Ban on dogs : ಅಪಾಯಕಾರಿ ನಾಯಿ ತಳಿಗಳಿಗೆ ಕೇಂದ್ರನಿಷೇಧ; ಕರ್ನಾಟಕದಲ್ಲಿ ತಡೆ - Vistara News

ಬೆಂಗಳೂರು

Ban on dogs : ಅಪಾಯಕಾರಿ ನಾಯಿ ತಳಿಗಳಿಗೆ ಕೇಂದ್ರನಿಷೇಧ; ಕರ್ನಾಟಕದಲ್ಲಿ ತಡೆ

Ban on Dogs : ಕೇಂದ್ರ ಸರ್ಕಾರವು 23 ನಾಯಿ ತಳಿಗಳ ನಿಷೇಧಕ್ಕೆ ಆದೇಶ ನೀಡಿ ಮಾರ್ಚ್ 12ರಂದು ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

VISTARANEWS.COM


on

Ban on Dogs pitbull terrier
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರವು ಮನುಷ್ಯನ ಜೀವಕ್ಕೆ ಅಪಾಯ ಎಂದು ಪರಿಗಣಿಸಲಾದ 23 ಅಪಾಯಕಾರಿ ನಾಯಿ ತಳಿಗಳ (Dangerous Dog breeds) ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಗೆ ನಿಷೇಧ (Ban on dogs) ಹೇರಿತ್ತು. ಈ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ​(Karnataka High Court) ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದರೆ, ಇದು ಕರ್ನಾಟಕಕ್ಕೆ ಸೀಮಿತವಾದ ತಡೆಯಾಜ್ಞೆಯಾಗಿದೆ.

ತಜ್ಞರ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಸಚಿವಾಲಯವು ಮಾರ್ಚ್ 12ರಂದು ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಂದು ನಿರ್ದೇಶನವನ್ನು ನೀಡಿ 23 ನಾಯಿ ತಳಿಗಳ ನಿಷೇಧಕ್ಕೆ ಆದೇಶ ನೀಡಿತ್ತು.

