಸ್ಟ್ರಿ ಕಂಪನಿಗಾಗಿ ಹೆಸರುವಾಸಿಯಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದ ಸಮೀಪವಿರುವ 300 ಎಕರೆ ಪ್ರದೇಶದಲ್ಲಿ ಐಫೋನ್ ಭಾಗಗಳನ್ನು ತಯಾರಿಸಲು ಉತ್ಪಾದನಾ ಘಟಕವನ್ನು ಆರಂಭಿಸಲು ಮುಂದಾಗಿದೆ. ಈ ಉತ್ಪದನಾ ಘಟಕದಲ್ಲಿ ಕಾರ್ಖಾನೆಯು ಆ್ಯಪಲ್‌ನ ಹ್ಯಾಂಡ್‌ಸೆಟ್‌ಗಳನ್ನು ಅಸೆಂಬಲ್ ಮಾಡಲಾಗುತ್ತದೆ. ಜತೆಗೆ, ಫಾಕ್ಸ್‌ಕಾನ್ ತನ್ನ ಹೊಸ ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದ ಬಿಡಿ ಭಾಗಗಳನ್ನು ಇದೇ ಘಟಕದಲ್ಲಿ ಉತ್ಪಾದಿಸಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಹೂಡಿಕೆಯು ಭಾರತದಲ್ಲಿ ಇಲ್ಲಿಯವರೆಗಿನ ಫಾಕ್ಸ್‌ಕಾನ್‌ನ ಅತಿದೊಡ್ಡ ಏಕೈಕ ಹೊಡಿಕೆಯಾಗಲಿದೆ. ಇದರೊಂದಿಗೆ, ಚೀನಾವು ಗ್ರಾಹಕ ಎಲೆಕ್ಟ್ರಾನಿಕ್ಸ್‌ನ ವಿಶ್ವದ ಅತಿದೊಡ್ಡ ಉತ್ಪಾದಕ ಎಂಬ ಸ್ಥಾನಮಾನವನ್ನು ಕಳೆದುಕೊಳ್ಳಬಹುದು.

ಆ್ಯಪಲ್ ಮತ್ತು ಇತರ ಅಮೆರಿಕ ಕಂಪನಿಗಳು ಭಾರತ ಮತ್ತು ವಿಯೆಟ್ನಾಂನಂಥ ಪರ್ಯಾಯ ಸ್ಥಳಗಳನ್ನು ತಮ್ಮ ಉತ್ಪಾದನಾ ಸ್ಥಳಗವಾಗಿ ಅನ್ವೇಷಿಸುತ್ತಿವೆ. ಇದು ಕೊರೋನಾ ಸಾಂಕ್ರಾಮಿಕ ಮತ್ತು ಉಕ್ರೇನ್‌ನಲ್ಲಿನ ಯುದ್ಧದಿಂದಾಗಿ ಜಾಗತಿಕ ಪೂರೈಕೆ ಸರಪಳಿಯ ಮೇಲೆ ಹೊಡೆತ ಬಿದ್ದಿದೆ. ಹಾಗಾಗಿ, ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ತಯಾರಿಸುವ ಒಟ್ಟು ವ್ಯವಸ್ಥೆಯ ಬಗ್ಗೆ ಮರುರೂಪಿಸುವ ಸಕಾಲ ಇದಾಗಿದೆ. ಹಾಗಾಗಿ, ಭಾರತವು ಈ ಕಂಪನಿಗಳಿಗೆ ನೆಚ್ಚಿನ ತಾಣವಾಗಿ ಮಾರ್ಪಟ್ಟಿದೆ.

ಭಾರತದಲ್ಲಿ ಸುಮಾರು ಒಂದು ಲಕ್ಷ ಉದ್ಯೋಗ!

ಬೆಂಗಳೂರು ವಿಮಾನ ನಿಲ್ದಾಣ ಬಳಿ 300 ಎಕರೆ ಜಾಗದಲ್ಲಿ ನಿರ್ಮಾಣವಾಗಲಿರುವ ಘಟಕದಿಂದ ಭಾರತದಲ್ಲಿ ಫಾಕ್ಸ್‌ಕಾನ್ ಸುಮಾರು ಒಂದು ಲಕ್ಷ ಉದ್ಯೋಗವನ್ನು ಸೃಷ್ಟಿಸಲಿದೆ ಎಂದು ಹೇಳಲಾಗುತ್ತಿದೆ. ಚೀನಾದ ಝೆಂಗ್‌ಝೌನಲ್ಲಿರುವ ಕಂಪನಿಯ ವಿಸ್ತಾರವಾದ ಐಫೋನ್ ಅಸೆಂಬ್ಲಿ ಸಂಕೀರ್ಣವು ಈ ಸಮಯದಲ್ಲಿ ಸುಮಾರು 200,000 ಉದ್ಯೋಗಿಗಳನ್ನು ಹೊಂದಿದೆ. ಗರಿಷ್ಠ ಉತ್ಪಾದನೆಯ ಅವಧಿಯಲ್ಲಿ ಉದ್ಯೋಗಗಳು ಇನ್ನೂ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಕೋವಿಡ್-ಸಂಬಂಧಿತ ಅಡೆತಡೆಗಳಿಂದಾಗಿ ಝೆಂಗ್‌ಝೌ ಸ್ಥಾವರದಲ್ಲಿನ ಉತ್ಪಾದನೆಯು ವರ್ಷಾಂತ್ಯದ ರಜಾದಿನಗಳಿಗಿಂತ ಮುಂಚಿತವಾಗಿ ಸ್ಥಗಿತಗೊಂಡಿದೆ. ಇದರಿಂದ ಆ್ಯಪಲ್ ತನ್ನ ಚೀನಾ-ಅವಲಂಬಿತ ಪೂರೈಕೆ ಸರಪಳಿಯನ್ನು ಮರು-ಪರಿಶೀಲಿಸಲು ಉತ್ತೇಜಿಸಿತು. ಅದರ ಪರಿಣಾಮವಾಗಿ ಫಾಕ್ಸ್‌ಕಾನ್ ಈಗ ಭಾರತದತ್ತ ಮುಖ ಮಾಡಿದ್ದು, ಬೆಂಗಳೂರಲ್ಲಿ ತನ್ನ ಉತ್ಪಾದನಾ ಘಟಕವನ್ನು ಆರಂಭಿಸಲಿದೆ.

