Site icon Vistara News

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ; ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌

Ayudha Puja celebrations across the karnataka state Temples housefull by devotees

ಬೆಂಗಳೂರು: ನಾಡಿನೆಲ್ಲೆಡೆ ಆಯುಧ ಪೂಜಾ (Ayudha Puja) ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಸಲುವಾಗಿ ನಗರದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬನಶಂಕರಿ, ಆ್ಯಕ್ಸಿಡೆಂಡ್ ಗಣೇಶ, ಸರ್ಕಲ್ ಮಾರಮ್ಮ, ಕಾಡುಮಲ್ಲೆಶ್ವರಂ ದೇವಸ್ಥಾನಕ್ಕೆ ಭಕ್ತರು ದೌಡಾಯಿಸಿದ್ದಾರೆ. ಬೆಳಗಿನಿಂದಲೇ ಪಂಚಾಭಿಷೇಕ ನೇರಿವೇರಿದ್ದು, ವಿಶೇಷ ಅಲಂಕಾರ ಮಾಡಿ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಅಲ್ಲದೇ ಮನೆಗಳಲ್ಲಿ ಆಯುಧಗಳಿಗೆ ಪೂಜೆ ಮಾಡಿ ಸಲ್ಲಿಸಿದ್ದು, ವಾಹನಗಳಿಗೆ ಪೂಜೆ ಮಾಡುವ ಸಲುವಾಗಿ ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ವಾಹನ ಸವಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸರ್ಕಲ್ ಮಾರಮ್ಮ ದೇವಸ್ಥಾನದಲ್ಲಿ ಆಯುಧ ಪೂಜೆಯ ಸಂಭ್ರಮ ಜೋರಾಗಿತ್ತು. ದೇವಿಗೆ ಮುತ್ತಿನ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದ ದೇವಿಗೆ ವಿಶೇಷ ಪೂಜೆ ಪುರಸ್ಕಾರ ನಡೆದಿದೆ.

ಭಕ್ತರು ತಮ್ಮ ವಾಹನಗಳಿಗೆ ಪೂಜೆ ಮಾಡಿಸಲು ಮುಗಿಬಿದ್ದಿದ್ದರು. ಹೀಗಾಗಿ ಸರ್ಕಲ್ ಮಾರಮ್ಮ ದೇವಸ್ಥಾನದ ಸುತ್ತ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಟ್ರಾಫಿಕ್‌ ಕ್ಲಿಯರ್‌ ಮಾಡಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇಂದು ಶುಕ್ರವಾರ ಬೆಳಗ್ಗೆಯಿಂದ ಸಂಜೆಯವೆಗೂ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ.

ವಿಸ್ತಾರ ನ್ಯೂಸ್‌ ಕಚೇರಿಯಲ್ಲೂ ಆಯುಧ ಪೂಜೆ ಸಂಭ್ರಮ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version