1. ಪಿಟ್‌ ಬುಲ್‌ ಟೆರಿಯರ್‌(Pitbull Terrier), 2. ಟೋಸಾ ಇನು (Tosa Inu), 3. ಅಮೆರಿಕನ್‌ ಸ್ಟಾಫರ್ಡ್‌ಶೈರ್‌ ಟೆರಿಯರ್‌ (American Staffordshire Terrier), 4. ಫಿಲಾ ಬ್ರಾಸಿಲೀರೋ (Fila Brasileiro), 5. ಡೋಗೋ ಅರ್ಜೆಂಟೀನೋ (Dogo Argentino), 6. ಅಮೆರಿಕನ್‌ ಬುಲ್‌ ಡಾಗ್‌ (American Bulldog), 7. ಬೋಸ್‌ ಬೋಲ್‌ (Boesboel), 8. ಕಾನ್‌ಗಾಲ್‌ (Kangal), 9. ಸೆಂಟ್ರಲ್‌ ಏಷ್ಯನ್‌ ಶೆಫರ್ಡ್‌ ಡಾಗ್‌ (Central Asian Shepherd Dog), 10. ಕಕೇಶಿಯನ್‌ ಶೆಫರ್ಡ್‌ ಡಾಗ್‌ (Caucasian Shepherd Dog), 11. ಸೌತ್‌ ರಷ್ಯನ್‌ ಶೆಫರ್ಡ್‌ ಡಾಗ್‌ (South Russian Shepherd Dog), 12. ಟೋರ್ನ್‌ಜಾಕ್‌ ಸರ್‌ಪ್ಲ್ಯಾನಿಯಾಕ್‌ (Tornjak, Sarplaninac), 13. ಜಪಾನೀಸ್‌ ಟೋಸಾ ಎಂಡ್‌ ಅಕಿಟಾ (Japanese Tosa and Akita), 14. ಮಾಸ್ಟಿಫ್ಸ್‌ (Mastiffs), 15. ರಾಟ್‌ ವೀಲರ್‌ (Rottweiler), 16. ಟೆರಿಯರ್ಸ್‌ (Terriers), 17. ರೊಡೇಷಿಯನ್‌ ರಿಜ್‌ ಬ್ಯಾಕ್‌ (Rhodesian Ridgeback), 18. ವೂಲ್ಫ್‌ ಡಾಗ್ಸ್ (Wolf Dogs)‌, 19. ಕೆನೇರಿಯೊ (Canario), 20. ಅಕ್ಬಷ್‌ Akbash, 21. ಮಾಸ್ಕೋ ಗಾರ್ಡ್‌ Moscow Guard, 22. ಕೇನ್‌ ಕಾರ್ಸೋ (Cane Corso), 23. ಬ್ಯಾನ್‌ಡಾಗ್‌ Bandog- ಇವು ಕೇಂದ್ರದಿಂದ ನಿಷೇಧಿಸಲಾದ ತಳಿಗಳು.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಸುತ್ತೋಲೆಯನ್ನು ಪ್ರಶ್ನಿಸಿ ನಾಯಿ ಸಾಕಣೆದಾರ ಮತ್ತು ಕೆನ್ನೆಲ್ ಕ್ಲಬ್ ಆಫ್ ಇಂಡಿಯಾ ರಾಜ್ಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದವು. ಅದರ ಮೇರೆಗೆ ಹೈಕೋರ್ಟ್‌ ಮಂಗಳವಾರ ವಿಚಾರಣೆ ನಡೆಸಿ ಕರ್ನಾಟಕಕ್ಕೆ ಸೀಮಿತವಾಗಿ ಸುತ್ತೋಲೆಗೆ ತಡೆಯಾಜ್ಞೆ ನೀಡಲಾಗಿದೆ.

ಬೆಂಗಳೂರಿನ ನಿವಾಸಿಗಳಾದ ಕಿಂಗ್ ಸೊಲೊಮನ್ ಡೇವಿಡ್ ಮತ್ತು ಮರ್ಡೋನಾ ಜೋನ್ಸ್ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ವಿಚಾರಣೆ ನಡೆಸಿ ಈ ಮಧ್ಯಂತರ ಆದೇಶ ನೀಡಿದ್ದಾರೆ.

ಇದನ್ನೂ ಓದಿ: pitbull dog Attack: ನಾಲ್ಕು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಡೇಂಜರಸ್‌ ಪಿಟ್‌ಬುಲ್‌ ನಾಯಿ

Ban on dogs : ಅರ್ಜಿದಾರರ ವಾದವೇನು?