ರಾಜೀವ್ ಚಂದ್ರಶೇಖರ್ ಅವರಿಂದ ಸ್ವಾಗತ

ಕರ್ನಾಟಕದಲ್ಲಿ ಆ್ಯಪಲ್ ಮೊಬೈಲ್ ಉತ್ಪಾದನಾ ಘಟಕವು 300 ಎಕರೆಯಲ್ಲಿ ಆರಂಭವಾಗಲಿದೆ. ಇದು ಕರ್ನಾಟಕದ ಒಂದು ಟ್ರಿಲಿಯನ್ ಕನಸನ್ನ ನನಸುಮಾಡುವತ್ತ ಸಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಈ ಕಾರ್ಯ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಗೆ ಧನ್ಯವಾದ. ಇದರಿಂದ ರಾಜ್ಯದಲ್ಲಿ ಹೂಡಿಕೆಯ ಜೊತೆಗೆ ಸ್ಥಳಿಯ ಜನರಿಗೆ ಉದ್ಯೋಗ ಅವಕಾಶ ಸಿಗಲಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ ಹೇಳಿದ್ದಾರೆ.

ಇದನ್ನೂ ಓದಿ: Semiconductor : ವೇದಾಂತ-ಫಾಕ್ಸ್‌ಕಾನ್‌ನಿಂದ ದೇಶದ ಮೊಟ್ಟ ಮೊದಲ ಸೆಮಿಕಂಡಕ್ಟರ್‌ ಘಟಕ ಅಂತಿಮ, ಸ್ಥಳ ಎಲ್ಲಿ?

ಸಿಎಂ ಬಸವರಾಜ ಬೊಮ್ಮಾಯಿ ಹರ್ಷ

ರಾಜ್ಯದಲ್ಲೇ ಶೀಘ್ರವೇ ಆ್ಯಪಲ್‌ ಫೋನ್‌ಗಳು ನಿರ್ಮಾಣವಾಗಲಿವೆ. ಒಂದು ಲಕ್ಷ ಉದ್ಯೋಗ ಸೃಷ್ಟಿಯ ಜತೆಗೆ ಕರ್ನಾಟಕ ಅತಿ ದೊಡ್ಡ ಅವಕಾಶಗಳನ್ನು ಸೃಷ್ಟಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೂರದರ್ಶಿತ್ವದಲ್ಲಿ, 2025ರ ಹೊತ್ತಿಗೆ 5 ಟ್ರಿಲಿಯನ್ ಆರ್ಥಿಕತೆಗೆ ನಮ್ಮ ಪಾಲಿನ ಕೊಡುಗೆಯನ್ನು ನೀಡಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

Wayanad Landslide: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಮೃತರ ಸಂಖ್ಯೆ 350 ದಾಟಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ. ಅವರಿಗಾಗಿ ಸತತ 6ನೇ ದಿನ ಹುಡುಕಾಟ ಮುಂದುವರಿದಿದೆ. ಈ ಮಧ್ಯೆ ವಿದೇಶಿ ವಿದ್ಯಾರ್ಥಿಗಳ ಮನಸ್ಸು ವಯನಾಡಿಗಾಗಿ ಮಿಡಿದಿದ್ದು, ಧಾವಿಸಿ ಬಂದಿದ್ದಾರೆ. ಸದಾ ರಕ್ಷಣಾ ಕಾರ್ಯಾಚರಣೆಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ. ಇಂಗ್ಲೆಂಡ್‌ನ ಆಕ್ಸ್‌ಫರ್ಡ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರಾದ ಅಮೇಲಿಯಾ ರೋಕ್‌, ಶಲೆಟ್‌ ಸತರ್ಲಾಂಟ್‌ , ಮಿಲಿಸೆಂಟ್‌ ಕ್ರೂ ವಯನಾಡಿನ ದುರಂತಕ್ಕಾಗಿ ಮಿಡಿದ್ದಾರೆ. ತಮ್ಮಿಂದಾದ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಮೃತರ ಸಂಖ್ಯೆ 350 ದಾಟಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ (Wayanad Landslide). ಅವರಿಗಾಗಿ ಸತತ 6ನೇ ದಿನ ಹುಡುಕಾಟ ಮುಂದುವರಿದಿದೆ. ಭೀಕರ ಪ್ರವಾಹಕ್ಕೆ ಎರಡು-ಮೂರು ಗ್ರಾಮಗಳ ಕೊಚ್ಚಿ ಹೋಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಈ ಮಧ್ಯೆ ಇಡೀ ದೇಶದವೇ ವಯನಾಡಿನ ಸಹಾಯಕ್ಕೆ ಧಾವಿಸಿದೆ. ವಿವಿಧ ಭಾಗಗಳ ಜನರು ಸಹಾಯಹಸ್ತ ಚಾಚುತ್ತಿದ್ದಾರೆ. ಈ ಮಧ್ಯೆ ವಿದೇಶಿ ವಿದ್ಯಾರ್ಥಿಗಳ ಮನಸ್ಸು ವಯನಾಡಿಗಾಗಿ ಮಿಡಿದಿದ್ದು, ಧಾವಿಸಿ ಬಂದಿದ್ದಾರೆ. ಸದಾ ರಕ್ಷಣಾ ಕಾರ್ಯಾಚರಣೆಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.

