Site icon Vistara News

Assault Case: ಸಿಸಿಬಿ ಪೊಲೀಸರ ಮೇಲೆ ಕಲ್ಲು, ದೊಣ್ಣೆಯಿಂದ ನೈಜೀರಿಯಾ ಪ್ರಜೆಗಳು ಅಟ್ಯಾಕ್‌

Assault Case

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ನೈಜೀರಿಯಾ ಪ್ರಜೆಗಳ (Nigeria Citizen) ದಾಂಧಲೆ ಮುಂದುವರಿದಿದೆ. ಸಿಸಿಬಿ ಪೊಲೀಸರು ಡ್ರಗ್ಸ್ ಪೆಡ್ಲರ್‌ಗಳು ಇರುವಿಕೆ ಬಗ್ಗೆ ಸುಳಿವು ಸಿಕ್ಕಿತ್ತು. ಹೀಗಾಗಿ ಮಾಹಿತಿ ಕಲೆ ಹಾಕಲು ಮುಂದಾಗಿದ್ದರು. ಈ ಬಗ್ಗೆ ಪರಿಶೀಲನೆಗೆ ತೆರಳಿದಾಗ ಸಿಸಿಬಿ ಪೊಲೀಸರ ಮೇಲೆ‌ ನೈಜೀರಿಯಾ ಪ್ರಜೆಗಳು ದಾಳಿ ಮಾಡಿ ಹಲ್ಲೆ (Assault Case) ನಡೆಸಿದ್ದಾರೆ. ಜತೆಗೆ ಹೆಲ್ಮೆಟ್‌ನಿಂದ ಕಾರಿನ ಗಾಜು ಒಡೆದು ಹಾನಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣೆಯ ಮಾವಳ್ಳಿಪುರದಲ್ಲಿ ಮಧ್ಯರಾತ್ರಿ 12 ಗಂಟೆಗೆ ಘಟನೆ ನಡೆದಿದೆ.

ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಾಯವಾಗಿದೆ. ನೈಜೀರಿಯಾ ಪ್ರಜೆಗಳು ಸಿಸಿಬಿ ಪೊಲೀಸರ ಮೇಲೆ ಹಲ್ಲೆ ಮಾಡಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಮತ್ತು ನೈಜೀರಿಯಾ ಪ್ರಜೆಗಳ ಮಧ್ಯೆ ವಾಗ್ವಾದ ನಡೆದಿದ್ದು, ರಸ್ತೆಯಲ್ಲೇ ರಾದ್ಧಾಂತ ಮಾಡಿದ್ದಾರೆ. ಇದೇ ವೇಳೆ ನೈಜೀರಿಯಾ ಪ್ರಜೆಗಳು ತಮ್ಮವರಿಗೆ ಫೋನ್‌ ಮಾಡಿ ಕರೆಸಿಕೊಂಡಿದ್ದಾರೆ. ಬೈಕ್‌ನಲ್ಲಿ ಬೇರೆ ಬೇರೆ ಕಡೆಯಿಂದ 10ಕ್ಕೂ ಹೆಚ್ಚು ಮಂದಿ ಬಂದಿದ್ದಾರೆ. ಪೊಲೀಸರು ಜೀಪ್ ಹತ್ತಿಸುತ್ತಿದ್ದಂತೆ ತಿರುಗಿ ಬಿದ್ದ ನೈಜೀರಿಗಳು, ಕಲ್ಲು ದೊಣ್ಣೆಗಳಿಂದ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ್ದಾರೆ. ಪೊಲೀಸರನ್ನು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಗ್ರಾಮಾಂತರದ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹಿಂದೆ ಸಿಸಿಬಿ ಅಧಿಕಾರಿ ಸುಬ್ರಹ್ಮಣ್ಯ ಸ್ವಾಮಿ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ಮುಂದುವರಿದ ತನಿಖೆಗಾಗಿ ಸಿಸಿಬಿ ಟೀಂ ತೆರಳಿದ್ದರು. ಆರೋಪಿಯನ್ನು ಹಿಂಬಾಲಿಸಿಕೊಂಡು ಹೋದಾಗ ನೈಜೀರಿಯನ್ ಪ್ರಜೆಗಳು ಕಿರಿಕ್ ತೆಗೆದಿದ್ದರು.

ಇದನ್ನೂ ಓದಿ: Murder Case: ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

ತಾವು ಸಿಸಿಬಿ ಪೊಲೀಸರು ಎಂದು ತಿಳಿಸಿದರೂ ಏಕಾಏಕಿ ಹಲ್ಲೆಯನ್ನು ನಡೆಸಿದ್ದಾರೆ. ನಿನ್ನೆ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಾಗ ಸಿಸಿಬಿ ಇನ್ಸ್‌ಸ್ಪೆಕ್ಟರ್‌ ಕೂಡಲೇ ಕಂಟ್ರೋಲ್ ರೂಂಗೆ ಕಾಲ್ ಮಾಡಿ ವಿಚಾರ ಮುಟ್ಟಿಸಿದ್ದರು. ವಿಚಾರ ತಿಳಿದು ರಾಜಾನುಕುಂಟೆ ಪೊಲೀಸರು ಸ್ಥಳಕ್ಕಾಗಮಿಸಿ ಸಿಸಿಬಿ ಅಧಿಕಾರಿಗಳನ್ನು ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ. ಅವರಿಗೆ ಮನೆ ಬಾಡಿಗೆ ಕೊಟ್ಟ ಮಾಲೀಕನ ಜತೆ ಮಾತನಾಡಿದ್ದೇವೆ. ನೈಜೀರಿಯನ್ ಪ್ರಜೆಗಳು ದಾಖಲಾತಿ ಕೊಡುವುದಾಗಿ ಹೇಳಿ ಮನೆ ಮಾಲೀಕರಿಂದ ಬಾಡಿಗೆ ಪಡೆದಿದ್ದಾರೆ ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version