  1. ಅಪಾಯಕಾರಿ ಶ್ವಾನಗಳ ತಳಿ ನಿಷೇಧಿಸುವ ಕುರಿತಂತೆ ಸಂಬಂಧಪಟ್ಟ ಎಲ್ಲ ಪಾಲುದಾರರೊಂದಿಗೆ ಚರ್ಚಿಸಬೇಕೆಂದು ದೆಹಲಿ ಹೈಕೋರ್ಟ್​ ಹೇಳಿದೆ. ಅವುಗಳಲ್ಲಿ ಕೆನ್ನಲ್​ ಕ್ಲಬ್​ ಆಪ್​ ಇಂಡಿಯಾ ಕೂಡ ಒಂದಾಗಿದ್ದು, ಅದರ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿಲ್ಲ.
  2. ಮನುಷ್ಯನ ಜೀವಕ್ಕೆ ಅಪಾಯಕಾರಿ ಮತ್ತು ಉಗ್ರವಾಗಿ ವರ್ತಿಸುವ ತಳಿಯ ಶ್ವಾನಗಳನ್ನು ಗುರುತಿಸುವುದಕ್ಕೆ ಆಳವಾದ ಅಧ್ಯಯನದ ಅಗತ್ಯವಿದೆ.
  3. ಸುತ್ತೋಲೆಯಲ್ಲಿ ಉಲ್ಲೇಖಿಸದ ಹಲವು ತಳಿಗಳು ಕ್ರೂರ ವರ್ಗಕ್ಕೆ ಸೇರಲಿವೆ. ಅವುಗಳನ್ನು ಪರಿಗಣಿಸಿಲ್ಲ.
  4. ಕ್ರೂರ ಹಾಗೂ ಅಪಾಯಕಾರಿ ಶ್ವಾನಗಳ ತಳಿಗಳ ಸಂತಾನೋತ್ಪತ್ತಿ ನಿಷೇಧಿಸುವ ಸಲುವಾಗಿ ಅವುಗಳ ಮಾಲೀಕರು ಸಂತಾನಹರಣಕ್ಕಾಗಿ ಅಗತ್ಯವಿರುವ ಕ್ರಿಮಿನಾಶಕಗಳನ್ನು ಬಳಕೆ ಮಾಡಬೇಕು ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ 2024ರ ಮಾರ್ಚ್ 12ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಈ ರಾಸಾಯನಿಕಗಳ ಬಗ್ಗೆ ನಿಖರತೆ ಇಲ್ಲ.
Karnataka High court
karnataka High court

ಹೈಕೋರ್ಟ್‌ ತನ್ನ ಆದೇಶದಲ್ಲಿ ಹೇಳಿದ್ದೇನು?

ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸುವ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಪರಿಗಣಿಸಿರುವ ಎಲ್ಲ ಅಂಶಗಳಿರುವ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್​ ಕೇಂದ್ರ ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Physical Abuse: ನಡುಬೀದಿಯಲ್ಲಿ ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಬೆದರಿಕೆ

Physical Abuse: ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ.

VISTARANEWS.COM


on

physical abuse bangalore crime
Koo

ಬೆಂಗಳೂರು: ಸಿಲಿಕಾನ್‌ ಸಿಟಿ (Silicon city) ಬೆಂಗಳೂರು ಹೆಣ್ಣು ಮಕ್ಕಳಿಗೆ ಎಷ್ಟು ಸೇಫ್ ಎಂಬ ಪ್ರಶ್ನೆ ಮತ್ತೆ ಮತ್ತೆ ಎದುರಾಗುತ್ತಲೇ ಇದೆ. ಇಂಥ ಕರಾಳ ಪ್ರಕರಣಗಳು (Crime news) ಘಟಿಸುತ್ತಲೇ ಇವೆ. ನಿನ್ನೆ ರಾತ್ರಿ ಬಿಹಾರ ಮೂಲದ ದಂಪತಿಗೆ ಲೈಂಗಿಕ ಕಿರುಕುಳದ (Physical abuse) ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ.

ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಿನ್ನೆ ರಾತ್ರಿ 10:30ರ ಸುಮಾರಿಗೆ ನಡೆದ ಘಟನೆ ಇದು.

ಜೊತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ.