ಇಂಗ್ಲೆಂಡ್‌ನ ಆಕ್ಸ್‌ಫರ್ಡ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರಾದ ಅಮೇಲಿಯಾ ರೋಕ್‌, ಶಲೆಟ್‌ ಸತರ್ಲಾಂಟ್‌ , ಮಿಲಿಸೆಂಟ್‌ ಕ್ರೂ ವಯನಾಡಿನ ದುರಂತಕ್ಕಾಗಿ ಮಿಡಿದ್ದಾರೆ. ತಮ್ಮಿಂದಾದ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಆಕ್ಸ್‌ಫರ್ಡ್‌ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ಇವರು ಇಂಟರ್ನ್‌ಶಿಪ್‌ ಮಾಡಲು ಒಂದು ತಿಂಗಳ ಹಿಂದೆ ಕೇರಳಕ್ಕೆ ಆಗಮಿಸಿದ್ದರು. ಇವರು ಸದ್ಯ ತ್ರಿಶೂರ್‌ನ ಮಿನಲೂರಿನಲ್ಲಿ ಉಳಿದುಕೊಂಡಿದ್ದಾರೆ. ಕೇರಳಕ್ಕೆ ಆಗಮಿಸಿ ಕೆಲವೇ ದಿನಗಳಾಗಿದ್ದರೂ ಇಲ್ಲಿನ ಪ್ರಕೃತಿ, ಜನರು, ಸಂಸ್ಕೃತಿಯನ್ನು ಇಷ್ಟಪಟ್ಟಿರುವುದಾಗಿ ತಿಳಿಸಿರುವ ಇವರು ಇದೀಗ ಇಲ್ಲಿನ ದುಸ್ಥಿತಿ ನೋಡಿ ಮನಸ್ಸು ಒದ್ದಾಡುತ್ತಿದೆ. ಹೀಗಾಗಿ ತಮ್ಮಿಂದಾದ ದಹಾಯ ಮಾಡುವುದಾಗಿ ತಿಳಿಸಿದ್ದಾರೆ.

ʼʼನಾವು ಈ ರಾಜ್ಯವನ್ನು ಪ್ರೀತಿಸುತ್ತೇವೆ. ಇಲ್ಲಿನ ಜೀವನ ರೀತಿಯನ್ನು, ಶಿಕ್ಷಣವನ್ನು, ಸ್ತ್ರೀ ಸಬಲೀಕರಣವನ್ನು, ಪ್ರಕೃತಿಯನ್ನು ಇಷ್ಟಪಡುತ್ತೇವೆ. ಆದ್ದರಿಂದ ವಯನಾಡಿನ ದುಃಖ ನಮ್ಮದೂ ಹೌದುʼʼ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ಇದೀಗ ಈ ವಿದೇಶಿ ವಿದ್ಯಾರ್ಥಿನಿಯರು ಕೇರಳಕ್ಕಾಗಿ, ವಯನಾಡಿಗಾಗಿ ಸ್ಪಂದಿಸುತ್ತಿರುವ ರೀತಿಯನ್ನು ಗಮನಿಸಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರೂ ಈ ನಡೆಯನ್ನು ಶ್ಲಾಘಿಸಿದ್ದಾರೆ. ಈ ಮಾಸಾಂತ್ಯಕ್ಕೆ ಇಂಗ್ಲೆಂಡ್‌ಗೆ ಮರಳಲಿರುವ ಅವರು ಅದುವರೆಗೆ ವಯನಾಡಿನಲ್ಲಿ ಸೇವೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ವಯನಾಡು ಈ ದುರಂತದಿಂದ ಚೇತರಿಸಿಕೊಂಡ ಬಳಿಕ ಮತ್ತೊಮ್ಮೆ ಭೇಟಿ ನೀಡುವುದಾಗಿಯೂ ಅವರು ತಿಳಿಸಿದ್ದಾರೆ.

ಸಂತ್ರಸ್ತರಿಗೆ ತಾತ್ಕಾಲಿಕ ಮನೆ ಒದಗಿಸಲು ಆನ್‌ಲೈನ್‌ ಪೋರ್ಟಲ್‌

ವಯನಾಡು ದುರಂತದಿಂದ ಮನೆ-ಮಠ ಕಳೆದುಕೊಂಡ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಒದಗಿಸಲು ವಿದೇಶಗಳಲ್ಲಿ ಇರುವ ಮಲೆಯಾಳಿಗಳು ಮುಂದಾಗಿದ್ದಾರೆ. ಇದಕ್ಕಾಗಿ ಆನ್‌ಲೈನ್‌ ಪೋರ್ಟಲ್‌ ಒಂದನ್ನು ಆರಂಭಿಸಿದ್ದಾರೆ. ʼsupportwayanad.com’ ಹೆಸರಿನ ಈ ಫ್ಲಾಟ್‌ಫಾರಂನಲ್ಲಿ ಮನೆ ಅಗತ್ಯ ಇರುವವರು ಮತ್ತು ಮನೆ ಒದಗಿಸಲು ತಯಾರಿರುವ ದಾನಿಗಳು ಹೆಸರು ನೋಂದಾಯಿಸಬಗುದು ಎಂದು ಮೂಲಗಳು ತಿಳಿಸಿವೆ.

