Site icon Vistara News

Assault Case: ಗಂಡ- ಹೆಂಡತಿ ನಡುವೆ ಮೂಗು ತೂರಿಸಿದವನಿಗೆ ಚಾಕು ಇರಿತ

stabbing assault case

ಬೆಂಗಳೂರು: ಗಂಡ ಹೆಂಡತಿ (Wife – Husband) ನಡುವೆ ಮೂಗು ತೂರಿಸಿದವನೊಬ್ಬ ಚಾಕು ಇರಿತಕ್ಕೊಳಗಾಗಿ (Assault Case) ಇದೀಗ ಆಸ್ಪತ್ರೆ ಸೇರಿದ್ದಾನೆ. ತಂಗಿ ಹಾಗೂ ಭಾವನ ಸಂಸಾರದ ನಡುವೆ ಬಂದ ಯುವಕನಿಗೆ ಆಕೆಯ ಅಣ್ಣನೇ ಚಾಕುವಿನಿಂದ ಇರಿದು (Stabbing) ಗಾಯಗೊಳಿಸಿದ್ದಾನೆ.

ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಪಂತರಪಾಳ್ಯದಲ್ಲಿ ಘಟನೆ ನಡೆದಿದೆ. ಕಾರ್ತಿಕ್ ಚಾಕು ಇರಿತಕ್ಕೆ ಒಳಗಾಗಿರುವ ಯುವಕ. ಈತ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆಟೋ ಓಡಿಸಿಕೊಂಡು ಇರುತ್ತಿದ್ದವನು ಮಹಿಳೆಯೊಬ್ಬಳ ಹಿಂದೆ ಬಿದ್ದಿದ್ದ. ಈಕೆಗೆ ಮದುವೆಯಾಗಿತ್ತು. ಮದುವೆಯಾಗಿರುವುದು ತಿಳಿದಿದ್ದರೂ ಮಹಿಳೆ ಜೊತೆ ಮಾತನಾಡಲು ಹಾತೊರೆಯುತ್ತಿದ್ದ.

ಬೇಡ ಬೇಡ ಅಂದರೂ ಮಹಿಳೆಯ ಹಿಂದೆ ಬಿದ್ದಿದ್ದ ಯುವಕನಿಗೆ ಮಹಿಳೆಯ ಗಂಡ ಹಾಗೂ ಅಣ್ಣ ಹಲವು ಬಾರಿ ವಾರ್ನಿಂಗ್‌ ಮಾಡಿದ್ದರು. ತಂಗಿ- ಭಾವನ ಮಧ್ಯೆ ಬರಬೇಡ ಎಂದು ಆಕೆಯ ಅಣ್ಣ ವಿನೋದ್ ಎಚ್ಚರಿಸಿದ್ದ. ಆದರೆ ಕಾರ್ತಿಕ್‌ ತನ್ನ ಚಾಳಿ ಬಿಟ್ಟಿರಲಿಲ್ಲ. ಸೋಮವಾರ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಪಂತರಪಾಳ್ಯಕ್ಕೆ ಆಕೆಯ ಮನೆ ಕಡೆಗೆ ಕಾರ್ತಿಕ್‌ ಹೋಗಿದ್ದ.

ಈ ವೇಳೆ ಮಹಿಳೆಯ ಅಣ್ಣ ವಿನೋದ್‌, ತನ್ನ ಭಾವ ಸತೀಶ್ ಹಾಗೂ ಗೆಳೆಯ ಸೂರ್ಯನ ಜೊತೆ ಬಂದು ವಿನೋದ್‌ ಅನ್ನು ಅಟಕಾಯಿಸಿಕೊಂಡು ಚಾಕುವಿನಿಂದ ಇರಿದಿದ್ದಾನೆ. ನಾಯಂಡಹಳ್ಳಿಯ ಪಂತರಪಾಳ್ಯದಲ್ಲಿ ಕಾರ್ತಿಕ್‌ನನ್ನು ಲಾಕ್ ಮಾಡಿ ತಲೆ ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪತ್ನಿಯ ಅನುಮಾನಾಸ್ಪದ ಸಾವು; ಜನರ ಆಕ್ರೋಶಕ್ಕೆ ಹೆದರಿ ಗಂಡ ಕೂಡ ಆತ್ಮಹತ್ಯೆ

ಮಂಡ್ಯ: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು (Woman Self Harming) ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ (Couple Death) ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ಅಂಜಿ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಕೆ‌.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ (Murder) ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.

ನೆನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.

ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Exit mobile version