ಇದರಿಂದ ಭಯಭೀತರಾದ ದಂಪತಿ ಸಹಾಯ ಕೋರಿ ಬೆಂಗಳೂರು ಪೊಲೀಸರಿಗೆ ಫೋನ್ ಮಾಡಿದರೂ ಸರಿಯಾದ ರೆಸ್ಪಾನ್ಸ್ ಸಿಕ್ಕಿಲ್ಲ. ಕಿರುಕುಳದ ಬಗ್ಗೆ ಬೆಂಗಳೂರು ಪೋಲಿಸ್ ಸಹಾಯವಾಣಿಗೆ ಕರೆ ಮಾಡಿದ್ದರು. ಬೆಂಗಳೂರು ಪೋಲಿಸರು ಸ್ಪಂದಿಸದಿದ್ದುದರಿಂದ ಬಿಹಾರ ಪೋಲಿಸರಿಗೆ ದಂಪತಿ ಫೋನ್ ಮಾಡಿದ್ದಾರೆ. ಕೊಡಿಗೆಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಧ್ಯಪ್ರದೇಶ: ಹೊಟೇಲ್‌ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹಿಂದೂ ಯುವತಿಯ ಮೃತದೇಹ ಪತ್ತೆ (Love Jihad) ಯಾಗಿದ್ದು, ಆಕೆ ಪ್ರಿಯಕರ ಜುನೈದ್‌ (Junaid) ಎಂಬಾತನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಮಧ್ಯಪ್ರದೇಶ (Madhya pradesh) ಧಾರ್‌ ಜಿಲ್ಲೆಯಲ್ಲಿ ಈ ಘಟನೆ ನಡೆಸಿದ್ದು, ಸಾಮಾಜಿಕ ಜಾಲತಾಣ (Social Media) ದಲ್ಲಿ ವಿಡಿಯೋ ಬಹಳ ಸುದ್ದಿ ಮಾಡುತ್ತಿದೆ. ಪೊಲೀಸ್‌ ಮಾಹಿತಿ ಪ್ರಕಾರ, ಜುನೈದ್‌ ಎಂಬಾತನ ಹೆಸರಿನಲ್ಲಿ ಬುಕ್‌ ಆಗಿದ್ದ ಹೊಟೇಲ್‌ ರೂಂನಲ್ಲಿ ಹಿಂದೂ ಯುವತಿಯ(24) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.

ವಟಿಕಾ ಎಂಬ ಹೊಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ಯುವತಿ ಎರಡು ದಿನಗಳಿಂದ ಆರೋಪಿ ಜುನೈದ್‌ ಜೊತೆ ಹೊಟೇಲ್‌ನಲ್ಲಿ ತಂಗಿದ್ದಳು. ಅನುಮಾನಗೊಂಡ ಹೊಟೇಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬಾಗಿಲು ಒಡೆದು ನೋಡಿದಾಗ ಆಕೆಯ ದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇತಾಡುತ್ತಿತ್ತು.

ಮದುವೆಗೆ ನಿರಾಕರಿಸಿದ್ದಕ್ಕೆ ಸೂಸೈಡ್‌

ಇನ್ನು ಆರೋಪಿ ಜುನೈದ್‌ ಮದುವೆಗೆ ನಿರಾಕರಿಸಿದಕ್ಕೆ ಬೇಸರಗೊಂಡು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್‌ ಆದಿಕಾರಿ ಅಮಿತ್‌ ಕುಮಾರ್‌ ಮಿಶ್ರಾ, 24 ವರ್ಷದ ಯುವತಿ ಮೃತದೇಹ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದೆವು. ಆಕೆ ತನ್ನ ಚೂಡಿದಾರ್‌ ಶಾಲಿನಿಂದ ಕುತ್ತಿಗೆ ಬಿಗಿದು ಸಾವಿಗೆ ಶರಣಾಗಿದ್ದಾಳೆ. ಇನ್ನು ಈಕೆ ಎರಡು ದಿನಗಳಿಂದ ಜುನೈದ್‌ ಎಂಬಾತನ ಜತೆ ಹೊಟೇಲ್‌ನಲ್ಲಿ ತಂಗಿದ್ದಳು ಎಂಬ ಮಾಹಿತಿ ಇದೆ.