ವಿದೇಶಗಳಲ್ಲಿ ನೆಲೆಸಿರುವ ಸದ್ಯ ಖಾಲಿ ಇರುವ ಮನೆಗಳನ್ನು ಗುರುತಿಸುವ ಉದ್ದೇಶದಿಂದ ಈ ಫ್ಲಾಟ್‌ಫಾರಂ ಆರಂಭಿಸಲಾಯಿತಾದರೂ ಈಗ ತಮ್ಮ ಮನೆಯಲ್ಲಿ ಆಶ್ರಯ ನೀಡಲು ತಯಾರಿರುವವರೂ ಇದನ್ನು ಬಳಸಬಹುದಾಗಿದೆ. ಕ್ರಮೇಣ ಸರ್ಕಾರದ ಸೌಲಭ್ಯಗಳನ್ನೂ ಇದರಲ್ಲಿ ಸೇರಿಸಲು ಉದ್ದೇಶಿಸಲಾಗಿದೆ. ʼʼಈ ಪೋರ್ಟಲ್‌ ಮೂಲಕ ಖಾಲಿ ಮನೆಗಳನ್ನು ನೋಂದಾಯಿಸಬಹುದು. ಈ ಮೂಲಕ ಸಂತ್ರಸ್ತರಿಗೆ ಆಶ್ರಯ ಕಲ್ಪಿಸಬಹುದುʼʼ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Continue Reading

ವೈರಲ್ ನ್ಯೂಸ್

Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

Abu Salem: 1993ರ ಮುಂಬೈ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂ ನನ್ನು ಶನಿವಾರ ದೆಹಲಿಯಿಂದ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮನ್ಮಾಡ್‌ಗೆ ರೈಲಿನಲ್ಲಿ ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಬಳಿಕ ಪೊಲೀಸ್ ವ್ಯಾನ್‌ನಲ್ಲಿ ಆತನನ್ನು ನಾಸಿಕ್ ರಸ್ತೆಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಮನ್ಮಾಡ್ ರೈಲ್ವೆ ನಿಲ್ದಾಣಕ್ಕೆ ಅಬು ಸಲೇಂನನ್ನು ಕರೆದುಕೊಂಡು ಬರುವ ವಿಚಾರವನ್ನು ಅತ್ಯಂತ ಗೌಪ್ಯವಾಗಿ ಇಡಲಾಗಿತ್ತು.

VISTARANEWS.COM


on

Abu Salem
Koo

ಮುಂಬೈ: 1993ರ ಮುಂಬೈ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂ (Abu Salem)ನನ್ನು ಶನಿವಾರ ದೆಹಲಿಯಿಂದ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮನ್ಮಾಡ್‌ (Manmad)ಗೆ ರೈಲಿನಲ್ಲಿ ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಬಳಿಕ ಪೊಲೀಸ್ ವ್ಯಾನ್‌ನಲ್ಲಿ ಆತನನ್ನು ನಾಸಿಕ್ ರಸ್ತೆಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯದಲ್ಲಿ ವೈರಲ್‌ ಆಗಿದೆ (Viral Video).

ಮನ್ಮಾಡ್ ರೈಲ್ವೆ ನಿಲ್ದಾಣಕ್ಕೆ ಅಬು ಸಲೇಂನನ್ನು ಕರೆದುಕೊಂಡು ಬರುವ ವಿಚಾರವನ್ನು ಅತ್ಯಂತ ಗೌಪ್ಯವಾಗಿ ಇಡಲಾಗಿತ್ತು. ಆದರೆ ನವದೆಹಲಿ-ಬೆಂಗಳೂರು-ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಿಂದ ಮನ್ಮಾಡ್‌ಗೆ ಸ್ಟೇಷನ್‌ನಲ್ಲಿ ಅಬು ಸಲೇಂ ಇಳಿದಾಗ ಜನ ಸಮೂಹವೇ ನೆರೆದಿತ್ತು.

ಬಾಂಬ್ ಸ್ಫೋಟದಲ್ಲಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಸಲೇಂ ಕಳೆದ ತಿಂಗಳು ‘ಸುರಕ್ಷತಾ ಕಾರಣಗಳನ್ನು’ ಉಲ್ಲೇಖಿಸಿ ತಲೋಜಾ ಕೇಂದ್ರ ಕಾರಾಗೃಹದಿಂದ ನಾಸಿಕ್ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸುವುದನ್ನು ತಡೆಯಲು ಪ್ರಯತ್ನಿಸಿದ್ದ. ಈ ಬಗ್ಗೆ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಆರಂಭಿಕ ಮೇಲ್ಮನವಿಯನ್ನು ಸೆಷನ್ಸ್ ನ್ಯಾಯಾಲಯವು ಜೂನ್ 25ರಂದು ನಿರಾಕರಿಸಿತ್ತು. ಆದರೆ ನ್ಯಾಯಾಲಯವು ಜುಲೈ 3ರವರೆಗೆ ವರ್ಗಾವಣೆಯನ್ನು ವಿಳಂಬಗೊಳಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು.

