Site icon Vistara News

Assault Case: ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿತ

knife attack

ಬೆಂಗಳೂರು: ರ‍್ಯಾಶ್‌ ಡ್ರೈವಿಂಗ್‌ ಮಾಡಿದ್ದನ್ನು ಪ್ರಶ್ನಿಸಿದ ವ್ಯಕ್ತಿಯ ಕುತ್ತಿಗೆಗೆ ಚೂರಿಯಿಂದ ಇರಿದ ಘಟನೆ ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯ ಬಿಬಿ ನಗರದಲ್ಲಿ ನಡೆದಿದೆ.

ಗಾಯಾಳು ವೆಂಕಟೇಶ್ ಎಂಬವರು ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಗೋಪಾಲಸ್ವಾಮಿ ಸೇರಿ 9 ಜನರ ವಿರುದ್ಧ ಕೊಡಿಗೇಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸ್ನೇಹಿತನ‌ ಮನೆಗೆ ಕಾರ್ಯಕ್ರಮಕ್ಕೆಂದು ಹೊಸಕೋಟೆಗೆ ಹೋಗಿದ್ದ ಗಾಯಾಳು ವೆಂಕಟೇಶ್, ಈ ವೇಳೆ ಅದೇ ಮಾರ್ಗದಲ್ಲಿ ನಿರ್ಲಕ್ಷ್ಯದಿಂದ ವೇಗವಾಗಿ ಚಾಲನೆ ಮಾಡಿದ್ದ ಗೋಪಾಲಸ್ವಾಮಿಯನ್ನು ಪ್ರಶ್ನಿಸಿದ್ದರು. ಆ ವೇಳೆ, ʼಕೊಡಿಗೇಹಳ್ಳಿಗೆ ಬಾ ನಿನ್ನನ್ನ ನೋಡ್ಕೊಳ್ತೀನಿʼ ಎಂದು ಗೋಪಾಲಸ್ವಾಮಿ ಬೆದರಿಕೆ ಹಾಕಿದ್ದ. ನಿನ್ನೆ ಸಂಜೆ ಕೊಡಿಗೇಹಳ್ಳಿ ಮನೆಯ ಬಳಿ ಬಂದಾಗ ಗೋಪಾಲಸ್ವಾಮಿ ಹಾಗೂ ಆತನ ಮಕ್ಕಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಗಳ ಶುರುಮಾಡಿದ್ದರು.

ಮಾತಿಗೆ ಮಾತು ಬೆಳೆದು ವೆಂಕಟೇಶ್ ಕುತ್ತಿಗೆಗೆ ಗೋಪಾಲಸ್ವಾಮಿ ಚಾಕುವಿನಿಂದ ಇರಿದಿದ್ದಾನೆ. ಪ್ರಕರಣ ಸಂಬಂಧ ಗೋಪಾಲಸ್ವಾಮಿ, ಮಕ್ಕಳಾದ ಧನುಷ್, ಚಂದ್ರಶೇಖರ್, ಶ್ರೀನಿವಾಸ್ ಸೇರಿ‌ 9 ಜನರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: Dalit woman murder: ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ದಲಿತ ಯುವತಿ ಸಾವು, ಕೊಲೆ ಶಂಕೆ

Exit mobile version