ಇದನ್ನೂ ಓದಿ:America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

ಯುವತಿ ಮತ್ತು ಆರೋಪಿ ಜುನೈದ್‌ ಇಂಧೋರ್‌ನ ಮಹುಗಾವ್‌ ಜಿಲ್ಲೆಯವರಾಗಿದ್ದು, ಇಬ್ಬರೂ ಒಂದೇ ತರಗತಿಯಲ್ಲಿ ಓದುತ್ತಿದ್ದರು. ಕಾಲೇಜಿನಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರುಮಾಡಿದ್ದು, ಕಳೆದ ಐದು ವರ್ಷದಿಂದ ರಿಲೇಶನ್‌ಶಿಪ್‌ನಲ್ಲಿದ್ದರು. ಯುವತಿ ತನ್ನನ್ನು ಮದುವೆ ಆಗುವಂತೆ ಜುನೈದ್‌ನನ್ನು ಆಗಾಗ ಒತ್ತಾಯಿಸುತ್ತಿದ್ದಳು. ಆದರೆ ಆತ ಮದುವೆಗೆ ತಯಾರಿರಲಿಲ್ಲ. ನೆಪ ಹೇಳಿಕೊಂಡು ಮದುವೆಯನ್ನು ಮುಂದಕ್ಕೆ ತಳ್ಳುತ್ತಲೇ ಇದ್ದ. ಇದೇ ಕಾರಣಕ್ಕೆ ಬೇಸರಗೊಂಡಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇವರಿಬ್ಬರ ಪ್ರೀತಿಯ ವಿಷಯ ಮನೆಯವರಿಗೂ ತಿಳಿದಿತ್ತು. ಇದೀಗ ನಾಪತ್ತೆಯಾಗಿರುವ ಜುನೈದ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

Continue Reading

ಪ್ರಮುಖ ಸುದ್ದಿ

Karnataka Weather: ಇಂದು ಚಿಕ್ಕಮಗಳೂರು, ಕೊಡಗು, ಮೈಸೂರು ಸೇರಿ ವಿವಿಧೆಡೆ ಮಳೆ ಮುನ್ಸೂಚನೆ

Karnataka Weather: ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ ಸೇರಿ ಹಲವು ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಮೇ 1ರಂದು ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಮೇ 5ರವರೆಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮೇ 6ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೇ 7ರಂದು ಕೂಡ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ನಾಲ್ಕು ದಿನ ಶಾಖದ ಅಲೆಯ ಎಚ್ಚರಿಕೆ

ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳು ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೇ 4 ರವರೆಗೆ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಇನ್ನು ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 24°C ಇರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ದಿನೇದಿನೆ ತಾಪಮಾನ (Temperature) ಏರಿಕೆಯಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ (Karnataka Weather) ವರದಿಯಾಗುತ್ತಿದ್ದು, ರಾಯಚೂರಿನಲ್ಲಿ ಸೋಮವಾರ, ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ 45.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ಕಂಡುಬಂದಿದೆ.

ಏ.29ರ ಬೆಳಗ್ಗೆ 8.30 ರಿಂದ ಏ.30 ಬೆಳಗ್ಗೆ 8.30ರವರೆಗೆ ರಾಜ್ಯದ ಜಿಲ್ಲಾವಾರು ಗರಿಷ್ಠ ತಾಪಮಾನ ನೋಡುವುದಾದರೆ, ರಾಯಚೂರಿನಲ್ಲಿ 45.6 ಡಿಗ್ರಿ ಸೆ. ದಾಖಲಾಗಿದೆ. ಕೊಡಗಿನಲ್ಲಿ 38.6 ಡಿಗ್ರಿ ಸೆ. ತಾಪಮಾನ ದಾಖಲಾಗಿದ್ದು, ಇದು ಎಲ್ಲ ಜಿಲ್ಲೆಗಳಿಗಿಂತ ಕಡಿಮೆಯಾಗಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ 39.8 ಡಿಗ್ರಿ ಸೆ. ಹೊರತುಪಡಿಸಿ, ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆ. ಮೀರಿದೆ.