ಪೋರ್ಚುಗಲ್‌ನಲ್ಲಿ ಆಶ್ರಯ ಪಡೆದಿದ್ದ ಪಾತಕಿ

ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಗ್ಯಾಂಗ್‌ಸ್ಟರ್‌ ಅಬು ಸಲೇಂ ಪೋರ್ಚುಗಲ್‌ನಲ್ಲಿ ಆಶ್ರಯ ಪಡೆದಿದ್ದ. ಆತನನ್ನು ಅಲ್ಲಿಂದ ಗಡಿಪಾರು ಮಾಡಿ ತರಲು ಕೇಂದ್ರ ಸರ್ಕಾರ ಹರಸಾಹಸವನ್ನೇ ನಡೆಸಿತ್ತು. ಕೊನೆಗೆ ಪೋರ್ಚುಗಲ್‌ ಸರ್ಕಾರದೊಂದಿಗಿನ ಸಂಧಾನದಲ್ಲಿ ಆರೋಪಿಗೆ 25 ವರ್ಷಕ್ಕಿಂತ ಹೆಚ್ಚು ಅವಧಿಯ ಶಿಕ್ಷೆ ವಿಧಿಸುವುದಿಲ್ಲ, 25 ವರ್ಷದ ಶಿಕ್ಷೆಯ ಬಳಿಕ ಬಂಧಮುಕ್ತಗೊಳಿಸಲಾಗುವುದು ಎಂದು ವಾಗ್ದಾನ ನೀಡಲಾಗಿತ್ತು. ಜತೆಗೆ ಆತನಿಗೆ ಮರಣದಂಡನೆ ಶಿಕ್ಷೆ ನೀಡುವುದಿಲ್ಲ ಎಂದು ಭರವಸೆ ನೀಡಲಾಗಿತ್ತು. ಹೀಗಾಗಿ 2005ರ ನವೆಂಬರ್‌ 5ರಂದು ಅಬು ಸಲೇಂನನ್ನು ಭಾರತಕ್ಕೆ ಕರೆ ತರಲಾಗಿತ್ತು. ಈ ವಾಗ್ದಾನದ ಅವಧಿ 2030ರವರೆಗೆ ಜಾರಿಯಲ್ಲಿರುತ್ತದೆ.

ಈ ನಡುವೆ 1995ರಲ್ಲಿ ನಡೆದ ಮುಂಬೈ ಮೂಲದ ಬಿಲ್ಡರ್‌ ಪ್ರದೀಪ್‌ ಜೈನ್‌ ಅವರ ಕೊಲೆಗೆ ಸಂಬಂಧಿಸಿ ಟಾಡಾ ಕೋರ್ಟ್‌ 2005ರ ಫೆಬ್ರವರಿ 25ರಂದು ತೀರ್ಪು ನೀಡಿದೆ. ಇದರಲ್ಲಿ ಸಲೇಂ ಮತ್ತು ಆತನ ಚಾಲಕ ಮೆಹದಿ ಹಸನ್‌ಗೆ ಜೀವನಪೂರ್ತಿ ಜೈಲು ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: ಅಬು ಸಲೇಂನನ್ನು ಜೀವನಪೂರ್ತಿ ಜೈಲಲ್ಲಿ ಇರಿಸುವಂತಿಲ್ಲ, 25 ವರ್ಷದ ಬಳಿಕ ಬಿಡುಗಡೆ ಮಾಡಲೇಬೇಕೆಂದ ಸುಪ್ರೀಂ

ಇದನ್ನು ಪ್ರಶ್ನಿಸಿ ಅಬು ಸಲೇಂ ಎರಡು ವರ್ಷಗಳ ಹಿಂದೆ ಸುಪ್ರೀಂಕೋರ್ಟ್‌ ಮೊರೆ ಹೊಕ್ಕಿದ್ದ. ಇದನ್ನು ಪರಿಗಣಿಸಿದ ಕೋರ್ಟ್‌ ಮಹತ್ವದ ತೀರ್ಪನ್ನು ನೀಡಿ, ಕೇಂದ್ರ ಸರಕಾರವು ಪೋರ್ಚುಗಲ್‌ ಸರಕಾರಕ್ಕೆ ನೀಡಿರುವ ವಾಗ್ದಾನವನ್ನು ಮುರಿಯುವಂತಿಲ್ಲ. ಶಿಕ್ಷೆಯ ಅವಧಿ ಪೂರ್ಣಗೊಳ್ಳುತ್ತಿದ್ದಂತೆಯೇ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಕೈಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ವಚನ ಬದ್ಧತೆ ಮತ್ತು ಸಂವಿಧಾನದ 72ನೇ ವಿಧಿಯ ಅಡಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಸರಕಾರ ರಾಷ್ಟ್ರಪತಿಗಳ ಸಲಹೆಯನ್ನು ಕೋರಬಹುದು ಎಂದು ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಮತ್ತು ಎಂ.ಎಂ.ಸುಂದರೇಶ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠ ಹೇಳಿತ್ತು.

Continue Reading

ದೇಶ

Wall collapsed: ದೇಗುಲದ ಗೋಡೆ ಕುಸಿದು 9 ಮಕ್ಕಳ ದಾರುಣ ಸಾವು, ಹಲವರ ಸ್ಥಿತಿ ಗಂಭೀರ

Wall collapsed: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ದೇವಸ್ಥಾನದಲ್ಲಿ ಗೋಡೆ ಕುಸಿದು(Wall collapsed) ಎಂಟು ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯ ನಡೆಸಿದರು. ಗೋಡೆಯ ಕುಸಿತದ ನಂತರ ಅವಶೇಷಗಳನ್ನು ತೆಗೆದುಹಾಕಲು ಕೆಲಸ ಮಾಡುತ್ತಿರುವ ಅರ್ಥ್‌ ಮೂವರ್ ಕಾರ್ಯನಿರ್ಹಿಸುತ್ತಿದೆ.

