Site icon Vistara News

Assault Case: ಶವದ ಮುಂದೆ ಎರಡು ಗುಂಪುಗಳ ಹೊಡಿಬಡಿ; 12 ಮಂದಿ ಅರೆಸ್ಟ್‌

Assault case In Bengaluru

ಬೆಂಗಳೂರು: ಒಂದು ಸಣ್ಣ ವಿಚಾರ ಹೇಗೆಲ್ಲ ಗಲಭೆಗಳಿಗೆ (Assault Case) ಸಾಕ್ಷಿ ಆಗುತ್ತೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಕಳೆದ ಏ. 28ರ ರಾತ್ರಿ ಎರಡು ಗುಂಪುಗಳ ನಡುವೆ ಹೊತ್ತಿಕೊಂಡ ಜಗಳ, ಪರಸ್ಪರ ಹಲ್ಲೆಯು ಠಾಣೆ ಮೆಟ್ಟಿಲೇರಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದ್ದು, ಎರಡು ಗುಂಪಿನ ತಲಾ ಆರರಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಸಿದ್ದಾಪುರ ಬಳಿ ಇರುವ ಗುಂಟೆಪಾಳ್ಯದಲ್ಲಿ ಎರಡು ಗುಂಪುಗಳು ನಡುರಸ್ತೆಯಲ್ಲೇ ಮಚ್ಚು, ದೊಣ್ಣೆಗಳನ್ನು ಹಿಡಿದು ಬಡಿದಾಡಿಕೊಂಡಿದ್ದರು. ಏಪ್ರಿಲ್‌ 28ರಂದು ಗುಂಟೆಪಾಳ್ಯದಲ್ಲಿ ವ್ಯಕ್ತಿಯೊಬ್ಬರು ಮರಣ ಹೊಂದಿದ್ದರು. ಈ ಕಾರಣದಿಂದ ಮೃತ ಕುಟುಂಬಸ್ಥರು ರಸ್ತೆಗೆ ಶಾಮೀಯಾನ ಹಾಕಿದ್ದರು. ಮನೆಯವರು ದುಖಃದಲ್ಲಿದ್ದರೆ ಅಲ್ಲಿಗೆ ಬಂದ ಮತ್ತೊಂದು ಕೋಮಿನ ಇಬ್ಬರು ಯುವಕರು, ಶವ ಇಟ್ಟಿರುವ ಜಾಗದ ಪಕ್ಕದಲ್ಲಿಯೆ ಸೈಲೆನ್ಸರ್ ಅಳವಡಿಸಿದ್ದ ಬೈಕ್‌ ಅನ್ನು ಅತಿ ವೇಗವಾಗಿ ಓಡಿಸುತ್ತಲೇ ಇದ್ದರು. ಇದೇ ರೀತಿ ಹಲವು ಬಾರಿ ಮಾಡಿದಾಗ ಮೊದಲೇ ದುಖಃದಲ್ಲಿದ್ದವರು ಇದನ್ನು ಪ್ರಶ್ನೆ ಮಾಡಿದ್ದಾರೆ.

ಅಷ್ಟೆ ಅಲ್ಲದೆ ಮೃತನ ಕುಟುಂಬಸ್ಥರು ಯುವಕನ ತಂದೆಗೆ ಈ ರೀತಿ ಮಾಡುತ್ತಿದ್ದಾರೆ ಎಂದು ದೂರಿದ್ದರು. ಈ ಹಿನ್ನೆಲೆಯಲ್ಲಿ ಆ ಯುವಕನ ತಂದೆ ಮಗನಿಗೆ ಬೈಕ್ ಕೊಟ್ಟಿರಲಿಲ್ಲ. ಹೀಗಾಗಿ ಇದರಿಂದ ಸಿಟ್ಟಾದ ಯುವಕ ತನ್ನ ಕೋಮಿನ ಇತರರಿಗೆ ಅದೇನು ಹೇಳಿ ಕರೆತಂದಿದ್ದ ತಿಳಿದಿಲ್ಲ. ಸುಮಾರು 70-80ಕ್ಕೂ ಹೆಚ್ಚು ಮಂದಿ ಆಗಮಿಸಿ ಕಿರಿಕ್ ಮಾಡಲು ಶುರು ಮಾಡಿದ್ದರು.

ಈ ವೇಳೆ ಎರಡೂ ಗುಂಪುಗಳು ಕ್ರಿಕೆಟ್ ಬ್ಯಾಟ್, ದೊಣ್ಣೆಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬೈಕ್ ವಿಚಾರಕ್ಕೆ ನಡೆದ ಕಿರಿಕ್‌ನಲ್ಲಿ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಣ ಸಣ್ಣದಾದರೂ ಅದು ಹೇಗೆಲ್ಲ ತಿರುವು ಪಡೆದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ ಎಂಬುದಕ್ಕೆ ಇದೆ ಸಾಕ್ಷಿಯಾಗಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

ನವದೆಹಲಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌(Salman Khan) ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿ(Police custody)ಯಲ್ಲೇ ಆತ್ಮಹತ್ಯೆ(Suicide)ಗೆ ಶರಣಾಗಿದ್ದಾನೆ. ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿರುವ ಅನೂಜ್‌ ತಾಪನ್‌ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ.

ಘಟನೆ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರನ್ನು ಸಿಐಡಿ ತನಿಖೆಗೆ ಹಾಜರು ಪಡಿಸಲಾಗಿದೆ. ಸಾಮಾನ್ಯವಾಗಿ ಲಾಕ್‌ ಅಪ್‌ನಲ್ಲಿ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ತೀವ್ರ ನಿಗಾವಹಿಸುತ್ತಾರೆ. ಹಾಗಿದ್ದರೂ ಕೆಲವು ಆರೋಪಿಗಳು ತಾವು ಧರಿಸಿರುವ ಪೈಜಾಮಾದಿಂದ ಗಂಟು ಹಾಕಿ ಅದರ ಸಹಾಯದಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳು ಈ ದಾಳಿ ನಡೆಸಿದ್ದರು. ಇವರನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಲಾಗಿದ್ದು,. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಪೊಲೀಸರು ಘೋಷಿಸಿದ್ದರು.

ಇದನ್ನೂ ಓದಿ:Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆ ಎಂದು ಹೇಳಿದ್ದ.

ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ ಎಂದು ಹೇಳಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version