Continue Reading

ಬೆಂಗಳೂರು

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Kaladarpana-Art Reflects: ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

VISTARANEWS.COM


on

Kaladarpana-Art Reflects
Koo

ಬೆಂಗಳೂರು: ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ (Kaladarpana-Art Reflects) ವತಿಯಿಂದ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ನಗರದ ನಾಗರಬಾವಿ 2ನೇ ಹಂತದ ಎನ್‌ಜಿಇಎಫ್‌ ಲೇಔಟ್‌ನ ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಭಾನುವಾರ (ಮೇ 5ರಂದು) ಬೆಳಗ್ಗೆ 8.30ಕ್ಕೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, 9ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ತಬಲ ವಾದಕ ಪಂಡಿತ್ ಡಾ. ಸತೀಶ್ ಹಂಪಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮತ್ತು ಮಾರುತಿ ಮೆಡಿಕಲ್ಸ್ ಮಾಲೀಕರು ಮಹೇಂದ್ರ ಮುಣೋತ್ ಜೈನ್ ಅವರು ಭಾಗವಹಿಸಲಿದ್ದಾರೆ. ಈ ಮೂವರು ಗಣ್ಯರು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಲಾದರ್ಪಣ ಪ್ರಶಸ್ತಿ ಪುರಸ್ಕೃತರು

  • ಗೋ.ನಾ. ಸ್ವಾಮಿ, ಅಂತಾರಾಷ್ಟ್ರೀಯ ಖ್ಯಾತಿಯ ಜನಪದ ಗಾಯಕರು
  • ವಿದುಷಿ ಅನಸೂಯ ದ್ವಾರಕನಾಥ, ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರರು

ಇದನ್ನೂ ಓದಿ | Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್‌ನ ಪ್ರಾಧ್ಯಾಪಕ ಪ್ರೊ. ವಿ.ಎಸ್. ನಾಯಕ ಬಳಕೂರು, ಎಸ್.ಎಸ್.ವಿ.ಎಸ್.ಪಿ.ಎಸ್. ಶಾಲೆ ಪ್ರಾಂಶುಪಾಲೆ ಲತಾ ಎಸ್. ಅವರು ಆಗಮಿಸಲಿದ್ದಾರೆ. ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ ಸಂಸ್ಥೆಯ ಹೇಮಾ ವಿನಾಯಕ್‌ ಪಾಟೀಲ್‌ ಹಾಗೂ ವಿನಾಯಕ್‌ ಪಾಟೀಲ್‌ ಅವರು ಉಪಸ್ಥಿತರಿರಲಿದ್ದಾರೆ. ಖ್ಯಾತ ನಿರೂಪಕಿ ಭವಾನಿ ಲೋಕೇಶ್‌ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Continue Reading

ಪ್ರಮುಖ ಸುದ್ದಿ

DK Shivakumar: ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೊ ಮಾರ್ಫಿಂಗ್ ಆರೋಪ; ಮೂವರ ವಿರುದ್ಧ ಎಫ್‌ಐಆರ್‌

DK Shivakumar: ಕೆಪಿಸಿಸಿ ಕಾನೂನು ಘಟಕದಿಂದ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅಶ್ಲೀಲ ಚಿತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಫೋಟೊ ಮಾರ್ಫಿಂಗ್ ಮಾಡಿದ ಆರೋಪದಲ್ಲಿ ಕೇಸ್‌ ದಾಖಲಾಗಿದೆ.