VISTARANEWS.COM


on

Koo

ಭೋಪಾಲ್‌: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ದೇವಸ್ಥಾನದಲ್ಲಿ ಗೋಡೆ ಕುಸಿದು(Wall collapsed) 9 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಾಹಪುರದ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಈ ದಾರುಣ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಳಿಕ ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯ ನಡೆಸಿದರು. ಗೋಡೆಯ ಕುಸಿತದ ನಂತರ ಅವಶೇಷಗಳನ್ನು ತೆಗೆದುಹಾಕಲು ಕೆಲಸ ಮಾಡುತ್ತಿರುವ ತಂಡ ಚುರುಕಿನಿಂದ ಕಾರ್ಯನಿರ್ಹಿಸುತ್ತಿದೆ. ಮೃತ ಮಕ್ಕಳು 10ರಿಂದ 15 ವರ್ಷದವರಾಗಿದ್ದಾರೆ. ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಇಂದೋರ್​​ನಲ್ಲಿ ಕೆಲವು ತಿಂಗಳ ಹಿಂದೆ ಇಂತಹದ್ದೇ ಒಂದು ಘಟನೆ ನಡೆದಿತ್ತು. ಶ್ರೀ ಬೆಳೆಶ್ವರ ಮಹಾದೇವ ಜುಲೇಲಾಲ್​ ದೇವಸ್ಥಾನದಲ್ಲಿ ಮೆಟ್ಟಿಲು ಬಾವಿ ಕುಸಿದ ಅವಘಡದಲ್ಲಿ 35 ಜನ ಮೃತಪಟ್ಟಿದ್ದರು, ಈ ದೇವಸ್ಥಾನದ ಒಳಭಾಗದಲ್ಲಿರುವ ಈ ಮೆಟ್ಟಿಲು ಬಾವಿಯನ್ನು ಸಿಮೆಂಟ್ ಸ್ಲ್ಯಾಬ್​​ನಿಂದ ಮುಚ್ಚಿಡಲಾಗಿತ್ತು. ಮಾ.30ರಂದು ಶ್ರೀರಾಮನವಮಿ ಆಚರಣೆ ಪ್ರಯುಕ್ತ ಇದೇ ಸ್ಲ್ಯಾಬ್​​ ಮೇಲೆ ಕುಳಿತು ಹವನ ನಡೆಸಲಾಗುತ್ತಿತ್ತು. ಅದೇ ವೇಳೆ ಆ ಭಾಗ ಕುಸಿದುಬಿದ್ದಿದೆ ಎಂದು ಹೇಳಲಾಗಿದೆ. ಮೆಟ್ಟಿಲು ಬಾವಿ ಕುಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಪ್ರಾರಂಭದಲ್ಲಿ 13 ಮೃತದೇಹಗಳು ಸಿಕ್ಕಿದ್ದವು. ಬಳಿಕ ಈ ಸಾವಿನ ಸಂಖ್ಯೆ 35ಕ್ಕೆ ಏರಿಕೆಯಾಗಿತ್ತು.

ದೇವಸ್ಥಾನದಲ್ಲಿರುವ ಈ ಕಲ್ಯಾಣಿ ಅಥವಾ ಮೆಟ್ಟಿಲು ಬಾವಿಯನ್ನು ಸಿಮೆಂಟ್​ ಸ್ಲ್ಯಾಬ್​​ನಿಂದ ಮುಚ್ಚಲಾಗಿತ್ತು. ಅದಕ್ಕೆ ಕಬ್ಬಿಣದ ಸರಳುಗಳು, ರಾಡ್​​ಗಳ ಬೆಂಬಲಕೊಟ್ಟು ಭದ್ರ ಮಾಡಲಾಗಿತ್ತು. ಆದರೆ ದೇವಸ್ಥಾನ ಸುಮಾರು 60ವರ್ಷ ಹಳೆಯದ್ದು ಎನ್ನಲಾಗಿದೆ. ಅಷ್ಟಕ್ಕೂ ಈ ಮೆಟ್ಟಿಲ ಬಾವಿಗೆ ಮುಚ್ಚುಗೆ ಮಾಡಿದ್ದು ಯಾವಾಗ ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಶ್ರೀರಾಮನವಮಿ ದಿನ ಅಪಾರಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಇದೇ ಸ್ಲ್ಯಾಬ್​​ ಅನೇಕರು ಕುಳಿತಿದ್ದರು. ಇದರಿಂದ ಭಾರ ತಾಳಲಾರದೆ ಕುಸಿದುಬಿದ್ದಿದೆ. ಬಾವಿಗೆ ಬಿದ್ದವರು ಒಂದಷ್ಟು ಜನರಾದರೆ, ಕೆಲವರು ಆ ಕಬ್ಬಿಣದ ಸರಳು ತಾಗಿ, ಗಾಯಗೊಂಡು ಮೃತಪಟ್ಟಿದ್ದಾಗಿ ವರದಿಯಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​​ ಅವರು ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದರು. ಈ ಬಾವಿಯಿದ್ದಂತೆ ಅಲ್ಲಿ ದೇವಸ್ಥಾನ ಕಟ್ಟಿದ್ದು ಹೇಗೆ ಎಂದೂ ಪ್ರಶ್ನಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳ ಕುಟುಂಬಕ್ಕೆ 50 ಸಾವಿರ ರೂ. ಘೋಷಿಸಿದ್ದರು.

ಇದನ್ನೂ ಓದಿ: Duniya Vijay: ವಿಜಯ್ ನಟಿಸಿ, ನಿರ್ದೇಶಿಸಿರುವ ‘ಭೀಮ ಚಿತ್ರದ  ಟ್ರೈಲರ್‌ ಔಟ್‌; ಕ್ರೇಜ್‌ ಹೆಚ್ಚಿಸಿದ ʻಸಲಗʼ!

Continue Reading

ದೇಶ

BSF Chief: ಬಿಎಸ್‌ಎಫ್‌ ನೂತನ ಮುಖ್ಯಸ್ಥರಾಗಿ ದಲ್ಜಿತ್‌ ಸಿಂಗ್‌ ಚೌಧರಿ ನೇಮಕ

BSF Chief: ಇನ್ನು ಈ ಬಗ್ಗೆ ಕೇಂದ್ರ ಗೃಹಸಚಿವಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ನಿತಿನ್‌ ಅಗರ್ವಾಲ್‌ ಅವರ ಸ್ಥಾನಕ್ಕೆ ಐಪಿಎಸ್‌(IPS) ಅಧಿಕಾರಿ ದಲ್ಜಿತ್‌ ಸಿಂಗ್‌ ಚೌಧರಿ ಅವರನ್ನು ನೇಮಿಸಲಾಗಿದೆ. ಹಾಲಿ ಮಹಾನಿರ್ದೇಶಕ ನಿತಿನ್ ಅಗರ್ವಾಲ್ ಅವರನ್ನು ಕೇರಳದ ಕೇಡರ್‌ಗೆ ಅಕಾಲಿಕವಾಗಿ ಕಳುಹಿಸಿದ ಒಂದು ದಿನದ ನಂತರ ಚೌಧರಿ ಅವರನ್ನು ಬಿಎಸ್‌ಎಫ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

VISTARANEWS.COM


on

BSF Chief
Koo

ನವದೆಹಲಿ: ಗಡಿ ಭದ್ರತಾ ಪಡೆ(BSF Chief)ಯ ಮಹಾನಿರ್ದೇಶಕ ನಿತಿನ್ ಅಗರ್ವಾಲ್ ಮತ್ತು ಉಪ ವಿಶೇಷ ಮಹಾನಿರ್ದೇಶಕ (ಪಶ್ಚಿಮ) ವೈ.ಬಿ.ಖುರಾನಿಯಾ ಅವರನ್ನು ಆಯಾ ಸ್ಥಾನದಿಂದ ಕಿತ್ತು ಹಾಕಿರುವ ಬೆನ್ನಲ್ಲೇ ಐಪಿಎಸ್‌(IPS) ಅಧಿಕಾರಿ ದಲ್ಜಿತ್‌ ಸಿಂಗ್‌ ಚೌಧರಿ(Daljit Singh Chawdhary) ಬಿಎಸ್‌ಎಫ್‌ನ ನೂತನ ನಿರ್ದೇಶಕರಾಗಿ ನೇಮಗೊಂಡಿದ್ದಾರೆ. ಚೌಧರಿ ಪ್ರಸ್ತುತ ಸಶಸ್ತ್ರ ಸೀಮಾ ಬಲ(SSB) ಮುಖ್ಯಸ್ಥರಾಗಿ ಕಾರ್ಯ ನಿರ್ಹಿಸುತ್ತಿದ್ದರು.

ಇನ್ನು ಈ ಬಗ್ಗೆ ಕೇಂದ್ರ ಗೃಹಸಚಿವಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ನಿತಿನ್‌ ಅಗರ್ವಾಲ್‌ ಅವರ ಸ್ಥಾನಕ್ಕೆ ಐಪಿಎಸ್‌(IPS) ಅಧಿಕಾರಿ ದಲ್ಜಿತ್‌ ಸಿಂಗ್‌ ಚೌಧರಿ ಅವರನ್ನು ನೇಮಿಸಲಾಗಿದೆ. ಹಾಲಿ ಮಹಾನಿರ್ದೇಶಕ ನಿತಿನ್ ಅಗರ್ವಾಲ್ ಅವರನ್ನು ಕೇರಳದ ಕೇಡರ್‌ಗೆ ಅಕಾಲಿಕವಾಗಿ ಕಳುಹಿಸಿದ ಒಂದು ದಿನದ ನಂತರ ಚೌಧರಿ ಅವರನ್ನು ಬಿಎಸ್‌ಎಫ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಕೇಂದ್ರವು 1990 ರ ಐಪಿಎಸ್ ಅಧಿಕಾರಿ ಯೋಗೇಶ್ ಖುರಾನಿಯಾ ಅವರನ್ನು ಅವರ ಒಡಿಶಾ ಕೇಡರ್‌ಗೆ ವಾಪಸ್ ಕಳುಹಿಸಿದ್ದು, ಅವರನ್ನು ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ನೇಮಿಸಲಾಗಿದೆ.