VISTARANEWS.COM


on

DK Shivakumar
Koo

ಬೆಂಗಳೂರು: ಅಶ್ಲೀಲ ಚಿತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಫೋಟೊ ಮಾರ್ಫಿಂಗ್ ಆರೋಪದಲ್ಲಿ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಿಜೆಪಿ ಮುಖಂಡರ ಅಶ್ಲೀಲ ಭಾವಚಿತ್ರಕ್ಕೆ ಡಿ.ಕೆ. ಶಿವಕುಮಾರ್ ಮುಖ ಜೋಡಣೆ ಮಾಡಿ, ಪೋಟೋ ವೈರಲ್ ಮಾಡಲಾಗಿದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಕೆಪಿಸಿಸಿ ಕಾನೂನು ಘಟಕದಿಂದ ನೀಡಿದ ದೂರಿನ ಮೇರೆಗೆ ಸಂತೋಷ್, ರಾಜೇಶ್ ಮತ್ತು ಕೇಸರಿ ಸಾಮ್ರಾಟ್ ಎಂಬುವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಎಕ್ಸ್, ಫೇಸ್ ಬುಕ್, ಯುಟ್ಯೂಬ್‌ನಲ್ಲಿ ಡಿಕೆಶಿ ಫೋಟೊ ಎಡಿಟ್‌ ಮಾಡಿ ಪೋಸ್ಟ್ ಮಾಡಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ (Hassan Pen Drive Case) ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ 41a ಅಡಿಯಲ್ಲಿ ಎಸ್‌ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ.

ಎಸ್ಐಟಿ ಸದಸ್ಯ, ತನಿಖಾಧಿಕಾರಿ ಎಸ್‌ಪಿ ಸೀಮಾ‌ ಲಾಟ್ಕರ್ ಅವರ ಮುಂದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಎಚ್‌.ಡಿ. ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ನೊಟೀಸ್ ತಲುಪಿಸಿದ್ದು, ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣ ವಿರುದ್ಧ ಏ.28ರಂದು ಹೊಳೆನರಸೀಪುರ ಠಾಣೆಯಲ್ಲಿ ಮನೆಗೆಲಸದಾಕೆ ದೂರು ನೀಡಿದ್ದಳು. ಈ ಸಂಬಂಧ ವಿಚಾರಣೆಗಾಗಿ ಇದೀಗ ನೋಟಿಸ್‌ ನೀಡಲಾಗಿದೆ.

ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

Continue Reading
Advertisement
rajamarga column t20 world cup team
ಅಂಕಣ19 mins ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

physical abuse bangalore crime
ಕ್ರೈಂ39 mins ago

Physical Abuse: ನಡುಬೀದಿಯಲ್ಲಿ ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಬೆದರಿಕೆ

Summer Tips
ಆರೋಗ್ಯ41 mins ago

Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

Karnataka Weather
ಪ್ರಮುಖ ಸುದ್ದಿ1 hour ago

Karnataka Weather: ಇಂದು ಚಿಕ್ಕಮಗಳೂರು, ಕೊಡಗು, ಮೈಸೂರು ಸೇರಿ ವಿವಿಧೆಡೆ ಮಳೆ ಮುನ್ಸೂಚನೆ

Summer Health Tips
ಆರೋಗ್ಯ2 hours ago

Summer Health Tips: ಬೇಸಿಗೆಯಲ್ಲಿ ತಂಪಾಗಿರಲು ಬೇಕು ಈ ಆಹಾರ!

dina bhavishya read your daily horoscope predictions for May 01 2024
ಭವಿಷ್ಯ3 hours ago

Dina Bhavishya: ಎಚ್ಚರ.. ಎಚ್ಚರ.. ಈ ರಾಶಿಯವರು ಇತರರನ್ನು ನಂಬಿ ಹೂಡಿಕೆ ಮಾಡಿದರೆ ಭಾರಿ ನಷ್ಟ!

Kaladarpana-Art Reflects
ಬೆಂಗಳೂರು7 hours ago

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Covishield Vaccine
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

Narendra modi
ಪ್ರಮುಖ ಸುದ್ದಿ8 hours ago

Narendra Modi : ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದ ಮೀಸಲಾತಿ ಇಲ್ಲ ಎಂದ ಮೋದಿ

DK Shivakumar
ಪ್ರಮುಖ ಸುದ್ದಿ8 hours ago

DK Shivakumar: ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೊ ಮಾರ್ಫಿಂಗ್ ಆರೋಪ; ಮೂವರ ವಿರುದ್ಧ ಎಫ್‌ಐಆರ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