ಜಮ್ಮು ಪ್ರದೇಶದಲ್ಲಿ ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯುದ್ದಕ್ಕೂ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು, ಸೇನೆ ಮತ್ತು ಭದ್ರತಾ ಸಿಬ್ಬಂದಿ ಹಾಗೂ ನಾಗರಿಕರ ಹತ್ಯೆಗೆ ಕಾರಣವಾಗಿರುವ ಹಿನ್ನಲೆಯಲ್ಲಿ ಇಬ್ಬರು ಉನ್ನತ ಬಿಎಸ್‌ಎಫ್ ಅಧಿಕಾರಿಗಳನ್ನು ತೆಗೆದುಹಾಕುವ ಕೇಂದ್ರದ ನಿರ್ಧಾರವು ಬಂದಿದೆ. BSF ಭಾರತದ ಪಶ್ಚಿಮ ಭಾಗದಲ್ಲಿ ಭಾರತ-ಪಾಕಿಸ್ತಾನ ಮುಂಭಾಗವನ್ನು ಮತ್ತು ಪೂರ್ವದಲ್ಲಿ ಬಾಂಗ್ಲಾದೇಶವನ್ನು ರಕ್ಷಿಸುತ್ತದೆ.

ಯಾರು ಈ ದಲ್ಜಿತ್‌ ಸಿಂಗ್‌ ಚೌಧರಿ?

ದಲ್ಜಿತ್ ಸಿಂಗ್ ಚೌಧರಿ ಉತ್ತರ ಪ್ರದೇಶ ಕೇಡರ್‌ನ 1990 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಅವರ 34 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ, ಅವರು ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿರುವ ಉತ್ತರಪ್ರದೇಶದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಚೌಧರಿ ಅವರು 2017 ರಿಂದ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) ನಲ್ಲಿ ಹೆಚ್ಚುವರಿ ಮಹಾನಿರ್ದೇಶಕರಾಗಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನಲ್ಲಿ SDG ಆಗಿ ಕೇಂದ್ರೀಯ ನಿಯೋಜನೆಯಲ್ಲಿ ಸೇವೆ ಸಲ್ಲಿಸಿದ ಹಿರಿಮೆಯನ್ನು ಹೊಂದಿದ್ದಾರೆ.

ಹಿರಿಯ IPS ಅಧಿಕಾರಿ ಜನವರಿ 23, 2024 ರಂದು DG SSB ಯ ಜವಾಬ್ದಾರಿಯನ್ನು ವಹಿಸಿಕೊಂಡರು. ಇದು ನೇಪಾಳ ಮತ್ತು ಭೂತಾನ್‌ನೊಂದಿಗೆ ಭಾರತದ ಮುಂಭಾಗಗಳನ್ನು ಕಾಪಾಡುವ ಪಡೆಯಾಗಿದೆ.

ಇದನ್ನೂ ಓದಿ: Western Ghats: ಪಶ್ಚಿಮ ಘಟ್ಟದ 57 ಸಾವಿರಕ್ಕೂ ಹೆಚ್ಚು ಚ.ಕಿಮೀ. ಪರಿಸರ ಸೂಕ್ಷ್ಮ ಪ್ರದೇಶ; ಕೇಂದ್ರದಿಂದ ಕರಡು ಅಧಿಸೂಚನೆ

Continue Reading
Advertisement
Wayanad Landslide
ದೇಶ58 seconds ago

Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

Vastu Tips
ಧಾರ್ಮಿಕ9 mins ago

Vastu Tips: ಮನೆ ಸಂತೋಷದ ತಾಣವಾಗಬೇಕೆಂದರೆ ಮಲಗುವ ಕೋಣೆ ಹೀಗಿರಲಿ

Filmfare South 2024 Daredevil Mustafa is the best film, Rakshit Shetty is the best actor
ಸ್ಯಾಂಡಲ್ ವುಡ್12 mins ago

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; `ಡೇರ್​ಡೆವಿಲ್ ಮುಸ್ತಫಾ’ ಬೆಸ್ಟ್‌ ಫಿಲ್ಮ್‌, ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ!

assault case
ಬೆಳಗಾವಿ22 mins ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

IPL 2025
ಕ್ರೀಡೆ25 mins ago

IPL 2025: ಮುಂಬೈ ತಂಡದಿಂದ ಪಾಂಡ್ಯಗೆ ಗೇಟ್​ಪಾಸ್​; ಸೂರ್ಯಕುಮಾರ್​ಗೆ ನಾಯಕತ್ವ?

Megha Shetty operation london cafe bigg surprise
ಸ್ಯಾಂಡಲ್ ವುಡ್33 mins ago

Megha Shetty: ಮೇಘಾ ಶೆಟ್ಟಿ ಬರ್ತ್‌ಡೇಗೆ ಸರ್‌ಪ್ರೈಸ್‌ ಕೊಟ್ಟ `ಆಪರೇಷನ್ ಲಂಡನ್ ಕೆಫೆ’ ತಂಡ!

Theft Case
ಕ್ರೈಂ37 mins ago

Theft Case : ರಾತ್ರಿಯಾದರೆ ಮನೆ ಬಾಗಿಲು ತಟ್ಟಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳನನ್ನು ಹಿಡಿದು ಕಟ್ಟಿ ಹಾಕಿದ ಜನ್ರು

Kalaburagi News
ಕರ್ನಾಟಕ48 mins ago

Kalaburagi News: ಜಾತಿ ನಿಂದನೆ ಆರೋಪ; ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ, ಕುಲಸಚಿವರ ವಿರುದ್ಧ ಕೇಸ್‌

Kannada New Movie powder cinema trailer release date announce
ಸ್ಯಾಂಡಲ್ ವುಡ್1 hour ago

Kannada New Movie: ದಿಗಂತ್ ನಟನೆಯ `ಪೌಡರ್’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Ishan Kishan
ಕ್ರೀಡೆ1 hour ago

Ishan Kishan: ಮತ್ತೆ ದೇಶೀಯ ಕ್ರಿಕೆಟ್​ ಆಡಲು ಮುಂದಾದ ಇಶಾನ್​ ಕಿಶನ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